Homeಗೌರಿ ಕಣ್ಣೋಟರಾಜಕಾರಣಿಗಳು ಮಾಡಲಾಗದ ಸಹಾಯವನ್ನು ಜನ ಮಾಡಿದ ಗಳಿಗೆ...

ರಾಜಕಾರಣಿಗಳು ಮಾಡಲಾಗದ ಸಹಾಯವನ್ನು ಜನ ಮಾಡಿದ ಗಳಿಗೆ…

ವಿಭಜನೆಯ ಸಮಯದಲ್ಲಿ ಭಾರತಕ್ಕೆ ವಲಸೆ ಬಂದ ಕೈಗಾರಿಕೋದ್ಯಮಿಯೊಬ್ಬರು ಅನಾಮಧೇಯವಾಗಿ ಈ ನಿಧಿಗೆ 12 ಲಕ್ಷ ರೂಪಾಯಿಗಳನ್ನು ನೀಡಿದ್ದಾರೆ.

- Advertisement -
- Advertisement -

ಭಾರತ-ಪಾಕಿಸ್ತಾನ ಗಡಿಯಲ್ಲಿರುವ ವಾಘಾದಲ್ಲಿ ಪ್ರತಿ ಸಂಜೆ ವಿಚಿತ್ರವಾದ ಒಂದು ಸಾಂಪ್ರದಾಯಿಕ ಆಚರಣೆ ನಡೆಯುತ್ತದೆ. ಸುಮಾರು ಐದಡಿ ಅಂತರದಲ್ಲಿ ಎರಡೂ ದೇಶಗಳ ಪ್ರವೇಶದ್ವಾರ (ಗೇಟ್)ಗಳಿವೆ. ಅದರ ಬಳಿಯೇ ಎರಡೂ ದೇಶಗಳ ಧ್ವಜಗಳು ಹಾರಾಡುತ್ತಿರುತ್ತವೆ. ಎರಡೂ ಕಡೆಯ ಸೈನಿಕರು “ಗುಡ್ ಡೇ, ಹೇಗಿದ್ದೀರಿ?” ಎಂದು ಕೆಲವೊಮ್ಮೆ ಒಬ್ಬರನ್ನೊಬ್ಬರು ವಿಚಾರಿಸಿಕೊಳ್ಳುತ್ತಾರೆ. ನಾನಲ್ಲಿಗೆ ಹೋಗಿದ್ದಾಗ ಭಾರತದ ಹಿರಿಯ ಸೈನ್ಯಾಧಿಕಾರಿಯೊಬ್ಬರು ನನ್ನನ್ನು ಪಾಕಿಸ್ತಾನದ ಸೈನ್ಯಾಧಿಕಾರಿಗೆ ಪರಿಚಯ ಮಾಡಿಕೊಟ್ಟಿದ್ದರು ಎರಡೂ ದೇಶಗಳ ನಡುವಿನ ನೋ ಮ್ಯಾನ್ಸ್ ಲ್ಯಾಂಡ್‍ನಲ್ಲಿ ನಾನೊಂದು ಹೆಜ್ಜೆಯಿಟ್ಟೆ. ಪಾಕಿಸ್ತಾನ ಸೈನ್ಯಾಧಿಕಾರಿಯೂ ಮುಂದೆ ಬಂದರು. ಇಬ್ಬರೂ ಕೈಕುಲುಕಿದೆವು. ಅದೂ ಕಾರ್ಗಿಲ್‍ನಲ್ಲಿ ಎರಡೂ ದೇಶಗಳ ನಡುವೆ ಸಂಘರ್ಷ ನಡೆಯುತ್ತಿದ್ದಾಗ.

ಹೀಗೆ ಸೌಹಾರ್ದತೆಯಿಂದಲೇ ವಾಘಾದಲ್ಲಿ ತಮ್ಮ ದಿನಗಳನ್ನು ಕಳೆಯುವ ಎರಡೂ ಕಡೆಯ ಸೈನಿಕರು ಸಂಜೆಯಾಗುತ್ತಿದ್ದಂತೆ ಒಂದು ರೀತಿಯ ಪೈಪೋಟಿಗೆ ಇಳಿಯುತ್ತಾರೆ. ಎರಡೂ ಗೇಟ್‍ಗಳ ಹತ್ತಿರ ಸಾರ್ವಜನಿಕರು ಸೇರುತ್ತಿದ್ದಂತೆ, ಧ್ವಜ ಕೆಳಗಿಳಿಸುವ ಕಾರ್ಯಕ್ರಮ ಪ್ರಾರಂಭವಾಗುತ್ತದೆ. ಯಾವ ಕಡೆಯ ಸೈನಿಕರು ಹೆಚ್ಚು ಆಕ್ರಮಣಿಶೀಲತೆಯನ್ನು ಪ್ರದರ್ಶಿಸುತ್ತಾರೆ, ಯಾರು ಹೆಚ್ಚು ರಭಸದಿಂದ ಕಿವಿಗಪ್ಪಳಿಸುವಂತೆ ತಮ್ಮ ಬೂಟುಗಳನ್ನು ನೆಲಕ್ಕೆ ಅಪ್ಪಳಿಸುತ್ತಾರೆ ಎಂದೆಲ್ಲಾ ಗಮನಿಸುವ ಸಾರ್ವಜನಿಕರು ತಮ್ಮ ಕಡೆಯವರನ್ನು ಚಪ್ಪಾಳೆ ತಟ್ಟುತ್ತಾ, ಘೋಷಣೆಗಳನ್ನು ಕೂಗುತ್ತಾ ಹುರಿದುಂಬಿಸುತ್ತಾರೆ. ಎರಡೂ ಕಡೆಯ ಸೈನಿಕರ ನಡುವೆ ಒಂದು ಸಣ್ಣ ಯುದ್ಧ ನಡೆಯುತ್ತಿದೆಯೇನೋ ಎಂಬ ವಾತಾವರಣ ನಿರ್ಮಾಣವಾಗುತ್ತದೆ.

ಆದರೆ ವಿಚಿತ್ರ ಸಂಗತಿಯೇನೆಂದರೆ, ಈ ಧ್ವಜ ಕೆಳಗಿಳಿಸುವ ಆಚರಣೆ ಮುಗಿದ ಮರುಕ್ಷಣವೇ ಎರಡೂ ಕಡೆಯ ಸಾರ್ವಜನಿಕರು ಗೇಟ್‍ಗಳ ಹತ್ತಿರ ಧಾವಿಸುತ್ತಾರೆ. ಒಬ್ಬರನ್ನೊಬ್ಬರು ಕುತೂಹಲದಿಂದ ನೋಡುತ್ತಿರುತ್ತಾರೆ. ಅಲ್ಲಿ ಯಾವುದೇ ರೀತಿಯ ಪೈಪೋಟಿ ಇರುವುದಿಲ್ಲ. ಬದಲಾಗಿ ‘ನಮ್ಮಂತೆಯೇ ಇದ್ದೀರಲ್ಲಾ ನೀವು’ ಎಂಬ ಭಾವನೆ ಮೂಡಿರುತ್ತದೆ. ದೇಶ ವಿಭಜನೆಯ ಸಮಯದಲ್ಲಿ ಬೇರೆಯಾದ ತಮ್ಮ ಬಂಧುಗಳನ್ನು ಮತ್ತೆ ಕಾಣಬಹುದೇನೋ ಎಂಬ ತವಕದಿಂದ ಕೆಲವರು ವಾಘಾ ಗಡಿಗೆ ಪದೇಪದೇ ಬರುತ್ತಿರುತ್ತಾರೆ. ಈ ಕಡೆಯಿಂದ ಇವರು, ಆ ಕಡೆಯಿಂದ ಅವರು ಹೀಗೆ ಮೌನವಾಗಿ ನೋಡುತ್ತಲೇ ನಿಲ್ಲುವ ಜನ ಮತ್ತೆ ತಮ್ಮ ಮನೆಯತ್ತ ಮರುಳುವುದು ಎರಡೂ ಕಡೆಯ ಸೈನಿಕರು ಅವರನ್ನು ಅಲ್ಲಿಂದ ಓಡಿಸಿದಾಗಲೇ!

ಇದೆಲ್ಲವನ್ನು ನೆನಪು ಮಾಡಿಕೊಟ್ಟಿದ್ದು ನೂರ್ ಫಾತಿಮಾ ಎಂಬ ಮುದ್ದು ಮಗು. ಈ ಕೂಸಿನ ಶಸ್ತ್ರಚಿಕಿತ್ಸೆ ಬಗ್ಗೆ ಈಗಾಗಲೇ ಸಾಕಷ್ಟು ಸುದ್ದಿಗಳು ಎಲ್ಲ ಕಡೆಯೂ ಪ್ರಕಟವಾಗಿದೆ. ಆದರೆ ನನಗೆ ಇಷ್ಟವಾದದ್ದು ಆಕೆಗೆ ಭಾರತೀಯರು ನೀಡಿದ ಭಾವನಾತ್ಮಕ ಹಾಗೂ ಆರ್ಥಿಕ ಬೆಂಬಲ. ರಾಜಕಾರಣಿಗಳಿಗೆ ಸಾಧ್ಯವಾಗದಂತಹ ಸಹಾಯವನ್ನು ಜನ ನೀಡಿದ್ದಾರೆ. ನೂರ್‍ಳ ತಂದೆತಾಯಿ ಅದನ್ನು ಅಷ್ಟೇ ಸೌಜನ್ಯದಿಂದ ಸ್ವೀಕರಿಸಿದ್ದಾರೆ.

ನೂರ್‍ಳ ತಂದೆ ಬಡ ಮಕ್ಕಳಿಗೆಂದೇ ಶುರು ಮಾಡಿರುವ ‘ದೋಸ್ತಿ ಫಂಡ್’ (ಸ್ನೇಹನಿಧಿ)ಗೆ ಎಷ್ಟೋ ಭಾರತೀಯರು ಹಣ ನೀಡಿದ್ದಾರೆ. ಹಿಂದೆ ಲಾಹೋರ್‌ನಲ್ಲಿ ವಾಸಿಸುತ್ತಿದ್ದ, ಆದರೆ ವಿಭಜನೆಯ ಸಮಯದಲ್ಲಿ ಭಾರತಕ್ಕೆ ವಲಸೆ ಬಂದ ಕೈಗಾರಿಕೋದ್ಯಮಿಯೊಬ್ಬರು ಅನಾಮಧೇಯವಾಗಿ ಈ ನಿಧಿಗೆ 12 ಲಕ್ಷ ರೂಪಾಯಿಗಳನ್ನು ನೀಡಿದ್ದಾರೆ. ಪಾಕಿಸ್ತಾನದ ಮುಸ್ಲಿಂ ಒಬ್ಬರು ಶುರುಮಾಡಿರುವ ಈ ನಿಧಿಗೆ ಭಾರತದ ಹಿಂದೂ ಒಬ್ಬರು ಇಂತಹ ದೊಡ್ಡ ಮೊತ್ತದ ದಾನ ನೀಡಿರುವುದು ಎರಡೂ ದೇಶಗಳ ಜನರಿಗೆ ಬೇಕಿರುವುದು ಸ್ನೇಹ ಮತ್ತು ಸೌಹಾರ್ದತೆಯ ಬಾಳು ಎಂಬುದನ್ನು ತೋರಿಸುತ್ತದೆ.

ದೇಶದಲ್ಲಿ ಜಾತಿ, ಧರ್ಮದ ಆಧಾರದ ಮೇಲೆ ಜನರನ್ನು ಒಡೆಯುವ ಪ್ರಯತ್ನಗಳು ನಡೆಯುತ್ತಿರುವಾಗಲೇ, ಜನಸಾಮಾನ್ಯರು ತಮಗೆ ಧಾರ್ಮಿಕ ಭಿನ್ನತೆ ಮುಖ್ಯ ಅಲ್ಲವೇ ಅಲ್ಲ ಎಂಬುದನ್ನು ಸಾಬೀತುಪಡಿಸಿದ್ದಾರೆ.

ಪಾಕಿಸ್ತಾನದ ವಿರುದ್ಧ ಭಾರತದ ವೈರತ್ವವಿರುವುದು ನಮ್ಮ ದೇಶದ ಸುಭದ್ರತೆಯ ರಕ್ಷಣೆಗಾಗಿಯೇ ಹೊರತು, ಆ ದೇಶದ ಜನರ ವಿರುದ್ಧವಲ್ಲ, ಅವರ ಧರ್ಮದ ವಿರುದ್ಧವೂ ಅಲ್ಲ ಎಂದು ನೂರ್ ಪ್ರಕರಣ ತೋರಿಸುತ್ತದೆ.

ನೂರ್ ಎಂಬ ಬಾಲಕಿ ಬೇರೆ ದೇಶದವಳು, ಬೇರೆ ಧರ್ಮದವಳು ಎಂಬ ಭೇದಭಾವವನ್ನು ಅಲಕ್ಷಿಸಿದ್ದಾರೆ ಭಾರತೀಯರು. ಗುಜರಾತಿನಲ್ಲಿ ನಡೆದ ಕೋಮುದಳ್ಳುರಿಗೆ ತುತ್ತಾದ ಮುಸ್ಲಿಮರ ನೆರವಿಗೆ ಬಹಿರಂಗವಾಗಿ ಬರಲು ಹಿಂಜರಿದಿದ್ದ ಭಾರತೀಯರು ಪಾಕಿಸ್ತಾನದ ಮುಸ್ಲಿಂ ಬಾಲಕಿಗೆ ನೆರವಾಗಿದ್ದಾರೆ.

ತಮ್ಮ ಎದೆಯಲ್ಲಿ ಬರೀ ದ್ವೇಷವನ್ನೇ ತುಂಬಿಕೊಂಡಿರುವವರಿಲ್ಲದಿದ್ದಾಗ, ಮಾನವನ ಮುಖ್ಯಲಕ್ಷಣವೇ ಮಾನವೀಯತೆ… ಇದು ನೂರ್‌ ನಿಂದಾಗಿ ನಮ್ಮ ಜನರೇ ಅರಿತುಕೊಂಡ ಸತ್ಯ.

– ಗೌರಿ ಲಂಕೇಶ್
ಕಂಡಹಾಗೆ (ಸಂಗ್ರಹ) 1

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮಮತಾ ಬ್ಯಾನರ್ಜಿಯ ರಾಜಕೀಯ ಸಲಹಾ ಸಂಸ್ಥೆ ಐ-ಪ್ಯಾಕ್, ಅದರ ಮುಖ್ಯಸ್ಥ ಪ್ರತೀಕ್ ಜೈನ್ ಮನೆ ಮೇಲೆ ಇಡಿ ದಾಳಿ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ...

ಉತ್ತರಪ್ರದೇಶ: ಕಬ್ಬಿನ ಗದ್ದೆಯಲ್ಲಿ ಸುಟ್ಟ, ಅರೆನಗ್ನ ಮಹಿಳೆಯ ಮೃತದೇಹ ಪತ್ತೆ: ಅತ್ಯಾಚಾರ ಮಾಡಿ ಬೆಂಕಿ ಹಚ್ಚಿರುವ ಶಂಕೆ

ಹಾಪುರ್: ಉತ್ತರ ಪ್ರದೇಶದ ಹಾಪುರ್ ಜಿಲ್ಲೆಯಲ್ಲಿ ಆಘಾತಕಾರಿ ಘಟನೆಯೊಂದು ಬೆಳಕಿಗೆ ಬಂದಿದ್ದು, ಬಹದ್ದೂರ್‌ಗಢ ಪೊಲೀಸ್ ಠಾಣೆ ವ್ಯಾಪ್ತಿಯ ಲಹಾದ್ರಾ ಗ್ರಾಮದ ಇಟ್ಟಿಗೆ ಗೂಡುಗಳ ಹಿಂದಿನ ಕಬ್ಬಿನ ಗದ್ದೆಯಲ್ಲಿ ಸುಮಾರು 30 ವರ್ಷ ವಯಸ್ಸಿನ...

ಗೋಮಾಂಸ ಸೇವನೆ ಶಂಕೆಯಲ್ಲಿ ಮಾನಸಿಕ ಅಸ್ವಸ್ಥ ವ್ಯಕ್ತಿಯ ಮೇಲೆ ಕ್ರೂರ ಹಲ್ಲೆ : ಮೂವರು ದುಷ್ಕರ್ಮಿಗಳ ಬಂಧನ

ಸಾರ್ವಜನಿಕವಾಗಿ ಹಸುವನ್ನು ಕೊಂದು, ಅದರ ಮಾಂಸವನ್ನು ತಿಂದಿದ್ದಾರೆ ಎಂದು ಆರೋಪಿಸಿ ಮಾನಸಿಕ ಅಸ್ವಸ್ಥ ವ್ಯಕ್ತಿ ಮೇಲೆ ಸ್ವಘೋಷಿತ ಗೋರಕ್ಷಕರು ಕ್ರೂರವಾಗಿ ಹಲ್ಲೆ ನಡೆಸಿದ ಘಟನೆ ರಾಜಸ್ಥಾನದ ಝಾಲಾವರ್ ಜಿಲ್ಲೆಯ ಅಕ್ಲೇರಾ ತಾಲೂಕಿನ ಕಿಶನ್‌ಪುರ...

‘ನಿಮ್ಮನ್ನು ನಂಬಿ ಬಂದ ನಕ್ಸಲ್ ಕಾರ್ಯಕರ್ತರಿಗೆ ಕೊಟ್ಟ ಮಾತು ಉಳಿಸಿಕೊಳ್ಳಿ’: ಸಿದ್ದರಾಮಯ್ಯ ಅವರಿಗೆ ಮನವಿ ಮಾಡಿದ ಶಾಂತಿಗಾಗಿ ನಾಗರೀಕ ವೇದಿಕೆ

ಬೆಂಗಳೂರು: ‘ಮುಖ್ಯವಾಹಿನಿಗೆ ಬಂದ ಏಳೂ ಜನ ನಕ್ಸಲೀಯರು ಜೈಲಿನಲ್ಲೇ ಇದ್ದಾರೆ. ಬಹಳ ಸೊರಗಿದ್ದಾರೆ. ತೀವ್ರ ದೈಹಿಕ ಹಾಗೂ ಮಾನಸಿಕ ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ. ಅವರನ್ನು ಹೋಗಿ ಕಾಣುವುದೇ ನಮ್ಮ ಪಾಲಿಗೆ ದೊಡ್ಡ ಹಿಂಸೆಯಾಗಿದೆ ಎಂದು...

ಕೋಗಿಲು ಮನೆಗಳ ನೆಲಸಮ : ಪ್ರತಿಭಟಿಸಿದ ಹೋರಾಟಗಾರರ ಮೇಲೆ ಎಫ್‌ಐಆರ್

ಕೋಗಿಲು ಬಡಾವಣೆಯಲ್ಲಿ ಬಡವರ ಮನೆಗಳ ನೆಲಸಮ ವೇಳೆ ಬಿಗುವಿನ ವಾತಾವರಣ ಸೃಷ್ಟಿಸಿದ್ದಾರೆ ಎಂಬ ಆರೋಪದ ಮೇಲೆ ಹೋರಾಟಗಾರರ ವಿರುದ್ದ ಯಲಹಂಕ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ. ಜನಪರ ವೇದಿಕೆಯ ಮುಖಂಡರಾದ ಗೌರಮ್ಮ ಮತ್ತು ಮನೋಹರ್,...

17 ವರ್ಷದ ಮಹಿಳಾ ಅಥ್ಲೀಟ್ ಮೇಲೆ ಲೈಂಗಿಕ ದೌರ್ಜನ್ಯ ಆರೋಪ: ರಾಷ್ಟ್ರೀಯ ಶೂಟಿಂಗ್ ತರಬೇತುದಾರ ಅಮಾನತು

ಫರಿದಾಬಾದ್‌ನ ಹೋಟೆಲ್‌ನಲ್ಲಿ 17 ವರ್ಷದ ರಾಷ್ಟ್ರಮಟ್ಟದ ಮಹಿಳಾ ಶೂಟರ್ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇಲೆ ಹರಿಯಾಣ ಪೊಲೀಸರು ಪ್ರಕರಣ ದಾಖಲಿಸಿದ ನಂತರ ರಾಷ್ಟ್ರೀಯ ಶೂಟಿಂಗ್ ತರಬೇತುದಾರ ಅಂಕುಶ್ ಭಾರದ್ವಾಜ್ ಅವರನ್ನು...

ಸುಪ್ರೀಂ ಕೋರ್ಟ್‌ನಿಂದ ಜಾಮೀನು : ಗುಲ್ಫಿಶಾ ಫಾತಿಮಾ ಸೇರಿದಂತೆ ನಾಲ್ವರು ಜೈಲಿನಿಂದ ಬಿಡುಗಡೆ

ಈಶಾನ್ಯ ದೆಹಲಿಯ 2020ರ ಗಲಭೆ ಪಿತೂರಿ ಆರೋಪದಲ್ಲಿ ಬಂಧಿತರಾಗಿದ್ದ ನಾಲ್ವರು ವಿದ್ಯಾರ್ಥಿ ಹೋರಾಟಗಾರರು ಬುಧವಾರ (ಜ.7) ಜೈಲಿನಿಂದ ಹೊರ ಬಂದಿದ್ದಾರೆ. ಗುಲ್ಫಿಶಾ ಫಾತಿಮಾ, ಮೀರಾನ್ ಹೈದರ್, ಶಿಫಾ ಉರ್ ರೆಹಮಾನ್ ಮತ್ತು ಮೊಹಮ್ಮದ್ ಸಲೀಮ್...

ಖ್ಯಾತ ಪರಿಸರ ವಿಜ್ಞಾನಿ ಮಾಧವ ಗಾಡ್ಗೀಳ್ ನಿಧನ

ಖ್ಯಾತ ಪರಿಸರ ವಿಜ್ಞಾನಿ ಮಾಧವ ಗಾಡ್ಗೀಳ್ (82 ವರ್ಷ) ಅವರು ಬುಧವಾರ (ಜನವರಿ 7, 2026) ತಡರಾತ್ರಿ ಪುಣೆಯಲ್ಲಿರುವ ತಮ್ಮ ಮನೆಯಲ್ಲಿ ಅಲ್ಪಕಾಲದ ಅನಾರೋಗ್ಯದ ನಂತರ ನಿಧನರಾದರು. ಈ ಕುರಿತು ಗಾಡ್ಗೀಳ್ ಅವರ...

ಅಪರಾಧದ ಸ್ವರೂಪ ಏನೇ ಇರಲಿ, ತ್ವರಿತ ವಿಚಾರಣೆಯ ಹಕ್ಕು ಅನ್ವಯಿಸುತ್ತದೆ: ಸುಪ್ರೀಂ ಕೋರ್ಟ್

ಸಂವಿಧಾನದ 21 ನೇ ವಿಧಿಯ ಅಡಿಯಲ್ಲಿ ತ್ವರಿತ ವಿಚಾರಣೆಯ ಹಕ್ಕು ಅಪರಾಧದ ಗಂಭೀರತೆ ಅಥವಾ ಸ್ವರೂಪವನ್ನು ಲೆಕ್ಕಿಸದೆ ಅನ್ವಯಿಸುತ್ತದೆ ಎಂದು ಸುಪ್ರೀಂ ಕೋರ್ಟ್ ಮಂಗಳವಾರ ಪುನರುಚ್ಚರಿಸಿದೆ. 2002 ರ ಹಣ ವರ್ಗಾವಣೆ ತಡೆ ಕಾಯ್ದೆಯ...

ಬಾಂಗ್ಲಾದೇಶ: ಗುಂಪು ದಾಳಿಯಿಂದ ತಪ್ಪಿಸಿಕೊಳ್ಳಲು ಕಾಲುವೆಗೆ ಹಾರಿದ ಹಿಂದೂ ವ್ಯಕ್ತಿ ಸಾವು

ಬಾಂಗ್ಲಾದೇಶದಲ್ಲಿ ಅಲ್ಪಸಂಖ್ಯಾತರ ವಿರುದ್ಧ ಹಿಂಸಾಚಾರ ಸುದ್ದಿಗಳು ನಿರಂತರವಾಗಿ ವರದಿಯಾಗುತ್ತಿರುವ ನಡುವೆಯೇ, ನೌಗಾಂವ್ ಜಿಲ್ಲೆಯ ಮೊಹದೇವ್‌ಪುರ ಉಪಜಿಲ್ಲಾದಲ್ಲಿ ದರೋಡೆ ಆರೋಪ ಹೊರಿಸಿದ ಗುಂಪಿನಿಂದ ತಪ್ಪಿಸಿಕೊಳ್ಳಲು ಯತ್ನಿಸುತ್ತಿದ್ದ 25 ವರ್ಷದ ಹಿಂದೂ ವ್ಯಕ್ತಿ ಕಾಲುವೆಗೆ ಹಾರಿ...