Homeಚಳವಳಿಪ್ರತಿಭಟನೆಯನ್ನು ‘ದುಷ್ಕೃತ್ಯ’ ಎಂದು ಜೆಎನ್‌ಯು ಅಧ್ಯಕ್ಷೆಗೆ ನೋಟಿಸ್‌ ನೀಡಿದ ವಿವಿ!

ಪ್ರತಿಭಟನೆಯನ್ನು ‘ದುಷ್ಕೃತ್ಯ’ ಎಂದು ಜೆಎನ್‌ಯು ಅಧ್ಯಕ್ಷೆಗೆ ನೋಟಿಸ್‌ ನೀಡಿದ ವಿವಿ!

2018 ರಲ್ಲಿ ವಿಶ್ವವಿದ್ಯಾಲಯವು ಏಕಾಏಕಿ ಶುಲ್ಕ ಹೆಚ್ಚಿಸಿದ್ದು, ಇದರ ವಿರುದ್ದ ವಿದ್ಯಾರ್ಥಿಗಳು ಭಾರಿ ಪ್ರತಿಭಟನೆಯನ್ನು ನಡೆಸಿದ್ದರು.

- Advertisement -
- Advertisement -

2018 ರಲ್ಲಿ ನಡೆಸಿದ ಪ್ರತಿಭಟನೆಗಾಗಿ ಜವಾಹರಲಾಲ್ ನೆಹರು ವಿಶ್ವವಿದ್ಯಾಲಯ(ಜೆಎನ್‌ಯು)ದ ವಿದ್ಯಾರ್ಥಿ ಸಂಘದ ಅಧ್ಯಕ್ಷೆ ಆಯಿಷೆ ಘೋಷ್ ಮತ್ತು ಇನ್ನೊಬ್ಬ ವಿದ್ಯಾರ್ಥಿಗೆ ವಿಶ್ವವಿದ್ಯಾಲಯ ಶೋಕಾಸ್‌ ನೋಟಿಸ್ ನೀಡಿದ್ದು, ಪ್ರತಿಭಟನೆಯನ್ನು “ಅಶಿಸ್ತು ಮತ್ತು ದುಷ್ಕೃತ್ಯ” ಎಂದು ಕರೆದಿದೆ.

ನೋಟಿಸ್‌ಗೆ ಪ್ರತಿಕ್ರಿಯಿಸಿದ ಆಯಿಷೆ ಘೋಷ್, ಕೊರೊನಾ ಸಾಂಕ್ರಾಮಿಕದಿಂದಾಗಿ ವಿಶ್ವವಿದ್ಯಾಲಯದ ಹಲವಾರು ಆಡಳಿತ ಕಚೇರಿಗಳನ್ನು ಮುಚ್ಚಿದರೂ, ವಿಶ್ವವಿದ್ಯಾಲಯದ ಮುಖ್ಯ ಪ್ರೊಕ್ಟರ್ ಕಚೇರಿಯು, “ವಿದ್ಯಾರ್ಥಿಗಳನ್ನು ಬೆದರಿಸಲು ಮತ್ತು ಶಿಕ್ಷಿಸಲು ಮಾತ್ರ ನಿಯಮಿತವಾಗಿ ಕಾರ್ಯನಿರ್ವಹಿಸುತ್ತಿದೆ” ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

2018 ರಲ್ಲಿ ವಿಶ್ವವಿದ್ಯಾಲಯವು ಏಕಾಏಕಿ ಶುಲ್ಕ ಹೆಚ್ಚಿಸಿದ್ದು, ಇದರ ವಿರುದ್ದ ವಿದ್ಯಾರ್ಥಿಗಳು ಭಾರಿ ಪ್ರತಿಭಟನೆಯನ್ನು ನಡೆಸಿದ್ದರು.

ಇದನ್ನೂ ಓದಿ: ರಾಮ ಮಂದಿರ ಹಗರಣ: ಮಾನನಷ್ಟ ಮೊಕದ್ದಮೆ ಹೂಡಲು ಸೂಚಿಸಿದ ವಿಎಚ್‌‌ಪಿ!

ಜೂನ್ 11 ರಂದು ಆಯಿಷೆ ಅವರಿಗೆ ನೋಟಸ್‌ ನೀಡಲಾಗಿದ್ದು, ಕಳೆದ ವರ್ಷದ ಡಿಸೆಂಬರ್ 5 ರಂದು ನಡೆದ ಅಧ್ಯಯನ ಮಂಡಳಿ (ಬಿಒಎಸ್) ಸಭೆಯನ್ನು ಅವರು ಅಡ್ಡಿಪಡಿಸಿದ್ದಾರೆ ಎಂದು ಹೇಳಲಾಗಿದೆ.

ವಿಶ್ವವಿದ್ಯಾಲಯದ ಮುಖ್ಯ ಪ್ರೊಕ್ಟರ್ ಪ್ರೊಫೆಸರ್‌ ರಜನೀಶ್ ಕುಮಾರ್ ಮಿಶ್ರಾ ಅವರು ಈ ಬೆಳವಣಿಗೆಯನ್ನು ದೃಡಪಡಿಸಿದ್ದಾರೆ ಎಂದು ಇಂಡಿಯಾ ಟುಡೆ ಉಲ್ಲೇಖಿಸಿದೆ.

ಪ್ರತಿಭಟನೆ ನಡೆದು ಸುಮಾರು ಮೂರು ವರ್ಷಗಳ ನಂತರ ಯಾಕೆ ನೋಟಿಸ್ ನೀಡಲಾಗಿದೆ ಎಂಬ ಪ್ರಶ್ನೆಗೆ ಉತ್ತರಿಸಿದ ಅವರು, “ಶುಲ್ಕ ಹೆಚ್ಚಿಸುವ ವಿಶ್ವವಿದ್ಯಾಲಯದ ನಿರ್ದಾರವನ್ನು ವಿರೋಧಿಸಿ ವಿದ್ಯಾರ್ಥಿಗಳು ವಿಶ್ವವಿದ್ಯಾನಿಲಯವನ್ನು ದೀರ್ಘಕಾಲದವರೆಗೆ ನಿರ್ಬಂಧಿಸಿದ್ದರು, ನಂತರ ಮಧ್ಯಂತರ ಅಡಚಣೆಗಳು ಉಂಟಾದವು. 2020 ರಲ್ಲಿ ಸಾಂಕ್ರಾಮಿಕ ಪ್ರಾರಂಭವಾಯಿತು, ಆದ್ದರಿಂದ ನಾವು ಈಗ ಪ್ರಕ್ರಿಯೆಯನ್ನು ಪ್ರಾರಂಭಿಸಿದ್ದೇವೆ” ಎಂದು ತಿಳಿಸಿದ್ದಾರೆ.

ಅವರ ಪ್ರತಿಭಟನೆಯನ್ನು ಅಶಿಸ್ತು ಮತ್ತು ದುಷ್ಕೃತ್ಯ ಎಂದು ವಿಶ್ವವಿದ್ಯಾಲಯ ಕರೆದಿದ್ದು, “ತಮ್ಮ ವಿರುದ್ದ ಯಾಕೆ ಶಿಸ್ತು ಕ್ರಮವನ್ನು ಪ್ರಾರಂಭಿಸಬಾರದು” ಎಂದು ವಿವರಣೆ ನೀಡುವಂತೆ ಕೋರಿದೆ. ನೋಟಿಸ್‌ಗೆ ಉತ್ತರಿಸಲು ಆಯಿಷೆ ಘೋಷ್ ಅವರಿಗೆ ಜೂನ್ 21 ರವರೆಗೆ ಕಾಲಾವಕಾಶ ನೀಡಲಾಗಿದೆ. “ಉತ್ತರಿಸಲು ವಿಫಲವಾದರೆ ಸೂಕ್ತ ಕ್ರಮ ತೆಗೆದುಕೊಳ್ಳಲಾಗುತ್ತದೆ” ಎಂದು ನೋಟಿಸ್ ಎಚ್ಚರಿಸಿದೆ.

ಇದನ್ನೂ ಓದಿ: ಕೊರೊನಾ ನಿರ್ವಹಣೆ ಟೀಕೆಗಳಿಂದ ಬಚಾವಾಗಲು ಬಿಜೆಪಿಯ ಹೊಸ ಯೋಜನೆ

ನೋಟಿಸ್‌ಗೆ ಸಾಮಾಜಿಕ ಜಾಲತಾಣದಲ್ಲಿ ಪ್ರತಿಕ್ರಿಯಿಸಿದ ಆಯಿಷೆ ಘೋಷ್‌, ಜೆಎನ್‌ಯು ಆಡಳಿತಕ್ಕೆ ಮಾಡಲು ಕೆಲಸವಿಲ್ಲದಿದ್ದರೆ ನಮ್ಮಲ್ಲಿ ಒಂದು ಪಟ್ಟಿಯಿದೆ ಎಂದು ಹೇಳಿದ್ದಾರೆ. ಅವರು, “ಕೋವಿಡ್ ಆರೈಕೆ ಕೇಂದ್ರವನ್ನು ನಿರ್ಮಿಸಿ. ಕ್ಯಾಂಪಸ್‌ನಲ್ಲಿ ನೀರಿನ ಬಿಕ್ಕಟ್ಟನ್ನು ನಿಭಾಯಿಸಿ. ಫೆಲೋಶಿಪ್ ಅನ್ನು ಸರಿಯಾಗಿ ವಿತರಿಸಿ, ಎಲ್ಲರಿಗೂ ಲಸಿಕೆ ನೀಡಿ” ಎಂದು ಬರೆದಿದ್ದಾರೆ.

“ಇಷ್ಟೆಲ್ಲಾ ಸಮಸ್ಯೆ ಇರುವಾಗ ಮುಖ್ಯ ಕಚೇರಿ ವಿದ್ಯಾರ್ಥಿಗಳನ್ನು ಬೆದರಿಸಲು ಮತ್ತು ಶಿಕ್ಷಿಸಲು ನಿಯಮಿತವಾಗಿ ಕಾರ್ಯನಿರ್ವಹಿಸುತ್ತಿದೆ. ನೋಟಿಸ್‌ಗಳನ್ನು ನೀಡುವುದು ಮತ್ತು ವಿದ್ಯಾರ್ಥಿಗಳನ್ನು ಬೆದರಿಸುವುದರ ಮೂಲಕ ನಾವು ಧ್ವನಿ ಎತ್ತುದನ್ನು ತಡೆಯಲು ಸಾಧ್ಯವಿಲ್ಲ” ಎಂದು ಅವರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ: ಬಂಗಾಳ ರಾಜ್ಯಪಾಲರ ಭೇಟಿಗೆ 24 ಬಿಜೆಪಿ ಶಾಸಕರ ಗೈರು: ಟಿಎಂಸಿಗೆ ವಲಸೆ ತಡೆಯಲು ಬಿಜೆಪಿ ಹರಸಾಹಸ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...