Homeಮುಖಪುಟಎಲ್ಲರ ದೇವರನ್ನು ಎಷ್ಟೆಲ್ಲಾ ಗೋಡೆಗಳು ಬಂಧಿಸಿವೆ!

ಎಲ್ಲರ ದೇವರನ್ನು ಎಷ್ಟೆಲ್ಲಾ ಗೋಡೆಗಳು ಬಂಧಿಸಿವೆ!

- Advertisement -
- Advertisement -

-1-

’ಇಲ್ಲೇ ಹತ್ತಿರದಲ್ಲಿ ಒಂದು ಗುಡಿ ಇದೆ. ಅದರ ಮುಂದೆ ವಾಕಿಂಗ್ ಮಾಡುವಷ್ಟು ಜಾಗವಿದೆ. ಇವತ್ತು ಸಂಜೆ ಅಲ್ಲಿಗೆ ಹೋಗೋಣ’ ಅಂತ ಮಂಜುಗೆ ಗಂಟುಬಿದ್ದಿದ್ದೆ. ಆಫೀಸ್‌ನಿಂದ ಬಂದ ಕೂಡಲೇ ಆಕೆ ’ಹೋಗೋಣ ಬನ್ನಿ’ ಅಂದಳು. ಹೊರಟೆವು. ಅಲ್ಲಿ ಅಕ್ಕತಂಗಿಯರ ಹೆಸರಿನಲ್ಲಿ ಎರಡು ಗುಡಿಗಳಿದ್ದವು. ಅವು ಗುಡಿಯ ಹೆಸರಿನಂತೆ ಸಣ್ಣದಾಗೇನು ಇರಲಿಲ್ಲ. ಮೊದಲು ಸಣ್ಣಾಕಿಯ ಗುಡಿಯೊಳಗೆ ಹೋದೆವು. ಸ್ಪೀಕರ್‌ಗಳಲ್ಲಿ ಮಾರ್ದನಿಸುವ ’ಶಿಷ್ಟ’ ರಾಗದ ಸ್ತುತಿಗಳು ಅಪ್ಪಳಿಸಲಿಲ್ಲ. ಯಾವುದೇ ಸಂಸ್ಕೃತ ಮಂತ್ರಗಳಿರಲಿಲ್ಲ. ಗರ್ಭಗುಡಿಯೊಳಗೆ ಸಣ್ಣ ಹುಡುಗನೊಬ್ಬ ಪೂಜಾರಿಯಂತೆ ಕೂತಿದ್ದ. ಅವನಿಗೇನು ಕೆಲಸವಿದ್ದಂತೆ ಕಾಣಲಿಲ್ಲ. ಬರುತ್ತಿದ್ದ ಭಕ್ತರೆಲ್ಲರೂ ಸೀದಾ ಗರ್ಭಗುಡಿಯ ಒಳಗೇ ಹೋಗಿ ನಮಸ್ಕರಿಸುತ್ತಿದ್ದರು. ನಾವಿಬ್ಬರು ’ಇಂತಹ ದೊಡ್ಡ ಆಲಯದಲ್ಲಿ ಇಷ್ಟು ಸ್ವಾತಂತ್ರ್ಯವಿದೆಯಲ್ಲ?’ ಅಂಥ ದಂಗಾದೆವು. ಗರ್ಭಗುಡಿಯೊಳಗೆ ಬಗ್ಗಿ ನೋಡಿದೆವು. ಐದಾರು ಜನ ಹೆಂಗಸರು ಅಪ್ಪಣೆ ಕೇಳುವಂತೆ ಕೂತಿದ್ದರು. ಕೆಲವರು ಬೇಡಿಕೆಯಿಟ್ಟು ಧ್ಯಾನಸ್ಥರಾಗಿದ್ದರು. ನಾನು ’ಇಲ್ಲಿ ಸಾಕು ಬಾ. ದೊಡ್ಡಾಕಿಯ ಗುಡಿಯೊಳಗೆ ಹೋಗೋಣ’ ಅಂದೆ. ದೊಡ್ಡಾಕಿಯ ಗರ್ಭಗುಡಿಯೊಳಗೆ ಹೆಂಗಸರು ಗಂಡಸರು ಹೀಗೆ ಹತ್ತಾರು ಜನ ಕೂತ್ತಿದ್ದರು. ಅವರಲ್ಲಿ ಬೇಡಿಕೊಳ್ಳುವಂತೆ ಕೈಮುಗಿದು ಕೂತವರಿದ್ದರು. ಮೊಣಕಾಲೂರಿ ನಮಸ್ಕರಿಸುತ್ತಿದ್ದವರಿದ್ದರು. ದೇವಿಯನ್ನೇ ದಿಟ್ಟಿಸಿ ನೋಡುತ್ತಾ ಏನೇನೋ ಕೇಳುವವರಿದ್ದರು. ಹೀಗೆ ಡೈರಕ್ಟಾಗಿ ದೇವಿ ಮತ್ತು ಭಕ್ತರ ನಡುವೆ ಸಂಭಾಷಣೆ ನಡೆಯುತ್ತಿತ್ತು. ಇವರ ನಡುವೆ ನಮಗೆ ಅದ್ಭುತವೊಂದು ಕಾಣಿಸಿತು! ಬುರ್ಖಾಧಾರಿ ಹೆಣ್ಣು ಮಗಳೊಬ್ಬಳು ತನ್ನ ಕೂಸು ಮತ್ತು ತಾಯಿಯೊಂದಿಗೆ ಒಳಗಿದ್ದಳು. ಆಕೆಯ ತಾಯಿ ಮಗು ಆಡಿಸುತ್ತಿದ್ದಳು. ಅವಳು ದೇವಿಯ ಮುಂದಿದ್ದ ಕಟ್ಟಿಗೆಯಿಂದ ಮಾಡಿದ ಪೆಟ್ಟಿಗೆಗೆ ನಮಸ್ಕರಿಸಿ, ಎತ್ತುತ್ತಾ ಇಳಿಸುತ್ತಾ, ಪುನಃ ನಮಸ್ಕರಿಸುವಲ್ಲಿ ತಲ್ಲೀನಳಾಗಿದ್ದಳು. ಆಕೆಯನ್ನು ಮಾತಾಡಿಸಬೇಕೆಂದುಕೊಂಡೆವು. ಆದರೆ ಆಕೆಯ ಭಕ್ತಿಗೇಕೆ ಅಡ್ಡಿಪಡಿಸಬೇಕೆಂದು ಸುಮ್ಮನಾದೆವು.

ನಾವು ಹಿಂದೆಲ್ಲಾ ನೋಡಿದಂತಹ ದೇವಸ್ಥಾನಗಳಲ್ಲಿ, ದೇಹಕ್ಕೆ ತೊಟ್ಟ ಮೇಲ್ಭಾಗದ ವಸ್ತ್ರವನ್ನು ತೆಗೆದು ಬಗಲಲ್ಲಿ ಇಟ್ಟುಕೊಂಡು ಹೋಗುವುದು; ನಡು ಬಗ್ಗಿಸಿ ಗರ್ಭಗುಡಿಯ ಮುಂದೆ ನಿಂತು ದೇವರ ದರ್ಶನ ಮಾಡಿಕೊಳ್ಳುವುದು; ಅರ್ಥವಾಗದ ಶ್ಲೋಕಗಳನ್ನು ಉಚ್ಚರಿಸುತ್ತಾ ತೀರ್ಥಕೊಡುವ ಅರ್ಚಕನ ಆರತಿ ತಟ್ಟಗೆ ಚಿಲ್ಲರೆ ಹಾಕುವಂತಹದ್ದು ಸಾಮಾನ್ಯವಾಗಿರುತ್ತದೆ. ಹಾಗಾಗಿಯೋ ಏನೋ ಬುರ್ಖಾಧಾರಿ ಮಹಿಳೆಯೊಬ್ಬಳನ್ನು ದೇವಿಯ ಗರ್ಭಗುಡಿಯೊಳಗೆ ನೋಡಿದ್ದು ನಮಗೆ ಅದ್ಭುತವಾಗಿ ಕಂಡಿತು. ಆದರೆ ದೇವಿಯ ಗರ್ಭಗುಡಿಯಲ್ಲಿದ್ದ ಸ್ಥಳೀಯರಿಗೆ ಅದು ಸಹಜವಾಗಿಯೇ ಇತ್ತು. ನಮ್ಮ ಸುತ್ತಲೂ ಇಂತಹ ಸಹಜ ಬದುಕನ್ನು ಸಹಿಸದವರು ಇರುವುದರಿಂದಲೇ ಗುಡಿಯಿರುವ ಊರು, ಗುಡಿಯ ಹೆಸರನ್ನು ಇಲ್ಲಿ ಬರೆಯಲಾಗಲಿಲ್ಲ.

-2-

ಇದರ ನಡುವೆ ಮತ್ತೊಂದು ಘಟನೆ ನೆನಪಾಗುತ್ತಿದೆ. ನ್ಯೂಸ್ ಚಾನೆಲ್ ಬಿತ್ತರಿಸಿದ್ದ 59 ಸೆಕೆಂಡಿನ ವಿಡಿಯೋವನ್ನು ನನ್ನ ಗೆಳೆಯರು ವಾಟ್ಸಪ್ ಸ್ಟೇಟಸ್‌ಗೆ ಹಾಕೊಂಡಿದ್ದರು. ಅದು ಬಿಜಾಪುರದ ಸಿದ್ದೇಶ್ವರ ಸ್ವಾಮೀಜಿಯವರಿಗೆ ಸಂಬಂಧಿಸಿತ್ತು. ಇವರು ಮೊನ್ನೆಯ ಏಕಾದಶಿಯಂದು ಇಹಲೋಕ ತ್ಯಜಿಸಿದರು. ಅವರಲ್ಲಿ ದೇವರನ್ನು ಕಂಡಂತಹ ಜನಸಾಮಾನ್ಯರು ಸುತ್ತಮುತ್ತಲಿನ ಹಳ್ಳಿಗಳಿಂದಲೂ ದೂರದೂರುಗಳಿಂದಲೂ ದೇಹ ದರ್ಶನಕ್ಕಾಗಿ ಹರಿದುಬರುತ್ತಿದ್ದರು. ಆ ಜನರಲ್ಲಿ ಬೇರೆ ಧರ್ಮದವರೂ ಇದ್ದರು. ಸದಾ ಧರ್ಮದ ಹೆಸರಲ್ಲಿ ಉರಿವ ಬೆಂಕಿಗೆ ತುಪ್ಪ ಸುರಿವ ಮಾಧ್ಯಮಗಳ ಪ್ರತಿನಿಧಿಗಳು ಅಲ್ಲಿ ಕಾಣುತ್ತಿದ್ದ ’ಬೇರೆ ಧರ್ಮ’ದವರನ್ನೇ ಕರೆದು ಮಾತನಾಡಿಸುತ್ತಿದ್ದರು. ಅಂತಹವರಲ್ಲಿ ಸ್ಥಳೀಯ ರಹೀಂನಗರದ ಹಿರಿಜೀವವೂ ಒಂದಾಗಿತ್ತು. ಇವರಿಗೆ ಮಾಧ್ಯಮ ಪ್ರತಿನಿಧಿಯೊಬ್ಬ ’ಶ್ರೀಗಳು ಇವತ್ತು ನಮ್ಮ ಜೊತೆಗಿಲ್ಲ, ತಾವೊಬ್ಬ ಬೇರೆ ಧರ್ಮವರಾಗಿ ಶ್ರೀಗಳ ದರ್ಶಕ್ಕೆ ಬಂದಿದ್ದೀರಿ, ಯಾವ ರೀತಿ ಪ್ರಭಾವ ಬೀರಿದ್ದರು?’ ಎಂಬ ಪ್ರಶ್ನೆ ಕೇಳುತ್ತಾನೆ. ಇದನ್ನು ಕೇಳಿಸಿಕೊಂಡ ಕೂಡಲೇ ಆ ಜೀವ ದುಃಖಿಸುತ್ತಾ, ಬಿಕ್ಕಳಿಸುತ್ತದೆ. ಇದರ ನಡುವೆ ಮಾಧ್ಯಮ ಪ್ರತಿನಿಧಿ ಮತ್ತೆ ’ಹೋಗುತ್ತಿದ್ರಾ, ಶ್ರೀಗಳ ಭಾಷಣಕ್ಕೆ? ಮಠಕ್ಕೆ ಹೋಗುತ್ತಿದ್ರಾ?’ ಅಂಥ ಕೇಳುತ್ತಾನೆ. ಆ ಹಿರಿಜೀವ ’ಏ… ಮಠಕ್ಕೆ ಹೋಗಿಲ್ಲ. ಹೋಗ್ಬೇಕಂತ್ಹೇಳಿ ವಿಚಾರ ಬಾಳ್ ಸರಿ ಬಂದಿತ್ತು ಖರೆ. ಅಲ್ಲಿ ಬಿಡಾಂಗಿಲ್ಲ, ಅದಾಗುತೈತಿ, ಹಂಗಾ ಹಿಂಗಾ ಅನ್ನಾಣ…. ಅಂಥ ಬಿಟ್ಬಿಟ್ಟೇವು. ಹೋಗೋ ವಿಚಾರ ಇಟ್ಟಿದ್ದೇವು. ಅಷ್ಟರಲ್ಲಿ ಹಿಂಗಾತು. ದೈವವಿಲ್ಲ’ ಅಂತ ಉತ್ತರಿಸಿದ ಮಾತುಗಳು ನನ್ನನ್ನು ಕೊರೆಯಲಾರಂಭಿಸಿದವು. ಒಮ್ಮೆಯಾದರೂ ’ನಡೆದಾಡುವ ದೇವರು’ ಬದುಕಿದ್ದಾಗ ಮಠದಲ್ಲಿ ಕಾಣಬಹುದಾಗಿದ್ದ ಹಂಬಲವನ್ನಷ್ಟೇ ಆ ಜೀವ ತೋಡಿಕೊಂಡಿದೆ.

ಜನ ತಮ್ಮಿಚ್ಛೆಯಂತೆ ತಮ್ಮ ಕಷ್ಟಕ್ಕೆ ನೆರವಾಗುವ, ನಂಬುವ, ಪೂಜಿಸುವ ದೇವರನ್ನು ಹೇಗೆಲ್ಲಾ ಬಂಧಿಸಿಟ್ಟಿದ್ದೇವಲ್ಲ? ಆ ಬುರ್ಖಾಧಾರಿ ಹೆಣ್ಣು ಮಗಳ ಸಂಕಟವನ್ನು ಆಲಿಸುವಂತಹ ಹಲವಾರು ಹೆಣ್ಣುದೇವರನ್ನು ದೂರವಿಟ್ಟಿದ್ದೇವಲ್ಲ? ಒಳಿತನ್ನು ಉಪದೇಶಿಸುವ ವ್ಯಕ್ತಿಯನ್ನು ಕಾಣಲು ಹೋದರೆ ’ಏನಾಗಬಹುದೋ’ ಎಂಬ ವಾತಾವರಣವನ್ನು ನಿರ್ಮಿಸಿದ್ದೇವಲ್ಲ? ’ಅಲ್ಲಿ ಬಿಡಾಂಗಿಲ್ಲ, ಅದಾಗುತೈತಿ, ಹಂಗಾಹಿಂಗಾ’ ಎಂಬುದರಲ್ಲಿ ಭಯ ಆತಂಕವೇನೂ ಕಾಣಿಸದು. ಈ ಮಾತುಗಳಲ್ಲಿ ’ನಮ್ಮಿಂದ ಏಕೆ ತೊಂದರೆ ಆಗಬೇಕು? ದೇವರಂತ ಮನುಷ್ಯನ ಮಾತುಗಳನ್ನು ಅಲ್ಲಿಇಲ್ಲಿ ಕೇಳಿಸಿಕೊಂಡರಾತು. ಯಾವ ಸಮಸ್ಯೆಯಾಗದಂತೆ ಎಂದಾದರೊಮ್ಮೆ ಕಂಡರಾತು’ ಎಂಬ ಕಳಕಳಿ ತುಂಬಿದೆ. ಇಷ್ಟೇ ಅಲ್ಲದೆ ನನಗೆ ಆ ಹಿರಿಜೀವದ ಮಾತುಗಳು ನಡೆದಾಡುವ ದೇವರು ಎಂದು ಕರೆಸಿಕೊಂಡಿದ್ದವರನ್ನು ಕಾಣುವುದಕ್ಕೆ ಅವಕಾಶವನ್ನೇ ಇಲ್ಲವಾಗಿಸಿದವರನ್ನು ಅಣಕಿಸುವಂತೆ ಅನುರಣಿಸುತ್ತಿವೆ. ಛೇ…! ಎಲ್ಲರ ದೇವರನ್ನು ಎಷ್ಟೆಲ್ಲಾ ಗೋಡೆಗಳು ಬಂಧಿಸಿವೆ!

ಡಾ. ರವಿ ಎಂ

ಡಾ. ರವಿ ಎಂ
ಶಿವಮೊಗ್ಗದ ಸಿದ್ಲಿಪುರದವರು. ಕುವೆಂಪು ವಿಶ್ವವಿದ್ಯಾಲಯದಿಂದ ’ಕನ್ನಡ ಮಹಾಭಾರತ ಕಾವ್ಯಗಳಲ್ಲಿ ಪ್ರಭುತ್ವ, ಯುದ್ಧ ಮತ್ತು ಜನತೆ’ ಎಂಬ ಅಧ್ಯಯನಕ್ಕೆ ಪಿಎಚ್.ಡಿ. ಪದವಿ. ’ಪರ್ಯಾಯ’, ’ಪಿ. ಲಂಕೇಶ್’, ’ಶಾಸನ ಓದು’ ಪ್ರಕಟಿತ ಕೃತಿಗಳು. ಹಳಗನ್ನಡ ಸಾಹಿತ್ಯ ರವಿಯವರ ಆಸಕ್ತಿ ಕ್ಷೇತ್ರವಾಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ವೆಟ್ಟುವಂ’ ಪಾ.ರಂಜಿತ್ ಅವರ ಅದ್ಭುತ ಅಪೋಕಲಿಪ್ಟಿಕ್ ಆಕ್ಷನ್ ಸಿನಿಮಾ: ರಂಗನಾಥ್ ಆರ್. ವಿ

ತಮಿಳಿನ ಖ್ಯಾತ ನಿರ್ದೇಶಕ ಪಾ.ರಂಜಿತ್ ಅವರ ನಿರ್ದೇಶನದಲ್ಲಿ ಮೂಡಿಬರುತ್ತಿರುವ 'ವೆಟ್ಟುವಂ' ಚಿತ್ರವನ್ನು 'ಲರ್ನ್ ಆಂಡ್ ಟೀಚ್ ಪ್ರೊಡಕ್ಷನ್' ಸಂಸ್ಥೆಯ ಸಹಯೋಗದೊಂದಿಗೆ, ಪಾ.ರಂಜಿತ್ ಅವರ 'ನೀಲಂ ಪ್ರೊಡಕ್ಷನ್ಸ್' ನಿರ್ಮಿಸಿದೆ. ಈ ಚಿತ್ರದ ಜಗತ್ತನ್ನು ಪರಿಚಯಿಸುವ...

SIR ಮೋಸ: ಅಗತ್ಯಬಿದ್ದರೆ ಕಾಂಗ್ರೆಸ್‌ನಿಂದ ಕಾನೂನು ಹೋರಾಟ ಬಿ.ಕೆ. ಹರಿಪ್ರಸಾದ್ ಎಚ್ಚರಿಕೆ

ಕರ್ನಾಟಕದಲ್ಲಿ ಪ್ರಸ್ತುತ ನಡೆಯುತ್ತಿರುವ 2026ರ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಭಾರಿ ಪ್ರಮಾಣದ ತಾಂತ್ರಿಕ ಲೋಪಗಳು, ಅಂಕಿಅಂಶಗಳ ವ್ಯತ್ಯಾಸ ಹಾಗೂ ಮತದಾರರ ಪಟ್ಟಿಗೆ ಸಂಬಂಧಿಸಿದಂತೆ ಸ್ಪಷ್ಟತೆಯ ಕೊರತೆ ಎದ್ದುಕಾಣುತ್ತಿದೆ ಎಂದು...

ವಿಚಾರಣೆಯಿಲ್ಲದೆ ಆರು ವರ್ಷ ಜೈಲುವಾಸ: ಉಮರ್ ಖಾಲಿದ್ ಹೋರಾಟದ ಹಾದಿ

ಸೆಪ್ಟೆಂಬರ್ 13, 2020 ರಂದು, ಮಾನವ ಹಕ್ಕುಗಳ ಯುವ ಕಾರ್ಯಕರ್ತ ಉಮರ್ ಖಾಲಿದ್ ಅವರನ್ನು ದೇಶದ ರಾಜಧಾನಿಯಲ್ಲಿ ಗುರಿಯಾಗಿಸಿಕೊಳ್ಳಲಾಯಿತು. ವಿಚಾರಣೆಯೇ ಇಲ್ಲದೆ ಅವರು ಜೈಲಿನಲ್ಲಿ ಆರು ವರ್ಷಗಳನ್ನು ಪೂರೈಸಿದ್ದಾರೆ. ಸರ್ಕಾರದ ವಿರುದ್ಧದ ರಾಜಕೀಯ...

ಕನ್ವರ್ ಯಾತ್ರೆ ವೇಳೆ 18 ದ್ವೇಷ ಘಟನೆಗಳು: ಮುಸ್ಲಿಮರು, ಅವರ ವ್ಯಾಪಾರಗಳನ್ನು ಗುರಿಯಾಗಿಸಿಕೊಂಡ ಪ್ರಕರಣಗಳೇ ಹೆಚ್ಚು; APCR ವರದಿ

ನವದೆಹಲಿ: 2026ರ ಕನ್ವರ್ ಯಾತ್ರೆಯ 13 ದಿನಗಳ ಅವಧಿಯಲ್ಲಿ ಹಿಂಸಾಚಾರ, ಬಲವಂತ, ತಾರತಮ್ಯ, ಆರ್ಥಿಕ ಬಹಿಷ್ಕಾರ ಹಾಗೂ ಸಾರ್ವಜನಿಕ ಅಶ್ಲೀಲ ವರ್ತನೆಗೆ ಸಂಬಂಧಿಸಿದ ಕನಿಷ್ಠ 18 ಘಟನೆಗಳು ವರದಿಯಾಗಿವೆ ಎಂದು ನಾಗರಿಕ ಹಕ್ಕುಗಳ...

ಸಿಐಟಿಯು ಕಾನೂನು ಹೋರಾಟಕ್ಕೆ ಮೊದಲ ಜಯ: ಕನಿಷ್ಠ ವೇತನ ತಡೆಹಿಡಿದಿದ್ದ ಸರ್ಕಾರದ ಮೂರು ಸುತ್ತೋಲೆಗಳಿಗೆ ಹೈಕೋರ್ಟ್ ತಡೆ

ಸರ್ಕಾರಿ ಇಲಾಖೆಗಳು ಮತ್ತು ಸ್ಥಳೀಯ ಸಂಸ್ಥೆಗಳಲ್ಲಿ ಕೆಲಸ ಮಾಡುವ ಲಕ್ಷಾಂತರ ಕಾರ್ಮಿಕರ ಹೊಸ ಕನಿಷ್ಠ ವೇತನವನ್ನು ತಡೆಹಿಡಿದಿದ್ದ ಸರ್ಕಾರದ ನಿರ್ಧಾರಕ್ಕೆ ಹೈಕೋರ್ಟ್ ಬ್ರೇಕ್ ಹಾಕಿದೆ. ಹೊಸ ವೇತನ ನೀಡುವುದನ್ನು ಅಮಾನತಿನಲ್ಲಿಟ್ಟಿದ್ದ ಸರ್ಕಾರದ ಮೂರು...

ಟಿಎಂಸಿ ಹೆಸರು, ಚಿಹ್ನೆ ಫ್ರೀಜ್: ಮಮತಾ ಬ್ಯಾನರ್ಜಿಗೆ ‘ಫುಟ್‌ಬಾಲ್ ಪ್ಲೇಯರ್’, ಬಂಡಾಯ ಬಣಕ್ಕೆ ‘ಲಕೋಟೆ’ ಚಿಹ್ನೆ ನೀಡಿದ ಚುನಾವಣಾ ಆಯೋಗ

ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂಲ ಹೆಸರು ಮತ್ತು ಸಾಂಪ್ರದಾಯಿಕ 'ಹೂವು-ಹುಲ್ಲು' ಚಿಹ್ನೆಯನ್ನು ಮುಟ್ಟುಗೋಲು (ಫ್ರೀಜ್) ಹಾಕಿದ ನಂತರ, ಭಾರತೀಯ ಚುನಾವಣಾ ಆಯೋಗವು ಶುಕ್ರವಾರ ಎರಡೂ ಎದುರಾಳಿ ಬಣಗಳಿಗೆ ಪ್ರತ್ಯೇಕ ಮಧ್ಯಂತರ ಹೆಸರು...

‘ರೋಹಿತ್ ವೇಮುಲಾ ಸ್ಥಿತಿ ನನಗೆ ಬಾರದಿರಲಿ..’; ವಿದೇಶದಲ್ಲಿ ಕಷ್ಟಕ್ಕೆ ಸಿಲುಕಿದ ತಮಿಳುನಾಡಿನ ದಲಿತ ಸಂಶೋಧಕ

ಮಲೇಷ್ಯಾದಲ್ಲಿ ಪಿಎಚ್‌ಡಿ ವ್ಯಾಸಂಗ ಮಾಡುತ್ತಿರುವ ತಮಿಳುನಾಡಿನ ದಲಿತ ಸಂಶೋಧನಾ ವಿದ್ಯಾರ್ಥಿ ಭಾರತಿ ದಾಸನ್ ರಾಮನ್, ತಮಿಳುನಾಡು ಸರ್ಕಾರದ ಸಾಮಾಜಿಕ ನ್ಯಾಯ ಇಲಾಖೆಯು ನನ್ನನ್ನು ಗುರಿಯಾಗಿಸಿಕೊಂಡಿದೆ ಎಂದು ಆರೋಪಿಸಿದ್ದಾರೆ ಎಂದು 'ದಿ ನ್ಯೂಸ್‌ ಮಿನಿಟ್'...

DUSU ಚುನಾವಣೆ: ಮತದಾನ ಆರಂಭ; ವಿಜಯೋತ್ಸವ ಮೆರವಣಿಗೆಗೆ ದೆಹಲಿ ಹೈಕೋರ್ಟ್ ತಡೆ

ದೆಹಲಿ ವಿಶ್ವವಿದ್ಯಾಲಯದ ವಿದ್ಯಾರ್ಥಿ ಸಂಘದ (DUSU) 2026-27ನೇ ಸಾಲಿನ ಚುನಾವಣೆಗೆ ಶುಕ್ರವಾರ (ಸೆ.18) ಮತದಾನ ಆರಂಭವಾಗಿದೆ. ಬೆಳಗಿನ ಅವಧಿಯ ಕಾಲೇಜುಗಳ ವಿದ್ಯಾರ್ಥಿಗಳಿಗೆ ಬೆಳಿಗ್ಗೆ 8:30ರಿಂದ ಮಧ್ಯಾಹ್ನ 1ರವರೆಗೆ ಹಾಗೂ ಸಂಜೆ ಕಾಲೇಜುಗಳ ವಿದ್ಯಾರ್ಥಿಗಳಿಗೆ...

ಕರಾವಳಿ ಇತಿಹಾಸದಲ್ಲೇ ಪ್ರಥಮ: ಮಂಗಳೂರಿನಲ್ಲಿ ಸಿಎಂ ‘ಡಿ.ಕೆ ಶಿವಕುಮಾರ್’ ನೇತೃತ್ವದಲ್ಲಿ ರಾಜ್ಯ ಸಚಿವ ಸಂಪುಟ ಸಭೆ

ಕರಾವಳಿ ಕರ್ನಾಟಕದ ಇತಿಹಾಸದಲ್ಲೇ ಇದೇ ಮೊದಲ ಬಾರಿಗೆ ರಾಜ್ಯ ಸಚಿವ ಸಂಪುಟ (Cabinet) ಸಭೆಯು ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರಿನ ಪಡೀಲ್‌ನಲ್ಲಿರುವ ನೂತನ 'ಪ್ರಜಾ ಸೌಧ'ದಲ್ಲಿ (ಜಿಲ್ಲಾಡಳಿತ ಸೌಧ) ಶುಕ್ರವಾರ ವಿಜೃಂಭಣೆಯಿಂದ ಆರಂಭವಾಗಿದೆ....

ಟಿಎಂಸಿ ಹೆಸರು, ಚಿಹ್ನೆ ಬಳಕೆಗೆ ತಡೆ: ಚುನಾವಣಾ ಆಯೋಗದ ಆದೇಶ ‘ಕಾನೂನಿಗೆ ವಿರುದ್ಧ’ ಎಂದ ಮಮತಾ ಬಣ, ಆದೇಶ ಸ್ವಾಗತಿಸಿದ ಬಂಡಾಯ ಪಾಳಯ 

ಕೊಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತ ರಾಜಕಾರಣದಲ್ಲಿ ಪ್ರಮುಖ ಶಕ್ತಿಯಾಗಿರುವ ತೃಣಮೂಲ ಕಾಂಗ್ರೆಸ್‌ (ಟಿಎಂಸಿ)ಯ ಆಂತರಿಕ ಬಿಕ್ಕಟ್ಟು ಇದೀಗ ಪಕ್ಷದ ಹೆಸರು ಮತ್ತು ಚುನಾವಣಾ ಚಿಹ್ನೆಯ ಮೇಲಿನ ಹಕ್ಕಿನ ಸಂಘರ್ಷವಾಗಿ ತೀವ್ರಗೊಂಡಿದೆ. ಟಿಎಂಸಿಯ ಎರಡು...