Homeಮುಖಪುಟಕಾರ್ಮಿಕರಿಗೆ ಕೂಲಿ | ಕೇರಳ, ಜಮ್ಮುಕಾಶ್ಮೀರ ಟಾಪ್‌‌; ಗುಜರಾತ್‌, ಮಧ್ಯಪ್ರದೇಶ ಅತ್ಯಂತ ಕಡಿಮೆ - RBI...

ಕಾರ್ಮಿಕರಿಗೆ ಕೂಲಿ | ಕೇರಳ, ಜಮ್ಮುಕಾಶ್ಮೀರ ಟಾಪ್‌‌; ಗುಜರಾತ್‌, ಮಧ್ಯಪ್ರದೇಶ ಅತ್ಯಂತ ಕಡಿಮೆ – RBI ವರದಿ

- Advertisement -
- Advertisement -

ಹಣದುಬ್ಬರ ಮತ್ತು ಬಡ್ಡಿದರಗಳು ಹೆಚ್ಚಾಗುತ್ತಿರುವ ವೇಳೆಯಲ್ಲಿ ಗುಜರಾತ್ ಮತ್ತು ಮಧ್ಯಪ್ರದೇಶ ರಾಜ್ಯಗಳಲ್ಲಿನ ಕೃಷಿ ಕಾರ್ಮಿಕರು ದೇಶದಲ್ಲೆ ಅತ್ಯಂತ ಕಡಿಮೆ ದೈನಂದಿನ ಕೂಲಿ ಪಡೆಯುತ್ತಾರೆ ಹಾಗೂ ಕೇರಳ ಮತ್ತು ಜಮ್ಮು ಕಾಶ್ಮೀರದ ಕೃಷಿ ಕಾರ್ಮಿಕರು ಅತ್ಯಂತ ಹೆಚ್ಚಿನ ದೈನಂದಿನ ಕೂಲಿ ಪಡೆಯುತ್ತಾರೆ ಎಂದು ಭಾರತೀಯ ರಿಸರ್ವ್ ಬ್ಯಾಂಕ್ (ಆರ್‌‌ಬಿಐ) ವರದಿ ಹೇಳಿದೆ.

ಮಾರ್ಚ್ 2022 ಕ್ಕೆ ಕೊನೆಗೊಂಡ ವರ್ಷದಲ್ಲಿ ಆರ್‌‌ಬಿಐ ಸಂಗ್ರಹಿಸಿದ ಅಂಕಿಅಂಶಗಳ ಪ್ರಕಾರ, ಮಧ್ಯಪ್ರದೇಶದ ಗ್ರಾಮೀಣ ಪ್ರದೇಶದ ಪುರುಷ ಕೃಷಿ ಕಾರ್ಮಿಕರು ಕೇವಲ 217.8 ರೂ. ದೈನಂದಿನ ಕೂಲಿ ಪಡೆದರೆ, ಗುಜರಾತ್‌ನಲ್ಲಿ ಕೃಷಿ ಕಾರ್ಮಿಕ 220.3 ರೂ. ಪಡೆಯುತ್ತಾನೆ. ಅದಾಗ್ಯೂ ಈ ಎರಡೂ ರಾಜ್ಯಗಳಲ್ಲಿ ನೀಡುವ ದೈನಂದಿನ ಕೂಲಿ ರಾಷ್ಟ್ರೀಯ ಸರಾಸರಿ 323.2 ರೂ.ಗಿಂತ ಕ್ಕಿಂತ ಕಡಿಮೆಯಾಗಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಗುಜರಾತಿನಲ್ಲಿ ಒಬ್ಬ ಗ್ರಾಮೀಣ ಕೃಷಿ ಕಾರ್ಮಿಕನಿಗೆ ತಿಂಗಳಿಗೆ 25 ದಿನ ಕೆಲಸ ಸಿಕ್ಕಿದರೆ, ಅವನ ಮಾಸಿಕ ಸಂಪಾದನೆಯು ತಿಂಗಳಿಗೆ ಸುಮಾರು 5,500 ರೂಪಾಯಿಗಳಷ್ಟಿರುತ್ತದೆ, ಇದು ನಾಲ್ಕೈದು ಜನರಿರುವ ಕುಟುಂಬದ ವೆಚ್ಚವನ್ನು ಪೂರೈಸಲು ಸಾಕಾಗುವುದಿಲ್ಲ. ಆದರೆ ಅತಿ ಹೆಚ್ಚು ವೇತನ ನೀಡುವ ಕೇರಳದ ಗ್ರಾಮೀಣ ಕೃಷಿ ಕಾರ್ಮಿಕರು ತಿಂಗಳಿಗೆ 25 ದಿನಗಳ ಕೆಲಸಕ್ಕೆ ಸರಾಸರಿ 18,170 ರೂ. ಪಡೆಯುತ್ತಾರೆ.

ಇದನ್ನೂ ಓದಿ: ‘ನೀನು ಕೂಲಿ ಕೆಲಸ ಮಾಡಬೇಕು, ಶಾಲೆಯಲ್ಲಿ ಅಡುಗೆಯನ್ನಲ್ಲ’: 6 ತಿಂಗಳಾದರೂ ದಲಿತ ಮಹಿಳೆಗೆ ನಿಲ್ಲದ ಕಿರುಕುಳ

2021-22 ರ ಆರ್ಥಿಕ ವರ್ಷವು ಗ್ರಾಮೀಣ ಆರ್ಥಿಕತೆಗೆ ಕೆಟ್ಟದ್ದಾಗಿ ಪರಿಣಮಿಸಿದ್ದು, ಕೋವಿಡ್ ಸಾಂಕ್ರಾಮಿಕವು ಉದ್ಯೋಗಗಳು ಮತ್ತು ಆದಾಯದ ಮಟ್ಟದ ಮೇಲೆ ಹೊಡೆತ ನೀಡಿದೆ. ಮಧ್ಯಪ್ರದೇಶದಲ್ಲಿ ಕೃಷಿ ಕಾರ್ಮಿಕರ ಮಾಸಿಕ ಕೂಲಿ ಸುಮಾರು 5,445 ರೂ. ಆಗಿದೆ. ಕೃಷಿ ಕಾರ್ಮಿಕರಿಗೆ ಕಡಿಮೆ ಕೂಲಿ ನೀಡುವ ಇತರ ರಾಜ್ಯಗಳಲ್ಲಿ ಉತ್ತರ ಪ್ರದೇಶ ( ಗ್ರಾಮೀಣ ಕೃಷಿ ಕಾರ್ಮಿಕರು ಸರಾಸರಿ ದಿನಗೂಲಿ 270 ರೂ ) ಮಹಾರಾಷ್ಟ್ರ (284.2 ರೂ.) ಒಡಿಶಾ (269.5 ರೂ.) ಸೇರಿದೆ.

ಪ್ರತಿ ಕೃಷಿ ಕಾರ್ಮಿಕರಿಗೆ ಸರಾಸರಿ 726.8 ರೂ. ಕೂಲಿ ನೀಡುವುದರೊಂದಿಗೆ ಹೆಚ್ಚು ವೇತನ ನೀಡುವ ರಾಜ್ಯಗಳ ಪಟ್ಟಿಯಲ್ಲಿ ಕೇರಳ ಅಗ್ರ ಸ್ಥಾನದಲ್ಲಿದೆ. ಕೇರಳದಲ್ಲಿನ ಹೆಚ್ಚಿನ ಕೂಲಿ ಇತರ ಕಳಪೆ ವೇತನ ನೀಡುವ ರಾಜ್ಯಗಳ ಕೃಷಿ ಕಾರ್ಮಿಕರನ್ನು ಆಕರ್ಷಿಸಿದ್ದು, ಹೀಗಾಗಿ ಸುಮಾರು 25 ಲಕ್ಷ ವಲಸೆ ಕಾರ್ಮಿಕರು ರಾಜ್ಯದಲ್ಲಿ ವಾಸಿಸುತ್ತಿದ್ದಾರೆ ಎಂದು ವರದಿಯಾಗಿದೆ.

ಜಮ್ಮು ಕಾಶ್ಮೀರದಲ್ಲಿ, ಕೃಷಿ ಕಾರ್ಮಿಕರು ಪ್ರತಿ ವ್ಯಕ್ತಿಗೆ ಸರಾಸರಿ 524.6 ರೂ., ಹಿಮಾಚಲ ಪ್ರದೇಶ 457.6 ರೂ. ಮತ್ತು ತಮಿಳುನಾಡು 445.6 ರೂ. ಕೂಲಿ ಪಡೆಯುತ್ತಾರೆ.

ಕರ್ನಾಟಕದಲ್ಲಿ ಕೃಷಿ ಕೂಲಿ ಕಾರ್ಮಿಕರಿಗೆ ಸರಾಸರಿ 335.5 ರೂ. ಸಿಗುತ್ತದೆ ಎಂದು ಅಂಕಿ-ಅಂಶ ಹೇಳಿದೆ.

ಇದನ್ನೂ ಓದಿ: ದಲಿತ್‌ ಫೈಲ್ಸ್‌‌: ಕೂಲಿ ಕೇಳಿದ ದಲಿತ ಬಾಲಕನಿಗೆ ಹಲ್ಲೆ ನಡೆಸಿ ಪಾದ ನೆಕ್ಕಿಸಿದ ದುಷ್ಕರ್ಮಿಗಳು

ಆರ್‌ಬಿಐ ಅಂಕಿಅಂಶಗಳ ಪ್ರಕಾರ, ಕೃಷಿಯೇತರ ಪುರುಷ ಕಾರ್ಮಿಕರ ಕೂಲಿ ನೀಡುವ ವಿಚಾರದಲ್ಲಿ, ಮಧ್ಯಪ್ರದೇಶ ಕಡಿಮೆ ವೇತನ ನೀಡುತ್ತಿದ್ದು, ಅಲ್ಲಿ ಸರಾಸರಿ 230.3 ರೂ. ರಷ್ಟಿದ್ದರೆ, ಗುಜರಾತ್ ಕಾರ್ಮಿಕರು 252.5 ರೂ. ಮತ್ತು ತ್ರಿಪುರಾದಲ್ಲಿ 250 ರೂ. ದೈನಂದಿನ ವೇತನವನ್ನು ನೀಡಲಾಗುತ್ತದೆ. ಇವೆಲ್ಲವೂ ರಾಷ್ಟ್ರೀಯ ಸರಾಸರಿಗಿಂತ 326.6. ರೂ. ಗಿಂತಲೂ ಕಡಿಮೆಯಾಗಿದೆ.

ಮತ್ತೊಂದೆಡೆ, ಕೇರಳವು ಕೃಷಿಯೇತರ ಕಾರ್ಮಿಕರ ಕೂಲಿಯ ವಿಚಾರದಲ್ಲಿ ಕೂಡಾ ಮುಂಚೂಣಿಯಲ್ಲಿದ್ದು, ಅಲ್ಲಿ ಪ್ರತಿ ವ್ಯಕ್ತಿಗೆ 681.8 ರೂ. ಕೂಲಿ ನೀಡುತ್ತಾರೆ. ಇದರ ನಂತರ ನಂತರ ಜಮ್ಮುಕಾಶ್ಮೀರ 500.8 ರೂ., ತಮಿಳುನಾಡು 462.3 ರೂ. ಮತ್ತು ಹರಿಯಾಣ 409.3 ರೂ. ಕೂಲಿ ನೀಡುತ್ತದೆ.

ಕರ್ನಾಟಕವು ಕೃಷಿಯೇತರ ಕೂಲಿ ಕಾರ್ಮಿಕರಿಗೆ 297.9 ರೂ. ಸರಾಸರಿ ಕೂಲಿ ನೀಡುತ್ತದೆ. ಇದು ರಾಷ್ಟ್ರೀಯ ಸರಾಸರಿಗಿಂತ 326.6. ರೂ. ಗಿಂತಲೂ ಕಡಿಮೆಯಾಗಿದೆ.

ಇದನ್ನೂ ಓದಿ: ‘ಅಂಬೇಡ್ಕರ್ ಆ ಕಾಲದಲ್ಲಿ ಸಂವಿಧಾನ ಬರ್ದಿದ್ಕೋ, ನಮ್ಮಪ್ಪಾಮ್ಮ ಸ್ಕೂಲಿಗೆ ಕಳ್ಸಿದ್ಕೊ, ಇಷ್ಟೆಲ್ಲಾ ಜಗತ್ತು ತಿಳ್ಕೋಣಕ್ಕಾಯ್ತು’

ಗ್ರಾಮೀಣ ಪುರುಷ ಕಟ್ಟಡ ಕಾರ್ಮಿಕ ಕೂಲಿ ವಿಷಯದಲ್ಲಿ ಗುಜರಾತ್ ಮತ್ತು ಮಧ್ಯಪ್ರದೇಶವು ರಾಷ್ಟ್ರೀಯ ಸರಾಸರಿ ರೂ 373.3 ಕ್ಕಿಂತ ಕಡಿಮೆ ಕೂಲಿಯನ್ನು ನೀಡುತ್ತದೆ. ಗುಜರಾತ್ ಗ್ರಾಮೀಣ ಕಟ್ಟಡ ಕಾರ್ಮಿಕರು ಸರಾಸರಿ 295.9 ರೂ. ಇದ್ದರೆ, ಮಧ್ಯಪ್ರದೇಶ 266.7 ರೂ. ಮತ್ತು ತ್ರಿಪುರಾ 250 ರೂ. ನೀಡುತ್ತದೆ.

ಆರ್‌ಬಿಐ ಅಂಕಿಅಂಶಗಳ ಪ್ರಕಾರ ಗ್ರಾಮೀಣ ಕಟ್ಟಡ ಕಾರ್ಮಿಕರಿಗೆ ಕೇರಳದಲ್ಲಿ 837.7 ರೂ. ಕೂಲಿ ನೀಡಿದರೆ, ಜಮ್ಮು ಕಾಶ್ಮೀರದಲ್ಲಿ 519.8 ರೂ., ತಮಿಳುನಾಡಿನಲ್ಲಿ 478.6 ರೂ. ಮತ್ತು ಹಿಮಾಚಲ ಪ್ರದೇಶದಲ್ಲಿ 462.7 ರೂ. ನೀಡಲಾಗುತ್ತದೆ.

ಕರ್ನಾಟಕದಲ್ಲಿ ಕಟ್ಟಡ ಕಾರ್ಮಿಕರಿಗೆ ಸರಾಸರಿ 383.5 ರೂ. ಕೂಲಿ ನೀಡಲಾಗುತ್ತಿದ್ದು, ಇದು ರಾಷ್ಟ್ರೀಯ ಸರಾಸರಿ ಕೂಲಿಗಿಂತ ತುಸುವೆ ಹೆಚ್ಚಾಗಿದೆ.

ಇದನ್ನೂ ಓದಿ: ದೌರ್ಜನ್ಯ ಶೋಷಣೆಗಳ ಸುಗ್ಗಿ! ಕಬ್ಬು ಕಟಾವು ಕೂಲಿಗಾರರ ಜೀತವಿಮುಕ್ತಿಯೆಂದು?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ನುಡಿಯು ಸಿರಿಯಲ್ಲ ಬದುಕು’ ಕರಾವಳಿಯಲ್ಲಿ ಮತ್ತೆ ಪ್ರತಿರೋಧದ ಧ್ವನಿ: ನವೆಂಬರ್ 28-29ಕ್ಕೆ ‘ಜನನುಡಿ-2026’

"ನವೆಂಬರ್ ಕೊನೆಯ ಶನಿವಾರ ಮತ್ತು ಭಾನುವಾರ ಮಂಗಳೂರಿನಲ್ಲಿ ಕೇವಲ ವಿಚಾರ ಸಂಕಿರಣ ಮಾತ್ರವಲ್ಲ, ಹರಟೆ, ಚರ್ಚೆ, ಸೌಹಾರ್ದತೆಯ ಮೀನೂಟ ಹಾಗೂ ಪ್ರೀತಿಯೊಂದಿಗೆ ಸಂವಿಧಾನಿಕ ಮೌಲ್ಯಗಳನ್ನು ಎತ್ತಿಹಿಡಿಯುವ ಹೊಸ ಬೆಳಕನ್ನು ಕಂಡುಕೊಳ್ಳಲಿದ್ದೇವೆ," ಎಂದು 'ಅಭಿಮತ...

‘ಟ್ರಂಪ್’ ಗಾಗಿ ಭಾರತದ ಹಿತವನ್ನು ಬಲಿ ಕೊಟ್ಟ ಕೇಂದ್ರ: E20 ಎಥೆನಾಲ್ ನೀತಿ ಹಿಂಪಡೆಯಲು ಕೇಜ್ರಿವಾಲ್ ಪಟ್ಟು

ವಾಹನಗಳ ಎಂಜಿನ್‌ಗೆ ಹಾನಿಯುಂಟುಮಾಡುತ್ತಿದೆ ಎಂದು ಆರೋಪಿಸಲಾದ ಇ20 (E20) ಎಥೆನಾಲ್ ಮಿಶ್ರಿತ ಪೆಟ್ರೋಲ್ ನೀತಿಯನ್ನು ಹಿಂಪಡೆಯುವಂತೆ ಆಗ್ರಹಿಸಿ, ದೇಶಾದ್ಯಂತ ಸಂಗ್ರಹಿಸಲಾಗಿದ್ದ 2.30 ಲಕ್ಷಕ್ಕೂ ಅಧಿಕ ಸಾರ್ವಜನಿಕ ಸಹಿಗಳ ಮನವಿ ಪತ್ರದೊಂದಿಗೆ ಪ್ರಧಾನಿ ನರೇಂದ್ರ...

ಗಾಝಾ | ಇಸ್ರೇಲ್ ನರಮೇಧಕ್ಕೆ ಬಲಿಯಾದ ಎರಡು ಕುಟುಂಬಗಳ 112 ಸದಸ್ಯರ ಸಾಮೂಹಿಕ ಅಂತ್ಯಸಂಸ್ಕಾರ: ಸಾವಿರಾರು ಜನರಿಂದ ಕಣ್ಣೀರ ವಿದಾಯ

ಇಸ್ರೇಲ್ ಬಾಂಬ್ ದಾಳಿಯಿಂದ ಧ್ವಂಸಗೊಂಡಿದ್ದ ಮನೆಗಳ ಅವಶೇಷಗಳ ಅಡಿಯಲ್ಲಿ ಇತ್ತೀಚೆಗೆ ಪತ್ತೆಯಾದ ಗಾಝಾದ ಹಸಾಯ್ನ ಮತ್ತು ಅಬು ಶರಿಯಾ ಕುಟುಂಬಗಳ 112 ಸದಸ್ಯರ ಮೃತದೇಹಗಳ ಅಂತ್ಯ ಸಂಸ್ಕಾರ ಮಂಗಳವಾರ (ಆ.4) ನಡೆಯಿತು. ಸಾವಿರಾರು...

E20 ಇಂಧನ ರಾದ್ಧಾಂತ: ನಾಗ್ಪುರದಲ್ಲಿ ಗಡ್ಕರಿ ಮನೆಗೆ ಮುತ್ತಿಗೆ ಯತ್ನ, ಯುವ ಕಾಂಗ್ರೆಸ್ ಕಾರ್ಯಕರ್ತರ ಬಂಧನ

ಎಥೆನಾಲ್ ಮಿಶ್ರಿತ ಇ20 (E20) ಇಂಧನದಿಂದ ದೇಶದ ಲಕ್ಷಾಂತರ ವಾಹನ ಮಾಲೀಕರು ಎಂಜಿನ್ ಹಾನಿ ಮತ್ತು ಮೈಲೇಜ್ ಅಭಾವ ಎದುರಿಸುತ್ತಿದ್ದಾರೆ ಎಂಬ ಆಕ್ರೋಶದ ನಡುವೆಯೇ, ನಾಗ್ಪುರದಲ್ಲಿ ಕೇಂದ್ರ ರಸ್ತೆ ಸಾರಿಗೆ ಸಚಿವ ನಿತಿನ್...

ರಾಜ್ಯದಲ್ಲಿ ‘SIR’ ಅವಾಂತರ: 1.ಕೋಟಿಗೂ ಹೆಚ್ಚು ಮತದಾರರನ್ನು ಹೊರಗಿಡಲು ಸಂಚು, ‘SIR ವಿರೋಧಿ ಕರ್ನಾಟಕ’ ಆಕ್ರೋಶ

ಕರ್ನಾಟಕದಲ್ಲಿ ಜಾರಿಯಲ್ಲಿರುವ ಬೂತ್ ಮಟ್ಟದ ಮತದಾರರ ಪಟ್ಟಿ ಸರಿಪಡಿಸುವ 'ಎಸ್‌ಐಆರ್' (SIR) ಪ್ರಕ್ರಿಯೆಯಲ್ಲಿ ಭಾರೀ ಅವ್ಯವಹಾರ ಮತ್ತು ಕಪಟತನ ನಡೆದಿದ್ದು, ರಾಜ್ಯದ ಶೇ. 20 ರಷ್ಟು (ಆಗಸ್ಟ್ 2026ರ ಹೊತ್ತಿಗೆ ಸುಮಾರು 1.10...

‘ಜನರು ಬಿಜೆಪಿಯಿಂದ ಅತೃಪ್ತರಾಗಿದ್ದಾರೆ…’: ದಾಟಿಯಾ ಉಪಚುನಾವಣೆಯಲ್ಲಿ ಗೆಲುವಿನ ನಂತರ ಆಡಳಿತ ಪಕ್ಷದ ವಿರುದ್ಧ ಘನಶ್ಯಾಮ್ ಸಿಂಗ್ ವಾಗ್ದಾಳಿ

ಭೋಪಾಲ್ (ಮಧ್ಯಪ್ರದೇಶ): ಮಧ್ಯಪ್ರದೇಶದ ದಾಟಿಯಾ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ನೂತನವಾಗಿ ಆಯ್ಕೆಯಾಗಿರುವ ಕಾಂಗ್ರೆಸ್ ಶಾಸಕ ಘನಶ್ಯಾಮ್ ಸಿಂಗ್ ಅವರು, ತಮ್ಮ ಅಭೂತಪೂರ್ವ ಗೆಲುವನ್ನು ಬಿಜೆಪಿಯ 'ಭ್ರಷ್ಟಾಚಾರ'ಕ್ಕೆ ಸಾರ್ವಜನಿಕರು ನೀಡಿದ ತಕ್ಕ ಹಾಗೂ ಸೂಕ್ತ...

ಇಂದಿನ ವಿಚಾರಣೆ ಬಳಿಕ ಉದಯನಿಧಿ ಬಿಡುಗಡೆಗೆ ಮದ್ರಾಸ್ ಹೈಕೋರ್ಟ್ ನಿರ್ದೇಶನ

ಆಕ್ಷೇಪಾರ್ಹ ಹೇಳಿಕೆ ನೀಡಿದ ಆರೋಪದ ಮೇಲೆ ಬಂಧಿತರಾದ ತಮಿಳುನಾಡು ವಿಧಾನಸಭೆಯ ವಿಪಕ್ಷ ನಾಯಕ ಉದಯನಿಧಿ ಸ್ಟಾಲಿನ್ ಅವರನ್ನು, ವಿಚಾರಣೆಯಯ ಬಳಿಕ ಸ್ಟೇಷನ್ ಬೇಲ್ (ಠಾಣಾ ಜಾಮೀನು) ಮೇಲೆ ಬಿಡುಗಡೆ ಮಾಡುವಂತೆ ಮದ್ರಾಸ್ ಹೈಕೋರ್ಟ್...

ರಾಜೀನಾಮೆ ನೀಡಿದರೆ ಕೆಲವೇ ನಿಮಿಷಗಳಲ್ಲಿ ಅಂಗೀಕರಿಸುವೆ, ಸಚಿವ ಸ್ಥಾನ ವಂಚಿತರ ಬೆದರಿಕೆಗೆ ಸಿಎಂ ಡಿ.ಕೆ. ಶಿವಕುಮಾರ್ ವಾರ್ನಿಂಗ್

ಪಕ್ಷದ ಹಿತವೇ ಎಲ್ಲಕ್ಕಿಂತ ಮುಖ್ಯ. ಸಚಿವ ಸ್ಥಾನ ಸಿಗಲಿಲ್ಲ ಎಂಬ ಕಾರಣಕ್ಕೆ ಯಾರಾದರೂ ರಾಜೀನಾಮೆ ಸಲ್ಲಿಸಿದರೆ, ಕೆಲವೇ ನಿಮಿಷಗಳಲ್ಲಿ ಅದನ್ನು ನಾನು ಅಂಗೀಕರಿಸುತ್ತೇನೆ" ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಖಡಕ್ ಎಚ್ಚರಿಕೆ ನೀಡಿದ್ದಾರೆ. ಶಾಸಕರ...

ನಮಗೆ ಚುನಾವಣಾ ರಾಜಕೀಯದ ಉದ್ದೇಶವಿಲ್ಲ, ಜನಾಂದೋಲನವೇ ನಮ್ಮ ಗುರಿ: ಸಿಜೆಪಿ ಸಂಸ್ಥಾಪಕ ಅಭಿಜೀತ್ ದೀಪ್ಕೆ

ಕಾಕ್ರೋಚ್ ಜನತಾ ಪಾರ್ಟಿ (CJP) ಚುನಾವಣಾ ರಾಜಕೀಯಕ್ಕೆ ಪ್ರವೇಶಿಸುವ ಯಾವುದೇ ಉದ್ದೇಶವನ್ನು ಹೊಂದಿಲ್ಲ, ಬದಲಾಗಿ ದೇಶದ ಪ್ರಜಾಸತ್ತಾತ್ಮಕ ಸಂಸ್ಥೆಗಳ ಮೇಲಿನ ಜನರ ನಂಬಿಕೆಯನ್ನು ಮರುಸ್ಥಾಪಿಸಲು ಬೃಹತ್ ಜನಾಂದೋಲನವನ್ನು ಕಟ್ಟುವುದೇ ನಮ್ಮ ಮೂಲ ಗುರಿ...

ನೀಟ್ ಪ್ರತಿಭಟನೆ: ಮಧ್ಯಪ್ರದೇಶ ಪೊಲೀಸರು ಧರ್ಮದ ಕಾರಣಕ್ಕೆ ನನ್ನ ಕುಟುಂಬಕ್ಕೆ ಕಿರುಕುಳ ನೀಡುತ್ತಿದ್ದಾರೆ: ಜೆಎನ್‌ಯು ವಿದ್ಯಾರ್ಥಿ ನಾಯಕಿ ಡ್ಯಾನಿಶ್ ಅಲಿ ಆರೋಪ

ದೇಶದ ಶಿಕ್ಷಣ ವ್ಯವಸ್ಥೆಯ ಜವಾಬ್ದಾರಿಯನ್ನು ಪ್ರಶ್ನಿಸಿ ನಡೆದ ನೀಟ್ (NEET) ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಪ್ರತಿಭಟನೆಯಲ್ಲಿ ಸಕ್ರಿಯವಾಗಿ ಭಾಗವಹಿಸಿದ್ದಕ್ಕಾಗಿ, ಮಧ್ಯಪ್ರದೇಶ ಪೊಲೀಸರು ತಮ್ಮ ಕುಟುಂಬಕ್ಕೆ ಕಿರುಕುಳ ನೀಡುತ್ತಿದ್ದಾರೆ ಎಂದು ಜವಾಹರಲಾಲ್ ನೆಹರು ವಿಶ್ವವಿದ್ಯಾಲಯದ...