Homeಮುಖಪುಟಕಾರ್ಮಿಕರಿಗೆ ಕೂಲಿ | ಕೇರಳ, ಜಮ್ಮುಕಾಶ್ಮೀರ ಟಾಪ್‌‌; ಗುಜರಾತ್‌, ಮಧ್ಯಪ್ರದೇಶ ಅತ್ಯಂತ ಕಡಿಮೆ - RBI...

ಕಾರ್ಮಿಕರಿಗೆ ಕೂಲಿ | ಕೇರಳ, ಜಮ್ಮುಕಾಶ್ಮೀರ ಟಾಪ್‌‌; ಗುಜರಾತ್‌, ಮಧ್ಯಪ್ರದೇಶ ಅತ್ಯಂತ ಕಡಿಮೆ – RBI ವರದಿ

- Advertisement -
- Advertisement -

ಹಣದುಬ್ಬರ ಮತ್ತು ಬಡ್ಡಿದರಗಳು ಹೆಚ್ಚಾಗುತ್ತಿರುವ ವೇಳೆಯಲ್ಲಿ ಗುಜರಾತ್ ಮತ್ತು ಮಧ್ಯಪ್ರದೇಶ ರಾಜ್ಯಗಳಲ್ಲಿನ ಕೃಷಿ ಕಾರ್ಮಿಕರು ದೇಶದಲ್ಲೆ ಅತ್ಯಂತ ಕಡಿಮೆ ದೈನಂದಿನ ಕೂಲಿ ಪಡೆಯುತ್ತಾರೆ ಹಾಗೂ ಕೇರಳ ಮತ್ತು ಜಮ್ಮು ಕಾಶ್ಮೀರದ ಕೃಷಿ ಕಾರ್ಮಿಕರು ಅತ್ಯಂತ ಹೆಚ್ಚಿನ ದೈನಂದಿನ ಕೂಲಿ ಪಡೆಯುತ್ತಾರೆ ಎಂದು ಭಾರತೀಯ ರಿಸರ್ವ್ ಬ್ಯಾಂಕ್ (ಆರ್‌‌ಬಿಐ) ವರದಿ ಹೇಳಿದೆ.

ಮಾರ್ಚ್ 2022 ಕ್ಕೆ ಕೊನೆಗೊಂಡ ವರ್ಷದಲ್ಲಿ ಆರ್‌‌ಬಿಐ ಸಂಗ್ರಹಿಸಿದ ಅಂಕಿಅಂಶಗಳ ಪ್ರಕಾರ, ಮಧ್ಯಪ್ರದೇಶದ ಗ್ರಾಮೀಣ ಪ್ರದೇಶದ ಪುರುಷ ಕೃಷಿ ಕಾರ್ಮಿಕರು ಕೇವಲ 217.8 ರೂ. ದೈನಂದಿನ ಕೂಲಿ ಪಡೆದರೆ, ಗುಜರಾತ್‌ನಲ್ಲಿ ಕೃಷಿ ಕಾರ್ಮಿಕ 220.3 ರೂ. ಪಡೆಯುತ್ತಾನೆ. ಅದಾಗ್ಯೂ ಈ ಎರಡೂ ರಾಜ್ಯಗಳಲ್ಲಿ ನೀಡುವ ದೈನಂದಿನ ಕೂಲಿ ರಾಷ್ಟ್ರೀಯ ಸರಾಸರಿ 323.2 ರೂ.ಗಿಂತ ಕ್ಕಿಂತ ಕಡಿಮೆಯಾಗಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಗುಜರಾತಿನಲ್ಲಿ ಒಬ್ಬ ಗ್ರಾಮೀಣ ಕೃಷಿ ಕಾರ್ಮಿಕನಿಗೆ ತಿಂಗಳಿಗೆ 25 ದಿನ ಕೆಲಸ ಸಿಕ್ಕಿದರೆ, ಅವನ ಮಾಸಿಕ ಸಂಪಾದನೆಯು ತಿಂಗಳಿಗೆ ಸುಮಾರು 5,500 ರೂಪಾಯಿಗಳಷ್ಟಿರುತ್ತದೆ, ಇದು ನಾಲ್ಕೈದು ಜನರಿರುವ ಕುಟುಂಬದ ವೆಚ್ಚವನ್ನು ಪೂರೈಸಲು ಸಾಕಾಗುವುದಿಲ್ಲ. ಆದರೆ ಅತಿ ಹೆಚ್ಚು ವೇತನ ನೀಡುವ ಕೇರಳದ ಗ್ರಾಮೀಣ ಕೃಷಿ ಕಾರ್ಮಿಕರು ತಿಂಗಳಿಗೆ 25 ದಿನಗಳ ಕೆಲಸಕ್ಕೆ ಸರಾಸರಿ 18,170 ರೂ. ಪಡೆಯುತ್ತಾರೆ.

ಇದನ್ನೂ ಓದಿ: ‘ನೀನು ಕೂಲಿ ಕೆಲಸ ಮಾಡಬೇಕು, ಶಾಲೆಯಲ್ಲಿ ಅಡುಗೆಯನ್ನಲ್ಲ’: 6 ತಿಂಗಳಾದರೂ ದಲಿತ ಮಹಿಳೆಗೆ ನಿಲ್ಲದ ಕಿರುಕುಳ

2021-22 ರ ಆರ್ಥಿಕ ವರ್ಷವು ಗ್ರಾಮೀಣ ಆರ್ಥಿಕತೆಗೆ ಕೆಟ್ಟದ್ದಾಗಿ ಪರಿಣಮಿಸಿದ್ದು, ಕೋವಿಡ್ ಸಾಂಕ್ರಾಮಿಕವು ಉದ್ಯೋಗಗಳು ಮತ್ತು ಆದಾಯದ ಮಟ್ಟದ ಮೇಲೆ ಹೊಡೆತ ನೀಡಿದೆ. ಮಧ್ಯಪ್ರದೇಶದಲ್ಲಿ ಕೃಷಿ ಕಾರ್ಮಿಕರ ಮಾಸಿಕ ಕೂಲಿ ಸುಮಾರು 5,445 ರೂ. ಆಗಿದೆ. ಕೃಷಿ ಕಾರ್ಮಿಕರಿಗೆ ಕಡಿಮೆ ಕೂಲಿ ನೀಡುವ ಇತರ ರಾಜ್ಯಗಳಲ್ಲಿ ಉತ್ತರ ಪ್ರದೇಶ ( ಗ್ರಾಮೀಣ ಕೃಷಿ ಕಾರ್ಮಿಕರು ಸರಾಸರಿ ದಿನಗೂಲಿ 270 ರೂ ) ಮಹಾರಾಷ್ಟ್ರ (284.2 ರೂ.) ಒಡಿಶಾ (269.5 ರೂ.) ಸೇರಿದೆ.

ಪ್ರತಿ ಕೃಷಿ ಕಾರ್ಮಿಕರಿಗೆ ಸರಾಸರಿ 726.8 ರೂ. ಕೂಲಿ ನೀಡುವುದರೊಂದಿಗೆ ಹೆಚ್ಚು ವೇತನ ನೀಡುವ ರಾಜ್ಯಗಳ ಪಟ್ಟಿಯಲ್ಲಿ ಕೇರಳ ಅಗ್ರ ಸ್ಥಾನದಲ್ಲಿದೆ. ಕೇರಳದಲ್ಲಿನ ಹೆಚ್ಚಿನ ಕೂಲಿ ಇತರ ಕಳಪೆ ವೇತನ ನೀಡುವ ರಾಜ್ಯಗಳ ಕೃಷಿ ಕಾರ್ಮಿಕರನ್ನು ಆಕರ್ಷಿಸಿದ್ದು, ಹೀಗಾಗಿ ಸುಮಾರು 25 ಲಕ್ಷ ವಲಸೆ ಕಾರ್ಮಿಕರು ರಾಜ್ಯದಲ್ಲಿ ವಾಸಿಸುತ್ತಿದ್ದಾರೆ ಎಂದು ವರದಿಯಾಗಿದೆ.

ಜಮ್ಮು ಕಾಶ್ಮೀರದಲ್ಲಿ, ಕೃಷಿ ಕಾರ್ಮಿಕರು ಪ್ರತಿ ವ್ಯಕ್ತಿಗೆ ಸರಾಸರಿ 524.6 ರೂ., ಹಿಮಾಚಲ ಪ್ರದೇಶ 457.6 ರೂ. ಮತ್ತು ತಮಿಳುನಾಡು 445.6 ರೂ. ಕೂಲಿ ಪಡೆಯುತ್ತಾರೆ.

ಕರ್ನಾಟಕದಲ್ಲಿ ಕೃಷಿ ಕೂಲಿ ಕಾರ್ಮಿಕರಿಗೆ ಸರಾಸರಿ 335.5 ರೂ. ಸಿಗುತ್ತದೆ ಎಂದು ಅಂಕಿ-ಅಂಶ ಹೇಳಿದೆ.

ಇದನ್ನೂ ಓದಿ: ದಲಿತ್‌ ಫೈಲ್ಸ್‌‌: ಕೂಲಿ ಕೇಳಿದ ದಲಿತ ಬಾಲಕನಿಗೆ ಹಲ್ಲೆ ನಡೆಸಿ ಪಾದ ನೆಕ್ಕಿಸಿದ ದುಷ್ಕರ್ಮಿಗಳು

ಆರ್‌ಬಿಐ ಅಂಕಿಅಂಶಗಳ ಪ್ರಕಾರ, ಕೃಷಿಯೇತರ ಪುರುಷ ಕಾರ್ಮಿಕರ ಕೂಲಿ ನೀಡುವ ವಿಚಾರದಲ್ಲಿ, ಮಧ್ಯಪ್ರದೇಶ ಕಡಿಮೆ ವೇತನ ನೀಡುತ್ತಿದ್ದು, ಅಲ್ಲಿ ಸರಾಸರಿ 230.3 ರೂ. ರಷ್ಟಿದ್ದರೆ, ಗುಜರಾತ್ ಕಾರ್ಮಿಕರು 252.5 ರೂ. ಮತ್ತು ತ್ರಿಪುರಾದಲ್ಲಿ 250 ರೂ. ದೈನಂದಿನ ವೇತನವನ್ನು ನೀಡಲಾಗುತ್ತದೆ. ಇವೆಲ್ಲವೂ ರಾಷ್ಟ್ರೀಯ ಸರಾಸರಿಗಿಂತ 326.6. ರೂ. ಗಿಂತಲೂ ಕಡಿಮೆಯಾಗಿದೆ.

ಮತ್ತೊಂದೆಡೆ, ಕೇರಳವು ಕೃಷಿಯೇತರ ಕಾರ್ಮಿಕರ ಕೂಲಿಯ ವಿಚಾರದಲ್ಲಿ ಕೂಡಾ ಮುಂಚೂಣಿಯಲ್ಲಿದ್ದು, ಅಲ್ಲಿ ಪ್ರತಿ ವ್ಯಕ್ತಿಗೆ 681.8 ರೂ. ಕೂಲಿ ನೀಡುತ್ತಾರೆ. ಇದರ ನಂತರ ನಂತರ ಜಮ್ಮುಕಾಶ್ಮೀರ 500.8 ರೂ., ತಮಿಳುನಾಡು 462.3 ರೂ. ಮತ್ತು ಹರಿಯಾಣ 409.3 ರೂ. ಕೂಲಿ ನೀಡುತ್ತದೆ.

ಕರ್ನಾಟಕವು ಕೃಷಿಯೇತರ ಕೂಲಿ ಕಾರ್ಮಿಕರಿಗೆ 297.9 ರೂ. ಸರಾಸರಿ ಕೂಲಿ ನೀಡುತ್ತದೆ. ಇದು ರಾಷ್ಟ್ರೀಯ ಸರಾಸರಿಗಿಂತ 326.6. ರೂ. ಗಿಂತಲೂ ಕಡಿಮೆಯಾಗಿದೆ.

ಇದನ್ನೂ ಓದಿ: ‘ಅಂಬೇಡ್ಕರ್ ಆ ಕಾಲದಲ್ಲಿ ಸಂವಿಧಾನ ಬರ್ದಿದ್ಕೋ, ನಮ್ಮಪ್ಪಾಮ್ಮ ಸ್ಕೂಲಿಗೆ ಕಳ್ಸಿದ್ಕೊ, ಇಷ್ಟೆಲ್ಲಾ ಜಗತ್ತು ತಿಳ್ಕೋಣಕ್ಕಾಯ್ತು’

ಗ್ರಾಮೀಣ ಪುರುಷ ಕಟ್ಟಡ ಕಾರ್ಮಿಕ ಕೂಲಿ ವಿಷಯದಲ್ಲಿ ಗುಜರಾತ್ ಮತ್ತು ಮಧ್ಯಪ್ರದೇಶವು ರಾಷ್ಟ್ರೀಯ ಸರಾಸರಿ ರೂ 373.3 ಕ್ಕಿಂತ ಕಡಿಮೆ ಕೂಲಿಯನ್ನು ನೀಡುತ್ತದೆ. ಗುಜರಾತ್ ಗ್ರಾಮೀಣ ಕಟ್ಟಡ ಕಾರ್ಮಿಕರು ಸರಾಸರಿ 295.9 ರೂ. ಇದ್ದರೆ, ಮಧ್ಯಪ್ರದೇಶ 266.7 ರೂ. ಮತ್ತು ತ್ರಿಪುರಾ 250 ರೂ. ನೀಡುತ್ತದೆ.

ಆರ್‌ಬಿಐ ಅಂಕಿಅಂಶಗಳ ಪ್ರಕಾರ ಗ್ರಾಮೀಣ ಕಟ್ಟಡ ಕಾರ್ಮಿಕರಿಗೆ ಕೇರಳದಲ್ಲಿ 837.7 ರೂ. ಕೂಲಿ ನೀಡಿದರೆ, ಜಮ್ಮು ಕಾಶ್ಮೀರದಲ್ಲಿ 519.8 ರೂ., ತಮಿಳುನಾಡಿನಲ್ಲಿ 478.6 ರೂ. ಮತ್ತು ಹಿಮಾಚಲ ಪ್ರದೇಶದಲ್ಲಿ 462.7 ರೂ. ನೀಡಲಾಗುತ್ತದೆ.

ಕರ್ನಾಟಕದಲ್ಲಿ ಕಟ್ಟಡ ಕಾರ್ಮಿಕರಿಗೆ ಸರಾಸರಿ 383.5 ರೂ. ಕೂಲಿ ನೀಡಲಾಗುತ್ತಿದ್ದು, ಇದು ರಾಷ್ಟ್ರೀಯ ಸರಾಸರಿ ಕೂಲಿಗಿಂತ ತುಸುವೆ ಹೆಚ್ಚಾಗಿದೆ.

ಇದನ್ನೂ ಓದಿ: ದೌರ್ಜನ್ಯ ಶೋಷಣೆಗಳ ಸುಗ್ಗಿ! ಕಬ್ಬು ಕಟಾವು ಕೂಲಿಗಾರರ ಜೀತವಿಮುಕ್ತಿಯೆಂದು?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮ್ಯೂಸಿಕ್ ಮೈಲಾರಿ ಮೇಲೆ ಪೋಕ್ಸೋ ಪ್ರಕರಣ ದಾಖಲು 

ಬೆಂಗಳೂರು: ಉತ್ತರ ಕರ್ನಾಟಕದ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎಂದೇ ಖ್ಯಾತಿ ಪಡೆದಿದ್ದ ‘ಮ್ಯೂಸಿಕ್ ಮೈಲಾರಿ’ಎಂಬಾತನನ್ನು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಲಾರಿ...

ಇಂಧನ ಖರೀದಿಗೆ ‘ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ’ ಕಡ್ಡಾಯಗೊಳಿಸಿದ ದೆಹಲಿ ಸರ್ಕಾರ

ರಾಷ್ಟ್ರ ರಾಜಧಾನಿ ದೆಹಲಿಯ ವಾಹನ ಮಾಲೀಕರು ಕಟ್ಟುನಿಟ್ಟಾದ ಆದೇಶ ಎದುರಿಸುತ್ತಾರೆ. ಡಿಸೆಂಬರ್ 18 ರಿಂದ ನಗರದಾದ್ಯಂತದ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಖರೀದಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ಕಡ್ಡಾಯಗೊಳಿಸಲಾಗಿದೆ. ದೆಹಲಿ ಪರಿಸರ ಸಚಿವ ಮಂಜಿಂದರ್...

ವೈದ್ಯೆಯ ಹಿಜಾಬ್ ಎಳೆದ ಬಿಹಾರ ಸಿಎಂ, ಅವಹೇಳನ ಮಾಡಿದ ಯುಪಿ ಸಚಿವನ ವಿರುದ್ದ ದೂರು ದಾಖಲು

ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಈ ಘಟನೆಯ ಕುರಿತು ಮಾತನಾಡುವಾಗ ಮಹಿಳೆಯನ್ನು ಅವಮಾನಿಸಿದ ಉತ್ತರ ಪ್ರದೇಶದ ಸಂಪುಟ ಸಚಿವ ಸಂಜಯ್ ನಿಶಾದ್ ವಿರುದ್ದ ಲಕ್ನೋದ ಕೈಸರ್‌ಬಾಗ್ ಪೊಲೀಸ್...

1 ಲಕ್ಷ ರೂಪಾಯಿ ಸಾಲ 74 ಲಕ್ಷ ರೂಪಾಯಿಗೆ ಏರಿಕೆ, ಸಾಲ ತೀರಿಸಲು ಕಿಡ್ನಿ ಮಾರಿದ ರೈತ 

ಅಕ್ರಮವಾಗಿ ಸಾಲ ನೀಡುವವರಿಂದ 1 ಲಕ್ಷ ಸಾಲ ಪಡೆದಿದ್ದು, ಅದಕ್ಕೆ ಹೆಚ್ಚಿನ ದಿನದ ಬಡ್ಡಿ ಸೇರಿ 75 ಲಕ್ಷ ಸಾಲ ಏರಿಕೆಯಾದ ಕಾರಣ ವ್ಯಕ್ತಿಯೊಬ್ಬ ತನ್ನ ಕಿಡ್ನಿಯನ್ನೇ ಮಾರಾಟ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ...