Homeಮುಖಪುಟಹೇಮಂತ್ ಕರ್ಕರೆ ಆರೆಸ್ಸೆಸ್‌ ನಂಟಿನ ಪೊಲೀಸ್ ಅಧಿಕಾರಿಯ ಗುಂಡಿಗೆ ಬಲಿಯಾಗಿದ್ದು: ವಿಜಯ್ ವಡೆಟ್ಟಿವಾರ್

ಹೇಮಂತ್ ಕರ್ಕರೆ ಆರೆಸ್ಸೆಸ್‌ ನಂಟಿನ ಪೊಲೀಸ್ ಅಧಿಕಾರಿಯ ಗುಂಡಿಗೆ ಬಲಿಯಾಗಿದ್ದು: ವಿಜಯ್ ವಡೆಟ್ಟಿವಾರ್

- Advertisement -
- Advertisement -

2008ರ ಮುಂಬೈ ಭಯೋತ್ಪಾದಕ ದಾಳಿಯ ಸಮಯದಲ್ಲಿ ರಾಜ್ಯ ಭಯೋತ್ಪಾದನಾ ನಿಗ್ರಹ ದಳದ(ಎಟಿಎಸ್) ಮಾಜಿ ಮುಖ್ಯಸ್ಥ ಹೇಮಂತ್ ಕರ್ಕರೆ ಅವರನ್ನು ಹತ್ಯೆಗೈದಿದ್ದು ಭಯೋತ್ಪಾದಕ ಅಜ್ಮಲ್ ಅಮೀರ್ ಕಸಬ್ ಅಲ್ಲ, ಆರೆಸ್ಸೆಸ್‌ ಜೊತೆ ನಂಟು ಹೊಂದಿದ್ದ ಪೊಲೀಸ್ ಅಧಿಕಾರಿ ಎಂದು ಮಹಾರಾಷ್ಟ್ರ ವಿರೋಧ ಪಕ್ಷದ ನಾಯಕ ಮತ್ತು ಕಾಂಗ್ರೆಸ್‌ ನಾಯಕ ವಿಜಯ್ ವಡೆಟ್ಟಿವಾರ್ ಗಂಭೀರವಾದ ಆರೋಪವನ್ನು ಮಾಡಿದ್ದಾರೆ.

1993ರ ಮುಂಬೈ ಸರಣಿ ಸ್ಫೋಟ ಮತ್ತು 26/11 ಮುಂಬೈ ದಾಳಿಯ ಪ್ರಕರಣಗಳಲ್ಲಿ ಉಜ್ವಲ್ ನಿಕಮ್ ವಿಶೇಷ ಪಬ್ಲಿಕ್ ಪ್ರಾಸಿಕ್ಯೂಟರ್ ಆಗಿ ಕೆಲಸ ಮಾಡಿದ್ದರು. ಈಗ ಅವರು ಮುಂಬೈ ಉತ್ತರ ಕೇಂದ್ರ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿದ್ದಾರೆ.

ಹೇಮಂತ್ ಕರ್ಕರೆಯನ್ನು ಕೊಂದ ಗುಂಡು ಅಜ್ಮಲ್ ಕಸಬ್‌ನಂತಹ ಭಯೋತ್ಪಾದಕರದ್ದಲ್ಲ, ಆದು  ಆರೆಸ್ಸೆಸ್‌ಗೆ ನಿಕಟವಾಗಿರುವ ಪೊಲೀಸ್ ಅಧಿಕಾರಿಯದ್ದು, ಈ ಸತ್ಯವನ್ನು ಮುಚ್ಚಿಟ್ಟ ಉಜ್ವಲ್ ನಿಕಮ್ ಒಬ್ಬ ದೇಶದ್ರೋಹಿ ಮತ್ತು ಅವರಂತಹ ದೇಶದ್ರೋಹಿಗೆ ಬಿಜೆಪಿ ಚುನಾವಣಾ ಟಿಕೆಟ್ ನೀಡಿದೆ ಎಂದು ವಡೆತ್ತಿವಾರ್  ಆರೋಪಿಸಿದ್ದಾರೆ.

ಕೊಲ್ಹಾಪುರದಲ್ಲಿ ಭಾನುವಾರ ಮಾತನಾಡಿದ ವಡೆತ್ತಿವಾರ್, ತಮ್ಮ ಹೇಳಿಕೆಗಳಿಗೆ ರಾಜಕೀಯ ಬಣ್ಣ ನೀಡಲಾಗುತ್ತಿದೆ, ತಮ್ಮ ಹೇಳಿಕೆಗಳು ಮಾಜಿ ಉನ್ನತ ಪೊಲೀಸ್ ಅಧಿಕಾರಿ ಎಸ್.ಎಂ. ಮುಶ್ರೀಫ್ ಬರೆದಿರುವ ಕರ್ಕರೆಯನ್ನು ಕೊಂದ ಪುಸ್ತಕವನ್ನು ಆಧರಿಸಿವೆ ಎಂದು ಸ್ಪಷ್ಟಪಡಿಸಿದ್ದಾರೆ.

ನಾನು ಎಸ್‌ಎಂ ಮುಶ್ರೀಫ್ ಬರೆದಿರುವ ಪುಸ್ತಕದಲ್ಲಿ ಬರೆದದ್ದನ್ನು ಉಲ್ಲೇಖಿಸಿದ್ದೇನೆ. ಹೇಮಂತ್ ಕರ್ಕರೆಗೆ ತಗುಲಿದ ಗುಂಡಿನ ಬಗ್ಗೆ ಅದರಲ್ಲಿ ಪ್ರತಿಯೊಂದು ಮಾಹಿತಿಯೂ ಇತ್ತು. ಇದು ಭಯೋತ್ಪಾದಕರ ಬುಲೆಟ್ ಅಲ್ಲ ಎಂದು ಹೇಳಿದ್ದಾರೆ.

ವಡೆಟ್ಟಿವಾರ್ ಅವರ ಹೇಳಿಕೆಯು ಮಹಾರಾಷ್ಟ್ರದಲ್ಲಿ ಆಡಳಿತಾರೂಢ ಬಿಜೆಪಿ ಮತ್ತು ಮುಖ್ಯಮಂತ್ರಿ ಏಕನಾಥ್ ಶಿಂಧೆ ನೇತೃತ್ವದ ಶಿವಸೇನೆಯ ಟೀಕೆಗೆ ಕಾರಣವಾಗಿದೆ. ಮುಂಬೈ ಭಯೋತ್ಪಾದನಾ ದಾಳಿಯಲ್ಲಿ ಹುತಾತ್ಮರಾದ ವೀರಯೋಧರನ್ನು ಕಾಂಗ್ರೆಸ್ ಅವಮಾನಿಸಿದೆ ಎಂದು ಆರೋಪಿಸಿದ ಬಿಜೆಪಿ ರಾಜ್ಯಾಧ್ಯಕ್ಷ ಚಂದ್ರಶೇಖರ ಬಾವನಕುಲೆ, ಇಂತಹ ಹೇಳಿಕೆಗಳ ಮೂಲಕ ಪಾಕಿಸ್ತಾನಕ್ಕೆ ಸಹಾಯ ಮಾಡಲು ಕಾಂಗ್ರೆಸ್ ಪಿತೂರಿ ನಡೆಸುತ್ತಿದೆ ಎಂದು ಹೇಳಿದ್ದಾರೆ.

ಚುನಾವಣೆಯಲ್ಲಿ ಮತ ಪಡೆಯಲು ಕಾಂಗ್ರೆಸ್ ಎಷ್ಟು ಕೆಳಮಟ್ಟಕ್ಕೆ ಇಳಿಯುತ್ತದೆ? ಅವರು ಈಗ ಬಿಜೆಪಿಯನ್ನು ವಿರೋಧಿಸಲು 26/11 ಮುಂಬೈ ದಾಳಿಯ ಭಯೋತ್ಪಾದಕ ಅಜ್ಮಲ್ ಕಸಬ್‌ನ ಪರವಾಗಿ ಮಾತನಾಡುತ್ತಿದ್ದಾರೆಯೇ? ಸ್ವಲ್ಪ ನಾಚಿಕೆ ಇರಲಿ. ಕಾಂಗ್ರೆಸ್‌ಗೆ ಯಾವುದೇ ಸಮಸ್ಯೆ ಇಲ್ಲ. ಅವರು ಈಗ ಹುತಾತ್ಮರಾದ ನಮ್ಮ ಪೊಲೀಸ್ ಅಧಿಕಾರಿಗಳನ್ನು ಅವಮಾನಿಸುತ್ತಿದ್ದಾರೆ ಎಂದು ಚಂದ್ರಶೇಖರ ಬಾವನಕುಲೆ ಹೇಳಿದ್ದಾರೆ.

ಇದನ್ನು ಓದಿ: ಅಮೇಥಿ ಕಾಂಗ್ರೆಸ್ ಕಚೇರಿ ಮೇಲೆ ದಾಳಿ, ಕಾರ್ಯಕರ್ತನಿಗೆ ಹಲ್ಲೆ: ಬಿಜೆಪಿ ಮುಖಂಡರು ಸೇರಿ 10 ಮಂದಿ ವಿರುದ್ದ ಪ್ರಕರಣ ದಾಖಲು

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...