Homeಕರ್ನಾಟಕವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯದ ಪರೀಕ್ಷೆ ನಡೆಸಲು ಮುಂದಾಗಿರುವುದು ಆತುರದ ನಿರ್ಧಾರ: ಕುಮಾರಸ್ವಾಮಿ

ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯದ ಪರೀಕ್ಷೆ ನಡೆಸಲು ಮುಂದಾಗಿರುವುದು ಆತುರದ ನಿರ್ಧಾರ: ಕುಮಾರಸ್ವಾಮಿ

- Advertisement -
- Advertisement -

ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯದ ವಿದ್ಯಾರ್ಥಿಗಳಿಗೆ ಮೇ 30 ರೊಳಗೆ ಎಲ್ಲಾ ವಿಷಯವನ್ನು ಆನ್ಲೈನ್ ತರಗತಿ ನಡೆಸಿ ಪರೀಕ್ಷೆ ನಡೆಸಲು ಮುಂದಾಗಿರುವ ಸರ್ಕಾರದ ನಿರ್ಧಾರ ಆತುರದ ಕ್ರಮ ಎಂದು ಹೆಚ್. ಡಿ. ಕುಮಾರಸ್ವಾಮಿ ಹೇಳಿದ್ದಾರೆ.

ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯದ ವಿದ್ಯಾರ್ಥಿಗಳಿಗೆ ಆನ್ಲೈನ್ ತರಗತಿ ಮೂಲಕ ಮೇ 30 ರೊಳಗೆ ಎಲ್ಲಾ ವಿಷಯವನ್ನು ಬೋಧಿಸಿ ಪರೀಕ್ಷೆ ನಡೆಸಲು ಮುಂದಾಗಿರುವ ಸರ್ಕಾರದ ನಿರ್ಧಾರ ಆತುರದ ಕ್ರಮ. ಅಲ್ಲದೆ ಮುಂದಿನ ತಿಂಗಳು ಪರೀಕ್ಷಾ ವೇಳಾಪಟ್ಟಿಯನ್ನು ಘೋಷಿಸುವುದಾಗಿ ಸರ್ಕಾರ ನಿರ್ಧರಿಸಿರುವುದು ಗ್ರಾಮೀಣ ಪ್ರದೇಶದ ವಿದ್ಯಾರ್ಥಿಗಳ ಭವಿಷ್ಯಕ್ಕೆ ಮಾರಕವಾಗಲಿದೆ ಎಂದು ಕುಮಾರಸ್ವಾಮಿ ಎಚ್ಚರಿಸಿದ್ದಾರೆ.

ಸರ್ಕಾರ ಈ ಬಗ್ಗೆ ಮರು ಚಿಂತನೆ ನಡೆಸುವ ತುರ್ತು ಅಗತ್ಯವಿದೆ ಎಂದಿರುವ ಕುಮಾರಸ್ವಾಮಿ, “ಗ್ರಾಮೀಣ ಭಾಗದ ವಿದ್ಯಾರ್ಥಿಗಳಿಗೆ ನೆಟ್ವರ್ಕ್ ಸಮಸ್ಯೆಯಿಂದ ಆನ್ಲೈನ್ ತರಗತಿ ಪಠ್ಯ ಆಲಿಸುವುದು ಕಷ್ಟ. ಪ್ರತೀ ವಿದ್ಯಾರ್ಥಿಯೂ ಕೂಡ ಆನ್ ಲೈನ್ ಮುಖಾಂತರ ಪರಿಪೂರ್ಣವಾಗಿ ಕಲಿಯಲು ಸಾಧ್ಯವಿಲ್ಲ” ಎಂದು ಅವರು ಹೇಳಿದ್ದಾರೆ.

ಬಹುತೇಕ ವಿಶ್ವವಿದ್ಯಾಲಯ ಹಾಗೂ ಪದವಿ ಕಾಲೇಜುಗಳು ಆನ್ ಲೈನ್ ತರಗತಿ ಆರಂಭಿಸಿವೆ. ಇದರಿಂದ ವಿಶೇಷವಾಗಿ ಗ್ರಾಮೀಣ ವಿದ್ಯಾರ್ಥಿಗಳಿಗೆ ತೊಂದರೆಯಾಗುತ್ತಿದೆ. ಕರೋನಾ ಸಂಕಷ್ಟ ಸಮಯದಲ್ಲಿ ಶುಲ್ಕ ಪಾವತಿಗೆ ಹೆಚ್ಚಿನ ಕಾಲಾವಕಾಶ ನೀಡುವಂತೆ ಕುಮಾರಸ್ವಾಮಿ ಆಗ್ರಹಿಸಿದ್ದಾರೆ.

ಮೇ 11 ರಂದು ಎಲ್ಲ ಪಠ್ಯಕ್ರಮವನ್ನು 31-05-2020 ರೊಳಗೆ ಪೂರ್ಣಗೊಳಿಸುವಂತೆ ವಿಶ್ವವಿದ್ಯಾಲಯ ಸುತ್ತೋಲೆ ಹೊರಡಿಸಿತ್ತು.


ಓದಿ: ‘ಡಬ್ಬಲ್ ಸ್ಟಾಂಡರ್ಡ್’ ಪ್ರಧಾನಿ: ಪಶ್ಚಿಮ ಬಂಗಾಳದ ಭೇಟಿಯ ಬಗ್ಗೆ ಕರ್ನಾಟಕ ಕಾಂಗ್ರೆಸ್ ಟೀಕೆ


 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಹೋರಾಟಗಾರ ಸೋನಮ್ ವಾಂಗ್ಚುಕ್ ಬಂಧನ ರದ್ದುಗೊಳಿಸಿದ ಕೇಂದ್ರ

ಲಡಾಖ್‌ನಲ್ಲಿ ಶಾಂತಿಯನ್ನು ಮರುಸ್ಥಾಪಿಸಲು ಮತ್ತು ಮಾತುಕತೆಗೆ ಪೂರಕವಾದ ವಾತಾವರಣವನ್ನು ನಿರ್ಮಿಸುವ ಉದ್ದೇಶದಿಂದ, ರಾಷ್ಟ್ರೀಯ ಭದ್ರತಾ ಕಾಯ್ದೆಯಡಿ (ಎನ್‌ಎಸ್‌ಎ) ಹೋರಾಟಗಾರ ಸೋನಮ್ ವಾಂಗ್ಚುಕ್ ಅವರ ಬಂಧನವನ್ನು ಕೇಂದ್ರ ಸರ್ಕಾರ ಹಿಂಪಡೆದಿದೆ ಎಂದು ವರದಿಯಾಗಿದೆ. ಸರ್ಕಾರ...

‘ಭಾರತವನ್ನು ಬೆದರಿಸುವಲ್ಲಿ ತಿಂಗಳುಗಟ್ಟಲೆ ಕಳೆದ ಅಮೆರಿಕ ಈಗ ಜಗತ್ತನ್ನ ಬೇಡಿಕೊಳ್ಳುತ್ತಿದೆ’: ರಷ್ಯಾದ ತೈಲ ವಿಚಾರದ ಕುರಿತು ಇರಾನ್ ಟೀಕೆ

ಟೆಹ್ರಾನ್: ರಷ್ಯಾದ ತೈಲದ ವಿಷಯದಲ್ಲಿ ಅಮೆರಿಕವು ದ್ವಿಮುಖ ನೀತಿಯನ್ನು ಅನುಸರಿಸುತ್ತಿದೆ ಎಂದು ಇರಾನ್ ಶನಿವಾರ ಆರೋಪಿಸಿದೆ. ವಾಷಿಂಗ್ಟನ್ ಈಗ ಒತ್ತಡ ಮತ್ತು ನಿರ್ಬಂಧಗಳ ಮೂಲಕ ನಿರ್ಬಂಧಿಸಲು ಪ್ರಯತ್ನಿಸಿದ ಅದೇ ಕಚ್ಚಾ ತೈಲವನ್ನು ಖರೀದಿಸಲು...

ಗಾಝಾ ನರಮೇಧ : ಅಂತಾರಾಷ್ಟ್ರೀಯ ನ್ಯಾಯಾಲಯದಲ್ಲಿ ಇಸ್ರೇಲ್‌ ಪರ ಅಮೆರಿಕ ವಕಾಲತ್ತು

ಗಾಝಾ ನರಮೇಧಕ್ಕೆ ಸಂಬಂಧಿಸಿದಂತೆ ಇಸ್ರೇಲ್ ವಿರುದ್ದ ಅಂತಾರಾಷ್ಟ್ರೀಯ ನ್ಯಾಯಾಲಯದಲ್ಲಿ ದಕ್ಷಿಣ ಆಫ್ರಿಕಾ ಹೂಡಿರುವ ಪ್ರಕರಣದಲ್ಲಿ ಅಮೆರಿಕ ಸೇರಿದಂತೆ ಕೆಲ ರಾಷ್ಟ್ರಗಳು ಮಧ್ಯ ಪ್ರವೇಶಿಸಿದ್ದು, ಇಸ್ರೇಲ್ ಪರ ವಕಾಲತ್ತು ವಹಿಸಲು ಮುಂದಾಗಿವೆ ಎಂದು ವರದಿಯಾಗಿದೆ. ದಿ...

ಇರಾನ್‌ನ ಕಿರೀಟ ರತ್ನ ಖಾರ್ಗ್ ದ್ವೀಪದ ಮೇಲೆ ಅಮೆರಿಕದಿಂದ ಬಾಂಬ್ ದಾಳಿ : ಟ್ರಂಪ್ ಹೇಳಿಕೆ

ಇರಾನ್‌ನ ಖಾರ್ಗ್ ದ್ವೀಪದ ಮೇಲೆ ಅಮೆರಿಕ 'ಅತ್ಯಂತ ಶಕ್ತಿಶಾಲಿ ಬಾಂಬ್ ದಾಳಿ' ನಡೆಸಿದೆ ಎಂದು ಅಧ್ಯಕ್ಷ ಡೊನಾಲ್ಡ್ ಟ್ರಂಪ್ ತಿಳಿಸಿದ್ದಾರೆ. ದ್ವೀಪದಲ್ಲಿರುವ ತೈಲ ಮೂಲಸೌಕರ್ಯಗಳನ್ನು ನಾಶಪಡಿಸದೆ ಇರಲು ನಿರ್ಧರಿಸಿದ ಅಮೆರಿಕ ಪಡೆಗಳು, ಅಲ್ಲಿನ ಮಿಲಿಟರಿ ಕೇಂದ್ರಗಳನ್ನು...

ಪಂಜಾಬ್‌| ಎಲ್‌ಪಿಜಿ ಸಿಲಿಂಡರ್‌ಗಾಗಿ ಸರತಿ ಸಾಲಿನಲ್ಲಿ ನಿಂತಿದ್ದಾಗಲೇ ಕುಸಿದು ಬಿದ್ದು ಸಾವನ್ನಪ್ಪಿದ ವೃದ್ಧ

ಪಂಜಾಬ್‌ನ ಬರ್ನಾಲಾ ಜಿಲ್ಲೆಯಲ್ಲಿ, ಎಲ್‌ಪಿಜಿ ಸಿಲಿಂಡರ್‌ಗಾಗಿ ಸರತಿ ಸಾಲಿನಲ್ಲಿ ಕಾಯುತ್ತಿದ್ದಾಗ 66 ವರ್ಷದ ವ್ಯಕ್ತಿಯೊಬ್ಬರು ಹೃದಯಾಘಾತದಿಂದ ಕುಸಿದು ಬಿದ್ದು ಸಾವನ್ನಪ್ಪಿರುವ ಘಟನೆ ಶುಕ್ರವಾರ ನಡೆದಿದೆ. ದೇಶದಲ್ಲಿ ಪ್ರಸ್ತುತ ನಡೆಯುತ್ತಿರುವ ಅನಿಲ ಕೊರತೆಯಿಂದ ಉಂಟಾಗುತ್ತಿರುವ...

ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಪದಚ್ಯುತಿಗೆ ಉಭಯ ಸದನಗಳಲ್ಲಿ ನೋಟಿಸ್ ಸಲ್ಲಿಸಿದ ವಿಪಕ್ಷಗಳು

ನವದೆಹಲಿ: ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಜ್ಞಾನೇಶ್ ಕುಮಾರ್ ಅವರನ್ನು ಪದಚ್ಯುತಗೊಳಿಸುವಂತೆ ಕೋರಿ ವಿರೋಧ ಪಕ್ಷದ ಸಂಸದರು ಸಂಸತ್ತಿನ ಉಭಯ ಸದನಗಳಲ್ಲಿ ನೋಟಿಸ್ ಸಲ್ಲಿಸಿರುವುದಾಗಿ ಶುಕ್ರವಾರ ವರದಿಯಾಗಿದೆ.  ಈ ನೋಟಿಸ್‌ಗೆ 130 ಲೋಕಸಭಾ ಸದಸ್ಯರು...

ಹಿಂದೂಯೇತರರಿಗೆ ದೇಗುಲ ಪ್ರವೇಶಕ್ಕೆ ನಿಷೇಧ ಹೇರಿದ ಬದರೀನಾಥ್-ಕೇದಾರನಾಥ ದೇವಾಲಯಗಳ ಸಮಿತಿ

ಮುಂಬರುವ ತೀರ್ಥಯಾತ್ರೆಯ ಋತುವಿನಿಂದ ಜಾರಿಗೆ ಬರುವಂತೆ ಬದರೀನಾಥ್ ಮತ್ತು ಕೇದಾರನಾಥ ದೇವಾಲಯಗಳು ಸೇರಿದಂತೆ ಅದರ ವ್ಯಾಪ್ತಿಯಲ್ಲಿರುವ 47 ಇತರ ದೇವಾಲಯಗಳಿಗೆ ಹಿಂದೂಯೇತರರ ಪ್ರವೇಶವನ್ನು ನಿಷೇಧಿಸುವ ನಿರ್ಣಯವನ್ನು ಸರ್ವಾನುಮತದಿಂದ ದೇವಾಲಯ ಸಮಿತಿಯು ಅಂಗೀಕರಿಸಿದೆ. ಬಿಕೆಟಿಸಿ ಅಧ್ಯಕ್ಷ...

‘ಮಹಿಳೆಯರನ್ನು ಯಾರೂ ಕೆಲಸಕ್ಕೆ ನೇಮಿಸಿಕೊಳ್ಳುವುದಿಲ್ಲ..’; ಕಡ್ಡಾಯ ಮುಟ್ಟಿನ ರಜೆ ಕುರಿತ ಅರ್ಜಿ ತಿರಸ್ಕರಿಸಿದ ಸುಪ್ರೀಂ ಕೋರ್ಟ್ 

ಮಹಿಳೆಯರಿಗೆ ಕಡ್ಡಾಯ ಮುಟ್ಟಿನ ರಜೆ 'ಅವರ ಉದ್ಯೋಗದ ಮೇಲೆ ಪ್ರತಿಕೂಲ ಪರಿಣಾಮ ಬೀರಬಹುದು'. ಏಕೆಂದರೆ, ನಾವು ಅಂತಹ ಕಾನೂನನ್ನು ಜಾರಿಗೆ ತಂದರೆ ಉದ್ಯೋಗದಾತರು ಮಹಿಳೆಯರನ್ನು ಕೆಲಸಕ್ಕೆ ನೇಮಿಸಿಕೊಳ್ಳುವುದಿಲ್ಲ' ಎಂದು ಸುಪ್ರೀಂ ಕೋರ್ಟ್‌ ಮುಖ್ಯ...

ಪ್ಯಾಲೆಸ್ತೀನಿಯನ್ ಬಂಧಿತನ ಮೇಲೆ ಲೈಂಗಿಕ ದೌರ್ಜನ್ಯ; ಇಸ್ರೇಲ್ ಸೈನಿಕರ ವಿರುದ್ಧದ ಆರೋಪ ಕೈಬಿಟ್ಟ ಸೇನೆ

ಕ್ಯಾಮೆರಾದಲ್ಲಿ ಭಾಗಶಃ ಸೆರೆಹಿಡಿಯಲಾದ ಹಲ್ಲೆಯಲ್ಲಿ, ಬಂಧಿತ ಪ್ಯಾಲೆಸ್ತೀನಿಯನ್ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪ ಹೊತ್ತಿರುವ ಐದು ಸೈನಿಕರ ವಿರುದ್ಧದ ಆರೋಪಗಳನ್ನು ಕೈಬಿಡುತ್ತಿರುವುದಾಗಿ ಇಸ್ರೇಲ್ ಸೇನೆ (ಮಾರ್ಚ್ 12) ತಿಳಿಸಿದೆ. ಈ ಘೋಷಣೆಯನ್ನು ಪ್ರಧಾನಿ...

‘ಇರಾನ್ ಸರ್ವೋಚ್ಚ ನಾಯಕ ಜೀವಂತವಾಗಿರಬಹುದು, ಆದರೆ ಗಂಭೀರವಾಗಿ ಗಾಯಗೊಂಡಿದ್ದಾರೆ’: ಡೊನಾಲ್ಡ್ ಟ್ರಂಪ್

ಇರಾನ್‌ನ ಸರ್ವೋಚ್ಚ ನಾಯಕ ಅಯತೊಲ್ಲಾ ಮೊಜ್ತಬಾ ಖಮೇನಿ(56) "ಬಹುಶಃ ಜೀವಂತವಾಗಿದ್ದಾರೆ ಆದರೆ ಗಂಭೀರವಾಗಿ ಗಾಯಗೊಂಡಿದ್ದಾರೆ" ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ. ಶುಕ್ರವಾರ ಪ್ರಸಾರವಾದ ಫಾಕ್ಸ್ ನ್ಯೂಸ್ ರೇಡಿಯೋದ ಬ್ರಿಯಾನ್ ಕಿಲ್ಮೀಡ್ ಅವರ...