Homeರಾಜಕೀಯ`ನೋಡ್ರಿ ನಂಗೆ ಮಂತ್ರಿ ಸ್ಥಾನುದ ಮ್ಯಾಲೆ ಯಾವ್ ಸೀಮೆ ಮಮುಕಾರುವೂ ಇಲ್ಲ.

`ನೋಡ್ರಿ ನಂಗೆ ಮಂತ್ರಿ ಸ್ಥಾನುದ ಮ್ಯಾಲೆ ಯಾವ್ ಸೀಮೆ ಮಮುಕಾರುವೂ ಇಲ್ಲ.

- Advertisement -
- Advertisement -

`ನಾನು ಎಜ್ಜಾಟ್ಲಿ ಇಸಕಂಠ ಪರಂಪರೆಯವ್ನು. ಮಾಧ್ಯಮುದವ್ರು ನನ್ನನ್ನು ಉಗುದು ಉಪ್ಪಿನ್ಕಾಯಿ ಹಾಕಿದ್ರು ಐ ಡೋಂಟ್ ಕೇರ್. ಅವ್ರಿಗೆ ಹ್ಯೆದ್ರಿಕ್ಯೆಂಡು ನಾನಾಡೊ ಮಾತು ನಿಲ್ಸೋಕೆ ನಾನೇನು ರಣಹ್ಯೇಡಿ ಅಪ್ಪ ಅಮ್ಮುಗೆ ಹುಟ್ಟಿದೋನಲ್ಲ. ಬೈ-ದು-ಬೈ ಮುಠ್ಠಾಳತನುವ ಬಂಡ್ವಾಳ ಮಾಡ್ಕ್ಯಂಡಿರೋ ಈ ಬುದ್ದಿಜ್ಯೀವಿಗಳು ನಂ ಹಿಂದೂತ್ವಕ್ಕೆ ಮಸಿ ಬಳೀತಾ ಕುಂತವ್ರೆ ಕಣ್ರಿ. ಅವ್ರಿಗೆ ಕಡಿವಾಣ ಹಾಕ್ಲೇಬೇಕು’

– ಅನಂತ್ ಕುಮಾರ್ ಹೆಗಡೆ, ಕಾಮನ್‍ಸೆನ್ಸ್ ಕಳ್ಕೊಂಡಿರೋ ಕೇಂದ್ರ ಮಂತ್ರಿ

* * * *

`ನೋಡ್ರಿ ನಂಗೆ ಮಂತ್ರಿ ಸ್ಥಾನುದ ಮ್ಯಾಲೆ ಯಾವ್ ಸೀಮೆ ಮಮುಕಾರುವೂ ಇಲ್ಲ. ನಂ ಜಿಲ್ಲಾ ಕಾರ್ಯಕರ್ತುರು ನನ್ನನ್ನ ಮಂತ್ರಿ ಮಾಡ್ದಿದ್ದಕ್ಕೆ ಬೆಂಗ್ಳೂರಿಗೆ ಹ್ವೋಗಿ ಪಕ್ಸುದ ಸದಸ್ಯತ್ವುಕ್ಕೆ ರಾಜೀನಾಮೆ ಬಿಸಾಕಿ ಬಂದಿದಾರೆ ಅಂತ ಪೇಪರ್ರು, ಟೀವಿಲಿ ನೋಡಿ ತಿಳ್ಕಂಡಿದಿನೆ ವರ್ತು ಹೆಚ್ಚೇನು ಗೊತ್ತಿಲ್ಲ. ನನ್ ಮ್ಯೇಲಿನ ಅಭಿಮಾನುಕ್ಕೆ ಹಂಗೆ ಮಾಡ್ಯವ್ರೆ ಆಟೆಯಾ. ಅಲ್ಲಾ ಕಣ್ರೀ ಜನಸೇವೆಗಿಂತ ಮಂತ್ರಿ ಪದುವಿ ದೊಡ್ಡದಾ. ತೆಗ್‍ತೆಗೀರಿ, ಶಾಸಕನಾಗೆ ಜನಸೇವೆ ಮಾಡ್ತೀನಿ ನೋಡ್ತಾ ಇರಿ. ಐ ಪ್ರಾಮಿಸ್ ಯೂ…’

– ಶಾಮನೂರು ಶಿವಶಂಕರಪ್ಪ, ಇಳಿವಯಸ್ಸಿನ ನವಚೈತನ್ಯದ ವೈರಾಗಿ ರಾಜಕಾರಣಿ

* * * *

`ಲುಕ್ ಮೈ ಡಿಯರ್ ಹಿಂದೂ ಭಾಯಿಜಾನ್ಸ್. ನಂ ರಾಜ್ಯುದಾಗೆ ಕ್ವೊಲೆಗುಳಾದ್ರೆ ಮೋದಿ ಮಹಾತ್ಮುರನ್ನ ಕೆಲವ್ರು ಪ್ರಸ್ನೆ ಮಾಡ್ತಾರೆ. ನಾನು ಏನ್ ಹೇಳ್ತೀನಿ ಅಂದ್ರೆ, ಗೌರಿ ಮಲ್ಡರ್‍ಗೂ ಮ್ವೋದಿಗೂ ಏನ್ ಸಮಂಧ ಉಂಟು ನೀವೇ ಹೇಳ್ರಿ. ನಂ ರಾಜ್ಯುದಲ್ಲಿ ನಾಯಿ ಸತ್ರೆ, ಆ ಮಹಾತ್ಮುರು ಯಾಕೆ ಉತ್ರ ಕೊಡ್ಬೇಕು ಅಂತೀನಿ’

-ಪ್ರಮೋದ್ ಮುತಾಲಿಕ್, ತನಿಖೆಗೆ ಬೆಚ್ಚಿ ಬಿದ್ದಿರೋ ಆರೆಸ್ಸೆಸ್‍ನ ಸಾಪ್ಟ್‍ಶತ್ರು.

* * * *

`ಹಡೆಯೋ ಶಕ್ತಿ ಇದ್ದಾಗ್ಲೆ ಲಗ್ನಾ ಮಾಡ್ಬೇಕ್ರಿ..! ಹೊತ್ತಿಗೆ ಸರ್ಯಾಗಿ ಲಗ್ನಾ ಮಾಡ್ಲಿಲ್ಲ ಅಂದ್ರೆ, ಏನೂ ಪ್ರಯೋಜುನ ಇರಲ್ಲ. ಅಟಲ್ ಬಿಯಾರಿ ವಾಜ್ಪೇಯಿ ಹತ್ತಾರು ವರ್ಸ ಮೊದ್ಲೇ ಈ ದ್ಯೇಸುಕ್ಕೆ ಪರ್ದಾನಿ ಆಗ್ಬುಟ್ಟಿದ್ದ್ರೆ, ನಂ ದ್ಯೇಸುದ ಚಿತ್ರಾನೆ ಬ್ಯಾರೆ ಆಗ್ತಿತ್ತು ಕಣ್ರೀ’

– ಶಿವಾನಂದ ಎಸ್. ಪಾಟೀಲ್, ಆರೋಗ್ಯ ಮಂತ್ರಿಯಾದ ಹಡೆಯೋ ಡಿಪಾರ್ಟ್‍ಮೆಂಟ್ ಸ್ಪೆಷಲಿಸ್ಟು

* * * *

ದೇವ್ರತ್ರ ಹ್ವೋಗೊ ವಯಸ್ಸಾಗಿರೋ ಶ್ರೀರಾಮಸೇನೆಯ ಹೆಡ್ಡಾಪೀಸು ಮುತಾಲಿಕ್ಕು ಈಗ್ಲಾದ್ರು ಸಮಾಜುಕ್ಕೆ ಉಳಿ ಹಿಂಡೋದು ಬಿಟ್ಟ್‍ಬಿಟ್ಟಿ, ಸನ್ನಡುತೆ ಹಾದೀಲಿ ಬದುಕ್ಲಿ. ದೇವ್ರತ್ರ ಹ್ವೋಗಕ್ಕೆ ಟಿಕೇಟ್ ತಕೊಂಡು ಏರ್‍ಪೋರ್ಟ್‍ನಲ್ಲಿ ಕಾಯ್ತಾ ಕೂತಿರೋ ಆಯಪ್ಪನ ಬಗ್ಗೆ ನಂಗೆ ಭಾರೀ ನೋವಿದೆ ಕಣ್ರೀ. ಫಸ್ಟು ಎಸ್ಸೈಟಿನೋರು ಆವಯ್ಯುನ ಹಿಡ್ಕಂಡು ತನುಖೆ ಮಾಡ್ಬೇಕು ನೋಡ್ರಿ’

– ಸೀಎಂ ಇಬ್ರಾಹಿಂ, ರಸವತ್ತಾಗಿ ಕನ್ನಡ
ಮಾತಾಡೋ ಖಾದಿ ಸಾಬಣ್ಣ.

* * * *

`ನಾನು ಮಂತ್ರಿಗಿರಿ ಮ್ಯಾಕೆ ಶ್ಯಾನೆ ಆಸೆ ಮಡಿಕ್ಕ್ಯಂಡಿದ್ದೆ. ಆದ್ರೆ ಕೆಲವ್ರ ಹಿಕಮತ್ತಿನಿಂದ ಕೈ ತ್ಯೆಪ್ಪಿ ಹೋಗೈತಿ. ಪರ್ವಾಗಿಲ್ಲ ಶಾಸಕಿಯಾಗೆ ಜನ್ರ ಸೇವೆ ಮಾಡ್ತೀನಿ. ಬೈ-ದು-ಬೈ ನಂ ಪಕ್ಸುದ ವರಿಸ್ಟ್ರು ಅದ್ಯಾವ ಮಾನದಂಡ ನೋಡಿ ಜೈಮಾಲಾಗೆ ಸಚಿವೆ ಮಾಡಿದ್ರೋ ನಾ ಕಾಣೆ. ಮೋಸ್ಟ್ಲೀ, ಆಯಮ್ಮನ `ಸೇವೆ’ ಕಂಡು ತಥಾಸ್ತು ಅಂದಿರ್ಬೈದು. ಅಯ್ಯೋ, ಕಂಡೋರ ಇಚಾರ ನಮಿಗ್ಯಾಕೆ ಬಿಡ್ರೀ…’

– ಲಕ್ಷ್ಮಿ ಹೆಬ್ಬಾಳ್ಕರ್, ಮಿನಿಸ್ಟ್ರು ಕುರ್ಚಿಗೆ ಹಾಕಿದ್ದ ಕರ್ಚೀಪಿನಲ್ಲೇ ಕಣ್ಣೊರೆಸಿಕೊಳ್ತಿರೋ ಡೀಕೇಶಿ ಅನುಯಾಯಿ.

* * * *

`ನೋಡಿ… ಮೂವತ್ತೆಂಟು ಸೀಟು ಗ್ಯೆದ್ದ ಪಕ್ಸುಕ್ಕೆ ಎಪ್ಪತ್ತೆಂಟು ಗ್ಯೆದ್ದ ನ್ಯಾಷುನಲ್ ಪಾರ್ಟಿ ಬೆಂಬಲ ನೀಡುತ್ತೆ ಅಂದ್ರೆ, ಅದರ ಹಿಂದೆ ದ್ಯೇವ್ರ ಅನುಗ್ರಹ ಇದೆ ಅಂತ್ಲೇ ಅರ್ತ. ಕುಮಾರಸ್ವಾಮಿಯೋರಿಗೆ ಬಹುಮತ ಸಿಕ್ಕಿಲ್ಲ ಅನ್ನೋ ನೋವು ನನಿಗೆ ಇರೋದು ನಿಜಾ… ಅಧಿಕಾರ ಕೊಟ್ರೂ ದೇವ್ರು ಅವ್ರನ್ನ ಪರೀಕ್ಸ ಮಾಡ್ತಾ ಕುಂತವ್ನೆ. ಒಂದು ವರ್ಸ ಯಾವ ಚ್ಯಿಂತೇನೂ ಇಲ್ಲ. ಆಮ್ಯಾಲೆ ಹೆಂಗೋ ಗೊತ್ತಿಲ್ಲ’

– ದೇವೇಗೌಡ್ರು, ಜನತಾದಳದ ಜಾತ್ಯತೀತ ಮುತ್ಸದ್ದಿ

* * * *

`ಈ ವಿಮರ್ಶಕರು ಏನು ಅದಾರಲ್ರೀ, ಅವುರೇ ದೊಡ್ಡ ಕ್ವೊಲೆಗಡುಕರು. ಮಹಾನ್ ಪಕ್ಷಪಾತಿಗಳು. ನನ್ನ ಹೆಸುರಲ್ಲೇ `ಗೌಡ’ ಇದೆ ಅನ್ನೋ ಕಾರುಣಕ್ಕೇ ಇವುನನ್ನು ಮಟ್ಟ ಹಾಕ್ಬೇಕು ಅನ್ನೋ ಹಂತಕ್ಕೆ ವಿಮರ್ಶೆ ಇಳುದೋಗ್ಯದೆ. ಇಂಥೋರು ಗ್ವೋಡೆ, ಕಬ್ಬುಣದ ಸರಳುಗಳ್ನ ನಿರ್ಮಿಸ್ತಾ ಕುಂತವ್ರೆ. ಥೂತ್ತೇರಿ…’

– ದೊಡ್ಡರಂಗೇಗೌಡ್ರು,
ಮೋದಿ ಸ್ತುತಿಯ ಕಂಡಕಾವ್ಯ ಬರೆದು ಪದ್ಮಶ್ರೀ
ಋಣ ತೀರಿಸಿದ ಗ್ರಾಮ್ಯ ಸೊಗಡಿನ ಸಾಹಿತಿ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಂಗಾಳ ಚುನಾವಣೆ : SIRನಲ್ಲಿ ಅತಿ ಹೆಚ್ಚು ಹೆಸರು ಅಳಿಸಿದ ಕ್ಷೇತ್ರಗಳು ಬಿಜೆಪಿ ಪಾಲು

ಪಶ್ಚಿಮ ಬಂಗಾಳದ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಬಿಜೆಪಿ, ಸರ್ಕಾರ ರಚಿಸಲು ಅಣಿಯಾಗಿದೆ. ಈ ನಡುವೆ ಹಲವು ಪ್ರಶ್ನೆಗಳು, ಗೊಂದಲಗಳು ಹಾಗೆಯೇ ಮುಂದುವರಿದಿದೆ. ಚುನಾವಣೆ ಘೋಷಣೆಗೆ ಮುನ್ನವೇ ಬಂಗಾಳದ ಮತದಾರರ ಪಟ್ಟಿಯ ವಿಶೇಷ...

ತಮಿಳುನಾಡು ರಾಜ್ಯಪಾಲರ ನಡೆ ಎಷ್ಟು ಸಮಂಜಸ?

'ಮಳೆ ನಿಂತರೂ ಮರದ ಹನಿ ನಿಲ್ಲಲ್ಲ' ಎಂಬ ಮಾತಿಗೆ ಅನ್ವರ್ಥದಂತೆ ಚುನಾವಣೆ ಮುಗಿದರೂ ಸರ್ಕಾರ ರಚನೆಯ ಸರ್ಕಸ್ ಮಾತ್ರ ನಿಲ್ಲುವ ಸೂಚನೆ ಕಾಣುತ್ತಿಲ್ಲ. ತಮಿಳುನಾಡಿನ ರಾಜಕೀಯ ವಿದ್ಯಮಾನಗಳನ್ನು ನೋಡುತ್ತಿದ್ದರೆ ಅಲ್ಲಿ ನಡೆಯುತ್ತಿರವ ಬೆಳವಣಿಗೆಗಳು...

ಬಿಜೆಪಿಯಿಂದ ಯಡಿಯೂರಪ್ಪ ಅಭಿಮಾನೋತ್ಸವ: ಲಿಂಗಾಯತ ಮತಕ್ಕಾಗಿ ಮಾಸ್ಟರ್ ಫ್ಲಾನ್…?  

ದಕ್ಷಿಣ ಭಾರತದ ರಾಜಕಾರಣದಲ್ಲಿ ಬಿಜೆಪಿ ಎನ್ನುವುದು ಒಂದು ಕಾಲಕ್ಕೆ ಕೇವಲ ನಗರ ಪ್ರದೇಶಗಳಿಗೆ ಸೀಮಿತವಾಗಿದ್ದ ಪಕ್ಷ. ಆದರೆ, ಅದೇ ಬಿಜೆಪಿಯನ್ನು ಕರ್ನಾಟಕದಲ್ಲಿ ಬೇರೂರುವಂತೆ ಮಾಡಿದ್ದು ಬೂಕನಕೆರೆ ಸಿದ್ದಲಿಂಗಪ್ಪ ಯಡಿಯೂರಪ್ಪ ಅಂದರೆ ಬಿ.ಎಸ್. ಯಡಿಯೂರಪ್ಪ....

ವಿಜಯ್ ಹೇಳಿದ ಭ್ರಷ್ಟಾಚಾರ ನಿರ್ಮೂಲನೆ ಮತ್ತು ಟಿವಿಕೆ ಶಾಸಕರ ಕ್ರಿಮಿನಲ್ ಹಿನ್ನೆಲೆ

ಎರಡು ವರ್ಷಗಳ ಹಿಂದೆ ಅಸ್ತಿತ್ವಕ್ಕೆ ಬಂದ ಟಿವಿಕೆ ಎಂಬ ಪಕ್ಷ, 75 ವರ್ಷಗಳ ಅನುಭವಿ ಪಕ್ಷವಾದ ಡಿಎಂಕೆಯನ್ನು ಸೋಲಿಸಿರುವುದು, ಕಳೆದ ಅರವತ್ತು ವರ್ಷಗಳಲ್ಲಿ ಮೊಟ್ಟ ಮೊದಲ ಬಾರಿಗೆ ದ್ರಾವಿಡ ಚಳುವಳಿ ಹಿನ್ನೆಲೆಯ ಪಕ್ಷವನ್ನು...

ಪಶ್ಚಿಮ ಬಂಗಾಳದಲ್ಲಿ ಮೊದಲ ಬಾರಿಗೆ ಬಿಜೆಪಿ ಗೆಲುವು: ಫಲಿತಾಂಶದ ಬಳಿಕ ಭುಗಿಲೆದ್ದ ಹಿಂಸಾಚಾರ, ಕನಿಷ್ಠ ಐದು ಮಂದಿ ಸಾವು

ಕೊಲ್ಕತ್ತಾ, ಮೇ 8: ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಯಲ್ಲಿ ಭಾರತೀಯ ಜನತಾ ಪಕ್ಷ (ಬಿಜೆಪಿ) ಮೊದಲ ಬಾರಿಗೆ ಬೃಹತ್ ಗೆಲುವು ಸಾಧಿಸಿದ್ದು, ರಾಜ್ಯದ 294 ಸ್ಥಾನಗಳ ಪೈಕಿ 206 ಸ್ಥಾನಗಳನ್ನು ಗೆದ್ದು ಮುಂದಿನ...

ಪಂಚರಾಜ್ಯ ಚುನಾವಣೆಯ ಗೋಜಲುಗಳು

ವಿವಾದಾತ್ಮಕ ಮತ್ತು ಸಂವಿಧಾನ ವಿರೋಧಿ ವಿಶೇಷ ತೀವ್ರ ಪರಿಷ್ಕರಣೆ (ಎಸ್ ಐಆರ್) ಅಡಿಯಲ್ಲಿ ನಡೆದ 2026ರ ಐದು ವಿಧಾನಸಭಾ ಚುನಾವಣೆಯಲ್ಲಿ ಮತದಾರರು ಏಕರೂಪದ ಅಭಿಮತವನ್ನು ವ್ಯಕ್ತಪಡಿಸಲಿಲ್ಲ. ಮತ್ತು ಸಂಕೀರ್ಣವಾದ ಫಲಿತಾಂಶ ಕೊಟ್ಟಿದ್ದಾರೆ. ಪಶ್ಚಿಮ...

ಪ್ರಜಾಸತ್ತೆಯ ಉಳಿವಿಗೆ ಇದು ನಿರ್ಣಾಯಕ ಕ್ಷಣ : ಮಹತ್ವದ ಕಣ್ಣೋಟ

ಚುನಾವಣೆಗಳು ಮತ್ತು ನ್ಯಾಯಾಲಯಗಳು ಇನ್ನು ಪರಿಹಾರವಲ್ಲ ಎಂಬ ಅಭಿಪ್ರಾಯಕ್ಕೆ ಜನರು ಬರಲು ಈ ಬಾರಿಯ ವಿಧಾನಸಭಾ ಚುನಾವಣೆಗಳೇ ಕಾರಣವಾಗಿವೆ. ಇಂದು 'ಭಾರತದ ಪರಿಕಲ್ಪನೆ'ಗೆ (Idea of India) ಸಂಚಕಾರ ಬಂದಿದೆ. ಪ್ರಜಾಪ್ರಭುತ್ವವು ಕೇವಲ...

ಭಾಗ-2: ಎಸ್‌ಐಆರ್ ಜಾರಿಯಿಂದ ಕಾಂಗ್ರೆಸ್‌ ಕಳೆದುಕೊಳ್ಳುವ ಕ್ಷೇತ್ರಗಳೆಷ್ಟು?

30 ಸಾವಿರದಿಂದ ಒಂದು ಸಾವಿರದ ಒಳಗಿನ ಮತಗಳ ಅಂತರದಿಂದ ಗೆದ್ದಿರುವ ಕರ್ನಾಟಕದ 97 ಕ್ಷೇತ್ರಗಳನ್ನು ನಾವು ಪಟ್ಟಿ ಮಾಡಿದ್ದೇವೆ. ಪಶ್ಚಿಮ ಬಂಗಾಳದಲ್ಲಿ ಆದಂತೆಯೇ ರಾಜ್ಯದಲ್ಲಿ ಚುನಾವಣೆ ಸಮೀಪಿಸಿದಾಗ ಎಸ್‌ಐಆರ್ ಜಾರಿಯಾದರೆ ಬಿಜೆಪಿಗೆ ಅನುಕೂಲವಾಗುವ...

ತಮಿಳುನಾಡಿನಲ್ಲಿ ಮೊದಲ ಬಾರಿಗೆ ಸ್ಪರ್ಧಿಸಿ ಗೆದ್ದ 60 ನೂತನ ಶಾಸಕರು

ತಮಿಳುನಾಡು ರಾಜಕಾರಣ ಎಂದರೆ ಅದು ಐದು ದಶಕಗಳಿಂದ ಕೇವಲ ಡಿಎಂಕೆ ಮತ್ತು ಎಐಎಡಿಎಂಕೆ ನಡುವಿನ ಜಿದ್ದಾಜಿದ್ದಿ. ಆದರೆ 2026ರ ಫಲಿತಾಂಶವು ಈ "ದ್ವಿಪಕ್ಷೀಯ" ಸಂಪ್ರದಾಯವನ್ನು ಮುರಿದುಹಾಕಿದೆ. ನಟ ವಿಜಯ್ ನೇತೃತ್ವದ ತಮಿಳಗ ವೆಟ್ರಿ...

‘ಪ್ರಜಾತಂತ್ರಕ್ಕೆ ಬೆದರಿಕೆ ಒಡ್ಡುತ್ತಿರುವ ಎಸ್ಐಆರ್’: ಬಿಜೆಪಿಯ (ಕು)ತಂತ್ರ ಫಲಿಸಿದರೇ ಭಾರತವೇ ಇರುವುದಿಲ್ಲ..!

ಪಂಚರಾಜ್ಯ ಚುನಾವಣಾ ಫಲಿತಾಂಶಗಳು 2026 ಮೇ 4ರಂದು ಹೊರಬಿದ್ದಿದ್ದು, ಭಾರತೀಯ ಜನತಾ ಪಾರ್ಟಿ ಪಶ್ಚಿಮ ಬಂಗಾಳವನ್ನು ತನ್ನ ತೆಕ್ಕೆಗೆ ತೆಗೆದುಕೊಂಡಿದೆ. ಆದರೆ ಈ ಗೆಲುವು ಕೇವಲ ಜನರ ಆದರ್ಶವಲ್ಲ, ಬದಲಿಗೆ ಚುನಾವಣಾ ವ್ಯವಸ್ಥೆಯೇ...