Homeಚಳವಳಿಕೇಂದ್ರದ ಮೇಲೆ ಒತ್ತಡ ತರಲು ಪ್ರತಿಭಟನೆಯನ್ನು ದೆಹಲಿಗೆ ವರ್ಗಾಯಿಸಿ: ರೈತರಲ್ಲಿ ಅಮರಿಂದರ್ ಸಿಂಗ್ ಮನವಿ

ಕೇಂದ್ರದ ಮೇಲೆ ಒತ್ತಡ ತರಲು ಪ್ರತಿಭಟನೆಯನ್ನು ದೆಹಲಿಗೆ ವರ್ಗಾಯಿಸಿ: ರೈತರಲ್ಲಿ ಅಮರಿಂದರ್ ಸಿಂಗ್ ಮನವಿ

- Advertisement -
- Advertisement -

ಕಳೆದ ವರ್ಷ ಆರಂಭಗೊಂಡು ಇನ್ನು ಸಾಗುತ್ತಿರುವ ರೈತ ಪ್ರತಿಭಟನೆ ಪಂಜಾಬಿನ ಆರ್ಥಿಕತೆಯ ಮೇಲೆ ತೀವ್ರ ಪರಿಣಾಮ ಬೀರಿದೆ ಎಂದಿರುವ ಪಂಜಾಬ್ ಮುಖ್ಯಮಂತ್ರಿ ಅಮರಿಂದರ್ ಸಿಂಗ್, ಒಕ್ಕೂಟ ಸರ್ಕರದ ಮೇಲೆ ಒತ್ತಡ ತರಲು ಪ್ರತಿಭಟನೆಯನ್ನು ದೆಹಲಿಗೆ ವರ್ಗಾಯಿಸಿ ಎಂದಿದ್ದಾರೆ.

ಕಳೆದ ವರ್ಷ ನವೆಂಬರ್‌ 26 ರಿಂದ ದೆಹಲಿಯ ಗಡಿಗಳಲ್ಲಿ ರೈತ ಪ್ರತಿಭಟನೆ ನಡೆಸುತ್ತಿದ್ದರೂ, ಪಂಜಾಬಿನಲ್ಲಿ ಅಕ್ಟೋಬರ್‌ ಒಂದರಿಂದಲೇ ಪ್ರತಿಭಟನೆ ಆರಂಭವಾಗಿತ್ತು. ಇದು ಪಂಜಾಬ್ ಆರ್ಥಿಕತೆ ಮೇಲೆ ಪ್ರತಿಕೂಲ ಪರಿಣಾಮ ಬೀರುತ್ತಿದೆ ಎಂದು ಮುಖ್ಯಮಂತ್ರಿ ಅಮರಿಂದರ್ ಸಿಂಗ್ ಕಳವಳ ವ್ಯಕ್ತಪಡಿಸಿದ್ದಾರೆ.

ಒಕ್ಕೂಟ ಸರ್ಕಾರ ಜಾರಿಗೆ ತಂದಿರುವ ಮೂರು ವಿವಾದಿತ ಕೃಷಿ ಕಾನೂನುಗಳ ವಿರುದ್ಧ ಪ್ರತಿಭಟನೆ ನಡೆಸುತ್ತಿರುವ ರೈತರು, ಒಕ್ಕೂಟ ಸರ್ಕಾರದ ಮೇಲೆ ಒತ್ತಡ ತರಲು ನವದೆಹಲಿಯಲ್ಲಿರುವ ಸರ್ಕಾರವನ್ನು ಕೇಂದ್ರಿಕರಿಸಿ, ಪಂಜಾಬ್ ಮತ್ತು ರಾಜ್ಯದ ಆಡಳಿತವನ್ನು ಬಿಟ್ಟು ಬಿಡಿ ಎಂದಿದ್ದಾರೆ.

“ನೀವು ಕೇಂದ್ರ ಸರ್ಕಾರದ ಮೇಲೆ ಒತ್ತಡ ಹೇರಲು ಬಯಸಿದರೆ, ನಿಮ್ಮ ಪ್ರತಿಭಟನೆಯನ್ನು ದೆಹಲಿಗೆ ವರ್ಗಾಯಿಸಿ. ನಿಮ್ಮ ಪ್ರತಿಭಟನೆಗಳಿಂದ ಪಂಜಾಬ್‌ಗೆ ತೊಂದರೆ ನೀಡಬೇಡಿ” ಎಂದು ಅಮರಿಂದರ್‌ ಸಿಂಗ್ ಮನವಿ ಮಾಡಿದ್ದಾರೆ.

ಇದನ್ನೂ ಓದಿ: ರೈತ ಹೋರಾಟ: ಕರ್ನಾಲ್ ಲಾಠಿಚಾರ್ಜ್ ಕುರಿತ ತನಿಖೆಗೆ ಸಿದ್ಧ- ಹರಿಯಾಣ ಗೃಹ ಸಚಿವ

“ಇಂದಿಗೂ ಸಹ, ರಾಜ್ಯದ 113 ಸ್ಥಳಗಳಲ್ಲಿ ರೈತರು ಪ್ರತಿಭಟನೆ ನಡೆಸುತ್ತಿದ್ದಾರೆ. ಇದರಿಂದ ರಾಜ್ಯದ ಅಭಿವೃದ್ಧಿಯ ಮೇಲೆ ಪರಿಣಾಮ ಬೀರುತ್ತಿದೆ” ಎಂದು ಹೋಶಿಯಾರ್‌ಪುರ ಜಿಲ್ಲೆಯ ಮುಖ್ಲಿಯಾನಾ ಹಳ್ಳಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಹೇಳಿದ್ದಾರೆ.

“ಸಿಂಘು ಮತ್ತು ಟಿಕ್ರಿ ಗಡಿಗಳಲ್ಲಿ ಕುಳಿತಿರುವ ರೈತರಿಗೆ ನೆರವು ನೀಡಲು ಒಕ್ಕೂಟ ಸರ್ಕಾರ ಕೃಷಿ ಕಾನೂನುಗಳನ್ನು ಏಕೆ ರದ್ದುಗೊಳಿಸುವುದಿಲ್ಲ” ಎಂದು ಪ್ರಶ್ನಿಸಿದ್ದಾರೆ. ಪಂಜಾಬ್ ಸರ್ಕಾರವು ಕೃಷಿ ಕಾನೂನುಗಳ ವಿರುದ್ಧದ ರೈತ ಪ್ರತಿಭಟನೆಯಲ್ಲಿ ಹುತಾತ್ಮರಾದ ರಾಜ್ಯದ ಪ್ರತಿಯೊಬ್ಬ ರೈತರ ಕುಟುಂಬಕ್ಕೆ 5 ಲಕ್ಷ ರೂಪಾಯಿ ಮತ್ತು ಉದ್ಯೋಗ ನೀಡಿದೆ ಎಂದಿದ್ದಾರೆ.

ರೈತರ ಬೇಡಿಕೆಗಳಿಗೆ ತಮ್ಮ ಸರ್ಕಾರದ ಸ್ಪಂದಿಸುತ್ತಿದೆ ಎಂದಿರುವ ಅವರು, ರೈತರು ಅವರನ್ನು ಭೇಟಿ ಮಾಡಿದ ನಂತರ ಅವರ ಸರ್ಕಾರ ಇತ್ತೀಚೆಗೆ ಕಬ್ಬಿನ ಬೆಲೆಯನ್ನು ಹೆಚ್ಚಿಸಿದೆ ಎಂದು ಮಾಹಿತಿ ನೀಡಿದ್ದಾರೆ.

ಈ ಹಿಂದೆ, ಮುಖ್ಯಮಂತ್ರಿ ಅಮರಿಂದರ್‌ ಸಿಂಗ್ ಸ್ವತಃ ವಿವಾದಿತ ಮೂರು ಕೇಂದ್ರ ಕೃಷಿ ಕಾನೂನುಗಳ ವಿರುದ್ಧ ಪ್ರತಿಭಟನಾ ಮೆರವಣಿಗೆಗಳನ್ನು ನಡೆಸಿದ್ದರು. ಅದು ಸಾವಿರಾರು ರೈತರನ್ನು ಕೆರಳಿಸಿ ಪ್ರತಿಭಟನೆ ತೀವ್ರಗೊಳ್ಳಲು ಕಾರಣವಾಗಿತ್ತು.

ಕಳೆದ ನವೆಂಬರ್‌ 26 ರಿಂದ ದೆಹಲಿಯ ಸಿಂಘು, ಟಿಕ್ರಿ, ಗಾಝಿಪುರ್‌ ಮತ್ತು ರಾಜಸ್ಥಾನದ ಶಹಜಾನ್‌ಪುರ ಗಡಿ ಭಾಗಗಳಲ್ಲಿ ಕೃಷಿ ಕಾನೂನುಗಳ ವಿರುದ್ಧ ಸಾವಿರಾರು ರೈತರು ಪ್ರತಿಭಟನೆ ನಡೆಸುತ್ತಿದ್ದಾರೆ. ಪಂಜಾಬಿನ ಎಲ್ಲಾ ಜಿಲ್ಲಾ ಸ್ಥಳಗಳಲ್ಲಿ ಪ್ರತಿಭಟನೆ ಜಾರಿಯಲ್ಲಿದೆ.


ಇದನ್ನೂ ಓದಿ: ಹರಿಯಾಣ :ಕರ್ನಾಲ್‌ ಶಾಶ್ವತ ಪ್ರತಿಭಟನಾ ಸ್ಥಳವಾಗಿ ಉಳಿಯಬಹುದು- ರೈತರ ಎಚ್ಚರಿಕೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...