Homeಮುಖಪುಟನೀವು ನಮ್ಮ ಮೇಲೆ ಒದ್ದರೆ, ನಾವು ನಮಾಝ್‌ ನಿಲ್ಲಿಸುವುದಿಲ್ಲ: ಅಸಾದುದ್ದೀನ್ ಓವೈಸಿ

ನೀವು ನಮ್ಮ ಮೇಲೆ ಒದ್ದರೆ, ನಾವು ನಮಾಝ್‌ ನಿಲ್ಲಿಸುವುದಿಲ್ಲ: ಅಸಾದುದ್ದೀನ್ ಓವೈಸಿ

- Advertisement -
- Advertisement -

ದೆಹಲಿಯ ರಸ್ತೆಯಲ್ಲಿ ಶುಕ್ರವಾರದ ನಮಾಝ್‌ ಮಾಡುತ್ತಿದ್ದ ಮುಸ್ಲಿಮ್‌ ಸಮುದಾಯದ ಜನರ ಮೇಲೆ ಒದ್ದು ದುಷ್ಕೃತ್ಯವನ್ನು ಮೆರದ ಪೊಲೀಸರ ವರ್ತನೆಯನ್ನು ಎಐಎಂಐಎಂ ಅಧ್ಯಕ್ಷ ಅಸಾದುದ್ದೀನ್ ಓವೈಸಿ ಖಂಡಿಸಿದ್ದು, ಮುಸ್ಲಿಮರು ನಮಾಜ್ ಮಾಡುವುದನ್ನು ತಡೆಯಲು ಯಾರಿಂದಲೂ ಸಾಧ್ಯವಿಲ್ಲ, ಪ್ರಧಾನಿ ನರೇಂದ್ರ ಮೋದಿ ಮತ್ತು ಬಿಜೆಪಿ ನಾಯಕರು ಘಟನೆಯ ಬಗ್ಗೆ ಜಗತ್ತಿಗೆ ವಿವರಿಸಬೇಕಾಗಿದೆ ಎಂದು ಹೇಳಿದ್ದಾರೆ.

ಈ ಕುರಿತು ಹೇಳಿಕೆಯನ್ನು ನೀಡಿರುವ  ಸಂಸದ ಅಸಾದುದ್ದೀನ್ ಓವೈಸಿ, ನೀವು ನಮ್ಮ ಮೇಲೆ ಒದ್ದರೆ ಅಥವಾ ಗುಂಡು ಹಾರಿಸಿದರೆ, ನಾವು ನಮಾಝ್‌ ನಿಲ್ಲಿಸುವುದಿಲ್ಲ. ಶುಕ್ರವಾರದ ಘಟನೆಯು ಮುಸ್ಲಿಮರ ವಿರುದ್ಧ ಜನರ ಮನಸ್ಸು ಎಷ್ಟು ಭ್ರಷ್ಟಗೊಂಡಿದೆ ಎಂಬುವುದನ್ನು ಎತ್ತಿ ತೋರಿಸುತ್ತಿದೆ ಎಂದು ಹೇಳಿದ್ದಾರೆ.

ಶುಕ್ರವಾರದಂದು ದೆಹಲಿಯ ರಸ್ತೆಗಳಲ್ಲಿ ಜನರು ಸೇರುವುದು ಮತ್ತು ನಮಾಝ್‌ನಲ್ಲಿ ಪಾಲ್ಗೊಳ್ಳುವುದು ಸಾಮಾನ್ಯವಾಗಿದೆ. ಹಿಂದಿನ ದೆಹಲಿ ಗಲಭೆಗಳಲ್ಲಿ ಮುಸ್ಲಿಮರನ್ನು ಪೊಲೀಸರು ಗುರಿಯಾಗಿಸಿಕೊಂಡ ಬಗೆಗೆ ದೆಹಲಿ ಪೊಲೀಸರು ಕಲಿಯಬೇಕು. ಈ ಘಟನೆ ಎಲ್ಲರನ್ನೂ ಬೆಚ್ಚಿ ಬೀಳಿಸಿದೆ, ಮುಸ್ಲಿಮರಿಗೆ ಎಷ್ಟು ಘನತೆ ಮತ್ತು ಗೌರವವಿದೆ ಎಂಬುವುದನ್ನು ಇದು ಹೇಳುತ್ತದೆ. ನಾನು ಪ್ರಧಾನಿ, ಬಿಜೆಪಿಯವರನ್ನು ಕೇಳಲು ಬಯಸುತ್ತೇನೆ ಅವಮಾನಕ್ಕೊಳಗಾದ ವ್ಯಕ್ತಿ ಯಾವ ಕುಟುಂಬಕ್ಕೆ ಸೇರಿದವನು? ಎಂದು ಅಸಾದುದ್ದೀನ್ ಓವೈಸಿ ಪ್ರಶ್ನಿಸಿದ್ದಾರೆ.

ಏನಿದು ಘಟನೆ?

ಜನನಿಬಿಡ ರಸ್ತೆಯೊಂದರಲ್ಲಿ ಶುಕ್ರವಾರದ ಪ್ರಾರ್ಥನೆ ಸಲ್ಲಿಸುತ್ತಿದ್ದ ಸಣ್ಣ ಗುಂಪಿಗೆ ಪೊಲೀಸ್ ಅಧಿಕಾರಿಯೊಬ್ಬರು ಅಲ್ಲಿಂದ ತೆರಳುವಂತೆ ಕಾಲಿನಿಂದ ಒದೆಯುತ್ತಿರುವ ವಿಡಿಯೋ ನಿನ್ನೆ ವೈರಲ್ ಆಗಿತ್ತು. ಘಟನೆ ಕುರಿತು ವಿರೋಧ ವ್ಯಕ್ತವಾದ ನಂತರ ಪೊಲೀಸ್ ಅಧಿಕಾರಿಯನ್ನು ಅಮಾನತುಗೊಳಿಸಲಾಗಿತ್ತು.

ಘಟನೆಯ ವೀಡಿಯೋದಲ್ಲಿ ಕಂಡುಬರುವ ಪೊಲೀಸ್ ಪೋಸ್ಟ್ ಇನ್ ಚಾರ್ಜ್‌ನ್ನು ತಕ್ಷಣದಿಂದ ಜಾರಿಗೆ ಬರುವಂತೆ ಅಮಾನತುಗೊಳಿಸಲಾಗಿದೆ. ಅಗತ್ಯ ಶಿಸ್ತು ಕ್ರಮವನ್ನೂ ತೆಗೆದುಕೊಳ್ಳಲಾಗುತ್ತಿದೆ ಎಂದು ಪೊಲೀಸ್ ಉಪ ಆಯುಕ್ತ ಎಂಕೆ ಮೀನಾ ತಿಳಿಸಿದ್ದಾರೆ.

ಘಟನೆಯ ಬಗ್ಗೆ ಕಾಂಗ್ರೆಸ್‌ನ ದೆಹಲಿ ಘಟಕವು ದೆಹಲಿ ಪೊಲೀಸರನ್ನು ನಿನ್ನೆ ತರಾಟೆಗೆ ತೆಗೆದುಕೊಂಡಿತ್ತು. ಇದು ತುಂಬಾ ನಾಚಿಕೆಗೇಡಿನ ಸಂಗತಿ! ರಸ್ತೆಯಲ್ಲಿ ನಮಾಝ್‌ ಮಾಡುವವರನ್ನು ಒದೆಯುತ್ತಿರುವ ದಿಲ್ಲಿ ಪೊಲೀಸ್ ಜವಾನ, ಇದಕ್ಕಿಂತ ನಾಚಿಕೆಗೇಡಿನ ಸಂಗತಿ ಏನಿದೆ…? ಎಂದು ಪ್ರಶ್ನಿಸಿತ್ತು.

ಇದನ್ನು ಓದಿ: ವಾಕ್, ಅಭಿವ್ಯಕ್ತಿ ಸ್ವಾತಂತ್ರ್ಯದ ಬಗ್ಗೆ ಪೊಲೀಸರಿಗೆ ಅರಿವು ಮೂಡಿಸುವ ಅಗತ್ಯವಿದೆ: ಸುಪ್ರೀಂಕೋರ್ಟ್

 

 

 

 

 

 

 

 

 

 

 

 

 

 

 

 

 

 

 

 

 

 

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದೆಹಲಿಗೆ ಬಂದಿಳಿದ ಕಾಕ್ರೋಚ್ ಪಾರ್ಟಿ ಸಂಸ್ಥಾಪಕ ಅಭಿಜೀತ್ ದೀಪ್ಕೆ : ಜಂತರ್‌ ಮಂತರ್‌ನಲ್ಲಿ ಪ್ರತಿಭಟಿಸಲು ಪೊಲೀಸರಿಂದ ಅನುಮತಿ

ಶನಿವಾರ (ಜೂ.6) ಬೆಳಿಗ್ಗೆ ದೆಹಲಿಗೆ ಆಗಮಿಸಿದ ಕಾಕ್ರೋಚ್ ಜನತಾ ಪಾರ್ಟಿಯ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದೀಪ್ಕೆ, ಪ್ರತಿಭಟನೆಗೆ ದೆಹಲಿ ಪೊಲೀಸರು ಅನುಮತಿ ನೀಡಿದ್ದಾರೆ ಎಂದು ತಿಳಿಸಿದ್ದು, ಯೋಜಿತ ಆಂದೋಲನಕ್ಕಾಗಿ ನೇರವಾಗಿ ಜಂತರ್ ಮಂತರ್‌ನಲ್ಲಿ...

ಜಾಗತಿಕವಾಗಿ ಮೂರು ವರ್ಷಗಳಲ್ಲಿ 600 ಪರಿಸರ ರಕ್ಷಕರ ಹತ್ಯೆ: ವಿಶ್ವಸಂಸ್ಥೆ ತೀವ್ರ ಕಳವಳ: ಜಾಗತಿಕ ತಾಪಮಾನಕ್ಕೆ ಸಾಕ್ಷಿಯಾಗುತ್ತಿರುವ ಭಾರತ

ಜೂನ್ 5 ವಿಶ್ವ ಪರಿಸರ ದಿನ. ಜಗತ್ತಿನಾದ್ಯಂತ ಗಿಡ ನೆಡುವ, ಹಸಿರು ಭಾಷಣ ಬಿಗಿಯುವ ಮತ್ತು ಪರಿಸರ ಕಾಳಜಿಯ ಸಡಗರದ ಆಚರಣೆಗಳು ಎಲ್ಲೆಡೆ ವಿಭಿನ್ನ ರೀತಿಗಳಲ್ಲಿ ವಿಜೃಂಭಿಸುತ್ತಿವೆ. ಆದರೆ, ಇದೇ ಹೊತ್ತಿನಲ್ಲಿ ವಿಶ್ವಸಂಸ್ಥೆಯು...

ಮಣಿಪುರ ಎಸ್‌ಐಆರ್ ವಿರೋಧಿಸಿದ ಕುಕಿ-ಝೋ ಗುಂಪುಗಳು

ಮಣಿಪುರ ರಾಜ್ಯದಲ್ಲಿ ಪ್ರಸ್ತುತ ನಡೆಯುತ್ತಿರುವ ಮತದಾರರ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆ ವಿರುದ್ಧ ಪ್ರತಿಭಟನೆ ವ್ಯಕ್ತವಾಗಿದೆ. ಕುಕಿ-ಝೋ ಬುಡಕಟ್ಟು ಜನಾಂಗದ ಸಾಂಪ್ರದಾಯಿಕ ಗುಂಪಾದ ಕುಕಿ ಇನ್ಪಿ ಮಣಿಪುರ (ಕೆಐಎಂ) ಮತದಾರರ ಪಟ್ಟಿ...

ಹೇಗಿತ್ತು ‘ಕಾಕ್ರೋಚ್ ಜನತಾ ಪಕ್ಷ’ದ ಮೊದಲ ಸುದ್ದಿಗೋಷ್ಠಿ…? ಧರ್ಮೇಂದ್ರ ಪ್ರಧಾನ್‌ ರಾಜೀನಾಮೆಗೆ ಕರೆ

ಜೂನ್ 6, 2026 ರಂದು ಜಂತರ್ ಮಂತರ್‌ನಲ್ಲಿ ನಡೆಯಲಿರುವ 'ಶಾಂತಿಯುತ ಪ್ರತಿಭಟನೆ'ಗೆ ಮುನ್ನ ಜಿರಳೆ ಜನತಾ ಪಕ್ಷ (ಸಿಜೆಪಿ) ತನ್ನ ಮೊದಲ ಪತ್ರಿಕಾಗೋಷ್ಠಿಯನ್ನು ನಡೆಸಿದೆ. ಬುಧವಾರ ಸಂಜೆ (ಜೂ.3) ಸಿಜೆಪಿಯ ಮೂವರು ವಕ್ತಾರರು...

‘ಇದು ಆತ್ಮಹತ್ಯೆಯಲ್ಲ, ಮೋದಿ ಸರ್ಕಾರದ ಭ್ರಷ್ಟ ವ್ಯವಸ್ಥೆ ಮಾಡಿದ ಕೊಲೆ’: ನೀಟ್ ಆಕಾಂಕ್ಷಿಯ ಸಾವಿಗೆ ರಾಹುಲ್ ಗಾಂಧಿ ಆಕ್ರೋಶ

ದೇಶದ ವೈದ್ಯಕೀಯ ಪ್ರವೇಶ ಪರೀಕ್ಷೆಯಾದ ‘ನೀಟ್-ಯುಜಿ’ (NEET-UG) ವಿವಾದ ಮತ್ತು ವಿದ್ಯಾರ್ಥಿಗಳ ಸಾವುಗಳು ಭಾರತದ ಒಟ್ಟಾರೆ ಶಿಕ್ಷಣ ವ್ಯವಸ್ಥೆಯ ದಯನೀಯ ಸ್ಥಿತಿಗೆ ಕನ್ನಡಿ ಹಿಡಿದಿವೆ. ಪರೀಕ್ಷಾ ಅಕ್ರಮಗಳು, ಪ್ರಶ್ನೆ ಪತ್ರಿಕೆ ಸೋರಿಕೆ ಮತ್ತು...

ತಕ್ಷಣವೇ ‘SIR ಹೆಲ್ಪ್‌ ಡೆಸ್ಕ್‌’ ಸ್ಥಾಪಿಸುವಂತೆ ಅಧಿಕಾರಿಗಳಿಗೆ ಸಿಎಂ ಸೂಚನೆ

ರಾಜ್ಯದಲ್ಲಿ ಭಾರತೀಯ ಚುನಾವಣಾ ಆಯೋಗದಿಂದ ನಡೆಯುತ್ತಿರುವ ಎಸ್‌ಐಆರ್ (Special Electoral Roll Purification) ಪ್ರಕ್ರಿಯೆ ಸಂದರ್ಭದಲ್ಲಿ ರಾಜ್ಯದ ಯಾವುದೇ ಪ್ರಜೆಯೂ ತನ್ನ ಅತ್ಯಮೂಲ್ಯವಾದ ಮತದಾನದ ಹಕ್ಕನ್ನು ಕಳೆದುಕೊಳ್ಳಬಾರದು ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್...

ವಿಷಾಹಾರಕ್ಕೆ ಜಾಗತಿಕವಾಗಿ ವರ್ಷಕ್ಕೆ 15 ಲಕ್ಷ ಜನರು ಬಲಿ: ಮಕ್ಕಳಿಗೆ ಹೆಚ್ಚಿನ ಅಪಾಯ: ಭಾರತದ ಸ್ಥಿತಿಯೂ ಆತಂಕಕಾರಿ! 

ನಾವು ದಿನನಿತ್ಯ ಸೇವಿಸುವ ಆಹಾರವೇ ನಮ್ಮ ಜೀವಕ್ಕೆ ಕಂಟಕವಾಗುತ್ತಿದೆಯೇ? ಹೌದು ಎನ್ನುತ್ತದೆ ವಿಶ್ವ ಆರೋಗ್ಯ ಸಂಸ್ಥೆಯ (WHO) ಇತ್ತೀಚಿನ ಆಘಾತಕಾರಿ ವರದಿ. ಜಾಗತಿಕವಾಗಿ ಅಸುರಕ್ಷಿತ ಮತ್ತು ಕಲುಷಿತ ಆಹಾರದ ಸೇವನೆಯಿಂದಾಗಿ ಪ್ರತಿ ವರ್ಷ...

ಡಿಕೆಶಿ ಸಂಪುಟದಲ್ಲಿ ಅಲ್ಪಸಂಖ್ಯಾತರಿಗೆ ಸಿಗುತ್ತಾ ಸೂಕ್ತ ಪ್ರಾತಿನಿಧ್ಯ?

ಮಹತ್ವದ ರಾಜಕೀಯ ಬೆಳವಣಿಗೆಯಲ್ಲಿ ರಾಜ್ಯದ ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ಅವರು ರಾಜೀನಾಮೆ ನೀಡಿ, ಡಿ.ಕೆ ಶಿವಕುಮಾರ್ ಹೊಸ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡಾಗಿದೆ. ಈ ಮೂಲಕ ಕಳೆದ ಒಂದು ವರ್ಷದಿಂದ ನಡೆಯುತ್ತಿದ್ದ ಸಿಎಂ ಬದಲಾವಣೆಯ...

‘ಕರ್ನಾಟಕದಲ್ಲಿ SIR’ ಮತ ಉಳಿಸಿಕೊಳ್ಳುವಂತೆ ಕಾರ್ಯಕರ್ತರಿಗೆ CM ಡಿ.ಕೆ ಶಿವಕುಮಾರ್ ಕರೆ!

ಕರ್ನಾಟಕ ರಾಜಕಾರಣದಲ್ಲಿ ಹೊಸ ಯುಗ ಆರಂಭವಾಗಿದೆ. ರಾಜ್ಯದ 25ನೇ ಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ ಅವರು ಪ್ರಮಾಣವಚನ ಸ್ವೀಕರಿಸಿದ್ದಾರೆ. ಅಧಿಕಾರ ವಹಿಸಿಕೊಂಡ ಬೆನ್ನಲ್ಲೇ ಕೆಲಸ ಮಾಡದಿರುವ ಸಚಿವ ಮತ್ತು ಶಾಸಕರನ್ನು ಸುಮ್ಮನೆ ಬಿಡುವುದಿಲ್ಲ ಎಂದು...

ವೋಟರ್ ಐಡಿ, ಆಧಾರ್ ಇದ್ದರೂ ನೆಮ್ಮದಿ ಇಲ್ಲ, ಪಶ್ಚಿಮ ಬಂಗಾಳದಲ್ಲಿ ಶುರುವಾಯ್ತು ‘ಹೋಲ್ಡಿಂಗ್ ಸೆಂಟರ್’ಗಳ ಭಯ

ಪಶ್ಚಿಮ ಬಂಗಾಳದಲ್ಲಿ "ಯಾರು ಈಗಾಗಲೇ ಮತದಾರರ ಪಟ್ಟಿಯಿಂದ ಹೊರಗುಳಿದಿದ್ದಾರೋ ಮತ್ತು ಟ್ರಿಬ್ಯೂನಲ್‌ನ (ನ್ಯಾಯಮಂಡಳಿ) ಅನುಮೋದನೆಗಾಗಿ ಕಾಯುತ್ತಿದ್ದಾರೋ, ಅಂತಹವರಲ್ಲಿ ಹೊಸ ಪೊಲೀಸ್ ವ್ಯವಸ್ಥೆ ಮತ್ತು ಬಂಧನ ಕೇಂದ್ರಗಳು (ಡಿಟೆಂಷನ್ ಸೆಂಟರ್) ತಮ್ಮನ್ನು ವಿದೇಶಿಯರಂತೆ ನಡೆಸಿಕೊಳ್ಳಲ್ಪಡಬಹುದು...