Homeಮುಖಪುಟನಾವು ಮನುಷ್ಯರಾಗಿ ಹುಟ್ಟಿದ ಮೇಲೆ ನಮಗಿರಬೇಕಾದ ಗುಣ ಮಾನವತ್ವದ ಬಗ್ಗೆ ನಿಮಗೆ ಗೊತ್ತೆ?

ನಾವು ಮನುಷ್ಯರಾಗಿ ಹುಟ್ಟಿದ ಮೇಲೆ ನಮಗಿರಬೇಕಾದ ಗುಣ ಮಾನವತ್ವದ ಬಗ್ಗೆ ನಿಮಗೆ ಗೊತ್ತೆ?

- Advertisement -
- Advertisement -

ಜೀವನ ಕಲೆಗಳು ಅಂಕಣ – 7 ಅನುಭೂತಿ (Empathy) -1

ನಾವು ಮನುಷ್ಯರಾಗಿ ಹುಟ್ಟಿದ ಮೇಲೆ ನಮಗಿರಬೇಕಾದ ಗುಣ ಮಾನವತ್ವ. ಅದರ ಮುಖ್ಯ ಲಕ್ಷಣ ಅನುಭೂತಿ. ಇದು ಮಾನವನಿಗೆ ಹುಟ್ಟುಗುಣ. ಕೇವಲ ಅನುಕಂಪ ಮತ್ತು ಸಹಾನುಭೂತಿಯ ಮಿಶ್ರಣ ಅನುಭೂತಿ ಅಲ್ಲ. ಅನುಭೂತಿಗೂ ಕನಿಕರಕ್ಕೂ ವ್ಯತ್ಯಾಸವಿದೆ; ಎರಡೂ ಬೇರೆ ಬೇರೆ. ಎಂಪಥಿ ನಮ್ಮ ಭಾವನಾತ್ಮಕ ಪ್ರಜ್ಞೆಯ ಒಂದು ಮುಖ್ಯ ಅಂಶ. ಇದು ನಮ್ಮ ಮತ್ತು ಇತರರ ನಡುವಿನ ಕೊಂಡಿ. ಇದರ ಶಕ್ತಿಯ ಆಧಾರದ ಮೇಲೆ ನಮ್ಮ ಅವರ ಸಂಬಂಧ ಎಷ್ಟು ಗಟ್ಟಿಯಾಗಿದೆ ಎಂದು ಅಳೆಯಬಹುದು. ಅನುಭೂತಿ ನಮಗೆ ನಮಗಿಂತ ಭಿನ್ನವಾದ ವ್ಯಕ್ತಿಗಳನ್ನು ನಮ್ಮವರಂತೆ ಕಾಣಲು ಸಹಾಯಕವಾಗುತ್ತದೆ. ಅವರು ದಿವ್ಯಾಂಗರಾಗಿರಬಹುದು, ಬೇರೆ ದೇಶ, ಪ್ರಾಂತ್ಯ, ಭಾಷೆ, ವೇಷ-ಭೂಷ-ಆಹಾರ-ವಿಚಾರದವರಾಗಿರಬಹುದು. ಸರಳವಾಗಿ ಹೇಳಬೇಕೆಂದರೆ, ಬೇರೆಯವರ ಭಾವನೆಗಳನ್ನು ಅರ್ಥಮಾಡಿಕೊಳ್ಳುವುದರಲ್ಲಿ, ಹಂಚಿಕೊಳ್ಳುವುದರಲ್ಲಿ ನಾವು ಎಷ್ಟು ಸಮರ್ಥರು ಎನ್ನುವುದು ಅನುಭೂತಿ. ಇದರಲ್ಲಿ ಮೂರು ಬಗೆಗಳನ್ನು ಮನಶಾಸ್ತ್ರಜ್ಞರು ಗುರುತಿಸಿದ್ದಾರೆ.

ಕಾಗ್ನಿಟಿವ್ ಎಂಪಥಿ: ಇದನ್ನು ವೇದನಾ ಅನುಭೂತಿ ಎನ್ನಬಹುದು. ಇನ್ನೊಬ್ಬರ ಮುಖಚರ್ಯೆ, ಹಾವಭಾವದಲ್ಲಿ ಅವರ ಭಾವನೆಯನ್ನು ಗುರುತಿಸುವ ಕಲೆ. ಯಾರೋ ಹತ್ತಿರದವರು ದುಃಖದಲ್ಲಿದ್ದಾಗ ನಾವು ಸಂತಾಪ ಸೂಚಿಸುವ ಸಲುವಾಗಿ ಅವರಿಗೆ ಸಂತಾಪ ಸೂಚಕ ಪತ್ರ ಬರೆಯಬಹುದು, ಕರೆ ಮಾಡಬಹುದು, ಅನುಕಂಪ ಸೂಚಿಸಬಹುದು ಆದರೆ ಅವರ ದುಃಖವನ್ನು ಅರ್ಥಮಾಡಿಕೊಳ್ಳಲು ಅಥವಾ ಅವರೊಂದಿಗೆ ಭಾವನೆಗಳನ್ನು ಹಂಚಿಕೊಳ್ಳಲು ಅದಕ್ಕಿಂತ ಹೆಚ್ಚಿನ ಪ್ರಯತ್ನ ಬೇಕಾಗುತ್ತದೆ. ದುಃಖದಲ್ಲಿರುವವರ ಹಾವಭಾವವನ್ನು ನಾವು ನಾವು ಬೇರೆ ಬೇರೆಯಾಗಿ ಅರ್ಥೈಸಬಹುದು. ಹೆಚ್ಚಾಗಿ ನಾವು ಅದನ್ನು ತಪ್ಪಾಗಿ ಅರ್ಥೈಸುತ್ತೇವೆ. ಅವರ ಮುಖದಲ್ಲಿ ಕಾಣುವ ಮುಗುಳ್ನಗೆ ಕೂಡ ದುಃಖಸೂಚಕವಾಗಿರಬಹುದು. ಚಿಕ್ಕ ಮಕ್ಕಳು ಕೂಡ ತಮ್ಮ ತಾಯಂದಿರ ದುಃಖ, ಕೋಪ, ಸಂತೋಷವನ್ನು ಕೂಡಲೇ ಅರ್ಥಮಾಡಿಕೊಂಡು ಅದಕ್ಕೆ ತಕ್ಕಂತೆ ಪ್ರತಿಕ್ರಿಯೆ ನೀಡುತ್ತಾರೆ. ಇದು ಕೇವಲ ದುಃಖಕ್ಕೆ ಅಥವಾ ಸ್ತ್ರೀಯರಿಗೆ ಮೀಸಲಾದ ಪ್ರತಿಕ್ರಿಯೆಯಲ್ಲ, ಸುಖಕ್ಕೂ, ಪುರುಷರಿಗೂ ಅನ್ವಯಿಸುವ ಭಾವನಾತ್ಮಕ ಕಲೆ.

ಎಮೋಷನಲ್ ಎಂಪಥಿ: ಇದನ್ನು ಭಾವನಾತ್ಮಕ ಅನುಭೂತಿ ಎಂದು ಕರೆಯಬಹುದು. ಇದು ವ್ಯಕ್ತಿ ನಿಮ್ಮ ಎದುರಿಗೆ ಇಲ್ಲದಿದ್ದರೂ, ವಿಷಯ ತಿಳಿದ ಕೂಡಲೇ ಆಗುವ ನಿಮ್ಮ ಪ್ರತಿಕ್ರಿಯೆ. ಅವರ ಸ್ಥಳದಲ್ಲಿ ನಾವು ಇದ್ದು, ನಮಗೂ ಅದೇ ರೀತಿಯ ದುಃಖ ಅನುಭವಿಸಬೇಕಾಗಿದ್ದಲ್ಲಿ ನಮಗೆ ಆಗ ಹೇಗೆ ಅನಿಸುತ್ತದೆ ಅದನ್ನು ಊಹಿಸಿ (ಅಥವಾ ನೆನಪಿಸಿಕೊಂಡು) ನೀಡುವ ಪ್ರತಿಕ್ರಿಯೆ.

ಕಂಪ್ಯಾಷನೇಟ್ ಎಂಪಥಿ:  ಎಂದರೆ ಕನಿಕರದ ಅನುಭೂತಿ. ಇದು ನಮ್ಮನ್ನು ಭಾವನಾತ್ಮಕವಾಗಿ ವಿಚಲಿತ ಗೊಳಿಸುವುದರ ಜೊತೆಗೆ ಕ್ರಿಯಾಶೀಲರನ್ನಾಗಿಯೂ ಮಾಡುವಂತಹ ಶಕ್ತಿ. ಉದಾ: ಎಲ್ಲಾದರೂ ನೈಸರ್ಗಿಕ ದುರಂತ ಸಂಭವಿಸಿದಾಗ ನಾವು ನೀಡುವ ಸಹಾಯ ಹಸ್ತ. ಅಂತಹ ದುರಂತ ನಾವು ಅನುಭವಿಸಿರಲೇ ಬೇಕೆಂದಿಲ್ಲ. ಅದರ ಬಗ್ಗೆ ಕೇಳಿ, ತಿಳಿದು, ದೃಶ್ಯ ಮಾಧ್ಯಮದಲ್ಲಿ ನೋಡಿ ನಮಗೆ ಮನವರಿಕೆಯಾಗಿ ನಾವು ನೀಡುವ ಪ್ರತಿಕ್ರಿಯೆ ಇದಾಗಿರುತ್ತದೆ.

ಇವುಗಳನ್ನು ಬೆಳೆಸಿಕೊಳ್ಳುವುದು ಹೇಗೆ?

ವೇದನಾ ಅನುಭೂತಿ ನಮ್ಮ ಊಹಾಶಕ್ತಿಯನ್ನು ಆಧರಿಸಿರುತ್ತದೆ. ಇನ್ನೊಬ್ಬರ ಜೊತೆ ನಮ್ಮ ಸಂಬಂಧ ಎಷ್ಟು ಗಾಢವಾಗಿದೆ ಎನ್ನುವುದರ ಮೇಲೂ ಇದು ಹೋಗುತ್ತದೆ. ಉದಾ: ಸಿನಿಮಾ, ನಾಟಕ, ಟಿವಿ ಸೀರಿಯಲ್ಲಿನಲ್ಲಿ ಬರುವ ಭಾವನಾತ್ಮಕ ದೃಶ್ಯಗಳನ್ನು ಇವರು, ತಮ್ಮ ಮನೆಯಲ್ಲಿ ಕುಳಿತು, ನೋಡಿ, ಕಣ್ಣೀರು ಸುರಿಸುವವರೂ ಇರುತ್ತಾರೆ, ಅದು ಕೇವಲ ನಾಟಕೀಯ ಸನ್ನಿವೇಶ ಎಂದು ತಿಳಿದಿದ್ದರೂ ಸಹ. ಅವರಿಗೆ ಆ ಪಾತ್ರಧಾರಿಯ ಜೊತೆಗೆ ಇರುವ ಕಾಲ್ಪನಿಕ ಸಂಬಂಧ ಮತ್ತು ಪಾತ್ರದ/ಪಾತ್ರಧಾರಿಯ ಭಾವನೆಗೆ ಇವರು ನೀಡುವ ಸ್ವಂತ ಪ್ರತಿಕ್ರಿಯೆ ಆಗಿರುತ್ತದೆ. ಅವರ ಪಕ್ಕದಲ್ಲಿ ಕುಳಿತು ಅದೇ ದೃಶ್ಯವನ್ನು ನೋಡುತ್ತಿರುವ ಇನ್ನೋರ್ವ ವ್ಯಕ್ತಿ ಅದಕ್ಕೆ ತೀರಾ ವಿಭಿನ್ನವಾಗಿ ಪ್ರತಿಕ್ರಿಯೆ ನೀಡಬಹುದು. ಪುರುಷರು ಕ್ರಿಕೆಟ್/ಫುಟ್ಬಾಲ್ ಪಂದ್ಯ ನೋಡುವಾಗ, ಅದರಲ್ಲಿ ಅವರ ಭಾಗವಹಿಸುವಿಕೆ/ತಲ್ಲೀನತೆಯೂ ಸಹಿತ ಅನುಭೂತಿಯನ್ನು ತೋರಿಸುತ್ತದೆ. ವೇದನಾ ಅನುಭೂತಿ ಬೆಳೆಸಿಕೊಳ್ಳಲು ಮೊದಲು ಇನ್ನೋರ್ವ ವ್ಯಕ್ತಿಯ/ಸನ್ನಿವೇಶದ ಬಗ್ಗೆ ನಾವು ಸಾಕಷ್ಟು ತಿಳಿದಿರಬೇಕು, ಇಲ್ಲದಿದ್ದಲ್ಲಿ ನಮ್ಮ ಊಹಾ ಶಕ್ತಿ ನಮಗೆ ಮೋಸ ಮಾಡಬಹುದು. ಎಷ್ಟೋ ಆತ್ಮಹತ್ಯೆ ಪ್ರಕರಣದಲ್ಲಿ ವ್ಯಕ್ತಿಗೆ ಹತ್ತಿರವಿದ್ದವರು ಅವರ ವೇದನೆಯನ್ನು ಅರ್ಥಮಾಡಿಕೊಳ್ಳದೇ, ಅವರ ನಗುವನ್ನು ಸಂತೋಷವೆಂದು ತಪ್ಪಾಗಿ ಗ್ರಹಿಸಿ, ಸಮಯವಿದ್ದಾಗ ಕ್ರಮ ವಹಿಸದೇ, ಪ್ರಸಂಗ ಕೈಮೀರಿ ಹೋಗಿರುವುದನ್ನು ನಾವು ಕಂಡಿದ್ದೇವೆ, ಕೇಳಿದ್ದೇವೆ. ಇಂದಿನಿಂದ ಟಿವಿ ಸೀರಿಯಲ್ ನೋಡಿ ನೀವೂ ಸಹ ಕಣ್ಣೀರು ಸುರಿಸಿ ಎಂದು ನಾನು ಹೇಳುವುದಿಲ್ಲ, ಆದರೆ ಅಂತಹವರನ್ನು ಕಂಡರೆ ನೀವು ಅವರಿಂದ ಅನುಭೂತಿಯ ಬಗ್ಗೆ ಏನು ಕಲಿಯಬಹುದು ಯೋಚಿಸಿ.

ಭಾವನಾತ್ಮಕ ಅನುಭೂತಿ ಇನ್ನೊಬ್ಬರ ನೋವು ನಮಗೇ ಆದಂತೆ ಭಾವಿಸುವ ಕಲೆ. ಇಂಗ್ಲಿಷಿನಲ್ಲಿ ಇದನ್ನು “ವಾಕಿಂಗ್ ಇನ್ ಅದರ್ಸ್ ಶೂಸ್” ಎನ್ನುತ್ತಾರೆ. ಇದರಲ್ಲೂ ನಮ್ಮ ಕಲ್ಪನಾ ಶಕ್ತಿ ಕೆಲಸ ಮಾಡುತ್ತದೆ. ನಮಗೂ ಅಂತಹದೇ ಸನ್ನಿವೇಶ ಹಿಂದೆ ಎದುರಾಗಿದ್ದಾಗ, ನಾವು ಅದರಿಂದ ಆಗ ಹೇಗೆ ಪಾರಾದೆವು ಎಂಬುದನ್ನು ನೀವು ಅವರೊಂದಿಗೆ ಹಂಚಿಕೊಳ್ಳಬಹುದು. ಅಂತಹ ಸನ್ನಿವೇಶ ನಿಮ್ಮ ಜೀವನದಲ್ಲಿ ನಡೆಯದೇ ಇದ್ದರೂ, ಕಾಲ್ಪನಿಕವಾಗಿ ನೀವು ತೆಗೆದುಕೊಂಡ ಕ್ರಮ ಹೇಗೆ ಪ್ರಯೋಜನಕಾರಿಯಾಯಿತು, ಎಂಬುದು ನಿಮಗೆ ಹೇಳಿ-ಕೇಳಿ ತಿಳಿದಿದ್ದಲ್ಲಿ, ಅಂತಹ ಸಲಹೆ ಹಂಚಿಕೊಳ್ಳಬಹುದು. ಉದಾ: ಸ್ನೇಹಿತರೊಬ್ಬರು ಕೆಲಸದ ಸಮಯದಲ್ಲಿ ತಾವು ಮಾಡಿದ ತಪ್ಪಿನಿಂದ ಅವರಿಗಾದ ತೊಂದರೆಯನ್ನು ನಿಮ್ಮೊಂದಿಗೆ ಹಂಚಿಕೊಳ್ಳಬಹುದು. ಆಗ ಅವರ ಸ್ಥಳದಲ್ಲಿ ನೀವಿದ್ದರೆ ಏನು ಮಾಡುತ್ತಿದ್ದಿರಿ ಅಥವಾ ಅವರ ತೊಂದರೆ ಹೇಗೆ ಪರಿಹಾರವಾಯಿತು ಎಂಬುದನ್ನು ಕೇಳಿ ತಿಳಿದುಕೊಳ್ಳಿ. ಮಾಹಿತಿ ನಿಮಗೆ ಮುಂದೆ ಯಾವಾಗಲಾದರೂ ಪ್ರಯೋಜನಕ್ಕೆ ಬರಬಹುದು. ಇಂತಹ ಸಲಹೆ ಪ್ರತಿಯೊಂದು ಸಮಯ/ಸನ್ನಿವೇಷದಲ್ಲಿ ಕೆಲಸ ಮಾಡದಿರಬಹುದು ಎಂಬುದನ್ನು ನೆನಪಿಡಿ.

ಕನಿಕರದ ಅನುಭೂತಿ ರೂಢಿಸಿಕೊಳ್ಳುವುದು ಸುಲಭ. ದುಃಖದಲ್ಲಿರುವವರಿಗೆ ಸಹಾಯ ಹಸ್ತ ನೀಡಿ. ನಿಮ್ಮ ಹತ್ತಿರದವರಾಗಿದ್ದರೆ, ಸಮಯ-ಸಂದರ್ಭಕ್ಕನುಸಾರ, ಅವರಿಗೆ ಕುಡಿಯಲು ನೀರು ಕೊಡಿ, ಊಟ-ತಿಂಡಿ-ವಸತಿ ವ್ಯವಸ್ಥೆ ಮಾಡಿ. ಅವರು ಒಂಟಿಯಾಗಿರಲು ಇಷ್ಟಪಟ್ಟಲ್ಲಿ, ಇರಲು ಬಿಡಿ. ಅವರ ಸಣ್ಣ-ಪುಟ್ಟ ಕೆಲಸಗಳನ್ನು ಮಾಡಿಕೊಡಿ, ಅವರ ಮನೆಯ ಮಕ್ಕಳನ್ನು ವೃದ್ಧರನ್ನು ನೋಡಿಕೊಳ್ಳಿ. ನಿಮ್ಮ ಸಲಹೆಯನ್ನು ಅವರ ಮೇಲೆ ಹೇರಲು ಹೋಗಬೇಡಿ.

ಎಲ್ಲರೂ ತಮ್ಮ ತಮ್ಮ ಯುದ್ಧಗಳನ್ನು ತಾವೇ ಕಾದಾಡಿ ಗೆಲ್ಲಬೇಕು.

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕ್ರಿಸ್ತನಿಗಿಂತ ಮೊದಲೇ ಇಲ್ಲಿದ್ದೇವೆ..ನಮಗೆ ಯಾವುದೇ ದಾಖಲೆಗಳು ಬೇಡ : ಎಸ್‌ಐಆರ್ ತಿರಸ್ಕರಿಸಿದ ಜಾರ್ಖಂಡ್‌ನ ಆದಿವಾಸಿಗಳು

ಜಾರ್ಖಂಡ್‌ನ ಖುಂತಿ ಜಿಲ್ಲೆಯ ದಟ್ಟ ಅರಣ್ಯ ಭಾಗದಲ್ಲಿ ವಾಸಿಸುವ ಮುಂಡಾ ಬುಡಕಟ್ಟು ಸಮುದಾಯದ ಒಂದು ವರ್ಗವು ಚುನಾವಣಾ ಆಯೋಗದ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯನ್ನು ತೀವ್ರವಾಗಿ ವಿರೋಧಿಸಿದ್ದು, ಆಧುನಿಕ...

NICE ನಲ್ಲಿ ಯೋಜನೆಯಲ್ಲಿ ‘ನೈಸ್’ ಎನ್ನುವಂತಹದ್ದು ಏನೂ ಇಲ್ಲ: ರಾಜ್ಯದ ಅತಿದೊಡ್ಡ ಹಗರಣ ಎಂದ ಹೈಕೋರ್ಟ್

ಬೆಂಗಳೂರು-ಮೈಸೂರು ಇನ್‌ಫ್ರಾಸ್ಟ್ರಕ್ಚರ್ ಕಾರಿಡಾರ್ ಯೋಜನೆ (ಬಿಎಂಐಸಿಪಿ) ಅಥವಾ 'ನೈಸ್' ಯೋಜನೆ ಕರ್ನಾಟಕದ ಇತಿಹಾಸದಲ್ಲೇ ಅತ್ಯಂತ ದೊಡ್ಡ ಹಗರಣಗಳಲ್ಲಿ ಒಂದಾಗಿ ಕಾಣಿಸುತ್ತಿದೆ ಎಂದು ಕರ್ನಾಟಕ ಹೈಕೋರ್ಟ್ ತೀವ್ರ ಅಸಮಾಧಾನ ವ್ಯಕ್ತಪಡಿಸಿದೆ. ನಂದಿ ಇನ್‌ಫ್ರಾಸ್ಟ್ರಕ್ಚರ್ ಕಾರಿಡಾರ್...

ಪ್ರತಿಭಟನೆಗೆ ಹೋಗುವ ಮಹಿಳೆಯರು ಗ್ಯಾಂಗ್‌ರೇಪ್‌ ಆನಂದಿಸುತ್ತಾರೆ ಎಂದಿದ್ದ ಟಿ.ಜಿ. ಮೋಹನ್‌ದಾಸ್‌ ವಿರುದ್ಧ ಎಫ್‌ಐಆರ್‌ ದಾಖಲು

ದೆಹಲಿಯ ಜಂತರ್ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವವರ ಮೇಲೆ, ನನ್ನ ಕೈಯಲ್ಲಿ ಅಧಿಕಾರವಿದ್ದರೆ ಗುಂಡು ಹಾರಿಸುತ್ತಿದ್ದೆ ಎಂದು ಇತ್ತೀಚಿನ ಯೂಟ್ಯೂಬ್ ವೀಡಿಯೊದಲ್ಲಿ ಹೇಳಿಕೆ ನೀಡಿದ್ದ ಹಿಂದುತ್ವವಾದಿ ಚಿಂತಕ ಟಿ.ಜಿ. ಮೋಹನ್‌ದಾಸ್ ವಿರುದ್ಧ ತಿರುವನಂತಪುರಂ ಸಿಟಿ...

ಫ್ರಾನ್ಸ್‌ನಲ್ಲಿ ಕೆಲಸದ ಸಮಯ ಟ್ರ್ಯಾಕಿಂಗ್ ಲೋಪ: ಇನ್ಫೋಸಿಸ್‌ಗೆ ₹1.9 ಕೋಟಿ ದಂಡ: ನಾರಾಯಣಮೂರ್ತಿಯವರ ‘70 ಗಂಟೆ ಶ್ರಮ’ದ ಮಾದರಿ ಟ್ರೋಲ್

ಭಾರತೀಯ ಐಟಿ ರಫ್ತು ಸೇವಾ ರಂಗದ ಬೃಹತ್ ಸಂಸ್ಥೆಯಾದ ಇನ್ಫೋಸಿಸ್‌ಗೆ ಫ್ರಾನ್ಸ್‌ನಲ್ಲಿ ಹಿನ್ನಡೆಯಾಗಿದೆ. ಉದ್ಯೋಗಿಗಳ ಕೆಲಸದ ಸಮಯವನ್ನು ದಾಖಲಿಸುವ ವ್ಯವಸ್ಥೆಯಲ್ಲಿನ ನ್ಯೂನತೆಗಳು ಹಾಗೂ ಸ್ಥಳೀಯ ಕಾರ್ಮಿಕ ನಿಯಮಾವಳಿಗಳ ಪಾಲನೆಯಲ್ಲಿ ಕಂಡುಬಂದ ಲೋಪಗಳ ಹಿನ್ನೆಲೆಯಲ್ಲಿ...

ವೋಟರ್ ಐಡಿ, ಬ್ಯಾಂಕ್ ಪಾಸ್‌ಬುಕ್, ಆಧಾರ್, ಜಮೀನಿನ ಹಕ್ಕು ಪತ್ರ ಇದ್ದ ಮಾತ್ರಕ್ಕೆ ಭಾರತೀಯ ಪ್ರಜೆಯಾಗಲ್ಲ: ಕಲ್ಕತ್ತಾ ಹೈಕೋರ್ಟ್

ಆಧಾರ್ ಕಾರ್ಡ್, ಪಾನ್ ಕಾರ್ಡ್, ಮತದಾರರ ಗುರುತಿನ ಚೀಟಿ, ಬ್ಯಾಂಕ್ ಪಾಸ್‌ಬುಕ್ ಮತ್ತು ಪಿತ್ರಾರ್ಜಿತ ಜಮೀನಿನ ದಾಖಲೆಗಳು ಭಾರತೀಯ ಪೌರತ್ವವನ್ನು ನಿರೂಪಿಸಲು ಅಂತಿಮ ಅಥವಾ ನಿರ್ಣಾಯಕ ಪುರಾವೆಗಳಲ್ಲ ಎಂದು ಕಲ್ಕತ್ತಾ ಹೈಕೋರ್ಟ್ ಮಹತ್ವದ...

‘ನಿಮ್ಮ ಸಮಯ ಬಂದಿದೆ’: ಟೌನ್‌ಶಿಪ್ ಯೋಜನೆ ವಿರುದ್ಧದ ಪ್ರತಿಭಟನೆಗೆ 500 ದಿನ: ‘Gen-Z’ ಯುವಕರ ಬೆಂಬಲ ಕೋರಿದ ಬಿಡದಿ ರೈತರು

ಬೆಂಗಳೂರು: ಪ್ರಸ್ತಾವಿತ ಬಿಡದಿ ಟೌನ್‌ಶಿಪ್ ಯೋಜನೆ ವಿರುದ್ಧ ಕೃಷಿ ಭೂಮಿ ಉಳಿವಿಗಾಗಿ ನಡೆಯುತ್ತಿರುವ ರೈತರ ಸುದೀರ್ಘ ಹೋರಾಟವು ಇದೀಗ ಒಂದು ಪ್ರಮುಖ ಘಟ್ಟಕ್ಕೆ ಬಂದು ತಲುಪಿದೆ. ಭೂಸ್ವಾಧೀನದ ವಿರುದ್ಧ ಸತತವಾಗಿ ನಡೆಯುತ್ತಿರುವ ಈ...

ಕೊಡಗಿನ ಆದಿವಾಸಿ ಹಾಡಿಗಳಲ್ಲಿ ಎಸ್‌ಐಆರ್ ಅವ್ಯವಸ್ಥೆ : ಬಿಎಲ್‌ಒಗಳಿಗೆ ತರಬೇತಿಯ ಕೊರತೆ, ಇನ್ನೂ ತಲುಪದ ಗಣತಿ ಫಾರಂ

ಕರ್ನಾಟಕದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆ ಬಹಳ ಯಶಸ್ವಿಯಾಗಿ ನಡೆಯುತ್ತಿದೆ, ಮತದಾರರಿಗೆ ಎಲ್ಲಾ ರೀತಿಯ ಸಹಾಯಗಳನ್ನು ಒದಗಿಸಲಾಗುತ್ತಿದೆ ಎಂದು ರಾಜ್ಯ ಮುಖ್ಯ ಚುನಾವಣಾ ಆಯುಕ್ತ ಅನ್ಬುಕುಮಾರ್ ಅವರು ಪದೇ...

SIR: ಉಡುಪಿಯಲ್ಲಿ ಕರ್ತವ್ಯನಿರತ BLO ಮೇಲೆ ಹಲ್ಲೆಗೆತ್ನಿಸಿದ ಮಾಜಿ ಪಂಚಾಯತ್ ಅಧ್ಯಕ್ಷ, FIR ದಾಖಲು

ಚುನಾವಣಾ ಮತದಾರರ ಪಟ್ಟಿ ಪರಿಷ್ಕರಣೆ (SIR) ಕರ್ತವ್ಯದಲ್ಲಿದ್ದ ಅಂಗನವಾಡಿ ಕಾರ್ಯಕರ್ತೆ ಹಾಗೂ ಬಿಎಲ್‌ಒ (BLO) ಮಹಿಳೆ ಮೇಲೆ ಕರ್ತವ್ಯಕ್ಕೆ ಅಡ್ಡಿಪಡಿಸಿ, ಅವಾಚ್ಯ ಶಬ್ದಗಳಿಂದ ನಿಂದಿಸಿ, ಕೊಲೆ ಬೆದರಿಕೆ ಹಾಕಿದ ಗಂಭೀರ ಆರೋಪ ಉಡುಪಿ...

ಕೋಟ್ಯಾಂತರ ವಿದ್ಯಾರ್ಥಿಗಳ ಭವಿಷ್ಯದ ಜೊತೆ NTA ಚೆಲ್ಲಾಟ: RTI ನಲ್ಲಿ ಬಯಲಾಯ್ತು NTA ಕರ್ಮಕಾಂಡ

ನ್ಯಾಷನಲ್ ಟೆಸ್ಟಿಂಗ್ ಏಜೆನ್ಸಿ (NTA) ಎನ್ನುವ ಈ ಸರ್ಕಾರಿ ಸಂಸ್ಥೆಯ ಮೇಲೆ ಪ್ರತಿವರ್ಷ ಕೋಟ್ಯಂತರ ವಿದ್ಯಾರ್ಥಿಗಳು ತಮ್ಮ ಭವಿಷ್ಯದ ಕನಸುಗಳನ್ನು ಇಟ್ಟುಕೊಳ್ಳುತ್ತಾರೆ. 2018ರಲ್ಲಿ ಸ್ಥಾಪನೆಯಾದ ದಿನದಿಂದ ಇಲ್ಲಿಯವರೆಗೆ ಎನ್‌ಟಿಎ ಸುಮಾರು 270ಕ್ಕೂ ಹೆಚ್ಚು...

ಬಾಗಲಕೋಟೆ: ಪತಿಯಿಂದ 23 ವರ್ಷದ ಪತ್ನಿಯ ಕ್ರೂರ ಕೊಲೆ, ಪೋಷಕರಿಗೆ ವೀಡಿಯೊ ಕರೆ ಮಾಡಿ ಮಗಳ ಸಾವು-ಬದುಕಿನ ಹೋರಾಟ ತೋರಿಸಿದ ವಿಕೃತ ಪತಿ

ಬಾಗಲಕೋಟೆ: ಪತಿಯೋರ್ವ ತನ್ನ 23 ವರ್ಷದ ಪತ್ನಿಯ ಮೇಲೆ ವಿವಾಹೇತರ ಅನೈತಿಕ ಸಂಬಂಧದ ಶಂಕೆ ವ್ಯಕ್ತಪಡಿಸಿ, ಆಕೆಯ ಮೇಲೆ ಮರದ ದಿಮ್ಮಿಯಿಂದ ಕ್ರೂರವಾಗಿ ಹಲ್ಲೆ ನಡೆಸಿ, ತದನಂತರ ನೇಣಿಗೆ ಬಿಗಿದು ಅತ್ಯಂತ ಅಮಾನವೀಯವಾಗಿ...