Homeಮುಖಪುಟವಕ್ಪ್‌ ತಿದ್ದುಪಡಿ | ಬೆಳಗಿನ ಜಾವ 2.30ಕ್ಕೆ ರಾಜ್ಯಸಭೆಯಲ್ಲಿ ಮಸೂದೆ ಅಂಗೀಕಾರ

ವಕ್ಪ್‌ ತಿದ್ದುಪಡಿ | ಬೆಳಗಿನ ಜಾವ 2.30ಕ್ಕೆ ರಾಜ್ಯಸಭೆಯಲ್ಲಿ ಮಸೂದೆ ಅಂಗೀಕಾರ

- Advertisement -
- Advertisement -

ರಾಜ್ಯಸಭೆಯಲ್ಲಿ ಸುಮಾರು 14 ಗಂಟೆಗಳ ಕಾಲ ನಡೆದ ಚರ್ಚೆಯ ನಂತರ ಶುಕ್ರವಾರ (ಏಪ್ರಿಲ್ 4, 2025) ಬೆಳಗಿನ ಜಾವ 2.30ಕ್ಕೆ ಸಂಸತ್ತು ವಕ್ಫ್ (ತಿದ್ದುಪಡಿ) ಮಸೂದೆ 2025 ಅನ್ನು ಅಂಗೀಕರಿಸಿದೆ ಎಂದು ವರದಿಯಾಗಿದೆ. ಮಸೂದೆಯ ಪರವಾಗಿ 128 ಸದಸ್ಯರು ಮತ್ತು ವಿರುದ್ಧವಾಗಿ 95 ಸದಸ್ಯರು ಮತ ಚಲಾಯಿಸಿದರು ಎಂದು ದಿ ಹಿಂದೂ ವರದಿ ಮಾಡಿದೆ. ವಿರೋಧ ಪಕ್ಷವು ಮಸೂದೆಯನ್ನು ತೀವ್ರವಾಗಿ ವಿರೋಧಿಸಿದ್ದು, ಇದು ಮುಸ್ಲಿಮರನ್ನು “ಎರಡನೇ ದರ್ಜೆ”ಯ ನಾಗರಿಕರನ್ನಾಗಿ ಮಾಡುವ ಗುರಿಯನ್ನು ಹೊಂದಿದೆ ಎಂದು ಆರೋಪಿಸಿದ್ದು, ಮಸೂದೆಯ “ಉದ್ದೇಶ ಮತ್ತು ವಿಷಯ” ಎರಡನ್ನೂ ಪ್ರಶ್ನಿಸಿದೆ. ವಕ್ಪ್‌ ತಿದ್ದುಪಡಿ

ಗುರುವಾರ ಲೋಕಸಭೆಯಲ್ಲಿ 56 ಮತಗಳ ಅಂತರದಿಂದ ಮಸೂದೆಯನ್ನು ಅಂಗೀಕರಿಸಲಾಗಿತ್ತು. ಇದಕ್ಕೂ ಮೊದಲು, ವಕ್ಫ್ ಮಂಡಳಿ ಮತ್ತು ಕೇಂದ್ರ ವಕ್ಫ್ ಮಂಡಳಿಯಲ್ಲಿ ಮುಸ್ಲಿಮೇತರ ಸದಸ್ಯರನ್ನು ಸೇರಿಸುವ ಷರತ್ತಿನ ವಿರುದ್ಧದ ತಿದ್ದುಪಡಿಯನ್ನು ಡಿಎಂಕೆ ಸಂಸದ ತಿರುಚಿ ಶಿವ ಮಂಡಿಸಿದರು. ಆದರೆ ಈ ತಿದ್ದುಪಡಿಗೆ 125 ಮತಗಳು ವಿರುದ್ಧವಾಗಿ ಮತ್ತು 92 ಮತಗಳು ಪರವಾಗಿ ಚಲವಾಣೆಯಾದವು, ಹಾಗಾಗಿ ತಿದ್ದುಪಡಿಯನ್ನು ತಿರಸ್ಕರಿಸಲಾಯಿತು.

ಮಸೂದೆಯನ್ನು ವಿರೋಧಿಸಿ ರಾಜ್ಯಸಭೆಯಲ್ಲಿ ಕೆಲವು ವಿರೋಧ ಪಕ್ಷದ ಸಂಸದರು ಕಪ್ಪು ಬಟ್ಟೆ ಧರಿಸಿದ್ದರು. ಅಲ್ಪಸಂಖ್ಯಾತ ವ್ಯವಹಾರಗಳ ಕೇಂದ್ರ ಸಚಿವ ಕಿರಣ್ ರಿಜಿಜು ಮಧ್ಯಾಹ್ನ 12:55 ಕ್ಕೆ ತಮ್ಮ ಭಾಷಣವನ್ನು ಪ್ರಾರಂಭಿಸಿದರು. ಸರ್ಕಾರವು ಎಲ್ಲಾ ಅಭಿಪ್ರಾಯಗಳನ್ನು ಆಲಿಸಿದೆ ಎಂದು ಅವರು ಪುನರುಚ್ಚರಿಸಿದರು. ವಕ್ಫ್ ಮಂಡಳಿ ಮತ್ತು ಕೇಂದ್ರ ವಕ್ಫ್ ಮಂಡಳಿಯಲ್ಲಿ ಮುಸ್ಲಿಮೇತರ ಸದಸ್ಯರನ್ನು ಸೇರಿಸುವುದಕ್ಕೆ ವಿರೋಧ ಪಕ್ಷದ ತೀವ್ರ ಆಕ್ಷೇಪಣೆಯನ್ನು ಅವರು ಆಧಾರರಹಿತ ಎಂದು ಪ್ರತಿಪಾದಿಸಿದ್ದಾರೆ.

ವಕ್ಫ್‌ ಮಂಡಳಿಯಲ್ಲಿ ಇತರ ಧರ್ಮಗಳ ಸದಸ್ಯರನ್ನು ಸೇರಿಸುವ ನಿಬಂಧನೆಯ ಬಗ್ಗೆ ಇತರ ಧಾರ್ಮಿಕ ದತ್ತಿ ಮಂಡಳಿಗಳೊಂದಿಗೆ ವಿರೋಧ ಪಕ್ಷದ ಹೋಲಿಕೆಯನ್ನು ತಳ್ಳಿಹಾಕಿದ ಅವರು, “ವಕ್ಫ್ ಮಂಡಳಿಗಳು ಶಾಸನಬದ್ಧ ಸಂಸ್ಥೆಗಳಾಗಿದ್ದು, ಹಿಂದೂ ದತ್ತಿ ಮಂಡಳಿಗಳಂತೆ ಧಾರ್ಮಿಕ ಸಂಸ್ಥೆಗಳಲ್ಲ. ಶಾಸನಬದ್ಧ ಸಂಸ್ಥೆಯು ಜಾತ್ಯತೀತವಾಗಿರಬೇಕು” ಎಂದು ಅವರು ಹೇಳಿದ್ದಾರೆ. ಇದರಲ್ಲಿ ಮುಸ್ಲಿಮೇತರ ಸದಸ್ಯರು ನಿರ್ಧಾರವನ್ನು ನಿರ್ದೇಶಿಸಲು ಸಾಧ್ಯವಿಲ್ಲ, “ಅವರು ಕೊಡುಗೆ ನೀಡಲು ಮಾತ್ರ ಸಾಧ್ಯವಿದೆ” ಎಂದು ಅವರು ಮತ್ತೆ ಸ್ಪಷ್ಟಪಡಿಸಿದ್ದಾರೆ.

“22 ಸದಸ್ಯರಿರುವ ಕೇಂದ್ರ ವಕ್ಫ್ ಮಂಡಳಿಯಲ್ಲಿ ಕೇವಲ ನಾಲ್ವರು ಮುಸ್ಲಿಮೇತರ ಸದಸ್ಯರು ಮಾತ್ರ ಇರಲು ಸಾಧ್ಯ ಎಂದು ನಾನು ಪದೇ ಪದೇ ಹೇಳಿದ್ದೇನೆ… ಆದರೂ ವಿರೋಧ ಪಕ್ಷಗಳು ಈ ವಿಷಯವನ್ನು ಪದೇ ಪದೇ ಎತ್ತಿದ್ದವು” ಎಂದು ಅವರು ಹೇಳಿದ್ದಾರೆ. ವಕ್ಪ್‌ ತಿದ್ದುಪಡಿ

ಗುರುವಾರ ಮಸೂದೆ ಬಗ್ಗೆ ಮಾತನಾಡುತ್ತಾ ಕೇಂದ್ರ ಸರ್ಕಾರದ ವಿರುದ್ಧ ದಾಳಿ ಮಾಡಿದ ಕಾಂಗ್ರೆಸ್ ಸಂಸದ ಸೈಯದ್ ನಸೀರ್ ಹುಸೇನ್,  ಇದು “ಮುಸ್ಲಿಂ ಸಮುದಾಯವನ್ನು ಗುರಿ ಮಾಡಿಟ್ಟುಕೊಂಡು ಮಾಡಲಾಗಿರುವ ಕಾನೂನು” ಎಂದು ಬಣ್ಣಿಸಿದ್ದಾರೆ. ಜೊತೆಗೆ ದೇಶದಲ್ಲಿ ಮುಸ್ಲಿಮರನ್ನು ಎರಡನೇ ದರ್ಜೆಯ ನಾಗರಿಕರನ್ನಾಗಿ ಮಾಡುವ ಉದ್ದೇಶವನ್ನು ಹೊಂದಿದೆ ಎಂದು ಹೇಳಿದ ಅವರು, “ಲೋಕಸಭಾ ಚುನಾವಣೆಯಲ್ಲಿ ಕೇವಲ 240 ಸ್ಥಾನಗಳನ್ನು ಗೆಲ್ಲಲು ಸಾಧ್ಯವಾದ ಕಾರಣ ಆಡಳಿತರೂಢ ಪಕ್ಷವು 2024 ರಲ್ಲಿ ತನ್ನ ಮತ ಬ್ಯಾಂಕ್ ಅನ್ನು ಬಲಪಡಿಸುವ ಸಲುವಾಗಿ ಈ ಮಸೂದೆಯನ್ನು ತಂದಿದೆ” ಎಂದು ಅವರು ಆರೋಪಿಸಿದ್ದಾರೆ.

“ಕೋಮು ಧ್ರುವೀಕರಣಕ್ಕಾಗಿ ಮಾತ್ರ ಅವರು ಈ ಕಾಯ್ದೆಯನ್ನು ತರಲಾಗಿದೆ. ಕೋಮು ಧ್ರುವೀಕರಣ ನಡೆದಾಗ ಯಾರಿಗೆ ಲಾಭವಾಗುತ್ತದೆ ಎಂದು ಎಲ್ಲರಿಗೂ ತಿಳಿದಿದೆ. ಯಾವ ರಾಜಕೀಯ ಪಕ್ಷ ಒಂದು ಸಮುದಾಯವನ್ನು ಖಳನಾಯಕನಂತೆ ಬಿಂಬಿಸಲು ಮತ್ತು ಅದರ ವಿರುದ್ಧ ನಿರೂಪಣೆಯನ್ನು ನಿರ್ಮಿಸಲು ಪ್ರಯತ್ನಿಸುತ್ತದೆ” ಎಂದು ಎಲ್ಲರಿಗೂ ತಿಳಿದಿದೆ ಎಂದು ಅವರು ಹೇಳಿದ್ದಾರೆ.

ಪ್ರಸ್ತಾವಿತ ಕಾನೂನಿನ ಪ್ರಕಾರ ವಕ್ಫ್ ಮಂಡಳಿಯಲ್ಲಿ ಮುಸ್ಲಿಮೇತರರನ್ನು ಸೇರಿಸುವ ಬಗ್ಗೆ ಬೆಟ್ಟು ಮಾಡಿದ ಹುಸೇನ್ ಅವರು, “ನೀವು ನನ್ನನ್ನು ಹಿಂದೂ ದೇವಾಲಯ ಟ್ರಸ್ಟ್‌ನ ಭಾಗವಾಗಲು ಬಿಡುತ್ತೀರಾ?” ಎಂದು ಕೇಳಿದ್ದಾರೆ. ಮಸೂದೆಯಲ್ಲಿ ತೆಗೆದುಹಾಕಲಾದ ವಕ್ಫ್ ಬೈ ಯೂಸರ್ ಷರತ್ತಿನ ಕುರಿತು ಮಾತನಾಡಿದ ಅವರು, ಶತಮಾನಗಳಿಂದ ಇರುವ ದೇವಾಲಯಗಳು, ಚರ್ಚ್‌ಗಳು ಅಥವಾ ಗುರುದ್ವಾರಗಳು ತಮ್ಮ ಆಸ್ತಿಗಳಿಗೆ ಸಾಕ್ಷ್ಯ ತರುವುದು ಹೇಗೆ? ಈಗ ವಕ್ಫ್ ಆಸ್ತಿಗಳಿಗೆ ಆ ಸಾಕ್ಷ್ಯ ಕೇಳಲಾಗುತ್ತಿದೆಯಲ್ಲವೇ? ಎಂದು ಅವರು ಕೇಳಿದ್ದಾರೆ.

ಇಲ್ಲಿ ಕ್ಲಿಕ್ ಮಾಡಿ

ಇದನ್ನೂಓದಿ:  ವಕ್ಫ್‌ ಮಸೂದೆ ಮುಸ್ಲಿಮರನ್ನು ಎರಡನೇ ದರ್ಜೆ ನಾಗರಿಕರಾಗಿಸುವ ಪ್ರಯತ್ನ: ನಾಸಿರ್ ಹುಸೇನ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...