Homeಮುಖಪುಟಕಾರ್ಮಿಕರಿಗೆ ಕೂಲಿ | ಕೇರಳ, ಜಮ್ಮುಕಾಶ್ಮೀರ ಟಾಪ್‌‌; ಗುಜರಾತ್‌, ಮಧ್ಯಪ್ರದೇಶ ಅತ್ಯಂತ ಕಡಿಮೆ - RBI...

ಕಾರ್ಮಿಕರಿಗೆ ಕೂಲಿ | ಕೇರಳ, ಜಮ್ಮುಕಾಶ್ಮೀರ ಟಾಪ್‌‌; ಗುಜರಾತ್‌, ಮಧ್ಯಪ್ರದೇಶ ಅತ್ಯಂತ ಕಡಿಮೆ – RBI ವರದಿ

- Advertisement -
- Advertisement -

ಹಣದುಬ್ಬರ ಮತ್ತು ಬಡ್ಡಿದರಗಳು ಹೆಚ್ಚಾಗುತ್ತಿರುವ ವೇಳೆಯಲ್ಲಿ ಗುಜರಾತ್ ಮತ್ತು ಮಧ್ಯಪ್ರದೇಶ ರಾಜ್ಯಗಳಲ್ಲಿನ ಕೃಷಿ ಕಾರ್ಮಿಕರು ದೇಶದಲ್ಲೆ ಅತ್ಯಂತ ಕಡಿಮೆ ದೈನಂದಿನ ಕೂಲಿ ಪಡೆಯುತ್ತಾರೆ ಹಾಗೂ ಕೇರಳ ಮತ್ತು ಜಮ್ಮು ಕಾಶ್ಮೀರದ ಕೃಷಿ ಕಾರ್ಮಿಕರು ಅತ್ಯಂತ ಹೆಚ್ಚಿನ ದೈನಂದಿನ ಕೂಲಿ ಪಡೆಯುತ್ತಾರೆ ಎಂದು ಭಾರತೀಯ ರಿಸರ್ವ್ ಬ್ಯಾಂಕ್ (ಆರ್‌‌ಬಿಐ) ವರದಿ ಹೇಳಿದೆ.

ಮಾರ್ಚ್ 2022 ಕ್ಕೆ ಕೊನೆಗೊಂಡ ವರ್ಷದಲ್ಲಿ ಆರ್‌‌ಬಿಐ ಸಂಗ್ರಹಿಸಿದ ಅಂಕಿಅಂಶಗಳ ಪ್ರಕಾರ, ಮಧ್ಯಪ್ರದೇಶದ ಗ್ರಾಮೀಣ ಪ್ರದೇಶದ ಪುರುಷ ಕೃಷಿ ಕಾರ್ಮಿಕರು ಕೇವಲ 217.8 ರೂ. ದೈನಂದಿನ ಕೂಲಿ ಪಡೆದರೆ, ಗುಜರಾತ್‌ನಲ್ಲಿ ಕೃಷಿ ಕಾರ್ಮಿಕ 220.3 ರೂ. ಪಡೆಯುತ್ತಾನೆ. ಅದಾಗ್ಯೂ ಈ ಎರಡೂ ರಾಜ್ಯಗಳಲ್ಲಿ ನೀಡುವ ದೈನಂದಿನ ಕೂಲಿ ರಾಷ್ಟ್ರೀಯ ಸರಾಸರಿ 323.2 ರೂ.ಗಿಂತ ಕ್ಕಿಂತ ಕಡಿಮೆಯಾಗಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಗುಜರಾತಿನಲ್ಲಿ ಒಬ್ಬ ಗ್ರಾಮೀಣ ಕೃಷಿ ಕಾರ್ಮಿಕನಿಗೆ ತಿಂಗಳಿಗೆ 25 ದಿನ ಕೆಲಸ ಸಿಕ್ಕಿದರೆ, ಅವನ ಮಾಸಿಕ ಸಂಪಾದನೆಯು ತಿಂಗಳಿಗೆ ಸುಮಾರು 5,500 ರೂಪಾಯಿಗಳಷ್ಟಿರುತ್ತದೆ, ಇದು ನಾಲ್ಕೈದು ಜನರಿರುವ ಕುಟುಂಬದ ವೆಚ್ಚವನ್ನು ಪೂರೈಸಲು ಸಾಕಾಗುವುದಿಲ್ಲ. ಆದರೆ ಅತಿ ಹೆಚ್ಚು ವೇತನ ನೀಡುವ ಕೇರಳದ ಗ್ರಾಮೀಣ ಕೃಷಿ ಕಾರ್ಮಿಕರು ತಿಂಗಳಿಗೆ 25 ದಿನಗಳ ಕೆಲಸಕ್ಕೆ ಸರಾಸರಿ 18,170 ರೂ. ಪಡೆಯುತ್ತಾರೆ.

ಇದನ್ನೂ ಓದಿ: ‘ನೀನು ಕೂಲಿ ಕೆಲಸ ಮಾಡಬೇಕು, ಶಾಲೆಯಲ್ಲಿ ಅಡುಗೆಯನ್ನಲ್ಲ’: 6 ತಿಂಗಳಾದರೂ ದಲಿತ ಮಹಿಳೆಗೆ ನಿಲ್ಲದ ಕಿರುಕುಳ

2021-22 ರ ಆರ್ಥಿಕ ವರ್ಷವು ಗ್ರಾಮೀಣ ಆರ್ಥಿಕತೆಗೆ ಕೆಟ್ಟದ್ದಾಗಿ ಪರಿಣಮಿಸಿದ್ದು, ಕೋವಿಡ್ ಸಾಂಕ್ರಾಮಿಕವು ಉದ್ಯೋಗಗಳು ಮತ್ತು ಆದಾಯದ ಮಟ್ಟದ ಮೇಲೆ ಹೊಡೆತ ನೀಡಿದೆ. ಮಧ್ಯಪ್ರದೇಶದಲ್ಲಿ ಕೃಷಿ ಕಾರ್ಮಿಕರ ಮಾಸಿಕ ಕೂಲಿ ಸುಮಾರು 5,445 ರೂ. ಆಗಿದೆ. ಕೃಷಿ ಕಾರ್ಮಿಕರಿಗೆ ಕಡಿಮೆ ಕೂಲಿ ನೀಡುವ ಇತರ ರಾಜ್ಯಗಳಲ್ಲಿ ಉತ್ತರ ಪ್ರದೇಶ ( ಗ್ರಾಮೀಣ ಕೃಷಿ ಕಾರ್ಮಿಕರು ಸರಾಸರಿ ದಿನಗೂಲಿ 270 ರೂ ) ಮಹಾರಾಷ್ಟ್ರ (284.2 ರೂ.) ಒಡಿಶಾ (269.5 ರೂ.) ಸೇರಿದೆ.

ಪ್ರತಿ ಕೃಷಿ ಕಾರ್ಮಿಕರಿಗೆ ಸರಾಸರಿ 726.8 ರೂ. ಕೂಲಿ ನೀಡುವುದರೊಂದಿಗೆ ಹೆಚ್ಚು ವೇತನ ನೀಡುವ ರಾಜ್ಯಗಳ ಪಟ್ಟಿಯಲ್ಲಿ ಕೇರಳ ಅಗ್ರ ಸ್ಥಾನದಲ್ಲಿದೆ. ಕೇರಳದಲ್ಲಿನ ಹೆಚ್ಚಿನ ಕೂಲಿ ಇತರ ಕಳಪೆ ವೇತನ ನೀಡುವ ರಾಜ್ಯಗಳ ಕೃಷಿ ಕಾರ್ಮಿಕರನ್ನು ಆಕರ್ಷಿಸಿದ್ದು, ಹೀಗಾಗಿ ಸುಮಾರು 25 ಲಕ್ಷ ವಲಸೆ ಕಾರ್ಮಿಕರು ರಾಜ್ಯದಲ್ಲಿ ವಾಸಿಸುತ್ತಿದ್ದಾರೆ ಎಂದು ವರದಿಯಾಗಿದೆ.

ಜಮ್ಮು ಕಾಶ್ಮೀರದಲ್ಲಿ, ಕೃಷಿ ಕಾರ್ಮಿಕರು ಪ್ರತಿ ವ್ಯಕ್ತಿಗೆ ಸರಾಸರಿ 524.6 ರೂ., ಹಿಮಾಚಲ ಪ್ರದೇಶ 457.6 ರೂ. ಮತ್ತು ತಮಿಳುನಾಡು 445.6 ರೂ. ಕೂಲಿ ಪಡೆಯುತ್ತಾರೆ.

ಕರ್ನಾಟಕದಲ್ಲಿ ಕೃಷಿ ಕೂಲಿ ಕಾರ್ಮಿಕರಿಗೆ ಸರಾಸರಿ 335.5 ರೂ. ಸಿಗುತ್ತದೆ ಎಂದು ಅಂಕಿ-ಅಂಶ ಹೇಳಿದೆ.

ಇದನ್ನೂ ಓದಿ: ದಲಿತ್‌ ಫೈಲ್ಸ್‌‌: ಕೂಲಿ ಕೇಳಿದ ದಲಿತ ಬಾಲಕನಿಗೆ ಹಲ್ಲೆ ನಡೆಸಿ ಪಾದ ನೆಕ್ಕಿಸಿದ ದುಷ್ಕರ್ಮಿಗಳು

ಆರ್‌ಬಿಐ ಅಂಕಿಅಂಶಗಳ ಪ್ರಕಾರ, ಕೃಷಿಯೇತರ ಪುರುಷ ಕಾರ್ಮಿಕರ ಕೂಲಿ ನೀಡುವ ವಿಚಾರದಲ್ಲಿ, ಮಧ್ಯಪ್ರದೇಶ ಕಡಿಮೆ ವೇತನ ನೀಡುತ್ತಿದ್ದು, ಅಲ್ಲಿ ಸರಾಸರಿ 230.3 ರೂ. ರಷ್ಟಿದ್ದರೆ, ಗುಜರಾತ್ ಕಾರ್ಮಿಕರು 252.5 ರೂ. ಮತ್ತು ತ್ರಿಪುರಾದಲ್ಲಿ 250 ರೂ. ದೈನಂದಿನ ವೇತನವನ್ನು ನೀಡಲಾಗುತ್ತದೆ. ಇವೆಲ್ಲವೂ ರಾಷ್ಟ್ರೀಯ ಸರಾಸರಿಗಿಂತ 326.6. ರೂ. ಗಿಂತಲೂ ಕಡಿಮೆಯಾಗಿದೆ.

ಮತ್ತೊಂದೆಡೆ, ಕೇರಳವು ಕೃಷಿಯೇತರ ಕಾರ್ಮಿಕರ ಕೂಲಿಯ ವಿಚಾರದಲ್ಲಿ ಕೂಡಾ ಮುಂಚೂಣಿಯಲ್ಲಿದ್ದು, ಅಲ್ಲಿ ಪ್ರತಿ ವ್ಯಕ್ತಿಗೆ 681.8 ರೂ. ಕೂಲಿ ನೀಡುತ್ತಾರೆ. ಇದರ ನಂತರ ನಂತರ ಜಮ್ಮುಕಾಶ್ಮೀರ 500.8 ರೂ., ತಮಿಳುನಾಡು 462.3 ರೂ. ಮತ್ತು ಹರಿಯಾಣ 409.3 ರೂ. ಕೂಲಿ ನೀಡುತ್ತದೆ.

ಕರ್ನಾಟಕವು ಕೃಷಿಯೇತರ ಕೂಲಿ ಕಾರ್ಮಿಕರಿಗೆ 297.9 ರೂ. ಸರಾಸರಿ ಕೂಲಿ ನೀಡುತ್ತದೆ. ಇದು ರಾಷ್ಟ್ರೀಯ ಸರಾಸರಿಗಿಂತ 326.6. ರೂ. ಗಿಂತಲೂ ಕಡಿಮೆಯಾಗಿದೆ.

ಇದನ್ನೂ ಓದಿ: ‘ಅಂಬೇಡ್ಕರ್ ಆ ಕಾಲದಲ್ಲಿ ಸಂವಿಧಾನ ಬರ್ದಿದ್ಕೋ, ನಮ್ಮಪ್ಪಾಮ್ಮ ಸ್ಕೂಲಿಗೆ ಕಳ್ಸಿದ್ಕೊ, ಇಷ್ಟೆಲ್ಲಾ ಜಗತ್ತು ತಿಳ್ಕೋಣಕ್ಕಾಯ್ತು’

ಗ್ರಾಮೀಣ ಪುರುಷ ಕಟ್ಟಡ ಕಾರ್ಮಿಕ ಕೂಲಿ ವಿಷಯದಲ್ಲಿ ಗುಜರಾತ್ ಮತ್ತು ಮಧ್ಯಪ್ರದೇಶವು ರಾಷ್ಟ್ರೀಯ ಸರಾಸರಿ ರೂ 373.3 ಕ್ಕಿಂತ ಕಡಿಮೆ ಕೂಲಿಯನ್ನು ನೀಡುತ್ತದೆ. ಗುಜರಾತ್ ಗ್ರಾಮೀಣ ಕಟ್ಟಡ ಕಾರ್ಮಿಕರು ಸರಾಸರಿ 295.9 ರೂ. ಇದ್ದರೆ, ಮಧ್ಯಪ್ರದೇಶ 266.7 ರೂ. ಮತ್ತು ತ್ರಿಪುರಾ 250 ರೂ. ನೀಡುತ್ತದೆ.

ಆರ್‌ಬಿಐ ಅಂಕಿಅಂಶಗಳ ಪ್ರಕಾರ ಗ್ರಾಮೀಣ ಕಟ್ಟಡ ಕಾರ್ಮಿಕರಿಗೆ ಕೇರಳದಲ್ಲಿ 837.7 ರೂ. ಕೂಲಿ ನೀಡಿದರೆ, ಜಮ್ಮು ಕಾಶ್ಮೀರದಲ್ಲಿ 519.8 ರೂ., ತಮಿಳುನಾಡಿನಲ್ಲಿ 478.6 ರೂ. ಮತ್ತು ಹಿಮಾಚಲ ಪ್ರದೇಶದಲ್ಲಿ 462.7 ರೂ. ನೀಡಲಾಗುತ್ತದೆ.

ಕರ್ನಾಟಕದಲ್ಲಿ ಕಟ್ಟಡ ಕಾರ್ಮಿಕರಿಗೆ ಸರಾಸರಿ 383.5 ರೂ. ಕೂಲಿ ನೀಡಲಾಗುತ್ತಿದ್ದು, ಇದು ರಾಷ್ಟ್ರೀಯ ಸರಾಸರಿ ಕೂಲಿಗಿಂತ ತುಸುವೆ ಹೆಚ್ಚಾಗಿದೆ.

ಇದನ್ನೂ ಓದಿ: ದೌರ್ಜನ್ಯ ಶೋಷಣೆಗಳ ಸುಗ್ಗಿ! ಕಬ್ಬು ಕಟಾವು ಕೂಲಿಗಾರರ ಜೀತವಿಮುಕ್ತಿಯೆಂದು?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...