“ನನ್ನ ಕೊನೆಯ ಟ್ವೀಟ್ನಲ್ಲಿ ಹೇಳಿದ್ದನ್ನು ಮಾಡಲು ಮೇ 2ರವರೆಗೆ ಕಾಯಿರಿ” ಎಂದು ಪಶ್ಚಿಮ ಬಂಗಾಳದ ರಾಜಕೀಯ ತಂತ್ರಜ್ಞ ಪ್ರಶಾಂತ್ ಕಿಶೋರ್ ಹೇಳಿದ್ದಾರೆ. 2021ರ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಎರಡಂಕಿಯನ್ನು ದಾಟಿದರೆ ತಾವು ರಾಜಕೀಯ ವಿಶ್ಲೇಷಣೆ ಕ್ಷೇತ್ರ ತ್ಯಜಿಸುವುದಾಗಿ ಈ ಹಿಂದೆ ಅವರು ಹೇಳಿದ್ದರು.
ಈ ಕುರಿತು ಟ್ವೀಟ್ ಮಾಡಿರುವ ಪ್ರಶಾಂತ್, “ಪ್ರಜಾಪ್ರಭುತ್ವದ ಉಳಿವಿಗಾಗಿ ಭಾರತದಲ್ಲಿ ನಡೆಯುತ್ತಿರುವ ಪ್ರಮುಖ ಕದನಗಳಲ್ಲಿ ಒಂದು ಪಶ್ಚಿಮ ಬಂಗಾಳದಲ್ಲಿ ನಡೆಯುತ್ತಿದೆ. ಇಲ್ಲಿನ ಜನರು ಸರಿಯಾದುದನ್ನು ಆಯ್ಕೆ ಮಾಡುವ ಮೂಲಕ ತಮ್ಮ ಸ್ಪಷ್ಟ ಸಂದೇಶವನ್ನು ತಿಳಿಸಲು ಸಜ್ಜಾಗಿದ್ದಾರೆ. ಪಶ್ಚಿಮ ಬಂಗಾಳ ತನ್ನ ಸ್ವಂತ ಮಗಳನ್ನು ಬಯಸುತ್ತಿದೆ. ನನ್ನ ಕೊನೆಯ ಟ್ವೀಟ್ನಲ್ಲಿ ಹೇಳಿದ್ದನ್ನು ಮಾಡಲು ಮೇ 2ರವರೆಗೆ ಕಾಯಿರಿ” ಎಂದು ಬರೆದುಕೊಂಡಿದ್ದಾರೆ.
One of the key battles FOR DEMOCRACY in India will be fought in West Bengal, and the people of Bengal are ready with their MESSAGE and determined to show the RIGHT CARD – #BanglaNijerMeyekeiChay
(Bengal Only Wants its Own Daughter)
PS: On 2nd May, hold me to my last tweet. pic.twitter.com/vruk6jVP0X
— Prashant Kishor (@PrashantKishor) February 27, 2021
ಭಾರೀ ಕುತೂಹಲ ಹುಟ್ಟಿಸಿರುವ ಪಶ್ಚಿಮ ಬಂಗಾಳ ಚುನಾವಣೆಯಲ್ಲಿ ಶತಾಯಗತಾಯ ಗೆಲ್ಲಲೇಬೇಕೆಂದು ಬಿಜೆಪಿ ಹಠ ತೊಟ್ಟಿದೆ. ಇದಕ್ಕೆ ಮಾಧ್ಯಮಗಳು ಸಾಕಷ್ಟು ಹೈಪ್ ನೀಡಿದರೆ, ಹಲವಾರು ಟಿಎಂಸಿ ಮುಖಂಡರು ಒಬ್ಬೊಬ್ಬರಾಗಿ ಬಿಜೆಪಿ ಸೇರುತ್ತಿದ್ದಾರೆ. ಇಷ್ಟೆಲ್ಲದರ ನಡುವೆಯೂ ಬಿಜೆಪಿ ಅಲ್ಲಿ ಎರಡಂಕಿ ದಾಟಲು ಹೆಣಗಾಡುತ್ತಿದೆ ಎಂದು ರಾಜಕೀಯ ತಂತ್ರಜ್ಞ ಪ್ರಶಾಂತ್ ಕಿಶೋರ್ ಭವಿಷ್ಯ ನುಡಿದಿದ್ದರು.
ಇದನ್ನೂ ಓದಿ: COW-ACTION ವರದಿ: ಗಾಯ್ ಪರೀಕ್ಷಾ ಕ್ಯಾನ್ಸಲ್, ಗಾಯ್ವಾಲಾ ಗಾಯಬ್!
ಡಿಸಂಬರ್ 21ರಂದು ಟ್ವೀಟ್ ಮಾಡಿದ್ದ ಅವರು “ಮಾಧ್ಯಮಗಳ ಭಾರೀ ಪ್ರಚಾರದ ನಡುವೆಯೂ ವಾಸ್ತವದಲ್ಲಿ ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ಎರಡಂಕಿ ಸ್ಥಾನ ಮುಟ್ಟಲು ಹೆಣಗಾಡುತ್ತಿದೆ. ಒಂದು ವೇಳೆ ಅವರು ಈ ಚುನಾವಣೆಯಲ್ಲಿ ಉತ್ತಮ ಪ್ರದರ್ಶನ ನೀಡಿದ್ದೇ ಆದಲ್ಲಿ ನಾನು ಈ ಕ್ಷೇತ್ರ (ರಾಜಕೀಯ) ತ್ಯಜಿಸುತ್ತೇನೆ. ಬರೆದಿಟ್ಟುಕೊಳ್ಳಿ” ಎಂದು ಸವಾಲು ಹಾಕಿದ್ದರು.
ಈ ಟ್ವೀಟ್ ಅನ್ನು ಸೇವ್ ಮಾಡಿಕೊಳ್ಳಿ. ಒಂದು ವೇಳೆ ನನ್ನ ಊಹೆಗಿಂತ ಬಿಜೆಪಿ ಹೆಚ್ಚಿನ ಸಾಧನೆ ಮಾಡಿದರೆ ನಾನು ಈ ಕ್ಷೇತ್ರ ತ್ಯಜಿಸುತ್ತೇನೆ ಎಂದು ಪ್ರಶಾಂತ್ ಕಿಶೋರ್ ಘೋಷಿಸಿದ್ದರು.
For all the hype AMPLIFIED by a section of supportive media, in reality BJP will struggle to CROSS DOUBLE DIGITS in #WestBengal
PS: Please save this tweet and if BJP does any better I must quit this space!
— Prashant Kishor (@PrashantKishor) December 21, 2020
ಪ್ರಶಾಂತ್ ಕಿಶೋರ್ ಭಾರತದ ರಾಜಕೀಯ ಚತುರ ಎಂದು ಹೆಸರು ಪಡೆದವರು. 2013 ರಲ್ಲಿ ನರೇಂದ್ರ ಮೋದಿ ಪರವಾಗಿ ಕೆಲಸ ಮಾಡಿದ್ದ ಅವರು ನಂತರ ಬಿಜೆಪಿಯಿಂದ ದೂರವಾಗಿದ್ದಾರೆ. ಆಂದ್ರದಲ್ಲಿ ಜಗನ್ ಪರ ಮತ್ತು ದೆಹಲಿಯಲ್ಲಿ ಕೇಜ್ರಿವಾಲ್ ಪರ ಸೇರಿದಂತೆ ಹಲವು ಯಶಸ್ವಿ ಚುನಾವಣಾ ಪ್ರಚಾರ ನಡೆಸಿದ್ದಾರೆ. ಸದ್ಯಕ್ಕೆ ಮುಂಬರುವ ಪಶ್ಚಿಮ ಬಂಗಾಳ ಚುನಾವಣೆಯಲ್ಲಿ ಮಮತಾ ಬ್ಯಾನರ್ಜಿಯವರ ತೃಣಮೂಲ ಕಾಂಗ್ರೆಸ್ ಪರವಾಗಿ ಕೆಲಸ ಮಾಡುತ್ತಿದ್ದಾರೆ. ಅಲ್ಲದೇ ತಮಿಳುನಾಡು ಚುನಾವಣೆಯಲ್ಲಿಯೂ ಸಹ ಡಿಎಂಕೆ ಪರವಾಗಿ ಕೆಲಸ ಮಾಡುತ್ತಿದ್ದಾರೆ.
ಜೆಡಿಯು ಪಕ್ಷದ ರಾಷ್ಟ್ರೀಯ ಉಪಾಧ್ಯಕ್ಷರಾಗಿದ್ದ ಕಿಶೋರ್ ಅಲ್ಲಿನ ಮುಖ್ಯಮಂತ್ರಿ ನಿತೀಶ್ ಕುಮಾರ್ ಸಿಎಎ ಎನ್ಆರ್ಸಿ ಪರ ಮತ ಹಾಕಿದನ್ನು ಖಂಡಿಸಿ ಪಕ್ಷಕ್ಕೆ ರಾಜೀನಾಮೆ ನೀಡಿದ್ದಾರೆ. ಬಿಹಾರದ ಯುವಜನರಿಗೆ ಉದ್ಯೋಗ ನೀಡುವುದರ ಪರ ಕೆಲಸ ಮಾಡುತ್ತಿದ್ದಾರೆ.
ಇದನ್ನೂ ಓದಿ: ಬಂಗಾಳದಲ್ಲಿ 8 ಹಂತದ ಚುನಾವಣೆ: ಮೋದಿ, ಶಾ ತಂತ್ರ ಎಂದು ಮಮತಾ ಬ್ಯಾನರ್ಜಿ ಆಕ್ರೋಶ


