Homeಮುಖಪುಟದೆಹಲಿಯಿಂದ ಕಾಲ್ನಡಿಗೆಯಲ್ಲಿ ಹೊರಟಿದ್ದ ವ್ಯಕ್ತಿ ಸಾವು

ದೆಹಲಿಯಿಂದ ಕಾಲ್ನಡಿಗೆಯಲ್ಲಿ ಹೊರಟಿದ್ದ ವ್ಯಕ್ತಿ ಸಾವು

- Advertisement -
- Advertisement -

ಕೊರೊನ ವೈರಸ್ ಹರಡುವುದನ್ನು ತಡೆಯಲು ಪ್ರಧಾನಿ ನರೇಂದ್ರ ಮೋದಿ 21 ದಿನಗಳ ಲಾಕ್ ಡೌನ್ ಘೋಷಿಸಿದ ನಂತರ ಮಧ್ಯಪ್ರದೇಶದ ತಮ್ಮ ಮನೆಗೆ ತಲುಪಲು ದೆಹಲಿಯಿಂದ 200 ಕಿ.ಮೀ ನಡೆದು ಬಂದ 38 ವರ್ಷದ ವ್ಯಕ್ತಿ ದಾರಿಯಲ್ಲಿ ಸಾವನ್ನಪ್ಪಿದ್ದಾರೆ.

ದೆಹಲಿಯಲ್ಲಿ ಡೆಲಿವರಿ ಏಜೆಂಟ್ ಆಗಿ ಕೆಲಸ ಮಾಡುತ್ತಿದ್ದ ರಣವೀರ್ ಸಿಂಗ್, ಲಾಕ್‌ಡೌನ್‌ನಿಂದಾಗಿ ಉದ್ಯೋಗ, ವಸತಿ ಹಾಗೂ ಹಣವಿಲ್ಲದೆ ಸಾವಿರಾರು ವಲಸಿಗರ ಜೊತೆ ತಮ್ಮ ಹಳ್ಳಿಗೆ ಹೊರಟಿದ್ದರು. ಕೊರೊನ ವೈರಸ್ ಹರಡುವುದನ್ನು ತಡೆಯುವ ಉದ್ದೇಶದಿಂದ ರೈಲುಗಳು ಮತ್ತು ಅಂತರರಾಜ್ಯ ಬಸ್ಸುಗಳು ಸೇರಿದಂತೆ ಎಲ್ಲಾ ಸಾರಿಗೆ ಸೇವೆಗಳು ಸ್ಥಗಿತಗೊಂಡಿರುವುದರಿಂದ ಹೆಚ್ಚಿನ ಜನರು ಕಾಲ್ನಡಿಗೆಯಲ್ಲೆ ನೂರಾರು ಕಿಲೋಮೀಟರ್ ಪ್ರಯಾಣ ಮಾಡುತ್ತಿದ್ದಾರೆ.

ರಣವೀರ್ ಸಿಂಗ್ ದೆಹಲಿಯಿಂದ 326 ಕಿ.ಮೀ ದೂರದಲ್ಲಿರುವ ಮಧ್ಯಪ್ರದೇಶದ ಮೊರೆನಾ ಜಿಲ್ಲೆಯ ತಮ್ಮ ಗ್ರಾಮಕ್ಕೆ ನಡೆಯಲು ಪ್ರಾರಂಭಿಸಿದ್ದರು.

ಉತ್ತರ ಪ್ರದೇಶದ ಆಗ್ರಾದ ಹೆದ್ದಾರಿಯಲ್ಲಿ ಕುಸಿದುಬಿದ್ದಾಗ, ಸ್ಥಳೀಯರು ಅವರನ್ನು ಉಪಚರಿಸಿದರಾದರು ರಣವೀರ್ ಸಿಂಗ್ ಹೃದಯಾಘಾತವಾಗಿ ತೀರಿಕೊಂಡರು. ಈ ಸಮಯದಲ್ಲಿ ಅವರು ತನ್ನ ಹಳ್ಳಿಯಿಂದ ಸುಮಾರು 80 ಕಿ.ಮೀ ದೂರದಲ್ಲಿದ್ದರು.

ಶನಿವಾರ ಸಂಜೆಯಿಮದ, ಉತ್ತರ ಪ್ರದೇಶದ ಗಡಿಯುದ್ದಕ್ಕೂ ಮನೆಗೆ ತೆರಳಲು ಹತಾಶವಾಗಿ ಪ್ರಯತ್ನಿಸುತ್ತಿರುವ ಸಾವಿರಾರು ವಲಸೆ ಕಾರ್ಮಿಕರು ದೆಹಲಿಯ ಬಸ್ ಟರ್ಮಿನಲ್‌ಗಳಲ್ಲಿ ತುಂಬಿ ತುಳುಕುತ್ತಿದ್ದರು.

ಉತ್ತರ ಪ್ರದೇಶ ಮತ್ತು ದೆಹಲಿ ಸರ್ಕಾರಗಳು ಶನಿವಾರ ಪ್ರತಿಕ್ರಿಯಿಸಿ ಜನರನ್ನು ಮನೆಗೆ ಕರೆದೊಯ್ಯಲು ಬಸ್ಸುಗಳನ್ನು ಸಜ್ಜುಗೊಳಿಸಿದೆ; ಯುಪಿ ಸರ್ಕಾರ 1,000 ಬಸ್ಸುಗಳನ್ನು ಆಯೋಜಿಸಿದೆ ಎಂದು ಹೇಳಿದೆ. ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ 200 ಬಸ್ಸುಗಳನ್ನು ಸೇವೆಗೆ ಆಯೋಜಿಸಲಾಗುವುದು ಎಂದು ಹೇಳಿದ್ದಾರೆ.

ಜಾಗತಿಕವಾಗಿ ಕೊರೊನ ವೈರಸ್ ಸ್ಪೋಟಗೊಂಡ ಎರಡು ತಿಂಗಳ ನಂತರ ಭಾರತ ಸರಕಾರ ಹಠಾತ್ತನೆ, ಯೋಜನೆ ಇಲ್ಲದೆ ಲಾಕ್‌ಡೌನ್ ಘೋಷಿಸಿದ್ದಾರೆ ಇದರಿಂದಾಗಿ ಲಕ್ಷಾಂತರ ಜನರು ಸಿಕ್ಕಿಹಾಕಿಕೊಂಡಿದ್ದಾರಲ್ಲದೆ ಆಹಾರ ಮತ್ತು ಮೂಲಭೂತ ಅವಶ್ಯಕತೆಗಳ ಬಗ್ಗೆ ಆತಂಕವನ್ನು ಉಂಟುಮಾಡಿದೆ ಎಂದು ಕೇಂದ್ರ ಸರ್ಕಾರ ಟೀಕೆಗಳನ್ನು ಎದುರಿಸಿದೆ. ಆದರೆ ಕೇಂದ್ರ ಸರ್ಕಾರ ಈ ಟೀಕೆಗಳನ್ನು ನಿರಾಕರಿಸಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜೋಸೆಫ್ ವಿಜಯ್‌ ಅವರ ಐತಿಹಾಸಿಕ ಗೆಲುವು: ರಾಜ್ಯಪಾಲರ ಸೋಲು ಮತ್ತು ದ್ರಾವಿಡ ನೆಲದ ರಾಜಕೀಯ: ಒಂದು ವಿಶ್ಲೇಷಣೆ

ತಮಿಳಗ ವೆಟ್ರಿ ಕಝಗಂ (TVK) ಪಕ್ಷವು ತಮಿಳುನಾಡು ವಿಧಾನಸಭೆಯಲ್ಲಿ ಬಹುಮತ ಸಾಬೀತುಪಡಿಸಿ ಸರ್ಕಾರ ರಚಿಸುವ ಜವಾಬ್ದಾರಿ ತೆಗೆದುಕೊಂಡಿದೆ. ಮೇ 13, 2026ರ ಬುಧವಾರ ನಡೆದ ನಾಟಕೀಯ ವಿಶ್ವಾಸ ಮತಯಾಚನೆಯಲ್ಲಿ 144 ಮತಗಳ ಬೆಂಬಲ...

FACT CHECK: ಟಿವಿಕೆ ಪಕ್ಷ ಅಧಿಕಾರಕ್ಕೆ ಬರುತ್ತಿದಂತೆ ಹಿಂದಿ ಹೇರಿಕೆ ವಿರುದ್ದ ಪ್ರತಿಭಟನೆ ಎಂದು ಹಳೆಯ ವಿಡಿಯೋ ಹಂಚಿಕೆ

ಹಿಂದಿ ಹೇರಿಕೆ ವಿರುದ್ದದ ಹೋರಾಟವು ತಮಿಳುನಾಡಿಗೆ ಹೊಸದೇನು ಅಲ್ಲ. ಆದರೆ ಚೆನ್ನೈನ ಜವಾಹರಲಾಲ್ ನೆಹರು ಒಳಾಂಗಣ ಕ್ರೀಡಾಂಗಣದಲ್ಲಿ ವಿಜಯ್ ನೇತೃತ್ವದ ತಮಿಳಗ ವೆಟ್ರಿ ಕಳಗಂ (ಟಿವಿಕೆ) ಪಕ್ಷ ಅಧಿಕಾರ ವಹಿಸಿಕೊಂಡ ನಂತರ ...

ನೀಟ್: ಪ್ರಶ್ನೆಪತ್ರಿಕೆ ಸೋರಿಕೆಯ ಆತಂಕ ಮತ್ತು ಪ್ರಾದೇಶಿಕ ಹಿತಾಸಕ್ತಿಗಳ ಬಲಿ

ಪ್ರಶ್ನೆ ಪತ್ರಿಕೆ ಸೋರಿಕೆಯಾಗಿರುವ ಆರೋಪದ ಮೇಲೆ ಮೇ 3 ರಂದು ನಡೆಸಲಾದ ನೀಟ್ (ಯುಜಿ) 2026 ಅನ್ನು ರದ್ದುಗೊಳಿಸುವುದಾಗಿ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್‌ಟಿಎ) ಮಂಗಳವಾರ (ಮೇ 12) ಘೋಷಿಸಿದೆ. ಪ್ರತ್ಯೇಕವಾಗಿ ತಿಳಿಸಲಾಗುವ...

ಕೇಂದ್ರ ಸಚಿವ ಬಂಡಿ ಸಂಜಯ್ ಮಗನ ವಿರುದ್ಧ ಪೋಕ್ಸೋ ಕೇಸ್ : ಕ್ರಮ ಕೈಗೊಳ್ಳದೆ ಕಥೆ ಹೇಳುತ್ತಿರುವ ಪೊಲೀಸರು, ಅಂತರ ಕಾಯ್ದುಕೊಂಡ ಬಿಜೆಪಿ

ಕೇಂದ್ರ ಗೃಹ ವ್ಯವಹಾರಗಳ ರಾಜ್ಯ ಸಚಿವ, ತೆಲಂಗಾಣದ ಪ್ರಮುಖ ಬಿಜೆಪಿ ನಾಯಕ ಬಂಡಿ ಸಂಜಯ್ ಕುಮಾರ್ ಅವರ ಮಗ ಬಂಡಿ ಸಾಯಿ ಭಗೀರತ್ ವಿರುದ್ಧ 17 ವರ್ಷದ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಲ್ಲಿ ಪೋಕ್ಸೋ...

ಶಾಲೆ, ಪೂಜಾ ಸ್ಥಳ, ಬಸ್ ನಿಲ್ದಾಣಗಳ ಬಳಿ ಇರುವ 717 ಮದ್ಯದಂಗಡಿಗಳನ್ನು ಮುಚ್ಚಲು ತಮಿಳುನಾಡು ಸಿಎಂ ಜೋಸೆಫ್ ವಿಜಯ್ ಆದೇಶ 

ಅಧಿಕಾರ ವಹಿಸಿಕೊಂಡ ನಂತರ ತಮ್ಮ ಮೊದಲ ಪ್ರಮುಖ ಆಡಳಿತಾತ್ಮಕ ನಿರ್ದೇಶನದಲ್ಲಿ, ಸಿ. ಜೋಸೆಫ್ ವಿಜಯ್ ಸೋಮವಾರ, ತಮಿಳುನಾಡು ಸರ್ಕಾರವು ಪೂಜಾ ಸ್ಥಳಗಳು, ಶಿಕ್ಷಣ ಸಂಸ್ಥೆಗಳು ಮತ್ತು ಬಸ್ ನಿಲ್ದಾಣಗಳಿಂದ 500 ಮೀಟರ್ ಒಳಗೆ...

FACT CHECK: ಭಾರತೀಯರು ಚಿನ್ನ ಖರೀದಿಸಬೇಡಿ ಎಂದು 1967ರಲ್ಲೇ ಇಂದಿರಾ ಗಾಂಧಿ ಹೇಳಿದ್ರಾ?

ಪ್ರಧಾನಿ ನರೇಂದ್ರ ಮೋದಿಯವರು ಇತ್ತೀಚೆಗೆ ತೆಲಂಗಾಣದ ಸಿಕಂದರಾಬಾದ್ ರ‍್ಯಾಲಿಯಲ್ಲಿ ಮಾತನಾಡುತ್ತಾ, ಆರ್ಥಿಕ ಬಿಕ್ಕಟ್ಟು ತಪ್ಪಿಸಲು "ಒಂದು ವರ್ಷ ಚಿನ್ನ ಖರೀದಿಸಬೇಡಿ" ಎಂದು ಜನರಲ್ಲಿ ಮನವಿ ಮಾಡಿದ್ದರು. ಇದರ ಬೆನ್ನಲ್ಲೇ, 1967ರಲ್ಲಿ ಅಂದಿನ ಪ್ರಧಾನಿ...

ಪಶ್ಚಿಮ ಬಂಗಾಳ| ಧ್ವನಿವರ್ಧಕಗಳ ನಿಯಂತ್ರಣಕ್ಕೆ ಆದೇಶಿಸಿದ ನೂತನ ಸಿಎಂ ಅಧಿಕಾರಿ; ಧಾರ್ಮಿಕ ಸಭೆ ನೆಪದಲ್ಲಿ ರಸ್ತೆ ತಡೆಗೆ ನಿಷೇಧ

ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ನೇತೃತ್ವದ ಸರ್ಕಾರವು ಧಾರ್ಮಿಕ ಸ್ಥಳಗಳಲ್ಲಿ ಧ್ವನಿವರ್ಧಕಗಳ ಬಳಕೆಯನ್ನು ನಿಯಂತ್ರಿಸಲು ಮತ್ತು ಪ್ರಾರ್ಥನೆ ಅಥವಾ ಧಾರ್ಮಿಕ ಸಭೆ ನೆಪದಲ್ಲಿ ಸಾರ್ವಜನಿಕ ರಸ್ತೆಗಳನ್ನು ನಿರ್ಬಂಧಿಸದಂತೆ ನೋಡಿಕೊಳ್ಳಲು ಪೊಲೀಸ್ ಅಧಿಕಾರಿಗಳಿಗೆ ಹೊಸ ಸೂಚನೆಗಳನ್ನು...

ರಾಜಸ್ಥಾನದಲ್ಲಿ ನೀಟ್‌-ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ; ಸಿಬಿಐ ತನಿಖೆಗೆ ಆದೇಶಿಸಿದ ಸರ್ಕಾರ

ಮೇ 3 ರಂದು ನಡೆಸಲಾದ ನೀಟ್ (ಯುಜಿ) 2026 ಅನ್ನು ರದ್ದುಗೊಳಿಸುವುದಾಗಿ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್‌ಟಿಎ) ಮಂಗಳವಾರ (ಮೇ 12) ಘೋಷಿಸಿದೆ. ಪ್ರತ್ಯೇಕವಾಗಿ ತಿಳಿಸಲಾಗುವ ದಿನಾಂಕಗಳಲ್ಲಿ ಮರು ಪರೀಕ್ಷೆಯನ್ನು ನಡೆಸಲಾಗುವುದು, ಪರೀಕ್ಷೆಗೆ...

ಇತ್ಯರ್ಥವಾಗದ ಚುನಾವಣಾ ತಕರಾರು : ಮತ ಹಾಕಿದ ಜನರಿಗೆ ದಿನಕ್ಕೊಬ್ಬ ಶಾಸಕ

ರಾಜ್ಯದಲ್ಲಿ ಪ್ರಸ್ತುತ ಆಡಳಿತ ನಡೆಸುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಮೂರು ವರ್ಷಗಳನ್ನು ಪೂರೈಸಿದೆ. ಚುನಾವಣೆ ನಡೆಯಲು ಇನ್ನು ಎರಡು ವರ್ಷಗಳು ಬಾಕಿಯಿದೆ. ಅಂದರೆ, ಸರ್ಕಾರದ ಐದು ವರ್ಷಗಳ ಅವಧಿಯಲ್ಲಿ ಮುಕ್ಕಾಲು...

“ಸನಾತನವನ್ನು ನಿರ್ಮೂಲನೆ ಮಾಡಬೇಕು…”; ವಿಧಾನಸಭೆಯಲ್ಲೇ ತನ್ನ ಹಿಂದಿನ ಹೇಳಿಕೆ ಪುನರುಚ್ಚರಿಸಿದ ಉದಯನಿಧಿ ಸ್ಟಾಲಿನ್

ತಮಿಳುನಾಡು ವಿರೋಧ ಪಕ್ಷದ ನಾಯಕ ಮತ್ತು ಡಿಎಂಕೆ ನಾಯಕ ಉದಯನಿಧಿ ಸ್ಟಾಲಿನ್ ಮಂಗಳವಾರ ತಮಿಳುನಾಡು ವಿಧಾನಸಭೆಯಲ್ಲಿ ನಡೆದ ಅಧಿವೇಶನದಲ್ಲಿ, ಸನಾತನ ಧರ್ಮದ ನಿರ್ಮೂಲನೆಗೆ ಮತ್ತೊಮ್ಮೆ ಕರೆ ನೀಡಿದ್ದಾರೆ. ಸದನದಲ್ಲಿ ಮಾತನಾಡಿದ ಅವರು, "ಜನರನ್ನು ವಿಭಜಿಸುವ...