Homeರಾಜಕೀಯ`ನೋಡ್ರಿ ನಂಗೆ ಮಂತ್ರಿ ಸ್ಥಾನುದ ಮ್ಯಾಲೆ ಯಾವ್ ಸೀಮೆ ಮಮುಕಾರುವೂ ಇಲ್ಲ.

`ನೋಡ್ರಿ ನಂಗೆ ಮಂತ್ರಿ ಸ್ಥಾನುದ ಮ್ಯಾಲೆ ಯಾವ್ ಸೀಮೆ ಮಮುಕಾರುವೂ ಇಲ್ಲ.

- Advertisement -
- Advertisement -

`ನಾನು ಎಜ್ಜಾಟ್ಲಿ ಇಸಕಂಠ ಪರಂಪರೆಯವ್ನು. ಮಾಧ್ಯಮುದವ್ರು ನನ್ನನ್ನು ಉಗುದು ಉಪ್ಪಿನ್ಕಾಯಿ ಹಾಕಿದ್ರು ಐ ಡೋಂಟ್ ಕೇರ್. ಅವ್ರಿಗೆ ಹ್ಯೆದ್ರಿಕ್ಯೆಂಡು ನಾನಾಡೊ ಮಾತು ನಿಲ್ಸೋಕೆ ನಾನೇನು ರಣಹ್ಯೇಡಿ ಅಪ್ಪ ಅಮ್ಮುಗೆ ಹುಟ್ಟಿದೋನಲ್ಲ. ಬೈ-ದು-ಬೈ ಮುಠ್ಠಾಳತನುವ ಬಂಡ್ವಾಳ ಮಾಡ್ಕ್ಯಂಡಿರೋ ಈ ಬುದ್ದಿಜ್ಯೀವಿಗಳು ನಂ ಹಿಂದೂತ್ವಕ್ಕೆ ಮಸಿ ಬಳೀತಾ ಕುಂತವ್ರೆ ಕಣ್ರಿ. ಅವ್ರಿಗೆ ಕಡಿವಾಣ ಹಾಕ್ಲೇಬೇಕು’

– ಅನಂತ್ ಕುಮಾರ್ ಹೆಗಡೆ, ಕಾಮನ್‍ಸೆನ್ಸ್ ಕಳ್ಕೊಂಡಿರೋ ಕೇಂದ್ರ ಮಂತ್ರಿ

* * * *

`ನೋಡ್ರಿ ನಂಗೆ ಮಂತ್ರಿ ಸ್ಥಾನುದ ಮ್ಯಾಲೆ ಯಾವ್ ಸೀಮೆ ಮಮುಕಾರುವೂ ಇಲ್ಲ. ನಂ ಜಿಲ್ಲಾ ಕಾರ್ಯಕರ್ತುರು ನನ್ನನ್ನ ಮಂತ್ರಿ ಮಾಡ್ದಿದ್ದಕ್ಕೆ ಬೆಂಗ್ಳೂರಿಗೆ ಹ್ವೋಗಿ ಪಕ್ಸುದ ಸದಸ್ಯತ್ವುಕ್ಕೆ ರಾಜೀನಾಮೆ ಬಿಸಾಕಿ ಬಂದಿದಾರೆ ಅಂತ ಪೇಪರ್ರು, ಟೀವಿಲಿ ನೋಡಿ ತಿಳ್ಕಂಡಿದಿನೆ ವರ್ತು ಹೆಚ್ಚೇನು ಗೊತ್ತಿಲ್ಲ. ನನ್ ಮ್ಯೇಲಿನ ಅಭಿಮಾನುಕ್ಕೆ ಹಂಗೆ ಮಾಡ್ಯವ್ರೆ ಆಟೆಯಾ. ಅಲ್ಲಾ ಕಣ್ರೀ ಜನಸೇವೆಗಿಂತ ಮಂತ್ರಿ ಪದುವಿ ದೊಡ್ಡದಾ. ತೆಗ್‍ತೆಗೀರಿ, ಶಾಸಕನಾಗೆ ಜನಸೇವೆ ಮಾಡ್ತೀನಿ ನೋಡ್ತಾ ಇರಿ. ಐ ಪ್ರಾಮಿಸ್ ಯೂ…’

– ಶಾಮನೂರು ಶಿವಶಂಕರಪ್ಪ, ಇಳಿವಯಸ್ಸಿನ ನವಚೈತನ್ಯದ ವೈರಾಗಿ ರಾಜಕಾರಣಿ

* * * *

`ಲುಕ್ ಮೈ ಡಿಯರ್ ಹಿಂದೂ ಭಾಯಿಜಾನ್ಸ್. ನಂ ರಾಜ್ಯುದಾಗೆ ಕ್ವೊಲೆಗುಳಾದ್ರೆ ಮೋದಿ ಮಹಾತ್ಮುರನ್ನ ಕೆಲವ್ರು ಪ್ರಸ್ನೆ ಮಾಡ್ತಾರೆ. ನಾನು ಏನ್ ಹೇಳ್ತೀನಿ ಅಂದ್ರೆ, ಗೌರಿ ಮಲ್ಡರ್‍ಗೂ ಮ್ವೋದಿಗೂ ಏನ್ ಸಮಂಧ ಉಂಟು ನೀವೇ ಹೇಳ್ರಿ. ನಂ ರಾಜ್ಯುದಲ್ಲಿ ನಾಯಿ ಸತ್ರೆ, ಆ ಮಹಾತ್ಮುರು ಯಾಕೆ ಉತ್ರ ಕೊಡ್ಬೇಕು ಅಂತೀನಿ’

-ಪ್ರಮೋದ್ ಮುತಾಲಿಕ್, ತನಿಖೆಗೆ ಬೆಚ್ಚಿ ಬಿದ್ದಿರೋ ಆರೆಸ್ಸೆಸ್‍ನ ಸಾಪ್ಟ್‍ಶತ್ರು.

* * * *

`ಹಡೆಯೋ ಶಕ್ತಿ ಇದ್ದಾಗ್ಲೆ ಲಗ್ನಾ ಮಾಡ್ಬೇಕ್ರಿ..! ಹೊತ್ತಿಗೆ ಸರ್ಯಾಗಿ ಲಗ್ನಾ ಮಾಡ್ಲಿಲ್ಲ ಅಂದ್ರೆ, ಏನೂ ಪ್ರಯೋಜುನ ಇರಲ್ಲ. ಅಟಲ್ ಬಿಯಾರಿ ವಾಜ್ಪೇಯಿ ಹತ್ತಾರು ವರ್ಸ ಮೊದ್ಲೇ ಈ ದ್ಯೇಸುಕ್ಕೆ ಪರ್ದಾನಿ ಆಗ್ಬುಟ್ಟಿದ್ದ್ರೆ, ನಂ ದ್ಯೇಸುದ ಚಿತ್ರಾನೆ ಬ್ಯಾರೆ ಆಗ್ತಿತ್ತು ಕಣ್ರೀ’

– ಶಿವಾನಂದ ಎಸ್. ಪಾಟೀಲ್, ಆರೋಗ್ಯ ಮಂತ್ರಿಯಾದ ಹಡೆಯೋ ಡಿಪಾರ್ಟ್‍ಮೆಂಟ್ ಸ್ಪೆಷಲಿಸ್ಟು

* * * *

ದೇವ್ರತ್ರ ಹ್ವೋಗೊ ವಯಸ್ಸಾಗಿರೋ ಶ್ರೀರಾಮಸೇನೆಯ ಹೆಡ್ಡಾಪೀಸು ಮುತಾಲಿಕ್ಕು ಈಗ್ಲಾದ್ರು ಸಮಾಜುಕ್ಕೆ ಉಳಿ ಹಿಂಡೋದು ಬಿಟ್ಟ್‍ಬಿಟ್ಟಿ, ಸನ್ನಡುತೆ ಹಾದೀಲಿ ಬದುಕ್ಲಿ. ದೇವ್ರತ್ರ ಹ್ವೋಗಕ್ಕೆ ಟಿಕೇಟ್ ತಕೊಂಡು ಏರ್‍ಪೋರ್ಟ್‍ನಲ್ಲಿ ಕಾಯ್ತಾ ಕೂತಿರೋ ಆಯಪ್ಪನ ಬಗ್ಗೆ ನಂಗೆ ಭಾರೀ ನೋವಿದೆ ಕಣ್ರೀ. ಫಸ್ಟು ಎಸ್ಸೈಟಿನೋರು ಆವಯ್ಯುನ ಹಿಡ್ಕಂಡು ತನುಖೆ ಮಾಡ್ಬೇಕು ನೋಡ್ರಿ’

– ಸೀಎಂ ಇಬ್ರಾಹಿಂ, ರಸವತ್ತಾಗಿ ಕನ್ನಡ
ಮಾತಾಡೋ ಖಾದಿ ಸಾಬಣ್ಣ.

* * * *

`ನಾನು ಮಂತ್ರಿಗಿರಿ ಮ್ಯಾಕೆ ಶ್ಯಾನೆ ಆಸೆ ಮಡಿಕ್ಕ್ಯಂಡಿದ್ದೆ. ಆದ್ರೆ ಕೆಲವ್ರ ಹಿಕಮತ್ತಿನಿಂದ ಕೈ ತ್ಯೆಪ್ಪಿ ಹೋಗೈತಿ. ಪರ್ವಾಗಿಲ್ಲ ಶಾಸಕಿಯಾಗೆ ಜನ್ರ ಸೇವೆ ಮಾಡ್ತೀನಿ. ಬೈ-ದು-ಬೈ ನಂ ಪಕ್ಸುದ ವರಿಸ್ಟ್ರು ಅದ್ಯಾವ ಮಾನದಂಡ ನೋಡಿ ಜೈಮಾಲಾಗೆ ಸಚಿವೆ ಮಾಡಿದ್ರೋ ನಾ ಕಾಣೆ. ಮೋಸ್ಟ್ಲೀ, ಆಯಮ್ಮನ `ಸೇವೆ’ ಕಂಡು ತಥಾಸ್ತು ಅಂದಿರ್ಬೈದು. ಅಯ್ಯೋ, ಕಂಡೋರ ಇಚಾರ ನಮಿಗ್ಯಾಕೆ ಬಿಡ್ರೀ…’

– ಲಕ್ಷ್ಮಿ ಹೆಬ್ಬಾಳ್ಕರ್, ಮಿನಿಸ್ಟ್ರು ಕುರ್ಚಿಗೆ ಹಾಕಿದ್ದ ಕರ್ಚೀಪಿನಲ್ಲೇ ಕಣ್ಣೊರೆಸಿಕೊಳ್ತಿರೋ ಡೀಕೇಶಿ ಅನುಯಾಯಿ.

* * * *

`ನೋಡಿ… ಮೂವತ್ತೆಂಟು ಸೀಟು ಗ್ಯೆದ್ದ ಪಕ್ಸುಕ್ಕೆ ಎಪ್ಪತ್ತೆಂಟು ಗ್ಯೆದ್ದ ನ್ಯಾಷುನಲ್ ಪಾರ್ಟಿ ಬೆಂಬಲ ನೀಡುತ್ತೆ ಅಂದ್ರೆ, ಅದರ ಹಿಂದೆ ದ್ಯೇವ್ರ ಅನುಗ್ರಹ ಇದೆ ಅಂತ್ಲೇ ಅರ್ತ. ಕುಮಾರಸ್ವಾಮಿಯೋರಿಗೆ ಬಹುಮತ ಸಿಕ್ಕಿಲ್ಲ ಅನ್ನೋ ನೋವು ನನಿಗೆ ಇರೋದು ನಿಜಾ… ಅಧಿಕಾರ ಕೊಟ್ರೂ ದೇವ್ರು ಅವ್ರನ್ನ ಪರೀಕ್ಸ ಮಾಡ್ತಾ ಕುಂತವ್ನೆ. ಒಂದು ವರ್ಸ ಯಾವ ಚ್ಯಿಂತೇನೂ ಇಲ್ಲ. ಆಮ್ಯಾಲೆ ಹೆಂಗೋ ಗೊತ್ತಿಲ್ಲ’

– ದೇವೇಗೌಡ್ರು, ಜನತಾದಳದ ಜಾತ್ಯತೀತ ಮುತ್ಸದ್ದಿ

* * * *

`ಈ ವಿಮರ್ಶಕರು ಏನು ಅದಾರಲ್ರೀ, ಅವುರೇ ದೊಡ್ಡ ಕ್ವೊಲೆಗಡುಕರು. ಮಹಾನ್ ಪಕ್ಷಪಾತಿಗಳು. ನನ್ನ ಹೆಸುರಲ್ಲೇ `ಗೌಡ’ ಇದೆ ಅನ್ನೋ ಕಾರುಣಕ್ಕೇ ಇವುನನ್ನು ಮಟ್ಟ ಹಾಕ್ಬೇಕು ಅನ್ನೋ ಹಂತಕ್ಕೆ ವಿಮರ್ಶೆ ಇಳುದೋಗ್ಯದೆ. ಇಂಥೋರು ಗ್ವೋಡೆ, ಕಬ್ಬುಣದ ಸರಳುಗಳ್ನ ನಿರ್ಮಿಸ್ತಾ ಕುಂತವ್ರೆ. ಥೂತ್ತೇರಿ…’

– ದೊಡ್ಡರಂಗೇಗೌಡ್ರು,
ಮೋದಿ ಸ್ತುತಿಯ ಕಂಡಕಾವ್ಯ ಬರೆದು ಪದ್ಮಶ್ರೀ
ಋಣ ತೀರಿಸಿದ ಗ್ರಾಮ್ಯ ಸೊಗಡಿನ ಸಾಹಿತಿ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಭಗವದ್ಗೀತೆ ಕಾರ್ಯಕ್ರಮದಲ್ಲಿ ಚಿಕನ್ ಪಫ್ಸ್ ಮಾರಿದ ಮುಸ್ಲಿಂ ವ್ಯಾಪಾರಿಗೆ ಥಳಿತ : ಮೂವರ ಬಂಧನ

ಲಕ್ಷ ಕಂಠ ಗೀತಾ ಪಾರಾಯಣ (ಸುಮಾರು 5 ಲಕ್ಷ ಜನರಿಂದ ಭಗವದ್ಗೀತೆ ಪಾರಾಯಣ) ಕಾರ್ಯಕ್ರಮದಲ್ಲಿ ಚಿಕನ್ ಪಫ್ಸ್ ಮಾರಿದ ಬಡ ಮುಸ್ಲಿಂ ವ್ಯಾಪಾರಿಗೆ ಥಳಿಸಿದ ಘಟನೆ ಭಾನುವಾರ (ಡಿಸೆಂಬರ್ 7) ಕೋಲ್ಕತ್ತಾದ ಬ್ರಿಗೇಡ್...

ಪರಿಶಿಷ್ಟ ಜಾತಿ ಪಟ್ಟಿಗೆ ಜಮ್ಮು-ಕಾಶ್ಮೀರದ ವಾಲ್ಮೀಕಿ ಸಮುದಾಯ: ಒಕ್ಕೂಟ ಸರ್ಕಾರ

ಜಮ್ಮು ಮತ್ತು ಕಾಶ್ಮೀರದ ವಾಲ್ಮೀಕಿ ಸಮುದಾಯವನ್ನು ಈಗ ಅಧಿಕೃತವಾಗಿ ಪರಿಶಿಷ್ಟ ಜಾತಿ ಪಟ್ಟಿಗೆ ಸೇರಿಸಲಾಗಿದೆ ಎಂದು ಕೇಂದ್ರ ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಸಚಿವಾಲಯ ಬುಧವಾರ ಸಂಸತ್ತಿಗೆ ತಿಳಿಸಿದೆ. ಇತ್ತೀಚಿನ ವರ್ಷಗಳಲ್ಲಿ ಪ್ರಕ್ರಿಯೆಗೊಳಿಸಲಾದ...

ತಿರುಪತಿ ದೇಣಿಗೆ ಕಳ್ಳತನ ಪ್ರಕರಣ: ಕಾನೂನು ಕ್ರಮ ತೆಗೆದುಕೊಳ್ಳವಂತೆ ‘ಸಿಐಡಿ-ಎಸಿಬಿ’ಗೆ ಹೈಕೋರ್ಟ್ ನಿರ್ದೇಶನ

ತಿರುಮಲ ತಿರುಪತಿ ದೇವಸ್ಥಾನದ ಪರಕಮಣಿ (ದೇಣಿಗೆ ಪೆಟ್ಟಿಗೆ) ಕಳ್ಳತನ ಪ್ರಕರಣದಲ್ಲಿ ಎಫ್‌ಐಆರ್ ದಾಖಲಿಸಿ ಕಾನೂನು ಕ್ರಮ ಕೈಗೊಳ್ಳುವಂತೆ ಆಂಧ್ರಪ್ರದೇಶ ಹೈಕೋರ್ಟ್ ರಾಜ್ಯದ ಅಪರಾಧ ತನಿಖಾ ಇಲಾಖೆ (ಸಿಐಡಿ) ಮತ್ತು ಭ್ರಷ್ಟಾಚಾರ ನಿಗ್ರಹ ದಳ...

ದಲಿತರ ಮನೆಯಲ್ಲಿ ಊಟ ಮಾಡಿದ ಆರ್‌ಎಸ್‌ಎಸ್‌ ಕಾರ್ಯಕರ್ತನ ಕುಟುಂಬಕ್ಕೆ ಸಾಮಾಜಿಕ ಬಹಿಷ್ಕಾರ

ಗ್ರಾಮೀಣ ಭಾರತದ ಕೆಲವು ಭಾಗಗಳಲ್ಲಿ ಜಾತಿ ಪೂರ್ವಾಗ್ರಹಗಳು ಎಷ್ಟು ಆಳವಾಗಿ ಉಳಿದಿವೆ ಎಂಬುದನ್ನು ನೆನಪಿಸುವ ರೀತಿಯಲ್ಲಿ, ಮಧ್ಯಪ್ರದೇಶದ ರೈಸೇನ್ ಜಿಲ್ಲೆಯ ಹಳ್ಳಿಯೊಂದರಿಂದ ಸಾಮಾಜಿಕ ಬಹಿಷ್ಕಾರ ಮತ್ತು ಅಸ್ಪೃಶ್ಯತೆಯ ಪ್ರಕರಣ ಬೆಳಕಿಗೆ ಬಂದಿದೆ. ಆರ್‌ಎಸ್‌ಎಸ್...

ಅಸ್ಸಾಮಿ ಗಾಯಕನ ಬಂಧನ ಬಗ್ಗೆ ಟೈಮ್ಸ್ ನೌ ನವಭಾರತ್‌ ಪೂರ್ವಾಗ್ರಹ ಪೀಡಿತ ವರದಿ : ವಾರದೊಳಗೆ ತೆಗೆದು ಹಾಕಲು ಎನ್‌ಬಿಡಿಎಸ್‌ಎ ಆದೇಶ

ಸೆಪ್ಟೆಂಬರ್ 2024ರಲ್ಲಿ ಅಸ್ಸಾಮಿ ಗಾಯಕ ಅಲ್ತಾಫ್ ಹುಸೇನ್ ಬಂಧನದ ಬಗ್ಗೆ ಪ್ರಸಾರವಾದ ಕಾರ್ಯಕ್ರಮದ ಭಾಗಗಳನ್ನು ತೆಗೆದುಹಾಕುವಂತೆ ಸುದ್ದಿ ಪ್ರಸಾರ ಮತ್ತು ಡಿಜಿಟಲ್ ಮಾನದಂಡಗಳ ಪ್ರಾಧಿಕಾರವು (ಎನ್‌ಬಿಡಿಎಸ್‌ಎ) ಟೈಮ್ಸ್ ನೌ ನವಭಾರತ್‌ಗೆ ನಿರ್ದೇಶನ ನೀಡಿದೆ. ಡಿಸೆಂಬರ್...

ಸಾವರ್ಕರ್ ಪ್ರಶಸ್ತಿ ಬಗ್ಗೆ ನನಗೆ ಗೊತ್ತೂ ಇಲ್ಲ, ಸ್ವೀಕರಿಸುವುದೂ ಇಲ್ಲ : ಶಶಿ ತರೂರ್

ಹಿಂದುತ್ವವಾದಿ ವಿ.ಡಿ ಸಾವರ್ಕರ್ ಹೆಸರಿನಲ್ಲಿ ಪ್ರಶಸ್ತಿ ಘೋಷಣೆಯಾದ ಬಗ್ಗೆ ನನಗೆ ಗೊತ್ತೂ ಇಲ್ಲ, ಅಂತಹ ಪ್ರಶಸ್ತಿ ಸ್ವೀಕರಿಸುವುದೂ ಇಲ್ಲ ಎಂದು ಕಾಂಗ್ರೆಸ್ ನಾಯಕ ಹಾಗೂ ತಿರುವನಂತಪುರಂ ಸಂಸದ ಶಶಿ ತರೂರ್ ಬುಧವಾರ (ಡಿಸೆಂಬರ್...

ಮಧ್ಯಪ್ರದೇಶ| ಯುವಕನನ್ನು ಅಪಹರಿಸಿ ಮಾದಕವಸ್ತು ಕಳ್ಳಸಾಗಣೆ ಪ್ರಕರಣದಲ್ಲಿ ಸಿಲುಕಿಸಿದ ಪೊಲೀಸರು

18 ವರ್ಷದ ಯುವಕನನ್ನು ಬಸ್ಸಿನಿಂದ ಅಪಹರಿಸಿ ಮಾದಕವಸ್ತು ಕಳ್ಳಸಾಗಣೆ ಪ್ರಕರಣದಲ್ಲಿ ಸುಳ್ಳು ಆರೋಪ ಹೊರಿಸಿದ ಆರೋಪದ ಮೇಲೆ ಮಧ್ಯಪ್ರದೇಶದ ಆರು ಪೊಲೀಸ್ ಸಿಬ್ಬಂದಿಯನ್ನು ಅಮಾನತುಗೊಳಿಸಲಾಗಿದೆ. ತನಿಖೆಯ ಸಮಗ್ರತೆ ಮತ್ತು ಕಾನೂನುಬದ್ಧತೆಯನ್ನು ಪ್ರಶ್ನಿಸಿದ ಇಂದೋರ್...

ಮುಟ್ಟಿನ ರಜೆ ನೀತಿ ಬಲವಾಗಿ ಸಮರ್ಥಿಸಿಕೊಂಡ ಸರ್ಕಾರ : ಅಧಿಸೂಚನೆ ತಡೆ ತೆರವುಗೊಳಿಸಿದ ಹೈಕೋರ್ಟ್

ಮಹಿಳಾ ಉದ್ಯೋಗಿಗಳಿಗೆ ಪ್ರತಿ ತಿಂಗಳು ಒಂದು ದಿನ ವೇತನ ಸಹಿತ ಮುಟ್ಟಿನ ರಜೆ ನೀಡುವ ಸಂಬಂಧ ಹೊರಡಿಸಿದ್ದ ತನ್ನ ಅಧಿಸೂಚನೆಯನ್ನು ರಾಜ್ಯ ಸರ್ಕಾರ ಹೈಕೋರ್ಟ್‌ನಲ್ಲಿ ಬಲವಾಗಿ ಸಮರ್ಥಿಸಿಕೊಂಡಿದೆ. ಸರ್ಕಾರದ ವಾದ ಆಲಿಸಿದ ಹೈಕೋರ್ಟ್, ಅಧಿಸೂಚನೆಗೆ...

ದೆಹಲಿ ಗಲಭೆ ಪ್ರಕರಣ : ಉಮರ್ ಖಾಲಿದ್, ಶಾರ್ಜೀಲ್ ಇಮಾಮ್ ಮತ್ತಿತರರ ಜಾಮೀನು ಅರ್ಜಿ ತೀರ್ಪು ಕಾಯ್ದಿರಿಸಿದ ಸುಪ್ರೀಂ ಕೋರ್ಟ್

ದೆಹಲಿ ಗಲಭೆ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್, ಶಾರ್ಜೀಲ್ ಇಮಾಮ್, ಗುಲ್ಫಿಶಾ ಫಾತಿಮಾ, ಮೀರಾನ್ ಹೈದರ್, ಶಿಫಾ ಉರ್ ರೆಹಮಾನ್, ಮೊಹಮ್ಮದ್ ಸಲೀಮ್ ಖಾನ್ ಮತ್ತು ಶಾದಾಬ್ ಅಹ್ಮದ್ ಸಲ್ಲಿಸಿದ್ದ ಅರ್ಜಿಗಳ...

ಪಕ್ಷಪಾತ ಆರೋಪದಿಂದ ದೀಪಸ್ತಂಭದವರೆಗೆ..ಕಟಕಟೆಯಲ್ಲಿರುವ ನ್ಯಾಯಮೂರ್ತಿ ಸ್ವಾಮಿನಾಥನ್ ಯಾರು?

ಮದ್ರಾಸ್ ಹೈಕೋರ್ಟ್‌ನ ಮಧುರೈ ಪೀಠದ ನ್ಯಾಯಮೂರ್ತಿ ಜಿ.ಆರ್. ಸ್ವಾಮಿನಾಥನ್ ಅವರ ಪದಚ್ಯುತಿ ಕೋರಿ ಮಂಗಳವಾರ (ಡಿಸೆಂಬರ್ 9) ಲೋಕಸಭೆ ಸ್ಪೀಕರ್‌ ಓಂ ಬಿರ್ಲಾ ಅವರಿಗೆ ನೋಟಿಸ್ ಸಲ್ಲಿಸಲಾಗಿದೆ. ತಮಿಳುನಾಡಿನ ಡಿಎಂಕೆ ಸೇರಿದಂತೆ ವಿವಿಧ...