Homeಮುಖಪುಟನಾವು ಮನುಷ್ಯರಾಗಿ ಹುಟ್ಟಿದ ಮೇಲೆ ನಮಗಿರಬೇಕಾದ ಗುಣ ಮಾನವತ್ವದ ಬಗ್ಗೆ ನಿಮಗೆ ಗೊತ್ತೆ?

ನಾವು ಮನುಷ್ಯರಾಗಿ ಹುಟ್ಟಿದ ಮೇಲೆ ನಮಗಿರಬೇಕಾದ ಗುಣ ಮಾನವತ್ವದ ಬಗ್ಗೆ ನಿಮಗೆ ಗೊತ್ತೆ?

- Advertisement -
- Advertisement -

ಜೀವನ ಕಲೆಗಳು ಅಂಕಣ – 7 ಅನುಭೂತಿ (Empathy) -1

ನಾವು ಮನುಷ್ಯರಾಗಿ ಹುಟ್ಟಿದ ಮೇಲೆ ನಮಗಿರಬೇಕಾದ ಗುಣ ಮಾನವತ್ವ. ಅದರ ಮುಖ್ಯ ಲಕ್ಷಣ ಅನುಭೂತಿ. ಇದು ಮಾನವನಿಗೆ ಹುಟ್ಟುಗುಣ. ಕೇವಲ ಅನುಕಂಪ ಮತ್ತು ಸಹಾನುಭೂತಿಯ ಮಿಶ್ರಣ ಅನುಭೂತಿ ಅಲ್ಲ. ಅನುಭೂತಿಗೂ ಕನಿಕರಕ್ಕೂ ವ್ಯತ್ಯಾಸವಿದೆ; ಎರಡೂ ಬೇರೆ ಬೇರೆ. ಎಂಪಥಿ ನಮ್ಮ ಭಾವನಾತ್ಮಕ ಪ್ರಜ್ಞೆಯ ಒಂದು ಮುಖ್ಯ ಅಂಶ. ಇದು ನಮ್ಮ ಮತ್ತು ಇತರರ ನಡುವಿನ ಕೊಂಡಿ. ಇದರ ಶಕ್ತಿಯ ಆಧಾರದ ಮೇಲೆ ನಮ್ಮ ಅವರ ಸಂಬಂಧ ಎಷ್ಟು ಗಟ್ಟಿಯಾಗಿದೆ ಎಂದು ಅಳೆಯಬಹುದು. ಅನುಭೂತಿ ನಮಗೆ ನಮಗಿಂತ ಭಿನ್ನವಾದ ವ್ಯಕ್ತಿಗಳನ್ನು ನಮ್ಮವರಂತೆ ಕಾಣಲು ಸಹಾಯಕವಾಗುತ್ತದೆ. ಅವರು ದಿವ್ಯಾಂಗರಾಗಿರಬಹುದು, ಬೇರೆ ದೇಶ, ಪ್ರಾಂತ್ಯ, ಭಾಷೆ, ವೇಷ-ಭೂಷ-ಆಹಾರ-ವಿಚಾರದವರಾಗಿರಬಹುದು. ಸರಳವಾಗಿ ಹೇಳಬೇಕೆಂದರೆ, ಬೇರೆಯವರ ಭಾವನೆಗಳನ್ನು ಅರ್ಥಮಾಡಿಕೊಳ್ಳುವುದರಲ್ಲಿ, ಹಂಚಿಕೊಳ್ಳುವುದರಲ್ಲಿ ನಾವು ಎಷ್ಟು ಸಮರ್ಥರು ಎನ್ನುವುದು ಅನುಭೂತಿ. ಇದರಲ್ಲಿ ಮೂರು ಬಗೆಗಳನ್ನು ಮನಶಾಸ್ತ್ರಜ್ಞರು ಗುರುತಿಸಿದ್ದಾರೆ.

ಕಾಗ್ನಿಟಿವ್ ಎಂಪಥಿ: ಇದನ್ನು ವೇದನಾ ಅನುಭೂತಿ ಎನ್ನಬಹುದು. ಇನ್ನೊಬ್ಬರ ಮುಖಚರ್ಯೆ, ಹಾವಭಾವದಲ್ಲಿ ಅವರ ಭಾವನೆಯನ್ನು ಗುರುತಿಸುವ ಕಲೆ. ಯಾರೋ ಹತ್ತಿರದವರು ದುಃಖದಲ್ಲಿದ್ದಾಗ ನಾವು ಸಂತಾಪ ಸೂಚಿಸುವ ಸಲುವಾಗಿ ಅವರಿಗೆ ಸಂತಾಪ ಸೂಚಕ ಪತ್ರ ಬರೆಯಬಹುದು, ಕರೆ ಮಾಡಬಹುದು, ಅನುಕಂಪ ಸೂಚಿಸಬಹುದು ಆದರೆ ಅವರ ದುಃಖವನ್ನು ಅರ್ಥಮಾಡಿಕೊಳ್ಳಲು ಅಥವಾ ಅವರೊಂದಿಗೆ ಭಾವನೆಗಳನ್ನು ಹಂಚಿಕೊಳ್ಳಲು ಅದಕ್ಕಿಂತ ಹೆಚ್ಚಿನ ಪ್ರಯತ್ನ ಬೇಕಾಗುತ್ತದೆ. ದುಃಖದಲ್ಲಿರುವವರ ಹಾವಭಾವವನ್ನು ನಾವು ನಾವು ಬೇರೆ ಬೇರೆಯಾಗಿ ಅರ್ಥೈಸಬಹುದು. ಹೆಚ್ಚಾಗಿ ನಾವು ಅದನ್ನು ತಪ್ಪಾಗಿ ಅರ್ಥೈಸುತ್ತೇವೆ. ಅವರ ಮುಖದಲ್ಲಿ ಕಾಣುವ ಮುಗುಳ್ನಗೆ ಕೂಡ ದುಃಖಸೂಚಕವಾಗಿರಬಹುದು. ಚಿಕ್ಕ ಮಕ್ಕಳು ಕೂಡ ತಮ್ಮ ತಾಯಂದಿರ ದುಃಖ, ಕೋಪ, ಸಂತೋಷವನ್ನು ಕೂಡಲೇ ಅರ್ಥಮಾಡಿಕೊಂಡು ಅದಕ್ಕೆ ತಕ್ಕಂತೆ ಪ್ರತಿಕ್ರಿಯೆ ನೀಡುತ್ತಾರೆ. ಇದು ಕೇವಲ ದುಃಖಕ್ಕೆ ಅಥವಾ ಸ್ತ್ರೀಯರಿಗೆ ಮೀಸಲಾದ ಪ್ರತಿಕ್ರಿಯೆಯಲ್ಲ, ಸುಖಕ್ಕೂ, ಪುರುಷರಿಗೂ ಅನ್ವಯಿಸುವ ಭಾವನಾತ್ಮಕ ಕಲೆ.

ಎಮೋಷನಲ್ ಎಂಪಥಿ: ಇದನ್ನು ಭಾವನಾತ್ಮಕ ಅನುಭೂತಿ ಎಂದು ಕರೆಯಬಹುದು. ಇದು ವ್ಯಕ್ತಿ ನಿಮ್ಮ ಎದುರಿಗೆ ಇಲ್ಲದಿದ್ದರೂ, ವಿಷಯ ತಿಳಿದ ಕೂಡಲೇ ಆಗುವ ನಿಮ್ಮ ಪ್ರತಿಕ್ರಿಯೆ. ಅವರ ಸ್ಥಳದಲ್ಲಿ ನಾವು ಇದ್ದು, ನಮಗೂ ಅದೇ ರೀತಿಯ ದುಃಖ ಅನುಭವಿಸಬೇಕಾಗಿದ್ದಲ್ಲಿ ನಮಗೆ ಆಗ ಹೇಗೆ ಅನಿಸುತ್ತದೆ ಅದನ್ನು ಊಹಿಸಿ (ಅಥವಾ ನೆನಪಿಸಿಕೊಂಡು) ನೀಡುವ ಪ್ರತಿಕ್ರಿಯೆ.

ಕಂಪ್ಯಾಷನೇಟ್ ಎಂಪಥಿ:  ಎಂದರೆ ಕನಿಕರದ ಅನುಭೂತಿ. ಇದು ನಮ್ಮನ್ನು ಭಾವನಾತ್ಮಕವಾಗಿ ವಿಚಲಿತ ಗೊಳಿಸುವುದರ ಜೊತೆಗೆ ಕ್ರಿಯಾಶೀಲರನ್ನಾಗಿಯೂ ಮಾಡುವಂತಹ ಶಕ್ತಿ. ಉದಾ: ಎಲ್ಲಾದರೂ ನೈಸರ್ಗಿಕ ದುರಂತ ಸಂಭವಿಸಿದಾಗ ನಾವು ನೀಡುವ ಸಹಾಯ ಹಸ್ತ. ಅಂತಹ ದುರಂತ ನಾವು ಅನುಭವಿಸಿರಲೇ ಬೇಕೆಂದಿಲ್ಲ. ಅದರ ಬಗ್ಗೆ ಕೇಳಿ, ತಿಳಿದು, ದೃಶ್ಯ ಮಾಧ್ಯಮದಲ್ಲಿ ನೋಡಿ ನಮಗೆ ಮನವರಿಕೆಯಾಗಿ ನಾವು ನೀಡುವ ಪ್ರತಿಕ್ರಿಯೆ ಇದಾಗಿರುತ್ತದೆ.

ಇವುಗಳನ್ನು ಬೆಳೆಸಿಕೊಳ್ಳುವುದು ಹೇಗೆ?

ವೇದನಾ ಅನುಭೂತಿ ನಮ್ಮ ಊಹಾಶಕ್ತಿಯನ್ನು ಆಧರಿಸಿರುತ್ತದೆ. ಇನ್ನೊಬ್ಬರ ಜೊತೆ ನಮ್ಮ ಸಂಬಂಧ ಎಷ್ಟು ಗಾಢವಾಗಿದೆ ಎನ್ನುವುದರ ಮೇಲೂ ಇದು ಹೋಗುತ್ತದೆ. ಉದಾ: ಸಿನಿಮಾ, ನಾಟಕ, ಟಿವಿ ಸೀರಿಯಲ್ಲಿನಲ್ಲಿ ಬರುವ ಭಾವನಾತ್ಮಕ ದೃಶ್ಯಗಳನ್ನು ಇವರು, ತಮ್ಮ ಮನೆಯಲ್ಲಿ ಕುಳಿತು, ನೋಡಿ, ಕಣ್ಣೀರು ಸುರಿಸುವವರೂ ಇರುತ್ತಾರೆ, ಅದು ಕೇವಲ ನಾಟಕೀಯ ಸನ್ನಿವೇಶ ಎಂದು ತಿಳಿದಿದ್ದರೂ ಸಹ. ಅವರಿಗೆ ಆ ಪಾತ್ರಧಾರಿಯ ಜೊತೆಗೆ ಇರುವ ಕಾಲ್ಪನಿಕ ಸಂಬಂಧ ಮತ್ತು ಪಾತ್ರದ/ಪಾತ್ರಧಾರಿಯ ಭಾವನೆಗೆ ಇವರು ನೀಡುವ ಸ್ವಂತ ಪ್ರತಿಕ್ರಿಯೆ ಆಗಿರುತ್ತದೆ. ಅವರ ಪಕ್ಕದಲ್ಲಿ ಕುಳಿತು ಅದೇ ದೃಶ್ಯವನ್ನು ನೋಡುತ್ತಿರುವ ಇನ್ನೋರ್ವ ವ್ಯಕ್ತಿ ಅದಕ್ಕೆ ತೀರಾ ವಿಭಿನ್ನವಾಗಿ ಪ್ರತಿಕ್ರಿಯೆ ನೀಡಬಹುದು. ಪುರುಷರು ಕ್ರಿಕೆಟ್/ಫುಟ್ಬಾಲ್ ಪಂದ್ಯ ನೋಡುವಾಗ, ಅದರಲ್ಲಿ ಅವರ ಭಾಗವಹಿಸುವಿಕೆ/ತಲ್ಲೀನತೆಯೂ ಸಹಿತ ಅನುಭೂತಿಯನ್ನು ತೋರಿಸುತ್ತದೆ. ವೇದನಾ ಅನುಭೂತಿ ಬೆಳೆಸಿಕೊಳ್ಳಲು ಮೊದಲು ಇನ್ನೋರ್ವ ವ್ಯಕ್ತಿಯ/ಸನ್ನಿವೇಶದ ಬಗ್ಗೆ ನಾವು ಸಾಕಷ್ಟು ತಿಳಿದಿರಬೇಕು, ಇಲ್ಲದಿದ್ದಲ್ಲಿ ನಮ್ಮ ಊಹಾ ಶಕ್ತಿ ನಮಗೆ ಮೋಸ ಮಾಡಬಹುದು. ಎಷ್ಟೋ ಆತ್ಮಹತ್ಯೆ ಪ್ರಕರಣದಲ್ಲಿ ವ್ಯಕ್ತಿಗೆ ಹತ್ತಿರವಿದ್ದವರು ಅವರ ವೇದನೆಯನ್ನು ಅರ್ಥಮಾಡಿಕೊಳ್ಳದೇ, ಅವರ ನಗುವನ್ನು ಸಂತೋಷವೆಂದು ತಪ್ಪಾಗಿ ಗ್ರಹಿಸಿ, ಸಮಯವಿದ್ದಾಗ ಕ್ರಮ ವಹಿಸದೇ, ಪ್ರಸಂಗ ಕೈಮೀರಿ ಹೋಗಿರುವುದನ್ನು ನಾವು ಕಂಡಿದ್ದೇವೆ, ಕೇಳಿದ್ದೇವೆ. ಇಂದಿನಿಂದ ಟಿವಿ ಸೀರಿಯಲ್ ನೋಡಿ ನೀವೂ ಸಹ ಕಣ್ಣೀರು ಸುರಿಸಿ ಎಂದು ನಾನು ಹೇಳುವುದಿಲ್ಲ, ಆದರೆ ಅಂತಹವರನ್ನು ಕಂಡರೆ ನೀವು ಅವರಿಂದ ಅನುಭೂತಿಯ ಬಗ್ಗೆ ಏನು ಕಲಿಯಬಹುದು ಯೋಚಿಸಿ.

ಭಾವನಾತ್ಮಕ ಅನುಭೂತಿ ಇನ್ನೊಬ್ಬರ ನೋವು ನಮಗೇ ಆದಂತೆ ಭಾವಿಸುವ ಕಲೆ. ಇಂಗ್ಲಿಷಿನಲ್ಲಿ ಇದನ್ನು “ವಾಕಿಂಗ್ ಇನ್ ಅದರ್ಸ್ ಶೂಸ್” ಎನ್ನುತ್ತಾರೆ. ಇದರಲ್ಲೂ ನಮ್ಮ ಕಲ್ಪನಾ ಶಕ್ತಿ ಕೆಲಸ ಮಾಡುತ್ತದೆ. ನಮಗೂ ಅಂತಹದೇ ಸನ್ನಿವೇಶ ಹಿಂದೆ ಎದುರಾಗಿದ್ದಾಗ, ನಾವು ಅದರಿಂದ ಆಗ ಹೇಗೆ ಪಾರಾದೆವು ಎಂಬುದನ್ನು ನೀವು ಅವರೊಂದಿಗೆ ಹಂಚಿಕೊಳ್ಳಬಹುದು. ಅಂತಹ ಸನ್ನಿವೇಶ ನಿಮ್ಮ ಜೀವನದಲ್ಲಿ ನಡೆಯದೇ ಇದ್ದರೂ, ಕಾಲ್ಪನಿಕವಾಗಿ ನೀವು ತೆಗೆದುಕೊಂಡ ಕ್ರಮ ಹೇಗೆ ಪ್ರಯೋಜನಕಾರಿಯಾಯಿತು, ಎಂಬುದು ನಿಮಗೆ ಹೇಳಿ-ಕೇಳಿ ತಿಳಿದಿದ್ದಲ್ಲಿ, ಅಂತಹ ಸಲಹೆ ಹಂಚಿಕೊಳ್ಳಬಹುದು. ಉದಾ: ಸ್ನೇಹಿತರೊಬ್ಬರು ಕೆಲಸದ ಸಮಯದಲ್ಲಿ ತಾವು ಮಾಡಿದ ತಪ್ಪಿನಿಂದ ಅವರಿಗಾದ ತೊಂದರೆಯನ್ನು ನಿಮ್ಮೊಂದಿಗೆ ಹಂಚಿಕೊಳ್ಳಬಹುದು. ಆಗ ಅವರ ಸ್ಥಳದಲ್ಲಿ ನೀವಿದ್ದರೆ ಏನು ಮಾಡುತ್ತಿದ್ದಿರಿ ಅಥವಾ ಅವರ ತೊಂದರೆ ಹೇಗೆ ಪರಿಹಾರವಾಯಿತು ಎಂಬುದನ್ನು ಕೇಳಿ ತಿಳಿದುಕೊಳ್ಳಿ. ಮಾಹಿತಿ ನಿಮಗೆ ಮುಂದೆ ಯಾವಾಗಲಾದರೂ ಪ್ರಯೋಜನಕ್ಕೆ ಬರಬಹುದು. ಇಂತಹ ಸಲಹೆ ಪ್ರತಿಯೊಂದು ಸಮಯ/ಸನ್ನಿವೇಷದಲ್ಲಿ ಕೆಲಸ ಮಾಡದಿರಬಹುದು ಎಂಬುದನ್ನು ನೆನಪಿಡಿ.

ಕನಿಕರದ ಅನುಭೂತಿ ರೂಢಿಸಿಕೊಳ್ಳುವುದು ಸುಲಭ. ದುಃಖದಲ್ಲಿರುವವರಿಗೆ ಸಹಾಯ ಹಸ್ತ ನೀಡಿ. ನಿಮ್ಮ ಹತ್ತಿರದವರಾಗಿದ್ದರೆ, ಸಮಯ-ಸಂದರ್ಭಕ್ಕನುಸಾರ, ಅವರಿಗೆ ಕುಡಿಯಲು ನೀರು ಕೊಡಿ, ಊಟ-ತಿಂಡಿ-ವಸತಿ ವ್ಯವಸ್ಥೆ ಮಾಡಿ. ಅವರು ಒಂಟಿಯಾಗಿರಲು ಇಷ್ಟಪಟ್ಟಲ್ಲಿ, ಇರಲು ಬಿಡಿ. ಅವರ ಸಣ್ಣ-ಪುಟ್ಟ ಕೆಲಸಗಳನ್ನು ಮಾಡಿಕೊಡಿ, ಅವರ ಮನೆಯ ಮಕ್ಕಳನ್ನು ವೃದ್ಧರನ್ನು ನೋಡಿಕೊಳ್ಳಿ. ನಿಮ್ಮ ಸಲಹೆಯನ್ನು ಅವರ ಮೇಲೆ ಹೇರಲು ಹೋಗಬೇಡಿ.

ಎಲ್ಲರೂ ತಮ್ಮ ತಮ್ಮ ಯುದ್ಧಗಳನ್ನು ತಾವೇ ಕಾದಾಡಿ ಗೆಲ್ಲಬೇಕು.

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...