Homeಮುಖಪುಟಕಾರ್ಮಿಕರಿಗೆ ಕೂಲಿ | ಕೇರಳ, ಜಮ್ಮುಕಾಶ್ಮೀರ ಟಾಪ್‌‌; ಗುಜರಾತ್‌, ಮಧ್ಯಪ್ರದೇಶ ಅತ್ಯಂತ ಕಡಿಮೆ - RBI...

ಕಾರ್ಮಿಕರಿಗೆ ಕೂಲಿ | ಕೇರಳ, ಜಮ್ಮುಕಾಶ್ಮೀರ ಟಾಪ್‌‌; ಗುಜರಾತ್‌, ಮಧ್ಯಪ್ರದೇಶ ಅತ್ಯಂತ ಕಡಿಮೆ – RBI ವರದಿ

- Advertisement -
- Advertisement -

ಹಣದುಬ್ಬರ ಮತ್ತು ಬಡ್ಡಿದರಗಳು ಹೆಚ್ಚಾಗುತ್ತಿರುವ ವೇಳೆಯಲ್ಲಿ ಗುಜರಾತ್ ಮತ್ತು ಮಧ್ಯಪ್ರದೇಶ ರಾಜ್ಯಗಳಲ್ಲಿನ ಕೃಷಿ ಕಾರ್ಮಿಕರು ದೇಶದಲ್ಲೆ ಅತ್ಯಂತ ಕಡಿಮೆ ದೈನಂದಿನ ಕೂಲಿ ಪಡೆಯುತ್ತಾರೆ ಹಾಗೂ ಕೇರಳ ಮತ್ತು ಜಮ್ಮು ಕಾಶ್ಮೀರದ ಕೃಷಿ ಕಾರ್ಮಿಕರು ಅತ್ಯಂತ ಹೆಚ್ಚಿನ ದೈನಂದಿನ ಕೂಲಿ ಪಡೆಯುತ್ತಾರೆ ಎಂದು ಭಾರತೀಯ ರಿಸರ್ವ್ ಬ್ಯಾಂಕ್ (ಆರ್‌‌ಬಿಐ) ವರದಿ ಹೇಳಿದೆ.

ಮಾರ್ಚ್ 2022 ಕ್ಕೆ ಕೊನೆಗೊಂಡ ವರ್ಷದಲ್ಲಿ ಆರ್‌‌ಬಿಐ ಸಂಗ್ರಹಿಸಿದ ಅಂಕಿಅಂಶಗಳ ಪ್ರಕಾರ, ಮಧ್ಯಪ್ರದೇಶದ ಗ್ರಾಮೀಣ ಪ್ರದೇಶದ ಪುರುಷ ಕೃಷಿ ಕಾರ್ಮಿಕರು ಕೇವಲ 217.8 ರೂ. ದೈನಂದಿನ ಕೂಲಿ ಪಡೆದರೆ, ಗುಜರಾತ್‌ನಲ್ಲಿ ಕೃಷಿ ಕಾರ್ಮಿಕ 220.3 ರೂ. ಪಡೆಯುತ್ತಾನೆ. ಅದಾಗ್ಯೂ ಈ ಎರಡೂ ರಾಜ್ಯಗಳಲ್ಲಿ ನೀಡುವ ದೈನಂದಿನ ಕೂಲಿ ರಾಷ್ಟ್ರೀಯ ಸರಾಸರಿ 323.2 ರೂ.ಗಿಂತ ಕ್ಕಿಂತ ಕಡಿಮೆಯಾಗಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಗುಜರಾತಿನಲ್ಲಿ ಒಬ್ಬ ಗ್ರಾಮೀಣ ಕೃಷಿ ಕಾರ್ಮಿಕನಿಗೆ ತಿಂಗಳಿಗೆ 25 ದಿನ ಕೆಲಸ ಸಿಕ್ಕಿದರೆ, ಅವನ ಮಾಸಿಕ ಸಂಪಾದನೆಯು ತಿಂಗಳಿಗೆ ಸುಮಾರು 5,500 ರೂಪಾಯಿಗಳಷ್ಟಿರುತ್ತದೆ, ಇದು ನಾಲ್ಕೈದು ಜನರಿರುವ ಕುಟುಂಬದ ವೆಚ್ಚವನ್ನು ಪೂರೈಸಲು ಸಾಕಾಗುವುದಿಲ್ಲ. ಆದರೆ ಅತಿ ಹೆಚ್ಚು ವೇತನ ನೀಡುವ ಕೇರಳದ ಗ್ರಾಮೀಣ ಕೃಷಿ ಕಾರ್ಮಿಕರು ತಿಂಗಳಿಗೆ 25 ದಿನಗಳ ಕೆಲಸಕ್ಕೆ ಸರಾಸರಿ 18,170 ರೂ. ಪಡೆಯುತ್ತಾರೆ.

ಇದನ್ನೂ ಓದಿ: ‘ನೀನು ಕೂಲಿ ಕೆಲಸ ಮಾಡಬೇಕು, ಶಾಲೆಯಲ್ಲಿ ಅಡುಗೆಯನ್ನಲ್ಲ’: 6 ತಿಂಗಳಾದರೂ ದಲಿತ ಮಹಿಳೆಗೆ ನಿಲ್ಲದ ಕಿರುಕುಳ

2021-22 ರ ಆರ್ಥಿಕ ವರ್ಷವು ಗ್ರಾಮೀಣ ಆರ್ಥಿಕತೆಗೆ ಕೆಟ್ಟದ್ದಾಗಿ ಪರಿಣಮಿಸಿದ್ದು, ಕೋವಿಡ್ ಸಾಂಕ್ರಾಮಿಕವು ಉದ್ಯೋಗಗಳು ಮತ್ತು ಆದಾಯದ ಮಟ್ಟದ ಮೇಲೆ ಹೊಡೆತ ನೀಡಿದೆ. ಮಧ್ಯಪ್ರದೇಶದಲ್ಲಿ ಕೃಷಿ ಕಾರ್ಮಿಕರ ಮಾಸಿಕ ಕೂಲಿ ಸುಮಾರು 5,445 ರೂ. ಆಗಿದೆ. ಕೃಷಿ ಕಾರ್ಮಿಕರಿಗೆ ಕಡಿಮೆ ಕೂಲಿ ನೀಡುವ ಇತರ ರಾಜ್ಯಗಳಲ್ಲಿ ಉತ್ತರ ಪ್ರದೇಶ ( ಗ್ರಾಮೀಣ ಕೃಷಿ ಕಾರ್ಮಿಕರು ಸರಾಸರಿ ದಿನಗೂಲಿ 270 ರೂ ) ಮಹಾರಾಷ್ಟ್ರ (284.2 ರೂ.) ಒಡಿಶಾ (269.5 ರೂ.) ಸೇರಿದೆ.

ಪ್ರತಿ ಕೃಷಿ ಕಾರ್ಮಿಕರಿಗೆ ಸರಾಸರಿ 726.8 ರೂ. ಕೂಲಿ ನೀಡುವುದರೊಂದಿಗೆ ಹೆಚ್ಚು ವೇತನ ನೀಡುವ ರಾಜ್ಯಗಳ ಪಟ್ಟಿಯಲ್ಲಿ ಕೇರಳ ಅಗ್ರ ಸ್ಥಾನದಲ್ಲಿದೆ. ಕೇರಳದಲ್ಲಿನ ಹೆಚ್ಚಿನ ಕೂಲಿ ಇತರ ಕಳಪೆ ವೇತನ ನೀಡುವ ರಾಜ್ಯಗಳ ಕೃಷಿ ಕಾರ್ಮಿಕರನ್ನು ಆಕರ್ಷಿಸಿದ್ದು, ಹೀಗಾಗಿ ಸುಮಾರು 25 ಲಕ್ಷ ವಲಸೆ ಕಾರ್ಮಿಕರು ರಾಜ್ಯದಲ್ಲಿ ವಾಸಿಸುತ್ತಿದ್ದಾರೆ ಎಂದು ವರದಿಯಾಗಿದೆ.

ಜಮ್ಮು ಕಾಶ್ಮೀರದಲ್ಲಿ, ಕೃಷಿ ಕಾರ್ಮಿಕರು ಪ್ರತಿ ವ್ಯಕ್ತಿಗೆ ಸರಾಸರಿ 524.6 ರೂ., ಹಿಮಾಚಲ ಪ್ರದೇಶ 457.6 ರೂ. ಮತ್ತು ತಮಿಳುನಾಡು 445.6 ರೂ. ಕೂಲಿ ಪಡೆಯುತ್ತಾರೆ.

ಕರ್ನಾಟಕದಲ್ಲಿ ಕೃಷಿ ಕೂಲಿ ಕಾರ್ಮಿಕರಿಗೆ ಸರಾಸರಿ 335.5 ರೂ. ಸಿಗುತ್ತದೆ ಎಂದು ಅಂಕಿ-ಅಂಶ ಹೇಳಿದೆ.

ಇದನ್ನೂ ಓದಿ: ದಲಿತ್‌ ಫೈಲ್ಸ್‌‌: ಕೂಲಿ ಕೇಳಿದ ದಲಿತ ಬಾಲಕನಿಗೆ ಹಲ್ಲೆ ನಡೆಸಿ ಪಾದ ನೆಕ್ಕಿಸಿದ ದುಷ್ಕರ್ಮಿಗಳು

ಆರ್‌ಬಿಐ ಅಂಕಿಅಂಶಗಳ ಪ್ರಕಾರ, ಕೃಷಿಯೇತರ ಪುರುಷ ಕಾರ್ಮಿಕರ ಕೂಲಿ ನೀಡುವ ವಿಚಾರದಲ್ಲಿ, ಮಧ್ಯಪ್ರದೇಶ ಕಡಿಮೆ ವೇತನ ನೀಡುತ್ತಿದ್ದು, ಅಲ್ಲಿ ಸರಾಸರಿ 230.3 ರೂ. ರಷ್ಟಿದ್ದರೆ, ಗುಜರಾತ್ ಕಾರ್ಮಿಕರು 252.5 ರೂ. ಮತ್ತು ತ್ರಿಪುರಾದಲ್ಲಿ 250 ರೂ. ದೈನಂದಿನ ವೇತನವನ್ನು ನೀಡಲಾಗುತ್ತದೆ. ಇವೆಲ್ಲವೂ ರಾಷ್ಟ್ರೀಯ ಸರಾಸರಿಗಿಂತ 326.6. ರೂ. ಗಿಂತಲೂ ಕಡಿಮೆಯಾಗಿದೆ.

ಮತ್ತೊಂದೆಡೆ, ಕೇರಳವು ಕೃಷಿಯೇತರ ಕಾರ್ಮಿಕರ ಕೂಲಿಯ ವಿಚಾರದಲ್ಲಿ ಕೂಡಾ ಮುಂಚೂಣಿಯಲ್ಲಿದ್ದು, ಅಲ್ಲಿ ಪ್ರತಿ ವ್ಯಕ್ತಿಗೆ 681.8 ರೂ. ಕೂಲಿ ನೀಡುತ್ತಾರೆ. ಇದರ ನಂತರ ನಂತರ ಜಮ್ಮುಕಾಶ್ಮೀರ 500.8 ರೂ., ತಮಿಳುನಾಡು 462.3 ರೂ. ಮತ್ತು ಹರಿಯಾಣ 409.3 ರೂ. ಕೂಲಿ ನೀಡುತ್ತದೆ.

ಕರ್ನಾಟಕವು ಕೃಷಿಯೇತರ ಕೂಲಿ ಕಾರ್ಮಿಕರಿಗೆ 297.9 ರೂ. ಸರಾಸರಿ ಕೂಲಿ ನೀಡುತ್ತದೆ. ಇದು ರಾಷ್ಟ್ರೀಯ ಸರಾಸರಿಗಿಂತ 326.6. ರೂ. ಗಿಂತಲೂ ಕಡಿಮೆಯಾಗಿದೆ.

ಇದನ್ನೂ ಓದಿ: ‘ಅಂಬೇಡ್ಕರ್ ಆ ಕಾಲದಲ್ಲಿ ಸಂವಿಧಾನ ಬರ್ದಿದ್ಕೋ, ನಮ್ಮಪ್ಪಾಮ್ಮ ಸ್ಕೂಲಿಗೆ ಕಳ್ಸಿದ್ಕೊ, ಇಷ್ಟೆಲ್ಲಾ ಜಗತ್ತು ತಿಳ್ಕೋಣಕ್ಕಾಯ್ತು’

ಗ್ರಾಮೀಣ ಪುರುಷ ಕಟ್ಟಡ ಕಾರ್ಮಿಕ ಕೂಲಿ ವಿಷಯದಲ್ಲಿ ಗುಜರಾತ್ ಮತ್ತು ಮಧ್ಯಪ್ರದೇಶವು ರಾಷ್ಟ್ರೀಯ ಸರಾಸರಿ ರೂ 373.3 ಕ್ಕಿಂತ ಕಡಿಮೆ ಕೂಲಿಯನ್ನು ನೀಡುತ್ತದೆ. ಗುಜರಾತ್ ಗ್ರಾಮೀಣ ಕಟ್ಟಡ ಕಾರ್ಮಿಕರು ಸರಾಸರಿ 295.9 ರೂ. ಇದ್ದರೆ, ಮಧ್ಯಪ್ರದೇಶ 266.7 ರೂ. ಮತ್ತು ತ್ರಿಪುರಾ 250 ರೂ. ನೀಡುತ್ತದೆ.

ಆರ್‌ಬಿಐ ಅಂಕಿಅಂಶಗಳ ಪ್ರಕಾರ ಗ್ರಾಮೀಣ ಕಟ್ಟಡ ಕಾರ್ಮಿಕರಿಗೆ ಕೇರಳದಲ್ಲಿ 837.7 ರೂ. ಕೂಲಿ ನೀಡಿದರೆ, ಜಮ್ಮು ಕಾಶ್ಮೀರದಲ್ಲಿ 519.8 ರೂ., ತಮಿಳುನಾಡಿನಲ್ಲಿ 478.6 ರೂ. ಮತ್ತು ಹಿಮಾಚಲ ಪ್ರದೇಶದಲ್ಲಿ 462.7 ರೂ. ನೀಡಲಾಗುತ್ತದೆ.

ಕರ್ನಾಟಕದಲ್ಲಿ ಕಟ್ಟಡ ಕಾರ್ಮಿಕರಿಗೆ ಸರಾಸರಿ 383.5 ರೂ. ಕೂಲಿ ನೀಡಲಾಗುತ್ತಿದ್ದು, ಇದು ರಾಷ್ಟ್ರೀಯ ಸರಾಸರಿ ಕೂಲಿಗಿಂತ ತುಸುವೆ ಹೆಚ್ಚಾಗಿದೆ.

ಇದನ್ನೂ ಓದಿ: ದೌರ್ಜನ್ಯ ಶೋಷಣೆಗಳ ಸುಗ್ಗಿ! ಕಬ್ಬು ಕಟಾವು ಕೂಲಿಗಾರರ ಜೀತವಿಮುಕ್ತಿಯೆಂದು?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಹೊಸ ಕಾರ್ಮಿಕ ಕಾನೂನು ಶ್ರಮಿಕರ ಮೂಲಭೂತ ಹಕ್ಕುಗಳಿಗೆ ಕತ್ತರಿ!

"8 ಗಂಟೆ ಕೆಲಸ, 8 ಗಂಟೆ ಮನರಂಜನೆ, 8 ಗಂಟೆ ವಿಶ್ರಾಂತಿ" ಎಂಬ ತತ್ವವು ಸುಲಭವಾಗಿ ದೊರೆತದ್ದಲ್ಲ, ಇದು ದೀರ್ಘಕಾಲದ ಹೋರಾಟ, ತ್ಯಾಗ ಮತ್ತು ಏಕತೆಯ ಫಲವಾಗಿದೆ. ಕೆಲಸದ ಹೊರೆ ಅತಿಯಾಗಿ ಇದ್ದ...

ಮನರೇಗಾ ಯಶೋಗಾಥೆ: ಭಾಗ-1 ದಲಿತರು-ಮಹಿಳೆಯರಿಗೆ ಆರ್ಥಿಕ ಭದ್ರತೆ; ಗ್ರಾಮ ಸಬಲೀಕರಣಕ್ಕೆ ಮನರೇಗಾ ಕೊಟ್ಟ ಕೊಡುಗೆ ಅಪಾರ

2001-2004 ರವರೆಗಿನ ನಿರಂತರ ಬರ ಕರ್ನಾಟಕದ ಬಹುತೇಕ ಹಳ್ಳಿಗಳನ್ನು ಕಂಗಾಲಾಗಿಸಿದ್ದಂತೂ ನಿಜ. ಎಲ್ಲ ಕೆರೆಗಳು ಬತ್ತಿಹೋಗಿದ್ದರಿಂದ ದನಕರುಗಳಿಗೆ ನೀರು ಕುಡಿಸಲೂ ಜನ ಅಲೆದಾಡುತ್ತಿದ್ದರು. ಜನರಿಗೆ ಕುಡಿಯುವ ನೀರು ಪೂರೈಕೆ ಸಹ ಆ ಸಂದರ್ಭದಲ್ಲಿ...

ಮಣಿಪುರ: ಬುಡಕಟ್ಟು ಚರ್ಚ್ ನಾಯಕರ ಮೇಲೆ ಉಗ್ರ ದಾಳಿ:  ಹಲವೆಡೆ ಮೇಣದ ಬತ್ತಿಯ ಜೊತೆಗೆ ಶೋಕ ವ್ಯಕ್ತ ಪಡಿಸಿದ ಕುಕಿ ಸಮುದಾಯ 

ಇಂಫಾಲ್: ಮಣಿಪುರದ ಕಾಂಗ್‌ಪೋಕ್ಪಿ ಜಿಲ್ಲೆಯಲ್ಲಿ ಮೂವರು ಪ್ರಮುಖ ಕುಕಿ ಚರ್ಚ್ ನಾಯಕರನ್ನು ಹೊಂಚು ಹಾಕಿ ದಾಳಿ ನಡೆಸಿ ಕೊಲ್ಲಲಾಗಿದೆ. ಈ ಘಟನೆಯು ರಾಜ್ಯದಲ್ಲಿ ಜನಾಂಗೀಯ ಉದ್ವಿಗ್ನತೆಯನ್ನು ಮತ್ತಷ್ಟು ತೀವ್ರಗೊಳಿಸಿದೆ.  ಮೇ 13ರಂದು ಬೆಳಿಗ್ಗೆ ಚುರಾಚಂದ್‌ಪುರನಲ್ಲಿ...

ಗುಜರಾತ್| ಮದುವೆ ಮೆರವಣಿಗೆಯಲ್ಲಿ ಕುದುರೆ ಸವಾರಿ ಮಾಡಿದ ದಲಿತ ವರನ ಮೇಲೆ ಹಲ್ಲೆ

ಗುಜರಾತ್‌ನ ಮೆಹ್ಸಾನಾ ಜಿಲ್ಲೆಯ ಮಡಿ ಗ್ರಾಮದಲ್ಲಿ ಮದುವೆ ಮೆರವಣಿಗೆಯಲ್ಲಿ ಕುದುರೆ ಸವಾರಿ ಮಾಡುತ್ತಿದ್ದ ದಲಿತ ವರನ ಮೇಲೆ ಮೇಲ್ಜಾತಿಯ ಪುರುಷರ ಗುಂಪೊಂದು ಜಾತಿ ನಿಂದನೆ ಮಾಡಿ ನಿಂದಿಸಿದ್ದಾರೆ ಎಂದು ಆರೋಪಿಸಲಾಗಿದೆ. ಮೇ 10 ರಂದು...

ಆತಂಕಕಾರಿಯಾದ ಆನೆ ದಾಳಿ

ಆನೆ ದಾಳಿ ಹಿಂದೆಂದಿಗಿಂತಲೂ ದುಪ್ಪಟ್ಟಾಗಿದೆ. ಅರಣ್ಯಮಂತ್ರಿ ಈಶ್ವರ್ ಖಂಡ್ರೆಯವರ ಪ್ರಕಾರ ಆನೆಗಳ ಸಂಖ್ಯೆ ದುಪ್ಪಟ್ಟಾಗಿದೆ. ಕಾಡಿನ ಪ್ರಮಾಣ ಅಷ್ಟೆ ಇದೆ. ಅಂದರೆ ಕಾಡಿನ ಪ್ರಮಾಣ ಹೆಚ್ಚು ಮಾಡಬೇಕೆಂದರೆ ಮನುಷ್ಯರ ಆವಾಸ ಇಲ್ಲದೆ ಆನೆಗಳಿಗಾಗಿ...

ವೈದ್ಯಕೀಯ ಸೀಟುಗಳ ಹಂಚಿಕೆ ಕೇಂದ್ರೀಕರಣಕ್ಕೆ ದಕ್ಷಿಣದ ವಿರೋಧ; ನೀಟ್ ಪರೀಕ್ಷೆಯನ್ನೇ ರದ್ದುಗೊಳಿಸಲು ಇದು ಸಕಾಲ

ರಾಜ್ಯಪಟ್ಟಿಯಲ್ಲಿದ್ದ ಶಿಕ್ಷಣದ ಹಕ್ಕನ್ನು ನೀಟ್‌ ಹೆಸರಿನಲ್ಲಿ ಕೇಂದ್ರದ ಜಂಟಿ ಪಟ್ಟಿಗೆ ಸೇರಿಸುವ ಒಕ್ಕೂಟ ಸರ್ಕಾರದ ನಿರ್ಧಾರದಿಂದ ದಕ್ಷಿಣದ ರಾಜ್ಯಗಳು ಭಾರಿ ನಷ್ಟ ಅನುಭವಿಸುತ್ತಿವೆ. ಜೊತೆಗೆ, ನೀಟ್ ಪಾಸ್‌ ಮಾಡುವ ಒತ್ತಡ ತಾಳಲಾರದೆ ದೇಶದಾದ್ಯಂತ...

‘ಮತ’ ವ್ಯರ್ಥ ಮಾಡದ ಮತದಾರ: 2026ರಲ್ಲಿ ಕುಸಿಯಿತು ‘ನೋಟಾ’ ಅಬ್ಬರ

2026ರ ವಿಧಾನಸಭಾ ಚುನಾವಣೆಯಲ್ಲಿ ಅಸ್ಸಾಂ, ಕೇರಳ, ಪುದುಚೇರಿ, ತಮಿಳುನಾಡು ಮತ್ತು ಪಶ್ಚಿಮ ಬಂಗಾಳದಾದ್ಯಂತ ಸುಮಾರು 10.9 ಲಕ್ಷ ಮತಗಳು 'ನೋಟಾ' (ಯಾರಿಗೂ ಮತವಿಲ್ಲ) ಪಾಲಾಗಿವೆ. ಆದರೆ, 2016 ಮತ್ತು 2021ರ ಚುನಾವಣೆಗಳಿಗೆ ಹೋಲಿಸಿದರೆ...

ಕೇರಳದ 13ನೇ ಮುಖ್ಯಮಂತ್ರಿ ವಿ.ಡಿ. ಸತೀಶನ್: ವಿದ್ಯಾರ್ಥಿ ನಾಯಕನಿಂದ ಸಿಎಂ ಸ್ಥಾನದವರೆಗೆ ಸತೀಶನ್ ಪಯಣ

ತಿರುವನಂತಪುರಂ: ಕೇರಳಂನ ನೂತನ ಮುಖ್ಯಮಂತ್ರಿಯಾಗಿ ವಿ.ಡಿ. ಸತೀಶನ್ ಅವರನ್ನು ಕಾಂಗ್ರೆಸ್ ಹೈಕಮಾಂಡ್ ಆಯ್ಕೆ ಮಾಡಿದೆ. ಆ ಮೂಲಕ ಹಲವು ದಿನಗಳಿಂದ ಈ ಬಗ್ಗೆ ನಡೆಯುತ್ತಿದ್ದ ಕುತೂಹಲ ಮತ್ತು ಚರ್ಚೆಗಳಿಗೆ ತೆರೆ ಬಿದ್ದಿದೆ.  ಅಖಿಲ ಭಾರತ...

ದಲಿತರ ನ್ಯಾಯಕ್ಕೆ ಹೊಸ ಅಡ್ಡಿಯಾಗಲಿದೆಯೇ ‘ಸಾರ್ವಜನಿಕ ವೀಕ್ಷಣೆ’ ನಿಯಮ? ಪರಿಶಿಷ್ಟರನ್ನು ಆತಂಕಕ್ಕೆ ತಳ್ಳಿದ ಸುಪ್ರೀಂ ತೀರ್ಪು

ಸಾರ್ವಜನಿಕರು ನೋಡದ ಜಾಗದಲ್ಲಿ, ಅಂದರೆ ಯಾರೂ ನೋಡದ ಜಾಗದಲ್ಲಿ ಜಾತಿ ನಿಂದನೆ ಅಥವಾ ಅವಮಾನ ನಡೆದರೆ, ಅದು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ (ದೌರ್ಜನ್ಯ ತಡೆ) ಕಾಯ್ದೆ 1989ರ ಅಡಿಯಲ್ಲಿ ಅಪರಾಧ...

ಪಶ್ಚಿಮ ಬಂಗಾಳ: “ಇದು ಬುಲ್ಡೋಜರ್ ರಾಜ್ಯವಲ್ಲ”: ಚುನಾವಣೋತ್ತರ ಹಿಂಸಾಚಾರದ ವಿರುದ್ಧ ಹೈಕೋರ್ಟ್ ಮೆಟ್ಟಿಲೇರಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಮತ್ತು ತೃಣಮೂಲ ಕಾಂಗ್ರೆಸ್ ಮುಖ್ಯಸ್ಥೆ ಮಮತಾ ಬ್ಯಾನರ್ಜಿ ಚುನಾವಣೋತ್ತರ ಹಿಂಸಾಚಾರದ ವಿರುದ್ಧ ಹೈಕೋರ್ಟ್ ಮೆಟ್ಟಿಲೇರಿದ್ದಾರೆ. ಗುರುವಾರ ವಕೀಲರ ನಿಲುವಂಗಿಯನ್ನು ಧರಿಸಿ ಕಲ್ಕತ್ತಾ ಹೈಕೋರ್ಟ್‌ಗೆ ಬಂದ ಅವರು ವಿಧಾನಸಭಾ...