Homeಮುಖಪುಟವಕ್ಪ್‌ ತಿದ್ದುಪಡಿ | ಬೆಳಗಿನ ಜಾವ 2.30ಕ್ಕೆ ರಾಜ್ಯಸಭೆಯಲ್ಲಿ ಮಸೂದೆ ಅಂಗೀಕಾರ

ವಕ್ಪ್‌ ತಿದ್ದುಪಡಿ | ಬೆಳಗಿನ ಜಾವ 2.30ಕ್ಕೆ ರಾಜ್ಯಸಭೆಯಲ್ಲಿ ಮಸೂದೆ ಅಂಗೀಕಾರ

- Advertisement -
- Advertisement -

ರಾಜ್ಯಸಭೆಯಲ್ಲಿ ಸುಮಾರು 14 ಗಂಟೆಗಳ ಕಾಲ ನಡೆದ ಚರ್ಚೆಯ ನಂತರ ಶುಕ್ರವಾರ (ಏಪ್ರಿಲ್ 4, 2025) ಬೆಳಗಿನ ಜಾವ 2.30ಕ್ಕೆ ಸಂಸತ್ತು ವಕ್ಫ್ (ತಿದ್ದುಪಡಿ) ಮಸೂದೆ 2025 ಅನ್ನು ಅಂಗೀಕರಿಸಿದೆ ಎಂದು ವರದಿಯಾಗಿದೆ. ಮಸೂದೆಯ ಪರವಾಗಿ 128 ಸದಸ್ಯರು ಮತ್ತು ವಿರುದ್ಧವಾಗಿ 95 ಸದಸ್ಯರು ಮತ ಚಲಾಯಿಸಿದರು ಎಂದು ದಿ ಹಿಂದೂ ವರದಿ ಮಾಡಿದೆ. ವಿರೋಧ ಪಕ್ಷವು ಮಸೂದೆಯನ್ನು ತೀವ್ರವಾಗಿ ವಿರೋಧಿಸಿದ್ದು, ಇದು ಮುಸ್ಲಿಮರನ್ನು “ಎರಡನೇ ದರ್ಜೆ”ಯ ನಾಗರಿಕರನ್ನಾಗಿ ಮಾಡುವ ಗುರಿಯನ್ನು ಹೊಂದಿದೆ ಎಂದು ಆರೋಪಿಸಿದ್ದು, ಮಸೂದೆಯ “ಉದ್ದೇಶ ಮತ್ತು ವಿಷಯ” ಎರಡನ್ನೂ ಪ್ರಶ್ನಿಸಿದೆ. ವಕ್ಪ್‌ ತಿದ್ದುಪಡಿ

ಗುರುವಾರ ಲೋಕಸಭೆಯಲ್ಲಿ 56 ಮತಗಳ ಅಂತರದಿಂದ ಮಸೂದೆಯನ್ನು ಅಂಗೀಕರಿಸಲಾಗಿತ್ತು. ಇದಕ್ಕೂ ಮೊದಲು, ವಕ್ಫ್ ಮಂಡಳಿ ಮತ್ತು ಕೇಂದ್ರ ವಕ್ಫ್ ಮಂಡಳಿಯಲ್ಲಿ ಮುಸ್ಲಿಮೇತರ ಸದಸ್ಯರನ್ನು ಸೇರಿಸುವ ಷರತ್ತಿನ ವಿರುದ್ಧದ ತಿದ್ದುಪಡಿಯನ್ನು ಡಿಎಂಕೆ ಸಂಸದ ತಿರುಚಿ ಶಿವ ಮಂಡಿಸಿದರು. ಆದರೆ ಈ ತಿದ್ದುಪಡಿಗೆ 125 ಮತಗಳು ವಿರುದ್ಧವಾಗಿ ಮತ್ತು 92 ಮತಗಳು ಪರವಾಗಿ ಚಲವಾಣೆಯಾದವು, ಹಾಗಾಗಿ ತಿದ್ದುಪಡಿಯನ್ನು ತಿರಸ್ಕರಿಸಲಾಯಿತು.

ಮಸೂದೆಯನ್ನು ವಿರೋಧಿಸಿ ರಾಜ್ಯಸಭೆಯಲ್ಲಿ ಕೆಲವು ವಿರೋಧ ಪಕ್ಷದ ಸಂಸದರು ಕಪ್ಪು ಬಟ್ಟೆ ಧರಿಸಿದ್ದರು. ಅಲ್ಪಸಂಖ್ಯಾತ ವ್ಯವಹಾರಗಳ ಕೇಂದ್ರ ಸಚಿವ ಕಿರಣ್ ರಿಜಿಜು ಮಧ್ಯಾಹ್ನ 12:55 ಕ್ಕೆ ತಮ್ಮ ಭಾಷಣವನ್ನು ಪ್ರಾರಂಭಿಸಿದರು. ಸರ್ಕಾರವು ಎಲ್ಲಾ ಅಭಿಪ್ರಾಯಗಳನ್ನು ಆಲಿಸಿದೆ ಎಂದು ಅವರು ಪುನರುಚ್ಚರಿಸಿದರು. ವಕ್ಫ್ ಮಂಡಳಿ ಮತ್ತು ಕೇಂದ್ರ ವಕ್ಫ್ ಮಂಡಳಿಯಲ್ಲಿ ಮುಸ್ಲಿಮೇತರ ಸದಸ್ಯರನ್ನು ಸೇರಿಸುವುದಕ್ಕೆ ವಿರೋಧ ಪಕ್ಷದ ತೀವ್ರ ಆಕ್ಷೇಪಣೆಯನ್ನು ಅವರು ಆಧಾರರಹಿತ ಎಂದು ಪ್ರತಿಪಾದಿಸಿದ್ದಾರೆ.

ವಕ್ಫ್‌ ಮಂಡಳಿಯಲ್ಲಿ ಇತರ ಧರ್ಮಗಳ ಸದಸ್ಯರನ್ನು ಸೇರಿಸುವ ನಿಬಂಧನೆಯ ಬಗ್ಗೆ ಇತರ ಧಾರ್ಮಿಕ ದತ್ತಿ ಮಂಡಳಿಗಳೊಂದಿಗೆ ವಿರೋಧ ಪಕ್ಷದ ಹೋಲಿಕೆಯನ್ನು ತಳ್ಳಿಹಾಕಿದ ಅವರು, “ವಕ್ಫ್ ಮಂಡಳಿಗಳು ಶಾಸನಬದ್ಧ ಸಂಸ್ಥೆಗಳಾಗಿದ್ದು, ಹಿಂದೂ ದತ್ತಿ ಮಂಡಳಿಗಳಂತೆ ಧಾರ್ಮಿಕ ಸಂಸ್ಥೆಗಳಲ್ಲ. ಶಾಸನಬದ್ಧ ಸಂಸ್ಥೆಯು ಜಾತ್ಯತೀತವಾಗಿರಬೇಕು” ಎಂದು ಅವರು ಹೇಳಿದ್ದಾರೆ. ಇದರಲ್ಲಿ ಮುಸ್ಲಿಮೇತರ ಸದಸ್ಯರು ನಿರ್ಧಾರವನ್ನು ನಿರ್ದೇಶಿಸಲು ಸಾಧ್ಯವಿಲ್ಲ, “ಅವರು ಕೊಡುಗೆ ನೀಡಲು ಮಾತ್ರ ಸಾಧ್ಯವಿದೆ” ಎಂದು ಅವರು ಮತ್ತೆ ಸ್ಪಷ್ಟಪಡಿಸಿದ್ದಾರೆ.

“22 ಸದಸ್ಯರಿರುವ ಕೇಂದ್ರ ವಕ್ಫ್ ಮಂಡಳಿಯಲ್ಲಿ ಕೇವಲ ನಾಲ್ವರು ಮುಸ್ಲಿಮೇತರ ಸದಸ್ಯರು ಮಾತ್ರ ಇರಲು ಸಾಧ್ಯ ಎಂದು ನಾನು ಪದೇ ಪದೇ ಹೇಳಿದ್ದೇನೆ… ಆದರೂ ವಿರೋಧ ಪಕ್ಷಗಳು ಈ ವಿಷಯವನ್ನು ಪದೇ ಪದೇ ಎತ್ತಿದ್ದವು” ಎಂದು ಅವರು ಹೇಳಿದ್ದಾರೆ. ವಕ್ಪ್‌ ತಿದ್ದುಪಡಿ

ಗುರುವಾರ ಮಸೂದೆ ಬಗ್ಗೆ ಮಾತನಾಡುತ್ತಾ ಕೇಂದ್ರ ಸರ್ಕಾರದ ವಿರುದ್ಧ ದಾಳಿ ಮಾಡಿದ ಕಾಂಗ್ರೆಸ್ ಸಂಸದ ಸೈಯದ್ ನಸೀರ್ ಹುಸೇನ್,  ಇದು “ಮುಸ್ಲಿಂ ಸಮುದಾಯವನ್ನು ಗುರಿ ಮಾಡಿಟ್ಟುಕೊಂಡು ಮಾಡಲಾಗಿರುವ ಕಾನೂನು” ಎಂದು ಬಣ್ಣಿಸಿದ್ದಾರೆ. ಜೊತೆಗೆ ದೇಶದಲ್ಲಿ ಮುಸ್ಲಿಮರನ್ನು ಎರಡನೇ ದರ್ಜೆಯ ನಾಗರಿಕರನ್ನಾಗಿ ಮಾಡುವ ಉದ್ದೇಶವನ್ನು ಹೊಂದಿದೆ ಎಂದು ಹೇಳಿದ ಅವರು, “ಲೋಕಸಭಾ ಚುನಾವಣೆಯಲ್ಲಿ ಕೇವಲ 240 ಸ್ಥಾನಗಳನ್ನು ಗೆಲ್ಲಲು ಸಾಧ್ಯವಾದ ಕಾರಣ ಆಡಳಿತರೂಢ ಪಕ್ಷವು 2024 ರಲ್ಲಿ ತನ್ನ ಮತ ಬ್ಯಾಂಕ್ ಅನ್ನು ಬಲಪಡಿಸುವ ಸಲುವಾಗಿ ಈ ಮಸೂದೆಯನ್ನು ತಂದಿದೆ” ಎಂದು ಅವರು ಆರೋಪಿಸಿದ್ದಾರೆ.

“ಕೋಮು ಧ್ರುವೀಕರಣಕ್ಕಾಗಿ ಮಾತ್ರ ಅವರು ಈ ಕಾಯ್ದೆಯನ್ನು ತರಲಾಗಿದೆ. ಕೋಮು ಧ್ರುವೀಕರಣ ನಡೆದಾಗ ಯಾರಿಗೆ ಲಾಭವಾಗುತ್ತದೆ ಎಂದು ಎಲ್ಲರಿಗೂ ತಿಳಿದಿದೆ. ಯಾವ ರಾಜಕೀಯ ಪಕ್ಷ ಒಂದು ಸಮುದಾಯವನ್ನು ಖಳನಾಯಕನಂತೆ ಬಿಂಬಿಸಲು ಮತ್ತು ಅದರ ವಿರುದ್ಧ ನಿರೂಪಣೆಯನ್ನು ನಿರ್ಮಿಸಲು ಪ್ರಯತ್ನಿಸುತ್ತದೆ” ಎಂದು ಎಲ್ಲರಿಗೂ ತಿಳಿದಿದೆ ಎಂದು ಅವರು ಹೇಳಿದ್ದಾರೆ.

ಪ್ರಸ್ತಾವಿತ ಕಾನೂನಿನ ಪ್ರಕಾರ ವಕ್ಫ್ ಮಂಡಳಿಯಲ್ಲಿ ಮುಸ್ಲಿಮೇತರರನ್ನು ಸೇರಿಸುವ ಬಗ್ಗೆ ಬೆಟ್ಟು ಮಾಡಿದ ಹುಸೇನ್ ಅವರು, “ನೀವು ನನ್ನನ್ನು ಹಿಂದೂ ದೇವಾಲಯ ಟ್ರಸ್ಟ್‌ನ ಭಾಗವಾಗಲು ಬಿಡುತ್ತೀರಾ?” ಎಂದು ಕೇಳಿದ್ದಾರೆ. ಮಸೂದೆಯಲ್ಲಿ ತೆಗೆದುಹಾಕಲಾದ ವಕ್ಫ್ ಬೈ ಯೂಸರ್ ಷರತ್ತಿನ ಕುರಿತು ಮಾತನಾಡಿದ ಅವರು, ಶತಮಾನಗಳಿಂದ ಇರುವ ದೇವಾಲಯಗಳು, ಚರ್ಚ್‌ಗಳು ಅಥವಾ ಗುರುದ್ವಾರಗಳು ತಮ್ಮ ಆಸ್ತಿಗಳಿಗೆ ಸಾಕ್ಷ್ಯ ತರುವುದು ಹೇಗೆ? ಈಗ ವಕ್ಫ್ ಆಸ್ತಿಗಳಿಗೆ ಆ ಸಾಕ್ಷ್ಯ ಕೇಳಲಾಗುತ್ತಿದೆಯಲ್ಲವೇ? ಎಂದು ಅವರು ಕೇಳಿದ್ದಾರೆ.

ಇಲ್ಲಿ ಕ್ಲಿಕ್ ಮಾಡಿ

ಇದನ್ನೂಓದಿ:  ವಕ್ಫ್‌ ಮಸೂದೆ ಮುಸ್ಲಿಮರನ್ನು ಎರಡನೇ ದರ್ಜೆ ನಾಗರಿಕರಾಗಿಸುವ ಪ್ರಯತ್ನ: ನಾಸಿರ್ ಹುಸೇನ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ನನ್ನ ಮನೆ ಮೇಲೆ ದಾಳಿ ಮಾಡಿ… ಹೇಗೆ ಎದುರಿಸಬೇಕೆಂದು ಗೊತ್ತಿದೆ..’; ಬಿಜೆಪಿಗೆ ಮಮತಾ ಬ್ಯಾನರ್ಜಿ ಸವಾಲು

"ತಮ್ಮ ನಿವಾಸ ಮತ್ತು ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ನಾಯಕರ ನಿವಾಸವನ್ನು ಗುರಿಯಾಗಿಸಿಕೊಳ್ಳುವಂತೆ" ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸೋಮವಾರ ಬಿಜೆಪಿಗೆ ಸವಾಲು ಹಾಕಿದರು. ರಾಜ್ಯದಲ್ಲಿ, ಟಿಎಂಸಿ ನಾಯಕರ ಮೇಲಿನ ದಾಳಿಗೆ...

ಬೆಂಗಳೂರು: ವಿಶೇಷ ಪೂಜೆ ಹೆಸರಿನಲ್ಲಿ ಐಟಿ ಅಧಿಕಾರಿಗೆ 35 ಲಕ್ಷ ವಂಚನೆ: 59 ವರ್ಷದ ‘ಗಿಳಿ ಶಾಸ್ತ್ರ’ ಹೇಳುವ ವ್ಯಕ್ತಿ ಬಂಧನ

ಬೆಂಗಳೂರು: ವಿಶೇಷ ಪೂಜೆ ಮಾಡುವುದಾಗಿ ಹೇಳಿಕೊಂಡು ಆದಾಯ ತೆರಿಗೆ ಅಧಿಕಾರಿಗೆ 35 ಲಕ್ಷ ರೂಪಾಯಿ ವಂಚಿಸಿದ ಆರೋಪದ ಮೇಲೆ ತಮಿಳುನಾಡು ಮೂಲದ 59 ವರ್ಷದ ವ್ಯಕ್ತಿಯನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಥೇಣಿಯ ಶೇಖರ್...

ಬಿಹಾರ| ರಾಜ್ಯಸಭಾ ಚುನಾವಣೆ ಮತದಾನದಿಂದ ಹೊರಗುಳಿದ ನಾಲ್ವರು ಶಾಸಕರು; ಮಹಾಘಟಬಂಧನ್‌ಗೆ ಹಿನ್ನಡೆ

ಸೋಮವಾರ ಸಂಜೆ 4 ಗಂಟೆಗೆ ಮುಕ್ತಾಯಗೊಂಡ ರಾಜ್ಯಸಭಾ ಚುನಾವಣೆಯಲ್ಲಿ ನಾಲ್ವರು ಶಾಸಕರು ಮತದಾನದಿಂದ ಹೊರಗುಳಿಯುವ ಮೂಲಕ ಬಿಹಾರದ ಮಹಾಘಟಬಂಧನ್‌ಗೆ ಭಾರಿ ಹಿನ್ನಡೆಯಾಗಿದೆ. ಐದನೇ ಸ್ಥಾನಕ್ಕಾಗಿ ನಡೆಯುವ ಸ್ಪರ್ಧೆಯಲ್ಲಿ ವಿರೋಧ ಮೈತ್ರಿಕೂಟದ ನಿರೀಕ್ಷೆಗೆ ಭಾರಿ...

ರಾಜ್ಯಸಭೆಯಲ್ಲಿ LPG ಕೊರತೆ ಪ್ರಸ್ತಾಪಿಸಿದ ಮಲ್ಲಿಕಾರ್ಜುನ ಖರ್ಗೆ; ಪ್ರತಿಪಕ್ಷ ಅರಾಜಕತೆ ಸೃಷ್ಟಿಸಲು ಯತ್ನಿಸುತ್ತಿದೆ ಎಂದ ಸರ್ಕಾರ !

ನವದೆಹಲಿ: ರಾಜ್ಯಸಭೆಯಲ್ಲಿ ಸೋಮವಾರ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಎಲ್‌ಪಿಜಿ ಕೊರತೆಯ ವಿಷಯವನ್ನು ಪ್ರಸ್ತಾಪಿಸಿದರು ಮತ್ತು ಅಡುಗೆ ಅನಿಲದ ಬಿಕ್ಕಟ್ಟು ಮತ್ತು ಕಾಳಸಂತೆಕೋರತನವನ್ನು ತಡೆಯಲು ಸರ್ಕಾರ ಮುನ್ನೆಚ್ಚರಿಕೆ ಕ್ರಮಗಳನ್ನು ತೆಗೆದುಕೊಂಡಿಲ್ಲ ಎಂದು...

ಬೆಂಗಳೂರು| ಹಣ ನೀಡಲು ನಿರಾಕರಿಸಿದ ವ್ಯಕ್ತಿಯನ್ನು ಮಕ್ಕಳ ಮುಂದೆಯೇ ಥಳಿಸಿ ಕೊಂದ ಗುಂಪು

ಹಣ ನೀಡಲು ನಿರಾಕರಿಸಿದ ತಂದೆಯನ್ನು ಮಕ್ಕಳ ಮುಂದೆಯೇ ಗುಂಪೊಂದು ಥಳಿಸಿ ಕೊಂದಿರುವ ಘಟನೆ ಬೆಂಗಳೂರಿನ ವಿಲ್ಸನ್ ಗಾರ್ಡನ್‌ನಲ್ಲಿ ಭಾನುವಾರ ರಾತ್ರಿ ನಡೆದಿದೆ. ವಿಲ್ಸನ್ ಗಾರ್ಡನ್‌ನ ಬಡಾ ಮಕನ್ ರಸ್ತೆ ಬಳಿ ರಶೀದ್ ಪಾಷಾ ಎಂದು...

ಅಬಕಾರಿ ನೀತಿ ಪ್ರಕರಣದಲ್ಲಿ ಖುಲಾಸೆ ಪ್ರಶ್ನಿಸಿ ಸಿಬಿಐ ಅರ್ಜಿ; ಪ್ರತಿಕ್ರಿಯಿಸಲು ಕೇಜ್ರಿವಾಲ್-ಸಿಸೋಡಿಯಾಗೆ ಸಮಯ ನೀಡಿದ ದೆಹಲಿ ಹೈಕೋರ್ಟ್

ದೆಹಲಿ ಅಬಕಾರಿ ನೀತಿ ಪ್ರಕರಣದಲ್ಲಿ ಮಾಜಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್, ಮಾಜಿ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಮತ್ತು ಇತರ 21 ಜನರ ತಮ್ಮ ಬಿಡುಗಡೆಯನ್ನು ಪ್ರಶ್ನಿಸಿ ಸಿಬಿಐ ಅರ್ಜಿಗೆ ಪ್ರತಿಕ್ರಿಯೆಗಳನ್ನು ಸಲ್ಲಿಸಲು ದೆಹಲಿ...

ಪ್ರಶ್ನೆಗಳಿಗೆ ಉತ್ತರಿಸದ ಸಚಿವರು: ಸದನ ಮುಂದೂಡಿದ ಸ್ಪೀಕರ್ ಯು.ಟಿ ಖಾದರ್

ಶಾಸಕರು ಕೇಳುವ ಪ್ರಶ್ನೆಗಳಿಗೆ ಉತ್ತರ ಒದಗಿಸದ ಸಚಿವರು ಮತ್ತು ಅಧಿಕಾರಿಗಳ ವಿರುದ್ದ ಸೋಮವಾರ (ಮಾ.16) ತೀವ್ರ ಅಸಮಾಧಾನ ವ್ಯಕ್ತಪಡಿಸಿದ ವಿಧಾನಸಭೆಯ ಸ್ಪೀಕರ್ ಯು.ಟಿ ಖಾದರ್, ಸದನವನ್ನು ಮುಂದೂಡಿಕೆ ಮಾಡಿ ಸರ್ಕಾರಕ್ಕೆ ಬಿಸಿ ಮುಟ್ಟಿಸಿದರು. ವಿಧಾನಸಭೆಯಲ್ಲಿ...

‘ಆಪರೇಷನ್ ಸಿಂಧೂರ್’ ಕುರಿತ ಪೋಸ್ಟ್: ಪ್ರೊಫೆಸರ್ ಅಲಿ ಖಾನ್ ಮಹ್ಮದಾಬಾದ್ ವಿರುದ್ಧದ ಪ್ರಕರಣಗಳನ್ನು ಕೈಬಿಟ್ಟ ಹರಿಯಾಣ ಸರ್ಕಾರ

'ಆಪರೇಷನ್ ಸಿಂಧೂರ್' ಕುರಿತು ಸಾಮಾಜಿಕ ಮಾಧ್ಯಮದಲ್ಲಿ ಪೋಸ್ಟ್ ಮಾಡಿದ್ದಕ್ಕಾಗಿ ಅಶೋಕ ವಿಶ್ವವಿದ್ಯಾಲಯದ ಪ್ರಾಧ್ಯಾಪಕ ಅಲಿ ಖಾನ್ ಮಹ್ಮದಾಬಾದ್ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಪ್ರಕರಣ ದಾಖಲಾಗಿತ್ತು. ಅವರ ವಿರುದ್ಧದ ಈ ಪ್ರಕರಣಗಳನ್ನು ಕೈಬಿಟ್ಟಿರುವುದಾಗಿ ಹರಿಯಾಣ...

ಎಲ್‌ಪಿಜಿ ಬಿಕ್ಕಟ್ಟಿನ ನಡುವೆ ಆಧಾರ್ ಮೂಲಕ ‘ಇ-ಕೆವೈಸಿ’ ಮಾಡಿಸಿಕೊಳ್ಳುವಂತೆ ಸರ್ಕಾರದ ಸೂಚನೆ

ದ್ರವೀಕೃತ ಪೆಟ್ರೋಲಿಯಂ ಅನಿಲ (ಎಲ್‌ಪಿಜಿ) ಬಳಸುವ 330 ಮಿಲಿಯನ್‌ಗಿಂತಲೂ ಹೆಚ್ಚು ಗ್ರಾಹಕರು ತಮ್ಮ ಎಲೆಕ್ಟ್ರಾನಿಕ್ ನೋ ಯುವರ್ ಕಸ್ಟಮರ್ (ಇ-ಕೆವೈಸಿ) ಅನ್ನು ಬಯೋಮೆಟ್ರಿಕ್ ಆಧಾರ್ ದೃಢೀಕರಣ ವ್ಯವಸ್ಥೆಯ ಮೂಲಕ ಮಾಡಿಸಿಕೊಳ್ಳಬೇಕು ಎಂದು ಸರ್ಕಾರ...

ಚುನಾವಣೆ ಘೋಷಣೆಯಾದ ಬೆನ್ನಲ್ಲೇ ಪಶ್ಚಿಮ ಬಂಗಾಳದ ಮುಖ್ಯ ಕಾರ್ಯದರ್ಶಿ, ಗೃಹ ಕಾರ್ಯದರ್ಶಿ, ಉನ್ನತ ಪೊಲೀಸ್ ಅಧಿಕಾರಿಗಳನ್ನು ಬದಲಾಯಿಸಿದ ಚು. ಆಯೋಗ

ನಿರೀಕ್ಷೆಯಂತೆ ಚುನಾವಣೆ ಘೋಷಣೆಯಾದ ಬೆನ್ನಲ್ಲೇ ಚುನಾವಣಾ ಆಯೋಗ ಪಶ್ಚಿಮ ಬಂಗಾಳದಲ್ಲಿ ತನ್ನ ಆಟ ಶುರು ಮಾಡಿದೆ. ರಾಜ್ಯದ ಸರ್ಕಾದ ಮುಖ್ಯ ಕಾರ್ಯದರ್ಶಿ, ಗೃಹ ಕಾರ್ಯದರ್ಶಿ ಮತ್ತು ಉನ್ನತ ಪೊಲೀಸ್ ಅಧಿಕಾರಿಗಳನ್ನು ಬದಲಾಯಿಸಿದೆ. ಪಶ್ಚಿಮ ಬಂಗಾಳ...