Homeಗೌರಿ ಕಣ್ಣೋಟರಾಜಕಾರಣಿಗಳು ಮಾಡಲಾಗದ ಸಹಾಯವನ್ನು ಜನ ಮಾಡಿದ ಗಳಿಗೆ...

ರಾಜಕಾರಣಿಗಳು ಮಾಡಲಾಗದ ಸಹಾಯವನ್ನು ಜನ ಮಾಡಿದ ಗಳಿಗೆ…

ವಿಭಜನೆಯ ಸಮಯದಲ್ಲಿ ಭಾರತಕ್ಕೆ ವಲಸೆ ಬಂದ ಕೈಗಾರಿಕೋದ್ಯಮಿಯೊಬ್ಬರು ಅನಾಮಧೇಯವಾಗಿ ಈ ನಿಧಿಗೆ 12 ಲಕ್ಷ ರೂಪಾಯಿಗಳನ್ನು ನೀಡಿದ್ದಾರೆ.

- Advertisement -
- Advertisement -

ಭಾರತ-ಪಾಕಿಸ್ತಾನ ಗಡಿಯಲ್ಲಿರುವ ವಾಘಾದಲ್ಲಿ ಪ್ರತಿ ಸಂಜೆ ವಿಚಿತ್ರವಾದ ಒಂದು ಸಾಂಪ್ರದಾಯಿಕ ಆಚರಣೆ ನಡೆಯುತ್ತದೆ. ಸುಮಾರು ಐದಡಿ ಅಂತರದಲ್ಲಿ ಎರಡೂ ದೇಶಗಳ ಪ್ರವೇಶದ್ವಾರ (ಗೇಟ್)ಗಳಿವೆ. ಅದರ ಬಳಿಯೇ ಎರಡೂ ದೇಶಗಳ ಧ್ವಜಗಳು ಹಾರಾಡುತ್ತಿರುತ್ತವೆ. ಎರಡೂ ಕಡೆಯ ಸೈನಿಕರು “ಗುಡ್ ಡೇ, ಹೇಗಿದ್ದೀರಿ?” ಎಂದು ಕೆಲವೊಮ್ಮೆ ಒಬ್ಬರನ್ನೊಬ್ಬರು ವಿಚಾರಿಸಿಕೊಳ್ಳುತ್ತಾರೆ. ನಾನಲ್ಲಿಗೆ ಹೋಗಿದ್ದಾಗ ಭಾರತದ ಹಿರಿಯ ಸೈನ್ಯಾಧಿಕಾರಿಯೊಬ್ಬರು ನನ್ನನ್ನು ಪಾಕಿಸ್ತಾನದ ಸೈನ್ಯಾಧಿಕಾರಿಗೆ ಪರಿಚಯ ಮಾಡಿಕೊಟ್ಟಿದ್ದರು ಎರಡೂ ದೇಶಗಳ ನಡುವಿನ ನೋ ಮ್ಯಾನ್ಸ್ ಲ್ಯಾಂಡ್‍ನಲ್ಲಿ ನಾನೊಂದು ಹೆಜ್ಜೆಯಿಟ್ಟೆ. ಪಾಕಿಸ್ತಾನ ಸೈನ್ಯಾಧಿಕಾರಿಯೂ ಮುಂದೆ ಬಂದರು. ಇಬ್ಬರೂ ಕೈಕುಲುಕಿದೆವು. ಅದೂ ಕಾರ್ಗಿಲ್‍ನಲ್ಲಿ ಎರಡೂ ದೇಶಗಳ ನಡುವೆ ಸಂಘರ್ಷ ನಡೆಯುತ್ತಿದ್ದಾಗ.

ಹೀಗೆ ಸೌಹಾರ್ದತೆಯಿಂದಲೇ ವಾಘಾದಲ್ಲಿ ತಮ್ಮ ದಿನಗಳನ್ನು ಕಳೆಯುವ ಎರಡೂ ಕಡೆಯ ಸೈನಿಕರು ಸಂಜೆಯಾಗುತ್ತಿದ್ದಂತೆ ಒಂದು ರೀತಿಯ ಪೈಪೋಟಿಗೆ ಇಳಿಯುತ್ತಾರೆ. ಎರಡೂ ಗೇಟ್‍ಗಳ ಹತ್ತಿರ ಸಾರ್ವಜನಿಕರು ಸೇರುತ್ತಿದ್ದಂತೆ, ಧ್ವಜ ಕೆಳಗಿಳಿಸುವ ಕಾರ್ಯಕ್ರಮ ಪ್ರಾರಂಭವಾಗುತ್ತದೆ. ಯಾವ ಕಡೆಯ ಸೈನಿಕರು ಹೆಚ್ಚು ಆಕ್ರಮಣಿಶೀಲತೆಯನ್ನು ಪ್ರದರ್ಶಿಸುತ್ತಾರೆ, ಯಾರು ಹೆಚ್ಚು ರಭಸದಿಂದ ಕಿವಿಗಪ್ಪಳಿಸುವಂತೆ ತಮ್ಮ ಬೂಟುಗಳನ್ನು ನೆಲಕ್ಕೆ ಅಪ್ಪಳಿಸುತ್ತಾರೆ ಎಂದೆಲ್ಲಾ ಗಮನಿಸುವ ಸಾರ್ವಜನಿಕರು ತಮ್ಮ ಕಡೆಯವರನ್ನು ಚಪ್ಪಾಳೆ ತಟ್ಟುತ್ತಾ, ಘೋಷಣೆಗಳನ್ನು ಕೂಗುತ್ತಾ ಹುರಿದುಂಬಿಸುತ್ತಾರೆ. ಎರಡೂ ಕಡೆಯ ಸೈನಿಕರ ನಡುವೆ ಒಂದು ಸಣ್ಣ ಯುದ್ಧ ನಡೆಯುತ್ತಿದೆಯೇನೋ ಎಂಬ ವಾತಾವರಣ ನಿರ್ಮಾಣವಾಗುತ್ತದೆ.

ಆದರೆ ವಿಚಿತ್ರ ಸಂಗತಿಯೇನೆಂದರೆ, ಈ ಧ್ವಜ ಕೆಳಗಿಳಿಸುವ ಆಚರಣೆ ಮುಗಿದ ಮರುಕ್ಷಣವೇ ಎರಡೂ ಕಡೆಯ ಸಾರ್ವಜನಿಕರು ಗೇಟ್‍ಗಳ ಹತ್ತಿರ ಧಾವಿಸುತ್ತಾರೆ. ಒಬ್ಬರನ್ನೊಬ್ಬರು ಕುತೂಹಲದಿಂದ ನೋಡುತ್ತಿರುತ್ತಾರೆ. ಅಲ್ಲಿ ಯಾವುದೇ ರೀತಿಯ ಪೈಪೋಟಿ ಇರುವುದಿಲ್ಲ. ಬದಲಾಗಿ ‘ನಮ್ಮಂತೆಯೇ ಇದ್ದೀರಲ್ಲಾ ನೀವು’ ಎಂಬ ಭಾವನೆ ಮೂಡಿರುತ್ತದೆ. ದೇಶ ವಿಭಜನೆಯ ಸಮಯದಲ್ಲಿ ಬೇರೆಯಾದ ತಮ್ಮ ಬಂಧುಗಳನ್ನು ಮತ್ತೆ ಕಾಣಬಹುದೇನೋ ಎಂಬ ತವಕದಿಂದ ಕೆಲವರು ವಾಘಾ ಗಡಿಗೆ ಪದೇಪದೇ ಬರುತ್ತಿರುತ್ತಾರೆ. ಈ ಕಡೆಯಿಂದ ಇವರು, ಆ ಕಡೆಯಿಂದ ಅವರು ಹೀಗೆ ಮೌನವಾಗಿ ನೋಡುತ್ತಲೇ ನಿಲ್ಲುವ ಜನ ಮತ್ತೆ ತಮ್ಮ ಮನೆಯತ್ತ ಮರುಳುವುದು ಎರಡೂ ಕಡೆಯ ಸೈನಿಕರು ಅವರನ್ನು ಅಲ್ಲಿಂದ ಓಡಿಸಿದಾಗಲೇ!

ಇದೆಲ್ಲವನ್ನು ನೆನಪು ಮಾಡಿಕೊಟ್ಟಿದ್ದು ನೂರ್ ಫಾತಿಮಾ ಎಂಬ ಮುದ್ದು ಮಗು. ಈ ಕೂಸಿನ ಶಸ್ತ್ರಚಿಕಿತ್ಸೆ ಬಗ್ಗೆ ಈಗಾಗಲೇ ಸಾಕಷ್ಟು ಸುದ್ದಿಗಳು ಎಲ್ಲ ಕಡೆಯೂ ಪ್ರಕಟವಾಗಿದೆ. ಆದರೆ ನನಗೆ ಇಷ್ಟವಾದದ್ದು ಆಕೆಗೆ ಭಾರತೀಯರು ನೀಡಿದ ಭಾವನಾತ್ಮಕ ಹಾಗೂ ಆರ್ಥಿಕ ಬೆಂಬಲ. ರಾಜಕಾರಣಿಗಳಿಗೆ ಸಾಧ್ಯವಾಗದಂತಹ ಸಹಾಯವನ್ನು ಜನ ನೀಡಿದ್ದಾರೆ. ನೂರ್‍ಳ ತಂದೆತಾಯಿ ಅದನ್ನು ಅಷ್ಟೇ ಸೌಜನ್ಯದಿಂದ ಸ್ವೀಕರಿಸಿದ್ದಾರೆ.

ನೂರ್‍ಳ ತಂದೆ ಬಡ ಮಕ್ಕಳಿಗೆಂದೇ ಶುರು ಮಾಡಿರುವ ‘ದೋಸ್ತಿ ಫಂಡ್’ (ಸ್ನೇಹನಿಧಿ)ಗೆ ಎಷ್ಟೋ ಭಾರತೀಯರು ಹಣ ನೀಡಿದ್ದಾರೆ. ಹಿಂದೆ ಲಾಹೋರ್‌ನಲ್ಲಿ ವಾಸಿಸುತ್ತಿದ್ದ, ಆದರೆ ವಿಭಜನೆಯ ಸಮಯದಲ್ಲಿ ಭಾರತಕ್ಕೆ ವಲಸೆ ಬಂದ ಕೈಗಾರಿಕೋದ್ಯಮಿಯೊಬ್ಬರು ಅನಾಮಧೇಯವಾಗಿ ಈ ನಿಧಿಗೆ 12 ಲಕ್ಷ ರೂಪಾಯಿಗಳನ್ನು ನೀಡಿದ್ದಾರೆ. ಪಾಕಿಸ್ತಾನದ ಮುಸ್ಲಿಂ ಒಬ್ಬರು ಶುರುಮಾಡಿರುವ ಈ ನಿಧಿಗೆ ಭಾರತದ ಹಿಂದೂ ಒಬ್ಬರು ಇಂತಹ ದೊಡ್ಡ ಮೊತ್ತದ ದಾನ ನೀಡಿರುವುದು ಎರಡೂ ದೇಶಗಳ ಜನರಿಗೆ ಬೇಕಿರುವುದು ಸ್ನೇಹ ಮತ್ತು ಸೌಹಾರ್ದತೆಯ ಬಾಳು ಎಂಬುದನ್ನು ತೋರಿಸುತ್ತದೆ.

ದೇಶದಲ್ಲಿ ಜಾತಿ, ಧರ್ಮದ ಆಧಾರದ ಮೇಲೆ ಜನರನ್ನು ಒಡೆಯುವ ಪ್ರಯತ್ನಗಳು ನಡೆಯುತ್ತಿರುವಾಗಲೇ, ಜನಸಾಮಾನ್ಯರು ತಮಗೆ ಧಾರ್ಮಿಕ ಭಿನ್ನತೆ ಮುಖ್ಯ ಅಲ್ಲವೇ ಅಲ್ಲ ಎಂಬುದನ್ನು ಸಾಬೀತುಪಡಿಸಿದ್ದಾರೆ.

ಪಾಕಿಸ್ತಾನದ ವಿರುದ್ಧ ಭಾರತದ ವೈರತ್ವವಿರುವುದು ನಮ್ಮ ದೇಶದ ಸುಭದ್ರತೆಯ ರಕ್ಷಣೆಗಾಗಿಯೇ ಹೊರತು, ಆ ದೇಶದ ಜನರ ವಿರುದ್ಧವಲ್ಲ, ಅವರ ಧರ್ಮದ ವಿರುದ್ಧವೂ ಅಲ್ಲ ಎಂದು ನೂರ್ ಪ್ರಕರಣ ತೋರಿಸುತ್ತದೆ.

ನೂರ್ ಎಂಬ ಬಾಲಕಿ ಬೇರೆ ದೇಶದವಳು, ಬೇರೆ ಧರ್ಮದವಳು ಎಂಬ ಭೇದಭಾವವನ್ನು ಅಲಕ್ಷಿಸಿದ್ದಾರೆ ಭಾರತೀಯರು. ಗುಜರಾತಿನಲ್ಲಿ ನಡೆದ ಕೋಮುದಳ್ಳುರಿಗೆ ತುತ್ತಾದ ಮುಸ್ಲಿಮರ ನೆರವಿಗೆ ಬಹಿರಂಗವಾಗಿ ಬರಲು ಹಿಂಜರಿದಿದ್ದ ಭಾರತೀಯರು ಪಾಕಿಸ್ತಾನದ ಮುಸ್ಲಿಂ ಬಾಲಕಿಗೆ ನೆರವಾಗಿದ್ದಾರೆ.

ತಮ್ಮ ಎದೆಯಲ್ಲಿ ಬರೀ ದ್ವೇಷವನ್ನೇ ತುಂಬಿಕೊಂಡಿರುವವರಿಲ್ಲದಿದ್ದಾಗ, ಮಾನವನ ಮುಖ್ಯಲಕ್ಷಣವೇ ಮಾನವೀಯತೆ… ಇದು ನೂರ್‌ ನಿಂದಾಗಿ ನಮ್ಮ ಜನರೇ ಅರಿತುಕೊಂಡ ಸತ್ಯ.

– ಗೌರಿ ಲಂಕೇಶ್
ಕಂಡಹಾಗೆ (ಸಂಗ್ರಹ) 1

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...