Homeಗೌರಿ ಕಣ್ಣೋಟರಾಜಕಾರಣಿಗಳು ಮಾಡಲಾಗದ ಸಹಾಯವನ್ನು ಜನ ಮಾಡಿದ ಗಳಿಗೆ...

ರಾಜಕಾರಣಿಗಳು ಮಾಡಲಾಗದ ಸಹಾಯವನ್ನು ಜನ ಮಾಡಿದ ಗಳಿಗೆ…

ವಿಭಜನೆಯ ಸಮಯದಲ್ಲಿ ಭಾರತಕ್ಕೆ ವಲಸೆ ಬಂದ ಕೈಗಾರಿಕೋದ್ಯಮಿಯೊಬ್ಬರು ಅನಾಮಧೇಯವಾಗಿ ಈ ನಿಧಿಗೆ 12 ಲಕ್ಷ ರೂಪಾಯಿಗಳನ್ನು ನೀಡಿದ್ದಾರೆ.

- Advertisement -
- Advertisement -

ಭಾರತ-ಪಾಕಿಸ್ತಾನ ಗಡಿಯಲ್ಲಿರುವ ವಾಘಾದಲ್ಲಿ ಪ್ರತಿ ಸಂಜೆ ವಿಚಿತ್ರವಾದ ಒಂದು ಸಾಂಪ್ರದಾಯಿಕ ಆಚರಣೆ ನಡೆಯುತ್ತದೆ. ಸುಮಾರು ಐದಡಿ ಅಂತರದಲ್ಲಿ ಎರಡೂ ದೇಶಗಳ ಪ್ರವೇಶದ್ವಾರ (ಗೇಟ್)ಗಳಿವೆ. ಅದರ ಬಳಿಯೇ ಎರಡೂ ದೇಶಗಳ ಧ್ವಜಗಳು ಹಾರಾಡುತ್ತಿರುತ್ತವೆ. ಎರಡೂ ಕಡೆಯ ಸೈನಿಕರು “ಗುಡ್ ಡೇ, ಹೇಗಿದ್ದೀರಿ?” ಎಂದು ಕೆಲವೊಮ್ಮೆ ಒಬ್ಬರನ್ನೊಬ್ಬರು ವಿಚಾರಿಸಿಕೊಳ್ಳುತ್ತಾರೆ. ನಾನಲ್ಲಿಗೆ ಹೋಗಿದ್ದಾಗ ಭಾರತದ ಹಿರಿಯ ಸೈನ್ಯಾಧಿಕಾರಿಯೊಬ್ಬರು ನನ್ನನ್ನು ಪಾಕಿಸ್ತಾನದ ಸೈನ್ಯಾಧಿಕಾರಿಗೆ ಪರಿಚಯ ಮಾಡಿಕೊಟ್ಟಿದ್ದರು ಎರಡೂ ದೇಶಗಳ ನಡುವಿನ ನೋ ಮ್ಯಾನ್ಸ್ ಲ್ಯಾಂಡ್‍ನಲ್ಲಿ ನಾನೊಂದು ಹೆಜ್ಜೆಯಿಟ್ಟೆ. ಪಾಕಿಸ್ತಾನ ಸೈನ್ಯಾಧಿಕಾರಿಯೂ ಮುಂದೆ ಬಂದರು. ಇಬ್ಬರೂ ಕೈಕುಲುಕಿದೆವು. ಅದೂ ಕಾರ್ಗಿಲ್‍ನಲ್ಲಿ ಎರಡೂ ದೇಶಗಳ ನಡುವೆ ಸಂಘರ್ಷ ನಡೆಯುತ್ತಿದ್ದಾಗ.

ಹೀಗೆ ಸೌಹಾರ್ದತೆಯಿಂದಲೇ ವಾಘಾದಲ್ಲಿ ತಮ್ಮ ದಿನಗಳನ್ನು ಕಳೆಯುವ ಎರಡೂ ಕಡೆಯ ಸೈನಿಕರು ಸಂಜೆಯಾಗುತ್ತಿದ್ದಂತೆ ಒಂದು ರೀತಿಯ ಪೈಪೋಟಿಗೆ ಇಳಿಯುತ್ತಾರೆ. ಎರಡೂ ಗೇಟ್‍ಗಳ ಹತ್ತಿರ ಸಾರ್ವಜನಿಕರು ಸೇರುತ್ತಿದ್ದಂತೆ, ಧ್ವಜ ಕೆಳಗಿಳಿಸುವ ಕಾರ್ಯಕ್ರಮ ಪ್ರಾರಂಭವಾಗುತ್ತದೆ. ಯಾವ ಕಡೆಯ ಸೈನಿಕರು ಹೆಚ್ಚು ಆಕ್ರಮಣಿಶೀಲತೆಯನ್ನು ಪ್ರದರ್ಶಿಸುತ್ತಾರೆ, ಯಾರು ಹೆಚ್ಚು ರಭಸದಿಂದ ಕಿವಿಗಪ್ಪಳಿಸುವಂತೆ ತಮ್ಮ ಬೂಟುಗಳನ್ನು ನೆಲಕ್ಕೆ ಅಪ್ಪಳಿಸುತ್ತಾರೆ ಎಂದೆಲ್ಲಾ ಗಮನಿಸುವ ಸಾರ್ವಜನಿಕರು ತಮ್ಮ ಕಡೆಯವರನ್ನು ಚಪ್ಪಾಳೆ ತಟ್ಟುತ್ತಾ, ಘೋಷಣೆಗಳನ್ನು ಕೂಗುತ್ತಾ ಹುರಿದುಂಬಿಸುತ್ತಾರೆ. ಎರಡೂ ಕಡೆಯ ಸೈನಿಕರ ನಡುವೆ ಒಂದು ಸಣ್ಣ ಯುದ್ಧ ನಡೆಯುತ್ತಿದೆಯೇನೋ ಎಂಬ ವಾತಾವರಣ ನಿರ್ಮಾಣವಾಗುತ್ತದೆ.

ಆದರೆ ವಿಚಿತ್ರ ಸಂಗತಿಯೇನೆಂದರೆ, ಈ ಧ್ವಜ ಕೆಳಗಿಳಿಸುವ ಆಚರಣೆ ಮುಗಿದ ಮರುಕ್ಷಣವೇ ಎರಡೂ ಕಡೆಯ ಸಾರ್ವಜನಿಕರು ಗೇಟ್‍ಗಳ ಹತ್ತಿರ ಧಾವಿಸುತ್ತಾರೆ. ಒಬ್ಬರನ್ನೊಬ್ಬರು ಕುತೂಹಲದಿಂದ ನೋಡುತ್ತಿರುತ್ತಾರೆ. ಅಲ್ಲಿ ಯಾವುದೇ ರೀತಿಯ ಪೈಪೋಟಿ ಇರುವುದಿಲ್ಲ. ಬದಲಾಗಿ ‘ನಮ್ಮಂತೆಯೇ ಇದ್ದೀರಲ್ಲಾ ನೀವು’ ಎಂಬ ಭಾವನೆ ಮೂಡಿರುತ್ತದೆ. ದೇಶ ವಿಭಜನೆಯ ಸಮಯದಲ್ಲಿ ಬೇರೆಯಾದ ತಮ್ಮ ಬಂಧುಗಳನ್ನು ಮತ್ತೆ ಕಾಣಬಹುದೇನೋ ಎಂಬ ತವಕದಿಂದ ಕೆಲವರು ವಾಘಾ ಗಡಿಗೆ ಪದೇಪದೇ ಬರುತ್ತಿರುತ್ತಾರೆ. ಈ ಕಡೆಯಿಂದ ಇವರು, ಆ ಕಡೆಯಿಂದ ಅವರು ಹೀಗೆ ಮೌನವಾಗಿ ನೋಡುತ್ತಲೇ ನಿಲ್ಲುವ ಜನ ಮತ್ತೆ ತಮ್ಮ ಮನೆಯತ್ತ ಮರುಳುವುದು ಎರಡೂ ಕಡೆಯ ಸೈನಿಕರು ಅವರನ್ನು ಅಲ್ಲಿಂದ ಓಡಿಸಿದಾಗಲೇ!

ಇದೆಲ್ಲವನ್ನು ನೆನಪು ಮಾಡಿಕೊಟ್ಟಿದ್ದು ನೂರ್ ಫಾತಿಮಾ ಎಂಬ ಮುದ್ದು ಮಗು. ಈ ಕೂಸಿನ ಶಸ್ತ್ರಚಿಕಿತ್ಸೆ ಬಗ್ಗೆ ಈಗಾಗಲೇ ಸಾಕಷ್ಟು ಸುದ್ದಿಗಳು ಎಲ್ಲ ಕಡೆಯೂ ಪ್ರಕಟವಾಗಿದೆ. ಆದರೆ ನನಗೆ ಇಷ್ಟವಾದದ್ದು ಆಕೆಗೆ ಭಾರತೀಯರು ನೀಡಿದ ಭಾವನಾತ್ಮಕ ಹಾಗೂ ಆರ್ಥಿಕ ಬೆಂಬಲ. ರಾಜಕಾರಣಿಗಳಿಗೆ ಸಾಧ್ಯವಾಗದಂತಹ ಸಹಾಯವನ್ನು ಜನ ನೀಡಿದ್ದಾರೆ. ನೂರ್‍ಳ ತಂದೆತಾಯಿ ಅದನ್ನು ಅಷ್ಟೇ ಸೌಜನ್ಯದಿಂದ ಸ್ವೀಕರಿಸಿದ್ದಾರೆ.

ನೂರ್‍ಳ ತಂದೆ ಬಡ ಮಕ್ಕಳಿಗೆಂದೇ ಶುರು ಮಾಡಿರುವ ‘ದೋಸ್ತಿ ಫಂಡ್’ (ಸ್ನೇಹನಿಧಿ)ಗೆ ಎಷ್ಟೋ ಭಾರತೀಯರು ಹಣ ನೀಡಿದ್ದಾರೆ. ಹಿಂದೆ ಲಾಹೋರ್‌ನಲ್ಲಿ ವಾಸಿಸುತ್ತಿದ್ದ, ಆದರೆ ವಿಭಜನೆಯ ಸಮಯದಲ್ಲಿ ಭಾರತಕ್ಕೆ ವಲಸೆ ಬಂದ ಕೈಗಾರಿಕೋದ್ಯಮಿಯೊಬ್ಬರು ಅನಾಮಧೇಯವಾಗಿ ಈ ನಿಧಿಗೆ 12 ಲಕ್ಷ ರೂಪಾಯಿಗಳನ್ನು ನೀಡಿದ್ದಾರೆ. ಪಾಕಿಸ್ತಾನದ ಮುಸ್ಲಿಂ ಒಬ್ಬರು ಶುರುಮಾಡಿರುವ ಈ ನಿಧಿಗೆ ಭಾರತದ ಹಿಂದೂ ಒಬ್ಬರು ಇಂತಹ ದೊಡ್ಡ ಮೊತ್ತದ ದಾನ ನೀಡಿರುವುದು ಎರಡೂ ದೇಶಗಳ ಜನರಿಗೆ ಬೇಕಿರುವುದು ಸ್ನೇಹ ಮತ್ತು ಸೌಹಾರ್ದತೆಯ ಬಾಳು ಎಂಬುದನ್ನು ತೋರಿಸುತ್ತದೆ.

ದೇಶದಲ್ಲಿ ಜಾತಿ, ಧರ್ಮದ ಆಧಾರದ ಮೇಲೆ ಜನರನ್ನು ಒಡೆಯುವ ಪ್ರಯತ್ನಗಳು ನಡೆಯುತ್ತಿರುವಾಗಲೇ, ಜನಸಾಮಾನ್ಯರು ತಮಗೆ ಧಾರ್ಮಿಕ ಭಿನ್ನತೆ ಮುಖ್ಯ ಅಲ್ಲವೇ ಅಲ್ಲ ಎಂಬುದನ್ನು ಸಾಬೀತುಪಡಿಸಿದ್ದಾರೆ.

ಪಾಕಿಸ್ತಾನದ ವಿರುದ್ಧ ಭಾರತದ ವೈರತ್ವವಿರುವುದು ನಮ್ಮ ದೇಶದ ಸುಭದ್ರತೆಯ ರಕ್ಷಣೆಗಾಗಿಯೇ ಹೊರತು, ಆ ದೇಶದ ಜನರ ವಿರುದ್ಧವಲ್ಲ, ಅವರ ಧರ್ಮದ ವಿರುದ್ಧವೂ ಅಲ್ಲ ಎಂದು ನೂರ್ ಪ್ರಕರಣ ತೋರಿಸುತ್ತದೆ.

ನೂರ್ ಎಂಬ ಬಾಲಕಿ ಬೇರೆ ದೇಶದವಳು, ಬೇರೆ ಧರ್ಮದವಳು ಎಂಬ ಭೇದಭಾವವನ್ನು ಅಲಕ್ಷಿಸಿದ್ದಾರೆ ಭಾರತೀಯರು. ಗುಜರಾತಿನಲ್ಲಿ ನಡೆದ ಕೋಮುದಳ್ಳುರಿಗೆ ತುತ್ತಾದ ಮುಸ್ಲಿಮರ ನೆರವಿಗೆ ಬಹಿರಂಗವಾಗಿ ಬರಲು ಹಿಂಜರಿದಿದ್ದ ಭಾರತೀಯರು ಪಾಕಿಸ್ತಾನದ ಮುಸ್ಲಿಂ ಬಾಲಕಿಗೆ ನೆರವಾಗಿದ್ದಾರೆ.

ತಮ್ಮ ಎದೆಯಲ್ಲಿ ಬರೀ ದ್ವೇಷವನ್ನೇ ತುಂಬಿಕೊಂಡಿರುವವರಿಲ್ಲದಿದ್ದಾಗ, ಮಾನವನ ಮುಖ್ಯಲಕ್ಷಣವೇ ಮಾನವೀಯತೆ… ಇದು ನೂರ್‌ ನಿಂದಾಗಿ ನಮ್ಮ ಜನರೇ ಅರಿತುಕೊಂಡ ಸತ್ಯ.

– ಗೌರಿ ಲಂಕೇಶ್
ಕಂಡಹಾಗೆ (ಸಂಗ್ರಹ) 1

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸ್ವಕ್ಷೇತ್ರ ತಿರುವನಂತಪುರದಲ್ಲಿ ಬಿಜೆಪಿ ಭರ್ಜರಿ ಗೆಲುವು : ‘ಪ್ರಜಾಪ್ರಭುತ್ವದ ಸೌಂದರ್ಯ’ ಎಂದ ಕಾಂಗ್ರೆಸ್ ಸಂಸದ ಶಶಿ ತರೂರ್

ಕೇರಳದ ಸ್ಥಳೀಯ ಸಂಸ್ಥೆ ಚುನಾವಣೆಯ ಫಲಿತಾಂಶ ಇಂದು (ಡಿ.13) ಪ್ರಕಟಗೊಂಡಿದ್ದು, ತಿರುವನಂತಪುರಂ ಮಹಾನಗರ ಪಾಲಿಕೆಯಲ್ಲಿ ಬಿಜೆಪಿ ನೇತೃತ್ವದ ಎನ್‌ಡಿಎ ಭರ್ಜರಿ ಗೆಲುವು ದಾಖಲಿಸಿದೆ. ಈ ಮೂಲಕ 45 ವರ್ಷಗಳ ಸಿಪಿಐ(ಎಂ) ನೇತೃತ್ವದ ಎಲ್‌ಡಿಎಫ್‌...

ಕೇರಳ ಸ್ಥಳೀಯ ಸಂಸ್ಥೆ ಚುನಾವಣೆ : ಯುಡಿಎಫ್‌ ಸ್ಪಷ್ಟ ಮೇಲುಗೈ

ಇಂದು (2025 ಡಿಸೆಂಬರ್ 13, ಶನಿವಾರ) ಪ್ರಕಟಗೊಂಡ ಕೇರಳದ ಸ್ಥಳೀಯ ಸಂಸ್ಥೆಗಳ ಚುನಾವಣಾ ಫಲಿತಾಂಶದಲ್ಲಿ ವಿರೋಧ ಪಕ್ಷಗಳ ಒಕ್ಕೂಟವಾದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್) ಸ್ಪಷ್ಟ ಮೇಲುಗೈ ಸಾಧಿಸಿದೆ. ಈ ಮೂಲಕ ರಾಜ್ಯ...

ಕೋಲ್ಕತ್ತಾ ಮೆಸ್ಸಿ ಕಾರ್ಯಕ್ರಮದಲ್ಲಿ ಗಲಾಟೆ | ಕ್ಷಮೆ ಯಾಚಿಸಿದ ಸಿಎಂ ಮಮತಾ ಬ್ಯಾನರ್ಜಿ, ತನಿಖೆಗೆ ಸಮಿತಿ ರಚನೆ; ಆಯೋಜಕನ ಬಂಧನ

ಫುಟ್ಬಾಲ್ ತಾರೆ ಲಿಯೋನೆಲ್ ಮೆಸ್ಸಿ ಭೇಟಿಯ ವೇಳೆ ಶನಿವಾರ (ಡಿಸೆಂಬರ್ 13) ಕೋಲ್ಕತ್ತಾದ ಸಾಲ್ಟ್ ಲೇಕ್ ಕ್ರೀಡಾಂಗಣದಲ್ಲಿ ಉಂಟಾದ ಗಲಾಟೆಗೆ ಸಂಬಂಧಿಸಿದಂತೆ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಕ್ಷಮೆಯಾಚಿಸಿದ್ದು, ನಿವೃತ್ತ ನ್ಯಾಯಮೂರ್ತಿ...

ಮೆಸ್ಸಿ ನೋಡಲು 25 ಸಾವಿರ ರೂ. ಪಾವತಿಸಿದವರಿಗೆ ನಿರಾಶೆ; ಕೋಪಗೊಂಡ ಅಭಿಮಾನಿಗಳಿಂದ ಕ್ರೀಡಾಂಗಣದಲ್ಲಿ ದಾಂಧಲೆ

ಶನಿವಾರ ನಡೆದ ಲಿಯೋನೆಲ್ ಮೆಸ್ಸಿ ಅವರ ಬಹು ನಿರೀಕ್ಷಿತ "ಗೋಟ್ ಇಂಡಿಯಾ ಟೂರ್" ಕೋಲ್ಕತ್ತಾದಲ್ಲಿ ಅಸ್ತವ್ಯಸ್ತವಾಯಿತು. ಯುವ ಭಾರತಿ ಕ್ರಿರಂಗನ್‌ನಲ್ಲಿ ರೊಚ್ಚಿಗೆದ್ದ ಅಭಿಮಾನಿಗಳ ದಾಂಧಲೆಯಿಂದ ಕ್ರೀಡಾಂಗಣ ಅವ್ಯವಸ್ಥೆಗೆ ಒಳಗಾಯಿತು. ಸಾವಿರಾರು ಅಭಿಮಾನಿಗಳು ಅರ್ಜೆಂಟೀನಾದ...

ಡ್ರಗ್‌ ಪೆಡ್ಲರ್‌ಗಳ ಮನೆ ಒಡೆದು ಹಾಕುವ ಹೇಳಿಕೆ : ಪರಮೇಶ್ವರ್ ಮಾತಿಗೆ ಆತಂಕ ವ್ಯಕ್ತಪಡಿಸಿದ ಕಾಂಗ್ರೆಸ್ ಹಿರಿಯ ನಾಯಕ ಚಿದಂಬರಂ

"ಡ್ರಗ್‌ ಪೆಡ್ಲರ್‌ಗಳ ಬಾಡಿಗೆ ಮನೆಗಳನ್ನು ಒಡೆದು ಹಾಕುವ ಹಂತಕ್ಕೆ ಹೋಗಿದ್ದೇವೆ" ಎಂಬ ಗೃಹ ಸಚಿವ ಜಿ.ಪರಮೇಶ್ವರ್ ಹೇಳಿಕೆಗೆ ಕಾಂಗ್ರೆಸ್ ಹಿರಿಯ ನಾಯಕ, ಮಾಜಿ ಕೇಂದ್ರ ಸಚಿವ ಪಿ. ಚಿದಂಬರಂ ಆತಂಕ ವ್ಯಕ್ತಪಡಿಸಿದ್ದಾರೆ. ಸಾಮಾಜಿಕ...

ಕೇರಳ ಸ್ಥಳೀಯ ಸಂಸ್ಥೆಗಳ ಚುನಾವಣೆ: ಶಶಿ ತರೂರ್ ಕ್ಷೇತ್ರ ತಿರುವನಂತಪುರಂನಲ್ಲಿ ಬಿಜೆಪಿ ಮುನ್ನಡೆ

ಕೇರಳ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ, ವಿಶೇಷವಾಗಿ ತಿರುವನಂತಪುರಂನಲ್ಲಿ ಭಾರತೀಯ ಜನತಾ ಪಕ್ಷದ ಸಾಧನೆಯನ್ನು ಹಿರಿಯ ಕಾಂಗ್ರೆಸ್ ನಾಯಕ ಶಶಿ ತರೂರ್ ಶನಿವಾರ ಅಭಿನಂದಿಸಿದ್ದಾರೆ. ಜನರ ತೀರ್ಪನ್ನು ಗೌರವಿಸಬೇಕು ಎಂದು ಹೇಳಿದ್ದಾರೆ. ಎಕ್ಸ್‌ನಲ್ಲಿ ದೀರ್ಘ...

ಆಳಂದ ಮತಗಳ್ಳತನ | ಬಿಜೆಪಿ ಮಾಜಿ ಶಾಸಕ ಸುಭಾಷ್ ಗುತ್ತೇದಾರ್ ಸೇರಿ 7 ಮಂದಿ ವಿರುದ್ಧ ಎಸ್‌ಐಟಿ ಚಾರ್ಜ್‌ಶೀಟ್‌

ಕಲಬುರಗಿಯ ಆಳಂದ ವಿಧಾನಸಭಾ ಕ್ಷೇತ್ರದಲ್ಲಿ ನಡೆದ ಮತಗಳ್ಳತನ (ಚುನಾವಣಾ ಆಕ್ರಮ) ಪ್ರಕರಣದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ) ನ್ಯಾಯಾಲಯಕ್ಕೆ ಆರೋಪಪಟ್ಟಿ ಸಲ್ಲಿಸಿದ್ದು, ಆಳಂದದ ಬಿಜೆಪಿ ಮಾಜಿ ಶಾಸಕ ಸುಭಾಷ್ ಗುತ್ತೇದಾರ್...

ಉತ್ತರ ಪ್ರದೇಶ| ಗಸ್ತು ವಾಹನ ಹಳ್ಳಕ್ಕೆ ಉರುಳಿಸಿದ ಪಾನಮತ್ತ ಪೊಲೀಸರು; ಕ್ರೇನ್ ಚಾಲಕನ ಮೇಲೆ ಹಲ್ಲೆ

ಶುಕ್ರವಾರ (ಡಿಸೆಂಬರ್ 12) ರಾತ್ರಿ ಪೊಲೀಸರೊಬ್ಬರು ಕಾರಿನ ನಿಯಂತ್ರಣ ಕಳೆದುಕೊಂಡ ಬಳಿಕ '112' ಪೊಲೀಸ್ ಪ್ರತಿಕ್ರಿಯೆ ವಾಹನ (ಪಿಆರ್‌ವಿ) ಹಳ್ಳಕ್ಕೆ ಉರುಳಿದೆ. ವರದಿಗಳ ಪ್ರಕಾರ, ಘಟನೆಯ ಸಮಯದಲ್ಲಿ ಪೊಲೀಸರು ಪಾನಮತ್ತರಾಗಿದ್ದರು. ಕಾರ್ ಕಂದಕಕ್ಕೆ...

ಲಿಯೋನೆಲ್ ಮೆಸ್ಸಿ ಇಂಡಿಯಾ ಪ್ರವಾಸ; ಅಭೂತಪೂರ್ವ ಸ್ವಾಗತ ಕೋರಿದ ಕೋಲ್ಕತ್ತಾ ಅಭಿಮಾನಿಗಳು

ಇಂಡಿಯಾ ಪ್ರವಾಸ ಪ್ರಾರಂಭಿಸಿರುವ ಅರ್ಜೆಂಟೀನಾದ ಪುಟ್‌ಬಾಲ್‌ ತಾರೆ ಲಿಯೋನೆಲ್ ಮೆಸ್ಸಿ ಕೋಲ್ಕತ್ತಾಗೆ ಬಂದಿಳಿದಿದ್ದಾರೆ. ಶನಿವಾರ ಬೆಳಗಿನ ಜಾವ ವಿಮಾನ ನಿಲ್ದಾಣದಲ್ಲಿ ನೆರೆದಿದ್ದ ಸಾವಿರಾರು ಅಭಿಮಾನಿಗಳಿಂದ ಅವರಿಗೆ ಅಭೂತಪೂರ್ವ ಸ್ವಾಗತ ಕೋರಿದರು. ಅರ್ಜೆಂಟೀನಾದ ಸೂಪರ್‌ಸ್ಟಾರ್ ದುಬೈ...

ನಟಿಯ ಅಪಹರಣ, ಅತ್ಯಾಚಾರ ಪ್ರಕರಣ : ಆರು ಅಪರಾಧಿಗಳಿಗೆ 20 ವರ್ಷ ಕಠಿಣ ಜೈಲು ಶಿಕ್ಷೆ

ಮಲಯಾಳಂ ಮೂಲದ ಬಹುಭಾಷಾ ನಟಿಯ ಅಪಹರಣ ಮತ್ತು ಅತ್ಯಾಚಾರ ಪ್ರಕರಣದ (2017ರ ಪ್ರಕರಣ) ಆರು ಅಪರಾಧಿಗಳಿಗೆ ಇಪ್ಪತ್ತು ವರ್ಷಗಳ ಕಠಿಣ ಜೈಲು ಶಿಕ್ಷೆ ವಿಧಿಸಿ ಶುಕ್ರವಾರ (ಡಿಸೆಂಬರ್ 12) ಕೇರಳ ನ್ಯಾಯಾಲಯ ಆದೇಶಿಸಿದೆ. ಡಿಸೆಂಬರ್...