Homeರಾಜಕೀಯ`ನೋಡ್ರಿ ನಂಗೆ ಮಂತ್ರಿ ಸ್ಥಾನುದ ಮ್ಯಾಲೆ ಯಾವ್ ಸೀಮೆ ಮಮುಕಾರುವೂ ಇಲ್ಲ.

`ನೋಡ್ರಿ ನಂಗೆ ಮಂತ್ರಿ ಸ್ಥಾನುದ ಮ್ಯಾಲೆ ಯಾವ್ ಸೀಮೆ ಮಮುಕಾರುವೂ ಇಲ್ಲ.

- Advertisement -
- Advertisement -

`ನಾನು ಎಜ್ಜಾಟ್ಲಿ ಇಸಕಂಠ ಪರಂಪರೆಯವ್ನು. ಮಾಧ್ಯಮುದವ್ರು ನನ್ನನ್ನು ಉಗುದು ಉಪ್ಪಿನ್ಕಾಯಿ ಹಾಕಿದ್ರು ಐ ಡೋಂಟ್ ಕೇರ್. ಅವ್ರಿಗೆ ಹ್ಯೆದ್ರಿಕ್ಯೆಂಡು ನಾನಾಡೊ ಮಾತು ನಿಲ್ಸೋಕೆ ನಾನೇನು ರಣಹ್ಯೇಡಿ ಅಪ್ಪ ಅಮ್ಮುಗೆ ಹುಟ್ಟಿದೋನಲ್ಲ. ಬೈ-ದು-ಬೈ ಮುಠ್ಠಾಳತನುವ ಬಂಡ್ವಾಳ ಮಾಡ್ಕ್ಯಂಡಿರೋ ಈ ಬುದ್ದಿಜ್ಯೀವಿಗಳು ನಂ ಹಿಂದೂತ್ವಕ್ಕೆ ಮಸಿ ಬಳೀತಾ ಕುಂತವ್ರೆ ಕಣ್ರಿ. ಅವ್ರಿಗೆ ಕಡಿವಾಣ ಹಾಕ್ಲೇಬೇಕು’

– ಅನಂತ್ ಕುಮಾರ್ ಹೆಗಡೆ, ಕಾಮನ್‍ಸೆನ್ಸ್ ಕಳ್ಕೊಂಡಿರೋ ಕೇಂದ್ರ ಮಂತ್ರಿ

* * * *

`ನೋಡ್ರಿ ನಂಗೆ ಮಂತ್ರಿ ಸ್ಥಾನುದ ಮ್ಯಾಲೆ ಯಾವ್ ಸೀಮೆ ಮಮುಕಾರುವೂ ಇಲ್ಲ. ನಂ ಜಿಲ್ಲಾ ಕಾರ್ಯಕರ್ತುರು ನನ್ನನ್ನ ಮಂತ್ರಿ ಮಾಡ್ದಿದ್ದಕ್ಕೆ ಬೆಂಗ್ಳೂರಿಗೆ ಹ್ವೋಗಿ ಪಕ್ಸುದ ಸದಸ್ಯತ್ವುಕ್ಕೆ ರಾಜೀನಾಮೆ ಬಿಸಾಕಿ ಬಂದಿದಾರೆ ಅಂತ ಪೇಪರ್ರು, ಟೀವಿಲಿ ನೋಡಿ ತಿಳ್ಕಂಡಿದಿನೆ ವರ್ತು ಹೆಚ್ಚೇನು ಗೊತ್ತಿಲ್ಲ. ನನ್ ಮ್ಯೇಲಿನ ಅಭಿಮಾನುಕ್ಕೆ ಹಂಗೆ ಮಾಡ್ಯವ್ರೆ ಆಟೆಯಾ. ಅಲ್ಲಾ ಕಣ್ರೀ ಜನಸೇವೆಗಿಂತ ಮಂತ್ರಿ ಪದುವಿ ದೊಡ್ಡದಾ. ತೆಗ್‍ತೆಗೀರಿ, ಶಾಸಕನಾಗೆ ಜನಸೇವೆ ಮಾಡ್ತೀನಿ ನೋಡ್ತಾ ಇರಿ. ಐ ಪ್ರಾಮಿಸ್ ಯೂ…’

– ಶಾಮನೂರು ಶಿವಶಂಕರಪ್ಪ, ಇಳಿವಯಸ್ಸಿನ ನವಚೈತನ್ಯದ ವೈರಾಗಿ ರಾಜಕಾರಣಿ

* * * *

`ಲುಕ್ ಮೈ ಡಿಯರ್ ಹಿಂದೂ ಭಾಯಿಜಾನ್ಸ್. ನಂ ರಾಜ್ಯುದಾಗೆ ಕ್ವೊಲೆಗುಳಾದ್ರೆ ಮೋದಿ ಮಹಾತ್ಮುರನ್ನ ಕೆಲವ್ರು ಪ್ರಸ್ನೆ ಮಾಡ್ತಾರೆ. ನಾನು ಏನ್ ಹೇಳ್ತೀನಿ ಅಂದ್ರೆ, ಗೌರಿ ಮಲ್ಡರ್‍ಗೂ ಮ್ವೋದಿಗೂ ಏನ್ ಸಮಂಧ ಉಂಟು ನೀವೇ ಹೇಳ್ರಿ. ನಂ ರಾಜ್ಯುದಲ್ಲಿ ನಾಯಿ ಸತ್ರೆ, ಆ ಮಹಾತ್ಮುರು ಯಾಕೆ ಉತ್ರ ಕೊಡ್ಬೇಕು ಅಂತೀನಿ’

-ಪ್ರಮೋದ್ ಮುತಾಲಿಕ್, ತನಿಖೆಗೆ ಬೆಚ್ಚಿ ಬಿದ್ದಿರೋ ಆರೆಸ್ಸೆಸ್‍ನ ಸಾಪ್ಟ್‍ಶತ್ರು.

* * * *

`ಹಡೆಯೋ ಶಕ್ತಿ ಇದ್ದಾಗ್ಲೆ ಲಗ್ನಾ ಮಾಡ್ಬೇಕ್ರಿ..! ಹೊತ್ತಿಗೆ ಸರ್ಯಾಗಿ ಲಗ್ನಾ ಮಾಡ್ಲಿಲ್ಲ ಅಂದ್ರೆ, ಏನೂ ಪ್ರಯೋಜುನ ಇರಲ್ಲ. ಅಟಲ್ ಬಿಯಾರಿ ವಾಜ್ಪೇಯಿ ಹತ್ತಾರು ವರ್ಸ ಮೊದ್ಲೇ ಈ ದ್ಯೇಸುಕ್ಕೆ ಪರ್ದಾನಿ ಆಗ್ಬುಟ್ಟಿದ್ದ್ರೆ, ನಂ ದ್ಯೇಸುದ ಚಿತ್ರಾನೆ ಬ್ಯಾರೆ ಆಗ್ತಿತ್ತು ಕಣ್ರೀ’

– ಶಿವಾನಂದ ಎಸ್. ಪಾಟೀಲ್, ಆರೋಗ್ಯ ಮಂತ್ರಿಯಾದ ಹಡೆಯೋ ಡಿಪಾರ್ಟ್‍ಮೆಂಟ್ ಸ್ಪೆಷಲಿಸ್ಟು

* * * *

ದೇವ್ರತ್ರ ಹ್ವೋಗೊ ವಯಸ್ಸಾಗಿರೋ ಶ್ರೀರಾಮಸೇನೆಯ ಹೆಡ್ಡಾಪೀಸು ಮುತಾಲಿಕ್ಕು ಈಗ್ಲಾದ್ರು ಸಮಾಜುಕ್ಕೆ ಉಳಿ ಹಿಂಡೋದು ಬಿಟ್ಟ್‍ಬಿಟ್ಟಿ, ಸನ್ನಡುತೆ ಹಾದೀಲಿ ಬದುಕ್ಲಿ. ದೇವ್ರತ್ರ ಹ್ವೋಗಕ್ಕೆ ಟಿಕೇಟ್ ತಕೊಂಡು ಏರ್‍ಪೋರ್ಟ್‍ನಲ್ಲಿ ಕಾಯ್ತಾ ಕೂತಿರೋ ಆಯಪ್ಪನ ಬಗ್ಗೆ ನಂಗೆ ಭಾರೀ ನೋವಿದೆ ಕಣ್ರೀ. ಫಸ್ಟು ಎಸ್ಸೈಟಿನೋರು ಆವಯ್ಯುನ ಹಿಡ್ಕಂಡು ತನುಖೆ ಮಾಡ್ಬೇಕು ನೋಡ್ರಿ’

– ಸೀಎಂ ಇಬ್ರಾಹಿಂ, ರಸವತ್ತಾಗಿ ಕನ್ನಡ
ಮಾತಾಡೋ ಖಾದಿ ಸಾಬಣ್ಣ.

* * * *

`ನಾನು ಮಂತ್ರಿಗಿರಿ ಮ್ಯಾಕೆ ಶ್ಯಾನೆ ಆಸೆ ಮಡಿಕ್ಕ್ಯಂಡಿದ್ದೆ. ಆದ್ರೆ ಕೆಲವ್ರ ಹಿಕಮತ್ತಿನಿಂದ ಕೈ ತ್ಯೆಪ್ಪಿ ಹೋಗೈತಿ. ಪರ್ವಾಗಿಲ್ಲ ಶಾಸಕಿಯಾಗೆ ಜನ್ರ ಸೇವೆ ಮಾಡ್ತೀನಿ. ಬೈ-ದು-ಬೈ ನಂ ಪಕ್ಸುದ ವರಿಸ್ಟ್ರು ಅದ್ಯಾವ ಮಾನದಂಡ ನೋಡಿ ಜೈಮಾಲಾಗೆ ಸಚಿವೆ ಮಾಡಿದ್ರೋ ನಾ ಕಾಣೆ. ಮೋಸ್ಟ್ಲೀ, ಆಯಮ್ಮನ `ಸೇವೆ’ ಕಂಡು ತಥಾಸ್ತು ಅಂದಿರ್ಬೈದು. ಅಯ್ಯೋ, ಕಂಡೋರ ಇಚಾರ ನಮಿಗ್ಯಾಕೆ ಬಿಡ್ರೀ…’

– ಲಕ್ಷ್ಮಿ ಹೆಬ್ಬಾಳ್ಕರ್, ಮಿನಿಸ್ಟ್ರು ಕುರ್ಚಿಗೆ ಹಾಕಿದ್ದ ಕರ್ಚೀಪಿನಲ್ಲೇ ಕಣ್ಣೊರೆಸಿಕೊಳ್ತಿರೋ ಡೀಕೇಶಿ ಅನುಯಾಯಿ.

* * * *

`ನೋಡಿ… ಮೂವತ್ತೆಂಟು ಸೀಟು ಗ್ಯೆದ್ದ ಪಕ್ಸುಕ್ಕೆ ಎಪ್ಪತ್ತೆಂಟು ಗ್ಯೆದ್ದ ನ್ಯಾಷುನಲ್ ಪಾರ್ಟಿ ಬೆಂಬಲ ನೀಡುತ್ತೆ ಅಂದ್ರೆ, ಅದರ ಹಿಂದೆ ದ್ಯೇವ್ರ ಅನುಗ್ರಹ ಇದೆ ಅಂತ್ಲೇ ಅರ್ತ. ಕುಮಾರಸ್ವಾಮಿಯೋರಿಗೆ ಬಹುಮತ ಸಿಕ್ಕಿಲ್ಲ ಅನ್ನೋ ನೋವು ನನಿಗೆ ಇರೋದು ನಿಜಾ… ಅಧಿಕಾರ ಕೊಟ್ರೂ ದೇವ್ರು ಅವ್ರನ್ನ ಪರೀಕ್ಸ ಮಾಡ್ತಾ ಕುಂತವ್ನೆ. ಒಂದು ವರ್ಸ ಯಾವ ಚ್ಯಿಂತೇನೂ ಇಲ್ಲ. ಆಮ್ಯಾಲೆ ಹೆಂಗೋ ಗೊತ್ತಿಲ್ಲ’

– ದೇವೇಗೌಡ್ರು, ಜನತಾದಳದ ಜಾತ್ಯತೀತ ಮುತ್ಸದ್ದಿ

* * * *

`ಈ ವಿಮರ್ಶಕರು ಏನು ಅದಾರಲ್ರೀ, ಅವುರೇ ದೊಡ್ಡ ಕ್ವೊಲೆಗಡುಕರು. ಮಹಾನ್ ಪಕ್ಷಪಾತಿಗಳು. ನನ್ನ ಹೆಸುರಲ್ಲೇ `ಗೌಡ’ ಇದೆ ಅನ್ನೋ ಕಾರುಣಕ್ಕೇ ಇವುನನ್ನು ಮಟ್ಟ ಹಾಕ್ಬೇಕು ಅನ್ನೋ ಹಂತಕ್ಕೆ ವಿಮರ್ಶೆ ಇಳುದೋಗ್ಯದೆ. ಇಂಥೋರು ಗ್ವೋಡೆ, ಕಬ್ಬುಣದ ಸರಳುಗಳ್ನ ನಿರ್ಮಿಸ್ತಾ ಕುಂತವ್ರೆ. ಥೂತ್ತೇರಿ…’

– ದೊಡ್ಡರಂಗೇಗೌಡ್ರು,
ಮೋದಿ ಸ್ತುತಿಯ ಕಂಡಕಾವ್ಯ ಬರೆದು ಪದ್ಮಶ್ರೀ
ಋಣ ತೀರಿಸಿದ ಗ್ರಾಮ್ಯ ಸೊಗಡಿನ ಸಾಹಿತಿ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜಾರ್ಖಂಡ್‌ನಲ್ಲಿ ಮತ್ತೊಂದು ಗುಂಪುಹತ್ಯೆ: ದನ ಕಳ್ಳತನದ ಶಂಕೆಯಲ್ಲಿ ಮುಸ್ಲಿಂ ವ್ಯಕ್ತಿಯನ್ನು ಥಳಿಸಿ ಕೊಂದ ಗುಂಪು

ಜಾರ್ಖಂಡ್‌ನ ಗೊಡ್ಡಾ ಜಿಲ್ಲೆಯಲ್ಲಿ ಬುಧವಾರ ದನಗಳನ್ನು ಕದ್ದಿದ್ದಾನೆ ಎಂಬ ಶಂಕೆಯಲ್ಲಿ 45 ವರ್ಷದ ಮುಸ್ಲಿಂ ವ್ಯಕ್ತಿಯನ್ನು ಅಪರಿಚಿತ ಜನರ ಗುಂಪೊಂದು ಹೊಡೆದು ಕೊಂದಿದೆ ಎಂದು ಪಿಟಿಐ ವರದಿ ಮಾಡಿದೆ. ಪೊಲೀಸ್ ಅಧಿಕಾರಿಗಳನ್ನು ಉಲ್ಲೇಖಿಸಿ ವರದಿ...

ನ್ಯಾಷನಲ್ ಹೆರಾಲ್ಡ್ ಜಾಹೀರಾತು ವಿವಾದ: ಹಣಕಾಸಿನ ದಾಖಲೆ ಕೇಳಿ ಡಿಕೆ ಸಹೋದರರಿಗೆ ನೋಟಿಸ್  

ಕಾಂಗ್ರೆಸ್ ನೇತೃತ್ವದ ಕರ್ನಾಟಕ ಸರ್ಕಾರದಿಂದ ನ್ಯಾಷನಲ್ ಹೆರಾಲ್ಡ್ ಪತ್ರಿಕೆಗೆ ಬೇರೆ ಯಾವುದೇ ರಾಷ್ಟ್ರೀಯ ದಿನಪತ್ರಿಕೆಗಿಂತ ಹೆಚ್ಚಿನ ಜಾಹೀರಾತು ನಿಧಿ ದೊರೆತಿದೆ ಎಂದು ವರದಿಯಾಗಿದೆ, ಇದು ಸಾರ್ವಜನಿಕ ಹಣದ ಬಳಕೆಯ ಬಗ್ಗೆ ಪ್ರಶ್ನೆಗಳನ್ನು ಹುಟ್ಟುಹಾಕಿದೆ....

ಬಿಹಾರ: ಸರ್ಕಾರಿ ಶಾಲಾ ಶಿಕ್ಷಕರಿಗೆ ಬೀದಿ ನಾಯಿಗಳನ್ನು ಎಣಿಸುವ ಹೆಚ್ಚುವರಿ ಕರ್ತವ್ಯ ವಹಿಸಿದ ಪುರಸಭೆ  

ಪಾಟ್ನಾ: ಸುಪ್ರೀಂ ಕೋರ್ಟ್ ಬೀದಿ ನಾಯಿಗಳ ವಿಚಾರದಲ್ಲಿ ಮಹತ್ವದ ಆದೇಶ ನೀಡಿದೆ. ಸಾರ್ವಜನಿಕ ರಸ್ತೆಗಳು, ಬೀದಿಗಳು ಬೀದಿನಾಯಿ ಮುಕ್ತವಾಗಿರಬೇಕು ಎಂದು ಹೇಳಿದೆ. ಆದರೆ ಈ ಆದೇಶ ಸರ್ಕಾರಿ ಶಾಲಾ ಶಿಕ್ಷಕರ ಪಾಲಿಗೆ ದೊಡ್ಡ...

ಮಮತಾ ಬ್ಯಾನರ್ಜಿಯ ರಾಜಕೀಯ ಸಲಹಾ ಸಂಸ್ಥೆ ಐ-ಪ್ಯಾಕ್, ಅದರ ಮುಖ್ಯಸ್ಥ ಪ್ರತೀಕ್ ಜೈನ್ ಮನೆ ಮೇಲೆ ಇಡಿ ದಾಳಿ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ...

ಉತ್ತರಪ್ರದೇಶ: ಕಬ್ಬಿನ ಗದ್ದೆಯಲ್ಲಿ ಸುಟ್ಟ, ಅರೆನಗ್ನ ಮಹಿಳೆಯ ಮೃತದೇಹ ಪತ್ತೆ: ಅತ್ಯಾಚಾರ ಮಾಡಿ ಬೆಂಕಿ ಹಚ್ಚಿರುವ ಶಂಕೆ

ಹಾಪುರ್: ಉತ್ತರ ಪ್ರದೇಶದ ಹಾಪುರ್ ಜಿಲ್ಲೆಯಲ್ಲಿ ಆಘಾತಕಾರಿ ಘಟನೆಯೊಂದು ಬೆಳಕಿಗೆ ಬಂದಿದ್ದು, ಬಹದ್ದೂರ್‌ಗಢ ಪೊಲೀಸ್ ಠಾಣೆ ವ್ಯಾಪ್ತಿಯ ಲಹಾದ್ರಾ ಗ್ರಾಮದ ಇಟ್ಟಿಗೆ ಗೂಡುಗಳ ಹಿಂದಿನ ಕಬ್ಬಿನ ಗದ್ದೆಯಲ್ಲಿ ಸುಮಾರು 30 ವರ್ಷ ವಯಸ್ಸಿನ...

ಗೋಮಾಂಸ ಸೇವನೆ ಶಂಕೆಯಲ್ಲಿ ಮಾನಸಿಕ ಅಸ್ವಸ್ಥ ವ್ಯಕ್ತಿಯ ಮೇಲೆ ಕ್ರೂರ ಹಲ್ಲೆ : ಮೂವರು ದುಷ್ಕರ್ಮಿಗಳ ಬಂಧನ

ಸಾರ್ವಜನಿಕವಾಗಿ ಹಸುವನ್ನು ಕೊಂದು, ಅದರ ಮಾಂಸವನ್ನು ತಿಂದಿದ್ದಾರೆ ಎಂದು ಆರೋಪಿಸಿ ಮಾನಸಿಕ ಅಸ್ವಸ್ಥ ವ್ಯಕ್ತಿ ಮೇಲೆ ಸ್ವಘೋಷಿತ ಗೋರಕ್ಷಕರು ಕ್ರೂರವಾಗಿ ಹಲ್ಲೆ ನಡೆಸಿದ ಘಟನೆ ರಾಜಸ್ಥಾನದ ಝಾಲಾವರ್ ಜಿಲ್ಲೆಯ ಅಕ್ಲೇರಾ ತಾಲೂಕಿನ ಕಿಶನ್‌ಪುರ...

‘ನಿಮ್ಮನ್ನು ನಂಬಿ ಬಂದ ನಕ್ಸಲ್ ಕಾರ್ಯಕರ್ತರಿಗೆ ಕೊಟ್ಟ ಮಾತು ಉಳಿಸಿಕೊಳ್ಳಿ’: ಸಿದ್ದರಾಮಯ್ಯ ಅವರಿಗೆ ಮನವಿ ಮಾಡಿದ ಶಾಂತಿಗಾಗಿ ನಾಗರೀಕ ವೇದಿಕೆ

ಬೆಂಗಳೂರು: ‘ಮುಖ್ಯವಾಹಿನಿಗೆ ಬಂದ ಏಳೂ ಜನ ನಕ್ಸಲೀಯರು ಜೈಲಿನಲ್ಲೇ ಇದ್ದಾರೆ. ಬಹಳ ಸೊರಗಿದ್ದಾರೆ. ತೀವ್ರ ದೈಹಿಕ ಹಾಗೂ ಮಾನಸಿಕ ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ. ಅವರನ್ನು ಹೋಗಿ ಕಾಣುವುದೇ ನಮ್ಮ ಪಾಲಿಗೆ ದೊಡ್ಡ ಹಿಂಸೆಯಾಗಿದೆ ಎಂದು...

ಕೋಗಿಲು ಮನೆಗಳ ನೆಲಸಮ : ಪ್ರತಿಭಟಿಸಿದ ಹೋರಾಟಗಾರರ ಮೇಲೆ ಎಫ್‌ಐಆರ್

ಕೋಗಿಲು ಬಡಾವಣೆಯಲ್ಲಿ ಬಡವರ ಮನೆಗಳ ನೆಲಸಮ ವೇಳೆ ಬಿಗುವಿನ ವಾತಾವರಣ ಸೃಷ್ಟಿಸಿದ್ದಾರೆ ಎಂಬ ಆರೋಪದ ಮೇಲೆ ಹೋರಾಟಗಾರರ ವಿರುದ್ದ ಯಲಹಂಕ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ. ಜನಪರ ವೇದಿಕೆಯ ಮುಖಂಡರಾದ ಗೌರಮ್ಮ ಮತ್ತು ಮನೋಹರ್,...

17 ವರ್ಷದ ಮಹಿಳಾ ಅಥ್ಲೀಟ್ ಮೇಲೆ ಲೈಂಗಿಕ ದೌರ್ಜನ್ಯ ಆರೋಪ: ರಾಷ್ಟ್ರೀಯ ಶೂಟಿಂಗ್ ತರಬೇತುದಾರ ಅಮಾನತು

ಫರಿದಾಬಾದ್‌ನ ಹೋಟೆಲ್‌ನಲ್ಲಿ 17 ವರ್ಷದ ರಾಷ್ಟ್ರಮಟ್ಟದ ಮಹಿಳಾ ಶೂಟರ್ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇಲೆ ಹರಿಯಾಣ ಪೊಲೀಸರು ಪ್ರಕರಣ ದಾಖಲಿಸಿದ ನಂತರ ರಾಷ್ಟ್ರೀಯ ಶೂಟಿಂಗ್ ತರಬೇತುದಾರ ಅಂಕುಶ್ ಭಾರದ್ವಾಜ್ ಅವರನ್ನು...

ಸುಪ್ರೀಂ ಕೋರ್ಟ್‌ನಿಂದ ಜಾಮೀನು : ಗುಲ್ಫಿಶಾ ಫಾತಿಮಾ ಸೇರಿದಂತೆ ನಾಲ್ವರು ಜೈಲಿನಿಂದ ಬಿಡುಗಡೆ

ಈಶಾನ್ಯ ದೆಹಲಿಯ 2020ರ ಗಲಭೆ ಪಿತೂರಿ ಆರೋಪದಲ್ಲಿ ಬಂಧಿತರಾಗಿದ್ದ ನಾಲ್ವರು ವಿದ್ಯಾರ್ಥಿ ಹೋರಾಟಗಾರರು ಬುಧವಾರ (ಜ.7) ಜೈಲಿನಿಂದ ಹೊರ ಬಂದಿದ್ದಾರೆ. ಗುಲ್ಫಿಶಾ ಫಾತಿಮಾ, ಮೀರಾನ್ ಹೈದರ್, ಶಿಫಾ ಉರ್ ರೆಹಮಾನ್ ಮತ್ತು ಮೊಹಮ್ಮದ್ ಸಲೀಮ್...