Homeಮುಖಪುಟಕಾರ್ಮಿಕರಿಗೆ ಕೂಲಿ | ಕೇರಳ, ಜಮ್ಮುಕಾಶ್ಮೀರ ಟಾಪ್‌‌; ಗುಜರಾತ್‌, ಮಧ್ಯಪ್ರದೇಶ ಅತ್ಯಂತ ಕಡಿಮೆ - RBI...

ಕಾರ್ಮಿಕರಿಗೆ ಕೂಲಿ | ಕೇರಳ, ಜಮ್ಮುಕಾಶ್ಮೀರ ಟಾಪ್‌‌; ಗುಜರಾತ್‌, ಮಧ್ಯಪ್ರದೇಶ ಅತ್ಯಂತ ಕಡಿಮೆ – RBI ವರದಿ

- Advertisement -
- Advertisement -

ಹಣದುಬ್ಬರ ಮತ್ತು ಬಡ್ಡಿದರಗಳು ಹೆಚ್ಚಾಗುತ್ತಿರುವ ವೇಳೆಯಲ್ಲಿ ಗುಜರಾತ್ ಮತ್ತು ಮಧ್ಯಪ್ರದೇಶ ರಾಜ್ಯಗಳಲ್ಲಿನ ಕೃಷಿ ಕಾರ್ಮಿಕರು ದೇಶದಲ್ಲೆ ಅತ್ಯಂತ ಕಡಿಮೆ ದೈನಂದಿನ ಕೂಲಿ ಪಡೆಯುತ್ತಾರೆ ಹಾಗೂ ಕೇರಳ ಮತ್ತು ಜಮ್ಮು ಕಾಶ್ಮೀರದ ಕೃಷಿ ಕಾರ್ಮಿಕರು ಅತ್ಯಂತ ಹೆಚ್ಚಿನ ದೈನಂದಿನ ಕೂಲಿ ಪಡೆಯುತ್ತಾರೆ ಎಂದು ಭಾರತೀಯ ರಿಸರ್ವ್ ಬ್ಯಾಂಕ್ (ಆರ್‌‌ಬಿಐ) ವರದಿ ಹೇಳಿದೆ.

ಮಾರ್ಚ್ 2022 ಕ್ಕೆ ಕೊನೆಗೊಂಡ ವರ್ಷದಲ್ಲಿ ಆರ್‌‌ಬಿಐ ಸಂಗ್ರಹಿಸಿದ ಅಂಕಿಅಂಶಗಳ ಪ್ರಕಾರ, ಮಧ್ಯಪ್ರದೇಶದ ಗ್ರಾಮೀಣ ಪ್ರದೇಶದ ಪುರುಷ ಕೃಷಿ ಕಾರ್ಮಿಕರು ಕೇವಲ 217.8 ರೂ. ದೈನಂದಿನ ಕೂಲಿ ಪಡೆದರೆ, ಗುಜರಾತ್‌ನಲ್ಲಿ ಕೃಷಿ ಕಾರ್ಮಿಕ 220.3 ರೂ. ಪಡೆಯುತ್ತಾನೆ. ಅದಾಗ್ಯೂ ಈ ಎರಡೂ ರಾಜ್ಯಗಳಲ್ಲಿ ನೀಡುವ ದೈನಂದಿನ ಕೂಲಿ ರಾಷ್ಟ್ರೀಯ ಸರಾಸರಿ 323.2 ರೂ.ಗಿಂತ ಕ್ಕಿಂತ ಕಡಿಮೆಯಾಗಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಗುಜರಾತಿನಲ್ಲಿ ಒಬ್ಬ ಗ್ರಾಮೀಣ ಕೃಷಿ ಕಾರ್ಮಿಕನಿಗೆ ತಿಂಗಳಿಗೆ 25 ದಿನ ಕೆಲಸ ಸಿಕ್ಕಿದರೆ, ಅವನ ಮಾಸಿಕ ಸಂಪಾದನೆಯು ತಿಂಗಳಿಗೆ ಸುಮಾರು 5,500 ರೂಪಾಯಿಗಳಷ್ಟಿರುತ್ತದೆ, ಇದು ನಾಲ್ಕೈದು ಜನರಿರುವ ಕುಟುಂಬದ ವೆಚ್ಚವನ್ನು ಪೂರೈಸಲು ಸಾಕಾಗುವುದಿಲ್ಲ. ಆದರೆ ಅತಿ ಹೆಚ್ಚು ವೇತನ ನೀಡುವ ಕೇರಳದ ಗ್ರಾಮೀಣ ಕೃಷಿ ಕಾರ್ಮಿಕರು ತಿಂಗಳಿಗೆ 25 ದಿನಗಳ ಕೆಲಸಕ್ಕೆ ಸರಾಸರಿ 18,170 ರೂ. ಪಡೆಯುತ್ತಾರೆ.

ಇದನ್ನೂ ಓದಿ: ‘ನೀನು ಕೂಲಿ ಕೆಲಸ ಮಾಡಬೇಕು, ಶಾಲೆಯಲ್ಲಿ ಅಡುಗೆಯನ್ನಲ್ಲ’: 6 ತಿಂಗಳಾದರೂ ದಲಿತ ಮಹಿಳೆಗೆ ನಿಲ್ಲದ ಕಿರುಕುಳ

2021-22 ರ ಆರ್ಥಿಕ ವರ್ಷವು ಗ್ರಾಮೀಣ ಆರ್ಥಿಕತೆಗೆ ಕೆಟ್ಟದ್ದಾಗಿ ಪರಿಣಮಿಸಿದ್ದು, ಕೋವಿಡ್ ಸಾಂಕ್ರಾಮಿಕವು ಉದ್ಯೋಗಗಳು ಮತ್ತು ಆದಾಯದ ಮಟ್ಟದ ಮೇಲೆ ಹೊಡೆತ ನೀಡಿದೆ. ಮಧ್ಯಪ್ರದೇಶದಲ್ಲಿ ಕೃಷಿ ಕಾರ್ಮಿಕರ ಮಾಸಿಕ ಕೂಲಿ ಸುಮಾರು 5,445 ರೂ. ಆಗಿದೆ. ಕೃಷಿ ಕಾರ್ಮಿಕರಿಗೆ ಕಡಿಮೆ ಕೂಲಿ ನೀಡುವ ಇತರ ರಾಜ್ಯಗಳಲ್ಲಿ ಉತ್ತರ ಪ್ರದೇಶ ( ಗ್ರಾಮೀಣ ಕೃಷಿ ಕಾರ್ಮಿಕರು ಸರಾಸರಿ ದಿನಗೂಲಿ 270 ರೂ ) ಮಹಾರಾಷ್ಟ್ರ (284.2 ರೂ.) ಒಡಿಶಾ (269.5 ರೂ.) ಸೇರಿದೆ.

ಪ್ರತಿ ಕೃಷಿ ಕಾರ್ಮಿಕರಿಗೆ ಸರಾಸರಿ 726.8 ರೂ. ಕೂಲಿ ನೀಡುವುದರೊಂದಿಗೆ ಹೆಚ್ಚು ವೇತನ ನೀಡುವ ರಾಜ್ಯಗಳ ಪಟ್ಟಿಯಲ್ಲಿ ಕೇರಳ ಅಗ್ರ ಸ್ಥಾನದಲ್ಲಿದೆ. ಕೇರಳದಲ್ಲಿನ ಹೆಚ್ಚಿನ ಕೂಲಿ ಇತರ ಕಳಪೆ ವೇತನ ನೀಡುವ ರಾಜ್ಯಗಳ ಕೃಷಿ ಕಾರ್ಮಿಕರನ್ನು ಆಕರ್ಷಿಸಿದ್ದು, ಹೀಗಾಗಿ ಸುಮಾರು 25 ಲಕ್ಷ ವಲಸೆ ಕಾರ್ಮಿಕರು ರಾಜ್ಯದಲ್ಲಿ ವಾಸಿಸುತ್ತಿದ್ದಾರೆ ಎಂದು ವರದಿಯಾಗಿದೆ.

ಜಮ್ಮು ಕಾಶ್ಮೀರದಲ್ಲಿ, ಕೃಷಿ ಕಾರ್ಮಿಕರು ಪ್ರತಿ ವ್ಯಕ್ತಿಗೆ ಸರಾಸರಿ 524.6 ರೂ., ಹಿಮಾಚಲ ಪ್ರದೇಶ 457.6 ರೂ. ಮತ್ತು ತಮಿಳುನಾಡು 445.6 ರೂ. ಕೂಲಿ ಪಡೆಯುತ್ತಾರೆ.

ಕರ್ನಾಟಕದಲ್ಲಿ ಕೃಷಿ ಕೂಲಿ ಕಾರ್ಮಿಕರಿಗೆ ಸರಾಸರಿ 335.5 ರೂ. ಸಿಗುತ್ತದೆ ಎಂದು ಅಂಕಿ-ಅಂಶ ಹೇಳಿದೆ.

ಇದನ್ನೂ ಓದಿ: ದಲಿತ್‌ ಫೈಲ್ಸ್‌‌: ಕೂಲಿ ಕೇಳಿದ ದಲಿತ ಬಾಲಕನಿಗೆ ಹಲ್ಲೆ ನಡೆಸಿ ಪಾದ ನೆಕ್ಕಿಸಿದ ದುಷ್ಕರ್ಮಿಗಳು

ಆರ್‌ಬಿಐ ಅಂಕಿಅಂಶಗಳ ಪ್ರಕಾರ, ಕೃಷಿಯೇತರ ಪುರುಷ ಕಾರ್ಮಿಕರ ಕೂಲಿ ನೀಡುವ ವಿಚಾರದಲ್ಲಿ, ಮಧ್ಯಪ್ರದೇಶ ಕಡಿಮೆ ವೇತನ ನೀಡುತ್ತಿದ್ದು, ಅಲ್ಲಿ ಸರಾಸರಿ 230.3 ರೂ. ರಷ್ಟಿದ್ದರೆ, ಗುಜರಾತ್ ಕಾರ್ಮಿಕರು 252.5 ರೂ. ಮತ್ತು ತ್ರಿಪುರಾದಲ್ಲಿ 250 ರೂ. ದೈನಂದಿನ ವೇತನವನ್ನು ನೀಡಲಾಗುತ್ತದೆ. ಇವೆಲ್ಲವೂ ರಾಷ್ಟ್ರೀಯ ಸರಾಸರಿಗಿಂತ 326.6. ರೂ. ಗಿಂತಲೂ ಕಡಿಮೆಯಾಗಿದೆ.

ಮತ್ತೊಂದೆಡೆ, ಕೇರಳವು ಕೃಷಿಯೇತರ ಕಾರ್ಮಿಕರ ಕೂಲಿಯ ವಿಚಾರದಲ್ಲಿ ಕೂಡಾ ಮುಂಚೂಣಿಯಲ್ಲಿದ್ದು, ಅಲ್ಲಿ ಪ್ರತಿ ವ್ಯಕ್ತಿಗೆ 681.8 ರೂ. ಕೂಲಿ ನೀಡುತ್ತಾರೆ. ಇದರ ನಂತರ ನಂತರ ಜಮ್ಮುಕಾಶ್ಮೀರ 500.8 ರೂ., ತಮಿಳುನಾಡು 462.3 ರೂ. ಮತ್ತು ಹರಿಯಾಣ 409.3 ರೂ. ಕೂಲಿ ನೀಡುತ್ತದೆ.

ಕರ್ನಾಟಕವು ಕೃಷಿಯೇತರ ಕೂಲಿ ಕಾರ್ಮಿಕರಿಗೆ 297.9 ರೂ. ಸರಾಸರಿ ಕೂಲಿ ನೀಡುತ್ತದೆ. ಇದು ರಾಷ್ಟ್ರೀಯ ಸರಾಸರಿಗಿಂತ 326.6. ರೂ. ಗಿಂತಲೂ ಕಡಿಮೆಯಾಗಿದೆ.

ಇದನ್ನೂ ಓದಿ: ‘ಅಂಬೇಡ್ಕರ್ ಆ ಕಾಲದಲ್ಲಿ ಸಂವಿಧಾನ ಬರ್ದಿದ್ಕೋ, ನಮ್ಮಪ್ಪಾಮ್ಮ ಸ್ಕೂಲಿಗೆ ಕಳ್ಸಿದ್ಕೊ, ಇಷ್ಟೆಲ್ಲಾ ಜಗತ್ತು ತಿಳ್ಕೋಣಕ್ಕಾಯ್ತು’

ಗ್ರಾಮೀಣ ಪುರುಷ ಕಟ್ಟಡ ಕಾರ್ಮಿಕ ಕೂಲಿ ವಿಷಯದಲ್ಲಿ ಗುಜರಾತ್ ಮತ್ತು ಮಧ್ಯಪ್ರದೇಶವು ರಾಷ್ಟ್ರೀಯ ಸರಾಸರಿ ರೂ 373.3 ಕ್ಕಿಂತ ಕಡಿಮೆ ಕೂಲಿಯನ್ನು ನೀಡುತ್ತದೆ. ಗುಜರಾತ್ ಗ್ರಾಮೀಣ ಕಟ್ಟಡ ಕಾರ್ಮಿಕರು ಸರಾಸರಿ 295.9 ರೂ. ಇದ್ದರೆ, ಮಧ್ಯಪ್ರದೇಶ 266.7 ರೂ. ಮತ್ತು ತ್ರಿಪುರಾ 250 ರೂ. ನೀಡುತ್ತದೆ.

ಆರ್‌ಬಿಐ ಅಂಕಿಅಂಶಗಳ ಪ್ರಕಾರ ಗ್ರಾಮೀಣ ಕಟ್ಟಡ ಕಾರ್ಮಿಕರಿಗೆ ಕೇರಳದಲ್ಲಿ 837.7 ರೂ. ಕೂಲಿ ನೀಡಿದರೆ, ಜಮ್ಮು ಕಾಶ್ಮೀರದಲ್ಲಿ 519.8 ರೂ., ತಮಿಳುನಾಡಿನಲ್ಲಿ 478.6 ರೂ. ಮತ್ತು ಹಿಮಾಚಲ ಪ್ರದೇಶದಲ್ಲಿ 462.7 ರೂ. ನೀಡಲಾಗುತ್ತದೆ.

ಕರ್ನಾಟಕದಲ್ಲಿ ಕಟ್ಟಡ ಕಾರ್ಮಿಕರಿಗೆ ಸರಾಸರಿ 383.5 ರೂ. ಕೂಲಿ ನೀಡಲಾಗುತ್ತಿದ್ದು, ಇದು ರಾಷ್ಟ್ರೀಯ ಸರಾಸರಿ ಕೂಲಿಗಿಂತ ತುಸುವೆ ಹೆಚ್ಚಾಗಿದೆ.

ಇದನ್ನೂ ಓದಿ: ದೌರ್ಜನ್ಯ ಶೋಷಣೆಗಳ ಸುಗ್ಗಿ! ಕಬ್ಬು ಕಟಾವು ಕೂಲಿಗಾರರ ಜೀತವಿಮುಕ್ತಿಯೆಂದು?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಗುಜರಾತ್‌: 34 ಜಿಲ್ಲೆಗಳ ಪೈಕಿ 20 ಜಿಲ್ಲೆಗಳಲ್ಲಿ 2 ಲಕ್ಷಕ್ಕೂ ಹೆಚ್ಚು ಮಕ್ಕಳು ಅಪೌಷ್ಟಿಕತೆಯಿಂದ ಬಳಲುತ್ತಿದ್ದಾರೆ: ವಿಧಾನಸಭೆಗೆ ಮಾಹಿತಿ ನೀಡಿದ ಸರ್ಕಾರ

ಗಾಂಧಿನಗರ: ರಾಜ್ಯದ 34 ಜಿಲ್ಲೆಗಳ ಪೈಕಿ 20 ಜಿಲ್ಲೆಗಳಲ್ಲಿ 2 ಲಕ್ಷಕ್ಕೂ ಹೆಚ್ಚು ಮಕ್ಕಳು ಅಪೌಷ್ಟಿಕತೆಯಿಂದ ಬಳಲುತ್ತಿದ್ದಾರೆ ಮತ್ತು ಪರಿಸ್ಥಿತಿಯನ್ನು ಸುಧಾರಿಸಲು ವಿವಿಧ ಕ್ರಮಗಳನ್ನು ತೆಗೆದುಕೊಳ್ಳಲಾಗುತ್ತಿದೆ ಎಂದು ಗುಜರಾತ್ ಸರ್ಕಾರ ಶನಿವಾರ ವಿಧಾನಸಭೆಗೆ...

‘ಉತ್ತರ ಕರ್ನಾಟಕದ ಪ್ರಾದೇಶಿಕ ಅಸಮಾನತೆ ನಿವಾರಿಸಲು ಸರ್ಕಾರ ಬದ್ಧ’: ಮುಖ್ಯಮಂತ್ರಿ ಸಿದ್ದರಾಮಯ್ಯ

ಬಾಗಲಕೋಟೆ: ಉತ್ತರ ಕರ್ನಾಟಕದ ಪ್ರಾದೇಶಿಕ ಅಸಮಾನತೆಯನ್ನು ನಿವಾರಿಸಲು ಸರ್ಕಾರ ಬದ್ಧವಾಗಿದ್ದು, ಕಾಂಗ್ರೆಸ್ ಸರ್ಕಾರ ನುಡಿದಂತೆ ನಡೆಯುವ ಜನರ ಸರ್ಕಾರ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರತಿಪಾದಿಸಿದರು.  ಮಾರ್ಚ್ 14ರಂದು, ಬಾಗಲಕೋಟೆ ವೈದ್ಯಕೀಯ ಮಹಾವಿದ್ಯಾಲಯ ಹಾಗೂ ಸಂಶೋಧನಾ...

ಮಣಿಪುರ ಹಿಂಸಾಚಾರ: ಕಾಮ್ಜಾಂಗ್‌ನಲ್ಲಿ ಇಬ್ಬರು ಕುಕಿ ಪುರುಷರು ಶವವಾಗಿ ಪತ್ತೆ; ಹೆಚ್ಚಿದ ಉದ್ವಿಗ್ನತೆ 

ಮಣಿಪುರದ ಕಾಮ್ಜಾಂಗ್ ಜಿಲ್ಲೆಯಲ್ಲಿ ಬುಧವಾರದಿಂದ ನಾಪತ್ತೆಯಾಗಿದ್ದ ಇಬ್ಬರು ಕುಕಿ ಪುರುಷರು ಗುರುವಾರ ಥವಾಯ್ ಕುಕಿ ಗ್ರಾಮದ ಅರಣ್ಯ ಪ್ರದೇಶದಲ್ಲಿ ಶವವಾಗಿ ಪತ್ತೆಯಾಗಿದ್ದರಿಂದ ಉದ್ವಿಗ್ನತೆ ಹೆಚ್ಚಾಗಿದೆ. ಜಿಲ್ಲೆಯ ಥಾವಾಯಿ ಕುಕಿ ಗ್ರಾಮದ 42 ವರ್ಷದ ಥೇಂಗಿನ್...

ಉತ್ತರ ಪ್ರದೇಶ | ಮುಸ್ಲಿಮರೊಂದಿಗಿನ ಶಾಂತಿ ಸಭೆಯಲ್ಲಿ ‘ಇರಾನ್‌ಗೆ ಹೋಗಿ’ ಎಂದ ಪೊಲೀಸ್‌ ಅಧಿಕಾರಿ : ತೀವ್ರ ಆಕ್ರೋಶ

ಉತ್ತರ ಪ್ರದೇಶದಲ್ಲಿ ಈದುಲ್ ಫಿತರ್ (ರಂಝಾನ್) ಹಬ್ಬಕ್ಕೆ ಪೂರ್ವಭಾವಿಯಾಗಿ ನಡೆದ ಶಾಂತಿ ಸಭೆಯಲ್ಲಿ ಪೊಲೀಸ್ ಅಧಿಕಾರಿಯೊಬ್ಬರು ನೀಡಿದ ಹೇಳಿಕೆ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಸಂಭಾಲ್ ಜಿಲ್ಲೆಯ ಅಸ್ಮೋಲಿ ಪ್ರದೇಶದಲ್ಲಿ ರಂಝಾನ್ ತಿಂಗಳ ಕೊನೆಯ...

ಪಶ್ಚಿಮ ಏಷ್ಯಾ ಸಂಘರ್ಷ: ಲೆಬನಾನ್‌ನಲ್ಲಿ ಆರೋಗ್ಯ ಕೇಂದ್ರದ ಮೇಲೆ ಇಸ್ರೇಲ್ ದಾಳಿ: ವೈದ್ಯರು, ದಾದಿಯರು ಸೇರಿ 12 ಮಂದಿ ಸಾವು

ದಕ್ಷಿಣ ಲೆಬನಾನ್‌ನಲ್ಲಿರುವ ಆರೋಗ್ಯ ಕೇಂದ್ರದ ಮೇಲೆ ಇಸ್ರೇಲ್ ನಡೆಸಿದ ದಾಳಿಯಲ್ಲಿ 12 ವೈದ್ಯಕೀಯ ಕಾರ್ಯಕರ್ತರು ಸಾವನ್ನಪ್ಪಿದ್ದಾರೆ ಎಂದು ಲೆಬನಾನಿನ ಸಾರ್ವಜನಿಕ ಆರೋಗ್ಯ ಸಚಿವಾಲಯ ವರದಿ ಮಾಡಿದೆ.  ಲೆಬನಾನ್‌ನಾದ್ಯಂತ ಇಸ್ರೇಲಿ ದಾಳಿಯಲ್ಲಿ ಈವರೆಗೂ 103 ಮಕ್ಕಳು...

ವಿಶೇಷ ಸಚಿವ ಸಂಪುಟ ಸಭೆಯಲ್ಲಿ ಒಳಮೀಸಲಾತಿ ಪರ ತೀರ್ಮಾನಕ್ಕೆ ಎಲ್ಲರೂ ಸಹಕರಿಸಿ: ಒಳಮೀಸಲಾತಿ ಹೋರಾಟ ಸಮಿತಿ ಮನವಿ

ಬೆಂಗಳೂರು: ಒಳಮೀಸಲಾತಿ ಜಾರಿ ಮಾಡುವ ಪ್ರಕ್ರಿಯೆಯು ಕೊನೆಯ ಹಂತಕ್ಕೆ ತಲುಪಿದ್ದು, ಇದನ್ನು ಸುಲಲಿತವಾಗಿ ಬಗೆಹರಿಸಿ ಸಾಮಾಜಿಕ ನ್ಯಾಯವನ್ನು ಎತ್ತಿಹಿಡಿಯಲು ಆಗ್ರಹಿಸಿ ಇಂದು (14 ಮಾರ್ಚ್)‌ ನಗರದ ಪ್ರೆಸ್‌ ಕ್ಲಬ್‌ನಲ್ಲಿ ಒಳಮೀಸಲಾತಿ ಹೋರಾಟಗಾರರು...

ಕರ್ನಾಟಕ ಕೇಂದ್ರೀಯ ವಿಶ್ವವಿದ್ಯಾಲಯದಲ್ಲಿ ಅಕ್ರಮ ನೇಮಕಾತಿ; ರೋಸ್ಟರ್ ಮೀಸಲು ಕ್ರಮ ಉಲ್ಲಂಘನೆ ಆರೋಪ: ನ್ಯಾಯಾಂಗ ತನಿಖೆಗೆ ಆಗ್ರಹ

ಕಲಬುರಗಿ: ಕಲಬುರಗಿ ಜಿಲ್ಲೆಯಲ್ಲಿರುವ Central University of Karnataka ದಲ್ಲಿ ಬೋಧಕ ಹುದ್ದೆಗಳ ನೇಮಕಾತಿಯಲ್ಲಿ ಮೀಸಲು ಕ್ರಮ ಉಲ್ಲಂಘನೆ ಹಾಗೂ ಅಕ್ರಮ ನೇಮಕಾತಿಗಳು ನಡೆದಿವೆ ಎಂಬ ಆರೋಪಗಳ ಹಿನ್ನೆಲೆಯಲ್ಲಿ ಹಾಲಿ ನ್ಯಾಯಾಧೀಶರ ನೇತೃತ್ವದಲ್ಲಿ...

ಸಂಭಾಲ್ | ಮಸೀದಿಯಲ್ಲಿ ನಮಾಝ್ ಮಾಡುವವರ ಸಂಖ್ಯೆ ಮಿತಿಗೊಳಿಸಲು ಸಾಧ್ಯವಿಲ್ಲ; ಕಾನೂನು ಸುವ್ಯವಸ್ಥೆ ಕಾಪಾಡಲು ಆಗದಿದ್ದರೆ ರಾಜೀನಾಮೆ ನೀಡಿ: ಅಧಿಕಾರಿಗಳಿಗೆ ಅಲಹಾಬಾದ್ ಹೈಕೋರ್ಟ್ ತರಾಟೆ

ಸಂಭಾಲ್ ಜಿಲ್ಲೆಯ ಮಸೀದಿಯೊಂದರಲ್ಲಿ ರಂಝಾನ್ ಸಮಯದಲ್ಲಿ ನಮಾಝ್ ಮಾಡುವವರ ಸಂಖ್ಯೆಯನ್ನು ಮಿತಿಗೊಳಿಸುವ ಉತ್ತರ ಪ್ರದೇಶ ಸರ್ಕಾರದ ನಿರ್ಧಾರವನ್ನು ಅಲಹಾಬಾದ್ ಹೈಕೋರ್ಟ್ ತಿರಸ್ಕರಿಸಿದೆ. ಕಾನೂನು ಸುವ್ಯವಸ್ಥೆ ಕಾಪಾಡುವುದು ಸರ್ಕಾರದ ಜವಾಬ್ದಾರಿ ಎಂದಿದೆ. ಫೆಬ್ರವರಿ 27ರಂದು...

ಇರಾನ್ ‘ಭಯೋತ್ಪಾದಕ ಆಡಳಿತ’ ಎಂದು ಕರೆದ NDTV ಹಿರಿಯ ಸಂಪಾದಕ: ವ್ಯಾಪಕ ಟೀಕೆಯ ನಂತರ ಪೋಸ್ಟ್ ಡಿಲಿಟ್ 

ಹೊಸದಿಲ್ಲಿ: ಅಮೆರಿಕ-ಇಸ್ರೇಲ್ ಮತ್ತು ಇರಾನ್ ನಡುವೆ ನಡೆಯುತ್ತಿರುವ ಯುದ್ಧದಿಂದಾಗಿ ಮಧ್ಯಪ್ರಾಚ್ಯದಲ್ಲಿ ಉದ್ವಿಗ್ನತೆ ಹೆಚ್ಚುತ್ತಿರುವ ಸಂದರ್ಭದಲ್ಲಿ ಭಾರತದ ಮುಖ್ಯ ಮಾಧ್ಯಮ ಸಂಸ್ಥೆ NDTV ಹಿರಿಯ ಸಂಪಾದಕ ಆದಿತ್ಯ ರಾಜ್ ಕೌಲ್ ಅವರು ಇರಾನ್ “ಭಯೋತ್ಪಾದಕ...

ಎಲ್‌ಪಿಜಿ ಬಿಕ್ಕಟ್ಟು: ಹೋಟೆಲ್ ಮಾಲೀಕರಿಗೆ ವಿದ್ಯುತ್ ಒಲೆಗಳನ್ನು ಬಳಸಲು ಸೂಚಿಸಿದ ಸಚಿವ ಕೆ.ಎಚ್. ​​ಮುನಿಯಪ್ಪ

ಬೆಂಗಳೂರು: ಪಶ್ಚಿಮ ಏಷ್ಯಾ ಸಂಘರ್ಷದ ಪ್ರಭಾವ ಭಾರತೀಯರ ಅಡುಗೆ ಮನೆಯನ್ನು ಪ್ರವೇಶಿಸಿದ್ದು, ಎಲ್‌ಪಿಜಿ  ಬಿಕ್ಕಟ್ಟಿನಿಂದ ನಾಗರೀಕರು, ಸೇರಿದಂತೆ ಹೋಟೆಲ್ ಉಧ್ಯಮ ತೀವ್ರ ಸಂಕಷ್ಟಕ್ಕೆ ಸಿಲುಕಿವೆ. ಈ ನಡುವೆ ಯುದ್ಧದ ಪರಿಣಾಮ ಭಾರತದ ಮೇಲೆ...