Homeಗೌರಿ ಕಣ್ಣೋಟರಾಜಕಾರಣಿಗಳು ಮಾಡಲಾಗದ ಸಹಾಯವನ್ನು ಜನ ಮಾಡಿದ ಗಳಿಗೆ...

ರಾಜಕಾರಣಿಗಳು ಮಾಡಲಾಗದ ಸಹಾಯವನ್ನು ಜನ ಮಾಡಿದ ಗಳಿಗೆ…

ವಿಭಜನೆಯ ಸಮಯದಲ್ಲಿ ಭಾರತಕ್ಕೆ ವಲಸೆ ಬಂದ ಕೈಗಾರಿಕೋದ್ಯಮಿಯೊಬ್ಬರು ಅನಾಮಧೇಯವಾಗಿ ಈ ನಿಧಿಗೆ 12 ಲಕ್ಷ ರೂಪಾಯಿಗಳನ್ನು ನೀಡಿದ್ದಾರೆ.

- Advertisement -
- Advertisement -

ಭಾರತ-ಪಾಕಿಸ್ತಾನ ಗಡಿಯಲ್ಲಿರುವ ವಾಘಾದಲ್ಲಿ ಪ್ರತಿ ಸಂಜೆ ವಿಚಿತ್ರವಾದ ಒಂದು ಸಾಂಪ್ರದಾಯಿಕ ಆಚರಣೆ ನಡೆಯುತ್ತದೆ. ಸುಮಾರು ಐದಡಿ ಅಂತರದಲ್ಲಿ ಎರಡೂ ದೇಶಗಳ ಪ್ರವೇಶದ್ವಾರ (ಗೇಟ್)ಗಳಿವೆ. ಅದರ ಬಳಿಯೇ ಎರಡೂ ದೇಶಗಳ ಧ್ವಜಗಳು ಹಾರಾಡುತ್ತಿರುತ್ತವೆ. ಎರಡೂ ಕಡೆಯ ಸೈನಿಕರು “ಗುಡ್ ಡೇ, ಹೇಗಿದ್ದೀರಿ?” ಎಂದು ಕೆಲವೊಮ್ಮೆ ಒಬ್ಬರನ್ನೊಬ್ಬರು ವಿಚಾರಿಸಿಕೊಳ್ಳುತ್ತಾರೆ. ನಾನಲ್ಲಿಗೆ ಹೋಗಿದ್ದಾಗ ಭಾರತದ ಹಿರಿಯ ಸೈನ್ಯಾಧಿಕಾರಿಯೊಬ್ಬರು ನನ್ನನ್ನು ಪಾಕಿಸ್ತಾನದ ಸೈನ್ಯಾಧಿಕಾರಿಗೆ ಪರಿಚಯ ಮಾಡಿಕೊಟ್ಟಿದ್ದರು ಎರಡೂ ದೇಶಗಳ ನಡುವಿನ ನೋ ಮ್ಯಾನ್ಸ್ ಲ್ಯಾಂಡ್‍ನಲ್ಲಿ ನಾನೊಂದು ಹೆಜ್ಜೆಯಿಟ್ಟೆ. ಪಾಕಿಸ್ತಾನ ಸೈನ್ಯಾಧಿಕಾರಿಯೂ ಮುಂದೆ ಬಂದರು. ಇಬ್ಬರೂ ಕೈಕುಲುಕಿದೆವು. ಅದೂ ಕಾರ್ಗಿಲ್‍ನಲ್ಲಿ ಎರಡೂ ದೇಶಗಳ ನಡುವೆ ಸಂಘರ್ಷ ನಡೆಯುತ್ತಿದ್ದಾಗ.

ಹೀಗೆ ಸೌಹಾರ್ದತೆಯಿಂದಲೇ ವಾಘಾದಲ್ಲಿ ತಮ್ಮ ದಿನಗಳನ್ನು ಕಳೆಯುವ ಎರಡೂ ಕಡೆಯ ಸೈನಿಕರು ಸಂಜೆಯಾಗುತ್ತಿದ್ದಂತೆ ಒಂದು ರೀತಿಯ ಪೈಪೋಟಿಗೆ ಇಳಿಯುತ್ತಾರೆ. ಎರಡೂ ಗೇಟ್‍ಗಳ ಹತ್ತಿರ ಸಾರ್ವಜನಿಕರು ಸೇರುತ್ತಿದ್ದಂತೆ, ಧ್ವಜ ಕೆಳಗಿಳಿಸುವ ಕಾರ್ಯಕ್ರಮ ಪ್ರಾರಂಭವಾಗುತ್ತದೆ. ಯಾವ ಕಡೆಯ ಸೈನಿಕರು ಹೆಚ್ಚು ಆಕ್ರಮಣಿಶೀಲತೆಯನ್ನು ಪ್ರದರ್ಶಿಸುತ್ತಾರೆ, ಯಾರು ಹೆಚ್ಚು ರಭಸದಿಂದ ಕಿವಿಗಪ್ಪಳಿಸುವಂತೆ ತಮ್ಮ ಬೂಟುಗಳನ್ನು ನೆಲಕ್ಕೆ ಅಪ್ಪಳಿಸುತ್ತಾರೆ ಎಂದೆಲ್ಲಾ ಗಮನಿಸುವ ಸಾರ್ವಜನಿಕರು ತಮ್ಮ ಕಡೆಯವರನ್ನು ಚಪ್ಪಾಳೆ ತಟ್ಟುತ್ತಾ, ಘೋಷಣೆಗಳನ್ನು ಕೂಗುತ್ತಾ ಹುರಿದುಂಬಿಸುತ್ತಾರೆ. ಎರಡೂ ಕಡೆಯ ಸೈನಿಕರ ನಡುವೆ ಒಂದು ಸಣ್ಣ ಯುದ್ಧ ನಡೆಯುತ್ತಿದೆಯೇನೋ ಎಂಬ ವಾತಾವರಣ ನಿರ್ಮಾಣವಾಗುತ್ತದೆ.

ಆದರೆ ವಿಚಿತ್ರ ಸಂಗತಿಯೇನೆಂದರೆ, ಈ ಧ್ವಜ ಕೆಳಗಿಳಿಸುವ ಆಚರಣೆ ಮುಗಿದ ಮರುಕ್ಷಣವೇ ಎರಡೂ ಕಡೆಯ ಸಾರ್ವಜನಿಕರು ಗೇಟ್‍ಗಳ ಹತ್ತಿರ ಧಾವಿಸುತ್ತಾರೆ. ಒಬ್ಬರನ್ನೊಬ್ಬರು ಕುತೂಹಲದಿಂದ ನೋಡುತ್ತಿರುತ್ತಾರೆ. ಅಲ್ಲಿ ಯಾವುದೇ ರೀತಿಯ ಪೈಪೋಟಿ ಇರುವುದಿಲ್ಲ. ಬದಲಾಗಿ ‘ನಮ್ಮಂತೆಯೇ ಇದ್ದೀರಲ್ಲಾ ನೀವು’ ಎಂಬ ಭಾವನೆ ಮೂಡಿರುತ್ತದೆ. ದೇಶ ವಿಭಜನೆಯ ಸಮಯದಲ್ಲಿ ಬೇರೆಯಾದ ತಮ್ಮ ಬಂಧುಗಳನ್ನು ಮತ್ತೆ ಕಾಣಬಹುದೇನೋ ಎಂಬ ತವಕದಿಂದ ಕೆಲವರು ವಾಘಾ ಗಡಿಗೆ ಪದೇಪದೇ ಬರುತ್ತಿರುತ್ತಾರೆ. ಈ ಕಡೆಯಿಂದ ಇವರು, ಆ ಕಡೆಯಿಂದ ಅವರು ಹೀಗೆ ಮೌನವಾಗಿ ನೋಡುತ್ತಲೇ ನಿಲ್ಲುವ ಜನ ಮತ್ತೆ ತಮ್ಮ ಮನೆಯತ್ತ ಮರುಳುವುದು ಎರಡೂ ಕಡೆಯ ಸೈನಿಕರು ಅವರನ್ನು ಅಲ್ಲಿಂದ ಓಡಿಸಿದಾಗಲೇ!

ಇದೆಲ್ಲವನ್ನು ನೆನಪು ಮಾಡಿಕೊಟ್ಟಿದ್ದು ನೂರ್ ಫಾತಿಮಾ ಎಂಬ ಮುದ್ದು ಮಗು. ಈ ಕೂಸಿನ ಶಸ್ತ್ರಚಿಕಿತ್ಸೆ ಬಗ್ಗೆ ಈಗಾಗಲೇ ಸಾಕಷ್ಟು ಸುದ್ದಿಗಳು ಎಲ್ಲ ಕಡೆಯೂ ಪ್ರಕಟವಾಗಿದೆ. ಆದರೆ ನನಗೆ ಇಷ್ಟವಾದದ್ದು ಆಕೆಗೆ ಭಾರತೀಯರು ನೀಡಿದ ಭಾವನಾತ್ಮಕ ಹಾಗೂ ಆರ್ಥಿಕ ಬೆಂಬಲ. ರಾಜಕಾರಣಿಗಳಿಗೆ ಸಾಧ್ಯವಾಗದಂತಹ ಸಹಾಯವನ್ನು ಜನ ನೀಡಿದ್ದಾರೆ. ನೂರ್‍ಳ ತಂದೆತಾಯಿ ಅದನ್ನು ಅಷ್ಟೇ ಸೌಜನ್ಯದಿಂದ ಸ್ವೀಕರಿಸಿದ್ದಾರೆ.

ನೂರ್‍ಳ ತಂದೆ ಬಡ ಮಕ್ಕಳಿಗೆಂದೇ ಶುರು ಮಾಡಿರುವ ‘ದೋಸ್ತಿ ಫಂಡ್’ (ಸ್ನೇಹನಿಧಿ)ಗೆ ಎಷ್ಟೋ ಭಾರತೀಯರು ಹಣ ನೀಡಿದ್ದಾರೆ. ಹಿಂದೆ ಲಾಹೋರ್‌ನಲ್ಲಿ ವಾಸಿಸುತ್ತಿದ್ದ, ಆದರೆ ವಿಭಜನೆಯ ಸಮಯದಲ್ಲಿ ಭಾರತಕ್ಕೆ ವಲಸೆ ಬಂದ ಕೈಗಾರಿಕೋದ್ಯಮಿಯೊಬ್ಬರು ಅನಾಮಧೇಯವಾಗಿ ಈ ನಿಧಿಗೆ 12 ಲಕ್ಷ ರೂಪಾಯಿಗಳನ್ನು ನೀಡಿದ್ದಾರೆ. ಪಾಕಿಸ್ತಾನದ ಮುಸ್ಲಿಂ ಒಬ್ಬರು ಶುರುಮಾಡಿರುವ ಈ ನಿಧಿಗೆ ಭಾರತದ ಹಿಂದೂ ಒಬ್ಬರು ಇಂತಹ ದೊಡ್ಡ ಮೊತ್ತದ ದಾನ ನೀಡಿರುವುದು ಎರಡೂ ದೇಶಗಳ ಜನರಿಗೆ ಬೇಕಿರುವುದು ಸ್ನೇಹ ಮತ್ತು ಸೌಹಾರ್ದತೆಯ ಬಾಳು ಎಂಬುದನ್ನು ತೋರಿಸುತ್ತದೆ.

ದೇಶದಲ್ಲಿ ಜಾತಿ, ಧರ್ಮದ ಆಧಾರದ ಮೇಲೆ ಜನರನ್ನು ಒಡೆಯುವ ಪ್ರಯತ್ನಗಳು ನಡೆಯುತ್ತಿರುವಾಗಲೇ, ಜನಸಾಮಾನ್ಯರು ತಮಗೆ ಧಾರ್ಮಿಕ ಭಿನ್ನತೆ ಮುಖ್ಯ ಅಲ್ಲವೇ ಅಲ್ಲ ಎಂಬುದನ್ನು ಸಾಬೀತುಪಡಿಸಿದ್ದಾರೆ.

ಪಾಕಿಸ್ತಾನದ ವಿರುದ್ಧ ಭಾರತದ ವೈರತ್ವವಿರುವುದು ನಮ್ಮ ದೇಶದ ಸುಭದ್ರತೆಯ ರಕ್ಷಣೆಗಾಗಿಯೇ ಹೊರತು, ಆ ದೇಶದ ಜನರ ವಿರುದ್ಧವಲ್ಲ, ಅವರ ಧರ್ಮದ ವಿರುದ್ಧವೂ ಅಲ್ಲ ಎಂದು ನೂರ್ ಪ್ರಕರಣ ತೋರಿಸುತ್ತದೆ.

ನೂರ್ ಎಂಬ ಬಾಲಕಿ ಬೇರೆ ದೇಶದವಳು, ಬೇರೆ ಧರ್ಮದವಳು ಎಂಬ ಭೇದಭಾವವನ್ನು ಅಲಕ್ಷಿಸಿದ್ದಾರೆ ಭಾರತೀಯರು. ಗುಜರಾತಿನಲ್ಲಿ ನಡೆದ ಕೋಮುದಳ್ಳುರಿಗೆ ತುತ್ತಾದ ಮುಸ್ಲಿಮರ ನೆರವಿಗೆ ಬಹಿರಂಗವಾಗಿ ಬರಲು ಹಿಂಜರಿದಿದ್ದ ಭಾರತೀಯರು ಪಾಕಿಸ್ತಾನದ ಮುಸ್ಲಿಂ ಬಾಲಕಿಗೆ ನೆರವಾಗಿದ್ದಾರೆ.

ತಮ್ಮ ಎದೆಯಲ್ಲಿ ಬರೀ ದ್ವೇಷವನ್ನೇ ತುಂಬಿಕೊಂಡಿರುವವರಿಲ್ಲದಿದ್ದಾಗ, ಮಾನವನ ಮುಖ್ಯಲಕ್ಷಣವೇ ಮಾನವೀಯತೆ… ಇದು ನೂರ್‌ ನಿಂದಾಗಿ ನಮ್ಮ ಜನರೇ ಅರಿತುಕೊಂಡ ಸತ್ಯ.

– ಗೌರಿ ಲಂಕೇಶ್
ಕಂಡಹಾಗೆ (ಸಂಗ್ರಹ) 1

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮನೆಕೆಲಸದಾಕೆ ಮೇಲಿನ ದೌರ್ಜನ್ಯ ಆರೋಪ ಪ್ರಕರಣ : ಜೆಡಿಎಸ್ ಶಾಸಕ ಹೆಚ್​​​.ಡಿ. ರೇವಣ್ಣಗೆ ಸುಪ್ರೀಂ ಕೋರ್ಟ್​ ನೋಟಿಸ್​

ಮಹಿಳೆಯ ಘನತೆಗೆ ಧಕ್ಕೆ ಹಾಗೂ ಲೈಂಗಿಕ ಕಿರುಕುಳ ಆರೋಪಗಳಿಗೆ ಸಂಬಂಧಿಸಿದ ಪ್ರಕರಣದಲ್ಲಿ ಕರ್ನಾಟಕ ಹೈಕೋರ್ಟ್‌ ನೀಡಿದ್ದ ಆದೇಶ ಪ್ರಶ್ನಿಸಿ ರಾಜ್ಯ ಸರ್ಕಾರ ಸಲ್ಲಿಸಿರುವ ಮೇಲ್ಮನವಿಗೆ ಸಂಬಂಧಿಸಿದಂತೆ, ಸುಪ್ರೀಂ ಕೋರ್ಟ್‌ ಸೋಮವಾರ (ಜು.13) ಜೆಡಿಎಸ್‌...

ದಲಿತ ಯುವಕರಿಗೆ ವಿದ್ಯುತ್ ಶಾಕ್‌ ಶಿಕ್ಷೆ: ಕಳ್ಳತನ ಆರೋಪದ ಮೇಲೆ ಇಬ್ಬರಿಗೆ ಚಿತ್ರಹಿಂಸೆ

ದಲಿತ ಯುವಕರ ಮೇಲೆ ಮಧ್ಯಪ್ರದೇಶದಲ್ಲಿ ನಡೆದಿರುವ ಅಮಾನವೀಯ ಕೃತ್ಯವೊಂದರ ವಿಡಿಯೋ ಇದೀಗ ನಾಗರಿಕ ಸಮಾಜವನ್ನೇ ಆಘಾತಕ್ಕೀಡು ಮಾಡಿದೆ. ನೀರಿನ ಪಂಪ್ ಮೋಟಾರ್ ಕದ್ದಿದ್ದಾರೆ ಎಂಬ ಶಂಕೆಯ ಮೇಲೆ ಇಬ್ಬರು ದಲಿತ ಯುವಕರನ್ನು ಕಂಬಕ್ಕೆ...

ರಾಮಮಂದಿರ ಹಗರಣ: ಕೇಂದ್ರ ಸರ್ಕಾರ, ಟ್ರಸ್ಟ್, ಉತ್ತರ ಪ್ರದೇಶ ಸರ್ಕಾರಕ್ಕೆ ‘ಸುಪ್ರೀಂ’ ನೋಟಿಸ್ 

ನವದೆಹಲಿ: ವಿಶ್ವಪ್ರಸಿದ್ಧ ಅಯೋಧ್ಯೆಯ ಶ್ರೀ ರಾಮಮಂದಿರಕ್ಕೆ ಸಾರ್ವಜನಿಕ ಭಕ್ತಾದಿಗಳಿಂದ ಹರಿದುಬಂದಿರುವ ಕೋಟ್ಯಂತರ ರೂಪಾಯಿ ದೇಣಿಗೆ ನಿಧಿಯ ಕಳ್ಳತನ, ದುರುಪಯೋಗ ಮತ್ತು ಆಡಳಿತಾತ್ಮಕ ಅಕ್ರಮಗಳ ಆರೋಪ ಇದೀಗ ದೇಶಾದ್ಯಂತ ಭಾರಿ ಸಂಚಲನ ಮೂಡಿಸಿದೆ. ಈ...

ಜಮ್ಮು-ಕಾಶ್ಮೀರ: ಪ್ರತ್ಯೇಕತಾವಾದಿಗಳು, ಉಗ್ರಗಾಮಿಗಳನ್ನು ವೈಭವೀಕರಿಸಿದ ಆರೋಪ: ಮೂವರು ಪ್ರಕಾಶಕರ ಬಂಧನ

ಜಮ್ಮು/ಶ್ರೀನಗರ: ಜಮ್ಮು ಮತ್ತು ಕಾಶ್ಮೀರದಲ್ಲಿ ಪ್ರತ್ಯೇಕತಾವಾದಿ ಹಾಗೂ ಭಯೋತ್ಪಾದಕ ನಾಯಕರನ್ನು ವೈಭವೀಕರಿಸುವ ಪುಸ್ತಕಗಳನ್ನು ಪ್ರಕಟಿಸಿ, ವಿತರಿಸಿದ ಗಂಭೀರ ಆರೋಪದ ಮೇಲೆ ಪ್ರತಿ-ಗುಪ್ತಚರ ವಿಭಾಗದ (ಸಿಐಜೆಕೆ) ಪೊಲೀಸರು ಭಾನುವಾರ ಇಬ್ಬರು ಪ್ರಮುಖ ಪ್ರಕಾಶನ ಸಂಸ್ಥೆಗಳಿಗೆ...

ಕರ್ನಾಟಕ ಎಸ್‍ಐಆರ್: ಮತದಾರರ ಸೌಲಭ್ಯ ಕೇಂದ್ರಗಳ ಕೊರತೆ, ಮತದಾರರ ಪಟ್ಟಿ ಪರಿಷ್ಕರಣೆ ಕಾರ್ಯಕ್ಕೆ ಅಡ್ಡಿ: ವರದಿ

ಬೆಂಗಳೂರು: ರಾಜ್ಯದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆ ಆರಂಭವಾಗಿ ಸುಮಾರು ಎರಡು ವಾರಗಳು ಕಳೆಯುತ್ತಾ ಬಂದಿದ್ದರೂ, ಚುನಾವಣಾ ಆಯೋಗವು ಸಾರ್ವಜನಿಕರ ಅನುಕೂಲಕ್ಕಾಗಿ ರಾಜ್ಯಾದ್ಯಂತ ಅಗತ್ಯವಿರುವಷ್ಟು ಮತದಾರರ ಸೌಲಭ್ಯ ಕೇಂದ್ರಗಳನ್ನು...

27 ಮಂದಿಯನ್ನು ‘ವಿದೇಶಿಯರು’ ಎಂದಿದ್ದ ಅಸ್ಸಾಂ ನ್ಯಾಯಮಂಡಳಿಗಳ ಆದೇಶ ರದ್ದುಗೊಳಿಸಿದ ಸುಪ್ರೀಂ ಕೋರ್ಟ್

ಒಬ್ಬ ವ್ಯಕ್ತಿಯ ಪೌರತ್ವ ಮತ್ತು ವಿದೇಶಿಯರ ಸ್ಥಾನಮಾನವನ್ನು ನಿರ್ಧರಿಸುವಾಗ ಕೇವಲ ಯಾಂತ್ರಿಕವಾಗಿ ತೀರ್ಪು ನೀಡಲಾಗದು, ಬದಲಿಗೆ ಅತ್ಯಂತ ನ್ಯಾಯಯುತ, ಕಾನೂನುಬದ್ಧ ಹಾಗೂ ಸಮಂಜಸವಾದ ಪ್ರಕ್ರಿಯೆಯನ್ನು ಕಡ್ಡಾಯವಾಗಿ ಪಾಲಿಸಲೇಬೇಕು ಎಂದು ಸುಪ್ರೀಂ ಕೋರ್ಟ್ ಸೋಮವಾರ...

ಶಿಕ್ಷಕ ‘ಖಾನ್ ಸರ್‌’ಗೆ ಪಟ್ನಾ ಕೋರ್ಟ್‌ನಲ್ಲಿ ಜಯ: ಕೋಚಿಂಗ್ ಸೆಂಟರ್ ದಾಳಿ ಪ್ರಕರಣದಲ್ಲಿ ಮುಂಗಡ ಜಾಮೀನು ಮಂಜೂರು

ಬಿಹಾರದ ಖ್ಯಾತ ಶಿಕ್ಷಕ ಫೈಸಲ್ ಖಾನ್ (ಜನಪ್ರಿಯವಾಗಿ ಖಾನ್ ಸರ್ ಎಂದು ಕರೆಯಲ್ಪಡುವ) ಅವರಿಗೆ ಪಟ್ನಾ ನ್ಯಾಯಾಲಯವು ಸೋಮವಾರ ಮುಂಗಡ ಜಾಮೀನು ಮಂಜೂರು ಮಾಡಿದೆ. ಈ ತಿಂಗಳ ಆರಂಭದಲ್ಲಿ ಅವರ ಕೋಚಿಂಗ್ ಇನ್ಸ್ಟಿಟ್ಯೂಟ್...

ಗುಜರಾತ್‌| ದನಗಳನ್ನು ಸಾಗಿಸುತ್ತಿದ್ದ ಟ್ರಕ್ ಚಾಲಕನನ್ನು ಬೆದರಿಸಿದ ನಕಲಿ ಗೋರಕ್ಷಕರು

ಗುಜರಾತ್‌ನ ವಲ್ಸಾದ್ ಜಿಲ್ಲೆಯಲ್ಲಿ ಸ್ವಘೋಷಿತ ಗೋರಕ್ಷಕರ ಗುಂಪೊಂದು ದನಗಳನ್ನು ಸಾಗಿಸುತ್ತಿದ್ದ ಟ್ರಕ್ ಅನ್ನು ಸುಮಾರು 100 ಕಿಲೋಮೀಟರ್‌ಗಳವರೆಗೆ ಬೆನ್ನಟ್ಟಿ, ವಾಹನವನ್ನು ತಡೆದು ಗುಂಪು ಮುಸ್ಲಿಂ ಚಾಲಕನನ್ನು ನಿಂದಿಸಿ ಬೆದರಿಸಿದ್ದಾರೆ. 'ಕ್ಲಾರಿಯನ್ ಇಂಡಿಯಾ' ವರದಿ ಪ್ರಕಾರ,...

ವಿಜಯ್ ಸರ್ಕಾರಕ್ಕೆ ಸುಪ್ರೀಂ ಕೋರ್ಟ್‌ನಲ್ಲಿ ಜಯ: ತಮಿಳುನಾಡು ಗೋಹತ್ಯೆ ನಿಷೇಧದ ಹೈಕೋರ್ಟ್ ಆದೇಶಕ್ಕೆ ತಡೆ

ತಮಿಳುನಾಡಿನಲ್ಲಿ ಹಸು ಮತ್ತು ಕರುಗಳ ಹತ್ಯೆಯನ್ನು ರಾಜ್ಯಾದ್ಯಂತ ಸಂಪೂರ್ಣವಾಗಿ ನಿಷೇಧಿಸಿ ಮದ್ರಾಸ್ ಹೈಕೋರ್ಟ್ ನೀಡಿದ್ದ ಆದೇಶಕ್ಕೆ ಸುಪ್ರೀಂ ಕೋರ್ಟ್ ಸೋಮವಾರ ತಡೆ ನೀಡಿದೆ. ಮುಖ್ಯಮಂತ್ರಿ ವಿಜಯ್ ನೇತೃತ್ವದ ತಮಿಳಗ ವೆಟ್ರಿ ಕಳಗಂ (TVK)...

SIR | ಸೆಕ್ಸ್ ವರ್ಕರ್ಸ್, ಅವರ ಮಕ್ಕಳ ಬಳಿ ದಾಖಲೆಗಳಿಲ್ಲ : ಮಹಾರಾಷ್ಟ್ರ ಸಿಇಒಗೆ ಪತ್ರ ಬರೆದ ರಾಷ್ಟ್ರೀಯ ಸಂಸ್ಥೆ

ದಾಖಲಾತಿ ಮತ್ತು ಪರಿಶೀಲನೆ ಅಗತ್ಯತೆಗಳ ಕಾರಣದಿಂದಾಗಿ ಪ್ರಸ್ತುತ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಯಿಂದ ಲೈಂಗಿಕ ಕಾರ್ಯಕರ್ತೆಯರು ಮತ್ತು ಅವರ ಮಕ್ಕಳನ್ನು ಹೊರಗಿಡದಂತೆ ನೋಡಿಕೊಳ್ಳಲು ವಿಶೇಷ ಕ್ರಮಗಳನ್ನು ಕೈಗೊಳ್ಳಬೇಕೆಂದು...