Homeಮುಖಪುಟ'ಬಂಗಾಳ ಚುನಾವಣೆ :ಬಿಜೆಪಿ ಗೆದ್ದರೆ ಈ ಕ್ಷೇತ್ರ ತ್ಯಜಿಸುತ್ತೇನೆ' ಮಾತು ಮತ್ತೆ ನೆನಪಿಸಿದ ಪ್ರಶಾಂತ್ ಕಿಶೋರ್

‘ಬಂಗಾಳ ಚುನಾವಣೆ :ಬಿಜೆಪಿ ಗೆದ್ದರೆ ಈ ಕ್ಷೇತ್ರ ತ್ಯಜಿಸುತ್ತೇನೆ’ ಮಾತು ಮತ್ತೆ ನೆನಪಿಸಿದ ಪ್ರಶಾಂತ್ ಕಿಶೋರ್

- Advertisement -
- Advertisement -

“ನನ್ನ ಕೊನೆಯ ಟ್ವೀಟ್‌ನಲ್ಲಿ ಹೇಳಿದ್ದನ್ನು ಮಾಡಲು ಮೇ 2ರವರೆಗೆ ಕಾಯಿರಿ” ಎಂದು ಪಶ್ಚಿಮ ಬಂಗಾಳದ ರಾಜಕೀಯ ತಂತ್ರಜ್ಞ ಪ್ರಶಾಂತ್ ಕಿಶೋರ್ ಹೇಳಿದ್ದಾರೆ. 2021ರ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಎರಡಂಕಿಯನ್ನು ದಾಟಿದರೆ ತಾವು ರಾಜಕೀಯ ವಿಶ್ಲೇಷಣೆ ಕ್ಷೇತ್ರ ತ್ಯಜಿಸುವುದಾಗಿ ಈ ಹಿಂದೆ ಅವರು ಹೇಳಿದ್ದರು.

ಈ ಕುರಿತು ಟ್ವೀಟ್ ಮಾಡಿರುವ ಪ್ರಶಾಂತ್, “ಪ್ರಜಾಪ್ರಭುತ್ವದ ಉಳಿವಿಗಾಗಿ ಭಾರತದಲ್ಲಿ ನಡೆಯುತ್ತಿರುವ ಪ್ರಮುಖ ಕದನಗಳಲ್ಲಿ ಒಂದು ಪಶ್ಚಿಮ ಬಂಗಾಳದಲ್ಲಿ ನಡೆಯುತ್ತಿದೆ. ಇಲ್ಲಿನ ಜನರು ಸರಿಯಾದುದನ್ನು ಆಯ್ಕೆ ಮಾಡುವ ಮೂಲಕ ತಮ್ಮ ಸ್ಪಷ್ಟ ಸಂದೇಶವನ್ನು ತಿಳಿಸಲು ಸಜ್ಜಾಗಿದ್ದಾರೆ. ಪಶ್ಚಿಮ ಬಂಗಾಳ ತನ್ನ ಸ್ವಂತ ಮಗಳನ್ನು ಬಯಸುತ್ತಿದೆ. ನನ್ನ ಕೊನೆಯ ಟ್ವೀಟ್‌ನಲ್ಲಿ ಹೇಳಿದ್ದನ್ನು ಮಾಡಲು ಮೇ 2ರವರೆಗೆ ಕಾಯಿರಿ” ಎಂದು ಬರೆದುಕೊಂಡಿದ್ದಾರೆ.

ಭಾರೀ ಕುತೂಹಲ ಹುಟ್ಟಿಸಿರುವ ಪಶ್ಚಿಮ ಬಂಗಾಳ ಚುನಾವಣೆಯಲ್ಲಿ ಶತಾಯಗತಾಯ ಗೆಲ್ಲಲೇಬೇಕೆಂದು ಬಿಜೆಪಿ ಹಠ ತೊಟ್ಟಿದೆ. ಇದಕ್ಕೆ ಮಾಧ್ಯಮಗಳು ಸಾಕಷ್ಟು ಹೈಪ್ ನೀಡಿದರೆ, ಹಲವಾರು ಟಿಎಂಸಿ ಮುಖಂಡರು ಒಬ್ಬೊಬ್ಬರಾಗಿ ಬಿಜೆಪಿ ಸೇರುತ್ತಿದ್ದಾರೆ. ಇಷ್ಟೆಲ್ಲದರ ನಡುವೆಯೂ ಬಿಜೆಪಿ ಅಲ್ಲಿ ಎರಡಂಕಿ ದಾಟಲು ಹೆಣಗಾಡುತ್ತಿದೆ ಎಂದು ರಾಜಕೀಯ ತಂತ್ರಜ್ಞ ಪ್ರಶಾಂತ್ ಕಿಶೋರ್ ಭವಿಷ್ಯ ನುಡಿದಿದ್ದರು.

ಇದನ್ನೂ ಓದಿ: COW-ACTION ವರದಿ: ಗಾಯ್ ಪರೀಕ್ಷಾ ಕ್ಯಾನ್ಸಲ್, ಗಾಯ್‌ವಾಲಾ ಗಾಯಬ್!

ಡಿಸಂಬರ್ 21ರಂದು ಟ್ವೀಟ್ ಮಾಡಿದ್ದ ಅವರು “ಮಾಧ್ಯಮಗಳ ಭಾರೀ ಪ್ರಚಾರದ ನಡುವೆಯೂ ವಾಸ್ತವದಲ್ಲಿ ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ಎರಡಂಕಿ ಸ್ಥಾನ ಮುಟ್ಟಲು ಹೆಣಗಾಡುತ್ತಿದೆ. ಒಂದು ವೇಳೆ ಅವರು ಈ ಚುನಾವಣೆಯಲ್ಲಿ ಉತ್ತಮ ಪ್ರದರ್ಶನ ನೀಡಿದ್ದೇ ಆದಲ್ಲಿ ನಾನು ಈ ಕ್ಷೇತ್ರ (ರಾಜಕೀಯ) ತ್ಯಜಿಸುತ್ತೇನೆ. ಬರೆದಿಟ್ಟುಕೊಳ್ಳಿ” ಎಂದು ಸವಾಲು ಹಾಕಿದ್ದರು.

ಈ ಟ್ವೀಟ್‌ ಅನ್ನು ಸೇವ್ ಮಾಡಿಕೊಳ್ಳಿ. ಒಂದು ವೇಳೆ ನನ್ನ ಊಹೆಗಿಂತ ಬಿಜೆಪಿ ಹೆಚ್ಚಿನ ಸಾಧನೆ ಮಾಡಿದರೆ ನಾನು ಈ ಕ್ಷೇತ್ರ ತ್ಯಜಿಸುತ್ತೇನೆ ಎಂದು ಪ್ರಶಾಂತ್ ಕಿಶೋರ್ ಘೋಷಿಸಿದ್ದರು.

ಪ್ರಶಾಂತ್ ಕಿಶೋರ್ ಭಾರತದ ರಾಜಕೀಯ ಚತುರ ಎಂದು ಹೆಸರು ಪಡೆದವರು. 2013 ರಲ್ಲಿ ನರೇಂದ್ರ ಮೋದಿ ಪರವಾಗಿ ಕೆಲಸ ಮಾಡಿದ್ದ ಅವರು ನಂತರ ಬಿಜೆಪಿಯಿಂದ ದೂರವಾಗಿದ್ದಾರೆ. ಆಂದ್ರದಲ್ಲಿ ಜಗನ್ ಪರ ಮತ್ತು ದೆಹಲಿಯಲ್ಲಿ ಕೇಜ್ರಿವಾಲ್ ಪರ ಸೇರಿದಂತೆ ಹಲವು ಯಶಸ್ವಿ ಚುನಾವಣಾ ಪ್ರಚಾರ ನಡೆಸಿದ್ದಾರೆ. ಸದ್ಯಕ್ಕೆ ಮುಂಬರುವ ಪಶ್ಚಿಮ ಬಂಗಾಳ ಚುನಾವಣೆಯಲ್ಲಿ ಮಮತಾ ಬ್ಯಾನರ್ಜಿಯವರ ತೃಣಮೂಲ ಕಾಂಗ್ರೆಸ್ ಪರವಾಗಿ ಕೆಲಸ ಮಾಡುತ್ತಿದ್ದಾರೆ. ಅಲ್ಲದೇ ತಮಿಳುನಾಡು ಚುನಾವಣೆಯಲ್ಲಿಯೂ ಸಹ ಡಿಎಂಕೆ ಪರವಾಗಿ ಕೆಲಸ ಮಾಡುತ್ತಿದ್ದಾರೆ.

ಜೆಡಿಯು ಪಕ್ಷದ ರಾಷ್ಟ್ರೀಯ ಉಪಾಧ್ಯಕ್ಷರಾಗಿದ್ದ ಕಿಶೋರ್ ಅಲ್ಲಿನ ಮುಖ್ಯಮಂತ್ರಿ ನಿತೀಶ್ ಕುಮಾರ್ ಸಿಎಎ ಎನ್‌ಆರ್‌ಸಿ ಪರ ಮತ ಹಾಕಿದನ್ನು ಖಂಡಿಸಿ ಪಕ್ಷಕ್ಕೆ ರಾಜೀನಾಮೆ ನೀಡಿದ್ದಾರೆ. ಬಿಹಾರದ ಯುವಜನರಿಗೆ ಉದ್ಯೋಗ ನೀಡುವುದರ ಪರ ಕೆಲಸ ಮಾಡುತ್ತಿದ್ದಾರೆ.


ಇದನ್ನೂ ಓದಿ: ಬಂಗಾಳದಲ್ಲಿ 8 ಹಂತದ ಚುನಾವಣೆ: ಮೋದಿ, ಶಾ ತಂತ್ರ ಎಂದು ಮಮತಾ ಬ್ಯಾನರ್ಜಿ ಆಕ್ರೋಶ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಉತ್ತರ ಪ್ರದೇಶ : 33 ವರ್ಷಗಳ ಬಳಿಕ ದೇಶದ್ರೋಹ ಪ್ರಕರಣದಿಂದ ಮುಸ್ಲಿಂ ವ್ಯಕ್ತಿ ಖುಲಾಸೆ

ಪ್ರಾಸಿಕ್ಯೂಷನ್ ಆರೋಪಗಳನ್ನು ಸಾಂದರ್ಭಿಕ ಪುರಾವೆಗಳೊಂದಿಗೆ ಸಾಬೀತುಪಡಿಸಲು ವಿಫಲವಾಗಿದೆ ಮತ್ತು ಆರೋಪಿಯನ್ನು ಕೃತ್ಯಕ್ಕೆ ಲಿಂಕ್ ಮಾಡುವ ಪ್ರಮುಖ ಪುರಾವೆಗಳು ಕಾಣೆಯಾಗಿವೆ ಎಂದು ಅಭಿಪ್ರಾಯಪಟ್ಟ ಲಕ್ನೋದ ವಿಶೇಷ ರಾಷ್ಟ್ರೀಯ ತನಿಖಾ ದಳ (ಎನ್ಐಎ) ನ್ಯಾಯಾಲಯ, ದೇಶದ್ರೋಹ...

‘ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು’ ಎಂಬಂತೆ NTA ಯಿಂದ ₹7.5 ಕೋಟಿಯ ಬೃಹತ್ ಸೆಕ್ಯೂರಿಟಿ ಟೆಂಡರ್

ನೀಟ್ ಪ್ರಶ್ನೆಪತ್ರಿಕೆ ಸೋರಿಕೆಯಾಗಿ, ಅಮಾಯಕ ವಿದ್ಯಾರ್ಥಿಗಳ ಜೀವ-ಭವಿಷ್ಯ ಹಾಳಾದ ಮೇಲೆ, ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು ಎಂಬಂತೆ ಈಗ ಎನ್‌ಟಿಎ (NTA) ₹7.5 ಕೋಟಿ ವೆಚ್ಚದ ಭದ್ರತಾ ಟೆಂಡರ್...

SIR: ನಮೂನೆಯೂ ಇಲ್ಲ, ನೋಟಿಸ್‌ ಇಲ್ಲ ಸ್ವಂತ ಮನೆಯಲ್ಲಿದ್ದವರ ಹೆಸರನ್ನೇ ಅಳಿಸಿಹಾಕಿದ ಚುನಾವಣಾ ಆಯೋಗ

ರಾಜ್ಯದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಒಂದಾದ ಮೇಲೊಂದರಂತೆ ಆತಂಕಕಾರಿ ಪ್ರಕರಣಗಳು ಬೆಳಕಿಗೆ ಬರುತ್ತಿವೆ. ಮನೆಮನೆಗೆ ತೆರಳಿ ಎನ್ಯುಮರೇಷನ್ ನಮೂನೆ ವಿತರಿಸುವ ಮೊದಲ ಹಂತದ ಪ್ರಕ್ರಿಯೆ...

ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಅಮಾನತುಗೊಂಡಿದ್ದ ಯುಪಿ ಪೊಲೀಸ್ ಕಾನ್‌ಸ್ಟೇಬಲ್; ಮರುನೇಮಕದ ಬೆನ್ನಲ್ಲೇ ಬಾಲಕಿಯ ಅತ್ಯಾಚಾರ, ಕೊಲೆ!

ಹತ್ತು ವರ್ಷದ ಬಾಲಕಿಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿ, ಆಕೆಯ ಸಾವಿಗೆ ಕಾರಣನಾದ ಆರೋಪದ ಮೇಲೆ ಬಂಧಿತನಾದ ಉತ್ತರ ಪ್ರದೇಶದ ಪೊಲೀಸ್ ಕಾನ್‌ಸ್ಟೇಬಲ್ ಅಭಿಷೇಕ್ ಯಾದವ್‌ನನ್ನು ವೈದ್ಯಕೀಯ ತಪಾಸಣೆಗಾಗಿ ಗೋರಖ್‌ಪುರದ ಜಿಲ್ಲಾಸ್ಪತ್ರೆಗೆ ಕರೆತಂದಾಗ, ಅಲ್ಲಿನ...

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...