Homeಮುಖಪುಟನಾವು ಮನುಷ್ಯರಾಗಿ ಹುಟ್ಟಿದ ಮೇಲೆ ನಮಗಿರಬೇಕಾದ ಗುಣ ಮಾನವತ್ವದ ಬಗ್ಗೆ ನಿಮಗೆ ಗೊತ್ತೆ?

ನಾವು ಮನುಷ್ಯರಾಗಿ ಹುಟ್ಟಿದ ಮೇಲೆ ನಮಗಿರಬೇಕಾದ ಗುಣ ಮಾನವತ್ವದ ಬಗ್ಗೆ ನಿಮಗೆ ಗೊತ್ತೆ?

- Advertisement -
- Advertisement -

ಜೀವನ ಕಲೆಗಳು ಅಂಕಣ – 7 ಅನುಭೂತಿ (Empathy) -1

ನಾವು ಮನುಷ್ಯರಾಗಿ ಹುಟ್ಟಿದ ಮೇಲೆ ನಮಗಿರಬೇಕಾದ ಗುಣ ಮಾನವತ್ವ. ಅದರ ಮುಖ್ಯ ಲಕ್ಷಣ ಅನುಭೂತಿ. ಇದು ಮಾನವನಿಗೆ ಹುಟ್ಟುಗುಣ. ಕೇವಲ ಅನುಕಂಪ ಮತ್ತು ಸಹಾನುಭೂತಿಯ ಮಿಶ್ರಣ ಅನುಭೂತಿ ಅಲ್ಲ. ಅನುಭೂತಿಗೂ ಕನಿಕರಕ್ಕೂ ವ್ಯತ್ಯಾಸವಿದೆ; ಎರಡೂ ಬೇರೆ ಬೇರೆ. ಎಂಪಥಿ ನಮ್ಮ ಭಾವನಾತ್ಮಕ ಪ್ರಜ್ಞೆಯ ಒಂದು ಮುಖ್ಯ ಅಂಶ. ಇದು ನಮ್ಮ ಮತ್ತು ಇತರರ ನಡುವಿನ ಕೊಂಡಿ. ಇದರ ಶಕ್ತಿಯ ಆಧಾರದ ಮೇಲೆ ನಮ್ಮ ಅವರ ಸಂಬಂಧ ಎಷ್ಟು ಗಟ್ಟಿಯಾಗಿದೆ ಎಂದು ಅಳೆಯಬಹುದು. ಅನುಭೂತಿ ನಮಗೆ ನಮಗಿಂತ ಭಿನ್ನವಾದ ವ್ಯಕ್ತಿಗಳನ್ನು ನಮ್ಮವರಂತೆ ಕಾಣಲು ಸಹಾಯಕವಾಗುತ್ತದೆ. ಅವರು ದಿವ್ಯಾಂಗರಾಗಿರಬಹುದು, ಬೇರೆ ದೇಶ, ಪ್ರಾಂತ್ಯ, ಭಾಷೆ, ವೇಷ-ಭೂಷ-ಆಹಾರ-ವಿಚಾರದವರಾಗಿರಬಹುದು. ಸರಳವಾಗಿ ಹೇಳಬೇಕೆಂದರೆ, ಬೇರೆಯವರ ಭಾವನೆಗಳನ್ನು ಅರ್ಥಮಾಡಿಕೊಳ್ಳುವುದರಲ್ಲಿ, ಹಂಚಿಕೊಳ್ಳುವುದರಲ್ಲಿ ನಾವು ಎಷ್ಟು ಸಮರ್ಥರು ಎನ್ನುವುದು ಅನುಭೂತಿ. ಇದರಲ್ಲಿ ಮೂರು ಬಗೆಗಳನ್ನು ಮನಶಾಸ್ತ್ರಜ್ಞರು ಗುರುತಿಸಿದ್ದಾರೆ.

ಕಾಗ್ನಿಟಿವ್ ಎಂಪಥಿ: ಇದನ್ನು ವೇದನಾ ಅನುಭೂತಿ ಎನ್ನಬಹುದು. ಇನ್ನೊಬ್ಬರ ಮುಖಚರ್ಯೆ, ಹಾವಭಾವದಲ್ಲಿ ಅವರ ಭಾವನೆಯನ್ನು ಗುರುತಿಸುವ ಕಲೆ. ಯಾರೋ ಹತ್ತಿರದವರು ದುಃಖದಲ್ಲಿದ್ದಾಗ ನಾವು ಸಂತಾಪ ಸೂಚಿಸುವ ಸಲುವಾಗಿ ಅವರಿಗೆ ಸಂತಾಪ ಸೂಚಕ ಪತ್ರ ಬರೆಯಬಹುದು, ಕರೆ ಮಾಡಬಹುದು, ಅನುಕಂಪ ಸೂಚಿಸಬಹುದು ಆದರೆ ಅವರ ದುಃಖವನ್ನು ಅರ್ಥಮಾಡಿಕೊಳ್ಳಲು ಅಥವಾ ಅವರೊಂದಿಗೆ ಭಾವನೆಗಳನ್ನು ಹಂಚಿಕೊಳ್ಳಲು ಅದಕ್ಕಿಂತ ಹೆಚ್ಚಿನ ಪ್ರಯತ್ನ ಬೇಕಾಗುತ್ತದೆ. ದುಃಖದಲ್ಲಿರುವವರ ಹಾವಭಾವವನ್ನು ನಾವು ನಾವು ಬೇರೆ ಬೇರೆಯಾಗಿ ಅರ್ಥೈಸಬಹುದು. ಹೆಚ್ಚಾಗಿ ನಾವು ಅದನ್ನು ತಪ್ಪಾಗಿ ಅರ್ಥೈಸುತ್ತೇವೆ. ಅವರ ಮುಖದಲ್ಲಿ ಕಾಣುವ ಮುಗುಳ್ನಗೆ ಕೂಡ ದುಃಖಸೂಚಕವಾಗಿರಬಹುದು. ಚಿಕ್ಕ ಮಕ್ಕಳು ಕೂಡ ತಮ್ಮ ತಾಯಂದಿರ ದುಃಖ, ಕೋಪ, ಸಂತೋಷವನ್ನು ಕೂಡಲೇ ಅರ್ಥಮಾಡಿಕೊಂಡು ಅದಕ್ಕೆ ತಕ್ಕಂತೆ ಪ್ರತಿಕ್ರಿಯೆ ನೀಡುತ್ತಾರೆ. ಇದು ಕೇವಲ ದುಃಖಕ್ಕೆ ಅಥವಾ ಸ್ತ್ರೀಯರಿಗೆ ಮೀಸಲಾದ ಪ್ರತಿಕ್ರಿಯೆಯಲ್ಲ, ಸುಖಕ್ಕೂ, ಪುರುಷರಿಗೂ ಅನ್ವಯಿಸುವ ಭಾವನಾತ್ಮಕ ಕಲೆ.

ಎಮೋಷನಲ್ ಎಂಪಥಿ: ಇದನ್ನು ಭಾವನಾತ್ಮಕ ಅನುಭೂತಿ ಎಂದು ಕರೆಯಬಹುದು. ಇದು ವ್ಯಕ್ತಿ ನಿಮ್ಮ ಎದುರಿಗೆ ಇಲ್ಲದಿದ್ದರೂ, ವಿಷಯ ತಿಳಿದ ಕೂಡಲೇ ಆಗುವ ನಿಮ್ಮ ಪ್ರತಿಕ್ರಿಯೆ. ಅವರ ಸ್ಥಳದಲ್ಲಿ ನಾವು ಇದ್ದು, ನಮಗೂ ಅದೇ ರೀತಿಯ ದುಃಖ ಅನುಭವಿಸಬೇಕಾಗಿದ್ದಲ್ಲಿ ನಮಗೆ ಆಗ ಹೇಗೆ ಅನಿಸುತ್ತದೆ ಅದನ್ನು ಊಹಿಸಿ (ಅಥವಾ ನೆನಪಿಸಿಕೊಂಡು) ನೀಡುವ ಪ್ರತಿಕ್ರಿಯೆ.

ಕಂಪ್ಯಾಷನೇಟ್ ಎಂಪಥಿ:  ಎಂದರೆ ಕನಿಕರದ ಅನುಭೂತಿ. ಇದು ನಮ್ಮನ್ನು ಭಾವನಾತ್ಮಕವಾಗಿ ವಿಚಲಿತ ಗೊಳಿಸುವುದರ ಜೊತೆಗೆ ಕ್ರಿಯಾಶೀಲರನ್ನಾಗಿಯೂ ಮಾಡುವಂತಹ ಶಕ್ತಿ. ಉದಾ: ಎಲ್ಲಾದರೂ ನೈಸರ್ಗಿಕ ದುರಂತ ಸಂಭವಿಸಿದಾಗ ನಾವು ನೀಡುವ ಸಹಾಯ ಹಸ್ತ. ಅಂತಹ ದುರಂತ ನಾವು ಅನುಭವಿಸಿರಲೇ ಬೇಕೆಂದಿಲ್ಲ. ಅದರ ಬಗ್ಗೆ ಕೇಳಿ, ತಿಳಿದು, ದೃಶ್ಯ ಮಾಧ್ಯಮದಲ್ಲಿ ನೋಡಿ ನಮಗೆ ಮನವರಿಕೆಯಾಗಿ ನಾವು ನೀಡುವ ಪ್ರತಿಕ್ರಿಯೆ ಇದಾಗಿರುತ್ತದೆ.

ಇವುಗಳನ್ನು ಬೆಳೆಸಿಕೊಳ್ಳುವುದು ಹೇಗೆ?

ವೇದನಾ ಅನುಭೂತಿ ನಮ್ಮ ಊಹಾಶಕ್ತಿಯನ್ನು ಆಧರಿಸಿರುತ್ತದೆ. ಇನ್ನೊಬ್ಬರ ಜೊತೆ ನಮ್ಮ ಸಂಬಂಧ ಎಷ್ಟು ಗಾಢವಾಗಿದೆ ಎನ್ನುವುದರ ಮೇಲೂ ಇದು ಹೋಗುತ್ತದೆ. ಉದಾ: ಸಿನಿಮಾ, ನಾಟಕ, ಟಿವಿ ಸೀರಿಯಲ್ಲಿನಲ್ಲಿ ಬರುವ ಭಾವನಾತ್ಮಕ ದೃಶ್ಯಗಳನ್ನು ಇವರು, ತಮ್ಮ ಮನೆಯಲ್ಲಿ ಕುಳಿತು, ನೋಡಿ, ಕಣ್ಣೀರು ಸುರಿಸುವವರೂ ಇರುತ್ತಾರೆ, ಅದು ಕೇವಲ ನಾಟಕೀಯ ಸನ್ನಿವೇಶ ಎಂದು ತಿಳಿದಿದ್ದರೂ ಸಹ. ಅವರಿಗೆ ಆ ಪಾತ್ರಧಾರಿಯ ಜೊತೆಗೆ ಇರುವ ಕಾಲ್ಪನಿಕ ಸಂಬಂಧ ಮತ್ತು ಪಾತ್ರದ/ಪಾತ್ರಧಾರಿಯ ಭಾವನೆಗೆ ಇವರು ನೀಡುವ ಸ್ವಂತ ಪ್ರತಿಕ್ರಿಯೆ ಆಗಿರುತ್ತದೆ. ಅವರ ಪಕ್ಕದಲ್ಲಿ ಕುಳಿತು ಅದೇ ದೃಶ್ಯವನ್ನು ನೋಡುತ್ತಿರುವ ಇನ್ನೋರ್ವ ವ್ಯಕ್ತಿ ಅದಕ್ಕೆ ತೀರಾ ವಿಭಿನ್ನವಾಗಿ ಪ್ರತಿಕ್ರಿಯೆ ನೀಡಬಹುದು. ಪುರುಷರು ಕ್ರಿಕೆಟ್/ಫುಟ್ಬಾಲ್ ಪಂದ್ಯ ನೋಡುವಾಗ, ಅದರಲ್ಲಿ ಅವರ ಭಾಗವಹಿಸುವಿಕೆ/ತಲ್ಲೀನತೆಯೂ ಸಹಿತ ಅನುಭೂತಿಯನ್ನು ತೋರಿಸುತ್ತದೆ. ವೇದನಾ ಅನುಭೂತಿ ಬೆಳೆಸಿಕೊಳ್ಳಲು ಮೊದಲು ಇನ್ನೋರ್ವ ವ್ಯಕ್ತಿಯ/ಸನ್ನಿವೇಶದ ಬಗ್ಗೆ ನಾವು ಸಾಕಷ್ಟು ತಿಳಿದಿರಬೇಕು, ಇಲ್ಲದಿದ್ದಲ್ಲಿ ನಮ್ಮ ಊಹಾ ಶಕ್ತಿ ನಮಗೆ ಮೋಸ ಮಾಡಬಹುದು. ಎಷ್ಟೋ ಆತ್ಮಹತ್ಯೆ ಪ್ರಕರಣದಲ್ಲಿ ವ್ಯಕ್ತಿಗೆ ಹತ್ತಿರವಿದ್ದವರು ಅವರ ವೇದನೆಯನ್ನು ಅರ್ಥಮಾಡಿಕೊಳ್ಳದೇ, ಅವರ ನಗುವನ್ನು ಸಂತೋಷವೆಂದು ತಪ್ಪಾಗಿ ಗ್ರಹಿಸಿ, ಸಮಯವಿದ್ದಾಗ ಕ್ರಮ ವಹಿಸದೇ, ಪ್ರಸಂಗ ಕೈಮೀರಿ ಹೋಗಿರುವುದನ್ನು ನಾವು ಕಂಡಿದ್ದೇವೆ, ಕೇಳಿದ್ದೇವೆ. ಇಂದಿನಿಂದ ಟಿವಿ ಸೀರಿಯಲ್ ನೋಡಿ ನೀವೂ ಸಹ ಕಣ್ಣೀರು ಸುರಿಸಿ ಎಂದು ನಾನು ಹೇಳುವುದಿಲ್ಲ, ಆದರೆ ಅಂತಹವರನ್ನು ಕಂಡರೆ ನೀವು ಅವರಿಂದ ಅನುಭೂತಿಯ ಬಗ್ಗೆ ಏನು ಕಲಿಯಬಹುದು ಯೋಚಿಸಿ.

ಭಾವನಾತ್ಮಕ ಅನುಭೂತಿ ಇನ್ನೊಬ್ಬರ ನೋವು ನಮಗೇ ಆದಂತೆ ಭಾವಿಸುವ ಕಲೆ. ಇಂಗ್ಲಿಷಿನಲ್ಲಿ ಇದನ್ನು “ವಾಕಿಂಗ್ ಇನ್ ಅದರ್ಸ್ ಶೂಸ್” ಎನ್ನುತ್ತಾರೆ. ಇದರಲ್ಲೂ ನಮ್ಮ ಕಲ್ಪನಾ ಶಕ್ತಿ ಕೆಲಸ ಮಾಡುತ್ತದೆ. ನಮಗೂ ಅಂತಹದೇ ಸನ್ನಿವೇಶ ಹಿಂದೆ ಎದುರಾಗಿದ್ದಾಗ, ನಾವು ಅದರಿಂದ ಆಗ ಹೇಗೆ ಪಾರಾದೆವು ಎಂಬುದನ್ನು ನೀವು ಅವರೊಂದಿಗೆ ಹಂಚಿಕೊಳ್ಳಬಹುದು. ಅಂತಹ ಸನ್ನಿವೇಶ ನಿಮ್ಮ ಜೀವನದಲ್ಲಿ ನಡೆಯದೇ ಇದ್ದರೂ, ಕಾಲ್ಪನಿಕವಾಗಿ ನೀವು ತೆಗೆದುಕೊಂಡ ಕ್ರಮ ಹೇಗೆ ಪ್ರಯೋಜನಕಾರಿಯಾಯಿತು, ಎಂಬುದು ನಿಮಗೆ ಹೇಳಿ-ಕೇಳಿ ತಿಳಿದಿದ್ದಲ್ಲಿ, ಅಂತಹ ಸಲಹೆ ಹಂಚಿಕೊಳ್ಳಬಹುದು. ಉದಾ: ಸ್ನೇಹಿತರೊಬ್ಬರು ಕೆಲಸದ ಸಮಯದಲ್ಲಿ ತಾವು ಮಾಡಿದ ತಪ್ಪಿನಿಂದ ಅವರಿಗಾದ ತೊಂದರೆಯನ್ನು ನಿಮ್ಮೊಂದಿಗೆ ಹಂಚಿಕೊಳ್ಳಬಹುದು. ಆಗ ಅವರ ಸ್ಥಳದಲ್ಲಿ ನೀವಿದ್ದರೆ ಏನು ಮಾಡುತ್ತಿದ್ದಿರಿ ಅಥವಾ ಅವರ ತೊಂದರೆ ಹೇಗೆ ಪರಿಹಾರವಾಯಿತು ಎಂಬುದನ್ನು ಕೇಳಿ ತಿಳಿದುಕೊಳ್ಳಿ. ಮಾಹಿತಿ ನಿಮಗೆ ಮುಂದೆ ಯಾವಾಗಲಾದರೂ ಪ್ರಯೋಜನಕ್ಕೆ ಬರಬಹುದು. ಇಂತಹ ಸಲಹೆ ಪ್ರತಿಯೊಂದು ಸಮಯ/ಸನ್ನಿವೇಷದಲ್ಲಿ ಕೆಲಸ ಮಾಡದಿರಬಹುದು ಎಂಬುದನ್ನು ನೆನಪಿಡಿ.

ಕನಿಕರದ ಅನುಭೂತಿ ರೂಢಿಸಿಕೊಳ್ಳುವುದು ಸುಲಭ. ದುಃಖದಲ್ಲಿರುವವರಿಗೆ ಸಹಾಯ ಹಸ್ತ ನೀಡಿ. ನಿಮ್ಮ ಹತ್ತಿರದವರಾಗಿದ್ದರೆ, ಸಮಯ-ಸಂದರ್ಭಕ್ಕನುಸಾರ, ಅವರಿಗೆ ಕುಡಿಯಲು ನೀರು ಕೊಡಿ, ಊಟ-ತಿಂಡಿ-ವಸತಿ ವ್ಯವಸ್ಥೆ ಮಾಡಿ. ಅವರು ಒಂಟಿಯಾಗಿರಲು ಇಷ್ಟಪಟ್ಟಲ್ಲಿ, ಇರಲು ಬಿಡಿ. ಅವರ ಸಣ್ಣ-ಪುಟ್ಟ ಕೆಲಸಗಳನ್ನು ಮಾಡಿಕೊಡಿ, ಅವರ ಮನೆಯ ಮಕ್ಕಳನ್ನು ವೃದ್ಧರನ್ನು ನೋಡಿಕೊಳ್ಳಿ. ನಿಮ್ಮ ಸಲಹೆಯನ್ನು ಅವರ ಮೇಲೆ ಹೇರಲು ಹೋಗಬೇಡಿ.

ಎಲ್ಲರೂ ತಮ್ಮ ತಮ್ಮ ಯುದ್ಧಗಳನ್ನು ತಾವೇ ಕಾದಾಡಿ ಗೆಲ್ಲಬೇಕು.

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಹಲ್ಗಾಮ್ ದಾಳಿ ಕುರಿತ ಪೋಸ್ಟ್‌: ಜಾನಪದ ಗಾಯಕಿ ನೇಹಾ ಸಿಂಗ್ ರಾಥೋಡ್‌ಗೆ ನಿರೀಕ್ಷಣಾ ಜಾಮೀನು ನೀಡಿದ ಸುಪ್ರೀಂ ಕೋರ್ಟ್

ನವದೆಹಲಿ: ಪಹಲ್ಗಾಮ್ ಭಯೋತ್ಪಾದಕ ದಾಳಿಯ ಕುರಿತು ಸಾಮಾಜಿಕ ಮಾಧ್ಯಮ ಪೋಸ್ಟ್‌ಗೆ ಸಂಬಂಧಿಸಿದಂತೆ ಜಾನಪದ ಗಾಯಕಿ ನೇಹಾ ಸಿಂಗ್ ರಾಥೋಡ್ ಅವರ ವಿರುದ್ಧ ದಾಖಲಾಗಿದ್ದ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಮಂಗಳವಾರ ಅವರಿಗೆ ನಿರೀಕ್ಷಣಾ ಜಾಮೀನು...

ಮಧ್ಯಪ್ರಾಚ್ಯ ಉದ್ವಿಗ್ನತೆ: ಎಲ್‌ಪಿಜಿ ಕೊರತೆಗೆ ಮುಂಬೈನಲ್ಲಿ ಶೇ. 20 ರಷ್ಟು ಹೋಟೆಲ್‌, ರೆಸ್ಟೋರೆಂಟ್‌ ಬಂದ್: ಬೆಂಗಳೂರು, ಚೆನ್ನೈನಲ್ಲೂ ಸಮಸ್ಯೆ

ಪಶ್ಚಿಮ ಏಷ್ಯಾ ಸಂಘರ್ಷ ಹತ್ತು ದಿನಗಳಿಗೂ ಹೆಚ್ಚು ಕಾಲ ಮುಂದುವರಿದಿರುವುದರಿಂದ, ಭಾರತದ ಹೋಟೆಲ್‌ಗಳು ಮತ್ತು ಇತರ ಉಧ್ಯಮಗಳು ಎಲ್‌ಪಿಜಿ ಪೂರೈಕೆ ಬಿಕ್ಕಟ್ಟನ್ನು ಎದುರಿಸುತ್ತಿವೆ. ಬೆಂಗಳೂರಿನ ನಂತರ, ಚೆನ್ನೈ ಮತ್ತು ಮುಂಬೈನಂತಹ ಇತರ ನಗರಗಳು ಸಹ...

‘ಕೋವಿಡ್ ಲಸಿಕೆ ಪೀಡಿತರಿಗಾಗಿ ಪರಿಹಾರ ನೀತಿ ಅಳವಡಿಸಿಕೊಳ್ಳಿ..’; ಕೇಂದ್ರಕ್ಕೆ ಸುಪ್ರೀಂ ಕೋರ್ಟ್ ಸೂಚನೆ

ಕೋವಿಡ್ ವಿರುದ್ಧ ರೋಗನಿರೋಧಕ ಶಕ್ತಿಯಾಗಿ ಲಸಿಕೆ ನೀಡಿದ ನಂತರ ಉಂಟಾಗುವ ಪ್ರತಿಕೂಲ ಪರಿಣಾಮಗಳ ವೈಜ್ಞಾನಿಕ ಮೌಲ್ಯಮಾಪನಕ್ಕಾಗಿ ಅಸ್ತಿತ್ವದಲ್ಲಿರುವ ಕಾರ್ಯವಿಧಾನವನ್ನು ಮುಂದುವರಿಸಬೇಕೆಂದು ಸುಪ್ರೀಂ ಕೋರ್ಟ್ ಮಂಗಳವಾರ ಆದೇಶಿಸಿದೆ. ಅದೇ ಸಮಯದಲ್ಲಿ, ಕೋವಿಡ್ -19 ವ್ಯಾಕ್ಸಿನೇಷನ್ ನಂತರದ...

ಮೇಘಾಲಯ|ಜಿಲ್ಲಾ ಪರಿಷತ್ ಚುನಾವಣೆಯಲ್ಲಿ ವಿವಾದಾತ್ಮಕ ಅಧಿಸೂಚನೆ: ಪಶ್ಚಿಮ ಗಾರೋ ಬೆಟ್ಟಗಳಲ್ಲಿ ಭುಗಿಲೆದ್ದ ಹಿಂಸಾಚಾರ; ಇಬ್ಬರ ಸಾವು

ಗುವಾಹಟಿ: ಏಪ್ರಿಲ್ 10 ರಂದು ನಡೆಯಲಿರುವ ಗಾರೋ ಹಿಲ್ಸ್ ಸ್ವಾಯತ್ತ ಜಿಲ್ಲಾ ಮಂಡಳಿ (ಜಿಎಚ್‌ಎಡಿಸಿ) ಚುನಾವಣೆಯಲ್ಲಿ ಬುಡಕಟ್ಟು ಜನಾಂಗದವರಲ್ಲದವರು ಸ್ಪರ್ಧಿಸುವುದನ್ನು ನಿಷೇಧಿಸುವ ವಿವಾದಾತ್ಮಕ ಅಧಿಸೂಚನೆಯನ್ನು ವಿರೋಧಿಸಿ ಮೇಘಾಲಯದ ಪಶ್ಚಿಮ ಗಾರೋ ಹಿಲ್ಸ್ ಜಿಲ್ಲೆಯಲ್ಲಿ...

ಸಂವಿಧಾನ, ಸದನದ ಘನತೆ ಉಳಿಸಲು ಲೋಕಸಭಾ ಸ್ಪೀಕರ್ ವಿರುದ್ಧ ನಿರ್ಣಯ: ಕಾಂಗ್ರೆಸ್ ಸಂಸದ ಗೊಗೊಯ್

ಸ್ಪೀಕರ್ ಓಂ ಬಿರ್ಲಾ ಪಕ್ಷಪಾತಿ ವರ್ತನೆ ಹೊಂದಿದ್ದಾರೆ. ಹಾಗಾಗಿ, ಸಂವಿಧಾನ ಉಳಿಸಲು ವಿರೋಧ ಪಕ್ಷವು ಅವರನ್ನು ಪದಚ್ಯುತಗೊಳಿಸುವ ನಿರ್ಣಯ ತರಬೇಕಾಯಿತು ಎಂದು ಕಾಂಗ್ರೆಸ್ ಸಂಸದ ಗೌರವ್ ಗೊಗೊಯ್ ಮಂಗಳವಾರ (ಮಾ.10) ಲೋಕಸಭೆಯಲ್ಲಿ ಹೇಳಿದರು....

ನಿರಂತರ ಎಲ್‌ಪಿಜಿ ಪೂರೈಕೆ ಖಚಿತಪಡಿಸಿಕೊಳ್ಳಲು ‘ಅಗತ್ಯ ಸರಕು ಕಾಯ್ದೆ’ ಜಾರಿಗೆ ತಂದ ಕೇಂದ್ರ

ಹೋಟೆಲ್‌ ಮತ್ತು ರೆಸ್ಟೋರೆಂಟ್‌ಗಳು ವಾಣಿಜ್ಯ ಎಲ್‌ಪಿಜಿ ಸಿಲಿಂಡರ್‌ಗಳ ಕೊರತೆ ಕುರಿತು ದೂರು ನೀಡಿದ ನಂತರ, ದೇಶೀಯ ಅಡುಗೆ ಅನಿಲದ ನಿರಂತರ ಪೂರೈಕೆಯನ್ನು ಖಚಿತಪಡಿಸಿಕೊಳ್ಳಲು ಸರ್ಕಾರವು 'ಅಗತ್ಯ ಸರಕು ಕಾಯ್ದೆ'ಯನ್ನು ಜಾರಿಗೆ ತಂದಿದೆ ಎಂದು...

‘ಯುದ್ಧ ಯಾವಾಗ ಕೊನೆಗೊಳ್ಳುತ್ತದೆ ಎಂಬುದನ್ನು ಇರಾನ್ ನಿರ್ಧರಿಸುತ್ತದೆ’: ಟ್ರಂಪ್ ‘ಅಲ್ಪಾವಧಿಯ ಸಂಘರ್ಷ’ ಹೇಳಿಕೆಗೆ ಇರಾನ್ ತಿರುಗೇಟು 

ಟೆಹ್ರಾನ್: ಇರಾನ್‌ನಲ್ಲಿ ಯುದ್ಧವನ್ನು ಕೊನೆಗೊಳಿಸುವ ಬಗ್ಗೆ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಹೇಳಿಕೆಗೆ ಟೆಹ್ರಾನ್ ತೀಕ್ಷ್ಣವಾಗಿ ಪ್ರತಿಕ್ರಿಯಿಸಿದ್ದು, ಅಮೆರಿಕ ಮತ್ತು ಇಸ್ರೇಲಿ ಗುರಿಗಳ ವಿರುದ್ಧದ ಮಿಲಿಟರಿ ಕ್ರಮಗಳು ಯಾವಾಗ ನಿಂತವು ಎಂಬುದನ್ನು...

ಮಹಿಳಾ ಮೀಸಲಾತಿ ಮಸೂದೆ; ತ್ವರಿತ ಅನುಷ್ಠಾನಕ್ಕೆ ವಿಪಕ್ಷಗಳ ಅಭಿಪ್ರಾಯ ಕೇಳಿದ ಕೇಂದ್ರ ಸರ್ಕಾರ

ನವದೆಹಲಿ: ಮಹಿಳಾ ಮೀಸಲಾತಿ ಕಾನೂನಿನ ಅನುಷ್ಠಾನವನ್ನು ತ್ವರಿತಗೊಳಿಸುವ ಪ್ರಯತ್ನದಲ್ಲಿ, ಲೋಕಸಭೆ ಮತ್ತು ರಾಜ್ಯ ಶಾಸಕಾಂಗ ಸಭೆಗಳಲ್ಲಿ ಮಹಿಳೆಯರಿಗೆ ಶೇ 33 ರಷ್ಟು ಮೀಸಲಾತಿ ನೀಡುವ ಶಾಸನವನ್ನು ತಿದ್ದುಪಡಿ ಮಾಡುವ ಪ್ರಸ್ತಾಪದ ಕುರಿತು ಅಭಿಪ್ರಾಯಗಳನ್ನು...

ಕೋಲ್ಕತ್ತಾ : ಕಾಳಿಘಾಟ್ ಬಳಿಕ ದಕ್ಷಿಣೇಶ್ವರದಲ್ಲೂ ಮುಖ್ಯ ಚುನಾವಣಾ ಆಯುಕ್ತರ ವಿರುದ್ಧ ‘ಗೋ ಬ್ಯಾಕ್ ಘೋಷಣೆ’

ಕಾಳಿಘಾಟ್ ಬಳಿಕ ಕೋಲ್ಕತ್ತಾದ ದಕ್ಷಿಣೇಶ್ವರ ದೇವಸ್ಥಾನದಲ್ಲೂ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ವಿರುದ್ದ 'ಗೋ ಬ್ಯಾಕ್ ಘೋಷಣೆಗಳು' ಕೇಳಿ ಬಂದಿವೆ. ಮಂಗಳವಾರ (ಮಾ.10) ಬೆಳಿಗ್ಗೆ ಜ್ಞಾನೇಶ್ ಕುಮಾರ್ ದಕ್ಷಿಣೇಶ್ವರ ಕಾಳಿ ದೇವಸ್ಥಾನಕ್ಕೆ ಭೇಟಿ...

ಉತ್ತರ ಪ್ರದೇಶ| ಹೋಳಿ ಹಬ್ಬದ ಶುಭ ಕೋರಿದ ದಲಿತ ಯುವಕನನ್ನು ಕೊಂದ ಪ್ರಬಲಜಾತಿ ಕುಟುಂಬ

ಉತ್ತರ ಪ್ರದೇಶದ ಲಕ್ನೋದ ದುಬಗ್ಗಾ ಪ್ರದೇಶದಲ್ಲಿ, ಹೋಳಿ ಹಬ್ಬದ ಸಂದರ್ಭದಲ್ಲಿ ಶುಭಕೋರಿದ 22 ವರ್ಷದ ದಲಿತ ವ್ಯಕ್ತಿಯನ್ನು ಬ್ರಾಹ್ಮಣ ಕುಟುಂಬದ ಸದಸ್ಯರು ಇರಿದು ಕೊಂದಿದ್ದಾರೆ ಎಂದು ಆರೋಪಿಸಲಾಗಿದೆ. ಈ ಘಟನೆ ಮಾರ್ಚ್ 4...