Homeಚಳವಳಿಕೇಂದ್ರದ ಮೇಲೆ ಒತ್ತಡ ತರಲು ಪ್ರತಿಭಟನೆಯನ್ನು ದೆಹಲಿಗೆ ವರ್ಗಾಯಿಸಿ: ರೈತರಲ್ಲಿ ಅಮರಿಂದರ್ ಸಿಂಗ್ ಮನವಿ

ಕೇಂದ್ರದ ಮೇಲೆ ಒತ್ತಡ ತರಲು ಪ್ರತಿಭಟನೆಯನ್ನು ದೆಹಲಿಗೆ ವರ್ಗಾಯಿಸಿ: ರೈತರಲ್ಲಿ ಅಮರಿಂದರ್ ಸಿಂಗ್ ಮನವಿ

- Advertisement -
- Advertisement -

ಕಳೆದ ವರ್ಷ ಆರಂಭಗೊಂಡು ಇನ್ನು ಸಾಗುತ್ತಿರುವ ರೈತ ಪ್ರತಿಭಟನೆ ಪಂಜಾಬಿನ ಆರ್ಥಿಕತೆಯ ಮೇಲೆ ತೀವ್ರ ಪರಿಣಾಮ ಬೀರಿದೆ ಎಂದಿರುವ ಪಂಜಾಬ್ ಮುಖ್ಯಮಂತ್ರಿ ಅಮರಿಂದರ್ ಸಿಂಗ್, ಒಕ್ಕೂಟ ಸರ್ಕರದ ಮೇಲೆ ಒತ್ತಡ ತರಲು ಪ್ರತಿಭಟನೆಯನ್ನು ದೆಹಲಿಗೆ ವರ್ಗಾಯಿಸಿ ಎಂದಿದ್ದಾರೆ.

ಕಳೆದ ವರ್ಷ ನವೆಂಬರ್‌ 26 ರಿಂದ ದೆಹಲಿಯ ಗಡಿಗಳಲ್ಲಿ ರೈತ ಪ್ರತಿಭಟನೆ ನಡೆಸುತ್ತಿದ್ದರೂ, ಪಂಜಾಬಿನಲ್ಲಿ ಅಕ್ಟೋಬರ್‌ ಒಂದರಿಂದಲೇ ಪ್ರತಿಭಟನೆ ಆರಂಭವಾಗಿತ್ತು. ಇದು ಪಂಜಾಬ್ ಆರ್ಥಿಕತೆ ಮೇಲೆ ಪ್ರತಿಕೂಲ ಪರಿಣಾಮ ಬೀರುತ್ತಿದೆ ಎಂದು ಮುಖ್ಯಮಂತ್ರಿ ಅಮರಿಂದರ್ ಸಿಂಗ್ ಕಳವಳ ವ್ಯಕ್ತಪಡಿಸಿದ್ದಾರೆ.

ಒಕ್ಕೂಟ ಸರ್ಕಾರ ಜಾರಿಗೆ ತಂದಿರುವ ಮೂರು ವಿವಾದಿತ ಕೃಷಿ ಕಾನೂನುಗಳ ವಿರುದ್ಧ ಪ್ರತಿಭಟನೆ ನಡೆಸುತ್ತಿರುವ ರೈತರು, ಒಕ್ಕೂಟ ಸರ್ಕಾರದ ಮೇಲೆ ಒತ್ತಡ ತರಲು ನವದೆಹಲಿಯಲ್ಲಿರುವ ಸರ್ಕಾರವನ್ನು ಕೇಂದ್ರಿಕರಿಸಿ, ಪಂಜಾಬ್ ಮತ್ತು ರಾಜ್ಯದ ಆಡಳಿತವನ್ನು ಬಿಟ್ಟು ಬಿಡಿ ಎಂದಿದ್ದಾರೆ.

“ನೀವು ಕೇಂದ್ರ ಸರ್ಕಾರದ ಮೇಲೆ ಒತ್ತಡ ಹೇರಲು ಬಯಸಿದರೆ, ನಿಮ್ಮ ಪ್ರತಿಭಟನೆಯನ್ನು ದೆಹಲಿಗೆ ವರ್ಗಾಯಿಸಿ. ನಿಮ್ಮ ಪ್ರತಿಭಟನೆಗಳಿಂದ ಪಂಜಾಬ್‌ಗೆ ತೊಂದರೆ ನೀಡಬೇಡಿ” ಎಂದು ಅಮರಿಂದರ್‌ ಸಿಂಗ್ ಮನವಿ ಮಾಡಿದ್ದಾರೆ.

ಇದನ್ನೂ ಓದಿ: ರೈತ ಹೋರಾಟ: ಕರ್ನಾಲ್ ಲಾಠಿಚಾರ್ಜ್ ಕುರಿತ ತನಿಖೆಗೆ ಸಿದ್ಧ- ಹರಿಯಾಣ ಗೃಹ ಸಚಿವ

“ಇಂದಿಗೂ ಸಹ, ರಾಜ್ಯದ 113 ಸ್ಥಳಗಳಲ್ಲಿ ರೈತರು ಪ್ರತಿಭಟನೆ ನಡೆಸುತ್ತಿದ್ದಾರೆ. ಇದರಿಂದ ರಾಜ್ಯದ ಅಭಿವೃದ್ಧಿಯ ಮೇಲೆ ಪರಿಣಾಮ ಬೀರುತ್ತಿದೆ” ಎಂದು ಹೋಶಿಯಾರ್‌ಪುರ ಜಿಲ್ಲೆಯ ಮುಖ್ಲಿಯಾನಾ ಹಳ್ಳಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಹೇಳಿದ್ದಾರೆ.

“ಸಿಂಘು ಮತ್ತು ಟಿಕ್ರಿ ಗಡಿಗಳಲ್ಲಿ ಕುಳಿತಿರುವ ರೈತರಿಗೆ ನೆರವು ನೀಡಲು ಒಕ್ಕೂಟ ಸರ್ಕಾರ ಕೃಷಿ ಕಾನೂನುಗಳನ್ನು ಏಕೆ ರದ್ದುಗೊಳಿಸುವುದಿಲ್ಲ” ಎಂದು ಪ್ರಶ್ನಿಸಿದ್ದಾರೆ. ಪಂಜಾಬ್ ಸರ್ಕಾರವು ಕೃಷಿ ಕಾನೂನುಗಳ ವಿರುದ್ಧದ ರೈತ ಪ್ರತಿಭಟನೆಯಲ್ಲಿ ಹುತಾತ್ಮರಾದ ರಾಜ್ಯದ ಪ್ರತಿಯೊಬ್ಬ ರೈತರ ಕುಟುಂಬಕ್ಕೆ 5 ಲಕ್ಷ ರೂಪಾಯಿ ಮತ್ತು ಉದ್ಯೋಗ ನೀಡಿದೆ ಎಂದಿದ್ದಾರೆ.

ರೈತರ ಬೇಡಿಕೆಗಳಿಗೆ ತಮ್ಮ ಸರ್ಕಾರದ ಸ್ಪಂದಿಸುತ್ತಿದೆ ಎಂದಿರುವ ಅವರು, ರೈತರು ಅವರನ್ನು ಭೇಟಿ ಮಾಡಿದ ನಂತರ ಅವರ ಸರ್ಕಾರ ಇತ್ತೀಚೆಗೆ ಕಬ್ಬಿನ ಬೆಲೆಯನ್ನು ಹೆಚ್ಚಿಸಿದೆ ಎಂದು ಮಾಹಿತಿ ನೀಡಿದ್ದಾರೆ.

ಈ ಹಿಂದೆ, ಮುಖ್ಯಮಂತ್ರಿ ಅಮರಿಂದರ್‌ ಸಿಂಗ್ ಸ್ವತಃ ವಿವಾದಿತ ಮೂರು ಕೇಂದ್ರ ಕೃಷಿ ಕಾನೂನುಗಳ ವಿರುದ್ಧ ಪ್ರತಿಭಟನಾ ಮೆರವಣಿಗೆಗಳನ್ನು ನಡೆಸಿದ್ದರು. ಅದು ಸಾವಿರಾರು ರೈತರನ್ನು ಕೆರಳಿಸಿ ಪ್ರತಿಭಟನೆ ತೀವ್ರಗೊಳ್ಳಲು ಕಾರಣವಾಗಿತ್ತು.

ಕಳೆದ ನವೆಂಬರ್‌ 26 ರಿಂದ ದೆಹಲಿಯ ಸಿಂಘು, ಟಿಕ್ರಿ, ಗಾಝಿಪುರ್‌ ಮತ್ತು ರಾಜಸ್ಥಾನದ ಶಹಜಾನ್‌ಪುರ ಗಡಿ ಭಾಗಗಳಲ್ಲಿ ಕೃಷಿ ಕಾನೂನುಗಳ ವಿರುದ್ಧ ಸಾವಿರಾರು ರೈತರು ಪ್ರತಿಭಟನೆ ನಡೆಸುತ್ತಿದ್ದಾರೆ. ಪಂಜಾಬಿನ ಎಲ್ಲಾ ಜಿಲ್ಲಾ ಸ್ಥಳಗಳಲ್ಲಿ ಪ್ರತಿಭಟನೆ ಜಾರಿಯಲ್ಲಿದೆ.


ಇದನ್ನೂ ಓದಿ: ಹರಿಯಾಣ :ಕರ್ನಾಲ್‌ ಶಾಶ್ವತ ಪ್ರತಿಭಟನಾ ಸ್ಥಳವಾಗಿ ಉಳಿಯಬಹುದು- ರೈತರ ಎಚ್ಚರಿಕೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಒಳಮೀಸಲಾತಿ ಇಲ್ಲದೆ 56 ಸಾವಿರ ಹುದ್ದೆಗಳ ನೇಮಕಾತಿ ಇಲ್ಲ: ಸಚಿವ ಮುನಿಯಪ್ಪ

“ಒಳಮೀಸಲಾತಿ ಇಲ್ಲದೆ ಒಂದೇ ಒಂದು ಹುದ್ದೆಯನ್ನೂ ನೇಮಕ ಮಾಡಲು ಬಿಡುವುದಿಲ್ಲ, ಮುಖ್ಯಮಂತ್ರಿಗಳು ಈ ಬಗ್ಗೆ ಒಪ್ಪಿಕೊಂಡಿದ್ದಾರೆ. 27ರಂದು ನಡೆಯುವ ಸಚಿವ ಸಂಪುಟ ಸಭೆ ನಮಗೆ ಚಾರಿತ್ರಿಕವಾಗಲಿದೆ. ಮುಖ್ಯಮಂತ್ರಿಗಳ ಮೇಲೆ ವಿಶ್ವಾಸ ಇರಲಿ” ಎಂದು...

ಪಶ್ಚಿಮ ಏಷ್ಯಾ ಸಂಘರ್ಷ| ‘ಈ ಯುದ್ಧವನ್ನು ಕೊನೆಗೊಳಿಸಲು ಒಂದೇ ಮಾರ್ಗ…’: ಮೂರು ಷರತ್ತುಗಳನ್ನು ಮುಂದಿಟ್ಟ ಇರಾನ್

ಇರಾನ್ ಅಧ್ಯಕ್ಷ ಮಸೌದ್ ಪೆಜೆಶ್ಕಿಯಾನ್ ಅವರು ಅಮೆರಿಕ ಮತ್ತು ಇಸ್ರೇಲ್ ಜೊತೆಗಿನ ನಡೆಯುತ್ತಿರುವ ಸಂಘರ್ಷವನ್ನು ಕೊನೆಗೊಳಿಸಲು ಮೂರು ಷರತ್ತುಗಳನ್ನು ನಿಗದಿಪಡಿಸಿದ್ದಾರೆ. ಇದರಲ್ಲಿ ದೇಶವು ಭವಿಷ್ಯದ ದಾಳಿಗಳನ್ನು ಎದುರಿಸುವುದಿಲ್ಲ ಎಂಬ ಖಾತರಿಗಳು ಸೇರಿವೆ. ಬುಧವಾರ ತಮ್ಮ...

ಖಾಸಗಿ ಜಾಗದ ನಮಾಝ್‌ಗೆ ಅಧಿಕಾರಿಗಳಿಂದ ಅಡ್ಡಿ : ಮುಸ್ಲಿಂ ವ್ಯಕ್ತಿಗೆ ಭದ್ರತೆ ಒದಗಿಸಲು ಕೋರ್ಟ್ ಆದೇಶ

ಉತ್ತರ ಪ್ರದೇಶದ ಬರೇಲಿ ಜಿಲ್ಲೆಯ ಮುಸ್ಲಿಂ ವ್ಯಕ್ತಿಯೊಬ್ಬರು ತಮ್ಮ ಖಾಸಗಿ ಜಾಗದಲ್ಲಿ ಇತರರೊಂದಿಗೆ ನಮಾಝ್ ಮಾಡುವುದಕ್ಕೆ ಅಡ್ಡಿಪಡಿಸಲಾಗಿದೆ ಎಂದು ಆರೋಪಿಸಿದ ಹಿನ್ನೆಲೆ, ಅವರಿಗೆ ದಿನದ 24 ಗಂಟೆಯೂ ರಕ್ಷಣೆ ನೀಡಲು ಇಬ್ಬರು ಭದ್ರತಾ...

‘ಒಳಮೀಸಲಾತಿ ಜಾರಿಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಬಿಡುತ್ತಿಲ್ಲ’: ಮಂದಕೃಷ್ಣ ಮಾದಿಗ ಆರೋಪ

‘ಒಳಮೀಸಲಾತಿ ಜಾರಿಗೆ ತರುತ್ತೇವೆಂದು ಹೇಳಿದ್ದ ಕಾಂಗ್ರೆಸ್, ಈಗ ಒಳಮೀಸಲಾತಿ ಅನುಷ್ಠಾನದಲ್ಲಿ ಮೀನಾಮೇಷ ಎಣಿಸುತ್ತಿದೆ. ಕಾಂಗ್ರೆಸ್ ನ ಹೈಕಮಾಂಡ್ ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಹಾಗೂ ಪ್ರಿಯಾಂಕಾ ಗಾಂಧಿ. ಈ ಮೂವರನ್ನು ನಿಯಂತ್ರಿಸುವವರು ಕಾಂಗ್ರೆಸ್...

ಸಾವರ್ಕರ್ ಕುರಿತು ಹೇಳಿಕೆ : ರಾಹುಲ್ ಗಾಂಧಿ ವಿರುದ್ಧದ ಮಾನನಷ್ಟ ಮೊಕದ್ದಮೆ ರದ್ದು

ಭಾರತ್ ಜೋಡೋ ಯಾತ್ರೆಯ ಸಂದರ್ಭದಲ್ಲಿ (2022ರಲ್ಲಿ) ಹಿಂದುತ್ವ ಸಿದ್ಧಾಂತವಾದಿ ವಿನಾಯಕ ದಾಮೋದರ್ ಸಾವರ್ಕರ್ ಕುರಿತು ನೀಡಿದ್ದ ಹೇಳಿಕೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿದ್ದ ಮಾನನಷ್ಟ ಮೊಕದ್ದಮೆಯನ್ನು...

‘ಒಳಮೀಸಲಾತಿ ಜಾರಿಯಲ್ಲಿ ಸರ್ಕಾರ ನಿರ್ಲಕ್ಷ್ಯ ಧೋರಣೆ ತೋರಿದರೆ ಹೋರಾಟ ವಿಧಾನಸೌಧಕ್ಕೆ ಸ್ಥಳಾಂತರವಾಗುತ್ತದೆ’: ಮಾದರ ಚೆನ್ನಯ್ಯ ಸ್ವಾಮೀಜಿ

ಕಳೆದ 35 ವರ್ಷಗಳಿಂದ ಹಲವಾರು ಹೋರಾಟಗಾರರು ತಮ್ಮ ಜೀವ-ಜೀವನವನ್ನು ಅರ್ಪಿಸಿ, ಮನೆ-ಮಠವನ್ನು ಬಿಟ್ಟು ಒಳಮೀಸಲಾತಿ ಹೋರಾಟವನ್ನು ಅಂತಿಮ ಘಟ್ಟಕ್ಕೆ ತಂದಿದ್ದಾರೆ. ಅನೇಕರು ಬದುಕನ್ನು ಮಾತ್ರವಲ್ಲ, ಪ್ರಾಣವನ್ನೂ ಕಳೆದುಕೊಂಡಿದ್ದಾರೆ. ಇದು 2ನೇ ಸ್ವಾತಂತ್ರ್ಯ ಹೋರಾಟವಾಗಿದೆ....

ಎಸ್‌ಎನ್‌ಡಿಪಿ ಪ್ರಧಾನ ಕಾರ್ಯದರ್ಶಿ ಹುದ್ದೆಯಿಂದ ವೆಳ್ಳಾಪ್ಪಳ್ಳಿ ನಟೇಶನ್ ಅನರ್ಹ

ಶ್ರೀ ನಾರಾಯಣ ಧರ್ಮ ಪರಿಪಾಲನ ಯೋಗಂ (ಎಸ್‌ಎನ್‌ಡಿಪಿ ಯೋಗಂ) ನ ಪ್ರಧಾನ ಕಾರ್ಯದರ್ಶಿ ಮತ್ತು ಮತ್ತು ಎಸ್‌ಎನ್ ಟ್ರಸ್ಟ್‌ನ ಕಾರ್ಯದರ್ಶಿ ಸ್ಥಾನದಿಂದ ವೆಳ್ಳಾಪ್ಪಳ್ಳಿ ನಟೇಶನ್ ಅವರನ್ನು ಕೇರಳ ಹೈಕೋರ್ಟ್ ಗುರುವಾರ (ಮಾ.12) ಅನರ್ಹಗೊಳಿಸಿದ್ದು,...

‘ಫಾರೂಕ್ ಅಬ್ದುಲ್ಲಾರನ್ನು ಕೊಲ್ಲುವುದು ಸರ್ಕಾರದ ಉದ್ದೇಶವೇ?’..ರಾಜ್ಯ ಸಭೆಯಲ್ಲಿ ಖರ್ಗೆ ಪ್ರಶ್ನೆ

ಜಮ್ಮು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಹಾಗೂ ನ್ಯಾಷನಲ್ ಕಾನ್ಫರೆನ್ಸ್ (ಎನ್‌ಸಿ) ಪಕ್ಷದ ಮುಖ್ಯಸ್ಥ ಫಾರೂಕ್ ಅಬ್ದುಲ್ಲಾ ಅವರ ಹತ್ಯೆ ಯತ್ನ ವಿಚಾರವನ್ನು ವಿಪಕ್ಷ ಸದಸ್ಯರು ಗುರುವಾರ (ಮಾ.12) ರಾಜ್ಯಸಭೆಯಲ್ಲಿ ಪ್ರಸ್ತಾಪಿಸಿದರು. ಘಟನೆ ಬಗ್ಗೆ...

56 ಸಾವಿರ ಹುದ್ದೆಗಳ ನೇಮಕಾತಿಯಲ್ಲಿ ಒಳಮೀಸಲಾತಿ ಅನ್ವಯಕ್ಕೆ ಆಗ್ರಹಿಸಿ ಎಡಗೈ ಸಮುದಾಯದಿಂದ ಬೃಹತ್ ಪ್ರತಿಭಟನೆ 

ಸರ್ಕಾರವು ಒಳ ಮೀಸಲಾತಿಯನ್ನು ತಪ್ಪಿಸುವ ಹುನ್ನಾರದಿಂದ ತರಾತುರಿಯಲ್ಲಿ 56,432 ಹುದ್ದೆಗಳ ನೇಮಕಾತಿಗೆ ಆದೇಶ ಹೊರಡಿಸಿದೆ. ನೇಮಕಾತಿಯಲ್ಲಿ ಒಳಮೀಸಲಾತಿ ಅಳವಡಿಸದೆ, ಎಡಗೈ ಸಮುದಾಯಗಳಿಗೆ ಸರ್ಕಾರ ಮತ್ತೆ ವಂಚಿಸುತ್ತಿದೆ ಎಂದು ‘ಒಳಮೀಸಲಾತಿ ಹೋರಾಟ ಸಮಿತಿ’ ಆರೋಪಿಸಿದೆ....

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧದ ಅವಿಶ್ವಾಸ ನಿರ್ಣಯಕ್ಕೆ ಸೋಲು

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧ ವಿರೋಧ ಪಕ್ಷಗಳು ಮಂಡಿಸಿದ್ದ ಅವಿಶ್ವಾಸ ನಿರ್ಣಯವು ಬುಧವಾರ (ಮಾ.11) ಧ್ವನಿ ಮತದ ಮೂಲಕ ತಿರಸ್ಕಾರಗೊಂಡಿದೆ. ಸದನದಲ್ಲಿ ವಿರೋಧ ಪಕ್ಷಗಳ ತೀವ್ರ ಗದ್ದಲ ಮತ್ತು ಘೋಷಣೆಗಳ ನಡುವೆಯೇ ಸ್ಪೀಕರ್...