Homeಮುಖಪುಟಹೇಮಂತ್ ಕರ್ಕರೆ ಆರೆಸ್ಸೆಸ್‌ ನಂಟಿನ ಪೊಲೀಸ್ ಅಧಿಕಾರಿಯ ಗುಂಡಿಗೆ ಬಲಿಯಾಗಿದ್ದು: ವಿಜಯ್ ವಡೆಟ್ಟಿವಾರ್

ಹೇಮಂತ್ ಕರ್ಕರೆ ಆರೆಸ್ಸೆಸ್‌ ನಂಟಿನ ಪೊಲೀಸ್ ಅಧಿಕಾರಿಯ ಗುಂಡಿಗೆ ಬಲಿಯಾಗಿದ್ದು: ವಿಜಯ್ ವಡೆಟ್ಟಿವಾರ್

- Advertisement -
- Advertisement -

2008ರ ಮುಂಬೈ ಭಯೋತ್ಪಾದಕ ದಾಳಿಯ ಸಮಯದಲ್ಲಿ ರಾಜ್ಯ ಭಯೋತ್ಪಾದನಾ ನಿಗ್ರಹ ದಳದ(ಎಟಿಎಸ್) ಮಾಜಿ ಮುಖ್ಯಸ್ಥ ಹೇಮಂತ್ ಕರ್ಕರೆ ಅವರನ್ನು ಹತ್ಯೆಗೈದಿದ್ದು ಭಯೋತ್ಪಾದಕ ಅಜ್ಮಲ್ ಅಮೀರ್ ಕಸಬ್ ಅಲ್ಲ, ಆರೆಸ್ಸೆಸ್‌ ಜೊತೆ ನಂಟು ಹೊಂದಿದ್ದ ಪೊಲೀಸ್ ಅಧಿಕಾರಿ ಎಂದು ಮಹಾರಾಷ್ಟ್ರ ವಿರೋಧ ಪಕ್ಷದ ನಾಯಕ ಮತ್ತು ಕಾಂಗ್ರೆಸ್‌ ನಾಯಕ ವಿಜಯ್ ವಡೆಟ್ಟಿವಾರ್ ಗಂಭೀರವಾದ ಆರೋಪವನ್ನು ಮಾಡಿದ್ದಾರೆ.

1993ರ ಮುಂಬೈ ಸರಣಿ ಸ್ಫೋಟ ಮತ್ತು 26/11 ಮುಂಬೈ ದಾಳಿಯ ಪ್ರಕರಣಗಳಲ್ಲಿ ಉಜ್ವಲ್ ನಿಕಮ್ ವಿಶೇಷ ಪಬ್ಲಿಕ್ ಪ್ರಾಸಿಕ್ಯೂಟರ್ ಆಗಿ ಕೆಲಸ ಮಾಡಿದ್ದರು. ಈಗ ಅವರು ಮುಂಬೈ ಉತ್ತರ ಕೇಂದ್ರ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿದ್ದಾರೆ.

ಹೇಮಂತ್ ಕರ್ಕರೆಯನ್ನು ಕೊಂದ ಗುಂಡು ಅಜ್ಮಲ್ ಕಸಬ್‌ನಂತಹ ಭಯೋತ್ಪಾದಕರದ್ದಲ್ಲ, ಆದು  ಆರೆಸ್ಸೆಸ್‌ಗೆ ನಿಕಟವಾಗಿರುವ ಪೊಲೀಸ್ ಅಧಿಕಾರಿಯದ್ದು, ಈ ಸತ್ಯವನ್ನು ಮುಚ್ಚಿಟ್ಟ ಉಜ್ವಲ್ ನಿಕಮ್ ಒಬ್ಬ ದೇಶದ್ರೋಹಿ ಮತ್ತು ಅವರಂತಹ ದೇಶದ್ರೋಹಿಗೆ ಬಿಜೆಪಿ ಚುನಾವಣಾ ಟಿಕೆಟ್ ನೀಡಿದೆ ಎಂದು ವಡೆತ್ತಿವಾರ್  ಆರೋಪಿಸಿದ್ದಾರೆ.

ಕೊಲ್ಹಾಪುರದಲ್ಲಿ ಭಾನುವಾರ ಮಾತನಾಡಿದ ವಡೆತ್ತಿವಾರ್, ತಮ್ಮ ಹೇಳಿಕೆಗಳಿಗೆ ರಾಜಕೀಯ ಬಣ್ಣ ನೀಡಲಾಗುತ್ತಿದೆ, ತಮ್ಮ ಹೇಳಿಕೆಗಳು ಮಾಜಿ ಉನ್ನತ ಪೊಲೀಸ್ ಅಧಿಕಾರಿ ಎಸ್.ಎಂ. ಮುಶ್ರೀಫ್ ಬರೆದಿರುವ ಕರ್ಕರೆಯನ್ನು ಕೊಂದ ಪುಸ್ತಕವನ್ನು ಆಧರಿಸಿವೆ ಎಂದು ಸ್ಪಷ್ಟಪಡಿಸಿದ್ದಾರೆ.

ನಾನು ಎಸ್‌ಎಂ ಮುಶ್ರೀಫ್ ಬರೆದಿರುವ ಪುಸ್ತಕದಲ್ಲಿ ಬರೆದದ್ದನ್ನು ಉಲ್ಲೇಖಿಸಿದ್ದೇನೆ. ಹೇಮಂತ್ ಕರ್ಕರೆಗೆ ತಗುಲಿದ ಗುಂಡಿನ ಬಗ್ಗೆ ಅದರಲ್ಲಿ ಪ್ರತಿಯೊಂದು ಮಾಹಿತಿಯೂ ಇತ್ತು. ಇದು ಭಯೋತ್ಪಾದಕರ ಬುಲೆಟ್ ಅಲ್ಲ ಎಂದು ಹೇಳಿದ್ದಾರೆ.

ವಡೆಟ್ಟಿವಾರ್ ಅವರ ಹೇಳಿಕೆಯು ಮಹಾರಾಷ್ಟ್ರದಲ್ಲಿ ಆಡಳಿತಾರೂಢ ಬಿಜೆಪಿ ಮತ್ತು ಮುಖ್ಯಮಂತ್ರಿ ಏಕನಾಥ್ ಶಿಂಧೆ ನೇತೃತ್ವದ ಶಿವಸೇನೆಯ ಟೀಕೆಗೆ ಕಾರಣವಾಗಿದೆ. ಮುಂಬೈ ಭಯೋತ್ಪಾದನಾ ದಾಳಿಯಲ್ಲಿ ಹುತಾತ್ಮರಾದ ವೀರಯೋಧರನ್ನು ಕಾಂಗ್ರೆಸ್ ಅವಮಾನಿಸಿದೆ ಎಂದು ಆರೋಪಿಸಿದ ಬಿಜೆಪಿ ರಾಜ್ಯಾಧ್ಯಕ್ಷ ಚಂದ್ರಶೇಖರ ಬಾವನಕುಲೆ, ಇಂತಹ ಹೇಳಿಕೆಗಳ ಮೂಲಕ ಪಾಕಿಸ್ತಾನಕ್ಕೆ ಸಹಾಯ ಮಾಡಲು ಕಾಂಗ್ರೆಸ್ ಪಿತೂರಿ ನಡೆಸುತ್ತಿದೆ ಎಂದು ಹೇಳಿದ್ದಾರೆ.

ಚುನಾವಣೆಯಲ್ಲಿ ಮತ ಪಡೆಯಲು ಕಾಂಗ್ರೆಸ್ ಎಷ್ಟು ಕೆಳಮಟ್ಟಕ್ಕೆ ಇಳಿಯುತ್ತದೆ? ಅವರು ಈಗ ಬಿಜೆಪಿಯನ್ನು ವಿರೋಧಿಸಲು 26/11 ಮುಂಬೈ ದಾಳಿಯ ಭಯೋತ್ಪಾದಕ ಅಜ್ಮಲ್ ಕಸಬ್‌ನ ಪರವಾಗಿ ಮಾತನಾಡುತ್ತಿದ್ದಾರೆಯೇ? ಸ್ವಲ್ಪ ನಾಚಿಕೆ ಇರಲಿ. ಕಾಂಗ್ರೆಸ್‌ಗೆ ಯಾವುದೇ ಸಮಸ್ಯೆ ಇಲ್ಲ. ಅವರು ಈಗ ಹುತಾತ್ಮರಾದ ನಮ್ಮ ಪೊಲೀಸ್ ಅಧಿಕಾರಿಗಳನ್ನು ಅವಮಾನಿಸುತ್ತಿದ್ದಾರೆ ಎಂದು ಚಂದ್ರಶೇಖರ ಬಾವನಕುಲೆ ಹೇಳಿದ್ದಾರೆ.

ಇದನ್ನು ಓದಿ: ಅಮೇಥಿ ಕಾಂಗ್ರೆಸ್ ಕಚೇರಿ ಮೇಲೆ ದಾಳಿ, ಕಾರ್ಯಕರ್ತನಿಗೆ ಹಲ್ಲೆ: ಬಿಜೆಪಿ ಮುಖಂಡರು ಸೇರಿ 10 ಮಂದಿ ವಿರುದ್ದ ಪ್ರಕರಣ ದಾಖಲು

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...

ಸರ್ಕಾರ ಆಧಾರ್ ವ್ಯವಸ್ಥೆಯನ್ನು ನಂಬುವುದಾದರೆ, SIR‌ ತಪಾಸಣೆಗೂ ಇದನ್ನೇ ಬಳಸಲಿ: ಆರ್‌ ಎಸ್‌ ಶರ್ಮಾ ಸಲಹೆ

ಪ್ರಸ್ತುತ ಚರ್ಚೆಯಲ್ಲಿರುವ ಮತದಾರರ ಪಟ್ಟಿ ಪರಿಷ್ಕರಣೆ (SIR) ಮತ್ತು ದಾಖಲೆಗಳ ತಪಾಸಣೆ ಪ್ರಕ್ರಿಯೆಗೆ ಸಂಬಂಧಿಸಿದಂತೆ ಆಧಾರ್‌ ವ್ಯವಸ್ಥೆಯ ಮಾಜಿ ಮುಖ್ಯಸ್ಥ (UIDAI) ಶರ್ಮಾ ಅವರು ಮಹತ್ವದ ಸಲಹೆಯೊಂದನ್ನು ನೀಡಿದ್ದಾರೆ. ಪ್ರತಿ ಬಾರಿ ಸಾವಿರಾರು...

ಸೋಶಿಯಲ್ ಮೀಡಿಯಾಗಳಲ್ಲಿ ಅಪ್ರಾಪ್ತರಿಗೆ ಹೆಚ್ಚುತ್ತಿರುವ ಅಪಾಯ; ಲೈಂಗಿಕ ಶೋಷಣೆ ತಡೆಗೆ ಮೆಟಾದಿಂದ ಮಹತ್ವದ ನಿರ್ಧಾರ!

ಸಾಮಾಜಿಕ ಜಾಲತಾಣಗಳ ಬಳಕೆ ಯುವಜನರು ಮತ್ತು ಮಕ್ಕಳ ದೈನಂದಿನ ಬದುಕಿನ ಅವಿಭಾಜ್ಯ ಭಾಗವಾಗಿರುವ ಬೆನ್ನಲ್ಲೇ, ಆನ್‌ಲೈನ್‌ನಲ್ಲಿ ಮಕ್ಕಳ ಲೈಂಗಿಕ ಶೋಷಣೆ ಮತ್ತು ದೌರ್ಜನ್ಯಕ್ಕೆ ಸಂಬಂಧಿಸಿದ ಪ್ರಕರಣಗಳನ್ನು ಎದುರಿಸಲು ಮೆಟಾ ಮಹತ್ವದ ನಿರ್ಧಾರ ಕೈಗೊಂಡಿದೆ....

ಬೆಂಗಳೂರಿನ ಎನ್‌ಎಲ್‌ಎಸ್‌ಐಯು‌ನಲ್ಲಿ ಉಮರ್ ಖಾಲಿದ್ ಸಾಕ್ಷ್ಯಚಿತ್ರ ಪ್ರದರ್ಶನ; ಕೇಂದ್ರದ ಹಸ್ತಕ್ಷೇಪಕ್ಕೆ ಎಬಿವಿಪಿ ಮನವಿ

ಬೆಂಗಳೂರಿನಲ್ಲಿರುವ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು‌) ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರದ ಪ್ರದರ್ಶನವನ್ನು ಕಾಯಂ ಆಗಿ ರದ್ದುಗೊಳಿಸಲು ಆರ್‌ಎಸ್ಎಸ್ ಸಂಯೋಜಿತ ವಿದ್ಯಾರ್ಥಿ ಸಂಘಟನೆ ಎಬಿವಿಪಿ ಕೇಂದ್ರ...

‘NAZA’ಗೆ ವೆನಿಸ್ ವಿಶೇಷ ಜ್ಯೂರಿ ಪ್ರಶಸ್ತಿ; ಸ್ವದೇಶ ಇಸ್ರೇಲ್‌ನ ಎಐ ಹತ್ಯಾಕಾಂಡ ಬಯಲಿಗೆಳೆದ ನಿರ್ದೇಶಕರಿಗೆ ಪೌರತ್ವ ಕಸಿಯುವ ಬೆದರಿಕೆ

ವೆನಿಸ್ ಚಲನಚಿತ್ರೋತ್ಸವದಲ್ಲಿ ವಿಶೇಷ ಜ್ಯೂರಿ ಪ್ರಶಸ್ತಿ ಗೆದ್ದ ‘NAZA’ ಸಾಕ್ಷ್ಯಚಿತ್ರದ ನಿರ್ದೇಶಕರ ವಿರುದ್ಧ ಇಸ್ರೇಲಿ ಸಂಸ್ಕೃತಿ ಸಚಿವ ಮಿಕಿ ಜೋಹರ್ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು, ‘ರಾಜ್ಯಕ್ಕೆ ದ್ರೋಹ’ ಎಸಗಿದ್ದಾರೆಂದು ಆರೋಪಿಸಿ ಅವರ ಇಸ್ರೇಲಿ...

ಕರ್ನಾಟಕದಲ್ಲಿ ಬರದ ಬರೆ; ನೀರು, ವಿದ್ಯುತ್‌ ಕೊರತೆ ಸಾಧ್ಯತೆ: ಸಿಎಂ ಡಿಕೆ ಶಿವಕುಮಾರ್‌ ಎಚ್ಚರಿಕೆ

ದುರ್ಬಲ ಮುಂಗಾರು ಹಾಗೂ ಮಳೆಯ ಕೊರತೆಯಿಂದ ಕರ್ನಾಟಕದಲ್ಲಿ ಬರ ಪರಿಸ್ಥಿತಿ ಮತ್ತಷ್ಟು ಬಿಗಡಾಯಿಸುತ್ತಿದ್ದು, ಮುಂದಿನ ದಿನಗಳಲ್ಲಿ ರಾಜ್ಯವು ಕುಡಿಯುವ ನೀರು ಮತ್ತು ವಿದ್ಯುತ್‌ ಕೊರತೆಯನ್ನು ಎದುರಿಸುವ ಸಾಧ್ಯತೆಯಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌...

2,000 ರೂ.ವರೆಗಿನ UPI ಪಾವತಿಗೆ ಶುಲ್ಕವಿಲ್ಲ ಎಂದ ಕೇಂದ್ರ ಸರ್ಕಾರ

ಡಿಜಿಟಲ್ ಪಾವತಿ ಬಳಸುವ ಕೋಟ್ಯಂತರ ಸಾಮಾನ್ಯ ಜನರಿಗೆ ಕೇಂದ್ರ ಹಣಕಾಸು ಸಚಿವಾಲಯ ಮಹತ್ವದ ಸ್ಪಷ್ಟನೆ ನೀಡಿದ್ದು, 2,000 ರೂಪಾಯಿವರೆಗಿನ ಯುಪಿಐ (UPI) ವಹಿವಾಟುಗಳಿಗೆ ಯಾವುದೇ ರೀತಿಯ ಶುಲ್ಕ ವಿಧಿಸುವಂತಿಲ್ಲ ಎಂದು ಅಧಿಸೂಚನೆ ಹೊರಡಿಸಿದೆ....

ಯಾದಗಿರಿ| ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತರ ಮೇಲೆ ಮಾರಣಾಂತಿಕ ಹಲ್ಲೆ

ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತ ಸಮುದಾಯದ ಭಕ್ತರ ಮೇಲೆ ಸವರ್ಣೀಯರು ಮಾರಣಾಂತಿಕ ಹಲ್ಲೆ ನಡೆದಿರುವ ಆರೋಪ ಯಾದಗಿರಿ ಜಿಲ್ಲೆಯ ವಡಗೇರಾ ತಾಲೂಕಿನ ಗುರುಸುಣಿಗಿ ಗುಡ್ಡದಲ್ಲಿ ಕೇಳಿಬಂದಿದೆ. ಚಾಮನಾಳ ಗ್ರಾಮದ ದಲಿತ ಭಕ್ತರನ್ನು ಗುರಿಯಾಗಿಸಿಕೊಂಡು ಗುರುಸುಣಿಗಿ...