Homeಮುಖಪುಟ'ವಕ್ಫ್‌ ಮಸೂದೆ' ಸಂವಿಧಾನವನ್ನು ದುರ್ಬಲಗೊಳಿಸುವ ಯತ್ನ: ಕೇಂದ್ರದ ವಿರುದ್ಧ ಗೌರವ್‌ ಗೊಗೊಯ್ ವಾಗ್ದಾಳಿ

‘ವಕ್ಫ್‌ ಮಸೂದೆ’ ಸಂವಿಧಾನವನ್ನು ದುರ್ಬಲಗೊಳಿಸುವ ಯತ್ನ: ಕೇಂದ್ರದ ವಿರುದ್ಧ ಗೌರವ್‌ ಗೊಗೊಯ್ ವಾಗ್ದಾಳಿ

- Advertisement -
- Advertisement -

ಬುಧವಾರ (ಏ.2) ಸಂಸತ್ತಿನಲ್ಲಿ ಮಂಡನೆಯಾದ ವಕ್ಫ್‌ ತಿದ್ದುಪಡಿ ಮಸೂದೆಯ ಕುರಿತು ಮಾತನಾಡಿದ ಲೋಕಸಭೆಯ ಪ್ರತಿಪಕ್ಷದ ಉಪ ನಾಯಕ ಹಾಗೂ ಕಾಂಗ್ರೆಸ್ ಸಂಸದ ಗೌರವ್ ಗೊಗೊಯ್ “ನರೇಂದ್ರ ಮೋದಿ ಸರ್ಕಾರದ ವಕ್ಫ್ ತಿದ್ದುಪಡಿ ಮಸೂದೆ ಮೂಲಕ ‘ಸಂವಿಧಾನವನ್ನು ದುರ್ಬಲಗೊಳಿಸಲು’ ಪ್ರಯತ್ನಿಸುತ್ತಿದೆ ಎಂದು ವಾಗ್ದಾಳಿ ನಡೆಸಿದರು.

“ಈ ಮಸೂದೆಯು ಸಂವಿಧಾನವನ್ನು ದುರ್ಬಲಗೊಳಿಸುವ, ಅಲ್ಪಸಂಖ್ಯಾತ ಸಮುದಾಯವನ್ನು ಅವಮಾನಿಸುವ, ಭಾರತೀಯ ಸಮಾಜವನ್ನು ವಿಭಜಿಸುವ ಮತ್ತು ಅಲ್ಪಸಂಖ್ಯಾತರ ಹಕ್ಕುಗಳನ್ನು ಕಸಿದುಕೊಳ್ಳುವ ಗುರಿಯನ್ನು ಹೊಂದಿದೆ” ಎಂದರು.

ಮಸೂದೆ ಕುರಿತ ಎಲ್ಲಾ ಪಕ್ಷಗಳ ಅಭಿಪ್ರಾಯಗಳನ್ನು ಪರಿಗಣಿಸಿ ಜಂಟಿ ಸಂಸದೀಯ ಸಮಿತಿಯಲ್ಲಿ (ಜೆಪಿಸಿ) ಚರ್ಚೆ ನಡೆದಿದೆ ಎಂಬ ಕೇಂದ್ರ ಗೃಹ ಸಚಿವ ಅಮಿತ್ ಶಾ ಮತ್ತು ಅಲ್ಪಸಂಖ್ಯಾತ ವ್ಯವಹಾರಗಳ ಸಚಿವ ಕಿರಣ್ ರಿಜಿಜು ಅವರ ಸಮರ್ಥನೆಯನ್ನು ತಿರಸ್ಕರಿಸಿದ ಗೊಗೊಯ್ “ನಿಮಯ ಪ್ರಕಾರ ಚರ್ಚೆ ನಡೆದಿಲ್ಲ” ಎಂದು ಹೇಳಿದರು.

ವಿರೋಧ ಪಕ್ಷಗಳು ಸೂಚಿಸಿದ ಒಂದೇ ಒಂದು ತಿದ್ದುಪಡಿಯನ್ನು ಅಂಗೀಕರಿಸಿಲ್ಲ. ಅಭಿಪ್ರಾಯ ಸಂಗ್ರಹಿಸುವಾಗ ವಕ್ಫ್‌ ಬಗ್ಗೆ ಮಾಹಿತಿ ಇಲ್ಲದವರನ್ನು ಜೆಪಿಸಿಗೆ ಆಹ್ವಾನಿಸಲಾಗಿದೆ ಎಂದರು.

ಸರ್ಕಾರವು ಭವಿಷ್ಯದಲ್ಲಿ ಇತರ ಅಲ್ಪಸಂಖ್ಯಾತರ ಮೇಲೂ ದಾಳಿ ನಡೆಸಲಿದೆ. ಇಂದು ಒಂದು ಸಮುದಾಯದ ಭೂಮಿಯನ್ನು ಗುರಿಯಾಗಿಸಿಕೊಂಡಿದ್ದಾರೆ; ನಾಳೆ ಇವರು ಇನ್ನೊಂದು ಸಮುದಾಯದ ಮೇಲೆ ದಾಳಿ ಮಾಡುತ್ತಾರೆ ಎಂದು ಗೊಗೊಯ್ ಎಚ್ಚರಿಸಿದರು.

ಇದಕ್ಕೂ ಮೊದಲು, ವಕ್ಫ್‌ ತಿದ್ದುಪಡಿ ಮಸೂದೆ ಮಂಡಿಸಿದ ಸಚಿವ ಕಿರಣ್‌ ರಿಜಿಜು “ಸಂವಿಧಾನದ 25(1) ನೇ ವಿಧಿಯಲ್ಲಿ ಉಲ್ಲೇಖಿಸಿರುವಂತೆ “ಧರ್ಮವನ್ನು ಪ್ರತಿಪಾದಿಸುವ, ಆಚರಿಸುವ ಮತ್ತು ಪ್ರಚಾರ ಮಾಡುವ” ಯಾರ ಸ್ವಾತಂತ್ರ್ಯದಲ್ಲೂ ನರೇಂದ್ರ ಮೋದಿ ಸರ್ಕಾರ ಹಸ್ತಕ್ಷೇಪ ಮಾಡುತ್ತಿಲ್ಲ” ಎಂದು ಹೇಳಿದರು.

“ಈ ಮಸೂದೆಯು ವಕ್ಫ್ ಆಸ್ತಿಗಳ ನಿರ್ವಹಣೆಗೆ ಸಂಬಂಧಿಸಿದೆ. ಇತರರ ಧರ್ಮಗಳಲ್ಲಿ ಹಸ್ತಕ್ಷೇಪ ಮಾಡುವುದಕ್ಕೂ ಇದಕ್ಕೂ ಯಾವುದೇ ಸಂಬಂಧವಿಲ್ಲ” ಎಂದು ರಿಜಿಜು ಸ್ಪಷ್ಟಪಡಿಸಿದರು.

ಒಬ್ಬ ವ್ಯಕ್ತಿ ಐದು ವರ್ಷಗಳ ಕಾಲ ಇಸ್ಲಾಂ ಧರ್ಮವನ್ನು ಪಾಲಿಸಿದ್ದರೆ ಮಾತ್ರ ಆಸ್ತಿಯನ್ನು ವಕ್ಫ್‌ ಮಾಡಲು ಅವರು ಅರ್ಹರು ಎಂಬ ಸಚಿವ ರಿಜಿಜು ಹೇಳಿಕೆಯನ್ನು ಪ್ರಶ್ನಿಸಿದ ಗೊಗೊಯ್ “ಇತರ ಧರ್ಮಗಳ ಜನರಿಗೆ ನೀವು ಐದು ವರ್ಷಗಳಿಂದ ಧರ್ಮ ಪಾಲಿಸುತ್ತಿದ್ದೀರಾ? ಎಂದು ಸರ್ಕಾರ ಪ್ರಮಾಣ ಪತ್ರ ಕೇಳುತ್ತದಯೇ? ಹೀಗಿರುವಾಗ ಈ ಮಸೂದೆಯಲ್ಲಿ ಮಾತ್ರ ಈ ಮಾನದಂಡವನ್ನು ಅಳವಡಿಸಲಾಗಿದೆ. ಸರ್ಕಾರ ಧರ್ಮದ ವಿಚಾರದಲ್ಲಿ ಏಕೆ ಹಸ್ತಕ್ಷೇಪ ಮಾಡುತ್ತಿದೆ ಎಂದು ಕೇಳಿದರು.

ಮಸೂದೆಯಲ್ಲಿ ಪ್ರಸ್ತಾಪಿಸಲಾದ ತಿದ್ದುಪಡಿಗಳು ಭಾರತದಲ್ಲಿ ಹೆಚ್ಚಿನ ಮೊಕದ್ದಮೆಗಳಿಗೆ ಕಾರಣವಾಗುತ್ತವೆ ಎಂದ ಗೊಗೊಯ್, ತಿದ್ದುಪಡಿಗಳು ಮಸೂದೆಯನ್ನು ಬಲಪಡಿಸುವ ಗುರಿಯನ್ನು ಹೊಂದಿರಬೇಕೇ ಹೊರತು, ಹೆಚ್ಚಿನ ವಿವಾದಗಳನ್ನು ಸೃಷ್ಟಿಸಬಾರದು ಎಂದರು.

ವಕ್ಫ್‌ ಮಸೂದೆ ವಿರುದ್ದ ಕಾನೂನು ಹೋರಾಟ: ಮುಸ್ಲಿಂ ವೈಯಕ್ತಿಕ ಕಾನೂನು ಮಂಡಳಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವೈದ್ಯೆ ವಂದನಾ ದಾಸ್ ಹತ್ಯೆ ಪ್ರಕರಣ; ಅಪರಾಧಿಗೆ ಜೀವಾವಧಿ ಶಿಕ್ಷೆ ವಿಧಿಸಿದ ಕೇರಳ ನ್ಯಾಯಾಲಯ

ಕೊಲ್ಲಂ: ಆಸ್ಪತ್ರೆಯಲ್ಲಿ ನಡೆದ ಡಾ. ವಂದನಾ ದಾಸ್ ಅವರ ಹತ್ಯೆ ಪ್ರಕರಣದಲ್ಲಿ ಶಿಕ್ಷೆಗೊಳಗಾದ ಅಪರಾಧಿ ಜಿ. ಸಂದೀಪ್ ಗೆ ಶನಿವಾರ ಜೀವಾವಧಿ ಶಿಕ್ಷೆ ವಿಧಿಸಲಾಗಿದ್ದು, ಆರೋಪಿಗೆ ಮರಣದಂಡನೆ ವಿಧಿಸುವಂತೆ ಕೋರಿ ಮೇಲ್ಮನವಿ ಸಲ್ಲಿಸುವುದಾಗಿ...

ಕಾಂಗ್ರೆಸ್, ರಾಹುಲ್ ಗಾಂಧಿ ಬಿಜೆಪಿಯ ಬಿ-ಟೀಮ್: ಕೇರಳ ಸಿಎಂ ಪಿಣರಾಯಿ ವಿಜಯನ್

ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರು ಶನಿವಾರ ಕಾಂಗ್ರೆಸ್ ಮತ್ತು ಅದರ ನಾಯಕ ರಾಹುಲ್ ಗಾಂಧಿ ಅವರನ್ನು ಟೀಕಿಸಿದ್ದು, ರಾಹುಲ್ ಗಾಂಧಿ ಮತ್ತು ಕಾಂಗ್ರೆಸ್ ಬಿಜೆಪಿಯ ಬಿ-ಟೀಮ್ ಎಂದು ಆರೋಪಿಸಿದ್ದಾರೆ.   ಕೇಂದ್ರೀಯ ಸಂಸ್ಥೆಗಳು ಕೇರಳ...

‘ಬಿಜೆಪಿ ಮತದಾನದ ಹಕ್ಕನ್ನು ಕಸಿದುಕೊಳ್ಳಲು ಬಿಡುವುದಿಲ್ಲ, ಕೊನೆಯವರೆಗೂ ಹೋರಾಡುತ್ತೇವೆ’; ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದಲ್ಲಿ ವಿಧಾನಸಭಾ ಚುನಾವಣೆಗೆ ಮುನ್ನ, ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರವು ಮತದಾರರ ಪಟ್ಟಿಯ ಪರಿಷ್ಕರಣೆಯ ಮೂಲಕ ಜನರ "ಮತದಾನದ ಹಕ್ಕನ್ನು ಕಸಿದುಕೊಳ್ಳಲು" ಪ್ರಯತ್ನಿಸುತ್ತಿದೆ ಎಂದು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಆರೋಪಿಸಿದ್ದಾರೆ.  "ಮೋದಿ ಜಿ...

ಏಳು ವರ್ಷಗಳ ನಂತರ ಯುಎಪಿಎ ಪ್ರಕರಣದಲ್ಲಿ ಇಬ್ಬರು ಕಾಶ್ಮೀರಿ ಯುವಕರನ್ನು ಖುಲಾಸೆಗೊಳಿಸಿದ ದೆಹಲಿ ನ್ಯಾಯಾಲಯ

ಏಳು ವರ್ಷಗಳಿಗೂ ಹೆಚ್ಚು ಕಾಲದ ನಂತರ, ಕಾನೂನುಬಾಹಿರ ಚಟುವಟಿಕೆಗಳ ತಡೆ ಕಾಯ್ದೆಯಡಿ ಬಂಧಿಸಲ್ಪಟ್ಟ ಇಬ್ಬರು ಕಾಶ್ಮೀರಿ ಯುವಕರನ್ನು ಗುರುವಾರ ದೆಹಲಿ ನ್ಯಾಯಾಲಯವು ಖುಲಾಸೆಗೊಳಿಸಿದೆ.  ಪ್ರಾಸಿಕ್ಯೂಷನ್ ತನ್ನ ಆರೋಪಗಳನ್ನು ಸಾಬೀತುಪಡಿಸಲು ವಿಫಲವಾಗಿದೆ ಮತ್ತು ದೆಹಲಿ ಪೊಲೀಸರು...

‘ನಾವು ಯುದ್ಧವನ್ನು ಶಾಶ್ವತವಾಗಿ ಕೊನೆಗೊಳಿಸಲು ಪ್ರಯತ್ನಿಸುತ್ತೇವೆ’; ಇರಾನ್ ವಿದೇಶಾಂಗ ಸಚಿವ ಅಬ್ಬಾಸ್ ಅರಗ್ಚಿ: ವರದಿ

ಟೆಹ್ರಾನ್: ಇಸ್ರೇಲ್ ಮತ್ತು ಅಮೆರಿಕದ ದಾಳಿಗಳ ನಂತರ ಇರಾನ್‌ನ ಉನ್ನತ ಅಧಿಕಾರಿಗಳು ಮತ್ತು ಮಾಜಿ ಸುಪ್ರೀಂ ನಾಯಕ ಅಯತೊಲ್ಲಾ ಅಲಿ ಖಮೇನಿ ಸೇರಿದಂತೆ ಸಾವಿರಾರು ಜನರು ಸಾವನ್ನಪ್ಪಿದ ನಂತರ, ಪಶ್ಚಿಮ ಏಷ್ಯಾದಲ್ಲಿ ನಡೆಯುತ್ತಿರುವ...

‘ಅಮೆರಿಕ ಇಲ್ಲದೆ, ನ್ಯಾಟೋ ಒಂದು ಕಾಗದದ ಹುಲಿ’: ಅಟ್ಲಾಂಟಿಕ್ ಮೈತ್ರಿಕೂಟದ ದೇಶಗಳನ್ನು ‘ಹೇಡಿಗಳು’ ಎಂದ ಡೊನಾಲ್ಡ್ ಟ್ರಂಪ್  

ಇರಾನ್ ವಿರುದ್ಧದ ಅಮೆರಿಕ - ಇಸ್ರೇಲ್ ಯುದ್ಧಕ್ಕೆ ಬೆಂಬಲ ನೀಡದ ನ್ಯಾಟೋ ಮಿತ್ರರಾಷ್ಟ್ರಗಳ ವಿರುದ್ಧ ಶುಕ್ರವಾರ ವಾಗ್ದಾಳಿ ನಡೆಸಿದ ಅಧ್ಯಕ್ಷ ಡೊನಾಲ್ಡ್ ಟ್ರಂಪ್, ದೀರ್ಘಕಾಲದ ಅಮೆರಿಕದ ಮಿತ್ರರಾಷ್ಟ್ರಗಳನ್ನು "ಹೇಡಿಗಳು" ಎಂದು ಕರೆದಿದ್ದಾರೆ. "ಯುಎಸ್ಎ ಇಲ್ಲದೆ,...

ಮುಖ್ಯಮಂತ್ರಿಗಳಿಗೆ ವರ್ಗಾವಣೆಗಳಲ್ಲಿ ಹಸ್ತಕ್ಷೇಪ ಮಾಡುವುದಕ್ಕಿಂತ ಮಹತ್ವದ ಕೆಲಸವಿದೆ: ಕರ್ನಾಟಕ ಹೈಕೋರ್ಟ್ 

ಸರ್ಕಾರಿ ನೌಕರರ ವರ್ಗಾವಣೆ ಮತ್ತು ನೇಮಕಾತಿಗಳಲ್ಲಿ ಹಸ್ತಕ್ಷೇಪ ಮಾಡುವುದಕ್ಕಿಂತ ಮುಖ್ಯಮಂತ್ರಿಗಳು ನಿರ್ವಹಿಸಬೇಕಾದ ಕೆಲಸ ಉತ್ತಮ ಮತ್ತು ಹೆಚ್ಚು ಮುಖ್ಯವಾದುದು ಎಂದು ಕರ್ನಾಟಕ ಹೈಕೋರ್ಟ್ ಇತ್ತೀಚಿನ ತೀರ್ಪೊಂದರಲ್ಲಿ ಹೇಳಿದೆ.  ಬೆಸ್ಕಾಂ ಎಂಜಿನಿಯರ್ ವರ್ಗಾವಣೆಗೆ ಸಂಬಂಧಿಸಿದಂತೆ ಮುಖ್ಯಮಂತ್ರಿ...

ಪಶ್ಚಿಮ ಏಷ್ಯಾ ಸಂಘರ್ಷ: ಪ್ರತ್ಯೇಕ ಘಟನೆಗಳಲ್ಲಿ ಈವರೆಗೆ ಆರು ಭಾರತೀಯರ ಸಾವು, ಒಬ್ಬರು ಕಾಣೆ; ವಿದೇಶಾಂಗ ಸಚಿವಾಲಯ ಮಾಹಿತಿ

ಪಶ್ಚಿಮ ಏಷ್ಯಾ ಸಂಘರ್ಷದ ಮಧ್ಯೆ ಗಲ್ಫ್ ಪ್ರದೇಶದಾದ್ಯಂತ ನಡೆದ ಪ್ರತ್ಯೇಕ ಘಟನೆಗಳಲ್ಲಿ ಆರು ಭಾರತೀಯ ಪ್ರಜೆಗಳು ಪ್ರಾಣ ಕಳೆದುಕೊಂಡಿದ್ದಾರೆ ಮತ್ತು ಒಬ್ಬರು ಕಾಣೆಯಾಗಿದ್ದಾರೆ ಎಂದು ವಿದೇಶಾಂಗ ಸಚಿವಾಲಯ (MEA) ಶುಕ್ರವಾರ ತಿಳಿಸಿದೆ.  ಭಾರತೀಯ ಕಾರ್ಯಾಚರಣೆಗಳು...

ಅಮೆರಿಕ-ಇಸ್ರೇಲ್ ದಾಳಿಯಲ್ಲಿ ಇರಾನ್‌ನ ಮತ್ತೊಬ್ಬ ನಾಯಕ, ಐಆರ್‌ಜಿಸಿ ವಕ್ತಾರ ಅಲಿ ಮೊಹಮ್ಮದ್ ನೈನಿ ಸಾವು

ಟೆಹ್ರಾನ್: ಇಸ್ರೇಲಿ-ಅಮೆರಿಕನ್ ಕ್ಷಿಪಣಿ ದಾಳಿಯಲ್ಲಿ ಇರಾನ್ ವಕ್ತಾರ ಜನರಲ್ ಅಲಿ ಮೊಹಮ್ಮದ್ ನೈನಿ ಸಾವನ್ನಪ್ಪಿದ್ದಾರೆ ಎಂದು ಇಸ್ಲಾಮಿಕ್ ರೆವಲ್ಯೂಷನರಿ ಗಾರ್ಡ್ ಕಾರ್ಪ್ಸ್ (IRGC) ಶುಕ್ರವಾರ ದೃಢಪಡಿಸಿದೆ. ಸರ್ಕಾರಿ ಸ್ವಾಮ್ಯದ ತಸ್ನಿಮ್ ಸುದ್ದಿ ಸಂಸ್ಥೆ...

ಶಿವಮೊಗ್ಗ: ಚಿಕಿತ್ಸೆ ನೀಡಲು ತೆರಳಿದ್ದ ವೇಳೆ ನೀರಾನೆ ದಾಳಿ; 26 ವರ್ಷದ ಪಶುವೈದ್ಯೆ ಸಾವು

ಶಿವಮೊಗ್ಗದ ತ್ಯಾವರೆಕೊಪ್ಪ ಸಿಂಹ ಮತ್ತು ಹುಲಿ ಸಫಾರಿ ಮೃಗಾಲಯದಲ್ಲಿ ಗುರುವಾರ ತಡರಾತ್ರಿ ನೀರಾನೆ ದಾಳಿಗೆ ಒಳಗಾಗಿದ್ದ 26 ವರ್ಷದ ತರಬೇತಿ ವನ್ಯಜೀವಿ ಪಶುವೈದ್ಯೆ ಸಮೀಕ್ಷಾ ರೆಡ್ಡಿ ಶುಕ್ರವಾರ ಬೆಳಿಗ್ಗೆ ಮೃತಪಟ್ಟಿದ್ದಾರೆ. ಬೆಂಗಳೂರಿನ ಬನ್ನೇರುಘಟ್ಟದವರಾದ ಸಮೀಕ್ಷಾ,...