Homeಮುಖಪುಟಪತ್ರಕರ್ತನ ಮೇಲಿನ ದೂರು ಹಿಂಪಡೆಯುವಂತೆ ಅಂಖಿ ದಾಸ್‌ಗೆ ಒತ್ತಾಯ

ಪತ್ರಕರ್ತನ ಮೇಲಿನ ದೂರು ಹಿಂಪಡೆಯುವಂತೆ ಅಂಖಿ ದಾಸ್‌ಗೆ ಒತ್ತಾಯ

ತಿವಾರಿಯವರು ಅಂಖಿ ದಾಸ್ ವಿರುದ್ಧ ಕ್ರಿಮಿನಲ್ ಬೆದರಿಕೆ ಆರೋಪ ಹೊರಿಸಿ ರಾಯಪುರ ಪೊಲೀಸರಿಗೆ ಕೌಂಟರ್ ದೂರು ದಾಖಲಿಸಿದ್ದಾರೆ.

- Advertisement -
- Advertisement -

ವಾಲ್ ಸ್ಟ್ರೀಟ್ ಜರ್ನಲ್ ವರದಿ ಉಲ್ಲೇಖಿಸಿದ ಪತ್ರಕರ್ತನ ಮೇಲಿನ ಕ್ರಿಮಿನಲ್ ದೂರನ್ನು ಹಿಂಡೆಯುವಂತೆ ಫೇಸ್‌ಬುಕ್‌ನ ಪ್ರಾದೇಶಿಕ ಸಾರ್ವಜನಿಕ ನೀತಿ ನಿರ್ದೇಶಕಿ ಅಂಖಿ ದಾಸ್ ರನ್ನು ಪತ್ರಕರ್ತರ ಹಿತರಕ್ಷಣಾ ಸಮಿತಿಯು ಒತ್ತಾಯಿಸಿದೆ.

ಆಗಸ್ಟ್ 16 ರಂದು ಅಂಖಿ ದಾಸ್, ದೆಹಲಿ ಪೊಲೀಸರಿಗೆ ನೀಡಿದ ದೂರಿನಲ್ಲಿ, ಆನ್‌ಲೈನ್ ನಲ್ಲಿ ಕೆಲವು ವ್ಯಕ್ತಿಗಳು ನನ್ನನ್ನು ಉದ್ದೇಶಪೂರ್ವಕವಾಗಿ ನಿಂದಿಸಿದ್ದಾರೆ ಎಂದು ಹೇಳಿದ್ದಾರೆ.

ಫೇಸ್ ಬುಕ್-ಬಿಜೆಪಿ ಸಖ್ಯ: ಪತ್ರಕರ್ತನ ಮೆಲಿನ ದೂರು ಹಿಂಪಡೆಯುವಂತೆ ಅಂಕಿ ದಾಸ್ ಗೆ ಒತ್ತಾಯ
COurtesy: Oneindia Kannada

“ನನಗೆ ನೀಡಿದ ಕಿರುಕುಳದಿಂದ ನಾನು ತುಂಬಾ ತೊಂದರೆಗೀಡಾಗಿದ್ದೇನೆ” ಎಂದು ದಾಸ್ ತನ್ನ ಪೊಲೀಸ್ ದೂರಿನಲ್ಲಿ ತಿಳಿಸಿದ್ದಾರೆ.

ನ್ಯೂಸ್‌ಲಾಂಡ್ರಿ ವರದಿಯ ಪ್ರಕಾರ ಅಂಕಿ ದಾಸ್ ಅವರು, ಹಿಮಾಂಶು ದೇಶಮುಖ್, ಅವೇಶ್ ತಿವಾರಿ, ಅನಾಮಿಕಾ ಸಿಂಗ್, ಟ್ರಾವಿಸ್ ಬಿಕಲ್, ಮತ್ತು ಟ್ವಿಟರ್ ಬಳಕೆದಾರ ಜಸ್ಟಾನಲಿಸಿಸ್ ಅನ್ನು ಆರೋಪಿಗಳೆಂದು ಹೆಸರಿಸಿದ್ದಾರೆ.

ಅವರಲ್ಲಿ ಅವೇಶ್ ತಿವಾರಿ ಒಬ್ಬರು ಮಾತ್ರ ಪತ್ರಕರ್ತರು. ತಿವಾರಿ ಚತ್ತೀಸ್‌ಘಡದ ಚಾನೆಲ್ ಸ್ವರಾಜ್ಯ ಎಕ್ಸ್‌ಪ್ರೆಸ್‌ನ ಮುಖ್ಯಸ್ಥರಾಗಿದ್ದಾರೆ. ತಿವಾರಿ ಅವರ ಪೋಸ್ಟ್‌ಗೆ ಫೇಸ್‌ಬುಕ್ ಬಳಕೆದಾರರೊಬ್ಬರು ನೀಡಿದ ಪ್ರತಿಕ್ರಿಯೆಯನ್ನು ದಾಸ್ ಉಲ್ಲೇಖಿಸಿದ್ದಾರೆ. ಇದು ಡಬ್ಲ್ಯುಎಸ್‌ಜೆ ಲೇಖನಕ್ಕೆ ಪ್ರತಿಕ್ರಿಯೆಯಾಗಿದೆ ಎಂದು ತಿವಾರಿ ಹೇಳಿದ್ದಾರೆ.

“ಲೈಂಗಿಕ ಕಿರುಕುಳ, ಮಾನಹಾನಿ ಮತ್ತು ಕ್ರಿಮಿನಲ್ ಬೆದರಿಕೆ”ಗಾಗಿ ತಿವಾರಿ ವಿರುದ್ಧ ತನಿಖೆ ನಡೆಸುವಂತೆ ಅಂಖಿ ದಾಸ್ ಮನವಿ ಮಾಡಿದ್ದಾರೆ. ಇದರ ನಡುವೆಯೇ ತಿವಾರಿಗೆ ಅಪರಿಚಿತ ಫೋನ್ ಸಂಖ್ಯೆಗಳಿಂದ 11 ಕರೆಗಳು ಬಂದಿದ್ದು, ಜೈಲು ಶಿಕ್ಷೆ, ಮೊಕದ್ದಮೆ ಮತ್ತು ದೈಹಿಕ ತೊಂದರೆಯ ಬೆದರಿಕೆ ಹಾಕಿದ್ದಾರೆ ಎನ್ನಲಾಗಿದೆ.

ತಿವಾರಿಯವರು ಅಂಖಿ ದಾಸ್ ವಿರುದ್ಧ ಕ್ರಿಮಿನಲ್ ಬೆದರಿಕೆ ಆರೋಪ ಹೊರಿಸಿ ರಾಯಪುರ ಪೊಲೀಸರಿಗೆ ಕೌಂಟರ್ ದೂರು ದಾಖಲಿಸಿದ್ದಾರೆ.


ಇದನ್ನೂ ಓದಿ: ಫೇಸ್‌ಬುಕ್‌ ಇಂಡಿಯಾ ಸಿಇಓ ಅಂಖಿ ದಾಸ್ ವಿರುದ್ದ ಸಿಡಿದೆದ್ದ ಸಹೋದ್ಯೋಗಿಗಳು!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಉತ್ತರ ಪ್ರದೇಶ| ರಸ್ತೆ ಗುಂಡಿಗೆ ಇಳಿದ ಆಂಬ್ಯುಲೆನ್ಸ್; ಮರುಜೀವ ಪಡೆದ ಮೆದುಳು ನಿಷ್ಕ್ರಿಯಗೊಂಡಿದ್ದ ಮಹಿಳೆ!

ಉತ್ತರ ಪ್ರದೇಶದ ಬರೇಲಿಯ ಖಾಸಗಿ ಆಸ್ಪತ್ರೆಯೊಂದರ ವೈದ್ಯರು ಮೆದುಳು ನಿಷ್ಕ್ರಿಯ ಎಂದು ಘೋಷಿಸಿದ್ದು, ಮಹಿಳೆಯೊಬ್ಬರ ಮೃತದೇಹವನ್ನು ಅಂತ್ಯಕ್ರಿಯೆಗಾಗಿ ಮನೆಗೆ ಸಾಗಿಸುತ್ತಿದ್ದಾಗ ಆಂಬ್ಯುಲೆನ್ಸ್ ರಸ್ತೆಯ ಗುಂಡಿಗೆ ಇಳಿದ ನಂತರ ಆಕೆ ಜೀವಂತವಾಗಿರುವ ಲಕ್ಷಣಗಳು ಕಂಡುಬಂದು...

ಪಶ್ಚಿಮ ಏಷ್ಯಾ ಸಂಘರ್ಷ: ದುಬೈ ವಿಮಾನ ನಿಲ್ದಾಣದ ಮೇಲೆ ಇರಾನ್​ ಡ್ರೋನ್​ ದಾಳಿ; ಭಾರತೀಯ ಪ್ರಜೆ ಸೇರಿ ನಾಲ್ವರಿಗೆ ಗಾಯ

ದುಬೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಇರಾನಿನ ಎರಡು ಡ್ರೋಣಗಳಿಂದ ದಾಳಿ ನಡೆದಿದೆ. ಈ ದಾಳಿಯಲ್ಲಿ ಓರ್ವ ಭಾರತೀಯ ಸೇರಿದಂತೆ ನಾಲ್ವರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅಲ್ಲಿನ ಸರ್ಕಾರದ ಪರವಾಗಿ ಪ್ರಕಟಣೆ ಹೊರಡಿಸಿರುವ...

ಜಾರ್ಖಂಡ್| ಆಂಬ್ಯುಲೆನ್ಸ್ ನಿರಾಕರಿಸಿದ ಆಸ್ಪತ್ರೆ ಸಿಬ್ಬಂದಿ; ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿದ ತಂದೆ

ಆಸ್ಪತ್ರೆ ಸಿಬ್ಬಂದಿ ಆಂಬ್ಯುಲೆನ್ಸ್ ನಿರಾಕರಿಸಿದ್ದರಿಂದ ಕೂಲಿಕಾರ ತಂದೆಯೊಬ್ಬ ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿರುವ ಹೃದಯವಿದ್ರಾವಕ ಘಟನೆಯೊಂದು ಜಾರ್ಖಂಡ್‌ನ ಪಶ್ಚಿಮ ಸಿಂಗ್ಭೂಮ್ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ಕಳೆದ ಶನಿವಾರ ನಡೆದಿದೆ ಎನ್ನಲಾದ...

ಮಧುರಾಂತಕಂ ಬಳಿ 14 ವರ್ಷದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ: ಪೋಕ್ಸೋ ಪ್ರಕರಣದಡಿ ಓರ್ವ ರೌಡಿ ಶೀಟರ್ ಬಂಧನ

ಚೆನ್ನೈ (ಚೆಂಗಲ್ಪಟ್ಟು): ಸೋಮವಾರ ರಾತ್ರಿ ಮಧುರಾಂಟಕಂ ಬಳಿಯ ಜಲಮೂಲದ ದಡದಲ್ಲಿ 14 ವರ್ಷದ ಬಾಲಕಿಯ ಮೇಲೆ ರೌಡಿ ಶೀಟರ್ ಮತ್ತು ಆತನ ಸಹಚರರು ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ವರದಿಯಾಗಿದೆ. ಪ್ರಕರಣ ಸಂಬಂಧ ಪೋಕ್ಸೋ...

ಮುಸ್ಲಿಂ ಮಹಿಳೆಯರ ವಿರುದ್ಧದ ಷರಿಯಾ ಕಾನೂನಿಗೆ ಏಕರೂಪ ನಾಗರಿಕ ಸಂಹಿತೆ ಪರಿಹಾರ: ಸುಪ್ರೀಂ ಕೋರ್ಟ್

"ಮುಸ್ಲಿಂ ವೈಯಕ್ತಿಕ ಕಾನೂನಿನಡಿಯಲ್ಲಿ ತಾರತಮ್ಯದ ಆನುವಂಶಿಕ ನಿಬಂಧನೆಗಳನ್ನು ಪರಿಹರಿಸಲು ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಅತ್ಯಂತ ಪರಿಣಾಮಕಾರಿ ಪರಿಹಾರ ಎಂದು ಸುಪ್ರೀಂ ಕೋರ್ಟ್ ಮಂಗಳವಾರ (ಮಾ.20) ಹೇಳಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯ...

ಮುಂಬೈ: ಬಜೆಟ್ ಅಧಿವೇಶನದ ನಡುವೆ ವಿಧಾನ ಭವನದ ಬಳಿ ವ್ಯಕ್ತಿಯೊಬ್ಬನಿಂದ ಆತ್ಮಹತ್ಯೆಗೆ ಯತ್ನ: ವಶಕ್ಕೆ ಪಡೆದ ಪೊಲೀಸರು

ಮುಂಬೈ: ಮಾರ್ಚ್ 11, ಬುಧವಾರ ಮಹಾರಾಷ್ಟ್ರ ವಿಧಾನ ಭವನದ ಹೊರಗೆ ವ್ಯಕ್ತಿಯೊಬ್ಬರು ಆತ್ಮಾಹುತಿ ಮಾಡಿಕೊಳ್ಳಲು ಯತ್ನಿಸಿರುವುದಾಗಿ ವರದಿಯಾಗಿದೆ. ತಕ್ಷಣವೇ ಮುಂಬೈ ಪೊಲೀಸರು ಆತನನ್ನು ಬಂಧಿಸಿದ್ದಾರೆ.  2026 ರ ಮಹಾರಾಷ್ಟ್ರ ಬಜೆಟ್ ಅಧಿವೇಶನ ವಿಧಾನ ಭವನದಲ್ಲಿ...

ಕೋವಿಡ್ ಲಸಿಕೆ ಕೆಲ ಸಾವುಗಳಿಗೆ ಕಾರಣವಾಗಿದೆ ಎಂದು ಅಧಿಕೃತ ದತ್ತಾಂಶ ತೋರಿಸಿದೆ, ಸರ್ಕಾರ ಜವಾಬ್ದಾರಿಯಿಂದ ನುಣುಚಿಕೊಳ್ಳಲು ಸಾಧ್ಯವಿಲ್ಲ : ಸುಪ್ರೀಂ ಕೋರ್ಟ್

ಸರ್ಕಾರದ ಅಧೀನದ ಸಾರ್ವಜನಿಕ ಆರೋಗ್ಯ ವ್ಯವಸ್ಥೆಯ ಮೂಲಕ ಕೋವಿಡ್ ಲಸಿಕೆಯನ್ನು ವಿತರಿಸಲಾಗಿದೆ. ಕೋವಿಡ್ ಲಸಿಕೆ ಪಡೆದ ಬಳಿಕ ಕೆಲ ಸಾವುಗಳು ಸಂಭವಿಸಿರುವುದನ್ನು ಅಧಿಕೃತ ದತ್ತಾಂಶಗಳೇ ದೃಢಪಡಿಸಿವೆ. ಹೀಗಿರುವಾಗ, ಲಸಿಕೆ ಹಾಕಿಸಿಕೊಂಡ ನಂತರ ಸಾವು...

ತಮಿಳುನಾಡು| ಪೊಲೀಸ್ ದೌರ್ಜನ್ಯದಿಂದ ಎರಡು ತಿಂಗಳಲ್ಲಿ ನಾಲ್ವರು ದಲಿತರು ಸಾವು

ವಿಧಾನಸಭೆ ಚುನಾವಣೆ ಹೊಸ್ತಿಲಲ್ಲಿರುವ ತಮಿಳುನಾಡಿನಲ್ಲಿ ಕಾನೂನು ಸುವ್ಯವಸ್ಥೆ ಹದಗೆಡುತ್ತಿರುವುದನ್ನು ಪ್ರತಿಬಿಂಬಿಸುವ ಆತಂಕಕಾರಿ ವಿಚಾರವೊಂದು ಮುನ್ನಲೆಗೆ ಬಂದಿದ್ದು, ಪೊಲೀಸ್ ಹಿಂಸಾಚಾರದಿಂದಾಗಿ ಎರಡು ತಿಂಗಳ ಅವಧಿಯಲ್ಲಿ ನಾಲ್ವರು ದಲಿತರು ಸಾವನ್ನಪ್ಪಿದ್ದಾರೆ. ಈ ಸಾವುಗಳಲ್ಲಿ, ಎರಡು ಪ್ರಕರಣಗಳನ್ನು...

ಪಶ್ಚಿಮ ಏಷ್ಯಾ ಸಂಘರ್ಷ| ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿದ್ದಾಗಿ ವಿಡಿಯೋ ಹಂಚಿಕೊಂಡ ಅಮೆರಿಕ ಸೇನೆ

ಪಶ್ಚಿಮ ಏಷ್ಯಾದಿಂದ ತೈಲ ರಫ್ತನ್ನು ತಡೆಯಲು ಇರಾನ್ ಪ್ರಯತ್ನಿಸುತ್ತಿರುವುದರಿಂದ ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿರುವುದಾಗಿ ಅಮೆರಿಕ ಸೇನೆ ಹೇಳಿಕೊಂಡಿದೆ.  ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಈ ಹಿಂದೆ ಇರಾನ್ ಜಲಸಂಧಿಯಲ್ಲಿ ಗಣಿಗಳನ್ನು...

13 ವರ್ಷಗಳಿಂದ ಕೋಮಾದಲ್ಲಿರುವ ಯುವಕನ ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಅನುಮತಿ

ಕಳೆದ 13 ವರ್ಷಗಳಿಂದ ಕೋಮಾದಲ್ಲಿರುವ 32 ವರ್ಷದ ಹರೀಶ್ ರಾಣಾ ಎಂಬ ಯುವಕನ ಪರೋಕ್ಷ (ನಿಷ್ಕ್ರಿಯ) ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಬುಧವಾರ (ಮಾ.11) ಅನುಮತಿ ನೀಡಿದೆ ಎಂದು livelaw.in ವರದಿ ಮಾಡಿದೆ. ದೆಹಲಿ ಮೂಲದ ಹರೀಶ್...