Homeಮುಖಪುಟಉತ್ತರ ಪ್ರದೇಶ | ‘ಮುಸ್ಲಿಂ ಬಹಿಷ್ಕಾರ’ಕ್ಕೆ ಹಿಂದುತ್ವವಾದಿಗಳ ಒತ್ತಡ: ಸಾಧ್ಯವಿಲ್ಲ ಎಂದ ಬಂಕೆ ಬಿಹಾರಿ ದೇವಾಲಯ

ಉತ್ತರ ಪ್ರದೇಶ | ‘ಮುಸ್ಲಿಂ ಬಹಿಷ್ಕಾರ’ಕ್ಕೆ ಹಿಂದುತ್ವವಾದಿಗಳ ಒತ್ತಡ: ಸಾಧ್ಯವಿಲ್ಲ ಎಂದ ಬಂಕೆ ಬಿಹಾರಿ ದೇವಾಲಯ

- Advertisement -
- Advertisement -

ಪಹಲ್ಗಾಮ್ ಭಯೋತ್ಪಾದಕ ದಾಳಿಯನ್ನು ನೆಪವಾಗಿಟ್ಟುಕೊಂಡು ಮುಸ್ಲಿಮರನ್ನು ಬಹಿಷ್ಕರಿಸಬೇಕು ಎಂದು ಬಲಪಂಥೀಯ ಗುಂಪುಗಳು ನೀಡಿದ್ದ ಕರೆಯನ್ನು ಭಾರತದಲ್ಲಿ ಅತಿ ಹೆಚ್ಚು ಜನರು ಭೇಟಿ ನೀಡುವ ಯಾತ್ರಾ ಸ್ಥಳಗಳಲ್ಲಿ ಒಂದಾದ ಉತ್ತರ ಪ್ರದೇಶದ ವೃಂದಾವನದ ಪ್ರಸಿದ್ಧ ಬಂಕೆ ಬಿಹಾರಿ ದೇವಾಲಯ ತಿರಸ್ಕರಿಸಿದೆ.

ಮಥುರಾ ಮತ್ತು ವೃಂದಾನವನದಲ್ಲಿ ಪ್ರತಿಭಟಿಸಿದ್ದ ಹಿಂದುತ್ವ ಗುಂಪು, ಮುಸ್ಲಿಮರೊಂದಿಗೆ ವ್ಯಾಪಾರ ನಡೆಸದಂತೆ ಹಿಂದೂಗಳನ್ನು ಒತ್ತಾಯಿಸಿತ್ತು. ಮುಸ್ಲಿಂ ವ್ಯಾಪಾರಸ್ಥರು ತಮ್ಮ ಅಂಗಡಿ-ಮುಂಗಟ್ಟುಗಳ ಮೇಲೆ ಮಾಲೀಕರ ಹೆಸರು ಬರೆಯುವಂತೆ ಬೆದರಿಗೆ ಹಾಕಿತ್ತು.

ಬಂಕೆ ಬಿಹಾರಿ ದೇವಾಲಯಕ್ಕೆ ಸಂಬಂಧಿಸಿದ ಎಲ್ಲಾ ವ್ಯವಹಾರಗಳಿಂದ ಮುಸ್ಲಿಮರನ್ನು ಬೇರ್ಪಡಿಸುತ್ತೇವೆ. ಮುಸ್ಲಿಂ ವ್ಯಾಪಾರಿಗಳಿಗೆ ಅಂಗಡಿಗಳ ಮುಂದೆ ಮಾಲೀಕರ ಹೆಸರು ಹಾಕುವಂತೆ ಸೂಚಿಸಲಾಗಿದೆ. ಹಿಂದೂಗಳ ಅವರೊಂದಿಗೆ ವ್ಯಾಪಾರ ಮಾಡದಂತೆ ಮತ್ತು ತಮ್ಮ ವ್ಯವಹಾರಗಳಲ್ಲಿ ಅವರನ್ನು ನೇಮಿಸಿಕೊಳ್ಳದಂತೆ ಮನವಿ ಮಾಡಿದ್ದೇವೆ ಎಂದು ಕಾಶಿ ವಿದ್ವತ್ ಪರಿಷತ್ ಸಂಘಟನೆಯ ಸದಸ್ಯ ನಾಗೇಂದ್ರ ಮಹಾರಾಜ್ ಹೇಳಿದ್ದರು.

ಇದಕ್ಕೆ ಪ್ರತಿಕ್ರಿಯಿಸಿರುವ ಬಂಕೆ ಬಿಹಾರಿ ದೇವಾಲಯದ ಅರ್ಚಕ ಹಾಗೂ ಆಡಳಿತ ಮಂಡಳಿ ಸದಸ್ಯ, ಜ್ಞಾನೇಂದ್ರ ಕಿಶೋರ್ ಗೋಸ್ವಾಮಿ ಅವರು, “ಇದು ಸಾಧ್ಯವಿಲ್ಲ. ಮುಸ್ಲಿಮರು, ವಿಶೇಷವಾಗಿ ಮುಸ್ಲಿಂ ಕುಶಲಕರ್ಮಿಗಳು ಮತ್ತು ನೇಕಾರರು ದೇವಾಲಯಕ್ಕೆ ದೊಡ್ಡ ಮಟ್ಟದ ಕೊಡುಗೆಗಳನ್ನು ನೀಡಿದ್ದಾರೆ. ಅವರು ದಶಕಗಳಿಂದ ಬಂಕೆ ಬಿಹಾರಿಯ ಉಡುಪುಗಳನ್ನು ನೇಯ್ಗೆ ಮಾಡುವಲ್ಲಿ ಪ್ರಮುಖ ಪಾತ್ರ ವಹಿಸಿದ್ದಾರೆ. ಅವರಲ್ಲಿ ಹಲವರು ಬಂಕೆ ಬಿಹಾರಿಯ ದೇವರಲ್ಲಿ ಬಲವಾದ ನಂಬಿಕೆಯನ್ನು ಹೊಂದಿದ್ದಾರೆ ಮತ್ತು ದೇವಾಲಯಕ್ಕೂ ಭೇಟಿ ನೀಡುತ್ತಾರೆ” ಎಂದಿದ್ದಾರೆ. ಈ ಮೂಲಕ ಹಿಂದುತ್ವ ಸಂಘಟನೆಯ ಕೋಮು ದ್ರುವೀಕರಣವನ್ನು ವಿರೋಧಿಸಿದ್ದಾರೆ.

“ವೃಂದಾವನದಲ್ಲಿ ದೇವರಿಗೆ ಕೆಲವು ಕಿರೀಟಗಳು ಮತ್ತು ಬಳೆಗಳನ್ನು ಅವರೇ (ಮುಸ್ಲಿಮರು) ತಯಾರಿಸುತ್ತಾರೆ” ಎಂದು ಸುದ್ದಿ ಸಂಸ್ಥೆ ಟೈಮ್ಸ್‌ ಆಫ್ ಇಂಡಿಯಾ ಜೊತೆ ಮಾತನಾಡುವಾಗ ಗೋಸ್ವಾಮಿ ಹೇಳಿದ್ದಾರೆ. ಇದಕ್ಕೆ ಅಲ್ಲಿನ ಹೆಚ್ಚಿನ ಪುರೋಹಿತರು ಮತ್ತು ಸ್ಥಳೀಯರು ಸಹಮತ ವ್ಯಕ್ತಪಡಿಸಿದ್ದಾರೆ ಎನ್ನಲಾಗಿದೆ.

ಪಹಲ್ಗಾಮ್‌ನಲ್ಲಿ ದಾಳಿ ನಡೆಸಿದ ಭಯೋತ್ಪಾದಕರಿಗೆ ಕಠಿಣ ಶಿಕ್ಷೆ ವಿಧಿಸಬೇಕು. ಈ ವಿಚಾರದಲ್ಲಿ ನಾವು ಸಂಪೂರ್ಣವಾಗಿ ಸರ್ಕಾರದ ಜೊತೆಗಿದ್ದೇವೆ. ಆದರೆ ವೃಂದಾವನದಲ್ಲಿ, ಹಿಂದೂಗಳು ಮತ್ತು ಮುಸ್ಲಿಮರು ಶಾಂತಿ ಮತ್ತು ಸೌಹಾರ್ದತೆಯಿಂದ ಒಟ್ಟಿಗೆ ವಾಸಿಸುತ್ತಿದ್ದಾರೆ ಎಂದು ಗೋಸ್ವಾಮಿ ತಿಳಿಸಿದ್ದಾರೆ.

ಹಿಂದುತ್ವ ಗುಂಪಿನವರು ನನ್ನ ವ್ಯಾಪಾರಕ್ಕೆ ಅಡ್ಡಿಪಡಿಸಲು ಯತ್ನಿಸಿದ್ದಾರೆ. ಅಂಗಡಿ ಮುಂದೆ ನನ್ನ ಹೆಸರು ಹಾಕುವಂತೆ ಹೇಳಿದ್ದಾರೆ. ಅವರು ಹೇಳಿದಂತೆ ಕೇಳದಿದ್ದರೆ ಇಲ್ಲಿ ವ್ಯಾಪಾರ ನಡೆಸದಂತೆ ಬೆದರಿಕೆ ಹಾಕಿದ್ದಾರೆ. ಅರ್ಚಕರ ಹೇಳಿಕೆಯಿಂದ ನಮಗೆ ಆಶ್ವಾಸನೆ ಮೂಡಿದೆ. ನಾನು 20 ವರ್ಷಗಳಿಗೂ ಹೆಚ್ಚು ಸಮಯದಿಂದ ಇಲ್ಲಿ ಅಂಗಡಿ ನಡೆಸುತ್ತಿದ್ದೇನೆ. ನನ್ನ ತಂದೆ ಇಲ್ಲಿಯೇ ಟೈಲರ್ ಆಗಿ ಕೆಲಸ ಮಾಡುತ್ತಿದ್ದಾರೆ. ಗ್ರಾಹಕರು ಇಲ್ಲಿಂದ ವಸ್ತುಗಳನ್ನು ಖರೀದಿಸಿದಾಗಲೆಲ್ಲಾ, ನಾನು ಸಾಮಾನ್ಯವಾಗಿ ಅವರಿಗೆ ನನ್ನ ಹೆಸರು ಮತ್ತು ಮೊಬೈಲ್ ಸಂಖ್ಯೆಯನ್ನು ಮುದ್ರಿಸಿದ ಬಿಲ್ ರಶೀದಿಯನ್ನು ನೀಡುತ್ತೇನೆ. ನಮ್ಮಲ್ಲಿ ಮರೆಮಾಚಲು ಏನೂ ಇಲ್ಲ,” ಎಂದು ಬಂಕೆ ಬಿಹಾರಿ ದೇವಸ್ಥಾನದಿಂದ ಸ್ವಲ್ಪ ದೂರದಲ್ಲಿ, ‘ಸ್ಟಾರ್ ಮುಕುತ್’ ಎಂಬ ಹೆಸರಿನಲ್ಲಿ ಅಂಗಡಿ ನಡೆಸುತ್ತಿರುವ ಜಾವೇದ್ ಅಲಿ ಆತಂಕ ವ್ಯಕ್ತಪಡಿಸಿದ್ದಾರೆ ಎಂದು ಟೈಮ್ಸ್ ಆಫ್ ಇಂಡಿಯಾ ವರದಿ ಮಾಡಿದೆ.

ಅಲಿ ಅವರ ಅಂಗಡಿಯ ಪಕ್ಕದಲ್ಲೇ ಅಂಗಡಿ ಹೊಂದಿರುವ ನಿಖಿಲ್ ಅಗರ್ವಾಲ್ ಎಂಬವರು ಮಾತನಾಡಿ, ಹಲವು ವರ್ಷಗಳಿಂದ ನಮಗೆ ಯಾವುದೇ ಸಮಸ್ಯೆ ಎದುರಾಗಿಲ್ಲ. ನಾವು ಪರಸ್ಪರ ಒಬ್ಬರಿಗೊಬ್ಬರು ಸಹಕಾರ ಮಾಡುತ್ತಾ ವ್ಯಾಪಾರ ನಡೆಸುತ್ತಿದ್ದೇವೆ ಎಂದು ಹೇಳಿದ್ದಾರೆ. ಈ ವಿಷಯದಲ್ಲಿ ಪೊಲೀಸರು ಇನ್ನೂ ಔಪಚಾರಿಕ ದೂರು ಸ್ವೀಕರಿಸಿಲ್ಲ ಎಂದು ವರದಿಯಾಗಿದೆ.

ಆಕಸ್ಮಿಕವಾಗಿ ಮಹಿಳೆಯನ್ನು ಸ್ಪರ್ಶಿಸಿದ ಮುಸ್ಲಿಂ ಬಾಲಕನ ಮೇಲೆ ಅಮಾನವೀಯ ಹಲ್ಲೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತಾಯ್ತನ ಕ್ರೀಡೆಗೆ ಅಡ್ಡಿಯಾಗಬಾರದು: ಕುಸ್ತಿ ಒಕ್ಕೂಟಕ್ಕೆ ದೆಹಲಿ ಹೈಕೋರ್ಟ್ ಚಾಟಿ, ವಿನೇಶ್ ಫೋಗಟ್‌ಗೆ ಬಿಗ್ ರಿಲೀಫ್!

ಖ್ಯಾತ ಮಹಿಳಾ ಕುಸ್ತಿ ಪಟು ವಿನೇಶ್ ಫೋಗಟ್ ಅವರನ್ನು ದೇಶೀಯ ಕ್ರೀಡಾಕೂಟಗಳಲ್ಲಿ ಭಾಗವಹಿಸದಂತೆ "ಅನರ್ಹ" ಎಂದು ಘೋಷಿಸಿದ್ದ ಭಾರತೀಯ ಕುಸ್ತಿ ಒಕ್ಕೂಟದ (WFI) ನಿರ್ಧಾರವನ್ನು ದೆಹಲಿ ಹೈಕೋರ್ಟ್ ಶುಕ್ರವಾರ ತೀವ್ರವಾಗಿ ತರಾಟೆಗೆ ತೆಗೆದುಕೊಂಡಿದೆ....

ಗುಜರಾತ್: ಜಾನುವಾರು ಹತ್ಯೆ ಆರೋಪದಲ್ಲಿ ಬಂಧಿಸಿದ 70 ವರ್ಷದ ಮುಸ್ಲಿಂ ವ್ಯಕ್ತಿ ಸಾವು: ‘ತಂದೆಯನ್ನು ಕೊಂದರು’ ಎಂದು ಆರೋಪಿಸಿದ ಮಗ

ಗುಜರಾತ್‌ನ ಅಹಮದಾಬಾದ್ ನಗರದಲ್ಲಿ ಪೊಲೀಸ್ ಕಸ್ಟಡಿಯಲ್ಲಿದ್ದ 70 ವರ್ಷದ ಜಹೀರ್ ಶೇಖ್ ಎಂಬ ಮುಸ್ಲಿಂ ವೃದ್ಧರೊಬ್ಬರು ಅನುಮಾನಾಸ್ಪದವಾಗಿ ಸಾವನ್ನಪ್ಪಿದ್ದಾರೆ. ಈ ಘಟನೆಯು ಗುಜರಾತ್‌ನಲ್ಲಿ ತೀವ್ರ ಸಂಚಲನ ಸೃಷ್ಟಿಸಿದ್ದು, ಕಸ್ಟಡಿ ನಿಂದನೆ, ಪೊಲೀಸರ ದೌರ್ಜನ್ಯ...

ಪಶ್ಚಿಮ ಬಂಗಾಳ: ಬಿಜೆಪಿಗೆ ಉಲ್ಟಾ ಹೊಡೆಯುತ್ತಾ ಗೋ-ಹತ್ಯೆ ನಿಷೇಧ ಕಾಯ್ದೆ?

ಬಕ್ರೀದ್ (ಈದ್-ಉಲ್-ಅದ್ಹಾ) ಹಬ್ಬ ಹತ್ತಿರ ಬರುತ್ತಿದ್ದಂತೆ, ಪಶ್ಚಿಮ ಬಂಗಾಳದಲ್ಲಿ ಗೋ ಹತ್ಯೆ ನಿಯಂತ್ರಣ ಕಾಯ್ದೆಯನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸುತ್ತಿರುವುದಕ್ಕೆ ವ್ಯಾಪಕ ವಿರೋಧ ವ್ಯಕ್ತವಾಗುತ್ತಿದೆ. ಈ ಆಕ್ರೋಶ ಕೇವಲ ಧಾರ್ಮಿಕ ಕಾರಣಗಳಿಗಷ್ಟೇ ಸೀಮಿತವಾಗಿಲ್ಲ, ಬದಲಿಗೆ ವ್ಯಾಪಾರಿಗಳು,...

ಪ.ಬಂಗಾಳ: ಮಮತಾ ಸರ್ಕಾರ ಜಾರಿ ಮಾಡಿದ್ದ OBC ಮೀಸಲಾತಿಯನ್ನು ಕಿತ್ತೆಸೆದ ಸುವೇಂದು ನೇತೃತ್ವದ ಬಿಜೆಪಿ ಸರ್ಕಾರ

ಪಶ್ಚಿಮ ಬಂಗಾಳದ ಒಬಿಸಿ (ಇತರ ಹಿಂದುಳಿದ ವರ್ಗಗಳು) ಪಟ್ಟಿಯಲ್ಲಿದ್ದ ಮುಸ್ಲಿಂ ಸಮುದಾಯಗಳನ್ನು ಕೈಬಿಡುವ ಮೂಲಕ ಮುಖ್ಯಮಂತ್ರಿ ಸುವೇಂದು ಅಧಿಕಾರಿ ನೇತೃತ್ವದ ನೂತನ ಬಿಜೆಪಿ ಸರ್ಕಾರವು ಭಾರಿ ರಾಜಕೀಯ ಸಂಚಲನ ಸೃಷ್ಟಿಸಿದೆ. ಈ ಹಿಂದೆ...

ಸಾಮಾಜಿಕ ಹೋರಾಟಗಾರ ‘ಫರಿದುಲ್ ಇಸ್ಲಾಂ’ರನ್ನು ಸುಳ್ಳು ಪ್ರಕರಣದಲ್ಲಿ ಬಂಧಿಸಿದ ಕೋಲ್ಕತ್ತಾ ಪೊಲೀಸರು

ಪಶ್ಚಿಮ ಬಂಗಾಳದಲ್ಲಿ ಸುವೇಂದು ಅಧಿಕಾರಿ ನೇತೃತ್ವದ ನೂತನ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದು ಇನ್ನು ಹತ್ತು ದಿನಗಳು ಕಳೆಯುವಷ್ಟರಲ್ಲೇ, ಸರ್ಕಾರದ ಆಡಳಿತವನ್ನು ಪ್ರಶ್ನಿಸುವವರ ಹಾಗೂ ಹೋರಾಟಗಾರರ ಧ್ವನಿಯನ್ನು ಹತ್ತಿಕ್ಕುವ ಕೆಲಸ ಆರಂಭವಾಗಿದೆ ಎಂಬ...

ಉಪ್ಪಿನಂಗಡಿ: ಸೂರ್ಯ ಆಸ್ಪತ್ರೆ ವೈದ್ಯರ ನಿರ್ಲಕ್ಷ್ಯ, ಚಿಕಿತ್ಸೆಗೆಂದು ತೆರಳಿ ಶವವಾಗಿ ಮರಳಿದ ಬೀದಿಬದಿ ವ್ಯಾಪಾರಿ!

ಖಾಸಗಿ ಆಸ್ಪತ್ರೆಗಳ ಹಣದ ದಾಹ ಮತ್ತು ವೈದ್ಯಕೀಯ ಸಿಬ್ಬಂದಿಯ ಘೋರ ನಿರ್ಲಕ್ಷ್ಯಕ್ಕೆ ಮತ್ತೊಂದು ಬಡ ಜೀವ ಬಲಿಯಾಗಿದೆ. ಉಪ್ಪಿನಂಗಡಿಯ ಸೂರ್ಯ ಆಸ್ಪತ್ರೆಯಲ್ಲಿ ಚಿಕಿತ್ಸೆಗಾಗಿ ದಾಖಲಾಗಿದ್ದ ಮೊಹಮ್ಮದ್ ಶರೀಫ್ (35) ಎಂಬ ಬೀದಿ ಬದಿ...

ಬಿಸಿಲಿನ ಬೆಂಕಿಗೆ ‘ಎಲ್ ನಿನೊ’ ತುಪ್ಪ: 2026ರ ಮುಂಗಾರು ಕಥೆ ಏನು?

ದೇಶಾದ್ಯಂತ ತಾಪಮಾನ ದಿನೇ ದಿನೇ ಏರುತ್ತಿದ್ದು, ಭೀಕರ ಶಾಖದ ಅಲೆಗಳಿಗೆ (Heatwaves) ಜನ ತತ್ತರಿಸಿ ಹೋಗಿದ್ದಾರೆ. ಈ ಹೊತ್ತಿನಲ್ಲಿ ಎಲ್ಲರ ಕಣ್ಣುಗಳು ಸಾವಿರಾರು ಕಿಲೋಮೀಟರ್ ದೂರದ ಪೆಸಿಫಿಕ್ ಮಹಾಸಾಗರದಲ್ಲಿ ಸಂಭವಿಸುತ್ತಿರುವ ಹವಾಮಾನ ಬದಲಾವಣೆಯ...

ಸುಮಾರು 1 ಲಕ್ಷ ಶಾಲೆಗಳಲ್ಲಿ ಬಾಲಕಿಯರಿಗೆ ಶೌಚಾಲಯವಿಲ್ಲ, 61,000 ಶಾಲೆಗಳಲ್ಲಿ ಕ್ರಿಯಾತ್ಮಕ ಶೌಚಾಲಯಗಳಿಲ್ಲ: ನೀತಿ ಆಯೋಗ

ಶಿಕ್ಷಣವು ಒಂದು ದೇಶದ ಅಭಿವೃದ್ಧಿಯ ಬೆನ್ನೆಲುಬು ಅಂತಲೇ ಹೇಳಲಾಗುತ್ತದೆ. ಆದರೆ, ಭಾರತದ ಶಾಲಾ ಶಿಕ್ಷಣದ ಮೂಲಭೂತ ಸೌಕರ್ಯಗಳು ಮತ್ತು ವ್ಯವಸ್ಥೆಯ ಕುರಿತಾಗಿ ನೀತಿ ಆಯೋಗ ಹಾಗೂ ಯುಡಿಐಎಸ್ಇ+ (UDISE+ 2024–25) ಇತ್ತೀಚೆಗೆ ಬಿಡುಗಡೆ...

CJI ಹೇಳಿಕೆಯಿಂದ ರಾತ್ರೋರಾತ್ರಿ ಹುಟ್ಟಿಕೊಂಡ ‘ಕಾಕ್‌ರೋಚ್ ಜನತಾ ಪಾರ್ಟಿ’

ಒಂದು ರಾಜಕೀಯ ಪಕ್ಷವನ್ನು ಕಟ್ಟಿ, ಅದಕ್ಕೊಂದು ರೂಪ ಕೊಡಲು ಎಷ್ಟು ಸಮಯ ಬೇಕಾಗಬಹುದು? ಕೇವಲ 48 ಗಂಟೆಗಳು! ಹೌದು, ಕಳೆದ ಭಾನುವಾರ ನೀವು ಸಾಮಾಜಿಕ ಜಾಲತಾಣಗಳಲ್ಲಿ ಸ್ವಲ್ಪ ಸಮಯ ಕಳೆದಿದ್ದರೆ ನಿಮಗಿದು ಖಂಡಿತ...

ಬೆಂಗಳೂರು: ಗಂಗಸಂದ್ರ ದಲಿತರ ಭೂಮಿ ಕಿತ್ತುಕೊಳ್ಳಲು ಮುಗಿಬಿದ್ದ ಅರಣ್ಯ ಇಲಾಖೆ: ಮಿತಿಮೀರಿದ ಅಧಿಕಾರಿಗಳ ದರ್ಪ

ಕೆಂಗೇರಿ ಬಳಿಯ ಗಂಗಸಂದ್ರ ಗ್ರಾಮದಲ್ಲಿನ ದಲಿತರ ಭೂಮಿಯನ್ನು ಅರಣ್ಯ ಭೂಮಿಯೆಂದು ಅರಣ್ಯ ಇಲಾಖೆಯ ವಶಕ್ಕೆ ಪಡೆಯಲು ಅಧಿಕಾರಿಗಳು ಮುಂದಾಗಿದ್ದಾರೆ. 2026 ಮೇ 19ರ, ಮಂಗಳವಾರ  ಬೆಳ್ಳಂಬೆಳಗ್ಗೆಯೇ ಅಧಿಕಾರಿಗಳ ದರ್ಪ ತಾರಕಕ್ಕೇರಿದೆ. ದಲಿತ ನಿವಾಸಿಗಳ...