Homeಗೌರಿ ಕಣ್ಣೋಟರಾಜಕಾರಣಿಗಳು ಮಾಡಲಾಗದ ಸಹಾಯವನ್ನು ಜನ ಮಾಡಿದ ಗಳಿಗೆ...

ರಾಜಕಾರಣಿಗಳು ಮಾಡಲಾಗದ ಸಹಾಯವನ್ನು ಜನ ಮಾಡಿದ ಗಳಿಗೆ…

ವಿಭಜನೆಯ ಸಮಯದಲ್ಲಿ ಭಾರತಕ್ಕೆ ವಲಸೆ ಬಂದ ಕೈಗಾರಿಕೋದ್ಯಮಿಯೊಬ್ಬರು ಅನಾಮಧೇಯವಾಗಿ ಈ ನಿಧಿಗೆ 12 ಲಕ್ಷ ರೂಪಾಯಿಗಳನ್ನು ನೀಡಿದ್ದಾರೆ.

- Advertisement -
- Advertisement -

ಭಾರತ-ಪಾಕಿಸ್ತಾನ ಗಡಿಯಲ್ಲಿರುವ ವಾಘಾದಲ್ಲಿ ಪ್ರತಿ ಸಂಜೆ ವಿಚಿತ್ರವಾದ ಒಂದು ಸಾಂಪ್ರದಾಯಿಕ ಆಚರಣೆ ನಡೆಯುತ್ತದೆ. ಸುಮಾರು ಐದಡಿ ಅಂತರದಲ್ಲಿ ಎರಡೂ ದೇಶಗಳ ಪ್ರವೇಶದ್ವಾರ (ಗೇಟ್)ಗಳಿವೆ. ಅದರ ಬಳಿಯೇ ಎರಡೂ ದೇಶಗಳ ಧ್ವಜಗಳು ಹಾರಾಡುತ್ತಿರುತ್ತವೆ. ಎರಡೂ ಕಡೆಯ ಸೈನಿಕರು “ಗುಡ್ ಡೇ, ಹೇಗಿದ್ದೀರಿ?” ಎಂದು ಕೆಲವೊಮ್ಮೆ ಒಬ್ಬರನ್ನೊಬ್ಬರು ವಿಚಾರಿಸಿಕೊಳ್ಳುತ್ತಾರೆ. ನಾನಲ್ಲಿಗೆ ಹೋಗಿದ್ದಾಗ ಭಾರತದ ಹಿರಿಯ ಸೈನ್ಯಾಧಿಕಾರಿಯೊಬ್ಬರು ನನ್ನನ್ನು ಪಾಕಿಸ್ತಾನದ ಸೈನ್ಯಾಧಿಕಾರಿಗೆ ಪರಿಚಯ ಮಾಡಿಕೊಟ್ಟಿದ್ದರು ಎರಡೂ ದೇಶಗಳ ನಡುವಿನ ನೋ ಮ್ಯಾನ್ಸ್ ಲ್ಯಾಂಡ್‍ನಲ್ಲಿ ನಾನೊಂದು ಹೆಜ್ಜೆಯಿಟ್ಟೆ. ಪಾಕಿಸ್ತಾನ ಸೈನ್ಯಾಧಿಕಾರಿಯೂ ಮುಂದೆ ಬಂದರು. ಇಬ್ಬರೂ ಕೈಕುಲುಕಿದೆವು. ಅದೂ ಕಾರ್ಗಿಲ್‍ನಲ್ಲಿ ಎರಡೂ ದೇಶಗಳ ನಡುವೆ ಸಂಘರ್ಷ ನಡೆಯುತ್ತಿದ್ದಾಗ.

ಹೀಗೆ ಸೌಹಾರ್ದತೆಯಿಂದಲೇ ವಾಘಾದಲ್ಲಿ ತಮ್ಮ ದಿನಗಳನ್ನು ಕಳೆಯುವ ಎರಡೂ ಕಡೆಯ ಸೈನಿಕರು ಸಂಜೆಯಾಗುತ್ತಿದ್ದಂತೆ ಒಂದು ರೀತಿಯ ಪೈಪೋಟಿಗೆ ಇಳಿಯುತ್ತಾರೆ. ಎರಡೂ ಗೇಟ್‍ಗಳ ಹತ್ತಿರ ಸಾರ್ವಜನಿಕರು ಸೇರುತ್ತಿದ್ದಂತೆ, ಧ್ವಜ ಕೆಳಗಿಳಿಸುವ ಕಾರ್ಯಕ್ರಮ ಪ್ರಾರಂಭವಾಗುತ್ತದೆ. ಯಾವ ಕಡೆಯ ಸೈನಿಕರು ಹೆಚ್ಚು ಆಕ್ರಮಣಿಶೀಲತೆಯನ್ನು ಪ್ರದರ್ಶಿಸುತ್ತಾರೆ, ಯಾರು ಹೆಚ್ಚು ರಭಸದಿಂದ ಕಿವಿಗಪ್ಪಳಿಸುವಂತೆ ತಮ್ಮ ಬೂಟುಗಳನ್ನು ನೆಲಕ್ಕೆ ಅಪ್ಪಳಿಸುತ್ತಾರೆ ಎಂದೆಲ್ಲಾ ಗಮನಿಸುವ ಸಾರ್ವಜನಿಕರು ತಮ್ಮ ಕಡೆಯವರನ್ನು ಚಪ್ಪಾಳೆ ತಟ್ಟುತ್ತಾ, ಘೋಷಣೆಗಳನ್ನು ಕೂಗುತ್ತಾ ಹುರಿದುಂಬಿಸುತ್ತಾರೆ. ಎರಡೂ ಕಡೆಯ ಸೈನಿಕರ ನಡುವೆ ಒಂದು ಸಣ್ಣ ಯುದ್ಧ ನಡೆಯುತ್ತಿದೆಯೇನೋ ಎಂಬ ವಾತಾವರಣ ನಿರ್ಮಾಣವಾಗುತ್ತದೆ.

ಆದರೆ ವಿಚಿತ್ರ ಸಂಗತಿಯೇನೆಂದರೆ, ಈ ಧ್ವಜ ಕೆಳಗಿಳಿಸುವ ಆಚರಣೆ ಮುಗಿದ ಮರುಕ್ಷಣವೇ ಎರಡೂ ಕಡೆಯ ಸಾರ್ವಜನಿಕರು ಗೇಟ್‍ಗಳ ಹತ್ತಿರ ಧಾವಿಸುತ್ತಾರೆ. ಒಬ್ಬರನ್ನೊಬ್ಬರು ಕುತೂಹಲದಿಂದ ನೋಡುತ್ತಿರುತ್ತಾರೆ. ಅಲ್ಲಿ ಯಾವುದೇ ರೀತಿಯ ಪೈಪೋಟಿ ಇರುವುದಿಲ್ಲ. ಬದಲಾಗಿ ‘ನಮ್ಮಂತೆಯೇ ಇದ್ದೀರಲ್ಲಾ ನೀವು’ ಎಂಬ ಭಾವನೆ ಮೂಡಿರುತ್ತದೆ. ದೇಶ ವಿಭಜನೆಯ ಸಮಯದಲ್ಲಿ ಬೇರೆಯಾದ ತಮ್ಮ ಬಂಧುಗಳನ್ನು ಮತ್ತೆ ಕಾಣಬಹುದೇನೋ ಎಂಬ ತವಕದಿಂದ ಕೆಲವರು ವಾಘಾ ಗಡಿಗೆ ಪದೇಪದೇ ಬರುತ್ತಿರುತ್ತಾರೆ. ಈ ಕಡೆಯಿಂದ ಇವರು, ಆ ಕಡೆಯಿಂದ ಅವರು ಹೀಗೆ ಮೌನವಾಗಿ ನೋಡುತ್ತಲೇ ನಿಲ್ಲುವ ಜನ ಮತ್ತೆ ತಮ್ಮ ಮನೆಯತ್ತ ಮರುಳುವುದು ಎರಡೂ ಕಡೆಯ ಸೈನಿಕರು ಅವರನ್ನು ಅಲ್ಲಿಂದ ಓಡಿಸಿದಾಗಲೇ!

ಇದೆಲ್ಲವನ್ನು ನೆನಪು ಮಾಡಿಕೊಟ್ಟಿದ್ದು ನೂರ್ ಫಾತಿಮಾ ಎಂಬ ಮುದ್ದು ಮಗು. ಈ ಕೂಸಿನ ಶಸ್ತ್ರಚಿಕಿತ್ಸೆ ಬಗ್ಗೆ ಈಗಾಗಲೇ ಸಾಕಷ್ಟು ಸುದ್ದಿಗಳು ಎಲ್ಲ ಕಡೆಯೂ ಪ್ರಕಟವಾಗಿದೆ. ಆದರೆ ನನಗೆ ಇಷ್ಟವಾದದ್ದು ಆಕೆಗೆ ಭಾರತೀಯರು ನೀಡಿದ ಭಾವನಾತ್ಮಕ ಹಾಗೂ ಆರ್ಥಿಕ ಬೆಂಬಲ. ರಾಜಕಾರಣಿಗಳಿಗೆ ಸಾಧ್ಯವಾಗದಂತಹ ಸಹಾಯವನ್ನು ಜನ ನೀಡಿದ್ದಾರೆ. ನೂರ್‍ಳ ತಂದೆತಾಯಿ ಅದನ್ನು ಅಷ್ಟೇ ಸೌಜನ್ಯದಿಂದ ಸ್ವೀಕರಿಸಿದ್ದಾರೆ.

ನೂರ್‍ಳ ತಂದೆ ಬಡ ಮಕ್ಕಳಿಗೆಂದೇ ಶುರು ಮಾಡಿರುವ ‘ದೋಸ್ತಿ ಫಂಡ್’ (ಸ್ನೇಹನಿಧಿ)ಗೆ ಎಷ್ಟೋ ಭಾರತೀಯರು ಹಣ ನೀಡಿದ್ದಾರೆ. ಹಿಂದೆ ಲಾಹೋರ್‌ನಲ್ಲಿ ವಾಸಿಸುತ್ತಿದ್ದ, ಆದರೆ ವಿಭಜನೆಯ ಸಮಯದಲ್ಲಿ ಭಾರತಕ್ಕೆ ವಲಸೆ ಬಂದ ಕೈಗಾರಿಕೋದ್ಯಮಿಯೊಬ್ಬರು ಅನಾಮಧೇಯವಾಗಿ ಈ ನಿಧಿಗೆ 12 ಲಕ್ಷ ರೂಪಾಯಿಗಳನ್ನು ನೀಡಿದ್ದಾರೆ. ಪಾಕಿಸ್ತಾನದ ಮುಸ್ಲಿಂ ಒಬ್ಬರು ಶುರುಮಾಡಿರುವ ಈ ನಿಧಿಗೆ ಭಾರತದ ಹಿಂದೂ ಒಬ್ಬರು ಇಂತಹ ದೊಡ್ಡ ಮೊತ್ತದ ದಾನ ನೀಡಿರುವುದು ಎರಡೂ ದೇಶಗಳ ಜನರಿಗೆ ಬೇಕಿರುವುದು ಸ್ನೇಹ ಮತ್ತು ಸೌಹಾರ್ದತೆಯ ಬಾಳು ಎಂಬುದನ್ನು ತೋರಿಸುತ್ತದೆ.

ದೇಶದಲ್ಲಿ ಜಾತಿ, ಧರ್ಮದ ಆಧಾರದ ಮೇಲೆ ಜನರನ್ನು ಒಡೆಯುವ ಪ್ರಯತ್ನಗಳು ನಡೆಯುತ್ತಿರುವಾಗಲೇ, ಜನಸಾಮಾನ್ಯರು ತಮಗೆ ಧಾರ್ಮಿಕ ಭಿನ್ನತೆ ಮುಖ್ಯ ಅಲ್ಲವೇ ಅಲ್ಲ ಎಂಬುದನ್ನು ಸಾಬೀತುಪಡಿಸಿದ್ದಾರೆ.

ಪಾಕಿಸ್ತಾನದ ವಿರುದ್ಧ ಭಾರತದ ವೈರತ್ವವಿರುವುದು ನಮ್ಮ ದೇಶದ ಸುಭದ್ರತೆಯ ರಕ್ಷಣೆಗಾಗಿಯೇ ಹೊರತು, ಆ ದೇಶದ ಜನರ ವಿರುದ್ಧವಲ್ಲ, ಅವರ ಧರ್ಮದ ವಿರುದ್ಧವೂ ಅಲ್ಲ ಎಂದು ನೂರ್ ಪ್ರಕರಣ ತೋರಿಸುತ್ತದೆ.

ನೂರ್ ಎಂಬ ಬಾಲಕಿ ಬೇರೆ ದೇಶದವಳು, ಬೇರೆ ಧರ್ಮದವಳು ಎಂಬ ಭೇದಭಾವವನ್ನು ಅಲಕ್ಷಿಸಿದ್ದಾರೆ ಭಾರತೀಯರು. ಗುಜರಾತಿನಲ್ಲಿ ನಡೆದ ಕೋಮುದಳ್ಳುರಿಗೆ ತುತ್ತಾದ ಮುಸ್ಲಿಮರ ನೆರವಿಗೆ ಬಹಿರಂಗವಾಗಿ ಬರಲು ಹಿಂಜರಿದಿದ್ದ ಭಾರತೀಯರು ಪಾಕಿಸ್ತಾನದ ಮುಸ್ಲಿಂ ಬಾಲಕಿಗೆ ನೆರವಾಗಿದ್ದಾರೆ.

ತಮ್ಮ ಎದೆಯಲ್ಲಿ ಬರೀ ದ್ವೇಷವನ್ನೇ ತುಂಬಿಕೊಂಡಿರುವವರಿಲ್ಲದಿದ್ದಾಗ, ಮಾನವನ ಮುಖ್ಯಲಕ್ಷಣವೇ ಮಾನವೀಯತೆ… ಇದು ನೂರ್‌ ನಿಂದಾಗಿ ನಮ್ಮ ಜನರೇ ಅರಿತುಕೊಂಡ ಸತ್ಯ.

– ಗೌರಿ ಲಂಕೇಶ್
ಕಂಡಹಾಗೆ (ಸಂಗ್ರಹ) 1

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...