Homeಮುಖಪುಟ'ವಕ್ಫ್‌ ಮಸೂದೆ' ಸಂವಿಧಾನವನ್ನು ದುರ್ಬಲಗೊಳಿಸುವ ಯತ್ನ: ಕೇಂದ್ರದ ವಿರುದ್ಧ ಗೌರವ್‌ ಗೊಗೊಯ್ ವಾಗ್ದಾಳಿ

‘ವಕ್ಫ್‌ ಮಸೂದೆ’ ಸಂವಿಧಾನವನ್ನು ದುರ್ಬಲಗೊಳಿಸುವ ಯತ್ನ: ಕೇಂದ್ರದ ವಿರುದ್ಧ ಗೌರವ್‌ ಗೊಗೊಯ್ ವಾಗ್ದಾಳಿ

- Advertisement -
- Advertisement -

ಬುಧವಾರ (ಏ.2) ಸಂಸತ್ತಿನಲ್ಲಿ ಮಂಡನೆಯಾದ ವಕ್ಫ್‌ ತಿದ್ದುಪಡಿ ಮಸೂದೆಯ ಕುರಿತು ಮಾತನಾಡಿದ ಲೋಕಸಭೆಯ ಪ್ರತಿಪಕ್ಷದ ಉಪ ನಾಯಕ ಹಾಗೂ ಕಾಂಗ್ರೆಸ್ ಸಂಸದ ಗೌರವ್ ಗೊಗೊಯ್ “ನರೇಂದ್ರ ಮೋದಿ ಸರ್ಕಾರದ ವಕ್ಫ್ ತಿದ್ದುಪಡಿ ಮಸೂದೆ ಮೂಲಕ ‘ಸಂವಿಧಾನವನ್ನು ದುರ್ಬಲಗೊಳಿಸಲು’ ಪ್ರಯತ್ನಿಸುತ್ತಿದೆ ಎಂದು ವಾಗ್ದಾಳಿ ನಡೆಸಿದರು.

“ಈ ಮಸೂದೆಯು ಸಂವಿಧಾನವನ್ನು ದುರ್ಬಲಗೊಳಿಸುವ, ಅಲ್ಪಸಂಖ್ಯಾತ ಸಮುದಾಯವನ್ನು ಅವಮಾನಿಸುವ, ಭಾರತೀಯ ಸಮಾಜವನ್ನು ವಿಭಜಿಸುವ ಮತ್ತು ಅಲ್ಪಸಂಖ್ಯಾತರ ಹಕ್ಕುಗಳನ್ನು ಕಸಿದುಕೊಳ್ಳುವ ಗುರಿಯನ್ನು ಹೊಂದಿದೆ” ಎಂದರು.

ಮಸೂದೆ ಕುರಿತ ಎಲ್ಲಾ ಪಕ್ಷಗಳ ಅಭಿಪ್ರಾಯಗಳನ್ನು ಪರಿಗಣಿಸಿ ಜಂಟಿ ಸಂಸದೀಯ ಸಮಿತಿಯಲ್ಲಿ (ಜೆಪಿಸಿ) ಚರ್ಚೆ ನಡೆದಿದೆ ಎಂಬ ಕೇಂದ್ರ ಗೃಹ ಸಚಿವ ಅಮಿತ್ ಶಾ ಮತ್ತು ಅಲ್ಪಸಂಖ್ಯಾತ ವ್ಯವಹಾರಗಳ ಸಚಿವ ಕಿರಣ್ ರಿಜಿಜು ಅವರ ಸಮರ್ಥನೆಯನ್ನು ತಿರಸ್ಕರಿಸಿದ ಗೊಗೊಯ್ “ನಿಮಯ ಪ್ರಕಾರ ಚರ್ಚೆ ನಡೆದಿಲ್ಲ” ಎಂದು ಹೇಳಿದರು.

ವಿರೋಧ ಪಕ್ಷಗಳು ಸೂಚಿಸಿದ ಒಂದೇ ಒಂದು ತಿದ್ದುಪಡಿಯನ್ನು ಅಂಗೀಕರಿಸಿಲ್ಲ. ಅಭಿಪ್ರಾಯ ಸಂಗ್ರಹಿಸುವಾಗ ವಕ್ಫ್‌ ಬಗ್ಗೆ ಮಾಹಿತಿ ಇಲ್ಲದವರನ್ನು ಜೆಪಿಸಿಗೆ ಆಹ್ವಾನಿಸಲಾಗಿದೆ ಎಂದರು.

ಸರ್ಕಾರವು ಭವಿಷ್ಯದಲ್ಲಿ ಇತರ ಅಲ್ಪಸಂಖ್ಯಾತರ ಮೇಲೂ ದಾಳಿ ನಡೆಸಲಿದೆ. ಇಂದು ಒಂದು ಸಮುದಾಯದ ಭೂಮಿಯನ್ನು ಗುರಿಯಾಗಿಸಿಕೊಂಡಿದ್ದಾರೆ; ನಾಳೆ ಇವರು ಇನ್ನೊಂದು ಸಮುದಾಯದ ಮೇಲೆ ದಾಳಿ ಮಾಡುತ್ತಾರೆ ಎಂದು ಗೊಗೊಯ್ ಎಚ್ಚರಿಸಿದರು.

ಇದಕ್ಕೂ ಮೊದಲು, ವಕ್ಫ್‌ ತಿದ್ದುಪಡಿ ಮಸೂದೆ ಮಂಡಿಸಿದ ಸಚಿವ ಕಿರಣ್‌ ರಿಜಿಜು “ಸಂವಿಧಾನದ 25(1) ನೇ ವಿಧಿಯಲ್ಲಿ ಉಲ್ಲೇಖಿಸಿರುವಂತೆ “ಧರ್ಮವನ್ನು ಪ್ರತಿಪಾದಿಸುವ, ಆಚರಿಸುವ ಮತ್ತು ಪ್ರಚಾರ ಮಾಡುವ” ಯಾರ ಸ್ವಾತಂತ್ರ್ಯದಲ್ಲೂ ನರೇಂದ್ರ ಮೋದಿ ಸರ್ಕಾರ ಹಸ್ತಕ್ಷೇಪ ಮಾಡುತ್ತಿಲ್ಲ” ಎಂದು ಹೇಳಿದರು.

“ಈ ಮಸೂದೆಯು ವಕ್ಫ್ ಆಸ್ತಿಗಳ ನಿರ್ವಹಣೆಗೆ ಸಂಬಂಧಿಸಿದೆ. ಇತರರ ಧರ್ಮಗಳಲ್ಲಿ ಹಸ್ತಕ್ಷೇಪ ಮಾಡುವುದಕ್ಕೂ ಇದಕ್ಕೂ ಯಾವುದೇ ಸಂಬಂಧವಿಲ್ಲ” ಎಂದು ರಿಜಿಜು ಸ್ಪಷ್ಟಪಡಿಸಿದರು.

ಒಬ್ಬ ವ್ಯಕ್ತಿ ಐದು ವರ್ಷಗಳ ಕಾಲ ಇಸ್ಲಾಂ ಧರ್ಮವನ್ನು ಪಾಲಿಸಿದ್ದರೆ ಮಾತ್ರ ಆಸ್ತಿಯನ್ನು ವಕ್ಫ್‌ ಮಾಡಲು ಅವರು ಅರ್ಹರು ಎಂಬ ಸಚಿವ ರಿಜಿಜು ಹೇಳಿಕೆಯನ್ನು ಪ್ರಶ್ನಿಸಿದ ಗೊಗೊಯ್ “ಇತರ ಧರ್ಮಗಳ ಜನರಿಗೆ ನೀವು ಐದು ವರ್ಷಗಳಿಂದ ಧರ್ಮ ಪಾಲಿಸುತ್ತಿದ್ದೀರಾ? ಎಂದು ಸರ್ಕಾರ ಪ್ರಮಾಣ ಪತ್ರ ಕೇಳುತ್ತದಯೇ? ಹೀಗಿರುವಾಗ ಈ ಮಸೂದೆಯಲ್ಲಿ ಮಾತ್ರ ಈ ಮಾನದಂಡವನ್ನು ಅಳವಡಿಸಲಾಗಿದೆ. ಸರ್ಕಾರ ಧರ್ಮದ ವಿಚಾರದಲ್ಲಿ ಏಕೆ ಹಸ್ತಕ್ಷೇಪ ಮಾಡುತ್ತಿದೆ ಎಂದು ಕೇಳಿದರು.

ಮಸೂದೆಯಲ್ಲಿ ಪ್ರಸ್ತಾಪಿಸಲಾದ ತಿದ್ದುಪಡಿಗಳು ಭಾರತದಲ್ಲಿ ಹೆಚ್ಚಿನ ಮೊಕದ್ದಮೆಗಳಿಗೆ ಕಾರಣವಾಗುತ್ತವೆ ಎಂದ ಗೊಗೊಯ್, ತಿದ್ದುಪಡಿಗಳು ಮಸೂದೆಯನ್ನು ಬಲಪಡಿಸುವ ಗುರಿಯನ್ನು ಹೊಂದಿರಬೇಕೇ ಹೊರತು, ಹೆಚ್ಚಿನ ವಿವಾದಗಳನ್ನು ಸೃಷ್ಟಿಸಬಾರದು ಎಂದರು.

ವಕ್ಫ್‌ ಮಸೂದೆ ವಿರುದ್ದ ಕಾನೂನು ಹೋರಾಟ: ಮುಸ್ಲಿಂ ವೈಯಕ್ತಿಕ ಕಾನೂನು ಮಂಡಳಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...