Homeಮುಖಪುಟಎಲ್ಲರ ದೇವರನ್ನು ಎಷ್ಟೆಲ್ಲಾ ಗೋಡೆಗಳು ಬಂಧಿಸಿವೆ!

ಎಲ್ಲರ ದೇವರನ್ನು ಎಷ್ಟೆಲ್ಲಾ ಗೋಡೆಗಳು ಬಂಧಿಸಿವೆ!

- Advertisement -
- Advertisement -

-1-

’ಇಲ್ಲೇ ಹತ್ತಿರದಲ್ಲಿ ಒಂದು ಗುಡಿ ಇದೆ. ಅದರ ಮುಂದೆ ವಾಕಿಂಗ್ ಮಾಡುವಷ್ಟು ಜಾಗವಿದೆ. ಇವತ್ತು ಸಂಜೆ ಅಲ್ಲಿಗೆ ಹೋಗೋಣ’ ಅಂತ ಮಂಜುಗೆ ಗಂಟುಬಿದ್ದಿದ್ದೆ. ಆಫೀಸ್‌ನಿಂದ ಬಂದ ಕೂಡಲೇ ಆಕೆ ’ಹೋಗೋಣ ಬನ್ನಿ’ ಅಂದಳು. ಹೊರಟೆವು. ಅಲ್ಲಿ ಅಕ್ಕತಂಗಿಯರ ಹೆಸರಿನಲ್ಲಿ ಎರಡು ಗುಡಿಗಳಿದ್ದವು. ಅವು ಗುಡಿಯ ಹೆಸರಿನಂತೆ ಸಣ್ಣದಾಗೇನು ಇರಲಿಲ್ಲ. ಮೊದಲು ಸಣ್ಣಾಕಿಯ ಗುಡಿಯೊಳಗೆ ಹೋದೆವು. ಸ್ಪೀಕರ್‌ಗಳಲ್ಲಿ ಮಾರ್ದನಿಸುವ ’ಶಿಷ್ಟ’ ರಾಗದ ಸ್ತುತಿಗಳು ಅಪ್ಪಳಿಸಲಿಲ್ಲ. ಯಾವುದೇ ಸಂಸ್ಕೃತ ಮಂತ್ರಗಳಿರಲಿಲ್ಲ. ಗರ್ಭಗುಡಿಯೊಳಗೆ ಸಣ್ಣ ಹುಡುಗನೊಬ್ಬ ಪೂಜಾರಿಯಂತೆ ಕೂತಿದ್ದ. ಅವನಿಗೇನು ಕೆಲಸವಿದ್ದಂತೆ ಕಾಣಲಿಲ್ಲ. ಬರುತ್ತಿದ್ದ ಭಕ್ತರೆಲ್ಲರೂ ಸೀದಾ ಗರ್ಭಗುಡಿಯ ಒಳಗೇ ಹೋಗಿ ನಮಸ್ಕರಿಸುತ್ತಿದ್ದರು. ನಾವಿಬ್ಬರು ’ಇಂತಹ ದೊಡ್ಡ ಆಲಯದಲ್ಲಿ ಇಷ್ಟು ಸ್ವಾತಂತ್ರ್ಯವಿದೆಯಲ್ಲ?’ ಅಂಥ ದಂಗಾದೆವು. ಗರ್ಭಗುಡಿಯೊಳಗೆ ಬಗ್ಗಿ ನೋಡಿದೆವು. ಐದಾರು ಜನ ಹೆಂಗಸರು ಅಪ್ಪಣೆ ಕೇಳುವಂತೆ ಕೂತಿದ್ದರು. ಕೆಲವರು ಬೇಡಿಕೆಯಿಟ್ಟು ಧ್ಯಾನಸ್ಥರಾಗಿದ್ದರು. ನಾನು ’ಇಲ್ಲಿ ಸಾಕು ಬಾ. ದೊಡ್ಡಾಕಿಯ ಗುಡಿಯೊಳಗೆ ಹೋಗೋಣ’ ಅಂದೆ. ದೊಡ್ಡಾಕಿಯ ಗರ್ಭಗುಡಿಯೊಳಗೆ ಹೆಂಗಸರು ಗಂಡಸರು ಹೀಗೆ ಹತ್ತಾರು ಜನ ಕೂತ್ತಿದ್ದರು. ಅವರಲ್ಲಿ ಬೇಡಿಕೊಳ್ಳುವಂತೆ ಕೈಮುಗಿದು ಕೂತವರಿದ್ದರು. ಮೊಣಕಾಲೂರಿ ನಮಸ್ಕರಿಸುತ್ತಿದ್ದವರಿದ್ದರು. ದೇವಿಯನ್ನೇ ದಿಟ್ಟಿಸಿ ನೋಡುತ್ತಾ ಏನೇನೋ ಕೇಳುವವರಿದ್ದರು. ಹೀಗೆ ಡೈರಕ್ಟಾಗಿ ದೇವಿ ಮತ್ತು ಭಕ್ತರ ನಡುವೆ ಸಂಭಾಷಣೆ ನಡೆಯುತ್ತಿತ್ತು. ಇವರ ನಡುವೆ ನಮಗೆ ಅದ್ಭುತವೊಂದು ಕಾಣಿಸಿತು! ಬುರ್ಖಾಧಾರಿ ಹೆಣ್ಣು ಮಗಳೊಬ್ಬಳು ತನ್ನ ಕೂಸು ಮತ್ತು ತಾಯಿಯೊಂದಿಗೆ ಒಳಗಿದ್ದಳು. ಆಕೆಯ ತಾಯಿ ಮಗು ಆಡಿಸುತ್ತಿದ್ದಳು. ಅವಳು ದೇವಿಯ ಮುಂದಿದ್ದ ಕಟ್ಟಿಗೆಯಿಂದ ಮಾಡಿದ ಪೆಟ್ಟಿಗೆಗೆ ನಮಸ್ಕರಿಸಿ, ಎತ್ತುತ್ತಾ ಇಳಿಸುತ್ತಾ, ಪುನಃ ನಮಸ್ಕರಿಸುವಲ್ಲಿ ತಲ್ಲೀನಳಾಗಿದ್ದಳು. ಆಕೆಯನ್ನು ಮಾತಾಡಿಸಬೇಕೆಂದುಕೊಂಡೆವು. ಆದರೆ ಆಕೆಯ ಭಕ್ತಿಗೇಕೆ ಅಡ್ಡಿಪಡಿಸಬೇಕೆಂದು ಸುಮ್ಮನಾದೆವು.

ನಾವು ಹಿಂದೆಲ್ಲಾ ನೋಡಿದಂತಹ ದೇವಸ್ಥಾನಗಳಲ್ಲಿ, ದೇಹಕ್ಕೆ ತೊಟ್ಟ ಮೇಲ್ಭಾಗದ ವಸ್ತ್ರವನ್ನು ತೆಗೆದು ಬಗಲಲ್ಲಿ ಇಟ್ಟುಕೊಂಡು ಹೋಗುವುದು; ನಡು ಬಗ್ಗಿಸಿ ಗರ್ಭಗುಡಿಯ ಮುಂದೆ ನಿಂತು ದೇವರ ದರ್ಶನ ಮಾಡಿಕೊಳ್ಳುವುದು; ಅರ್ಥವಾಗದ ಶ್ಲೋಕಗಳನ್ನು ಉಚ್ಚರಿಸುತ್ತಾ ತೀರ್ಥಕೊಡುವ ಅರ್ಚಕನ ಆರತಿ ತಟ್ಟಗೆ ಚಿಲ್ಲರೆ ಹಾಕುವಂತಹದ್ದು ಸಾಮಾನ್ಯವಾಗಿರುತ್ತದೆ. ಹಾಗಾಗಿಯೋ ಏನೋ ಬುರ್ಖಾಧಾರಿ ಮಹಿಳೆಯೊಬ್ಬಳನ್ನು ದೇವಿಯ ಗರ್ಭಗುಡಿಯೊಳಗೆ ನೋಡಿದ್ದು ನಮಗೆ ಅದ್ಭುತವಾಗಿ ಕಂಡಿತು. ಆದರೆ ದೇವಿಯ ಗರ್ಭಗುಡಿಯಲ್ಲಿದ್ದ ಸ್ಥಳೀಯರಿಗೆ ಅದು ಸಹಜವಾಗಿಯೇ ಇತ್ತು. ನಮ್ಮ ಸುತ್ತಲೂ ಇಂತಹ ಸಹಜ ಬದುಕನ್ನು ಸಹಿಸದವರು ಇರುವುದರಿಂದಲೇ ಗುಡಿಯಿರುವ ಊರು, ಗುಡಿಯ ಹೆಸರನ್ನು ಇಲ್ಲಿ ಬರೆಯಲಾಗಲಿಲ್ಲ.

-2-

ಇದರ ನಡುವೆ ಮತ್ತೊಂದು ಘಟನೆ ನೆನಪಾಗುತ್ತಿದೆ. ನ್ಯೂಸ್ ಚಾನೆಲ್ ಬಿತ್ತರಿಸಿದ್ದ 59 ಸೆಕೆಂಡಿನ ವಿಡಿಯೋವನ್ನು ನನ್ನ ಗೆಳೆಯರು ವಾಟ್ಸಪ್ ಸ್ಟೇಟಸ್‌ಗೆ ಹಾಕೊಂಡಿದ್ದರು. ಅದು ಬಿಜಾಪುರದ ಸಿದ್ದೇಶ್ವರ ಸ್ವಾಮೀಜಿಯವರಿಗೆ ಸಂಬಂಧಿಸಿತ್ತು. ಇವರು ಮೊನ್ನೆಯ ಏಕಾದಶಿಯಂದು ಇಹಲೋಕ ತ್ಯಜಿಸಿದರು. ಅವರಲ್ಲಿ ದೇವರನ್ನು ಕಂಡಂತಹ ಜನಸಾಮಾನ್ಯರು ಸುತ್ತಮುತ್ತಲಿನ ಹಳ್ಳಿಗಳಿಂದಲೂ ದೂರದೂರುಗಳಿಂದಲೂ ದೇಹ ದರ್ಶನಕ್ಕಾಗಿ ಹರಿದುಬರುತ್ತಿದ್ದರು. ಆ ಜನರಲ್ಲಿ ಬೇರೆ ಧರ್ಮದವರೂ ಇದ್ದರು. ಸದಾ ಧರ್ಮದ ಹೆಸರಲ್ಲಿ ಉರಿವ ಬೆಂಕಿಗೆ ತುಪ್ಪ ಸುರಿವ ಮಾಧ್ಯಮಗಳ ಪ್ರತಿನಿಧಿಗಳು ಅಲ್ಲಿ ಕಾಣುತ್ತಿದ್ದ ’ಬೇರೆ ಧರ್ಮ’ದವರನ್ನೇ ಕರೆದು ಮಾತನಾಡಿಸುತ್ತಿದ್ದರು. ಅಂತಹವರಲ್ಲಿ ಸ್ಥಳೀಯ ರಹೀಂನಗರದ ಹಿರಿಜೀವವೂ ಒಂದಾಗಿತ್ತು. ಇವರಿಗೆ ಮಾಧ್ಯಮ ಪ್ರತಿನಿಧಿಯೊಬ್ಬ ’ಶ್ರೀಗಳು ಇವತ್ತು ನಮ್ಮ ಜೊತೆಗಿಲ್ಲ, ತಾವೊಬ್ಬ ಬೇರೆ ಧರ್ಮವರಾಗಿ ಶ್ರೀಗಳ ದರ್ಶಕ್ಕೆ ಬಂದಿದ್ದೀರಿ, ಯಾವ ರೀತಿ ಪ್ರಭಾವ ಬೀರಿದ್ದರು?’ ಎಂಬ ಪ್ರಶ್ನೆ ಕೇಳುತ್ತಾನೆ. ಇದನ್ನು ಕೇಳಿಸಿಕೊಂಡ ಕೂಡಲೇ ಆ ಜೀವ ದುಃಖಿಸುತ್ತಾ, ಬಿಕ್ಕಳಿಸುತ್ತದೆ. ಇದರ ನಡುವೆ ಮಾಧ್ಯಮ ಪ್ರತಿನಿಧಿ ಮತ್ತೆ ’ಹೋಗುತ್ತಿದ್ರಾ, ಶ್ರೀಗಳ ಭಾಷಣಕ್ಕೆ? ಮಠಕ್ಕೆ ಹೋಗುತ್ತಿದ್ರಾ?’ ಅಂಥ ಕೇಳುತ್ತಾನೆ. ಆ ಹಿರಿಜೀವ ’ಏ… ಮಠಕ್ಕೆ ಹೋಗಿಲ್ಲ. ಹೋಗ್ಬೇಕಂತ್ಹೇಳಿ ವಿಚಾರ ಬಾಳ್ ಸರಿ ಬಂದಿತ್ತು ಖರೆ. ಅಲ್ಲಿ ಬಿಡಾಂಗಿಲ್ಲ, ಅದಾಗುತೈತಿ, ಹಂಗಾ ಹಿಂಗಾ ಅನ್ನಾಣ…. ಅಂಥ ಬಿಟ್ಬಿಟ್ಟೇವು. ಹೋಗೋ ವಿಚಾರ ಇಟ್ಟಿದ್ದೇವು. ಅಷ್ಟರಲ್ಲಿ ಹಿಂಗಾತು. ದೈವವಿಲ್ಲ’ ಅಂತ ಉತ್ತರಿಸಿದ ಮಾತುಗಳು ನನ್ನನ್ನು ಕೊರೆಯಲಾರಂಭಿಸಿದವು. ಒಮ್ಮೆಯಾದರೂ ’ನಡೆದಾಡುವ ದೇವರು’ ಬದುಕಿದ್ದಾಗ ಮಠದಲ್ಲಿ ಕಾಣಬಹುದಾಗಿದ್ದ ಹಂಬಲವನ್ನಷ್ಟೇ ಆ ಜೀವ ತೋಡಿಕೊಂಡಿದೆ.

ಜನ ತಮ್ಮಿಚ್ಛೆಯಂತೆ ತಮ್ಮ ಕಷ್ಟಕ್ಕೆ ನೆರವಾಗುವ, ನಂಬುವ, ಪೂಜಿಸುವ ದೇವರನ್ನು ಹೇಗೆಲ್ಲಾ ಬಂಧಿಸಿಟ್ಟಿದ್ದೇವಲ್ಲ? ಆ ಬುರ್ಖಾಧಾರಿ ಹೆಣ್ಣು ಮಗಳ ಸಂಕಟವನ್ನು ಆಲಿಸುವಂತಹ ಹಲವಾರು ಹೆಣ್ಣುದೇವರನ್ನು ದೂರವಿಟ್ಟಿದ್ದೇವಲ್ಲ? ಒಳಿತನ್ನು ಉಪದೇಶಿಸುವ ವ್ಯಕ್ತಿಯನ್ನು ಕಾಣಲು ಹೋದರೆ ’ಏನಾಗಬಹುದೋ’ ಎಂಬ ವಾತಾವರಣವನ್ನು ನಿರ್ಮಿಸಿದ್ದೇವಲ್ಲ? ’ಅಲ್ಲಿ ಬಿಡಾಂಗಿಲ್ಲ, ಅದಾಗುತೈತಿ, ಹಂಗಾಹಿಂಗಾ’ ಎಂಬುದರಲ್ಲಿ ಭಯ ಆತಂಕವೇನೂ ಕಾಣಿಸದು. ಈ ಮಾತುಗಳಲ್ಲಿ ’ನಮ್ಮಿಂದ ಏಕೆ ತೊಂದರೆ ಆಗಬೇಕು? ದೇವರಂತ ಮನುಷ್ಯನ ಮಾತುಗಳನ್ನು ಅಲ್ಲಿಇಲ್ಲಿ ಕೇಳಿಸಿಕೊಂಡರಾತು. ಯಾವ ಸಮಸ್ಯೆಯಾಗದಂತೆ ಎಂದಾದರೊಮ್ಮೆ ಕಂಡರಾತು’ ಎಂಬ ಕಳಕಳಿ ತುಂಬಿದೆ. ಇಷ್ಟೇ ಅಲ್ಲದೆ ನನಗೆ ಆ ಹಿರಿಜೀವದ ಮಾತುಗಳು ನಡೆದಾಡುವ ದೇವರು ಎಂದು ಕರೆಸಿಕೊಂಡಿದ್ದವರನ್ನು ಕಾಣುವುದಕ್ಕೆ ಅವಕಾಶವನ್ನೇ ಇಲ್ಲವಾಗಿಸಿದವರನ್ನು ಅಣಕಿಸುವಂತೆ ಅನುರಣಿಸುತ್ತಿವೆ. ಛೇ…! ಎಲ್ಲರ ದೇವರನ್ನು ಎಷ್ಟೆಲ್ಲಾ ಗೋಡೆಗಳು ಬಂಧಿಸಿವೆ!

ಡಾ. ರವಿ ಎಂ

ಡಾ. ರವಿ ಎಂ
ಶಿವಮೊಗ್ಗದ ಸಿದ್ಲಿಪುರದವರು. ಕುವೆಂಪು ವಿಶ್ವವಿದ್ಯಾಲಯದಿಂದ ’ಕನ್ನಡ ಮಹಾಭಾರತ ಕಾವ್ಯಗಳಲ್ಲಿ ಪ್ರಭುತ್ವ, ಯುದ್ಧ ಮತ್ತು ಜನತೆ’ ಎಂಬ ಅಧ್ಯಯನಕ್ಕೆ ಪಿಎಚ್.ಡಿ. ಪದವಿ. ’ಪರ್ಯಾಯ’, ’ಪಿ. ಲಂಕೇಶ್’, ’ಶಾಸನ ಓದು’ ಪ್ರಕಟಿತ ಕೃತಿಗಳು. ಹಳಗನ್ನಡ ಸಾಹಿತ್ಯ ರವಿಯವರ ಆಸಕ್ತಿ ಕ್ಷೇತ್ರವಾಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮಣಿಪುರ ಹಿಂಸಾಚಾರ: ಕಾಮ್ಜಾಂಗ್‌ನಲ್ಲಿ ಇಬ್ಬರು ಕುಕಿ ಪುರುಷರು ಶವವಾಗಿ ಪತ್ತೆ; ಹೆಚ್ಚಿದ ಉದ್ವಿಗ್ನತೆ 

ಮಣಿಪುರದ ಕಾಮ್ಜಾಂಗ್ ಜಿಲ್ಲೆಯಲ್ಲಿ ಬುಧವಾರದಿಂದ ನಾಪತ್ತೆಯಾಗಿದ್ದ ಇಬ್ಬರು ಕುಕಿ ಪುರುಷರು ಗುರುವಾರ ಥವಾಯ್ ಕುಕಿ ಗ್ರಾಮದ ಅರಣ್ಯ ಪ್ರದೇಶದಲ್ಲಿ ಶವವಾಗಿ ಪತ್ತೆಯಾಗಿದ್ದರಿಂದ ಉದ್ವಿಗ್ನತೆ ಹೆಚ್ಚಾಗಿದೆ. ಜಿಲ್ಲೆಯ ಥಾವಾಯಿ ಕುಕಿ ಗ್ರಾಮದ 42 ವರ್ಷದ ಥೇಂಗಿನ್...

ಉತ್ತರ ಪ್ರದೇಶ | ಮುಸ್ಲಿಮರೊಂದಿಗಿನ ಶಾಂತಿ ಸಭೆಯಲ್ಲಿ ‘ಇರಾನ್‌ಗೆ ಹೋಗಿ’ ಎಂದ ಪೊಲೀಸ್‌ ಅಧಿಕಾರಿ : ತೀವ್ರ ಆಕ್ರೋಶ

ಉತ್ತರ ಪ್ರದೇಶದಲ್ಲಿ ಈದುಲ್ ಫಿತರ್ (ರಂಝಾನ್) ಹಬ್ಬಕ್ಕೆ ಪೂರ್ವಭಾವಿಯಾಗಿ ನಡೆದ ಶಾಂತಿ ಸಭೆಯಲ್ಲಿ ಪೊಲೀಸ್ ಅಧಿಕಾರಿಯೊಬ್ಬರು ನೀಡಿದ ಹೇಳಿಕೆ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಸಂಭಾಲ್ ಜಿಲ್ಲೆಯ ಅಸ್ಮೋಲಿ ಪ್ರದೇಶದಲ್ಲಿ ರಂಝಾನ್ ತಿಂಗಳ ಕೊನೆಯ...

ಪಶ್ಚಿಮ ಏಷ್ಯಾ ಸಂಘರ್ಷ: ಲೆಬನಾನ್‌ನಲ್ಲಿ ಆರೋಗ್ಯ ಕೇಂದ್ರದ ಮೇಲೆ ಇಸ್ರೇಲ್ ದಾಳಿ: ವೈದ್ಯರು, ದಾದಿಯರು ಸೇರಿ 12 ಮಂದಿ ಸಾವು

ದಕ್ಷಿಣ ಲೆಬನಾನ್‌ನಲ್ಲಿರುವ ಆರೋಗ್ಯ ಕೇಂದ್ರದ ಮೇಲೆ ಇಸ್ರೇಲ್ ನಡೆಸಿದ ದಾಳಿಯಲ್ಲಿ 12 ವೈದ್ಯಕೀಯ ಕಾರ್ಯಕರ್ತರು ಸಾವನ್ನಪ್ಪಿದ್ದಾರೆ ಎಂದು ಲೆಬನಾನಿನ ಸಾರ್ವಜನಿಕ ಆರೋಗ್ಯ ಸಚಿವಾಲಯ ವರದಿ ಮಾಡಿದೆ.  ಲೆಬನಾನ್‌ನಾದ್ಯಂತ ಇಸ್ರೇಲಿ ದಾಳಿಯಲ್ಲಿ ಈವರೆಗೂ 103 ಮಕ್ಕಳು...

ವಿಶೇಷ ಸಚಿವ ಸಂಪುಟ ಸಭೆಯಲ್ಲಿ ಒಳಮೀಸಲಾತಿ ಪರ ತೀರ್ಮಾನಕ್ಕೆ ಎಲ್ಲರೂ ಸಹಕರಿಸಿ: ಒಳಮೀಸಲಾತಿ ಹೋರಾಟ ಸಮಿತಿ ಮನವಿ

ಬೆಂಗಳೂರು: ಒಳಮೀಸಲಾತಿ ಜಾರಿ ಮಾಡುವ ಪ್ರಕ್ರಿಯೆಯು ಕೊನೆಯ ಹಂತಕ್ಕೆ ತಲುಪಿದ್ದು, ಇದನ್ನು ಸುಲಲಿತವಾಗಿ ಬಗೆಹರಿಸಿ ಸಾಮಾಜಿಕ ನ್ಯಾಯವನ್ನು ಎತ್ತಿಹಿಡಿಯಲು ಆಗ್ರಹಿಸಿ ಇಂದು (14 ಮಾರ್ಚ್)‌ ನಗರದ ಪ್ರೆಸ್‌ ಕ್ಲಬ್‌ನಲ್ಲಿ ಒಳಮೀಸಲಾತಿ ಹೋರಾಟಗಾರರು...

ಕರ್ನಾಟಕ ಕೇಂದ್ರೀಯ ವಿಶ್ವವಿದ್ಯಾಲಯದಲ್ಲಿ ಅಕ್ರಮ ನೇಮಕಾತಿ; ರೋಸ್ಟರ್ ಮೀಸಲು ಕ್ರಮ ಉಲ್ಲಂಘನೆ ಆರೋಪ: ನ್ಯಾಯಾಂಗ ತನಿಖೆಗೆ ಆಗ್ರಹ

ಕಲಬುರಗಿ: ಕಲಬುರಗಿ ಜಿಲ್ಲೆಯಲ್ಲಿರುವ Central University of Karnataka ದಲ್ಲಿ ಬೋಧಕ ಹುದ್ದೆಗಳ ನೇಮಕಾತಿಯಲ್ಲಿ ಮೀಸಲು ಕ್ರಮ ಉಲ್ಲಂಘನೆ ಹಾಗೂ ಅಕ್ರಮ ನೇಮಕಾತಿಗಳು ನಡೆದಿವೆ ಎಂಬ ಆರೋಪಗಳ ಹಿನ್ನೆಲೆಯಲ್ಲಿ ಹಾಲಿ ನ್ಯಾಯಾಧೀಶರ ನೇತೃತ್ವದಲ್ಲಿ...

ಸಂಭಾಲ್ | ಮಸೀದಿಯಲ್ಲಿ ನಮಾಝ್ ಮಾಡುವವರ ಸಂಖ್ಯೆ ಮಿತಿಗೊಳಿಸಲು ಸಾಧ್ಯವಿಲ್ಲ; ಕಾನೂನು ಸುವ್ಯವಸ್ಥೆ ಕಾಪಾಡಲು ಆಗದಿದ್ದರೆ ರಾಜೀನಾಮೆ ನೀಡಿ: ಅಧಿಕಾರಿಗಳಿಗೆ ಅಲಹಾಬಾದ್ ಹೈಕೋರ್ಟ್ ತರಾಟೆ

ಸಂಭಾಲ್ ಜಿಲ್ಲೆಯ ಮಸೀದಿಯೊಂದರಲ್ಲಿ ರಂಝಾನ್ ಸಮಯದಲ್ಲಿ ನಮಾಝ್ ಮಾಡುವವರ ಸಂಖ್ಯೆಯನ್ನು ಮಿತಿಗೊಳಿಸುವ ಉತ್ತರ ಪ್ರದೇಶ ಸರ್ಕಾರದ ನಿರ್ಧಾರವನ್ನು ಅಲಹಾಬಾದ್ ಹೈಕೋರ್ಟ್ ತಿರಸ್ಕರಿಸಿದೆ. ಕಾನೂನು ಸುವ್ಯವಸ್ಥೆ ಕಾಪಾಡುವುದು ಸರ್ಕಾರದ ಜವಾಬ್ದಾರಿ ಎಂದಿದೆ. ಫೆಬ್ರವರಿ 27ರಂದು...

ಇರಾನ್ ‘ಭಯೋತ್ಪಾದಕ ಆಡಳಿತ’ ಎಂದು ಕರೆದ NDTV ಹಿರಿಯ ಸಂಪಾದಕ: ವ್ಯಾಪಕ ಟೀಕೆಯ ನಂತರ ಪೋಸ್ಟ್ ಡಿಲಿಟ್ 

ಹೊಸದಿಲ್ಲಿ: ಅಮೆರಿಕ-ಇಸ್ರೇಲ್ ಮತ್ತು ಇರಾನ್ ನಡುವೆ ನಡೆಯುತ್ತಿರುವ ಯುದ್ಧದಿಂದಾಗಿ ಮಧ್ಯಪ್ರಾಚ್ಯದಲ್ಲಿ ಉದ್ವಿಗ್ನತೆ ಹೆಚ್ಚುತ್ತಿರುವ ಸಂದರ್ಭದಲ್ಲಿ ಭಾರತದ ಮುಖ್ಯ ಮಾಧ್ಯಮ ಸಂಸ್ಥೆ NDTV ಹಿರಿಯ ಸಂಪಾದಕ ಆದಿತ್ಯ ರಾಜ್ ಕೌಲ್ ಅವರು ಇರಾನ್ “ಭಯೋತ್ಪಾದಕ...

ಎಲ್‌ಪಿಜಿ ಬಿಕ್ಕಟ್ಟು: ಹೋಟೆಲ್ ಮಾಲೀಕರಿಗೆ ವಿದ್ಯುತ್ ಒಲೆಗಳನ್ನು ಬಳಸಲು ಸೂಚಿಸಿದ ಸಚಿವ ಕೆ.ಎಚ್. ​​ಮುನಿಯಪ್ಪ

ಬೆಂಗಳೂರು: ಪಶ್ಚಿಮ ಏಷ್ಯಾ ಸಂಘರ್ಷದ ಪ್ರಭಾವ ಭಾರತೀಯರ ಅಡುಗೆ ಮನೆಯನ್ನು ಪ್ರವೇಶಿಸಿದ್ದು, ಎಲ್‌ಪಿಜಿ  ಬಿಕ್ಕಟ್ಟಿನಿಂದ ನಾಗರೀಕರು, ಸೇರಿದಂತೆ ಹೋಟೆಲ್ ಉಧ್ಯಮ ತೀವ್ರ ಸಂಕಷ್ಟಕ್ಕೆ ಸಿಲುಕಿವೆ. ಈ ನಡುವೆ ಯುದ್ಧದ ಪರಿಣಾಮ ಭಾರತದ ಮೇಲೆ...

ಹೋರಾಟಗಾರ ಸೋನಮ್ ವಾಂಗ್ಚುಕ್ ಬಂಧನ ರದ್ದುಗೊಳಿಸಿದ ಕೇಂದ್ರ

ಲಡಾಖ್‌ನಲ್ಲಿ ಶಾಂತಿಯನ್ನು ಮರುಸ್ಥಾಪಿಸಲು ಮತ್ತು ಮಾತುಕತೆಗೆ ಪೂರಕವಾದ ವಾತಾವರಣವನ್ನು ನಿರ್ಮಿಸುವ ಉದ್ದೇಶದಿಂದ, ರಾಷ್ಟ್ರೀಯ ಭದ್ರತಾ ಕಾಯ್ದೆಯಡಿ (ಎನ್‌ಎಸ್‌ಎ) ಹೋರಾಟಗಾರ ಸೋನಮ್ ವಾಂಗ್ಚುಕ್ ಅವರ ಬಂಧನವನ್ನು ಕೇಂದ್ರ ಸರ್ಕಾರ ಹಿಂಪಡೆದಿದೆ ಎಂದು ವರದಿಯಾಗಿದೆ. ಸರ್ಕಾರ...

‘ಭಾರತವನ್ನು ಬೆದರಿಸುವಲ್ಲಿ ತಿಂಗಳುಗಟ್ಟಲೆ ಕಳೆದ ಅಮೆರಿಕ ಈಗ ಜಗತ್ತನ್ನ ಬೇಡಿಕೊಳ್ಳುತ್ತಿದೆ’: ರಷ್ಯಾದ ತೈಲ ವಿಚಾರದ ಕುರಿತು ಇರಾನ್ ಟೀಕೆ

ಟೆಹ್ರಾನ್: ರಷ್ಯಾದ ತೈಲದ ವಿಷಯದಲ್ಲಿ ಅಮೆರಿಕವು ದ್ವಿಮುಖ ನೀತಿಯನ್ನು ಅನುಸರಿಸುತ್ತಿದೆ ಎಂದು ಇರಾನ್ ಶನಿವಾರ ಆರೋಪಿಸಿದೆ. ವಾಷಿಂಗ್ಟನ್ ಈಗ ಒತ್ತಡ ಮತ್ತು ನಿರ್ಬಂಧಗಳ ಮೂಲಕ ನಿರ್ಬಂಧಿಸಲು ಪ್ರಯತ್ನಿಸಿದ ಅದೇ ಕಚ್ಚಾ ತೈಲವನ್ನು ಖರೀದಿಸಲು...