Homeಅಂಕಣಗಳುರಣಹದ್ದು ಮತ್ತು ಪತ್ರಕರ್ತರು : ತಣ್ಣನೆ ಹೆಸರಿನ ಪುಣ್ಯಾತ್ಮ ಹಸೀ ಸುಳ್ಳನ್ನ ಸುಡು ಬಿಸಲಿನ್ಯಾಗ ಹೇಳಿದ್ದು...

ರಣಹದ್ದು ಮತ್ತು ಪತ್ರಕರ್ತರು : ತಣ್ಣನೆ ಹೆಸರಿನ ಪುಣ್ಯಾತ್ಮ ಹಸೀ ಸುಳ್ಳನ್ನ ಸುಡು ಬಿಸಲಿನ್ಯಾಗ ಹೇಳಿದ್ದು…

ಆಸ್ಥಾನ ಪಂಡಿತರು ತಮ್ಮ ಬ್ಯಾಳೆ ಬೇಯಿಸಿಕೊಳ್ಳಲಿಕ್ಕೆ ಆಳುವವರನ್ನ ಇಂದ್ರ - ಚಂದ್ರ ಅಂತ ಕರೀತಿರಬಹುದು. ಇದು ಗೊತ್ತಾಗದೇ ಹೋದರ ಸರಕಾರ ಜನರ ಮನಸ್ಸಿನಿಂದ ದೂರ ಹೋಗಬೇಕಾಗತದ. ಉನ್ನತ ಸ್ಥಾನದಲ್ಲಿ ಇರೋ ನಮ್ಮ ಪಂಥ ಪ್ರಧಾನ ಸೇವಕರು ಇಂಥವರಿಂದ ದೂರ ಇರಬೇಕು.

- Advertisement -
- Advertisement -

ಹಿರಿಯ ಲೇಖಕಿ ಗೀತಾ ನಾಗಭೂಷಣ ಅವರ ಹಸಿ ಮಾಂಸ ಮತ್ತು ಹದ್ದುಗಳು ಎನ್ನುವುದು ಕನ್ನಡದ ಜನಪ್ರಿಯ ಕಾದಂಬರಿಗಳಲ್ಲಿ ಒಂದು. ಜಮೀನುದಾರಿ ವ್ಯವಸ್ಥೆಯ ಶೋಷಣೆ, ಜಾತಿಯತೆ, ಹೆಣ್ಣಿನ ದುರವಸ್ಥೆ ಮುಂತಾದ ವಿಷಯಗಳ ಸುತ್ತ ಹೆಣೆದದ್ದು.

ಗುಲಬರ್ಗಾದ ಈ ಲೇಖಕರಿಗೆ ರಾಷ್ಟ್ರೀಯ ಮನ್ನಣೆ ತಂದು ಕೊಟ್ಟ ಈ ಕಾದಂಬರಿಯ ಹೆಸರು ಓದುಗರನ್ನು ಸೆಳೆಯುವಂಥದ್ದು. ಅದು ಈ ಕಾಲದಾಗ ಯಾಕ ನೆನಪು ಮಾಡಿಕೊಟ್ಟವರು ಯಾರಪಾ ಅಂದರ ನಮ್ಮ ತುಷಾರ ಮೆಹತಾ ಸಾಹೇಬರು.

ಅವರು ಯಾರಂತೀರಿ? ಅವರು ನಮ್ಮ ಕೇಂದ್ರ ಸರಕಾರದ ವಕೀಲರು. ಅವರು ಸುಪ್ರೀಂ ಕೋರ್ಟಿನಾಗ ಕೇಂದ್ರ ಸರಕಾರವು ಎಷ್ಟು ಚನ್ನಾಗಿ ವಲಸೆ ಕಾರ್ಮಿಕರ ಕಾಳಜಿ ಮಾಡಿದೆ ಅಂತ ಹೇಳೋ ಭರಾಟೆಯೊಳಗ ಪತ್ರಕರ್ತರು ರಣಹದ್ದುಗಳು ಅಂತ ಅಪ್ಪಣೆ ಕೊಡಿಸಿದರು.
ಅವರಿಗೆ ಸರಕಾರದ ಒಳ್ಳೆ ಕೆಲಸಗಳು ಕಾಣಲ್ಲ. ಅವರಿಗೆ ಬರೀ ಕೆಟ್ಟದ್ದೇ ಕಾಣುತ್ತದೆ. ಹದ್ದುಗಳಿಗೆ ಬರೀ ಹೆಣ ಕಾಣತದೆ, ಅಂತೆಲ್ಲಾ ಹೇಳಿ ಕೆವಿನ್ ಕಾರ್ಟರ್ ಅನ್ನೋ ಹೆಸರಿನ ದಕ್ಷಿಣ ಆಫ್ರಿಕದ ಛಾಯಾ ಚಿತ್ರ ವರದಿಗಾರರ ಬಗ್ಗೆ ಒಂದು ಖೊಟ್ಟಿ ಸುದ್ದಿ (ಫೇಕು ನ್ಯೂಸು) ಹೇಳಿದರು.

ಕಾರ್ಟರ್ ಅವರು ತೆಗೆದ ಒಂದು ಚಿತ್ರ ವಿಶ್ವಖ್ಯಾತಿ ಗಳಿಸಿತ್ತು. ಅದೇನಪಾ ಅಂದರ ಸುಡಾನ್ ದೇಶದಲ್ಲಿ ಕ್ಷಾಮ ಆದಾಗ ಒಂದು ಹಸಿದ ಹುಡುಗ (ಮೆಹತಾ ಸಾಬ್ ಅವರು ತಿಳಕೊಂಡಂಗ ಹುಡುಗಿ ಅಲ್ಲ) ಗಂಜಿ ಕೇಂದ್ರದ ಕಡೆ ತೆವಳಿಕೊಂಡು ಹೋಗುತ್ತಾ ಇರೋ ಚಿತ್ರ. ಅದರ ಹಿಂದೆ ಒಂದು ಹದ್ದು ಆ ಮಗುವನ್ನು ಹಿಂಬಾಲಿಸಿಕೊಂಡು ಬರೋ ಚಿತ್ರ ನೋಡಿದವರ ಕಣ್ಣಾಗ ನೀರು ತರಿಸಿತು. `ಆ ಹದ್ದು ಆ ಕೂಸು ಸಾಯೋದನ್ನ ಕಾಯ್ದುಕೊಂಡು ಕೂತಂಗ, ಅದು ಸತ್ತರ ತಾನು ತಿಂದು ಮೇಜವಾನಿ ಮಾಡಲಿಕ್ಕೆ ತಯಾರಿ ಮಾಡಿಕೋತದೇನೋ’ ಅಂತ ಜನರಿಗೆ ಅನ್ನಿಸಿತು.

ಪ್ರತಿ ಚಿತ್ರದ ಹಿಂದೆ ಐಟಿ ಸೆಲ್ಲಿನ ಕಾಣದ ಕೈಗಳು ಕೆಲಸಾ ಮಾಡೋಹಂಗ, ಇದರ ಹಿಂದನೂ ಕೆಲಸ ಮಾಡಿದವು. ಆ ಚಿತ್ರ ತೆಗೆದ ಛಾಯಾಗ್ರಾಹಕ ಆತ್ಮಹತ್ಯೆ ಮಾಡಿಕೊಂಡ ಅನ್ನೋದು ಎಲ್ಲಾರಿಗೂ ಗೊತ್ತಿತ್ತು. ಆದರ ಕಾರಣ ಗೊತ್ತಿರಲಿಲ್ಲ. ಈ ಐಟಿಕೋರರು ಅದಕ್ಕ ಒಂದು ಕತಿ ಕಟ್ಟಿ ಸುಳ್ಳ- ಸುಳ್ಳ ಕಾರಣ ಕೊಟ್ಟರು. ಆ ಫೋಟೋ ತೆಗದ ಕೆಲವೇ ಕ್ಷಣದೊಳಗ ಆ ಹುಡುಗಿ ಹಸಿವಿನಿಂದ ಸತ್ತು ಹೋತು, ಅದನ್ನ ತಗದ ದುಃಖ ತಾಳಲಾರದ ಫೋಟೋಗ್ರಾಫರ ಕೆಲವೇ ತಿಂಗಳಿಗೆ ಸತ್ತು ಹೋದ ಅಂತ.

ಇನ್ನೂ ಏನಪಾ ಅಂದರ ಒಬ್ಬ ಅಮೇರಿಕಾದ ವರದಿಗಾರ ಆ ಛಾಯಾಗ್ರಾಹಕನನ್ನ ಕೇಳಿದನಂತ – `ನೀ ಬರೇ ಫೋಟೋ ತೆಗೆದ್ಯೋ ಅಥವಾ ಆ ಮಗುವಿಗೆ ಏನಾದರೂ ಸಹಾಯ ಮಾಡಿದ್ಯೋ’ ಅಂತ. `ಇಲ್ಲಾ ನಾ ಬರೇ ಫೋಟೋ ತೆಗೆದೆ’ ಅಂತ ಇವಾ ಅಂದನಂತ. ಅದಕ್ಕ ಅವಾ- ಆ ಕಾಲ್ಪನಿಕ ವರದಿಗಾರ ಇವನಿಗೆ ಬೈದನಂತ. `ಹೌದಪಾ, ದೊಡ ಮನಿಷಾ, ನೀ ಯಾಕ ಸಹಾಯ ಮಾಡತೀದಿ? ನೀ ಬರೇ ನಿನ್ನ ಲಾಭ ಅಷ್ಟ ನೋಡಿಕೊಂಡಿ. ಯಾಕಂದರ ಅಲ್ಲೆ ಎರಡು ರಣಹದ್ದು ಇದ್ದವು. ಒಂದು ಆ ಮಗುವಿನ ಹಿಂದ ಹೊಂಟಿತ್ತು, ಇನ್ನೊಂದು ಕೈಯಾಗ ಕ್ಯಾಮೆರಾ ಹಿಡಕೊಂಡಿತ್ತು’.

ತುಷಾರ ಮೆಹತಾ ಅಂದರ ಚಳಿಗಾಲದ ನಾಯಕ ಅಂತ ಅರ್ಥ. ಇಂತಾ ತಣ್ಣನೆ ಹೃದಯದ ಪುಣ್ಯಾತ್ಮ ತುಷಾರ ಮೆಹತಾ ಅವರು ಈ ಹಸೀ ಸುಳ್ಳನ್ನ ಮೇ ತಿಂಗಳ ಸುಡು ಬಿಸಲಿನ್ಯಾಗ ಕೇಂದ್ರ ಸರಕಾರದ ಪರ ವಾದ ಮಾಡುವಾಗ ನ್ಯಾಯಮೂರ್ತಿಗಳ ಎದುರಿಗೆ ಹೇಳಿದರು. ಒಂದು ಚೂರೂ ಬಿಡದೇ. ಅವರಿಗೆ ಒಂದು ಸಲೆನೂ ಇದು ಸುಳ್ಳು ಇರಬಹುದು ಅಂತ ಸಂದೇಹ ಕಾಡಲಿಲ್ಲ. ಅವರಿಗೆ ಸಂದೇಹ ಬಂದಿರಲಿಕ್ಕಿಲ್ಲ ಅಥವಾ ಸುಳ್ಳು ಅಂತ ಗೊತ್ತಿದ್ದರೂ ಇಡೀ ದೇಶವನ್ನು ನಂಬಿಸಲಿಕ್ಕೆ ಹೇಳಿರಬಹುದು.

ಇದರಾಗ ಸುಳ್ಳು ಏನಪಾ ಅಂದರ, ಅದು ಹುಡುಗಿ ಅಲ್ಲ- ಹುಡುಗ. ಆ ಹುಡುಗ ಕೆಲವೇ ಕ್ಷಣದೊಳಗ ಹಸಿವಿನಿಂದ ಸಾಯಲಿಲ್ಲ. ಆ ಹುಡುಗ 12 ವರ್ಷಗಳ ನಂತರ ಮಲೇರಿಯಾದಿಂದ ಸತ್ತು ಹೋದ. ಇನ್ನ ಕಾರ್ಟರ್ ಆ ಫೋಟೋ ತೆಗೆಯೋವಾಗ ಬರೀ ದೂರದಿಂದ ಆ ಕೆಟ್ಟ ದೃಶ್ಯವನ್ನ ನೋಡಿ ಆನಂದ ಪಡಲಿಲ್ಲ. ಅದರಿಂದ ಅವನಿಗೆ ಸಂಕಟ ಆತು. ಆತ ಆ ಹದ್ದನ್ನು ಓಡಿಸಿ ಆ ಹುಡುಗನ ಜೀವ ಉಳಿಸಿದ. ಆ ನಂತರ ತನ್ನ ಕುಟುಂಬದ ಸಮಸ್ಯೆ, ಸಾಲ, ಮಾದಕ ಪದಾರ್ಥದ ಚಟ ಇತ್ಯಾದಿ ಕಾರಣಗಳಿಂದ ಹಾಗೂ ಸ್ವಲ್ಪ ಮಟ್ಟಿನ ದುಃಖದಿಂದ ನೊಂದುಕೊಂಡು ಆತ್ಮಹತ್ಯೆ ಮಾಡಿಕೊಂಡ.

ಆದರ ಸಮಸ್ಯೆ ಇದಲ್ಲ. ಸಮಸ್ಯೆ ಪತ್ರಕರ್ತರನ್ನ ರಣ ಹದ್ದುಗಳು ಅಂತ ನೋಡೊ ಮನಸ್ಥಿತಿಯದ್ದು. ಸರಕಾರ ಮಾಡಿದ್ದೇ ಸರಿ, ಆಳುವ ಪಕ್ಷ ಆಡಿದ್ದೇ ಆಟ ಅಂತ ಹೇಳಿ ಚಪ್ಪಾಳೆ ತಟ್ಟುವವರು ಮಾತ್ರ ವರದಿಗಾರರು, ಬೇರೆಯವರು ರಣಹದ್ದುಗಳು ಅಂತ ತೀರ್ಮಾನಕ್ಕೆ ಬರೋದು. ಪ್ರಜಾಪ್ರಭುತ್ವಕ್ಕ ಇದು ಬಹಳ ಅಪಾಯಕಾರಿ.

ಸರಕಾರ ನಡೆಸುವವರು ಮೈ ಎಲ್ಲಾ ಕಣ್ಣಾಗಿ- ಕಿವಿಯಾಗಿ ಇರಬೇಕು. ತಮ್ಮ ಸರಿ- ತಪ್ಪುಗಳನ್ನು ಎತ್ತಿ ತೋರಿಸುವವರನ್ನು ಗೌರವದಿಂದ ನೋಡಬೇಕು. ಅವರ ಮಾತು ಕೇಳಿಸಕೋಬೇಕು. ಇಲ್ಲದಿದ್ದರೆ ತಮ್ಮ ಆಸ್ಥಾನ ಪಂಡಿತರು ಹೇಳಿದ್ದನ್ನೇ ಕೇಳಿಸಿಕೊಂಡು ಚಕ್ಕಡಿಗೆ ಕಟ್ಟಿದ ಎತ್ತಿನ ಹಂಗ ಕಣ್ಣು ಕಟಿಗೊಂಡು ಮುಂದ ಹೋಗಬೇಕಾಗತದ.

ಆಸ್ಥಾನ ಪಂಡಿತರು ತಮ್ಮ ಬ್ಯಾಳೆ ಬೇಯಿಸಿಕೊಳ್ಳಲಿಕ್ಕೆ ಆಳುವವರನ್ನ ಇಂದ್ರ – ಚಂದ್ರ ಅಂತ ಕರೀತಿರಬಹುದು. ಇದು ಗೊತ್ತಾಗದೇ ಹೋದರ ಸರಕಾರ ಜನರ ಮನಸ್ಸಿನಿಂದ ದೂರ ಹೋಗಬೇಕಾಗತದ. ಉರ್ದು ಕವಿ ಹಬೀಬ್ ಜಾಲಿಬ್ ಅವರು ಇಂಥಾ ಆಸ್ಥಾನ ಪಂಡಿತರ ಬಗ್ಗೆ “ನಾನು ಅವರಿಗೆ ಹಿಂಗಂದೆ” (`ಮೈನೆ ಉಸ್ಸೆ ಎ ಕಹಾ’) ಅಂತ ಒಂದು ಹಾಡು ಬರದಾರ.
ಅದರಾಗ ಈ ಸಾಲು ಬರತಾವು-

ಮೆಹರಬಾನ್ ಸಾಹೇಬರೇ,
ನಿಮ್ಮ ಸರಕಾರ ಎಷ್ಟು ಒಳ್ಳೆಯದು
ಅಂದರ, ಜನ ನಿಮ್ಮ ಕಾಲದಾಗ
ತಮ್ಮ ಖರ್ಚಿನ್ಯಾಗ ಜೈಲು ಸೇರಾಕ ಹತ್ಯಾರು

ಉನ್ನತ ಸ್ಥಾನದಲ್ಲಿ ಇರೋ ನಮ್ಮ ಪಂಥ ಪ್ರಧಾನ ಸೇವಕರು ಇಂಥವರಿಂದ ದೂರ ಇರಬೇಕು. ತಮ್ಮ ಮುಖಕ್ಕೆ ಕನ್ನಡಿ ಹಿಡಿಯೋವಂಥವರನ್ನ ಇಟ್ಟು ಕೊಳ್ಳಬೇಕು, ತಮ್ಮ ಫೋಟೋ ತಗದು ಫೋಟೋ ಶಾಪು ಮಾಡೋರನ್ನಲ್ಲ.

ಮಾಜಿ ಪ್ರಧಾನಿ ಇಂದಿರಾ ಗಾಂಧಿ ಅವರು ತುರ್ತು ಪರಿಸ್ಥಿತಿಯನ್ನ ಇಡೀ ದೇಶದ ಮೇಲೆ ಹೇರಿದರು. ಇದರಿಂದ ಪೊಲಿಸರು ಹಾಗೂ ಇತರ ಸರಕಾರಿ ಅಧಿಕಾರಿಗಳು ಜನ ಸಾಮಾನ್ಯರ ಮ್ಯಾಲೆ ಘೋರ ದಬ್ಬಾಳಿಕೆ ನಡೆಸಿದರು. ಇಲ್ಲದವರು ಅತೀವ ಹಿಂಸೆ ಅನುಭವಿಸಿದರು. ಇದು ಆಧುನಿಕ ಭಾರತೀಯ ಇತಿಹಾಸದಲ್ಲಿನ ಅತ್ಯಂತ ಕಹಿ ಘಟನೆಗಳಲ್ಲಿ ಒಂದು. ಅದು ಸುಮಾರು 18 ತಿಂಗಳು ಎಗ್ಗಿಲ್ಲದೇ ಮುನ್ನಡೆಯಿತು. ಅದೆಲ್ಲಾ ಮುಗದು ಹೋಗಿ ಐದಾರು ವರ್ಷ ಆದ ಮ್ಯಾಲೆ ಅವರು ಖುಷವಂತಸಿಂಗ್ ಅವರಿಗೆ ಹೇಳಿದರಂತೆ- “ ತುರ್ತು ಪರಿಸ್ಥಿತಿಯ ಸಮಯದಲ್ಲಿ ನಮಗೆ ಫೀಡಬ್ಯಾಕು (ಮರುಮಾಹಿತಿ, ಟೀಕೆ ಟಿಪ್ಪಣಿ) ಸಿಗಲೇ ಇಲ್ಲ. ಸಿಕ್ಕಿದ್ದರೆ, ಜನರ ಕಷ್ಟ ನಮಗೆ ಅರ್ಥ ವಾಗುತ್ತಿತ್ತು. ಅದನ್ನು ಇನ್ನಷ್ಟು ಬೇಗ ಹಿಂತೆಗೆಯಬಹುದಾಗಿತ್ತು. ಜನ ಸುಮ್ಮನೇ ಇದ್ದದ್ದು ನೋಡಿ ನಾವು ಅವರು ಖುಷಿಯಾಗಿದ್ದಾರೆ ಅಂದುಕೊಂಡೆವು” ಅಂತ. ನಮ್ಮೂರ ಕಡೆ ಇದಕ್ಕ ‘ರೊಟ್ಟಿ ಸುಟ್ಟ ಮ್ಯಾಲೆ ಒಲಿ ಆರಿಸಿದ್ದರಂತ’ ಅಂತ ಅಂತಾರ. ಇಂದಿರಾಗಾಂಧಿ ಅವರು ತಮ್ಮನ್ನು ಟೀಕೆ ಮಾಡಿದ ಏಳು ಸಾವಿರಕ್ಕೂ ಹೆಚ್ಚು ಜನ ಪತ್ರಕರ್ತರನ್ನ ಜೈಲಿಗೆ ಹಾಕಿದ್ದರು. ಬಿಬಿಸಿ ಯಂಥಾ ಅಂತರಾಷ್ಟ್ರೀಯ ಸುದ್ದಿ ಸಂಸ್ಥೆಗಳ ಮೇಲೆ ಒತ್ತಡ ಹೇರಿದ್ದರು. ಜನರ ದನಿಯಾದ ಮಾಧ್ಯಮವನ್ನು ಕಟ್ಟಿ ಹಾಕಿ ನಮಗೆ ಅವರ ದನಿ ಕೇಳಲಿಲ್ಲ ಅಂದರ ಹೆಂಗ?

ಈಗ ನಮ್ಮನ್ನು ಆಳುವವರಿಗೂ ಈ ಸುಬುದ್ಧಿ ಸಕಾಲದಲ್ಲಿ ಬರಲಿ, ಅಲ್ಲವೇ ಮನೋಲ್ಲಾಸಿನಿ?


ಇದನ್ನು ಓದಿ: ಸತತ ಮೂರನೇ ಬಾರಿಗೆ ಜಾಮಿಯಾ ಸಮನ್ವಯ ಸಮಿತಿ ಸದಸ್ಯೆ ಸಫೂರಾ ಜರ್ಗರ್‌ಗೆ ಜಾಮೀನು ನಿರಾಕರಣೆ
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...

ಕ್ಷೇತ್ರ ಮರುವಿಂಗಡನೆ : ಗೃಹ ಸಚಿವ ಅಮಿತ್ ಶಾ ಹೇಳಿದ್ದೆಲ್ಲವು ನಿಜವೇ?..ಇಲ್ಲಿದೆ ವಾಸ್ತವಾಂಶ

ದೇಶದ ಗೃಹ ಸಚಿವರು ಸಂಸತ್ತಿನಲ್ಲಿ ಪ್ರಮುಖ ಕಾನೂನಿನ ಬಗ್ಗೆ ವಿವರಿಸುವಾಗ ವಿಷಯ ಸ್ಪಷ್ಟವಾಗಿರಬೇಕು. ಆದರೆ, ಕ್ಷೇತ್ರ ಮರುವಿಂಗಡನೆ ಕುರಿತು ಗೃಹ ಸಚಿವ ಅಮಿತ್ ಶಾ ಮಾತನಾಡಿರುವುದು ಹಾಗಿರಲಿಲ್ಲ. ದಕ್ಷಿಣ ಭಾರತದ ರಾಜ್ಯಗಳು ತಮ್ಮ...

ಮಹಿಳಾ ಮೀಸಲು ಮಸೂದೆ 2023ರಲ್ಲೇ ಗೆದ್ದಿದೆ, ಈಗ ಸೋತಿರುವುದು ಮೋದಿ ಸರ್ಕಾರ

ಮೋದಿ ಸರ್ಕಾರ ಮಂಡಿಸಿದ್ದ ಮಹಿಳಾ ಮೀಸಲಾತಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾಗಿದೆ ಎಂಬುವುದು ದೇಶದಲ್ಲಿ ಪ್ರಸ್ತುತ ದೊಡ್ಡ ಚರ್ಚೆಯ ವಿಷಯವಾಗಿದೆ. ಕಾಂಗ್ರೆಸ್‌ ನೇತೃತ್ವದಲ್ಲಿ ವಿಪಕ್ಷಗಳು ಮಸೂದೆಯನ್ನು ಸೋಲಿಸುವ ಮೂಲಕ ದೇಶದ ಮಹಿಳೆಯರ ಸಬಲೀಕರಣಕ್ಕೆ...