Homeಗೌರಿ ಕಣ್ಣೋಟರಾಜಕಾರಣಿಗಳು ಮಾಡಲಾಗದ ಸಹಾಯವನ್ನು ಜನ ಮಾಡಿದ ಗಳಿಗೆ...

ರಾಜಕಾರಣಿಗಳು ಮಾಡಲಾಗದ ಸಹಾಯವನ್ನು ಜನ ಮಾಡಿದ ಗಳಿಗೆ…

ವಿಭಜನೆಯ ಸಮಯದಲ್ಲಿ ಭಾರತಕ್ಕೆ ವಲಸೆ ಬಂದ ಕೈಗಾರಿಕೋದ್ಯಮಿಯೊಬ್ಬರು ಅನಾಮಧೇಯವಾಗಿ ಈ ನಿಧಿಗೆ 12 ಲಕ್ಷ ರೂಪಾಯಿಗಳನ್ನು ನೀಡಿದ್ದಾರೆ.

- Advertisement -
- Advertisement -

ಭಾರತ-ಪಾಕಿಸ್ತಾನ ಗಡಿಯಲ್ಲಿರುವ ವಾಘಾದಲ್ಲಿ ಪ್ರತಿ ಸಂಜೆ ವಿಚಿತ್ರವಾದ ಒಂದು ಸಾಂಪ್ರದಾಯಿಕ ಆಚರಣೆ ನಡೆಯುತ್ತದೆ. ಸುಮಾರು ಐದಡಿ ಅಂತರದಲ್ಲಿ ಎರಡೂ ದೇಶಗಳ ಪ್ರವೇಶದ್ವಾರ (ಗೇಟ್)ಗಳಿವೆ. ಅದರ ಬಳಿಯೇ ಎರಡೂ ದೇಶಗಳ ಧ್ವಜಗಳು ಹಾರಾಡುತ್ತಿರುತ್ತವೆ. ಎರಡೂ ಕಡೆಯ ಸೈನಿಕರು “ಗುಡ್ ಡೇ, ಹೇಗಿದ್ದೀರಿ?” ಎಂದು ಕೆಲವೊಮ್ಮೆ ಒಬ್ಬರನ್ನೊಬ್ಬರು ವಿಚಾರಿಸಿಕೊಳ್ಳುತ್ತಾರೆ. ನಾನಲ್ಲಿಗೆ ಹೋಗಿದ್ದಾಗ ಭಾರತದ ಹಿರಿಯ ಸೈನ್ಯಾಧಿಕಾರಿಯೊಬ್ಬರು ನನ್ನನ್ನು ಪಾಕಿಸ್ತಾನದ ಸೈನ್ಯಾಧಿಕಾರಿಗೆ ಪರಿಚಯ ಮಾಡಿಕೊಟ್ಟಿದ್ದರು ಎರಡೂ ದೇಶಗಳ ನಡುವಿನ ನೋ ಮ್ಯಾನ್ಸ್ ಲ್ಯಾಂಡ್‍ನಲ್ಲಿ ನಾನೊಂದು ಹೆಜ್ಜೆಯಿಟ್ಟೆ. ಪಾಕಿಸ್ತಾನ ಸೈನ್ಯಾಧಿಕಾರಿಯೂ ಮುಂದೆ ಬಂದರು. ಇಬ್ಬರೂ ಕೈಕುಲುಕಿದೆವು. ಅದೂ ಕಾರ್ಗಿಲ್‍ನಲ್ಲಿ ಎರಡೂ ದೇಶಗಳ ನಡುವೆ ಸಂಘರ್ಷ ನಡೆಯುತ್ತಿದ್ದಾಗ.

ಹೀಗೆ ಸೌಹಾರ್ದತೆಯಿಂದಲೇ ವಾಘಾದಲ್ಲಿ ತಮ್ಮ ದಿನಗಳನ್ನು ಕಳೆಯುವ ಎರಡೂ ಕಡೆಯ ಸೈನಿಕರು ಸಂಜೆಯಾಗುತ್ತಿದ್ದಂತೆ ಒಂದು ರೀತಿಯ ಪೈಪೋಟಿಗೆ ಇಳಿಯುತ್ತಾರೆ. ಎರಡೂ ಗೇಟ್‍ಗಳ ಹತ್ತಿರ ಸಾರ್ವಜನಿಕರು ಸೇರುತ್ತಿದ್ದಂತೆ, ಧ್ವಜ ಕೆಳಗಿಳಿಸುವ ಕಾರ್ಯಕ್ರಮ ಪ್ರಾರಂಭವಾಗುತ್ತದೆ. ಯಾವ ಕಡೆಯ ಸೈನಿಕರು ಹೆಚ್ಚು ಆಕ್ರಮಣಿಶೀಲತೆಯನ್ನು ಪ್ರದರ್ಶಿಸುತ್ತಾರೆ, ಯಾರು ಹೆಚ್ಚು ರಭಸದಿಂದ ಕಿವಿಗಪ್ಪಳಿಸುವಂತೆ ತಮ್ಮ ಬೂಟುಗಳನ್ನು ನೆಲಕ್ಕೆ ಅಪ್ಪಳಿಸುತ್ತಾರೆ ಎಂದೆಲ್ಲಾ ಗಮನಿಸುವ ಸಾರ್ವಜನಿಕರು ತಮ್ಮ ಕಡೆಯವರನ್ನು ಚಪ್ಪಾಳೆ ತಟ್ಟುತ್ತಾ, ಘೋಷಣೆಗಳನ್ನು ಕೂಗುತ್ತಾ ಹುರಿದುಂಬಿಸುತ್ತಾರೆ. ಎರಡೂ ಕಡೆಯ ಸೈನಿಕರ ನಡುವೆ ಒಂದು ಸಣ್ಣ ಯುದ್ಧ ನಡೆಯುತ್ತಿದೆಯೇನೋ ಎಂಬ ವಾತಾವರಣ ನಿರ್ಮಾಣವಾಗುತ್ತದೆ.

ಆದರೆ ವಿಚಿತ್ರ ಸಂಗತಿಯೇನೆಂದರೆ, ಈ ಧ್ವಜ ಕೆಳಗಿಳಿಸುವ ಆಚರಣೆ ಮುಗಿದ ಮರುಕ್ಷಣವೇ ಎರಡೂ ಕಡೆಯ ಸಾರ್ವಜನಿಕರು ಗೇಟ್‍ಗಳ ಹತ್ತಿರ ಧಾವಿಸುತ್ತಾರೆ. ಒಬ್ಬರನ್ನೊಬ್ಬರು ಕುತೂಹಲದಿಂದ ನೋಡುತ್ತಿರುತ್ತಾರೆ. ಅಲ್ಲಿ ಯಾವುದೇ ರೀತಿಯ ಪೈಪೋಟಿ ಇರುವುದಿಲ್ಲ. ಬದಲಾಗಿ ‘ನಮ್ಮಂತೆಯೇ ಇದ್ದೀರಲ್ಲಾ ನೀವು’ ಎಂಬ ಭಾವನೆ ಮೂಡಿರುತ್ತದೆ. ದೇಶ ವಿಭಜನೆಯ ಸಮಯದಲ್ಲಿ ಬೇರೆಯಾದ ತಮ್ಮ ಬಂಧುಗಳನ್ನು ಮತ್ತೆ ಕಾಣಬಹುದೇನೋ ಎಂಬ ತವಕದಿಂದ ಕೆಲವರು ವಾಘಾ ಗಡಿಗೆ ಪದೇಪದೇ ಬರುತ್ತಿರುತ್ತಾರೆ. ಈ ಕಡೆಯಿಂದ ಇವರು, ಆ ಕಡೆಯಿಂದ ಅವರು ಹೀಗೆ ಮೌನವಾಗಿ ನೋಡುತ್ತಲೇ ನಿಲ್ಲುವ ಜನ ಮತ್ತೆ ತಮ್ಮ ಮನೆಯತ್ತ ಮರುಳುವುದು ಎರಡೂ ಕಡೆಯ ಸೈನಿಕರು ಅವರನ್ನು ಅಲ್ಲಿಂದ ಓಡಿಸಿದಾಗಲೇ!

ಇದೆಲ್ಲವನ್ನು ನೆನಪು ಮಾಡಿಕೊಟ್ಟಿದ್ದು ನೂರ್ ಫಾತಿಮಾ ಎಂಬ ಮುದ್ದು ಮಗು. ಈ ಕೂಸಿನ ಶಸ್ತ್ರಚಿಕಿತ್ಸೆ ಬಗ್ಗೆ ಈಗಾಗಲೇ ಸಾಕಷ್ಟು ಸುದ್ದಿಗಳು ಎಲ್ಲ ಕಡೆಯೂ ಪ್ರಕಟವಾಗಿದೆ. ಆದರೆ ನನಗೆ ಇಷ್ಟವಾದದ್ದು ಆಕೆಗೆ ಭಾರತೀಯರು ನೀಡಿದ ಭಾವನಾತ್ಮಕ ಹಾಗೂ ಆರ್ಥಿಕ ಬೆಂಬಲ. ರಾಜಕಾರಣಿಗಳಿಗೆ ಸಾಧ್ಯವಾಗದಂತಹ ಸಹಾಯವನ್ನು ಜನ ನೀಡಿದ್ದಾರೆ. ನೂರ್‍ಳ ತಂದೆತಾಯಿ ಅದನ್ನು ಅಷ್ಟೇ ಸೌಜನ್ಯದಿಂದ ಸ್ವೀಕರಿಸಿದ್ದಾರೆ.

ನೂರ್‍ಳ ತಂದೆ ಬಡ ಮಕ್ಕಳಿಗೆಂದೇ ಶುರು ಮಾಡಿರುವ ‘ದೋಸ್ತಿ ಫಂಡ್’ (ಸ್ನೇಹನಿಧಿ)ಗೆ ಎಷ್ಟೋ ಭಾರತೀಯರು ಹಣ ನೀಡಿದ್ದಾರೆ. ಹಿಂದೆ ಲಾಹೋರ್‌ನಲ್ಲಿ ವಾಸಿಸುತ್ತಿದ್ದ, ಆದರೆ ವಿಭಜನೆಯ ಸಮಯದಲ್ಲಿ ಭಾರತಕ್ಕೆ ವಲಸೆ ಬಂದ ಕೈಗಾರಿಕೋದ್ಯಮಿಯೊಬ್ಬರು ಅನಾಮಧೇಯವಾಗಿ ಈ ನಿಧಿಗೆ 12 ಲಕ್ಷ ರೂಪಾಯಿಗಳನ್ನು ನೀಡಿದ್ದಾರೆ. ಪಾಕಿಸ್ತಾನದ ಮುಸ್ಲಿಂ ಒಬ್ಬರು ಶುರುಮಾಡಿರುವ ಈ ನಿಧಿಗೆ ಭಾರತದ ಹಿಂದೂ ಒಬ್ಬರು ಇಂತಹ ದೊಡ್ಡ ಮೊತ್ತದ ದಾನ ನೀಡಿರುವುದು ಎರಡೂ ದೇಶಗಳ ಜನರಿಗೆ ಬೇಕಿರುವುದು ಸ್ನೇಹ ಮತ್ತು ಸೌಹಾರ್ದತೆಯ ಬಾಳು ಎಂಬುದನ್ನು ತೋರಿಸುತ್ತದೆ.

ದೇಶದಲ್ಲಿ ಜಾತಿ, ಧರ್ಮದ ಆಧಾರದ ಮೇಲೆ ಜನರನ್ನು ಒಡೆಯುವ ಪ್ರಯತ್ನಗಳು ನಡೆಯುತ್ತಿರುವಾಗಲೇ, ಜನಸಾಮಾನ್ಯರು ತಮಗೆ ಧಾರ್ಮಿಕ ಭಿನ್ನತೆ ಮುಖ್ಯ ಅಲ್ಲವೇ ಅಲ್ಲ ಎಂಬುದನ್ನು ಸಾಬೀತುಪಡಿಸಿದ್ದಾರೆ.

ಪಾಕಿಸ್ತಾನದ ವಿರುದ್ಧ ಭಾರತದ ವೈರತ್ವವಿರುವುದು ನಮ್ಮ ದೇಶದ ಸುಭದ್ರತೆಯ ರಕ್ಷಣೆಗಾಗಿಯೇ ಹೊರತು, ಆ ದೇಶದ ಜನರ ವಿರುದ್ಧವಲ್ಲ, ಅವರ ಧರ್ಮದ ವಿರುದ್ಧವೂ ಅಲ್ಲ ಎಂದು ನೂರ್ ಪ್ರಕರಣ ತೋರಿಸುತ್ತದೆ.

ನೂರ್ ಎಂಬ ಬಾಲಕಿ ಬೇರೆ ದೇಶದವಳು, ಬೇರೆ ಧರ್ಮದವಳು ಎಂಬ ಭೇದಭಾವವನ್ನು ಅಲಕ್ಷಿಸಿದ್ದಾರೆ ಭಾರತೀಯರು. ಗುಜರಾತಿನಲ್ಲಿ ನಡೆದ ಕೋಮುದಳ್ಳುರಿಗೆ ತುತ್ತಾದ ಮುಸ್ಲಿಮರ ನೆರವಿಗೆ ಬಹಿರಂಗವಾಗಿ ಬರಲು ಹಿಂಜರಿದಿದ್ದ ಭಾರತೀಯರು ಪಾಕಿಸ್ತಾನದ ಮುಸ್ಲಿಂ ಬಾಲಕಿಗೆ ನೆರವಾಗಿದ್ದಾರೆ.

ತಮ್ಮ ಎದೆಯಲ್ಲಿ ಬರೀ ದ್ವೇಷವನ್ನೇ ತುಂಬಿಕೊಂಡಿರುವವರಿಲ್ಲದಿದ್ದಾಗ, ಮಾನವನ ಮುಖ್ಯಲಕ್ಷಣವೇ ಮಾನವೀಯತೆ… ಇದು ನೂರ್‌ ನಿಂದಾಗಿ ನಮ್ಮ ಜನರೇ ಅರಿತುಕೊಂಡ ಸತ್ಯ.

– ಗೌರಿ ಲಂಕೇಶ್
ಕಂಡಹಾಗೆ (ಸಂಗ್ರಹ) 1

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

TMC ಅಧ್ಯಕ್ಷ ಸ್ಥಾನದಿಂದ ಮಮತಾ ಬ್ಯಾನರ್ಜಿಯನ್ನು ಉಚ್ಚಾಟಿಸಿದ ತೃಣಮೂಲ ಬಂಡಾಯ ಶಾಸಕರು

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣಾ ಸೋಲಿನ ಬೆನ್ನಲ್ಲೇ ತೃಣಮೂಲ ಕಾಂಗ್ರೆಸ್ ಪಕ್ಷವು ಇತಿಹಾಸದಲ್ಲೇ ಕಾಣದ ಅತ್ಯಂತ ದೊಡ್ಡ ಬಂಡಾಯಕ್ಕೆ ಸಾಕ್ಷಿಯಾಗಿದೆ. ಬಂಡಾಯ ಶಾಸಕರ ನೇತೃತ್ವ ವಹಿಸಿರುವ ಋತಬ್ರತಾ ಬ್ಯಾನರ್ಜಿ ಸೋಮವಾರ ಮಮತಾ ಬ್ಯಾನರ್ಜಿ...

ಯುಪಿ: ಮೊಹರಂ ಮೆರವಣಿಗೆಯಲ್ಲಿ ಪಿತೂರಿ: ಪಾಕ್ ಪರ ಘೋಷಣೆಯ ಸುಳ್ಳು ವಿಡಿಯೋ ಹರಿಬಿಟ್ಟ ಇಬ್ಬರು ಹಿಂದುತ್ವವಾದಿಗಳ ಬಂಧನ 

ಬರೇಲಿ (ಉತ್ತರ ಪ್ರದೇಶ): ಮೊಹರಂ ಮೆರವಣಿಗೆಯೊಂದರಲ್ಲಿ "ಪಾಕಿಸ್ತಾನ್ ಜಿಂದಾಬಾದ್" ಎಂದು ದೇಶವಿರೋಧಿ ಘೋಷಣೆ ಕೂಗಲಾಗಿದೆ ಎಂಬ ನಕಲಿ ವೀಡಿಯೋ ಸೃಷ್ಟಿಸಿ, ಮುಸ್ಲಿಂ ಸಮುದಾಯದ ಮೇಲೆ ಸುಳ್ಳು ಆರೋಪ ಹೊರಿಸಲು ಯತ್ನಿಸಿದ ಇಬ್ಬರು ಹಿಂದುತ್ವವಾದಿ...

ಮಕ್ಕಳಿಗೆ ಆರ್‌ಎಸ್‌ಎಸ್‌ ತರಬೇತಿ ನೀಡುವುದನ್ನು ಟೀಕಿಸಿ ವಿಡಿಯೋ ಹಂಚಿಕೆ : ಯುವಕನನ್ನು ವಶಕ್ಕೆ ಪಡೆದ ಪೊಲೀಸರು!

ರಾಜಸ್ಥಾನದ ಜುಂಜುನು ಜಿಲ್ಲೆಯ ನವೀನ್ ಚೌಧರಿ ಎಂಬ 25 ವರ್ಷದ ಯುವಕ, ರಾಷ್ಟ್ರೀಯ ಸ್ವಯಂಸೇವಕ ಸಂಘ (ಆರ್‌ಎಸ್‌ಎಸ್‌) ಕುರಿತು ಸಾಮಾಜಿಕ ಜಾಲತಾಣ ಇನ್‌ಸ್ಟಾಗ್ರಾಮ್‌ನಲ್ಲಿ ವಿಡಿಯೋವೊಂದನ್ನು ಹಂಚಿಕೊಂಡಿದ್ದರು. 'ಜುಂಜುನು ಎಕ್ಸ್‌ಪ್ರೆಸ್' ಎಂಬ ಇನ್‌ಸ್ಟಾಗ್ರಾಮ್ ಪೇಜ್‌ನಲ್ಲಿ...

ಮುಂಗಾರು ಮಳೆ ಕೊರತೆ: ಇಡೀ ದೇಶದಲ್ಲಿ ಆತಂಕದ ಕಾರ್ಮೋಡ

ಭಾರತದ ಆಕಾಶದಲ್ಲಿ ಸದ್ಯ ಮೂಡುತ್ತಿರುವ ಉಪಗ್ರಹ ಚಿತ್ರಗಳು ಮತ್ತು ಹವಾಮಾನ ಇಲಾಖೆಯ ದತ್ತಾಂಶಗಳು ದೇಶಕ್ಕೆ ದೊಡ್ಡ ಗಂಡಾಂತರದ ಮುನ್ಸೂಚನೆ ನೀಡುತ್ತಿವೆ. ಕೃಷಿ ಚಟುವಟಿಕೆಗಳ ಅತ್ಯಂತ ನಿರ್ಣಾಯಕ ಅವಧಿಯಾದ ಜೂನ್ ತಿಂಗಳಲ್ಲೇ ಮುಂಗಾರು ಮಳೆ...

ನೀಟ್ ಪರೀಕ್ಷೆ ಪದೇ ಪದೇ ಬರೆಯುವಂತೆ ಮಾಡಿದ್ದು ಯಾರು? : ಬಿ.ಕೆ ಹರಿಪ್ರಸಾದ್

ನೀಟ್ ಪರೀಕ್ಷೆ ಪದೇ ಪದೇ ಬರೆಯುವಂತೆ ಮಾಡಿದ್ದು ಯಾರು? ಬಿಜೆಪಿ ನಾಯಕರ ಆರೋಪಗಳನ್ನು ನೋಡಿದರೆ, ತಪ್ಪು ಮಾಡಿದವರೇ ಉಪದೇಶ ಮಾಡುವ ಸ್ಥಿತಿಗೆ ಬಂದಂತಿದೆ ಎಂದು ಕೆಪಿಸಿಸಿ ನೂತನ ಅಧ್ಯಕ್ಷ ಬಿ.ಕೆ ಹರಿಪ್ರಸಾದ್ ಹೇಳಿದರು....

ಎಸ್‌ಐಆರ್‌ನಲ್ಲಿ ಕೈಬಿಟ್ಟ ವ್ಯಕ್ತಿ ಕುರಿತು ಮಹತ್ವದ ಹೇಳಿಕೆ ನೀಡಿದ ಸುಪ್ರೀಂ ಕೋರ್ಟ್

ವಿಶೇಷ ತೀವ್ರ ಪರಿಷ್ಕರಣೆಯ (Special Intensive Revision) ಸಂದರ್ಭದಲ್ಲಿ ಮತದಾರರ ಪಟ್ಟಿಯಿಂದ ಹೆಸರು ಕೈಬಿಟ್ಟಿರುವ ಅಥವಾ ಹೊರಗಿಟ್ಟಿರುವ ಬಂಗಾಳದ ಮುರ್ಷಿದಾಬಾದ್‌ನ 75 ವರ್ಷದ ವಕೀಲರೊಬ್ಬರು "ಪಶ್ಚಿಮ ಬಂಗಾಳದ ನಿಜವಾದ ಮತ್ತು ವಿಶ್ವಾಸಾರ್ಹ ನಾಗರಿಕ" ನಂತೆ...

ನೀಟ್ ಅಕ್ರಮ, ವ್ಯವಸ್ಥೆಯ ವೈಫಲ್ಯಕ್ಕೆ ಮತ್ತೊಂದು ಬಲಿ: ಮರು ಪರೀಕ್ಷೆ ಹಿಂದಿನ ದಿನವೇ ಆತ್ಮಹತ್ಯೆಗೆ ಶರಣಾದ ಪ್ರತಿಭಾವಂತ ವಿದ್ಯಾರ್ಥಿನಿ 

ಹೈದರಾಬಾದ್: ದೇಶದಲ್ಲಿ ವೈದ್ಯಕೀಯ ಶಿಕ್ಷಣದ ಪ್ರವೇಶಾತಿಗಾಗಿ ನಡೆಯುವ ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆಯ (NEET) ಸುತ್ತ ಹಬ್ಬಿರುವ ಅಕ್ರಮಗಳ ಜಾಲ ಮತ್ತು ವ್ಯವಸ್ಥೆಯ ನಿರಂತರ ಗೊಂದಲಗಳು ಮತ್ತೊಂದು ಯುವ ಜೀವವನ್ನು ಬಲಿಪಡೆದಿವೆ.  ಜೂನ್...

ಸತತ ಮೂರನೇ ದಿನವೂ ಜಂತರ್ ಮಂತರ್‌ನಲ್ಲಿ ಮುಂದುವರೆದ ಸಿಜೆಪಿ ಪ್ರತಿಭಟನೆ; ಪ್ರಧಾನ್ ರಾಜೀನಾಮೆಗೆ ಪಟ್ಟು

ಪರೀಕ್ಷಾ ಅಕ್ರಮಗಳು ಮತ್ತು ಮೇ 3 ರ ನೀಟ್ ಪತ್ರಿಕೆ ಸೋರಿಕೆಯ ವಿರುದ್ಧ ತಮ್ಮ ಪ್ರತಿಭಟನೆಯನ್ನು ಮುಂದುವರಿಸಿರುವ ಜಿರಳೆ ಜನತಾ ಪಕ್ಷ (ಸಿಜೆಪಿ) ಸೋಮವಾರ ಸತತ ಮೂರನೇ ದಿನವೂ ಜಂತರ್ ಮಂತರ್‌ನಲ್ಲಿಯೇ ಕುಳಿತಿದ್ದಾರೆ. ಶನಿವಾರ...

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...