Homeಮುಖಪುಟದೆಹಲಿಯಿಂದ ಕಾಲ್ನಡಿಗೆಯಲ್ಲಿ ಹೊರಟಿದ್ದ ವ್ಯಕ್ತಿ ಸಾವು

ದೆಹಲಿಯಿಂದ ಕಾಲ್ನಡಿಗೆಯಲ್ಲಿ ಹೊರಟಿದ್ದ ವ್ಯಕ್ತಿ ಸಾವು

- Advertisement -
- Advertisement -

ಕೊರೊನ ವೈರಸ್ ಹರಡುವುದನ್ನು ತಡೆಯಲು ಪ್ರಧಾನಿ ನರೇಂದ್ರ ಮೋದಿ 21 ದಿನಗಳ ಲಾಕ್ ಡೌನ್ ಘೋಷಿಸಿದ ನಂತರ ಮಧ್ಯಪ್ರದೇಶದ ತಮ್ಮ ಮನೆಗೆ ತಲುಪಲು ದೆಹಲಿಯಿಂದ 200 ಕಿ.ಮೀ ನಡೆದು ಬಂದ 38 ವರ್ಷದ ವ್ಯಕ್ತಿ ದಾರಿಯಲ್ಲಿ ಸಾವನ್ನಪ್ಪಿದ್ದಾರೆ.

ದೆಹಲಿಯಲ್ಲಿ ಡೆಲಿವರಿ ಏಜೆಂಟ್ ಆಗಿ ಕೆಲಸ ಮಾಡುತ್ತಿದ್ದ ರಣವೀರ್ ಸಿಂಗ್, ಲಾಕ್‌ಡೌನ್‌ನಿಂದಾಗಿ ಉದ್ಯೋಗ, ವಸತಿ ಹಾಗೂ ಹಣವಿಲ್ಲದೆ ಸಾವಿರಾರು ವಲಸಿಗರ ಜೊತೆ ತಮ್ಮ ಹಳ್ಳಿಗೆ ಹೊರಟಿದ್ದರು. ಕೊರೊನ ವೈರಸ್ ಹರಡುವುದನ್ನು ತಡೆಯುವ ಉದ್ದೇಶದಿಂದ ರೈಲುಗಳು ಮತ್ತು ಅಂತರರಾಜ್ಯ ಬಸ್ಸುಗಳು ಸೇರಿದಂತೆ ಎಲ್ಲಾ ಸಾರಿಗೆ ಸೇವೆಗಳು ಸ್ಥಗಿತಗೊಂಡಿರುವುದರಿಂದ ಹೆಚ್ಚಿನ ಜನರು ಕಾಲ್ನಡಿಗೆಯಲ್ಲೆ ನೂರಾರು ಕಿಲೋಮೀಟರ್ ಪ್ರಯಾಣ ಮಾಡುತ್ತಿದ್ದಾರೆ.

ರಣವೀರ್ ಸಿಂಗ್ ದೆಹಲಿಯಿಂದ 326 ಕಿ.ಮೀ ದೂರದಲ್ಲಿರುವ ಮಧ್ಯಪ್ರದೇಶದ ಮೊರೆನಾ ಜಿಲ್ಲೆಯ ತಮ್ಮ ಗ್ರಾಮಕ್ಕೆ ನಡೆಯಲು ಪ್ರಾರಂಭಿಸಿದ್ದರು.

ಉತ್ತರ ಪ್ರದೇಶದ ಆಗ್ರಾದ ಹೆದ್ದಾರಿಯಲ್ಲಿ ಕುಸಿದುಬಿದ್ದಾಗ, ಸ್ಥಳೀಯರು ಅವರನ್ನು ಉಪಚರಿಸಿದರಾದರು ರಣವೀರ್ ಸಿಂಗ್ ಹೃದಯಾಘಾತವಾಗಿ ತೀರಿಕೊಂಡರು. ಈ ಸಮಯದಲ್ಲಿ ಅವರು ತನ್ನ ಹಳ್ಳಿಯಿಂದ ಸುಮಾರು 80 ಕಿ.ಮೀ ದೂರದಲ್ಲಿದ್ದರು.

ಶನಿವಾರ ಸಂಜೆಯಿಮದ, ಉತ್ತರ ಪ್ರದೇಶದ ಗಡಿಯುದ್ದಕ್ಕೂ ಮನೆಗೆ ತೆರಳಲು ಹತಾಶವಾಗಿ ಪ್ರಯತ್ನಿಸುತ್ತಿರುವ ಸಾವಿರಾರು ವಲಸೆ ಕಾರ್ಮಿಕರು ದೆಹಲಿಯ ಬಸ್ ಟರ್ಮಿನಲ್‌ಗಳಲ್ಲಿ ತುಂಬಿ ತುಳುಕುತ್ತಿದ್ದರು.

ಉತ್ತರ ಪ್ರದೇಶ ಮತ್ತು ದೆಹಲಿ ಸರ್ಕಾರಗಳು ಶನಿವಾರ ಪ್ರತಿಕ್ರಿಯಿಸಿ ಜನರನ್ನು ಮನೆಗೆ ಕರೆದೊಯ್ಯಲು ಬಸ್ಸುಗಳನ್ನು ಸಜ್ಜುಗೊಳಿಸಿದೆ; ಯುಪಿ ಸರ್ಕಾರ 1,000 ಬಸ್ಸುಗಳನ್ನು ಆಯೋಜಿಸಿದೆ ಎಂದು ಹೇಳಿದೆ. ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ 200 ಬಸ್ಸುಗಳನ್ನು ಸೇವೆಗೆ ಆಯೋಜಿಸಲಾಗುವುದು ಎಂದು ಹೇಳಿದ್ದಾರೆ.

ಜಾಗತಿಕವಾಗಿ ಕೊರೊನ ವೈರಸ್ ಸ್ಪೋಟಗೊಂಡ ಎರಡು ತಿಂಗಳ ನಂತರ ಭಾರತ ಸರಕಾರ ಹಠಾತ್ತನೆ, ಯೋಜನೆ ಇಲ್ಲದೆ ಲಾಕ್‌ಡೌನ್ ಘೋಷಿಸಿದ್ದಾರೆ ಇದರಿಂದಾಗಿ ಲಕ್ಷಾಂತರ ಜನರು ಸಿಕ್ಕಿಹಾಕಿಕೊಂಡಿದ್ದಾರಲ್ಲದೆ ಆಹಾರ ಮತ್ತು ಮೂಲಭೂತ ಅವಶ್ಯಕತೆಗಳ ಬಗ್ಗೆ ಆತಂಕವನ್ನು ಉಂಟುಮಾಡಿದೆ ಎಂದು ಕೇಂದ್ರ ಸರ್ಕಾರ ಟೀಕೆಗಳನ್ನು ಎದುರಿಸಿದೆ. ಆದರೆ ಕೇಂದ್ರ ಸರ್ಕಾರ ಈ ಟೀಕೆಗಳನ್ನು ನಿರಾಕರಿಸಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ನಿವೃತ್ತ ನ್ಯಾಯಮೂರ್ತಿ ಸಂತೋಷ್‌ ಹೆಗ್ಡೆ ಆಸ್ಪತ್ರೆಗೆ ದಾಖಲು; ಕಾರ್ಯಕ್ರಮದಲ್ಲಿ ಏಕಾಏಕಿ ಕುಸಿದು ಬಿದ್ದು ಅಸ್ವಸ್ಥ

ಬೆಂಗಳೂರು: ಕರ್ನಾಟಕದ ನಿವೃತ್ತ ಲೋಕಾಯುಕ್ತ ಎನ್‌.ಸಂತೋಷ್‌ ಹೆಗ್ಡೆ ಅವರ ಆರೋಗ್ಯದಲ್ಲಿ ಏರುಪೇರು ಉಂಟಾಗಿದ್ದು, ಭಾಷಣದ ವೇಳೆ ಕುಸಿದು ಬಿದ್ದು ಅಸ್ವಸ್ಥರಾಗಿದ್ದ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಏಪ್ರಿಲ್ 4ರ, ಶುಕ್ರವಾರ ಬೆಂಗಳೂರಿನ ಕೊಂಡಜಿ ಬಸಪ್ಪ ಸಭಾಂಗಣದಲ್ಲಿ...

ಎಸ್‌ಎಸ್‌ಎಲ್‌ಸಿಯಲ್ಲಿ ತೃತೀಯ ಭಾಷೆಗೆ ಗ್ರೇಡ್: ನಿರ್ಧಾರ ಪರಿಶೀಲಿಸುವಂತೆ ರಾಜ್ಯ ಸರ್ಕಾರಕ್ಕೆ ಸೂಚಿಸಿದ ರಾಜ್ಯಪಾಲ ಗೆಹ್ಲೋಟ್ 

ಬೆಂಗಳೂರು: 10ನೇ ತರಗತಿ ಪರೀಕ್ಷೆಯಲ್ಲಿ ತೃತೀಯ ಭಾಷೆಯ ವಿಷಯಕ್ಕೆ ಅಂಕಗಳನ್ನು ಬದಲಿಸುವ ನಿರ್ಧಾರವನ್ನು ಮರುಪರಿಶೀಲಿಸುವಂತೆ ಕರ್ನಾಟಕ ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್ ರಾಜ್ಯ ಸರ್ಕಾರವನ್ನು ಕೇಳಿದ್ದಾರೆ. ಸರ್ಕಾರವು ಈ ನಿರ್ಧಾರವನ್ನು "ಸಮಗ್ರವಾಗಿ ಪರಿಶೀಲಿಸಬೇಕು" ಎಂದು ಲೋಕಭವನವು...

ತಿರುಚ್ಚಿ ಪೂರ್ವದ ಪೆರಂಬೂರಿನಲ್ಲಿ ಟಿವಿಕೆ ಸಂಸ್ಥಾಪಕ ವಿಜಯ್ ಸಲ್ಲಿಸಿದ ಅಫಿಡವಿಟ್‌ಗಳಲ್ಲಿ ಹಲವು ವ್ಯತ್ಯಾಸಗಳಿರುವುದಾಗಿ ವರದಿ  

ಚೆನ್ನೈ: ನಟ ಮತ್ತು ಟಿವಿಕೆ ಸಂಸ್ಥಾಪಕ ವಿಜಯ್ ಸಲ್ಲಿಸಿದ ಎರಡು ಪ್ರತ್ಯೇಕ ಚುನಾವಣಾ ಅಫಿಡವಿಟ್‌ಗಳಲ್ಲಿ ವ್ಯತ್ಯಾಸಗಳು ಕಾಣಿಸಿಕೊಂಡಿದ್ದು, ವಿಧಾನಸಭಾ ಚುನಾವಣೆಗೆ ಮುನ್ನ ಕಾನೂನು ಮತ್ತು ರಾಜಕೀಯ ಪರಿಶೀಲನೆಗೆ ಅವಕಾಶ ನೀಡುವ ಸಾಧ್ಯತೆಯಿದೆ. ಪೆರಂಬೂರು ಮತ್ತು...

ಉತ್ತಮ್ ನಗರದಲ್ಲಿ ಶಾಂತಿ ಕಾಪಾಡುವಲ್ಲಿ ದೆಹಲಿ ಪೊಲೀಸರ ಪ್ರಯತ್ನಗಳನ್ನು ಶ್ಲಾಘಿಸಿದ ಎಪಿಸಿಆರ್

ಈದ್ ಅಲ್-ಫಿತರ್, ರಾಮ ನವಮಿ ಮತ್ತು ಹನುಮಾನ್ ಜಯಂತಿ ಸೇರಿದಂತೆ ಧಾರ್ಮಿಕ ಹಬ್ಬಗಳ ಆಚರಣೆಯ ಸಂದರ್ಭದಲ್ಲಿ ರಾಷ್ಟ್ರ ರಾಜಧಾನಿಯ ಉತ್ತಮ್ ನಗರ ಪ್ರದೇಶದಲ್ಲಿ ಶಾಂತಿ ಮತ್ತು ಭದ್ರತೆಯನ್ನು ಕಾಪಾಡಿದ್ದಕ್ಕಾಗಿ ನಾಗರಿಕ ಹಕ್ಕುಗಳ ರಕ್ಷಣಾ...

ದಲಿತ ಸಮುದಾಯಕ್ಕೆ ಕ್ಷಮೆಯಾಚಿಸಿದ ನೇಪಾಳದ ಹೊಸ ಸರ್ಕಾರ

ಪ್ರಧಾನಿ ಬಾಲೇಂದ್ರ ಶಾ ಅವರ ನೇಪಾಳದ ಹೊಸ ಸರ್ಕಾರದ 100 ಅಂಶಗಳ ಸುಧಾರಣಾ ಕಾರ್ಯಸೂಚಿಯಡಿಯಲ್ಲಿ, ಮುಂದಿನ 15 ದಿನಗಳ ಒಳಗೆ ದಲಿತರು ಮತ್ತು ಐತಿಹಾಸಿಕವಾಗಿ ಹೊರಗಿಡಲ್ಪಟ್ಟ ಇತರೆ ಸಮುದಾಯಗಳಿಗೆ 'ಔಪಚಾರಿಕ ಕ್ಷಮೆಯಾಚನೆ' ಕೇಳುವುದಾಗಿ...

‘ಯಾರು ಹೆದರುತ್ತಾನೋ ಅವನು ಸತ್ತಂತೆ’: ರಾಘವ್ ಛಡ್ಡಾಗೆ ತೀವ್ರವಾಗಿ ಪ್ರತಿಕ್ರಿಯೆ ನೀಡಿದ ಎಎಪಿ ನಾಯಕ ಸೌರಭ್ ಭಾರದ್ವಾಜ್ 

ಆಮ್ ಆದ್ಮಿ ಪಕ್ಷದ (ಎಎಪಿ) ನಾಯಕ ಮತ್ತು ದೆಹಲಿ ಘಟಕದ ಮುಖ್ಯಸ್ಥ ಸೌರಭ್ ಭಾರದ್ವಾಜ್ ಅವರು ವೀಡಿಯೊ ಸಂದೇಶದಲ್ಲಿ ಆಪ್ ಸಂಸದ ರಾಘವ್ ಛಡ್ಡಾ ಅವರು ಸಂಸತ್ತಿನಲ್ಲಿ "ಸಾಫ್ಟ್ ಪಿಆರ್" ನಲ್ಲಿ ತೊಡಗಿದ್ದಾರೆ...

ಚಂಡೀಗಢ ಬಿಜೆಪಿ ಕಚೇರಿ ಸ್ಫೋಟ: ಪಂಜಾಬ್ ಕೌಂಟರ್ ಇಂಟೆಲಿಜೆನ್ಸ್ ಪಡೆಯಿಂದ ಇಬ್ಬರು ಶಂಕಿತರ ಮನೆಗಳ ಮೇಲೆ ದಾಳಿ

ಚಂಡೀಗಢದಲ್ಲಿರುವ ಪಂಜಾಬ್ ಬಿಜೆಪಿ ಕಚೇರಿಯ ಹೊರಗೆ ಸ್ಫೋಟ ನಡೆಸಿದ ಆರೋಪದ ಮೇಲೆ ಇಬ್ಬರು ಶಂಕಿತರ ಮನೆಗಳ ಮೇಲೆ  ಪಂಜಾಬ್ ಪೊಲೀಸರ ಗುಪ್ತಚರ ನಿಗ್ರಹ ದಳವು ಇಂದು ಮುಂಜಾನೆ ದಾಳಿ ನಡೆಸಿದೆ.  ರೋಪರ್ ಜಿಲ್ಲೆಯ ಮೊರಿಂಡಾ ಪ್ರದೇಶದ...

‘ನನ್ನ ಮೌನವನ್ನು ಸೋಲು ಎಂದು ತಿಳಿಯಬೇಡಿ’’: ರಾಜ್ಯಸಭೆಯಲ್ಲಿ ಪದಚ್ಯುತಿಯ ನಂತರ ಎಎಪಿಗೆ ತಿರಗೇಟು ನೀಡಿದ ಸಂಸದ ರಾಘವ್ ಛಡ್ಡಾ

ರಾಜ್ಯಸಭೆಯಲ್ಲಿ ಪಕ್ಷದ ಉಪ ನಾಯಕನ ಸ್ಥಾನದಿಂದ ತೆಗೆದುಹಾಕಲ್ಪಟ್ಟ ಒಂದು ದಿನದ ನಂತರ ಆಮ್ ಆದ್ಮಿ ಪಕ್ಷದ ಸಂಸದ ರಾಘವ್ ಛಡ್ಡಾ ಅವರು ಶುಕ್ರವಾರ "ನನ್ನ ಬಾಯಿ ಮುಚ್ಚಿಸಬಹುದು, ಸೋಲಿಸಲು ಸಾಧ್ಯವಿಲ್ಲ" ಎಂದು ಹೇಳಿದ್ದಾರೆ. ಪಕ್ಷದ...

ಮಾಲ್ಡಾ ನ್ಯಾಯಾಂಗ ಅಧಿಕಾರಿಗಳ ಘೇರಾವ್ ಪ್ರಕರಣದಲ್ಲಿ 17 ಜನರ ಬಂಧನ: ತನಿಖೆಯನ್ನು ಎನ್‌ಐಎಗೆ ಹಸ್ತಾಂತರಿಸಿದ ಇಸಿ

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಮಾಲ್ಡಾ ಜಿಲ್ಲೆಯಲ್ಲಿ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಅಳಿಸಿಹಾಕಿದ್ದಕ್ಕಾಗಿ ಏಳು ನ್ಯಾಯಾಂಗ ಅಧಿಕಾರಿಗಳ ಘೇರಾವ್‌ನಲ್ಲಿ ಭಾಗಿಯಾಗಿದ್ದಕ್ಕಾಗಿ ಚುನಾವಣಾ ಅಭ್ಯರ್ಥಿ ಸೇರಿದಂತೆ ಕನಿಷ್ಠ 17 ಜನರನ್ನು ಪೊಲೀಸರು ಗುರುವಾರ ಬಂಧಿಸಿದ್ದಾರೆ ಎಂದು...

ದೆಹಲಿ ಗಲಭೆ ಪ್ರಕರಣದಿಂದ ಒಂಬತ್ತು ಜನರನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದ ಪ್ರಕರಣದಲ್ಲಿ ಒಂಬತ್ತು ಜನರನ್ನು ನ್ಯಾಯಾಲಯವು ಖುಲಾಸೆಗೊಳಿಸಿದೆ. ಸಾಕ್ಷ್ಯಗಳು ನಿರ್ದಿಷ್ಟತೆಯ ಕೊರತೆ ಮತ್ತು ಸಾಮಾನ್ಯ ಸ್ವರೂಪದ್ದಾಗಿರುವುದರಿಂದ ಪ್ರಕರಣದಲ್ಲಿ ಅವುಗಳನ್ನು ನಂಬಲಾಗುವುದಿಲ್ಲ ಎಂ ನ್ಯಾಯಾಲಯ ಹೇಳಿದೆ. ಹೆಚ್ಚುವರಿ ಸೆಷನ್ಸ್ ನ್ಯಾಯಾಧೀಶ...