Homeಅಂತರಾಷ್ಟ್ರೀಯಪುಟಿನ್ ವಿರುದ್ಧ ಸಿಡಿದೆದ್ದ ಮಾಜಿ ಆಪ್ತ ವ್ಯಾಗ್ನರ್ ಪಡೆ: ರಷ್ಯಾದಲ್ಲಿ ಆಂತರೀಕ ಯುದ್ಧ ಪ್ರಾರಂಭ

ಪುಟಿನ್ ವಿರುದ್ಧ ಸಿಡಿದೆದ್ದ ಮಾಜಿ ಆಪ್ತ ವ್ಯಾಗ್ನರ್ ಪಡೆ: ರಷ್ಯಾದಲ್ಲಿ ಆಂತರೀಕ ಯುದ್ಧ ಪ್ರಾರಂಭ

- Advertisement -
- Advertisement -

ರಷ್ಯಾದಲ್ಲಿ ಆಂತರೀಕ ಯುದ್ಧ ಪ್ರಾರಂಭವಾಗಿದೆ. ಅಧ್ಯಕ್ಷ ಪುಟಿನ್‌ರವರ ಬೆಂಬಲದಿಂದ ಆರಂಭವಾಗಿದ್ದ ಯೆವ್ಗೆನಿ ಪ್ರಿಗೋಜಿನ್ ನೇತೃತ್ವದ ವ್ಯಾಗ್ನರ್ ಮರ್ಸೆನರಿ ಎಂಬ ಖಾಸಗಿ ಮಿಲಿಟರಿ ಪಡೆಯು ಸದ್ಯ ಪುಟಿನ್ ವಿರುದ್ಧವೇ ತಿರುಗಿ ಬಿದ್ದಿದೆ. ಈ ಪಡೆಯು ಶಶಸ್ತ್ರ ದಂಗೆಯನ್ನು ಆರಂಭಿಸಿದ್ದು ರಷ್ಯಾದ ಎರಡು ನಗರಗಳನ್ನು ವಶಪಡಿಸಿಕೊಂಡಿರುವುದಾಗಿ ಮತ್ತು ಮೂರು ಮಿಲಿಟರಿ ಹೆಲಿಕಾಪ್ಟರ್‌ಗಳನ್ನು ಹೊಡೆದುರುಳಿಸಿರುವಾಗಿ ಹೇಳಿಕೊಂಡಿದೆ.

ಈ ಕುರಿತು ಪುಟಿನ್ ರಾಷ್ಟ್ರವನ್ನುದ್ದೇಶಿಸಿ ಮಾಡಿದ ಭಾಷಣದಲ್ಲಿ, “ವ್ಯಾಗ್ನರ್ ಸೈನಿಕರ ಶಸ್ತ್ರಸಜ್ಜಿತ ದಂಗೆಯು ‘ಬೆನ್ನಿಗೆ ಇರಿತವಾಗಿದೆ’ ಮತ್ತು ಪ್ರಿಗೋಜಿನ್ ರಷ್ಯಾಕ್ಕೆ ‘ದ್ರೋಹ’ ಮಾಡಿದ್ದಾರೆ. ಅತಿರಂಜಿತ ಮಹತ್ವಾಕಾಂಕ್ಷೆಗಳು ಮತ್ತು ವೈಯಕ್ತಿಕ ಹಿತಾಸಕ್ತಿಗಳು ಈ ದೇಶದ್ರೋಹಕ್ಕೆ ಕಾರಣವಾಗಿವೆ. ಇದರಲ್ಲಿ ಭಾಗಿಯಾದವರು ತಕ್ಕ ಶಿಕ್ಷೆ ಅನುಭವಿಸುತ್ತಾರೆ ಎಂದು ಕಿಡಿಕಾರಿದ್ದಾರೆ.

ರಷ್ಯಾದ ಅಧ್ಯಕ್ಷರು ತಮ್ಮ ಭಾಷಣದ ಸಮಯದಲ್ಲಿ ತಪ್ಪು ಆಯ್ಕೆ ಮಾಡಿದ್ದಾರೆ ಮತ್ತು ದೇಶವು ಶೀಘ್ರದಲ್ಲೇ ಹೊಸ ಪ್ರಧಾನಿಯನ್ನು ಹೊಂದಲಿದೆ ಎಂದು ವ್ಯಾಗ್ನರ್ ಪಡೆ ಹೇಳಿದೆ. ಪುಟಿನ್‌ರನ್ನು ಕೆಳಗಿಳಿಸುವ ಪ್ರತಿಜ್ಞೆ ಮಾಡಿರುವ ಆ ಪಡೆಯು ಸದ್ಯ ಮಾಸ್ಕೋನತ್ತ ತೆರಳುತ್ತಿದೆ ಎನ್ನಲಾಗಿದೆ.

ಮಾಸ್ಕೋದಲ್ಲಿ ರಷ್ಯಾದ ಮಿಲಿಟರಿಯು ತನ್ನ ಮೇಲೆ ಮಾರಣಾಂತಿಕ ದಾಳಿ ನಡೆಸಿದ ಕಾರಣಕ್ಕಾಗಿ ನಾವು ದಂಗೆಯನ್ನು ಆರಂಭಿಸಿದ್ದೇವೆ ಎಂದು ಪ್ರಿಗೋಜಿನ್ ಹೇಳಿದ್ದಾರೆ. ‘ನಮ್ಮ ದಾರಿಗೆ ಅಡ್ಡಬರುವ ಎಲ್ಲವನ್ನೂ ನಾಶಮಾಡುತ್ತವೆ ಎಂದಿರುವ ಅವರು “ಇದು ಮಿಲಿಟರಿ ದಂಗೆಯಲ್ಲ, ಆದರೆ ನ್ಯಾಯದ ಮೆರವಣಿಗೆ” ಎಂದಿದ್ದಾರೆ.

ಇನ್ನೊಂದೆಡೆ ಜನತೆ ತನ್ನ ಪರ ನಿಲ್ಲುವಂತೆ ಮನವಿ ಮಾಡಿರುವ ಪುಟಿನ್ ವ್ಯಾಗ್ನರ್ ದಾಳಿಯನ್ನು ಹಿಮ್ಮೆಟ್ಟಿಸಲು ನಮ್ಮ ಸೇನೆ ಸುಸಜ್ಜಿವಾಗಿದೆ ಎಂದು ಹೇಳಿಕೊಂಡಿದ್ದಾರೆ.

ಚೆಚೆನ್ ನಾಯಕ ರಂಜಾನ್ ಕದಿರೊವ್ ಅವರು ಪುಟಿನ್ ಬೆಂಬಲಕ್ಕೆ ನಿಂತಿದ್ದು, ವ್ಯಾಗ್ನರ್ ಗುಂಪಿನ ವಿರುದ್ಧ ಹೋರಾಡಲು ಚೆಚೆನ್ ಸೈನಿಕರನ್ನು ಕಳುಹಿಸಿದ್ದಾರೆ ಎನ್ನಲಾಗಿದೆ.

ಉಕ್ರೇನ್ ಈ ಬೆಳವಣಿಗೆಯನ್ನು ಗ್ರಹಿಸುತ್ತಿದ್ದು, ಒಬ್ಬರೊಬ್ಬರು ಹಣ ಮತ್ತು ಅಧಿಕಾರಕ್ಕಾಗಿ ಪರಸ್ಪರ ಕಚ್ಚಾಡುತ್ತಿದ್ದಾರೆ ಎಂದು ಹೇಳಿದೆ.

ಯೆವ್ಗೆನಿ ಪ್ರಿಗೋಜಿನ್ ನೇತೃತ್ವದ ವ್ಯಾಗ್ನರ್ ಮರ್ಸೆನರಿ ಎಂಬ ಖಾಸಗಿ ಮಿಲಿಟರಿ ಪಡೆಯು 2014ರಲ್ಲಿ ಆರಂಭಗೊಂಡಿದ್ದು, ಪುಟಿನ್‌ಗೆ ಬೆಂಬಲವಾಗಿ ಕೆಲಸ ಮಾಡಿದೆ. ಇತ್ತೀಚಿಗಿನ ಉಕ್ರೇನ್ ವಿರುದ್ಧದ ಸಂದರ್ಭದಲ್ಲಿಯೂ ಮಹತ್ವದ ಪಾತ್ರವಹಿಸಿದೆ ಎನ್ನಲಾಗಿದೆ. ಆದರೆ ಸದ್ಯ ಅದು ಪುಟಿನ್ ಕೆಳಗಿಳಿಸಲು ಮುಂದಾಗಿದೆ.

ಇದನ್ನೂ ಓದಿ: ಗೃಹ ಲಕ್ಷ್ಮಿ ಯೋಜನೆಗೆ ಅರ್ಜಿ ಸಲ್ಲಿಸಲು ಪ್ರತ್ಯೇಕ ಆ್ಯಪ್ ಸಿದ್ಧಗೊಂಡಿದೆ: ಡಿ.ಕೆ ಶಿವಕುಮಾರ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಉತ್ತರ ಪ್ರದೇಶ| ಶಾಲಾ ಬಸ್ಸಿನ ನೆಲಹಾಸು ಕುಸಿದು 7 ವರ್ಷದ ಬಾಲಕಿ ಸಾವು; ಇಬ್ಬರ ಬಂಧನ

ಉತ್ತರ ಪ್ರದೇಶದ ಅಲಿಗಢದಲ್ಲಿ ಶಾಲಾ ಬಸ್ಸಿನ ನೆಲಹಾಸು ಕುಸಿದು ಕೆಳಗೆ ಬಿದ್ದ ಏಳು ವರ್ಷದ ಬಾಲಕಿ ಸಾವನ್ನಪ್ಪಿದ ಘಟನೆ ಸೋಮವಾರ ನಡೆದಿದೆ. ಖಾಸಗಿ ಶಾಲೆಯ ವ್ಯವಸ್ಥಾಪಕ ಮತ್ತು ಬಸ್ ಚಾಲಕನನ್ನು ಬಂಧಿಸಲಾಗಿದೆ ಎಂದು...

ಇಸ್ರೇಲ್-ಇರಾನ್ ಸಂಘರ್ಷ: ನವದೆಹಲಿಯಲ್ಲಿ 24×7 ನಿಯಂತ್ರಣ ಕೊಠಡಿ ಸ್ಥಾಪಿಸಿದ ತೆಲಂಗಾಣ

ಹೈದರಾಬಾದ್: ಮುಖ್ಯಮಂತ್ರಿ ಎ ರೇವಂತ್ ರೆಡ್ಡಿ ಅವರ ನಿರ್ದೇಶನಗಳನ್ನು ಅನುಸರಿಸಿ, ಮಧ್ಯಪ್ರಾಚ್ಯದಲ್ಲಿ ನಡೆಯುತ್ತಿರುವ ಉದ್ವಿಗ್ನತೆಯ ನಡುವೆ, ಮಧ್ಯಪ್ರಾಚ್ಯದಲ್ಲಿರುವ ತೆಲಂಗಾಣ ನಾಗರಿಕರಿಗೆ ಸಹಾಯ ಮಾಡಲು ನವದೆಹಲಿಯ ತೆಲಂಗಾಣ ಭವನದಲ್ಲಿ 24×7 ನಿಯಂತ್ರಣ ಕೊಠಡಿಯನ್ನು ಸ್ಥಾಪಿಸಲಾಗಿದೆ. ಪ್ರಯಾಣ...

ಒಮಾನ್ ಕರಾವಳಿಯಲ್ಲಿ ತೈಲ ಟ್ಯಾಂಕರ್‌ಗೆ ಡ್ರೋನ್ ದೋಣಿ ಡಿಕ್ಕಿ; ಭಾರತೀಯ ಸಿಬ್ಬಂದಿ ಸಾವು

ಒಮಾನ್ ಕರಾವಳಿಯಲ್ಲಿ ತೈಲ ಟ್ಯಾಂಕರ್‌ಗೆ ಮಾನವರಹಿತ ಡ್ರೋನ್ ದೋಣಿ ಡಿಕ್ಕಿ ಹೊಡೆದ ಪರಿಣಾಮ ಭಾರತೀಯ ಸಿಬ್ಬಂದಿಯೊಬ್ಬರು ಸಾವನ್ನಪ್ಪಿದ್ದಾರೆ. ಇದರಿಂದಾಗಿ ಇಸ್ರೇಲ್ ಮತ್ತು ಇರಾನ್ ನಡುವಿನ ಹಗೆತನವು ಪ್ರದೇಶದಾದ್ಯಂತ ಉಲ್ಬಣಗೊಳ್ಳುತ್ತಿದ್ದಂತೆ ಬೆಂಕಿ ಕಾಣಿಸಿಕೊಂಡು ಹಡಗಿನಲ್ಲಿದ್ದ...

ನಾಗ್ಪುರ ಕಾರ್ಖಾನೆ ಸ್ಫೋಟ: ಸ್ಫೋಟಕ ಕಂಪನಿಯ ಒಂಬತ್ತು ನಿರ್ದೇಶಕರ ಬಂಧನ

ನಾಗ್ಪುರ: ಮಹಾರಾಷ್ಟ್ರದ ನಾಗ್ಪುರ ಜಿಲ್ಲೆಯಲ್ಲಿ ಸಂಭವಿಸಿದ ಸ್ಫೋಟದಲ್ಲಿ 18 ಜನರು ಸಾವನ್ನಪ್ಪಿದ್ದು, ಸ್ಫೋಟಕ ತಯಾರಿಕಾ ಕಂಪನಿಯ ಒಂಬತ್ತು ನಿರ್ದೇಶಕರನ್ನು ಪೊಲೀಸರು ಬಂಧಿಸಿದ್ದಾರೆ ಎಂದು ಅಧಿಕಾರಿಗಳು ಸೋಮವಾರ ತಿಳಿಸಿದ್ದಾರೆ. ಇಲ್ಲಿನ ಕಲ್ಮೇಶ್ವರ ಪೊಲೀಸರು ಎಸ್‌ಬಿಎಲ್ ಎನರ್ಜಿ...

ಅಪ್ರಾಪ್ತ ಮಗಳ ಮರ್ಯಾದೆಗೇಡು ಹತ್ಯೆ : ದಂಪತಿಗೆ ಜೀವಾವಧಿ ಶಿಕ್ಷೆ ಖಾಯಂಗೊಳಿಸಿದ ಅಲಹಾಬಾದ್‌ ಹೈಕೋರ್ಟ್

ಮರ್ಯಾದೆಗೇಡು ಹತ್ಯೆ ಪ್ರಕರಣದಲ್ಲಿ, 2014ರಲ್ಲಿ ತಮ್ಮ ಅಪ್ರಾಪ್ತ ಮಗಳು ಮತ್ತು ಬಾಡಿಗೆದಾರರನ್ನು ಕೊಲೆ ಮಾಡಿದ್ದ ದಂಪತಿಗೆ ಜೀವಾವಧಿ ಶಿಕ್ಷೆಯನ್ನು ಅಲಹಾಬಾದ್ ಹೈಕೋರ್ಟ್ ಖಾಯಂಗೊಳಿಸಿದೆ. ನ್ಯಾಯಮೂರ್ತಿ ಜೆ.ಜೆ. ಮುನೀರ್ ಮತ್ತು ನ್ಯಾಯಮೂರ್ತಿ ವಿನಯ್ ಕುಮಾರ್ ದ್ವಿವೇದಿ...

ಇಸ್ರೇಲ್-ಇರಾನ್ ಸಂಘರ್ಷ: ಕೇರಳದ ಗಲ್ಫ್ ಕೇಂದ್ರಗಳಲ್ಲಿ ಎಸ್‌ಎಸ್‌ಎಲ್‌ಸಿ, ಪ್ಲಸ್-II ಪರೀಕ್ಷೆಗಳನ್ನು ಮುಂದೂಡಲು ನಿರ್ಧಾರ

ತಿರುವನಂತಪುರಂ: ಪಶ್ಚಿಮ ಏಷ್ಯಾ ಪ್ರದೇಶದಲ್ಲಿನ ಪ್ರಚಲಿತ ಅಶಾಂತಿಯನ್ನು ಗಮನದಲ್ಲಿಟ್ಟುಕೊಂಡು, ಸಾಮಾನ್ಯ ಶಿಕ್ಷಣ ಇಲಾಖೆಯು ಗಲ್ಫ್ ರಾಷ್ಟ್ರಗಳಲ್ಲಿನ ಕೇಂದ್ರಗಳಲ್ಲಿ ನಿಗದಿಯಾಗಿದ್ದ ಎಸ್‌ಎಸ್‌ಎಲ್‌ಸಿ ಮತ್ತು ಪ್ಲಸ್-II ಪರೀಕ್ಷೆಗಳನ್ನು ಮುಂದೂಡಲು ನಿರ್ಧರಿಸಿದೆ.   ಮಾರ್ಚ್ 5 ರಂದು ನಿಗದಿಯಾಗಿದ್ದ ಎಸ್‌ಎಸ್‌ಎಲ್‌ಸಿ...

ಚಿಕ್ಕಬಳ್ಳಾಪುರ| ಆಯತುಲ್ಲಾ ಖಮೇನಿ ಹತ್ಯೆ; ಅಲಿಪುರದಲ್ಲಿ ಮೂರು ದಿನಗಳ ಕಾಲ ಶೋಕಾಚರಣೆ

ಇಸ್ರೇಲ್-ಅಮೆರಿಕ ದಾಳಿಯಲ್ಲಿ ಇರಾನ್ ಸರ್ವೋಚ್ಚ ನಾಯಕ ಆಯತುಲ್ಲಾ ಖಮೇನಿ ಹತ್ಯೆಯಿಂದ ನೊಂದಿರುವ ಗೌರಿಬಿದನೂರು ತಾಲ್ಲೂಕಿನ ಅಲಿಪುರ ಗ್ರಾಮದ ಶಿಯಾ ಸಮುದಾಯವು, ಗ್ರಾಮದಲ್ಲಿ ಮೂರು ದಿನಗಳ ಕಾಲ ಶೋಕಾಚರಣೆ ಘೋಷಿಸಿದ್ದಾರೆ. ಚಿಕ್ಕಬಳ್ಳಾಪುರ ಜಿಲ್ಲೆ ಗೌರಿಬಿದನೂರು ತಾಲೂಕಿನ...

ಸೌದಿ ಅರೇಬಿಯಾ | ಡ್ರೋನ್ ದಾಳಿ ಬಳಿಕ ರಾಸ್ ತನುರಾ ಸಂಸ್ಕರಣಾಗಾರ ಮುಚ್ಚಿದ ತೈಲ ದೈತ್ಯ ಅರಾಮ್ಕೊ

ಸೌದಿ ಅರೇಬಿಯಾದ ಸರ್ಕಾರಿ ಸ್ವಾಮ್ಯದ ತೈಲ ದೈತ್ಯ ಸಂಸ್ಥೆ ಅರಾಮ್ಕೊ ಡ್ರೋನ್ ದಾಳಿಗೆ ಒಳಗಾದ ನಂತರ ತನ್ನ ರಾಸ್ ತನುರಾ ತೈಲ ಸಂಸ್ಕರಣಾಗಾರವನ್ನು ಮುಚ್ಚಿದೆ ಎಂದು ಮೂಲಗಳನ್ನು ಉಲ್ಲೇಖಿಸಿ ರಾಯಿಟರ್ಸ್ ಸೋಮವಾರ (ಫೆ.2)...

ದೆಹಲಿ ನ್ಯಾಯಾಲಯದಿಂದ ತಕ್ಷಣ ಬಿಡುಗಡೆ ಆದೇಶ: ತಿಹಾರ್ ಜೈಲಿನಿಂದ ಹೊರಬಂದ 14 ಜೆಎನ್‌ಯು ವಿದ್ಯಾರ್ಥಿಗಳು 

ಫೆಬ್ರವರಿ 26 ರಂದು ಜವಾಹರಲಾಲ್ ನೆಹರು ವಿಶ್ವವಿದ್ಯಾಲಯದ ವಿದ್ಯಾರ್ಥಿ ಸಂಘ (ಜೆಎನ್‌ಯುಎಸ್‌ಯು) ಪ್ರತಿಭಟನೆಯ ಸಂದರ್ಭದಲ್ಲಿ ಬಂಧಿಸಲ್ಪಟ್ಟಿದ್ದ ಹದಿನಾಲ್ಕು ವಿದ್ಯಾರ್ಥಿ ನಾಯಕರನ್ನು ದೆಹಲಿ ನ್ಯಾಯಾಲಯವು ಭಾನುವಾರ ತಕ್ಷಣ ಬಿಡುಗಡೆ ಮಾಡಲು ಆದೇಶಿಸಿದ ನಂತರ, 14...

ಉತ್ತರ ಪ್ರದೇಶ| ಇಂಜೆಕ್ಷನ್ ನೀಡಿದ ಗೋರಖ್‌ಪುರದ ಮೆಡಿಕಲ್ ಸ್ಟೋರ್‌ ನಿರ್ವಾಹಕ; ಬಾಲಕಿ ಸಾವು

ಗೋರಖ್‌ಪುರದ ಉರುವಾ ಪ್ರದೇಶದ ಮೆಡಿಕಲ್ ಸ್ಟೋರ್‌ ನಿರ್ವಾಹಕನಿಂದ ಇಂಜೆಕ್ಷನ್ ಪಡೆದ ಒಂಬತ್ತು ವರ್ಷದ ಬಾಲಕಿ ಸಾವನ್ನಪ್ಪಿದ್ದಾಳೆ ಎಂದು ಪೊಲೀಸರು ಸೋಮವಾರ ತಿಳಿಸಿದ್ದಾರೆ. ಈ ಘಟನೆ ಭಾನುವಾರ ಸಂಜೆ ನಡೆದಿದೆ. ಮೃತ ದಿವ್ಯಾ ಬನ್ಸ್‌ಗಾಂವ್ ಪೊಲೀಸ್...