Homeರಾಜಕೀಯ`ನೋಡ್ರಿ ನಂಗೆ ಮಂತ್ರಿ ಸ್ಥಾನುದ ಮ್ಯಾಲೆ ಯಾವ್ ಸೀಮೆ ಮಮುಕಾರುವೂ ಇಲ್ಲ.

`ನೋಡ್ರಿ ನಂಗೆ ಮಂತ್ರಿ ಸ್ಥಾನುದ ಮ್ಯಾಲೆ ಯಾವ್ ಸೀಮೆ ಮಮುಕಾರುವೂ ಇಲ್ಲ.

- Advertisement -
- Advertisement -

`ನಾನು ಎಜ್ಜಾಟ್ಲಿ ಇಸಕಂಠ ಪರಂಪರೆಯವ್ನು. ಮಾಧ್ಯಮುದವ್ರು ನನ್ನನ್ನು ಉಗುದು ಉಪ್ಪಿನ್ಕಾಯಿ ಹಾಕಿದ್ರು ಐ ಡೋಂಟ್ ಕೇರ್. ಅವ್ರಿಗೆ ಹ್ಯೆದ್ರಿಕ್ಯೆಂಡು ನಾನಾಡೊ ಮಾತು ನಿಲ್ಸೋಕೆ ನಾನೇನು ರಣಹ್ಯೇಡಿ ಅಪ್ಪ ಅಮ್ಮುಗೆ ಹುಟ್ಟಿದೋನಲ್ಲ. ಬೈ-ದು-ಬೈ ಮುಠ್ಠಾಳತನುವ ಬಂಡ್ವಾಳ ಮಾಡ್ಕ್ಯಂಡಿರೋ ಈ ಬುದ್ದಿಜ್ಯೀವಿಗಳು ನಂ ಹಿಂದೂತ್ವಕ್ಕೆ ಮಸಿ ಬಳೀತಾ ಕುಂತವ್ರೆ ಕಣ್ರಿ. ಅವ್ರಿಗೆ ಕಡಿವಾಣ ಹಾಕ್ಲೇಬೇಕು’

– ಅನಂತ್ ಕುಮಾರ್ ಹೆಗಡೆ, ಕಾಮನ್‍ಸೆನ್ಸ್ ಕಳ್ಕೊಂಡಿರೋ ಕೇಂದ್ರ ಮಂತ್ರಿ

* * * *

`ನೋಡ್ರಿ ನಂಗೆ ಮಂತ್ರಿ ಸ್ಥಾನುದ ಮ್ಯಾಲೆ ಯಾವ್ ಸೀಮೆ ಮಮುಕಾರುವೂ ಇಲ್ಲ. ನಂ ಜಿಲ್ಲಾ ಕಾರ್ಯಕರ್ತುರು ನನ್ನನ್ನ ಮಂತ್ರಿ ಮಾಡ್ದಿದ್ದಕ್ಕೆ ಬೆಂಗ್ಳೂರಿಗೆ ಹ್ವೋಗಿ ಪಕ್ಸುದ ಸದಸ್ಯತ್ವುಕ್ಕೆ ರಾಜೀನಾಮೆ ಬಿಸಾಕಿ ಬಂದಿದಾರೆ ಅಂತ ಪೇಪರ್ರು, ಟೀವಿಲಿ ನೋಡಿ ತಿಳ್ಕಂಡಿದಿನೆ ವರ್ತು ಹೆಚ್ಚೇನು ಗೊತ್ತಿಲ್ಲ. ನನ್ ಮ್ಯೇಲಿನ ಅಭಿಮಾನುಕ್ಕೆ ಹಂಗೆ ಮಾಡ್ಯವ್ರೆ ಆಟೆಯಾ. ಅಲ್ಲಾ ಕಣ್ರೀ ಜನಸೇವೆಗಿಂತ ಮಂತ್ರಿ ಪದುವಿ ದೊಡ್ಡದಾ. ತೆಗ್‍ತೆಗೀರಿ, ಶಾಸಕನಾಗೆ ಜನಸೇವೆ ಮಾಡ್ತೀನಿ ನೋಡ್ತಾ ಇರಿ. ಐ ಪ್ರಾಮಿಸ್ ಯೂ…’

– ಶಾಮನೂರು ಶಿವಶಂಕರಪ್ಪ, ಇಳಿವಯಸ್ಸಿನ ನವಚೈತನ್ಯದ ವೈರಾಗಿ ರಾಜಕಾರಣಿ

* * * *

`ಲುಕ್ ಮೈ ಡಿಯರ್ ಹಿಂದೂ ಭಾಯಿಜಾನ್ಸ್. ನಂ ರಾಜ್ಯುದಾಗೆ ಕ್ವೊಲೆಗುಳಾದ್ರೆ ಮೋದಿ ಮಹಾತ್ಮುರನ್ನ ಕೆಲವ್ರು ಪ್ರಸ್ನೆ ಮಾಡ್ತಾರೆ. ನಾನು ಏನ್ ಹೇಳ್ತೀನಿ ಅಂದ್ರೆ, ಗೌರಿ ಮಲ್ಡರ್‍ಗೂ ಮ್ವೋದಿಗೂ ಏನ್ ಸಮಂಧ ಉಂಟು ನೀವೇ ಹೇಳ್ರಿ. ನಂ ರಾಜ್ಯುದಲ್ಲಿ ನಾಯಿ ಸತ್ರೆ, ಆ ಮಹಾತ್ಮುರು ಯಾಕೆ ಉತ್ರ ಕೊಡ್ಬೇಕು ಅಂತೀನಿ’

-ಪ್ರಮೋದ್ ಮುತಾಲಿಕ್, ತನಿಖೆಗೆ ಬೆಚ್ಚಿ ಬಿದ್ದಿರೋ ಆರೆಸ್ಸೆಸ್‍ನ ಸಾಪ್ಟ್‍ಶತ್ರು.

* * * *

`ಹಡೆಯೋ ಶಕ್ತಿ ಇದ್ದಾಗ್ಲೆ ಲಗ್ನಾ ಮಾಡ್ಬೇಕ್ರಿ..! ಹೊತ್ತಿಗೆ ಸರ್ಯಾಗಿ ಲಗ್ನಾ ಮಾಡ್ಲಿಲ್ಲ ಅಂದ್ರೆ, ಏನೂ ಪ್ರಯೋಜುನ ಇರಲ್ಲ. ಅಟಲ್ ಬಿಯಾರಿ ವಾಜ್ಪೇಯಿ ಹತ್ತಾರು ವರ್ಸ ಮೊದ್ಲೇ ಈ ದ್ಯೇಸುಕ್ಕೆ ಪರ್ದಾನಿ ಆಗ್ಬುಟ್ಟಿದ್ದ್ರೆ, ನಂ ದ್ಯೇಸುದ ಚಿತ್ರಾನೆ ಬ್ಯಾರೆ ಆಗ್ತಿತ್ತು ಕಣ್ರೀ’

– ಶಿವಾನಂದ ಎಸ್. ಪಾಟೀಲ್, ಆರೋಗ್ಯ ಮಂತ್ರಿಯಾದ ಹಡೆಯೋ ಡಿಪಾರ್ಟ್‍ಮೆಂಟ್ ಸ್ಪೆಷಲಿಸ್ಟು

* * * *

ದೇವ್ರತ್ರ ಹ್ವೋಗೊ ವಯಸ್ಸಾಗಿರೋ ಶ್ರೀರಾಮಸೇನೆಯ ಹೆಡ್ಡಾಪೀಸು ಮುತಾಲಿಕ್ಕು ಈಗ್ಲಾದ್ರು ಸಮಾಜುಕ್ಕೆ ಉಳಿ ಹಿಂಡೋದು ಬಿಟ್ಟ್‍ಬಿಟ್ಟಿ, ಸನ್ನಡುತೆ ಹಾದೀಲಿ ಬದುಕ್ಲಿ. ದೇವ್ರತ್ರ ಹ್ವೋಗಕ್ಕೆ ಟಿಕೇಟ್ ತಕೊಂಡು ಏರ್‍ಪೋರ್ಟ್‍ನಲ್ಲಿ ಕಾಯ್ತಾ ಕೂತಿರೋ ಆಯಪ್ಪನ ಬಗ್ಗೆ ನಂಗೆ ಭಾರೀ ನೋವಿದೆ ಕಣ್ರೀ. ಫಸ್ಟು ಎಸ್ಸೈಟಿನೋರು ಆವಯ್ಯುನ ಹಿಡ್ಕಂಡು ತನುಖೆ ಮಾಡ್ಬೇಕು ನೋಡ್ರಿ’

– ಸೀಎಂ ಇಬ್ರಾಹಿಂ, ರಸವತ್ತಾಗಿ ಕನ್ನಡ
ಮಾತಾಡೋ ಖಾದಿ ಸಾಬಣ್ಣ.

* * * *

`ನಾನು ಮಂತ್ರಿಗಿರಿ ಮ್ಯಾಕೆ ಶ್ಯಾನೆ ಆಸೆ ಮಡಿಕ್ಕ್ಯಂಡಿದ್ದೆ. ಆದ್ರೆ ಕೆಲವ್ರ ಹಿಕಮತ್ತಿನಿಂದ ಕೈ ತ್ಯೆಪ್ಪಿ ಹೋಗೈತಿ. ಪರ್ವಾಗಿಲ್ಲ ಶಾಸಕಿಯಾಗೆ ಜನ್ರ ಸೇವೆ ಮಾಡ್ತೀನಿ. ಬೈ-ದು-ಬೈ ನಂ ಪಕ್ಸುದ ವರಿಸ್ಟ್ರು ಅದ್ಯಾವ ಮಾನದಂಡ ನೋಡಿ ಜೈಮಾಲಾಗೆ ಸಚಿವೆ ಮಾಡಿದ್ರೋ ನಾ ಕಾಣೆ. ಮೋಸ್ಟ್ಲೀ, ಆಯಮ್ಮನ `ಸೇವೆ’ ಕಂಡು ತಥಾಸ್ತು ಅಂದಿರ್ಬೈದು. ಅಯ್ಯೋ, ಕಂಡೋರ ಇಚಾರ ನಮಿಗ್ಯಾಕೆ ಬಿಡ್ರೀ…’

– ಲಕ್ಷ್ಮಿ ಹೆಬ್ಬಾಳ್ಕರ್, ಮಿನಿಸ್ಟ್ರು ಕುರ್ಚಿಗೆ ಹಾಕಿದ್ದ ಕರ್ಚೀಪಿನಲ್ಲೇ ಕಣ್ಣೊರೆಸಿಕೊಳ್ತಿರೋ ಡೀಕೇಶಿ ಅನುಯಾಯಿ.

* * * *

`ನೋಡಿ… ಮೂವತ್ತೆಂಟು ಸೀಟು ಗ್ಯೆದ್ದ ಪಕ್ಸುಕ್ಕೆ ಎಪ್ಪತ್ತೆಂಟು ಗ್ಯೆದ್ದ ನ್ಯಾಷುನಲ್ ಪಾರ್ಟಿ ಬೆಂಬಲ ನೀಡುತ್ತೆ ಅಂದ್ರೆ, ಅದರ ಹಿಂದೆ ದ್ಯೇವ್ರ ಅನುಗ್ರಹ ಇದೆ ಅಂತ್ಲೇ ಅರ್ತ. ಕುಮಾರಸ್ವಾಮಿಯೋರಿಗೆ ಬಹುಮತ ಸಿಕ್ಕಿಲ್ಲ ಅನ್ನೋ ನೋವು ನನಿಗೆ ಇರೋದು ನಿಜಾ… ಅಧಿಕಾರ ಕೊಟ್ರೂ ದೇವ್ರು ಅವ್ರನ್ನ ಪರೀಕ್ಸ ಮಾಡ್ತಾ ಕುಂತವ್ನೆ. ಒಂದು ವರ್ಸ ಯಾವ ಚ್ಯಿಂತೇನೂ ಇಲ್ಲ. ಆಮ್ಯಾಲೆ ಹೆಂಗೋ ಗೊತ್ತಿಲ್ಲ’

– ದೇವೇಗೌಡ್ರು, ಜನತಾದಳದ ಜಾತ್ಯತೀತ ಮುತ್ಸದ್ದಿ

* * * *

`ಈ ವಿಮರ್ಶಕರು ಏನು ಅದಾರಲ್ರೀ, ಅವುರೇ ದೊಡ್ಡ ಕ್ವೊಲೆಗಡುಕರು. ಮಹಾನ್ ಪಕ್ಷಪಾತಿಗಳು. ನನ್ನ ಹೆಸುರಲ್ಲೇ `ಗೌಡ’ ಇದೆ ಅನ್ನೋ ಕಾರುಣಕ್ಕೇ ಇವುನನ್ನು ಮಟ್ಟ ಹಾಕ್ಬೇಕು ಅನ್ನೋ ಹಂತಕ್ಕೆ ವಿಮರ್ಶೆ ಇಳುದೋಗ್ಯದೆ. ಇಂಥೋರು ಗ್ವೋಡೆ, ಕಬ್ಬುಣದ ಸರಳುಗಳ್ನ ನಿರ್ಮಿಸ್ತಾ ಕುಂತವ್ರೆ. ಥೂತ್ತೇರಿ…’

– ದೊಡ್ಡರಂಗೇಗೌಡ್ರು,
ಮೋದಿ ಸ್ತುತಿಯ ಕಂಡಕಾವ್ಯ ಬರೆದು ಪದ್ಮಶ್ರೀ
ಋಣ ತೀರಿಸಿದ ಗ್ರಾಮ್ಯ ಸೊಗಡಿನ ಸಾಹಿತಿ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

Uttarakhand | ಬಜರಂಗದಳದ ಕಾರ್ಯಕರ್ತರು ಈಗ ದ್ವೇಷ ಬಿತ್ತುವ ವೃತ್ತಿಪರ ಇನ್‌ಫ್ಲ್ಯುಯೆನ್ಸರ್ಸ್!

ಈ ವರ್ಷದ ಆರಂಭದಲ್ಲಿ ಉತ್ತರಾಖಂಡದ ಕೋಟದ್ವಾರದಲ್ಲಿ ಹಿಂದುತ್ವ ಗುಂಪೊಂದು ವೃದ್ಧ ಮುಸ್ಲಿಂ ವ್ಯಕ್ತಿಯೊಬ್ಬರ ಅಂಗಡಿಗೆ ನುಗ್ಗಿ, ಅಂಗಡಿಯ ಹೆಸರಾದ ‘ಬಾಬಾ’ ಎಂಬುವುದನ್ನು ಬದಲಾಯಿಸುವಂತೆ ಒತ್ತಾಯಿಸಿತ್ತು. ‘ಬಾಬಾ’ ಎಂಬುವುದು ‘ಹಿಂದೂ’ ಹೆಸರಾಗಿದೆ ಎಂದು ಆ...

​ನಿಗಿ ನಿಗಿ ಕೆಂಡದಂತಾಗಿರುವ ಬಿಡದಿ, ಡಿಕೆಶಿಗೆ ಬಿಸಿ ತುಪ್ಪದಂತಾದ ರೈತರು

​ಬದಲಾದ ರಾಜಕೀಯ ಸಂದರ್ಭದಲ್ಲಿ ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಎಂದೇ ಬಿಂಬಿತವಾಗಿರುವ ಡಿ.ಕೆ. ಶಿವಕುಮಾರ್ ಪ್ರತಿಷ್ಠೆಯಾಗಿ ತೆಗೆದುಕೊಂಡಿರುವ ಬಿಡದಿಯ ಟೌನ್‌ಶಿಪ್ ಯೋಜನೆಯ ವಿರುದ್ಧ ನಡೆಯುತ್ತಿರುವ ರೈತರ ಹೋರಾಟ ದಿನದಿಂದ ದಿನಕ್ಕೆ ಉಗ್ರ ರೂಪ ಪಡೆಯುತ್ತಿದೆ. ​ಭೂಸ್ವಾಧೀನದ...

ಪ್ರಜಾಪ್ರಭುತ್ವವನ್ನು ಹತ್ತಿಕ್ಕಲು ‘SIR’ ಅನ್ನೇ ಅಸ್ತ್ರವನ್ನಾಗಿಸಿಕೊಂಡ ನರೇಂದ್ರ ಮೋದಿ!

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಫಲಿತಾಂಶ ಪ್ರಕಟವಾದ ತಕ್ಷಣ (ಮೇ 4 ರಂದು), ಕಾಳೀಘಾಟ್‌ನಲ್ಲಿರುವ ತಮ್ಮ ನಿವಾಸದಲ್ಲಿ ಸುದ್ದಿಗೋಷ್ಠಿ ನಡೆಸಿದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅತ್ಯಂತ ಆಕ್ರೋಶದಿಂದ ಮಾತನಾಡಿದ್ದರು. ಅಷ್ಟೇ ಅಲ್ಲದೆ,...

ಕೇರಳದಲ್ಲಿ ಶಾಲಾ ಬಾಲಕಿಯರಿಗೆ ಮೂರು ದಿನ ಮುಟ್ಟಿನ ರಜೆ, ಅಸಂಘಟಿತ ವಲಯದ ಮಹಿಳೆಯರಿಗೆ ಆರು ತಿಂಗಳ ಹೆರಿಗೆ ರಜೆ ಘೋಷಣೆ 

ತಿರುವನಂತಪುರಂ: ಕೇರಳದ ವಿ.ಡಿ. ಸತೀಶನ್ ನೇತೃತ್ವದ ಕಾಂಗ್ರೆಸ್ ಸರ್ಕಾರವು ಮಹಿಳೆಯರಿಗೆ ಹಲವಾರು ಕಲ್ಯಾಣ ಕ್ರಮಗಳನ್ನು ಘೋಷಿಸಿದೆ, ಇದರಲ್ಲಿ ಶಾಲಾ ವಿದ್ಯಾರ್ಥಿಗಳಿಗೆ ಮೂರು ದಿನಗಳ ಮಾಸಿಕ ಮುಟ್ಟಿನ ರಜೆ, ಕೆಲಸದ ಸ್ಥಳಗಳಲ್ಲಿ ಮಹಿಳೆಯರಿಗೆ ಸಮಾನ...

ಜಿರಳೆ ಜನತಾ ಪಕ್ಷದ ಖಾತೆಗೆ ನಿರ್ಬಂಧ; ದೆಹಲಿ ಹೈಕೋರ್ಟ್‌ನಿಂದ ಕೇಂದ್ರ-ಎಕ್ಸ್‌ಗೆ ನೋಟಿಸ್

ಜಿರಳೆ ಜನತಾ ಪಕ್ಷದ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದಿಪ್ಕೆ ಅವರು ತಮ್ಮ ಸಾಮಾಜಿಕ ಮಾಧ್ಯಮ ಖಾತೆಗಳನ್ನು ನಿರ್ಬಂಧಿಸಿದ್ದನ್ನು ಪ್ರಶ್ನಿಸಿ ಅರ್ಜಿ ಸಲ್ಲಿಸಿದ್ದು, ದೆಹಲಿ ಹೈಕೋರ್ಟ್ (ಮೇ 29) ಕೇಂದ್ರ ಸರ್ಕಾರ ಮತ್ತು ಸಾಮಾಜಿಕ...

“ದಲಿತ ಮುಖ್ಯಮಂತ್ರಿ” ಅರ್ಹರು ಯಾರಿಲ್ಲಿ?

ಸದ್ಯ ಕರ್ನಾಟಕದಲ್ಲಿ ಮುಖ್ಯಮಂತ್ರಿಗಳ ಬದಲಾವಣೆಗೆ ವೇದಿಕೆ ಸಜ್ಜುಗೊಂಡಿದೆ. ಸುಧೀರ್ಘಾವಧಿ ಮುಖ್ಯಮಂತ್ರಿಯಾಗಿ ಅಧಿಕಾರ ನಡೆಸಿದ ಅಹಿಂದ ರಾಜಕಾರಣದ ಕುರಿತು ಮಾತಾಡುತ್ತಿದ್ದ, ಸಮಾಜವಾದಿ ಹಿನ್ನೆಲೆಯ ಸಿದ್ದರಾಮಯ್ಯ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಡಿ.ಕೆ. ಶಿವಕುಮಾರ್‌ ಮುಖ್ಯಮಂತ್ರಿಯಾಗಿ...

‘ನಾನು ಪ್ರೀತಿ-ವಿಶ್ವಾಸಗಳಿಗೆ ತಲೆಬಾಗುವವನೇ ಹೊರತು ಒತ್ತಡ-ಪ್ರಭಾವಗಳಿಗೆ ಒಳಗಾಗುವವನಲ್ಲ’: ವಿದಾಯ ಭಾಷಣದಲ್ಲಿ ಸಿದ್ದರಾಮಯ್ಯ

ಹೈಕಮಾಂಡ್ ಯಾವಾಗ ಸೂಚಿಸುತ್ತದೆಯೋ ಆಗ ರಾಜೀನಾಮೆ ಕೊಡುತ್ತೇನೆ ಎಂದು ಹೇಳಿದ್ದ ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ 2026 ಮೇ 28 ರಂದು ಹೈಕಮಾಂಡ್ ಸೂಚನೆ ಮೇರೆಗೆ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಈ ಮೂಲಕ...

ಪಶ್ಚಿಮ ಬಂಗಾಳ| ಬಕ್ರೀದ್‌ ಹಬ್ಬಕ್ಕೂ ಮುನ್ನ ರೈತರಿಗೆ ಸಂಕಷ್ಟ; ಜಾನುವಾರು ಮಾರುಕಟ್ಟೆಗಳು ನಿರ್ಜನ

ಈದ್ ಅಲ್-ಅಧಾ ಹಬ್ಬದ ಮುನ್ನ ಉತ್ತರ ಬಂಗಾಳದಾದ್ಯಂತ ಜಾನುವಾರು ಮಾರುಕಟ್ಟೆಗಳು ಹೆಚ್ಚಾಗಿ ನಿರ್ಜನವಾಗಿದ್ದವು. ವ್ಯಾಪಾರಿಗಳು ಮತ್ತು ರೈತರು ಜಾನುವಾರು ಮಾರಾಟದ ಮೇಲಿನ ನಿರ್ಬಂಧಗಳಿಂದಾಗಿ ವ್ಯಾಪಾರದಲ್ಲಿ ಪ್ರಮುಖ ಕುಸಿತ ಕಂಡುಬಂದಿದೆ ಎಂದು ಅವಲತ್ತುಕೊಂಡಿದ್ದಾರೆ. ಮಾಲ್ಡಾ...

ಅತ್ಯಾಚಾರ – ಮಕ್ಕಳ ಮೇಲಿನ ಸಾಮೂಹಿಕ ಲೈಂಗಿಕ ದೌರ್ಜನ್ಯ ಪ್ರಕರಣ: ಸ್ವಯಂ ಘೋಷಿತ ದೇವಮಾನವ ಅಸಾರಾಂ ಖುಲಾಸೆ

ಸ್ವಯಂ ಘೋಷಿತ ದೇವಮಾನವ ಅಸಾರಾಂ ಬಾಪು ಅವರನ್ನು ಭಾರತೀಯ ದಂಡ ಸಂಹಿತೆ, ಪೋಕ್ಸೋ ಕಾಯ್ದೆಯಡಿಯಲ್ಲಿ ಸಾಮೂಹಿಕ ಅತ್ಯಾಚಾರ ಮತ್ತು ಮಕ್ಕಳ ಮೇಲಿನ ಸಾಮೂಹಿಕ ಲೈಂಗಿಕ ದೌರ್ಜನ್ಯಕ್ಕೆ ಸಂಬಂಧಿಸಿದ ಆರೋಪಗಳಿಂದ ಖುಲಾಸೆಗೊಳಿಸಲಾಗಿದೆ. ಮೇ 27...

ಸಿದ್ದರಾಮಯ್ಯ ಅವರ ಮನವೊಲಿಸಿದ ಕಾಂಗ್ರೆಸ್‌ ಹೈಕಮಾಂಡ್; ಮುಖ್ಯಮಂತ್ರಿ ಸ್ಥಾನಕ್ಕೆ ನಾಳೆ ರಾಜೀನಾಮೆ?

ಕರ್ನಾಟಕದ ಮುಖ್ಯಮಂತ್ರಿ ಹುದ್ದೆಯ ಸುತ್ತಲಿನ ತೀವ್ರ ರಾಜಕೀಯ ನಾಟಕವು ಅಂತಿಮವಾಗಿ ನಿರ್ಣಾಯಕ ಹಂತ ತಲುಪಿದೆ. ನವದೆಹಲಿಯಲ್ಲಿ ಕಾಂಗ್ರೆಸ್ ಹೈಕಮಾಂಡ್‌ನ ನಿರಂತರ ಒತ್ತಡ ಮತ್ತು ಮಾತುಕತೆಗಳ ನಂತರ ಸಿದ್ದರಾಮಯ್ಯ ಅವರು ರಾಜೀನಾಮೆ ನೀಡಲು...