Homeಮುಖಪುಟಕಾರ್ಮಿಕರಿಗೆ ಕೂಲಿ | ಕೇರಳ, ಜಮ್ಮುಕಾಶ್ಮೀರ ಟಾಪ್‌‌; ಗುಜರಾತ್‌, ಮಧ್ಯಪ್ರದೇಶ ಅತ್ಯಂತ ಕಡಿಮೆ - RBI...

ಕಾರ್ಮಿಕರಿಗೆ ಕೂಲಿ | ಕೇರಳ, ಜಮ್ಮುಕಾಶ್ಮೀರ ಟಾಪ್‌‌; ಗುಜರಾತ್‌, ಮಧ್ಯಪ್ರದೇಶ ಅತ್ಯಂತ ಕಡಿಮೆ – RBI ವರದಿ

- Advertisement -
- Advertisement -

ಹಣದುಬ್ಬರ ಮತ್ತು ಬಡ್ಡಿದರಗಳು ಹೆಚ್ಚಾಗುತ್ತಿರುವ ವೇಳೆಯಲ್ಲಿ ಗುಜರಾತ್ ಮತ್ತು ಮಧ್ಯಪ್ರದೇಶ ರಾಜ್ಯಗಳಲ್ಲಿನ ಕೃಷಿ ಕಾರ್ಮಿಕರು ದೇಶದಲ್ಲೆ ಅತ್ಯಂತ ಕಡಿಮೆ ದೈನಂದಿನ ಕೂಲಿ ಪಡೆಯುತ್ತಾರೆ ಹಾಗೂ ಕೇರಳ ಮತ್ತು ಜಮ್ಮು ಕಾಶ್ಮೀರದ ಕೃಷಿ ಕಾರ್ಮಿಕರು ಅತ್ಯಂತ ಹೆಚ್ಚಿನ ದೈನಂದಿನ ಕೂಲಿ ಪಡೆಯುತ್ತಾರೆ ಎಂದು ಭಾರತೀಯ ರಿಸರ್ವ್ ಬ್ಯಾಂಕ್ (ಆರ್‌‌ಬಿಐ) ವರದಿ ಹೇಳಿದೆ.

ಮಾರ್ಚ್ 2022 ಕ್ಕೆ ಕೊನೆಗೊಂಡ ವರ್ಷದಲ್ಲಿ ಆರ್‌‌ಬಿಐ ಸಂಗ್ರಹಿಸಿದ ಅಂಕಿಅಂಶಗಳ ಪ್ರಕಾರ, ಮಧ್ಯಪ್ರದೇಶದ ಗ್ರಾಮೀಣ ಪ್ರದೇಶದ ಪುರುಷ ಕೃಷಿ ಕಾರ್ಮಿಕರು ಕೇವಲ 217.8 ರೂ. ದೈನಂದಿನ ಕೂಲಿ ಪಡೆದರೆ, ಗುಜರಾತ್‌ನಲ್ಲಿ ಕೃಷಿ ಕಾರ್ಮಿಕ 220.3 ರೂ. ಪಡೆಯುತ್ತಾನೆ. ಅದಾಗ್ಯೂ ಈ ಎರಡೂ ರಾಜ್ಯಗಳಲ್ಲಿ ನೀಡುವ ದೈನಂದಿನ ಕೂಲಿ ರಾಷ್ಟ್ರೀಯ ಸರಾಸರಿ 323.2 ರೂ.ಗಿಂತ ಕ್ಕಿಂತ ಕಡಿಮೆಯಾಗಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಗುಜರಾತಿನಲ್ಲಿ ಒಬ್ಬ ಗ್ರಾಮೀಣ ಕೃಷಿ ಕಾರ್ಮಿಕನಿಗೆ ತಿಂಗಳಿಗೆ 25 ದಿನ ಕೆಲಸ ಸಿಕ್ಕಿದರೆ, ಅವನ ಮಾಸಿಕ ಸಂಪಾದನೆಯು ತಿಂಗಳಿಗೆ ಸುಮಾರು 5,500 ರೂಪಾಯಿಗಳಷ್ಟಿರುತ್ತದೆ, ಇದು ನಾಲ್ಕೈದು ಜನರಿರುವ ಕುಟುಂಬದ ವೆಚ್ಚವನ್ನು ಪೂರೈಸಲು ಸಾಕಾಗುವುದಿಲ್ಲ. ಆದರೆ ಅತಿ ಹೆಚ್ಚು ವೇತನ ನೀಡುವ ಕೇರಳದ ಗ್ರಾಮೀಣ ಕೃಷಿ ಕಾರ್ಮಿಕರು ತಿಂಗಳಿಗೆ 25 ದಿನಗಳ ಕೆಲಸಕ್ಕೆ ಸರಾಸರಿ 18,170 ರೂ. ಪಡೆಯುತ್ತಾರೆ.

ಇದನ್ನೂ ಓದಿ: ‘ನೀನು ಕೂಲಿ ಕೆಲಸ ಮಾಡಬೇಕು, ಶಾಲೆಯಲ್ಲಿ ಅಡುಗೆಯನ್ನಲ್ಲ’: 6 ತಿಂಗಳಾದರೂ ದಲಿತ ಮಹಿಳೆಗೆ ನಿಲ್ಲದ ಕಿರುಕುಳ

2021-22 ರ ಆರ್ಥಿಕ ವರ್ಷವು ಗ್ರಾಮೀಣ ಆರ್ಥಿಕತೆಗೆ ಕೆಟ್ಟದ್ದಾಗಿ ಪರಿಣಮಿಸಿದ್ದು, ಕೋವಿಡ್ ಸಾಂಕ್ರಾಮಿಕವು ಉದ್ಯೋಗಗಳು ಮತ್ತು ಆದಾಯದ ಮಟ್ಟದ ಮೇಲೆ ಹೊಡೆತ ನೀಡಿದೆ. ಮಧ್ಯಪ್ರದೇಶದಲ್ಲಿ ಕೃಷಿ ಕಾರ್ಮಿಕರ ಮಾಸಿಕ ಕೂಲಿ ಸುಮಾರು 5,445 ರೂ. ಆಗಿದೆ. ಕೃಷಿ ಕಾರ್ಮಿಕರಿಗೆ ಕಡಿಮೆ ಕೂಲಿ ನೀಡುವ ಇತರ ರಾಜ್ಯಗಳಲ್ಲಿ ಉತ್ತರ ಪ್ರದೇಶ ( ಗ್ರಾಮೀಣ ಕೃಷಿ ಕಾರ್ಮಿಕರು ಸರಾಸರಿ ದಿನಗೂಲಿ 270 ರೂ ) ಮಹಾರಾಷ್ಟ್ರ (284.2 ರೂ.) ಒಡಿಶಾ (269.5 ರೂ.) ಸೇರಿದೆ.

ಪ್ರತಿ ಕೃಷಿ ಕಾರ್ಮಿಕರಿಗೆ ಸರಾಸರಿ 726.8 ರೂ. ಕೂಲಿ ನೀಡುವುದರೊಂದಿಗೆ ಹೆಚ್ಚು ವೇತನ ನೀಡುವ ರಾಜ್ಯಗಳ ಪಟ್ಟಿಯಲ್ಲಿ ಕೇರಳ ಅಗ್ರ ಸ್ಥಾನದಲ್ಲಿದೆ. ಕೇರಳದಲ್ಲಿನ ಹೆಚ್ಚಿನ ಕೂಲಿ ಇತರ ಕಳಪೆ ವೇತನ ನೀಡುವ ರಾಜ್ಯಗಳ ಕೃಷಿ ಕಾರ್ಮಿಕರನ್ನು ಆಕರ್ಷಿಸಿದ್ದು, ಹೀಗಾಗಿ ಸುಮಾರು 25 ಲಕ್ಷ ವಲಸೆ ಕಾರ್ಮಿಕರು ರಾಜ್ಯದಲ್ಲಿ ವಾಸಿಸುತ್ತಿದ್ದಾರೆ ಎಂದು ವರದಿಯಾಗಿದೆ.

ಜಮ್ಮು ಕಾಶ್ಮೀರದಲ್ಲಿ, ಕೃಷಿ ಕಾರ್ಮಿಕರು ಪ್ರತಿ ವ್ಯಕ್ತಿಗೆ ಸರಾಸರಿ 524.6 ರೂ., ಹಿಮಾಚಲ ಪ್ರದೇಶ 457.6 ರೂ. ಮತ್ತು ತಮಿಳುನಾಡು 445.6 ರೂ. ಕೂಲಿ ಪಡೆಯುತ್ತಾರೆ.

ಕರ್ನಾಟಕದಲ್ಲಿ ಕೃಷಿ ಕೂಲಿ ಕಾರ್ಮಿಕರಿಗೆ ಸರಾಸರಿ 335.5 ರೂ. ಸಿಗುತ್ತದೆ ಎಂದು ಅಂಕಿ-ಅಂಶ ಹೇಳಿದೆ.

ಇದನ್ನೂ ಓದಿ: ದಲಿತ್‌ ಫೈಲ್ಸ್‌‌: ಕೂಲಿ ಕೇಳಿದ ದಲಿತ ಬಾಲಕನಿಗೆ ಹಲ್ಲೆ ನಡೆಸಿ ಪಾದ ನೆಕ್ಕಿಸಿದ ದುಷ್ಕರ್ಮಿಗಳು

ಆರ್‌ಬಿಐ ಅಂಕಿಅಂಶಗಳ ಪ್ರಕಾರ, ಕೃಷಿಯೇತರ ಪುರುಷ ಕಾರ್ಮಿಕರ ಕೂಲಿ ನೀಡುವ ವಿಚಾರದಲ್ಲಿ, ಮಧ್ಯಪ್ರದೇಶ ಕಡಿಮೆ ವೇತನ ನೀಡುತ್ತಿದ್ದು, ಅಲ್ಲಿ ಸರಾಸರಿ 230.3 ರೂ. ರಷ್ಟಿದ್ದರೆ, ಗುಜರಾತ್ ಕಾರ್ಮಿಕರು 252.5 ರೂ. ಮತ್ತು ತ್ರಿಪುರಾದಲ್ಲಿ 250 ರೂ. ದೈನಂದಿನ ವೇತನವನ್ನು ನೀಡಲಾಗುತ್ತದೆ. ಇವೆಲ್ಲವೂ ರಾಷ್ಟ್ರೀಯ ಸರಾಸರಿಗಿಂತ 326.6. ರೂ. ಗಿಂತಲೂ ಕಡಿಮೆಯಾಗಿದೆ.

ಮತ್ತೊಂದೆಡೆ, ಕೇರಳವು ಕೃಷಿಯೇತರ ಕಾರ್ಮಿಕರ ಕೂಲಿಯ ವಿಚಾರದಲ್ಲಿ ಕೂಡಾ ಮುಂಚೂಣಿಯಲ್ಲಿದ್ದು, ಅಲ್ಲಿ ಪ್ರತಿ ವ್ಯಕ್ತಿಗೆ 681.8 ರೂ. ಕೂಲಿ ನೀಡುತ್ತಾರೆ. ಇದರ ನಂತರ ನಂತರ ಜಮ್ಮುಕಾಶ್ಮೀರ 500.8 ರೂ., ತಮಿಳುನಾಡು 462.3 ರೂ. ಮತ್ತು ಹರಿಯಾಣ 409.3 ರೂ. ಕೂಲಿ ನೀಡುತ್ತದೆ.

ಕರ್ನಾಟಕವು ಕೃಷಿಯೇತರ ಕೂಲಿ ಕಾರ್ಮಿಕರಿಗೆ 297.9 ರೂ. ಸರಾಸರಿ ಕೂಲಿ ನೀಡುತ್ತದೆ. ಇದು ರಾಷ್ಟ್ರೀಯ ಸರಾಸರಿಗಿಂತ 326.6. ರೂ. ಗಿಂತಲೂ ಕಡಿಮೆಯಾಗಿದೆ.

ಇದನ್ನೂ ಓದಿ: ‘ಅಂಬೇಡ್ಕರ್ ಆ ಕಾಲದಲ್ಲಿ ಸಂವಿಧಾನ ಬರ್ದಿದ್ಕೋ, ನಮ್ಮಪ್ಪಾಮ್ಮ ಸ್ಕೂಲಿಗೆ ಕಳ್ಸಿದ್ಕೊ, ಇಷ್ಟೆಲ್ಲಾ ಜಗತ್ತು ತಿಳ್ಕೋಣಕ್ಕಾಯ್ತು’

ಗ್ರಾಮೀಣ ಪುರುಷ ಕಟ್ಟಡ ಕಾರ್ಮಿಕ ಕೂಲಿ ವಿಷಯದಲ್ಲಿ ಗುಜರಾತ್ ಮತ್ತು ಮಧ್ಯಪ್ರದೇಶವು ರಾಷ್ಟ್ರೀಯ ಸರಾಸರಿ ರೂ 373.3 ಕ್ಕಿಂತ ಕಡಿಮೆ ಕೂಲಿಯನ್ನು ನೀಡುತ್ತದೆ. ಗುಜರಾತ್ ಗ್ರಾಮೀಣ ಕಟ್ಟಡ ಕಾರ್ಮಿಕರು ಸರಾಸರಿ 295.9 ರೂ. ಇದ್ದರೆ, ಮಧ್ಯಪ್ರದೇಶ 266.7 ರೂ. ಮತ್ತು ತ್ರಿಪುರಾ 250 ರೂ. ನೀಡುತ್ತದೆ.

ಆರ್‌ಬಿಐ ಅಂಕಿಅಂಶಗಳ ಪ್ರಕಾರ ಗ್ರಾಮೀಣ ಕಟ್ಟಡ ಕಾರ್ಮಿಕರಿಗೆ ಕೇರಳದಲ್ಲಿ 837.7 ರೂ. ಕೂಲಿ ನೀಡಿದರೆ, ಜಮ್ಮು ಕಾಶ್ಮೀರದಲ್ಲಿ 519.8 ರೂ., ತಮಿಳುನಾಡಿನಲ್ಲಿ 478.6 ರೂ. ಮತ್ತು ಹಿಮಾಚಲ ಪ್ರದೇಶದಲ್ಲಿ 462.7 ರೂ. ನೀಡಲಾಗುತ್ತದೆ.

ಕರ್ನಾಟಕದಲ್ಲಿ ಕಟ್ಟಡ ಕಾರ್ಮಿಕರಿಗೆ ಸರಾಸರಿ 383.5 ರೂ. ಕೂಲಿ ನೀಡಲಾಗುತ್ತಿದ್ದು, ಇದು ರಾಷ್ಟ್ರೀಯ ಸರಾಸರಿ ಕೂಲಿಗಿಂತ ತುಸುವೆ ಹೆಚ್ಚಾಗಿದೆ.

ಇದನ್ನೂ ಓದಿ: ದೌರ್ಜನ್ಯ ಶೋಷಣೆಗಳ ಸುಗ್ಗಿ! ಕಬ್ಬು ಕಟಾವು ಕೂಲಿಗಾರರ ಜೀತವಿಮುಕ್ತಿಯೆಂದು?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ತಪ್ಪಾಗಿದೆ’ : ಕೇಂದ್ರ ಸರ್ಕಾರದ ಟ್ರಾನ್ಸ್‌ಜೆಂಡರ್‌ ವಿಧೇಯಕದ ಕುರಿತ ಟೀಕೆಗಳನ್ನು ಕೈಬಿಟ್ಟ ರಾಜಸ್ಥಾನ ಹೈಕೋರ್ಟ್

ಟ್ರಾನ್ಸ್‌ಜೆಂಡರ್ ಕಾಯ್ದೆ, 2019ರಲ್ಲಿ ಬದಲಾವಣೆಗಳನ್ನು ತರಲಿರುವ ಕೇಂದ್ರ ಸರ್ಕಾರದ ಟ್ರಾನ್ಸ್‌ಜೆಂಡರ್ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ತಿದ್ದುಪಡಿ ವಿಧೇಯ, 2026ರ ಕುರಿತು ಈ ಹಿಂದೆ ಮಾಡಿದ್ದ ವಿಮರ್ಶಾತ್ಮಕ ಟಿಪ್ಪಣಿಗಳನ್ನು ರಾಜಸ್ಥಾನ ಹೈಕೋರ್ಟ್ ತೆಗೆದುಹಾಕಿದೆ ಎಂದು...

ಯುಸಿಸಿ ಜಾರಿ ನಂತರ ‘ಜನಸಂಖ್ಯಾ ನಿಯಂತ್ರಣ’ ಕಾನೂನಿಗೆ ಮುಂದಾದ ಉತ್ತರಾಖಂಡ ಬಿಜೆಪಿ ಸರ್ಕಾರ

ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತಂದ ನಂತರ, ಉತ್ತರಾಖಂಡ ಸರ್ಕಾರ ಈಗ ಜನಸಂಖ್ಯಾ ನಿಯಂತ್ರಣ ಕಾನೂನನ್ನು ತರುವ ಬಗ್ಗೆ ಯೋಚಿಸುತ್ತಿದೆ ಎಂದು ಮುಖ್ಯಮಂತ್ರಿ ಪುಷ್ಕರ್ ಸಿಂಗ್ ಧಾಮಿ ಶುಕ್ರವಾರ ಸೂಚಿಸಿದ್ದಾರೆ. ಪ್ರಸ್ತಾವಿತ ಕ್ರಮದ...

ಪಶ್ಚಿಮ ಬಂಗಾಳ| ಟಿಎಂಸಿ ನಾಯಕರ ಭದ್ರತೆಗೆ ಭಾರೀ ಪೊಲೀಸ್ ನಿಯೋಜನೆ; ಇಸಿಐ ಆಕ್ಷೇಪ

ರಾಜ್ಯದ ವಿವಿಧ ಹಂತಗಳಲ್ಲಿ ತೃಣಮೂಲ ಕಾಂಗ್ರೆಸ್ ನಾಯಕರಿಗೆ ವೈಯಕ್ತಿಕ ಭದ್ರತೆ ಒದಗಿಸಲು ಪಶ್ಚಿಮ ಬಂಗಾಳ ಪೊಲೀಸರು ಮತ್ತು ಕೋಲ್ಕತ್ತಾ ಪೊಲೀಸರು ನಿಯೋಜಿಸಿರುವ ಹೆಚ್ಚಿನ ಸಂಖ್ಯೆಯ ಸಿಬ್ಬಂದಿಯನ್ನು ಭಾರತೀಯ ಚುನಾವಣಾ ಆಯೋಗ (ಇಸಿಐ) ಗಂಭೀರವಾಗಿ...

ಅಮೆರಿಕದ ಕದನ ವಿರಾಮ ಪ್ರಸ್ತಾವನೆ ತಿರಸ್ಕರಿಸಿದ ಇರಾನ್ : ಪಶ್ಚಿಮ ಏಷ್ಯಾ ಸಂಘರ್ಷ ಉಲ್ಬಣ

ಅಲ್ಪಾವಧಿಯ ಕದನ ವಿರಾಮಕ್ಕಾಗಿ ಅಮೆರಿಕ ಮುಂದಿಟ್ಟಿದ್ದ ಪ್ರಸ್ತಾವನೆಯನ್ನು ಇರಾನ್ ತಿರಸ್ಕರಿಸಿದೆ ಎಂದು ವರದಿಯಾಗಿದೆ. ಏಪ್ರಿಲ್ 1, 2026ರ ಬುಧವಾರದಂದು ಅಮೆರಿಕವು ಅನಾಮಧೇಯ ಮಧ್ಯಸ್ಥಿಕೆ ರಾಷ್ಟ್ರದ ಮೂಲಕ ಇರಾನ್‌ಗೆ 48 ಗಂಟೆಗಳ ತಾತ್ಕಾಲಿಕ ಕದನ ವಿರಾಮದ ಆಫರ್...

ಜಾನಪದ ಕಲಾವಿದ ಡಿಂಗ್ರಿ ನರಸಪ್ಪ, ಬೆಂಗಳೂರಿನ ಚಂದ್ರಮ್ಮ ಸೇರಿದಂತೆ ಐದು ಜನರಿಗೆ ಬಾಬು ಜಗಜೀವನ್‌ ರಾಮ್‌ ಪ್ರಶಸ್ತಿ

ಹಿರಿಯ ಜಾನಪದ ಕಲಾವಿದ ಡಿಂಗ್ರಿ ನರಸಪ್ಪ, ಬೆಂಗಳೂರಿನ ಚಂದ್ರಮ್ಮ ಸೇರಿದಂತೆ ಐದು ಜನ ಹಿರಿಯ ಸಾಧಕರು 2026ನೇ ಸಾಲಿನ ಬಾಬು ಜಗಜೀವನ್‌ ರಾಮ್‌ ಪ್ರಶಸ್ತಿಗೆ ಭಾಜನರಾಗಿದ್ದಾರೆ. ರಾಯಚೂರು ಜಿಲ್ಲೆಯ ಹಿರಿಯ ದಲಿತ ಹೋರಾಟಗಾರ...

ಗಾಜಾ; ಗೊಂಬೆಯೊಂದಿಗೆ ‘ಅಂತ್ಯಕ್ರಿಯೆ’ ಆಟ ಆಡುವ ಎಳೆಯ ಮಕ್ಕಳ ವಿಡಿಯೋ ವೈರಲ್; ಸುತ್ತಲಿನ ಘಟನೆಯನ್ನು ಪುನರಾವರ್ತಿಸುವ ಮಕ್ಕಳು

ಅಕ್ಟೋಬರ್ 2023 ರಲ್ಲಿ ಇಸ್ರೇಲಿ ಮಿಲಿಟರಿ ದಾಳಿಯನ್ನು ಪ್ರಾರಂಭಿಸಿದ ನಂತರ ಗಾಜಾದಿಂದ ದುಃಖಕರ ದೃಶ್ಯಗಳು ಹೊರಹೊಮ್ಮುತ್ತಿವೆ. ಇತ್ತೀಚಿನ ಒಂದು ಘಟನೆಯಲ್ಲಿ, ಚಿಕ್ಕ ಮಕ್ಕಳು ಅಂತ್ಯಕ್ರಿಯೆಗಾಗಿ ಗೊಂಬೆಯನ್ನು ಹೊತ್ತುಕೊಂಡು ಹೋಗುವುದನ್ನು ಕಾಣಬಹುದು - ಇದು ಅವರು...

ದೆಹಲಿ| ಆಳವಾದ ಚರಂಡಿಗೆ ಬಿದ್ದು ನೈರ್ಮಲ್ಯ ಕಾರ್ಮಿಕ ಸಾವು; ನ್ಯಾಯಕ್ಕೆ ಆಗ್ರಹಿಸಿದ ಮೃತನ ಕುಟುಂಬ

ಮಾರ್ಚ್ 30 ರಂದು ಪೂರ್ವ ದೆಹಲಿಯ ದಿಲ್ಶಾದ್ ಗಾರ್ಡನ್ ಪ್ರದೇಶದಲ್ಲಿ ಸುರಕ್ಷತಾ ಸಾಧನಗಳಿಲ್ಲದೆ ಆಳವಾದ ಚರಂಡಿ ಸ್ವಚ್ಛಗೊಳಿಸುವ ಸಮಯದಲ್ಲಿ ಯುವ ನೈರ್ಮಲ್ಯ ಕಾರ್ಮಿಕ ರಾಹುಲ್ ಎಂಬುವವರು ಸಾವನ್ನಪ್ಪಿದ್ದಾರೆ. ಮಧ್ಯಾಹ್ನ 2:00 ರ ಸುಮಾರಿಗೆ...

ನಿವೃತ್ತ ನ್ಯಾಯಮೂರ್ತಿ ಸಂತೋಷ್‌ ಹೆಗ್ಡೆ ಆಸ್ಪತ್ರೆಗೆ ದಾಖಲು; ಕಾರ್ಯಕ್ರಮದಲ್ಲಿ ಏಕಾಏಕಿ ಕುಸಿದು ಬಿದ್ದು ಅಸ್ವಸ್ಥ

ಬೆಂಗಳೂರು: ಕರ್ನಾಟಕದ ನಿವೃತ್ತ ಲೋಕಾಯುಕ್ತ ಎನ್‌.ಸಂತೋಷ್‌ ಹೆಗ್ಡೆ ಅವರ ಆರೋಗ್ಯದಲ್ಲಿ ಏರುಪೇರು ಉಂಟಾಗಿದ್ದು, ಭಾಷಣದ ವೇಳೆ ಕುಸಿದು ಬಿದ್ದು ಅಸ್ವಸ್ಥರಾಗಿದ್ದ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಏಪ್ರಿಲ್ 4ರ, ಶುಕ್ರವಾರ ಬೆಂಗಳೂರಿನ ಕೊಂಡಜಿ ಬಸಪ್ಪ ಸಭಾಂಗಣದಲ್ಲಿ...

ಎಸ್‌ಎಸ್‌ಎಲ್‌ಸಿಯಲ್ಲಿ ತೃತೀಯ ಭಾಷೆಗೆ ಗ್ರೇಡ್: ನಿರ್ಧಾರ ಪರಿಶೀಲಿಸುವಂತೆ ರಾಜ್ಯ ಸರ್ಕಾರಕ್ಕೆ ಸೂಚಿಸಿದ ರಾಜ್ಯಪಾಲ ಗೆಹ್ಲೋಟ್ 

ಬೆಂಗಳೂರು: 10ನೇ ತರಗತಿ ಪರೀಕ್ಷೆಯಲ್ಲಿ ತೃತೀಯ ಭಾಷೆಯ ವಿಷಯಕ್ಕೆ ಅಂಕಗಳನ್ನು ಬದಲಿಸುವ ನಿರ್ಧಾರವನ್ನು ಮರುಪರಿಶೀಲಿಸುವಂತೆ ಕರ್ನಾಟಕ ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್ ರಾಜ್ಯ ಸರ್ಕಾರವನ್ನು ಕೇಳಿದ್ದಾರೆ. ಸರ್ಕಾರವು ಈ ನಿರ್ಧಾರವನ್ನು "ಸಮಗ್ರವಾಗಿ ಪರಿಶೀಲಿಸಬೇಕು" ಎಂದು ಲೋಕಭವನವು...

ತಿರುಚ್ಚಿ ಪೂರ್ವದ ಪೆರಂಬೂರಿನಲ್ಲಿ ಟಿವಿಕೆ ಸಂಸ್ಥಾಪಕ ವಿಜಯ್ ಸಲ್ಲಿಸಿದ ಅಫಿಡವಿಟ್‌ಗಳಲ್ಲಿ ಹಲವು ವ್ಯತ್ಯಾಸಗಳಿರುವುದಾಗಿ ವರದಿ  

ಚೆನ್ನೈ: ನಟ ಮತ್ತು ಟಿವಿಕೆ ಸಂಸ್ಥಾಪಕ ವಿಜಯ್ ಸಲ್ಲಿಸಿದ ಎರಡು ಪ್ರತ್ಯೇಕ ಚುನಾವಣಾ ಅಫಿಡವಿಟ್‌ಗಳಲ್ಲಿ ವ್ಯತ್ಯಾಸಗಳು ಕಾಣಿಸಿಕೊಂಡಿದ್ದು, ವಿಧಾನಸಭಾ ಚುನಾವಣೆಗೆ ಮುನ್ನ ಕಾನೂನು ಮತ್ತು ರಾಜಕೀಯ ಪರಿಶೀಲನೆಗೆ ಅವಕಾಶ ನೀಡುವ ಸಾಧ್ಯತೆಯಿದೆ. ಪೆರಂಬೂರು ಮತ್ತು...