HomeUncategorizedಉತ್ತರ ಪ್ರದೇಶ: ಮದುವೆ ಮನೆಯಲ್ಲಿ ಅತಿಥಿಗಳಿಗೆ ಊಟದ ತಟ್ಟೆ ತಾಗಿದ್ದಕ್ಕೆ ವೇಟರ್‌ನ ಥಳಿಸಿ ಹತ್ಯೆ

ಉತ್ತರ ಪ್ರದೇಶ: ಮದುವೆ ಮನೆಯಲ್ಲಿ ಅತಿಥಿಗಳಿಗೆ ಊಟದ ತಟ್ಟೆ ತಾಗಿದ್ದಕ್ಕೆ ವೇಟರ್‌ನ ಥಳಿಸಿ ಹತ್ಯೆ

- Advertisement -
- Advertisement -

ಮದುವೆ ಮನೆಯಲ್ಲಿ ತಟ್ಟೆಗಳನ್ನು ಕೊಂಡೊಯ್ಯವಾಗ ಅತಿಥಿಗಳಿಗೆ ತಾಗಿತೆಂಬ ಕಾರಣಕ್ಕೆ ವೇಟರ್‌ನನ್ನು ಥಳಿಸಿ ಹತ್ಯೆಗೈದಿರುವ ಅಮಾನವೀಯ ಘಟನೆ ಉತ್ತರ ಪ್ರದೇಶದ ಘಾಝಿಯಾಬಾದ್‌ನಲ್ಲಿ ಕಳೆದ ತಿಂಗಳು ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ.

ಮೃತ ವ್ಯಕ್ತಿಯನ್ನು ಪಂಕಜ್ ಎಂದು ತಿಳಿದು ಬಂದಿದೆ. ನವೆಂಬರ್ 17ರಂದು ಗಾಝಿಯಾಬಾದ್‌ನ ಅಂಕುರ್ ವಿವಾಹ್ಸ್ ಸಿಜಿಎಸ್ ವಾಟಿಕಾದಲ್ಲಿ ಈ ಘಟನೆ ನಡೆದಿದೆ ಎಂದು ವರದಿಗಳು ಹೇಳಿವೆ. ವಿವಾಹ ಕಾರ್ಯಕ್ರಮದಲ್ಲಿ ಬಳಸಿದ್ದ ತಟ್ಟೆಗಳನ್ನು ಪಂಕಜ್ ಹೊತ್ತೊಯ್ಯುತ್ತಿದ್ದ. ಈ ವೇಳೆ ಅದು ರಿಷಭ್, ಮನೋಜ್ ಹಾಗೂ ಅಮಿತ್ ಎಂಬವರಿಗೆ ತಾಗಿದೆ.

ಈ ವಿಚಾರಕ್ಕೆ ತಗಾದೆ ತೆಗೆದ ಮೂವರು ಪಂಕಜ್ ಮೇಲೆ ಮಾರಣಾಂತಿಕ ಹಲ್ಲೆ ಮಾಡಿದ್ದಾರೆ. ಪಂಕಜ್ ಮೃತಪಟ್ಟ ಬಳಿಕ ಆರೋಪಿಗಳು ಮೃತದೇಹವನ್ನು ಹತ್ತಿರದ ಅರಣ್ಯವೊಂದರಲ್ಲಿ ಅವಿತಿಟ್ಟಿದ್ದರು. ಘಟನೆ ಬೆಳಕಿಗೆ ಬಂದ ನಂತರ ಪೊಲೀಸರು ನವೆಂಬರ್ 18ರಂದು ಮೃತದೇಹವನ್ನು ವಶಪಡಿಸಿಕೊಂಡಿದ್ದಾರೆ. ಮೂವರು ಆರೋಪಿಗಳನ್ನು ಪೊಲೀಸರ ವಶಕ್ಕೆ ಪಡೆದಿದ್ದಾರೆ.

ಇದನ್ನೂ ಓದಿ : ಲಿವ್-ಇನ್ ಸಂಬಂಧ ಅಪಾಯಕಾರಿ ಕಾಯಿಲೆ, ಇದರ ವಿರುದ್ಧ ಕಾನೂನು ತನ್ನಿ: ಬಿಜೆಪಿ ಸಂಸದ ಆಗ್ರಹ

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಗನ್ ತೋರಿಸಿ ಅತ್ಯಾಚಾರ: ಪ್ರಜ್ವಲ್ ರೇವಣ್ಣ ವಿರುದ್ಧ ಜಿಲ್ಲಾ ಪಂಚಾಯತ್ ಮಾಜಿ ಸದಸ್ಯೆ ದೂರು

0
ಹಾಸನ ಸಂಸದ ಪ್ರಜ್ವಲ್ ರೇವಣ್ಣ ವಿರುದ್ದದ ಮಹಿಳೆಯರ ಲೈಂಗಿಕ ದೌರ್ಜನ್ಯ ಪ್ರಕರಣ ದಿನಕ್ಕೊಂದು ತಿರುವು ಪಡೆಯುತ್ತಿದೆ. ಈಗಾಗಲೇ ಹೆಚ್‌.ಡಿ ರೇವಣ್ಣ ಮತ್ತು ಪ್ರಜ್ವಲ್ ರೇವಣ್ಣ ವಿರುದ್ದ ಕೆಲ ಸಂತ್ರಸ್ತೆಯರು ದೂರು ನೀಡಿದ್ದು, ತನಿಖೆ...