Homeಮುಖಪುಟವಕ್ಪ್‌ ತಿದ್ದುಪಡಿ | ಬೆಳಗಿನ ಜಾವ 2.30ಕ್ಕೆ ರಾಜ್ಯಸಭೆಯಲ್ಲಿ ಮಸೂದೆ ಅಂಗೀಕಾರ

ವಕ್ಪ್‌ ತಿದ್ದುಪಡಿ | ಬೆಳಗಿನ ಜಾವ 2.30ಕ್ಕೆ ರಾಜ್ಯಸಭೆಯಲ್ಲಿ ಮಸೂದೆ ಅಂಗೀಕಾರ

- Advertisement -
- Advertisement -

ರಾಜ್ಯಸಭೆಯಲ್ಲಿ ಸುಮಾರು 14 ಗಂಟೆಗಳ ಕಾಲ ನಡೆದ ಚರ್ಚೆಯ ನಂತರ ಶುಕ್ರವಾರ (ಏಪ್ರಿಲ್ 4, 2025) ಬೆಳಗಿನ ಜಾವ 2.30ಕ್ಕೆ ಸಂಸತ್ತು ವಕ್ಫ್ (ತಿದ್ದುಪಡಿ) ಮಸೂದೆ 2025 ಅನ್ನು ಅಂಗೀಕರಿಸಿದೆ ಎಂದು ವರದಿಯಾಗಿದೆ. ಮಸೂದೆಯ ಪರವಾಗಿ 128 ಸದಸ್ಯರು ಮತ್ತು ವಿರುದ್ಧವಾಗಿ 95 ಸದಸ್ಯರು ಮತ ಚಲಾಯಿಸಿದರು ಎಂದು ದಿ ಹಿಂದೂ ವರದಿ ಮಾಡಿದೆ. ವಿರೋಧ ಪಕ್ಷವು ಮಸೂದೆಯನ್ನು ತೀವ್ರವಾಗಿ ವಿರೋಧಿಸಿದ್ದು, ಇದು ಮುಸ್ಲಿಮರನ್ನು “ಎರಡನೇ ದರ್ಜೆ”ಯ ನಾಗರಿಕರನ್ನಾಗಿ ಮಾಡುವ ಗುರಿಯನ್ನು ಹೊಂದಿದೆ ಎಂದು ಆರೋಪಿಸಿದ್ದು, ಮಸೂದೆಯ “ಉದ್ದೇಶ ಮತ್ತು ವಿಷಯ” ಎರಡನ್ನೂ ಪ್ರಶ್ನಿಸಿದೆ. ವಕ್ಪ್‌ ತಿದ್ದುಪಡಿ

ಗುರುವಾರ ಲೋಕಸಭೆಯಲ್ಲಿ 56 ಮತಗಳ ಅಂತರದಿಂದ ಮಸೂದೆಯನ್ನು ಅಂಗೀಕರಿಸಲಾಗಿತ್ತು. ಇದಕ್ಕೂ ಮೊದಲು, ವಕ್ಫ್ ಮಂಡಳಿ ಮತ್ತು ಕೇಂದ್ರ ವಕ್ಫ್ ಮಂಡಳಿಯಲ್ಲಿ ಮುಸ್ಲಿಮೇತರ ಸದಸ್ಯರನ್ನು ಸೇರಿಸುವ ಷರತ್ತಿನ ವಿರುದ್ಧದ ತಿದ್ದುಪಡಿಯನ್ನು ಡಿಎಂಕೆ ಸಂಸದ ತಿರುಚಿ ಶಿವ ಮಂಡಿಸಿದರು. ಆದರೆ ಈ ತಿದ್ದುಪಡಿಗೆ 125 ಮತಗಳು ವಿರುದ್ಧವಾಗಿ ಮತ್ತು 92 ಮತಗಳು ಪರವಾಗಿ ಚಲವಾಣೆಯಾದವು, ಹಾಗಾಗಿ ತಿದ್ದುಪಡಿಯನ್ನು ತಿರಸ್ಕರಿಸಲಾಯಿತು.

ಮಸೂದೆಯನ್ನು ವಿರೋಧಿಸಿ ರಾಜ್ಯಸಭೆಯಲ್ಲಿ ಕೆಲವು ವಿರೋಧ ಪಕ್ಷದ ಸಂಸದರು ಕಪ್ಪು ಬಟ್ಟೆ ಧರಿಸಿದ್ದರು. ಅಲ್ಪಸಂಖ್ಯಾತ ವ್ಯವಹಾರಗಳ ಕೇಂದ್ರ ಸಚಿವ ಕಿರಣ್ ರಿಜಿಜು ಮಧ್ಯಾಹ್ನ 12:55 ಕ್ಕೆ ತಮ್ಮ ಭಾಷಣವನ್ನು ಪ್ರಾರಂಭಿಸಿದರು. ಸರ್ಕಾರವು ಎಲ್ಲಾ ಅಭಿಪ್ರಾಯಗಳನ್ನು ಆಲಿಸಿದೆ ಎಂದು ಅವರು ಪುನರುಚ್ಚರಿಸಿದರು. ವಕ್ಫ್ ಮಂಡಳಿ ಮತ್ತು ಕೇಂದ್ರ ವಕ್ಫ್ ಮಂಡಳಿಯಲ್ಲಿ ಮುಸ್ಲಿಮೇತರ ಸದಸ್ಯರನ್ನು ಸೇರಿಸುವುದಕ್ಕೆ ವಿರೋಧ ಪಕ್ಷದ ತೀವ್ರ ಆಕ್ಷೇಪಣೆಯನ್ನು ಅವರು ಆಧಾರರಹಿತ ಎಂದು ಪ್ರತಿಪಾದಿಸಿದ್ದಾರೆ.

ವಕ್ಫ್‌ ಮಂಡಳಿಯಲ್ಲಿ ಇತರ ಧರ್ಮಗಳ ಸದಸ್ಯರನ್ನು ಸೇರಿಸುವ ನಿಬಂಧನೆಯ ಬಗ್ಗೆ ಇತರ ಧಾರ್ಮಿಕ ದತ್ತಿ ಮಂಡಳಿಗಳೊಂದಿಗೆ ವಿರೋಧ ಪಕ್ಷದ ಹೋಲಿಕೆಯನ್ನು ತಳ್ಳಿಹಾಕಿದ ಅವರು, “ವಕ್ಫ್ ಮಂಡಳಿಗಳು ಶಾಸನಬದ್ಧ ಸಂಸ್ಥೆಗಳಾಗಿದ್ದು, ಹಿಂದೂ ದತ್ತಿ ಮಂಡಳಿಗಳಂತೆ ಧಾರ್ಮಿಕ ಸಂಸ್ಥೆಗಳಲ್ಲ. ಶಾಸನಬದ್ಧ ಸಂಸ್ಥೆಯು ಜಾತ್ಯತೀತವಾಗಿರಬೇಕು” ಎಂದು ಅವರು ಹೇಳಿದ್ದಾರೆ. ಇದರಲ್ಲಿ ಮುಸ್ಲಿಮೇತರ ಸದಸ್ಯರು ನಿರ್ಧಾರವನ್ನು ನಿರ್ದೇಶಿಸಲು ಸಾಧ್ಯವಿಲ್ಲ, “ಅವರು ಕೊಡುಗೆ ನೀಡಲು ಮಾತ್ರ ಸಾಧ್ಯವಿದೆ” ಎಂದು ಅವರು ಮತ್ತೆ ಸ್ಪಷ್ಟಪಡಿಸಿದ್ದಾರೆ.

“22 ಸದಸ್ಯರಿರುವ ಕೇಂದ್ರ ವಕ್ಫ್ ಮಂಡಳಿಯಲ್ಲಿ ಕೇವಲ ನಾಲ್ವರು ಮುಸ್ಲಿಮೇತರ ಸದಸ್ಯರು ಮಾತ್ರ ಇರಲು ಸಾಧ್ಯ ಎಂದು ನಾನು ಪದೇ ಪದೇ ಹೇಳಿದ್ದೇನೆ… ಆದರೂ ವಿರೋಧ ಪಕ್ಷಗಳು ಈ ವಿಷಯವನ್ನು ಪದೇ ಪದೇ ಎತ್ತಿದ್ದವು” ಎಂದು ಅವರು ಹೇಳಿದ್ದಾರೆ. ವಕ್ಪ್‌ ತಿದ್ದುಪಡಿ

ಗುರುವಾರ ಮಸೂದೆ ಬಗ್ಗೆ ಮಾತನಾಡುತ್ತಾ ಕೇಂದ್ರ ಸರ್ಕಾರದ ವಿರುದ್ಧ ದಾಳಿ ಮಾಡಿದ ಕಾಂಗ್ರೆಸ್ ಸಂಸದ ಸೈಯದ್ ನಸೀರ್ ಹುಸೇನ್,  ಇದು “ಮುಸ್ಲಿಂ ಸಮುದಾಯವನ್ನು ಗುರಿ ಮಾಡಿಟ್ಟುಕೊಂಡು ಮಾಡಲಾಗಿರುವ ಕಾನೂನು” ಎಂದು ಬಣ್ಣಿಸಿದ್ದಾರೆ. ಜೊತೆಗೆ ದೇಶದಲ್ಲಿ ಮುಸ್ಲಿಮರನ್ನು ಎರಡನೇ ದರ್ಜೆಯ ನಾಗರಿಕರನ್ನಾಗಿ ಮಾಡುವ ಉದ್ದೇಶವನ್ನು ಹೊಂದಿದೆ ಎಂದು ಹೇಳಿದ ಅವರು, “ಲೋಕಸಭಾ ಚುನಾವಣೆಯಲ್ಲಿ ಕೇವಲ 240 ಸ್ಥಾನಗಳನ್ನು ಗೆಲ್ಲಲು ಸಾಧ್ಯವಾದ ಕಾರಣ ಆಡಳಿತರೂಢ ಪಕ್ಷವು 2024 ರಲ್ಲಿ ತನ್ನ ಮತ ಬ್ಯಾಂಕ್ ಅನ್ನು ಬಲಪಡಿಸುವ ಸಲುವಾಗಿ ಈ ಮಸೂದೆಯನ್ನು ತಂದಿದೆ” ಎಂದು ಅವರು ಆರೋಪಿಸಿದ್ದಾರೆ.

“ಕೋಮು ಧ್ರುವೀಕರಣಕ್ಕಾಗಿ ಮಾತ್ರ ಅವರು ಈ ಕಾಯ್ದೆಯನ್ನು ತರಲಾಗಿದೆ. ಕೋಮು ಧ್ರುವೀಕರಣ ನಡೆದಾಗ ಯಾರಿಗೆ ಲಾಭವಾಗುತ್ತದೆ ಎಂದು ಎಲ್ಲರಿಗೂ ತಿಳಿದಿದೆ. ಯಾವ ರಾಜಕೀಯ ಪಕ್ಷ ಒಂದು ಸಮುದಾಯವನ್ನು ಖಳನಾಯಕನಂತೆ ಬಿಂಬಿಸಲು ಮತ್ತು ಅದರ ವಿರುದ್ಧ ನಿರೂಪಣೆಯನ್ನು ನಿರ್ಮಿಸಲು ಪ್ರಯತ್ನಿಸುತ್ತದೆ” ಎಂದು ಎಲ್ಲರಿಗೂ ತಿಳಿದಿದೆ ಎಂದು ಅವರು ಹೇಳಿದ್ದಾರೆ.

ಪ್ರಸ್ತಾವಿತ ಕಾನೂನಿನ ಪ್ರಕಾರ ವಕ್ಫ್ ಮಂಡಳಿಯಲ್ಲಿ ಮುಸ್ಲಿಮೇತರರನ್ನು ಸೇರಿಸುವ ಬಗ್ಗೆ ಬೆಟ್ಟು ಮಾಡಿದ ಹುಸೇನ್ ಅವರು, “ನೀವು ನನ್ನನ್ನು ಹಿಂದೂ ದೇವಾಲಯ ಟ್ರಸ್ಟ್‌ನ ಭಾಗವಾಗಲು ಬಿಡುತ್ತೀರಾ?” ಎಂದು ಕೇಳಿದ್ದಾರೆ. ಮಸೂದೆಯಲ್ಲಿ ತೆಗೆದುಹಾಕಲಾದ ವಕ್ಫ್ ಬೈ ಯೂಸರ್ ಷರತ್ತಿನ ಕುರಿತು ಮಾತನಾಡಿದ ಅವರು, ಶತಮಾನಗಳಿಂದ ಇರುವ ದೇವಾಲಯಗಳು, ಚರ್ಚ್‌ಗಳು ಅಥವಾ ಗುರುದ್ವಾರಗಳು ತಮ್ಮ ಆಸ್ತಿಗಳಿಗೆ ಸಾಕ್ಷ್ಯ ತರುವುದು ಹೇಗೆ? ಈಗ ವಕ್ಫ್ ಆಸ್ತಿಗಳಿಗೆ ಆ ಸಾಕ್ಷ್ಯ ಕೇಳಲಾಗುತ್ತಿದೆಯಲ್ಲವೇ? ಎಂದು ಅವರು ಕೇಳಿದ್ದಾರೆ.

ಇಲ್ಲಿ ಕ್ಲಿಕ್ ಮಾಡಿ

ಇದನ್ನೂಓದಿ:  ವಕ್ಫ್‌ ಮಸೂದೆ ಮುಸ್ಲಿಮರನ್ನು ಎರಡನೇ ದರ್ಜೆ ನಾಗರಿಕರಾಗಿಸುವ ಪ್ರಯತ್ನ: ನಾಸಿರ್ ಹುಸೇನ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳದ ಸೋಲಿನ ಬಳಿಕ ‘ಇಂಡಿಯಾದ ಆಸರೆ’ ಬಯಸಿದ ಮಮತಾ

2026ರ ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಯ ಸೋಲಿನ ನಂತರ ಮಮತಾ ಬ್ಯಾನರ್ಜಿ ಅವರು ಇದ್ದಕ್ಕಿದ್ದಂತೆ ‘ಇಂಡಿಯಾ’ (INDIA) ಒಕ್ಕೂಟ ಮತ್ತು ರಾಷ್ಟ್ರೀಯ ಮಟ್ಟದ ವಿರೋಧ ಪಕ್ಷಗಳ ಒಗ್ಗಟ್ಟಿಗೆ ಇಷ್ಟೊಂದು ಪ್ರಾಮುಖ್ಯತೆ ನೀಡುತ್ತಿರುವುದು ಏಕೆ? ದೀರ್ಘಕಾಲದವರೆಗೆ...

ಪಶ್ಚಿಮ ಬಂಗಾಳ| ಮತದಾರರ ಪಟ್ಟಿಯಿಂದ ಡಿಲೀಟ್‌ ಆದವರಿಗೆ ಪಡಿತರ ಪ್ರಯೋಜನಗಳಿಲ್ಲ

ಚುನಾವಣಾ ಆಯೋಗದ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಯಿಂದಾಗಿ ಪಶ್ಚಿಮ ಬಂಗಾಳದ ಚುನಾವಣಾ ಪ್ರಕ್ರಿಯೆಯಿಂದ ಹೊರಗುಳಿದವರಿಗೆ ಈಗ ಎರಡು ಹೊಡೆತ ಎದುರಾಗಿದೆ. ರಾಜ್ಯ ಸರ್ಕಾರವು ಈಗ ಅವರ ಪಡಿತರ ಚೀಟಿಗಳನ್ನು ಸಹ ನಿಷ್ಕ್ರಿಯಗೊಳಿಸಲು...

ಇಂಡಿಯಾ ಮೈತ್ರಿಕೂಟದ ಸಭೆ: ಎಸ್‌ಐಆರ್, ಬೆಲೆ ಏರಿಕೆ, ನಿರುದ್ಯೋಗದ ಕುರಿತು ಖರ್ಗೆ ಕಳವಳ; ಒಗ್ಗಟ್ಟಿನ ಹೋರಾಟಕ್ಕೆ ಕರೆ

ರಾಜಕೀಯ, ಆರ್ಥಿಕ, ಸಾಮಾಜಿಕ ಮತ್ತು ವಿದೇಶಾಂಗ ನೀತಿ ರಂಗಗಳಲ್ಲಿ ಮೋದಿ ಸರ್ಕಾರದ ವೈಫಲ್ಯಗಳನ್ನು ಎದುರಿಸಲು ತನ್ನ ಒಗ್ಗಟ್ಟನ್ನು ಬಲಪಡಿಸಿಕೊಳ್ಳುವಂತೆ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಸೋಮವಾರ (ಜೂ.8) ಇಂಡಿಯಾ ಮೈತ್ರಿಕೂಟಕ್ಕೆ ಕರೆ...

ಟೆಹ್ರಾನ್ ಮೇಲಿನ ದಾಳಿಗೆ ಪ್ರತೀಕಾರ: ಇಸ್ರೇಲ್ ಮೇಲೆ ಕ್ಷಿಪಣಿ ಹಾರಿಸಿದ ಇರಾನ್

ಟೆಹ್ರಾನ್, ತಬ್ರಿಜ್ ಮತ್ತು ಇಸ್ಫಹಾನ್‌ ಮೇಲಿನ ದಾಲಿಗಳಿಗೆ ಪ್ರತೀಕಾರವಾಗಿ, ಇರಾನ್ ಸೇನೆಯು ಇಸ್ರೇಲ್‌ ಮೇಲೆ ಎರಡನೇ ತರಂಗದ ಕ್ಷಿಪಣಿಗಳನ್ನು ಹಾರಿಸಿದೆ. ದೇಶಾದ್ಯಂತ ಸೈರನ್‌ಗಳು ಮೊಳಗುತ್ತಿವೆ ಎಂದು ಇಸ್ರೇಲ್ ಮಿಲಿಟರಿ ಹೇಳಿದೆ ಎಂದು ಅಂತರಾಷ್ಟ್ರೀಯ...

ಭಾರತದಲ್ಲಿ ಬೆಂಕಿ ದುರಂತ ‘ದಿನವೊಂದಕ್ಕೆ ಬಲಿಯಾಗುತ್ತಿವೆ 16 ಜೀವಗಳು’ NCRB ವರದಿ

ಇತ್ತೀಚೆಗೆ ದೆಹಲಿಯ ಮಾಳವೀಯ ನಗರದ ಹೋಟೆಲ್‌ ಒಂದರಲ್ಲಿ ನಡೆದ ಭೀಕರ ಬೆಂಕಿ ದುರಂತ (ಇದರಲ್ಲಿ 22 ಜನರು ಸಜೀವ ದಹನವಾಗಿದ್ದರು) ಇಡೀ ದೇಶವನ್ನೇ ನಡುಗಿಸಿದೆ. ಈ ದುರಂತದ ಬೆನ್ನಲ್ಲೇ ಕರ್ನಾಟಕದಲ್ಲೂ ವಾಣಿಜ್ಯ ಮತ್ತು...

ಈದ್ ಹಬ್ಬದ ವೇಳೆ ಮುಸ್ಲೀಮರನ್ನು ಗುರಿಯಾಗಿಸಿ 46 ದ್ವೇಷ ಅಪರಾಧಗಳು, ಮೂವರ ಹತ್ಯೆ: APCR ಆತಂಕಕಾರಿ ವರದಿ

ಇತ್ತೀಚಿನ ಬಕ್ರೀದ್ (ಈದ್ ಉಲ್-ಅಧಾ) ಹಬ್ಬದ ಆಚರಣೆಯ ಸಂದರ್ಭದಲ್ಲಿ ದೇಶದ ವಿವಿಧೆಡೆ ಅಲ್ಪಸಂಖ್ಯಾತರನ್ನು ಗುರಿಯಾಗಿಸಿಕೊಂಡು ನಡೆದ ಕೋಮು ಕಿರುಕುಳ, ದ್ವೇಷ ಭಾಷಣ ಹಾಗೂ ಹಿಂಸಾಚಾರದ ಘಟನೆಗಳ ಕುರಿತು 'ನಾಗರಿಕ ಹಕ್ಕುಗಳ ರಕ್ಷಣಾ ಸಂಘ'...

ಗ್ರೇಟ್ ನಿಕೋಬಾರ್ : ಕಾರ್ಪೊರೇಟ್ ಹಿತಾಸಕ್ತಿಗೆ ಬಲಿಯಾಗುತ್ತಿರುವ ಪರಿಸರ, ಆದಿವಾಸಿಗಳ ಅಸ್ತಿತ್ವ

ಬಂಗಾಳಕೊಲ್ಲಿಯಲ್ಲಿರುವ ಭಾರತದ ದಕ್ಷಿಣ ತುದಿಯ ದ್ವೀಪದ ಸಮಗ್ರ ಅಭಿವೃದ್ಧಿಯ ಹೆಸರಿನಲ್ಲಿ ಕೇಂದ್ರ ಸರ್ಕಾರ ಬರೋಬ್ಬರಿ 72 ಸಾವಿರದಿಂದ 81 ಸಾವಿರ ಕೋಟಿ ರೂಪಾಯಿ ವೆಚ್ಚದ ’ಗ್ರೇಟ್ ನಿಕೋಬಾರ್ ದ್ವೀಪ ಅಭಿವೃದ್ಧಿ ಯೋಜನೆ’ಯನ್ನು ರೂಪಿಸಿದೆ.ಈ...

ಅಸ್ಸಾಂನ ನಾಲ್ವರು ಮುಸ್ಲಿಂ ಮಹಿಳೆಯರ ಗಡೀಪಾರು ಪ್ರಕ್ರಿಯೆಗೆ ಸುಪ್ರೀಂ ತಡೆ: ಕೇಂದ್ರ, ರಾಜ್ಯ ಸರ್ಕಾರಗಳಿಗೆ ನೋಟಿಸ್‌

ಅಸ್ಸಾಂನಲ್ಲಿ 'ವಿದೇಶಿಯರು' ಎಂದು ಘೋಷಿತರಾಗಿ ಗಡೀಪಾರು ಭೀತಿ ಎದುರಿಸುತ್ತಿದ್ದ ನಾಲ್ವರು ಮುಸ್ಲಿಂ ಮಹಿಳೆಯರ ವಿಚಾರದಲ್ಲಿ ಭಾರತದ ಸುಪ್ರೀಂ ಕೋರ್ಟ್ ಮಹತ್ವದ ಮಧ್ಯಪ್ರವೇಶ ಮಾಡಿದೆ. ಈ ಮಹಿಳೆಯರನ್ನು ದೇಶದಿಂದ ಹೊರಹಾಕುವ (ಗಡೀಪಾರು ಮಾಡುವ) ಪ್ರಕ್ರಿಯೆಗೆ...

ದೆಹಲಿಗೆ ಬಂದಿಳಿದ ಕಾಕ್ರೋಚ್ ಪಾರ್ಟಿ ಸಂಸ್ಥಾಪಕ ಅಭಿಜೀತ್ ದೀಪ್ಕೆ : ಜಂತರ್‌ ಮಂತರ್‌ನಲ್ಲಿ ಪ್ರತಿಭಟಿಸಲು ಪೊಲೀಸರಿಂದ ಅನುಮತಿ

ಶನಿವಾರ (ಜೂ.6) ಬೆಳಿಗ್ಗೆ ದೆಹಲಿಗೆ ಆಗಮಿಸಿದ ಕಾಕ್ರೋಚ್ ಜನತಾ ಪಾರ್ಟಿಯ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದೀಪ್ಕೆ, ಪ್ರತಿಭಟನೆಗೆ ದೆಹಲಿ ಪೊಲೀಸರು ಅನುಮತಿ ನೀಡಿದ್ದಾರೆ ಎಂದು ತಿಳಿಸಿದ್ದು, ಯೋಜಿತ ಆಂದೋಲನಕ್ಕಾಗಿ ನೇರವಾಗಿ ಜಂತರ್ ಮಂತರ್‌ನಲ್ಲಿ...

ಜಾಗತಿಕವಾಗಿ ಮೂರು ವರ್ಷಗಳಲ್ಲಿ 600 ಪರಿಸರ ರಕ್ಷಕರ ಹತ್ಯೆ: ವಿಶ್ವಸಂಸ್ಥೆ ತೀವ್ರ ಕಳವಳ: ಜಾಗತಿಕ ತಾಪಮಾನಕ್ಕೆ ಸಾಕ್ಷಿಯಾಗುತ್ತಿರುವ ಭಾರತ

ಜೂನ್ 5 ವಿಶ್ವ ಪರಿಸರ ದಿನ. ಜಗತ್ತಿನಾದ್ಯಂತ ಗಿಡ ನೆಡುವ, ಹಸಿರು ಭಾಷಣ ಬಿಗಿಯುವ ಮತ್ತು ಪರಿಸರ ಕಾಳಜಿಯ ಸಡಗರದ ಆಚರಣೆಗಳು ಎಲ್ಲೆಡೆ ವಿಭಿನ್ನ ರೀತಿಗಳಲ್ಲಿ ವಿಜೃಂಭಿಸುತ್ತಿವೆ. ಆದರೆ, ಇದೇ ಹೊತ್ತಿನಲ್ಲಿ ವಿಶ್ವಸಂಸ್ಥೆಯು...