Homeಚಳವಳಿಪ್ರತಿಭಟನೆಯನ್ನು ‘ದುಷ್ಕೃತ್ಯ’ ಎಂದು ಜೆಎನ್‌ಯು ಅಧ್ಯಕ್ಷೆಗೆ ನೋಟಿಸ್‌ ನೀಡಿದ ವಿವಿ!

ಪ್ರತಿಭಟನೆಯನ್ನು ‘ದುಷ್ಕೃತ್ಯ’ ಎಂದು ಜೆಎನ್‌ಯು ಅಧ್ಯಕ್ಷೆಗೆ ನೋಟಿಸ್‌ ನೀಡಿದ ವಿವಿ!

2018 ರಲ್ಲಿ ವಿಶ್ವವಿದ್ಯಾಲಯವು ಏಕಾಏಕಿ ಶುಲ್ಕ ಹೆಚ್ಚಿಸಿದ್ದು, ಇದರ ವಿರುದ್ದ ವಿದ್ಯಾರ್ಥಿಗಳು ಭಾರಿ ಪ್ರತಿಭಟನೆಯನ್ನು ನಡೆಸಿದ್ದರು.

- Advertisement -
- Advertisement -

2018 ರಲ್ಲಿ ನಡೆಸಿದ ಪ್ರತಿಭಟನೆಗಾಗಿ ಜವಾಹರಲಾಲ್ ನೆಹರು ವಿಶ್ವವಿದ್ಯಾಲಯ(ಜೆಎನ್‌ಯು)ದ ವಿದ್ಯಾರ್ಥಿ ಸಂಘದ ಅಧ್ಯಕ್ಷೆ ಆಯಿಷೆ ಘೋಷ್ ಮತ್ತು ಇನ್ನೊಬ್ಬ ವಿದ್ಯಾರ್ಥಿಗೆ ವಿಶ್ವವಿದ್ಯಾಲಯ ಶೋಕಾಸ್‌ ನೋಟಿಸ್ ನೀಡಿದ್ದು, ಪ್ರತಿಭಟನೆಯನ್ನು “ಅಶಿಸ್ತು ಮತ್ತು ದುಷ್ಕೃತ್ಯ” ಎಂದು ಕರೆದಿದೆ.

ನೋಟಿಸ್‌ಗೆ ಪ್ರತಿಕ್ರಿಯಿಸಿದ ಆಯಿಷೆ ಘೋಷ್, ಕೊರೊನಾ ಸಾಂಕ್ರಾಮಿಕದಿಂದಾಗಿ ವಿಶ್ವವಿದ್ಯಾಲಯದ ಹಲವಾರು ಆಡಳಿತ ಕಚೇರಿಗಳನ್ನು ಮುಚ್ಚಿದರೂ, ವಿಶ್ವವಿದ್ಯಾಲಯದ ಮುಖ್ಯ ಪ್ರೊಕ್ಟರ್ ಕಚೇರಿಯು, “ವಿದ್ಯಾರ್ಥಿಗಳನ್ನು ಬೆದರಿಸಲು ಮತ್ತು ಶಿಕ್ಷಿಸಲು ಮಾತ್ರ ನಿಯಮಿತವಾಗಿ ಕಾರ್ಯನಿರ್ವಹಿಸುತ್ತಿದೆ” ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

2018 ರಲ್ಲಿ ವಿಶ್ವವಿದ್ಯಾಲಯವು ಏಕಾಏಕಿ ಶುಲ್ಕ ಹೆಚ್ಚಿಸಿದ್ದು, ಇದರ ವಿರುದ್ದ ವಿದ್ಯಾರ್ಥಿಗಳು ಭಾರಿ ಪ್ರತಿಭಟನೆಯನ್ನು ನಡೆಸಿದ್ದರು.

ಇದನ್ನೂ ಓದಿ: ರಾಮ ಮಂದಿರ ಹಗರಣ: ಮಾನನಷ್ಟ ಮೊಕದ್ದಮೆ ಹೂಡಲು ಸೂಚಿಸಿದ ವಿಎಚ್‌‌ಪಿ!

ಜೂನ್ 11 ರಂದು ಆಯಿಷೆ ಅವರಿಗೆ ನೋಟಸ್‌ ನೀಡಲಾಗಿದ್ದು, ಕಳೆದ ವರ್ಷದ ಡಿಸೆಂಬರ್ 5 ರಂದು ನಡೆದ ಅಧ್ಯಯನ ಮಂಡಳಿ (ಬಿಒಎಸ್) ಸಭೆಯನ್ನು ಅವರು ಅಡ್ಡಿಪಡಿಸಿದ್ದಾರೆ ಎಂದು ಹೇಳಲಾಗಿದೆ.

ವಿಶ್ವವಿದ್ಯಾಲಯದ ಮುಖ್ಯ ಪ್ರೊಕ್ಟರ್ ಪ್ರೊಫೆಸರ್‌ ರಜನೀಶ್ ಕುಮಾರ್ ಮಿಶ್ರಾ ಅವರು ಈ ಬೆಳವಣಿಗೆಯನ್ನು ದೃಡಪಡಿಸಿದ್ದಾರೆ ಎಂದು ಇಂಡಿಯಾ ಟುಡೆ ಉಲ್ಲೇಖಿಸಿದೆ.

ಪ್ರತಿಭಟನೆ ನಡೆದು ಸುಮಾರು ಮೂರು ವರ್ಷಗಳ ನಂತರ ಯಾಕೆ ನೋಟಿಸ್ ನೀಡಲಾಗಿದೆ ಎಂಬ ಪ್ರಶ್ನೆಗೆ ಉತ್ತರಿಸಿದ ಅವರು, “ಶುಲ್ಕ ಹೆಚ್ಚಿಸುವ ವಿಶ್ವವಿದ್ಯಾಲಯದ ನಿರ್ದಾರವನ್ನು ವಿರೋಧಿಸಿ ವಿದ್ಯಾರ್ಥಿಗಳು ವಿಶ್ವವಿದ್ಯಾನಿಲಯವನ್ನು ದೀರ್ಘಕಾಲದವರೆಗೆ ನಿರ್ಬಂಧಿಸಿದ್ದರು, ನಂತರ ಮಧ್ಯಂತರ ಅಡಚಣೆಗಳು ಉಂಟಾದವು. 2020 ರಲ್ಲಿ ಸಾಂಕ್ರಾಮಿಕ ಪ್ರಾರಂಭವಾಯಿತು, ಆದ್ದರಿಂದ ನಾವು ಈಗ ಪ್ರಕ್ರಿಯೆಯನ್ನು ಪ್ರಾರಂಭಿಸಿದ್ದೇವೆ” ಎಂದು ತಿಳಿಸಿದ್ದಾರೆ.

ಅವರ ಪ್ರತಿಭಟನೆಯನ್ನು ಅಶಿಸ್ತು ಮತ್ತು ದುಷ್ಕೃತ್ಯ ಎಂದು ವಿಶ್ವವಿದ್ಯಾಲಯ ಕರೆದಿದ್ದು, “ತಮ್ಮ ವಿರುದ್ದ ಯಾಕೆ ಶಿಸ್ತು ಕ್ರಮವನ್ನು ಪ್ರಾರಂಭಿಸಬಾರದು” ಎಂದು ವಿವರಣೆ ನೀಡುವಂತೆ ಕೋರಿದೆ. ನೋಟಿಸ್‌ಗೆ ಉತ್ತರಿಸಲು ಆಯಿಷೆ ಘೋಷ್ ಅವರಿಗೆ ಜೂನ್ 21 ರವರೆಗೆ ಕಾಲಾವಕಾಶ ನೀಡಲಾಗಿದೆ. “ಉತ್ತರಿಸಲು ವಿಫಲವಾದರೆ ಸೂಕ್ತ ಕ್ರಮ ತೆಗೆದುಕೊಳ್ಳಲಾಗುತ್ತದೆ” ಎಂದು ನೋಟಿಸ್ ಎಚ್ಚರಿಸಿದೆ.

ಇದನ್ನೂ ಓದಿ: ಕೊರೊನಾ ನಿರ್ವಹಣೆ ಟೀಕೆಗಳಿಂದ ಬಚಾವಾಗಲು ಬಿಜೆಪಿಯ ಹೊಸ ಯೋಜನೆ

ನೋಟಿಸ್‌ಗೆ ಸಾಮಾಜಿಕ ಜಾಲತಾಣದಲ್ಲಿ ಪ್ರತಿಕ್ರಿಯಿಸಿದ ಆಯಿಷೆ ಘೋಷ್‌, ಜೆಎನ್‌ಯು ಆಡಳಿತಕ್ಕೆ ಮಾಡಲು ಕೆಲಸವಿಲ್ಲದಿದ್ದರೆ ನಮ್ಮಲ್ಲಿ ಒಂದು ಪಟ್ಟಿಯಿದೆ ಎಂದು ಹೇಳಿದ್ದಾರೆ. ಅವರು, “ಕೋವಿಡ್ ಆರೈಕೆ ಕೇಂದ್ರವನ್ನು ನಿರ್ಮಿಸಿ. ಕ್ಯಾಂಪಸ್‌ನಲ್ಲಿ ನೀರಿನ ಬಿಕ್ಕಟ್ಟನ್ನು ನಿಭಾಯಿಸಿ. ಫೆಲೋಶಿಪ್ ಅನ್ನು ಸರಿಯಾಗಿ ವಿತರಿಸಿ, ಎಲ್ಲರಿಗೂ ಲಸಿಕೆ ನೀಡಿ” ಎಂದು ಬರೆದಿದ್ದಾರೆ.

“ಇಷ್ಟೆಲ್ಲಾ ಸಮಸ್ಯೆ ಇರುವಾಗ ಮುಖ್ಯ ಕಚೇರಿ ವಿದ್ಯಾರ್ಥಿಗಳನ್ನು ಬೆದರಿಸಲು ಮತ್ತು ಶಿಕ್ಷಿಸಲು ನಿಯಮಿತವಾಗಿ ಕಾರ್ಯನಿರ್ವಹಿಸುತ್ತಿದೆ. ನೋಟಿಸ್‌ಗಳನ್ನು ನೀಡುವುದು ಮತ್ತು ವಿದ್ಯಾರ್ಥಿಗಳನ್ನು ಬೆದರಿಸುವುದರ ಮೂಲಕ ನಾವು ಧ್ವನಿ ಎತ್ತುದನ್ನು ತಡೆಯಲು ಸಾಧ್ಯವಿಲ್ಲ” ಎಂದು ಅವರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ: ಬಂಗಾಳ ರಾಜ್ಯಪಾಲರ ಭೇಟಿಗೆ 24 ಬಿಜೆಪಿ ಶಾಸಕರ ಗೈರು: ಟಿಎಂಸಿಗೆ ವಲಸೆ ತಡೆಯಲು ಬಿಜೆಪಿ ಹರಸಾಹಸ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...

ಕಾಂಗ್ರೆಸ್‌ಗೆ ಕಗ್ಗಂಟಾದ ಕೇರಳ ಸಿಎಂ ಆಯ್ಕೆ : ಮೂವರು ಪ್ರಭಾವಿಗಳಲ್ಲಿ ಹೈಕಮಾಂಡ್ ಒಲವು ಯಾರ ಪರ?

ಕೇರಳ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಜಯ ಗಳಿಸಿರುವ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್)ಗೆ ಮುಖ್ಯಮಂತ್ರಿ ಆಯ್ಕೆ ಕಗ್ಗಂಟಾಗಿದೆ. ಯುಡಿಎಫ್‌ ಮೈತ್ರಿಕೂಟ ಗೆದ್ದಿರುವ ಒಟ್ಟು 102 ಸ್ಥಾನಗಳ ಪೈಕಿ 63 ಸ್ಥಾನಗಳನ್ನು...

ಏಪ್ರಿಲ್‌ನಲ್ಲಿ ಗಾಜಾ ಮತ್ತು ಪಶ್ಚಿಮ ದಂಡೆಯಾದ್ಯಂತ ಇಸ್ರೇಲಿ ಪಡೆಗಳಿಂದ 122 ಪ್ಯಾಲೆಸ್ಟೀನಿಯನ್ನರ ಹತ್ಯೆ: ವಿಶ್ವಸಂಸ್ಥೆಯ ಹಕ್ಕುಗಳ ಕಚೇರಿ

ಏಪ್ರಿಲ್‌ನಲ್ಲಿ ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶಗಳಲ್ಲಿ ಇಸ್ರೇಲಿ ಪಡೆಗಳು ಮತ್ತು ವಸಾಹತುಗಾರರು 22 ಮಕ್ಕಳು ಮತ್ತು ಎಂಟು ಮಹಿಳೆಯರು ಸೇರಿದಂತೆ ಕನಿಷ್ಠ 122 ಪ್ಯಾಲೆಸ್ಟೀನಿಯನ್ನರನ್ನು ಕೊಂದಿದ್ದಾರೆ ಎಂದು ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶದಲ್ಲಿನ ವಿಶ್ವಸಂಸ್ಥೆಯ ಮಾನವ...

2026ರ ತಮಿಳುನಾಡು ವಿಧಾನಸಭಾ ಚುನಾವಣೆಯ ಫಲಿತಾಂಶ: ರಾಜಕೀಯ ಸ್ಥಿತ್ಯಂತರಗಳ ಅವಲೋಕನ

"2026ರ ತಮಿಳುನಾಡು ವಿಧಾನಸಭಾ ಚುನಾವಣೆಯು ರಾಜ್ಯದ ರಾಜಕೀಯ ಇತಿಹಾಸದ ಹಾದಿಯನ್ನೇ ಬದಲಿಸಿದೆ. ಟಿವಿಕೆ ಪಕ್ಷದ ನಾಯಕ ಜೋಸೆಫ್ ವಿಜಯ್ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡುವ ಮೂಲಕ ದಶಕಗಳ ಕಾಲ ನಡೆದಿದ್ದ ಡಿಎಂಕೆ-ಎಐಎಡಿಎಂಕೆ...

ಬಂಗಾಳದಲ್ಲಿ ‘ಅಧಿಕಾರಿ’ ಆಡಳಿತ: ಜಾತ್ಯತೀತ ಮುಖವಾಡ ಕಳಚಿ ಹಿಂದುತ್ವದ ಅಸ್ತ್ರ ಹಿಡಿದು ಗದ್ದುಗೆ ಏರಿದ ಸುವೇಂದು! 

ಕೋಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಗಾದಿಗೆ ಸುವೇಂದು ಅಧಿಕಾರಿ ಅವರ ಪದಾರ್ಪಣೆಯು, ಹಳೆಯ ಭ್ರಷ್ಟ ವ್ಯವಸ್ಥೆಯನ್ನು ಗುಡಿಸಿ ಹಾಕಲು ಬಂದ 'ಹೊರಗಿನ' ವ್ಯಕ್ತಿಯ ಕಥೆಯಲ್ಲ. ಬದಲಿಗೆ, ಬಂಗಾಳದ ಹಿಂಸಾತ್ಮಕ, ಬಣ ರಾಜಕೀಯ ಮತ್ತು...

ಬಂಗಾಳ ಚುನಾವಣೆ : SIRನಲ್ಲಿ ಅತಿ ಹೆಚ್ಚು ಹೆಸರು ಅಳಿಸಿದ ಕ್ಷೇತ್ರಗಳು ಬಿಜೆಪಿ ಪಾಲು

ಪಶ್ಚಿಮ ಬಂಗಾಳದ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಬಿಜೆಪಿ, ಸರ್ಕಾರ ರಚಿಸಲು ಅಣಿಯಾಗಿದೆ. ಈ ನಡುವೆ ಹಲವು ಪ್ರಶ್ನೆಗಳು, ಗೊಂದಲಗಳು ಹಾಗೆಯೇ ಮುಂದುವರಿದಿದೆ. ಚುನಾವಣೆ ಘೋಷಣೆಗೆ ಮುನ್ನವೇ ಬಂಗಾಳದ ಮತದಾರರ ಪಟ್ಟಿಯ ವಿಶೇಷ...

ತಮಿಳುನಾಡು ರಾಜ್ಯಪಾಲರ ನಡೆ ಎಷ್ಟು ಸಮಂಜಸ?

'ಮಳೆ ನಿಂತರೂ ಮರದ ಹನಿ ನಿಲ್ಲಲ್ಲ' ಎಂಬ ಮಾತಿಗೆ ಅನ್ವರ್ಥದಂತೆ ಚುನಾವಣೆ ಮುಗಿದರೂ ಸರ್ಕಾರ ರಚನೆಯ ಸರ್ಕಸ್ ಮಾತ್ರ ನಿಲ್ಲುವ ಸೂಚನೆ ಕಾಣುತ್ತಿಲ್ಲ. ತಮಿಳುನಾಡಿನ ರಾಜಕೀಯ ವಿದ್ಯಮಾನಗಳನ್ನು ನೋಡುತ್ತಿದ್ದರೆ ಅಲ್ಲಿ ನಡೆಯುತ್ತಿರವ ಬೆಳವಣಿಗೆಗಳು...

ಬಿಜೆಪಿಯಿಂದ ಯಡಿಯೂರಪ್ಪ ಅಭಿಮಾನೋತ್ಸವ: ಲಿಂಗಾಯತ ಮತಕ್ಕಾಗಿ ಮಾಸ್ಟರ್ ಫ್ಲಾನ್…?  

ದಕ್ಷಿಣ ಭಾರತದ ರಾಜಕಾರಣದಲ್ಲಿ ಬಿಜೆಪಿ ಎನ್ನುವುದು ಒಂದು ಕಾಲಕ್ಕೆ ಕೇವಲ ನಗರ ಪ್ರದೇಶಗಳಿಗೆ ಸೀಮಿತವಾಗಿದ್ದ ಪಕ್ಷ. ಆದರೆ, ಅದೇ ಬಿಜೆಪಿಯನ್ನು ಕರ್ನಾಟಕದಲ್ಲಿ ಬೇರೂರುವಂತೆ ಮಾಡಿದ್ದು ಬೂಕನಕೆರೆ ಸಿದ್ದಲಿಂಗಪ್ಪ ಯಡಿಯೂರಪ್ಪ ಅಂದರೆ ಬಿ.ಎಸ್. ಯಡಿಯೂರಪ್ಪ....