Homeಮುಖಪುಟವಕ್ಫ್ ತಿದ್ದುಪಡಿ ವಿಚಾರ | ಸ್ಪೀಕರ್‌ಗೆ ಪತ್ರ ಬರೆದ ವಿಪಕ್ಷಗಳ ಸಂಸದರು

ವಕ್ಫ್ ತಿದ್ದುಪಡಿ ವಿಚಾರ | ಸ್ಪೀಕರ್‌ಗೆ ಪತ್ರ ಬರೆದ ವಿಪಕ್ಷಗಳ ಸಂಸದರು

- Advertisement -
- Advertisement -

ವಕ್ಫ್ (ತಿದ್ದುಪಡಿ) ಮಸೂದೆಯನ್ನು ಪರಿಶೀಲಿಸುವ ಜಂಟಿ ಸಂಸದೀಯ ಸಮಿತಿ (ಜೆಪಿಸಿ)ಯಲ್ಲಿ ಪ್ರತಿಪಕ್ಷಗಳು ಮತ್ತು ಆಡಳಿತಾರೂಢ ಬಿಜೆಪಿ ನಡುವೆ ಮತ್ತೊಂದು ಜಟಾಪಟಿ ನಡೆದಿದೆ. ವಿರೋಧ ಪಕ್ಷದ ಸಂಸದರು ಲೋಕಸಭೆಯ ಸ್ಪೀಕರ್ ಓಂ ಬಿರ್ಲಾ ಅವರಿಗೆ ಪತ್ರ ಬರೆದಿದ್ದು, ಸಮಿತಿಯ ಮುಖ್ಯಸ್ಥರ ಏಕಪಕ್ಷೀಯ ನಿರ್ಧಾರಗಳನ್ನು ತೆಗೆದುಕೊಳ್ಳುತ್ತಿದ್ದಾರೆ ಎಂದು ಆರೋಪಿಸಿದ್ದು, ಇದು ಹೀಗೆಯೆ ಮುಂದುವರೆದರೆ, ಸಮಿತಿಯಿಂದ ತಾವು ನಿರ್ಗಮಿಸುತ್ತೇವೆ ಎಂದು ಎಚ್ಚರಿಕೆ ನೀಡಿದ್ದಾರೆ. ವಕ್ಫ್ ತಿದ್ದುಪಡಿ

ಸಂಸತ್ತಿನ ಮುಂಗಾರು ಅಧಿವೇಶನದಲ್ಲಿ ಸರ್ಕಾರವು ವಕ್ಫ್ ಮಸೂದೆಯನ್ನು ಮಂಡಿಸಿದ ನಂತರ ಲೋಕಸಭೆಯು ಜಗದಾಂಬಿಕಾ ಪಾಲ್ ನೇತೃತ್ವದ ಜಂಟಿ ಸಂಸದೀಯ ಸಮಿತಿಗೆ ವಕ್ಫ್ ಮಸೂದೆಯನ್ನು ಪರಿಶೀಲಿಸಲು ವಹಿಸಿತ್ತು. ಮಸೂದೆಯ ವಿರುದ್ಧ ವಿರೋಧ ಪಕ್ಷಗಳು ಮತ್ತು ಹಲವಾರು ಮುಸ್ಲಿಂ ಸಂಘಟನೆಗಳು ತೀವ್ರ ಪ್ರತಿಭಟನೆ ಸಲ್ಲಿಸಿವೆ. ಅದಾಗ್ಯೂ ಇತ್ತೀಚೆಗಷ್ಟೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಮುಂಬರುವ ಸಂಸತ್ತಿನ ಚಳಿಗಾಲದ ಅಧಿವೇಶನದಲ್ಲಿ ವಕ್ಫ್ ಮಸೂದೆಯನ್ನು ಅಂಗೀಕರಿಸಲಾಗುವುದು ಎಂದು ಪ್ರತಿಪಾದಿಸಿದ್ದಾರೆ. ವಕ್ಫ್ ತಿದ್ದುಪಡಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

ವಿಪಕ್ಷಗಳ ಸಂಸದರು ಲೋಕಸಭೆ ಸ್ಪೀಕರ್‌ಗೆ ಬರೆದಿರುವ ಪತ್ರದಲ್ಲಿ, ‘ಬಹುಮತ’ವನ್ನು ಪ್ರಜಾಸತ್ತಾತ್ಮಕವಾಗಿ ಬಳಸದೆ ಸಂಸತ್ತಿನ ಪ್ರಕ್ರಿಯೆಯನ್ನು ನಿರ್ಲಕ್ಷಿಸಿ ಕೇಂದ್ರ ಸರ್ಕಾರವು ಬಯಸಿದಂತೆ ಮಸೂದೆಯನ್ನು ಅಂಗೀಕರಿಸಲು ಜಂಟಿ ಸಂಸದೀಯ ಸಮಿತಿಯನ್ನು ಕೇವಲ ವೆಂಟಿಲೇಷನ್ ರೂಮ್‌ ಎಂಬಂತೆ ಪರಿಗಣಿಸಬಾರದು ಎಂದು ತಿಳಿಸಿದ್ದಾರೆ.

“ಸಮಿತಿಯ ಅಧ್ಯಕ್ಷರು ಸತತ ಮೂರು ದಿನಗಳ ಕಾಲ ಕೂಡಾ ಸಭೆಯ ದಿನಾಂಕಗಳನ್ನು ನಿಗದಿಪಡಿಸುವ ಬಗ್ಗೆ ಏಕಪಕ್ಷೀಯ ನಿರ್ಧಾರಗಳನ್ನು ತೆಗೆದುಕೊಳ್ಳುತ್ತಿದ್ದಾರೆ. ಅಲ್ಲಿ ವ್ಯಕ್ತಿಗಳು/ಸಂಘಟನೆಗಳನ್ನು ಸಾಕ್ಷಿಗಳಾಗಿ ಕರೆಯುತ್ತಾರೆ. ಇದು ಸಂಸದರು ಸಂವಹನ ನಡೆಸಲು ಪ್ರಾಯೋಗಿಕವಾಗಿ ತಯಾರಿ ಮಾಡಲು ಸಾಧ್ಯವಿಲ್ಲ” ಎಂದು ಪತ್ರವು ಹೇಳಿದೆ.

“ಆದ್ದರಿಂದ, ಸದಸ್ಯರ ಇಚ್ಛೆಗೆ ವಿರುದ್ಧವಾಗಿ ಸಮಂಜಸವಾದ ಸಮಯ ವಿರಾಮವನ್ನು ನೀಡದೆ ಸಮಿತಿಯ ಕಲಾಪಗಳನ್ನು ಬುಡಮೇಲು ಮಾಡುವುದು ಸಾಂವಿಧಾನಿಕ ಧರ್ಮ ಮತ್ತು ಸಂಸತ್ತಿನ ಮೇಲಿನ ದೌರ್ಜನ್ಯದ ಕೃತ್ಯವಲ್ಲದೆ ಬೇರೇನೂ ಅಲ್ಲ ಎಂದು ನೋವಿನಿಂದ ನಿಮ್ಮ ಗಮನಕ್ಕೆ ತರುವುದು ನಮ್ಮ ಕರ್ತವ್ಯ” ಎಂದು ಪತ್ರವು ಹೇಳಿದೆ. ಯಾವುದೇ ನಿರ್ಧಾರಗಳನ್ನು ತೆಗೆದುಕೊಳ್ಳುವ ಮೊದಲು ಸಮಿತಿಯ ಸದಸ್ಯರೊಂದಿಗೆ ಔಪಚಾರಿಕ ಸಮಾಲೋಚನೆ ನಡೆಸುವಂತೆ ಸಮತಿಯ ಅಧ್ಯಕ್ಷರಿಗೆ ನಿರ್ದೇಶನ ನೀಡುವಂತೆ ಸದಸ್ಯರು ಸ್ಪೀಕರ್ ಅವರನ್ನು ಪತ್ರದಲ್ಲಿ ಒತ್ತಾಯಿಸಿದ್ದಾರೆ.

ಸಮಿತಿಯು ನವೆಂಬರ್ 5-6 ರಂದು ಎರಡು ದಿನಗಳ ಸಭೆ ನಡೆಸಲಿದ್ದು, ನವೆಂಬರ್ 9 ರಿಂದ ಐದು ರಾಜ್ಯಗಳ ಪ್ರವಾಸವನ್ನು ನಡೆಸಲಿದೆ. ಸಂಸತ್ತಿನ ಚಳಿಗಾಲದ ಅಧಿವೇಶನದ ಮೊದಲ ವಾರದಲ್ಲಿ ಸಮಿತಿಯು ವರದಿಯನ್ನು ಸಲ್ಲಿಸುವ ನಿರೀಕ್ಷೆಯಿದೆ.

ಇದನ್ನೂ ಓದಿ: ‘ಕೇವಲ ಹಿಂದಿ ಏಕೆ?’ | ಹಿಂದಿಯಲ್ಲಿ ಕಲಾಪ ನಡೆಸುವಂತೆ ಕೇಳಿದ್ದ ಅರ್ಜಿ ವಜಾ ಮಾಡಿದ ಸುಪ್ರೀಂಕೋರ್ಟ್!

‘ಕೇವಲ ಹಿಂದಿ ಏಕೆ?’ | ಹಿಂದಿಯಲ್ಲಿ ಕಲಾಪ ನಡೆಸುವಂತೆ ಕೇಳಿದ್ದ ಅರ್ಜಿ ವಜಾ ಮಾಡಿದ ಸುಪ್ರೀಂಕೋರ್ಟ್!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR: ಕೇಂದ್ರ ಸರ್ಕಾರದ SIRಗೆ ಕೌಂಟರ್‌, ಮಹತ್ವದ ಆದೇಶಗಳನ್ನು ಹೊರಡಿಸಿದ ಕರ್ನಾಟಕ ಸರ್ಕಾರ

ಕೇಂದ್ರ ಸರ್ಕಾರ ಚುನಾವಣಾ ಆಯೋಗದ ಮೂಲಕ ನಡೆಸುತ್ತಿರುವ ವಿಶೇಷ ಮತದಾರ ಪಟ್ಟಿ ಪರಿಷ್ಕರಣೆ ಕುರಿತಂತೆ ದೇಶದಾದ್ಯಂತ ಭಾರೀ ವಿರೋಧ ವ್ಯಕ್ತವಾಗಿದ್ದವು. ಸುಪ್ರೀಂ ಕೋರ್ಟ್‌ ಆ ಪ್ರಕ್ರಿಯೆಯನ್ನು ಮಾನ್ಯ ಮಾಡಿತ್ತು. ಕರ್ನಾಟಕದಲ್ಲಿ ನಾಳೆಯಿಂದ (ಜೂನ್.30)‌...

ರಾಮಮಂದಿರದ ದೇಣಿಗೆ ಕಳ್ಳತನ: ಆರೋಪಿಗಳ ಪರ ಯಾವುದೇ ವಕೀಲರು ವಾದಿಸುವಂತಿಲ್ಲ , ವಾದಿಸಿದರೆ ರೂ. 5ಲಕ್ಷ ದಂಡ

ರಾಮಮಂದಿರದ ದೇಣಿಗೆ ಕಳ್ಳತನ ಪ್ರಕರಣದಲ್ಲಿ ಬಂಧಿತರಾಗಿರುವ ಆರೋಪಿಗಳ ಪರವಾಗಿ ಯಾವುದೇ ವಕೀಲರು ನ್ಯಾಯಾಲಯದಲ್ಲಿ ವಕಾಲತ್ತು ವಹಿಸಬಾರದು ಎಂದು ಅಯೋಧ್ಯೆ ಬಾರ್ ಅಸೋಸಿಯೇಷನ್ ಮಹತ್ವದ ನಿರ್ಧಾರ ಕೈಗೊಂಡಿದೆ. ಒಂದು ವೇಳೆ ಸಂಘದ ಈ ತೀರ್ಮಾನವನ್ನು...

ವೋಟರ್ ಲಿಸ್ಟ್‌ನಿಂದ ಹೆಸರು ಡಿಲೀಟ್: ದಿ ಟೆಲಿಗ್ರಾಫ್’ ಪತ್ರಿಕೆಯ ಮಾಜಿ ಸಂಪಾದಕ ರಾಜಗೋಪಾಲ್ ಪಾಸ್‌ಪೋರ್ಟ್ ನವೀಕರಣಕ್ಕೆ ಬ್ರೇಕ್! ಬಂಗಾಳ ಸಿಎಂ ಗೆ ಪತ್ರ ಬರೆದ ಕೇರಳ ಸಿಎಂ

ಹಿರಿಯ ಪತ್ರಕರ್ತ ಮತ್ತು ‘ದಿ ಟೆಲಿಗ್ರಾಫ್’ ಪತ್ರಿಕೆಯ ಮಾಜಿ ಸಂಪಾದಕ ರಾಜಗೋಪಾಲ್ ರಾಮದಾಸ್ ಅವರ ಪಾಸ್‌ಪೋರ್ಟ್ ನವೀಕರಣ ವಿವಾದವು ಸೋಮವಾರ ಮತ್ತಷ್ಟು ತೀವ್ರಗೊಂಡಿದೆ. ಈ ಸಮಸ್ಯೆಯನ್ನು ತಕ್ಷಣವೇ ಬಗೆಹರಿಸಲು ಮಧ್ಯಪ್ರವೇಶಿಸಬೇಕು ಎಂದು ಕೋರಿ...

ರಾಮ ಮಂದಿರ ದೇಣಿಗೆ ಹಗರಣ: ಅರ್ಜಿ ವಿಚಾರಣೆ ಕೆಲ ದಿನ ತಡವಾದರೆ ‘ಆಕಾಶವೇನೂ ಉರುಳಿ ಬೀಳುವುದಿಲ್ಲ’ ಎಂದ ಸುಪ್ರೀಂ ಕೋರ್ಟ್

ಅಯೋಧ್ಯೆಯ ರಾಮ ಮಂದಿರಕ್ಕೆ ಭಕ್ತರಿಂದ ಬಂದ ದೇಣಿಗೆ ಹಣ ದುರುಪಯೋಗ ಆಗಿರುವ ಕುರಿತು ಸಿಬಿಐ ನೇತೃತ್ವದ ಬಹು-ಸಂಸ್ಥೆಗಳ ಜಂಟಿ ತನಿಖೆಗೆ ಆದೇಶಿಸಬೇಕೆಂದು ಕೋರಿ ಸಲ್ಲಿಕೆಯಾಗಿದ್ದ ಅರ್ಜಿಗಳ ತುರ್ತು ವಿಚಾರಣೆಯನ್ನು ಸುಪ್ರೀಂ ಕೋರ್ಟ್ ಸೋಮವಾರ...

ಕಾಕ್ರೋಚ್ ಪಾರ್ಟಿ ಧರಣಿ : ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ ಆರಂಭಿಸಿದ ಸೋನಮ್ ವಾಂಗ್‌ಚುಕ್

ನೀಟ್ ಸೇರಿದಂತೆ ವಿವಿಧ ಪರೀಕ್ಷೆಗಳ ಪ್ರಶ್ನೆ ಪತ್ರಿಕೆ ಸೋರಿಕೆ, ಹಲವು ಅಕ್ರಮ, ಶೈಕ್ಷಣಿಕ ಅವ್ಯವಸ್ಥೆಗಳ ಹೊಣೆ ಹೊತ್ತು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಬೇಕು ಎಂದು ಒತ್ತಾಯಿಸಿ ಕಾಕ್ರೋಚ್ ಜನತಾ...

SIR ವೇಳೆ ಮತಪಟ್ಟಿಯಿಂದ ಹೆಸರು ಡಿಲೀಟ್: ‘ದಿ ಟೆಲಿಗ್ರಾಫ್’ ಮಾಜಿ ಸಂಪಾದಕ ರಾಜಗೋಪಾಲ್ ಪಾಸ್‌ಪೋರ್ಟ್ ನವೀಕರಣಕ್ಕೆ ತಡೆ

ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ವೇಳೆ ಮತದಾರರ ಪಟ್ಟಿಯಿಂದ ಹೆಸರು ತೆಗೆದುಹಾಕಿದ ಕಾರಣ ಪಾಸ್‌ಪೋರ್ಟ್ ನವೀಕರಿಸಲು ಆಗುತ್ತಿಲ್ಲ ಎಂದು ದೇಶದ ಖ್ಯಾತ ಇಂಗ್ಲಿಷ್ ದಿನಪತ್ರಿಕೆ ‘ದಿ ಟೆಲಿಗ್ರಾಫ್’ನ ಮಾಜಿ ಸಂಪಾದಕ ಆರ್. ರಾಜಗೋಪಾಲ್...

‘ಈಗಲೂ ಮಮತಾ ಬ್ಯಾನರ್ಜಿಯೇ ನಮ್ಮ ನಾಯಕಿ’ : ಟಿಎಂಸಿ ಬಂಡಾಯ ಬಣದ ಅಧ್ಯಕ್ಷ ಅರೂಪ್ ರಾಯ್ ಹೇಳಿಕೆ

"ಮಮತಾ ಬ್ಯಾನರ್ಜಿ ಅವರೇ ಇಂದಿಗೂ ನಮ್ಮ ನಾಯಕಿ. ಅವರೇ ಈ ಪಕ್ಷವನ್ನು ಸ್ಥಾಪಿಸಿದವರು. ಅವರೇ ನಮ್ಮ ಪಕ್ಷದ ಕಾಂದಾರಿ (ಮಾರ್ಗದರ್ಶಕರು ಅಥವಾ ಪಕ್ಷವನ್ನು ಮುನ್ನಡೆಸುವವರು). ಮಮತಾ ಬ್ಯಾನರ್ಜಿ ಅವರಿಂದಾಗಿಯೇ ನಾವು ಈ ಪಕ್ಷವನ್ನು...

ಪಶ್ಚಿಮ ಬಂಗಾಳದ ಆಹಾರ ಸಂಸ್ಕೃತಿಯನ್ನು ಗೌರವಿಸುತ್ತೇವೆ ಎಂಬ ಬಿಜೆಪಿಯ ಚುನಾವಣಾ ಭರವಸೆಗೆ ಈಗ ‘ಮೊಟ್ಟೆ’ ಮೊದಲ ಬಲಿ

ಚುನಾವಣಾ ಸಮಯದಲ್ಲಿ, ಬಿಜೆಪಿ ಪರಿಸ್ಥಿತಿಯನ್ನು ಮತ್ತು ಮೀನಿನ ಮಾರುಕಟ್ಟೆಯ ನಾಡಿಮಿಡಿತವನ್ನು ಸರಿಯಾಗಿಯೇ ಅರ್ಥಮಾಡಿಕೊಂಡಿತ್ತು. ಅವರ ನಾಯಕರು ಟಿವಿ ಕ್ಯಾಮೆರಾಗಳ ಮುಂದೆ ಮೀನುಗಳನ್ನು ಪ್ರದರ್ಶಿಸಿದರು ಮತ್ತು ಕುರಿ ಮಾಂಸದೂಟವನ್ನು ಸವಿದಿದ್ದರು. ಬಂಗಾಳಿಗಳ ತಟ್ಟೆಗೆ (ಆಹಾರಕ್ಕೆ)...

24 ಗಂಟೆಗೂ ಮೊದಲೇ ಮಹಾರಾಷ್ಟ್ರದಲ್ಲಿ TET ಪ್ರಶ್ನೆ ಪತ್ರಿಕೆ ಸೋರಿಕೆ: ರದ್ದಾದ ಪರೀಕ್ಷೆ

ಮಹಾರಾಷ್ಟ್ರದಲ್ಲಿ ಮತ್ತೊಂದು ಪರೀಕ್ಷಾ ಅಕ್ರಮದ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ. ಜೂನ್ 28ರ ಭಾನುವಾರ ನಡೆಯಬೇಕಿದ್ದ ‘ಶಿಕ್ಷಕರ ಅರ್ಹತಾ ಪರೀಕ್ಷೆ’ (TET) ಆರಂಭಕ್ಕೆ ಕೇವಲ 24 ಗಂಟೆಗಳ ಮುನ್ನವೇ ಪ್ರಶ್ನೆ ಪತ್ರಿಕೆ ಸೋರಿಕೆಯಾದ...

ಸೌತೆಕಾಯಿ ಕೃಷಿಗೆ ತನ್ನ ಸಚಿವಾಲಯದಿಂದಲೇ ₹99 ಲಕ್ಷ ಸಬ್ಸಿಡಿ ಪಡೆದ ಕೇಂದ್ರ BJP ಸಚಿವ ಭಾಗೀರಥ್ ಚೌಧರಿ

ಕೇಂದ್ರ ಕೃಷಿ ಖಾತೆ ರಾಜ್ಯ ಸಚಿವ ಭಾಗೀರಥ್ ಚೌಧರಿ ಅವರು ತಮ್ಮದೇ ಸಚಿವಾಲಯದ ವ್ಯಾಪ್ತಿಗೆ ಒರುವ ಯೋಜನೆಯಡಿ, ವಾಣಿಜ್ಯ ಸೌತೆಕಾಯಿ ಕೃಷಿ ಯೋಜನೆಗಾಗಿ 99.03 ಲಕ್ಷ ರೂ. ಸಬ್ಸಿಡಿ (ಸಹಾಯಧನ) ಪಡೆದಿರುವುದು ತನಿಖಾ...