Homeಚಳವಳಿಪ್ರತಿಭಟನೆಯನ್ನು ‘ದುಷ್ಕೃತ್ಯ’ ಎಂದು ಜೆಎನ್‌ಯು ಅಧ್ಯಕ್ಷೆಗೆ ನೋಟಿಸ್‌ ನೀಡಿದ ವಿವಿ!

ಪ್ರತಿಭಟನೆಯನ್ನು ‘ದುಷ್ಕೃತ್ಯ’ ಎಂದು ಜೆಎನ್‌ಯು ಅಧ್ಯಕ್ಷೆಗೆ ನೋಟಿಸ್‌ ನೀಡಿದ ವಿವಿ!

2018 ರಲ್ಲಿ ವಿಶ್ವವಿದ್ಯಾಲಯವು ಏಕಾಏಕಿ ಶುಲ್ಕ ಹೆಚ್ಚಿಸಿದ್ದು, ಇದರ ವಿರುದ್ದ ವಿದ್ಯಾರ್ಥಿಗಳು ಭಾರಿ ಪ್ರತಿಭಟನೆಯನ್ನು ನಡೆಸಿದ್ದರು.

- Advertisement -
- Advertisement -

2018 ರಲ್ಲಿ ನಡೆಸಿದ ಪ್ರತಿಭಟನೆಗಾಗಿ ಜವಾಹರಲಾಲ್ ನೆಹರು ವಿಶ್ವವಿದ್ಯಾಲಯ(ಜೆಎನ್‌ಯು)ದ ವಿದ್ಯಾರ್ಥಿ ಸಂಘದ ಅಧ್ಯಕ್ಷೆ ಆಯಿಷೆ ಘೋಷ್ ಮತ್ತು ಇನ್ನೊಬ್ಬ ವಿದ್ಯಾರ್ಥಿಗೆ ವಿಶ್ವವಿದ್ಯಾಲಯ ಶೋಕಾಸ್‌ ನೋಟಿಸ್ ನೀಡಿದ್ದು, ಪ್ರತಿಭಟನೆಯನ್ನು “ಅಶಿಸ್ತು ಮತ್ತು ದುಷ್ಕೃತ್ಯ” ಎಂದು ಕರೆದಿದೆ.

ನೋಟಿಸ್‌ಗೆ ಪ್ರತಿಕ್ರಿಯಿಸಿದ ಆಯಿಷೆ ಘೋಷ್, ಕೊರೊನಾ ಸಾಂಕ್ರಾಮಿಕದಿಂದಾಗಿ ವಿಶ್ವವಿದ್ಯಾಲಯದ ಹಲವಾರು ಆಡಳಿತ ಕಚೇರಿಗಳನ್ನು ಮುಚ್ಚಿದರೂ, ವಿಶ್ವವಿದ್ಯಾಲಯದ ಮುಖ್ಯ ಪ್ರೊಕ್ಟರ್ ಕಚೇರಿಯು, “ವಿದ್ಯಾರ್ಥಿಗಳನ್ನು ಬೆದರಿಸಲು ಮತ್ತು ಶಿಕ್ಷಿಸಲು ಮಾತ್ರ ನಿಯಮಿತವಾಗಿ ಕಾರ್ಯನಿರ್ವಹಿಸುತ್ತಿದೆ” ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

2018 ರಲ್ಲಿ ವಿಶ್ವವಿದ್ಯಾಲಯವು ಏಕಾಏಕಿ ಶುಲ್ಕ ಹೆಚ್ಚಿಸಿದ್ದು, ಇದರ ವಿರುದ್ದ ವಿದ್ಯಾರ್ಥಿಗಳು ಭಾರಿ ಪ್ರತಿಭಟನೆಯನ್ನು ನಡೆಸಿದ್ದರು.

ಇದನ್ನೂ ಓದಿ: ರಾಮ ಮಂದಿರ ಹಗರಣ: ಮಾನನಷ್ಟ ಮೊಕದ್ದಮೆ ಹೂಡಲು ಸೂಚಿಸಿದ ವಿಎಚ್‌‌ಪಿ!

ಜೂನ್ 11 ರಂದು ಆಯಿಷೆ ಅವರಿಗೆ ನೋಟಸ್‌ ನೀಡಲಾಗಿದ್ದು, ಕಳೆದ ವರ್ಷದ ಡಿಸೆಂಬರ್ 5 ರಂದು ನಡೆದ ಅಧ್ಯಯನ ಮಂಡಳಿ (ಬಿಒಎಸ್) ಸಭೆಯನ್ನು ಅವರು ಅಡ್ಡಿಪಡಿಸಿದ್ದಾರೆ ಎಂದು ಹೇಳಲಾಗಿದೆ.

ವಿಶ್ವವಿದ್ಯಾಲಯದ ಮುಖ್ಯ ಪ್ರೊಕ್ಟರ್ ಪ್ರೊಫೆಸರ್‌ ರಜನೀಶ್ ಕುಮಾರ್ ಮಿಶ್ರಾ ಅವರು ಈ ಬೆಳವಣಿಗೆಯನ್ನು ದೃಡಪಡಿಸಿದ್ದಾರೆ ಎಂದು ಇಂಡಿಯಾ ಟುಡೆ ಉಲ್ಲೇಖಿಸಿದೆ.

ಪ್ರತಿಭಟನೆ ನಡೆದು ಸುಮಾರು ಮೂರು ವರ್ಷಗಳ ನಂತರ ಯಾಕೆ ನೋಟಿಸ್ ನೀಡಲಾಗಿದೆ ಎಂಬ ಪ್ರಶ್ನೆಗೆ ಉತ್ತರಿಸಿದ ಅವರು, “ಶುಲ್ಕ ಹೆಚ್ಚಿಸುವ ವಿಶ್ವವಿದ್ಯಾಲಯದ ನಿರ್ದಾರವನ್ನು ವಿರೋಧಿಸಿ ವಿದ್ಯಾರ್ಥಿಗಳು ವಿಶ್ವವಿದ್ಯಾನಿಲಯವನ್ನು ದೀರ್ಘಕಾಲದವರೆಗೆ ನಿರ್ಬಂಧಿಸಿದ್ದರು, ನಂತರ ಮಧ್ಯಂತರ ಅಡಚಣೆಗಳು ಉಂಟಾದವು. 2020 ರಲ್ಲಿ ಸಾಂಕ್ರಾಮಿಕ ಪ್ರಾರಂಭವಾಯಿತು, ಆದ್ದರಿಂದ ನಾವು ಈಗ ಪ್ರಕ್ರಿಯೆಯನ್ನು ಪ್ರಾರಂಭಿಸಿದ್ದೇವೆ” ಎಂದು ತಿಳಿಸಿದ್ದಾರೆ.

ಅವರ ಪ್ರತಿಭಟನೆಯನ್ನು ಅಶಿಸ್ತು ಮತ್ತು ದುಷ್ಕೃತ್ಯ ಎಂದು ವಿಶ್ವವಿದ್ಯಾಲಯ ಕರೆದಿದ್ದು, “ತಮ್ಮ ವಿರುದ್ದ ಯಾಕೆ ಶಿಸ್ತು ಕ್ರಮವನ್ನು ಪ್ರಾರಂಭಿಸಬಾರದು” ಎಂದು ವಿವರಣೆ ನೀಡುವಂತೆ ಕೋರಿದೆ. ನೋಟಿಸ್‌ಗೆ ಉತ್ತರಿಸಲು ಆಯಿಷೆ ಘೋಷ್ ಅವರಿಗೆ ಜೂನ್ 21 ರವರೆಗೆ ಕಾಲಾವಕಾಶ ನೀಡಲಾಗಿದೆ. “ಉತ್ತರಿಸಲು ವಿಫಲವಾದರೆ ಸೂಕ್ತ ಕ್ರಮ ತೆಗೆದುಕೊಳ್ಳಲಾಗುತ್ತದೆ” ಎಂದು ನೋಟಿಸ್ ಎಚ್ಚರಿಸಿದೆ.

ಇದನ್ನೂ ಓದಿ: ಕೊರೊನಾ ನಿರ್ವಹಣೆ ಟೀಕೆಗಳಿಂದ ಬಚಾವಾಗಲು ಬಿಜೆಪಿಯ ಹೊಸ ಯೋಜನೆ

ನೋಟಿಸ್‌ಗೆ ಸಾಮಾಜಿಕ ಜಾಲತಾಣದಲ್ಲಿ ಪ್ರತಿಕ್ರಿಯಿಸಿದ ಆಯಿಷೆ ಘೋಷ್‌, ಜೆಎನ್‌ಯು ಆಡಳಿತಕ್ಕೆ ಮಾಡಲು ಕೆಲಸವಿಲ್ಲದಿದ್ದರೆ ನಮ್ಮಲ್ಲಿ ಒಂದು ಪಟ್ಟಿಯಿದೆ ಎಂದು ಹೇಳಿದ್ದಾರೆ. ಅವರು, “ಕೋವಿಡ್ ಆರೈಕೆ ಕೇಂದ್ರವನ್ನು ನಿರ್ಮಿಸಿ. ಕ್ಯಾಂಪಸ್‌ನಲ್ಲಿ ನೀರಿನ ಬಿಕ್ಕಟ್ಟನ್ನು ನಿಭಾಯಿಸಿ. ಫೆಲೋಶಿಪ್ ಅನ್ನು ಸರಿಯಾಗಿ ವಿತರಿಸಿ, ಎಲ್ಲರಿಗೂ ಲಸಿಕೆ ನೀಡಿ” ಎಂದು ಬರೆದಿದ್ದಾರೆ.

“ಇಷ್ಟೆಲ್ಲಾ ಸಮಸ್ಯೆ ಇರುವಾಗ ಮುಖ್ಯ ಕಚೇರಿ ವಿದ್ಯಾರ್ಥಿಗಳನ್ನು ಬೆದರಿಸಲು ಮತ್ತು ಶಿಕ್ಷಿಸಲು ನಿಯಮಿತವಾಗಿ ಕಾರ್ಯನಿರ್ವಹಿಸುತ್ತಿದೆ. ನೋಟಿಸ್‌ಗಳನ್ನು ನೀಡುವುದು ಮತ್ತು ವಿದ್ಯಾರ್ಥಿಗಳನ್ನು ಬೆದರಿಸುವುದರ ಮೂಲಕ ನಾವು ಧ್ವನಿ ಎತ್ತುದನ್ನು ತಡೆಯಲು ಸಾಧ್ಯವಿಲ್ಲ” ಎಂದು ಅವರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ: ಬಂಗಾಳ ರಾಜ್ಯಪಾಲರ ಭೇಟಿಗೆ 24 ಬಿಜೆಪಿ ಶಾಸಕರ ಗೈರು: ಟಿಎಂಸಿಗೆ ವಲಸೆ ತಡೆಯಲು ಬಿಜೆಪಿ ಹರಸಾಹಸ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...