Homeಮುಖಪುಟ"ಆತ್ಮಹತ್ಯೆಗೆ ಮುಂದಾದೆ, ಕುಟುಂಬ ನೆನೆದು ಸುಮ್ಮನಾದೆ": ನೋವು ತೋಡಿಕೊಂಡ ಉನ್ನಾವೋ ಅತ್ಯಾಚಾರ ಸಂತ್ರಸ್ತೆ

“ಆತ್ಮಹತ್ಯೆಗೆ ಮುಂದಾದೆ, ಕುಟುಂಬ ನೆನೆದು ಸುಮ್ಮನಾದೆ”: ನೋವು ತೋಡಿಕೊಂಡ ಉನ್ನಾವೋ ಅತ್ಯಾಚಾರ ಸಂತ್ರಸ್ತೆ

ಅಪರಾಧಿ ಕುಲದೀಪ್ ಸಿಂಗ್ ಸೆಂಗಾರ್ ಶಿಕ್ಷೆ ಅಮಾನತು, ಇಂಡಿಯಾ ಗೇಟ್ ಬಳಿ ಸಂತ್ರಸ್ತೆ ಕುಟುಂಬದಿಂದ ಪ್ರತಿಭಟನೆ. ಶಿಕ್ಷೆ ಅಮಾನತಿಗೂ 2027ರ ಯುಪಿ ಚುನಾವಣೆಗೂ ಸಂಬಂಧವಿದೆ ಎಂದ ಸಂತ್ರಸ್ತೆ

- Advertisement -
- Advertisement -

“ನಾನು ಆತ್ಮಹತ್ಯೆ ಮಾಡಿಕೊಳ್ಳಬೇಕೆಂದಿದ್ದೆ. ಆದರೆ, ನನ್ನ ಕುಟುಂಬವನ್ನು ನೆನೆದು ಸುಮ್ಮನಾದೆ” ಇದು ಉನ್ನಾವೋ ಅತ್ಯಾಚಾರ ಪ್ರಕರಣದ ಸಂತ್ರಸ್ತೆ ಮಂಗಳವಾರ (2025 ಡಿಸೆಂಬರ್ 24) ಸಂಜೆ ದೆಹಲಿಯ ಇಂಡಿಯಾ ಗೇಟ್ ಎದುರಿನ ಹುಲ್ಲುಹಾಸಿನ ಮೇಲೆ ಕುಳಿತು ಹೇಳಿದೆ ನೋವಿನ ಮಾತು.

ದೇಶವನ್ನೇ ಬೆಚ್ಚಿ ಬೀಳಿಸಿದ 2017ರ ಉನ್ನಾವೋ ಅತ್ಯಾಚಾರ ಪ್ರಕರಣದ ಅಪರಾಧಿ, ಬಿಜೆಪಿಯ ಮಾಜಿ ಶಾಸಕ ಕುಲದೀಪ್ ಸಿಂಗ್ ಸೆಂಗಾರ್‌ಗೆ ವಿಚಾರಣಾ ನ್ಯಾಯಾಲಯ ವಿಧಿಸಿರುವ ಜೀವಾವಧಿ ಶಿಕ್ಷೆಯನ್ನು ದೆಹಲಿ ಹೈಕೋರ್ಟ್ ಮಂಗಳವಾರ ಅಮಾನತಿನಲ್ಲಿಟ್ಟಿದೆ.

ನ್ಯಾಯಾಲಯದ ಆದೇಶ ಹೊರಬಿದ್ದ ಕೆಲವೇ ಗಂಟೆಗಳಲ್ಲಿ ಇಂಡಿಯಾ ಗೇಟ್ ಬಳಿ ಪ್ರಕರಣದ ಸಂತ್ರಸ್ತೆ, ಆಕೆಯ ತಾಯಿ ಪ್ರತಿಭಟನೆ ನಡೆಸಿದರು. ಇವರಿಗೆ ಮಹಿಳಾ ಹಕ್ಕುಗಳ ಹೋರಾಟಗಾರ್ತಿ ಯೋಗಿತಾ ಭಯನಾ ಸಾಥ್ ನೀಡಿದರು.

“ನ್ಯಾಯಾಲಯದ ಆದೇಶದಿಂದ ನಾವು ಭಯದಲ್ಲಿ ಬದುಕುವಂತಾಗಿದೆ. ವ್ಯವಸ್ಥೆ ನಮಗೆ ದ್ರೋಹ ಬಗೆದಿದೆ” ಎಂದು ಪ್ರತಿಭಟನೆ ವೇಳೆ ಸಂತ್ರಸ್ತೆ ಹೇಳಿದ್ದಾರೆ.

ಸುದ್ದಿ ಸಂಸ್ಥೆ ಎಎನ್‌ಐ ಜೊತೆ ಮಾತನಾಡಿರುವ ಆಕೆ, “ಜಾಮೀನು ನೀಡಿದ ಸಮಯವು ರಾಜಕೀಯ ಪ್ರೇರಿತವಾಗಿದ್ದು. ಇದಕ್ಕೂ 2027ರ ಉತ್ತರ ಪ್ರದೇಶ ವಿಧಾನಸಭಾ ಚುನಾವಣೆಗೂ ಸಂಬಂಧವಿದೆ ಎಂದಿದ್ದಾರೆ.

“ನಮಗೆ ಅನ್ಯಾಯ ಮಾಡಲಾಗಿದೆ. ಚುನಾವಣೆ ಬರುತ್ತಿದೆ. ಕುಲದೀಪ್ ಸಿಂಗ್ ಸೆಂಗಾರ್ ಪತ್ನಿ ಚುನಾವಣೆಯಲ್ಲಿ ಸ್ಪರ್ಧಿಸಲು ಸಾಧ್ಯವಾಗುವಂತೆ ಅವರನ್ನು ಜಾಮೀನಿನ ಮೇಲೆ ಬಿಡುಗಡೆ ಮಾಡಲಾಗಿದೆ” ಎಂದು ಹೇಳಿದ್ದಾರೆ. “ಇಂತಹ ಅತ್ಯಾಚಾರ ಆರೋಪಿ ಹೊರಬಂದರೆ, ನಾವು ಹೇಗೆ ಸುರಕ್ಷಿತವಾಗಿರಲು ಸಾಧ್ಯ ಎಂದು? ಪ್ರಶ್ನಿಸಿದ್ದಾರೆ.

“ದೆಹಲಿ ನ್ಯಾಯಾಲಯದಿಂದ ಶಿಕ್ಷೆ ಅಮಾನತಿನಲ್ಲಿಟ್ಟ ಆದೇಶ ಹೊರಬಿದ್ದ ಬಳಿಕ ನಮಗೆ ಭಯ ಶುರುವಾಗಿದೆ. ನ್ಯಾಯಾಲಯ ದಯವಿಟ್ಟು ಜಾಮೀನು ರದ್ದುಗೊಳಿಸಬೇಕು” ಎಂದು ಸಂತ್ರಸ್ತೆ ಮನವಿ ಮಾಡಿದ್ದಾರೆ.

ನೋವಿನ ನಡುವೆಯೂ ಆಕೆ, “ನನಗೆ ನ್ಯಾಯಾಂಗದ ಮೇಲೆ ಇನ್ನೂ ನಂಬಿಕೆ ಇದೆ” ಎಂದು ಹೇಳಿದ್ದು, ಸುಪ್ರೀಂ ಕೋರ್ಟ್ ಮೊರೆ ಹೋಗುವುದಾಗಿ ತಿಳಿಸಿದ್ದಾರೆ.

ಪ್ರತಿಭಟನೆ ವೇಳೆ ದೆಹಲಿ ಪೊಲೀಸರು ಮೂವರನ್ನೂ ಸ್ಥಳದಿಂದ ಕರೆದೊಯ್ದರು. ಪೊಲೀಸರು ಅವರನ್ನು ತಮ್ಮ ವಾಹನಕ್ಕೆ ಹತ್ತಿಸಿದ ಮತ್ತು ಪ್ರತಿಭಟನೆಗೆ ಅವಕಾಶ ನೀಡುವಂತೆ ಅವರು ಮನವಿ ಮಾಡಿದ ವಿಡಿಯೋಗಳನ್ನು ಮಾಧ್ಯಮಗಳು ತೋರಿಸಿವೆ.

ಹೋರಾಟಗಾರ್ತಿ ಯೋಗಿತಾ ಅವರು, ಕುಲದೀಪ್ ಸಿಂಗ್ ಸೆಂಗಾರ್‌ಗೆ ಜಾಮೀನು ನೀಡಿದ ಕಾರಣವನ್ನು ಪ್ರಶ್ನಿಸಿದ್ದಾರೆ. ಕಾನೂನು ಹೋರಾಟದ ವೇಳೆ ಪೂರ್ತಿಯಾಗಿ ಸಂತ್ರಸ್ತೆ ಮತ್ತು ಆಕೆಯ ತಾಯಿ ಪ್ರತ್ಯೇಕವಾಗಿ (ಏಕಾಂಗಿಯಾಗಿ) ಇದ್ದರು ಎಂದಿದ್ದಾರೆ.

ಸಂತ್ರಸ್ತೆ ಮತ್ತು ಆಕೆಯ ತಾಯಿ ತುಂಬಾ ಕಷ್ಟಗಳನ್ನು ಎದುರಿಸಿ ಕಾನೂನು ಹೋರಾಟ ನಡೆಸುವ ಮೂಲಕ ಅಪರಾಧಿಗೆ ಶಿಕ್ಷೆಯಾಗುವಂತೆ ನೋಡಿಕೊಂಡರು. ಆದರೆ, ಈಗ ಏನಾಯಿತು? ಅಪರಾಧಿಗೆ ಜಾಮೀನು ಸಿಕ್ಕಿತು. ದೇಶದಲ್ಲಿ ಅತ್ಯಾಚಾರಿಗಳು ಜಾಮೀನು ಪಡೆಯುತ್ತಿದ್ದಾರೆ, ಅಮಾಯಕರು ಜೈಲಲ್ಲಿದ್ದಾರೆ. ಹೈಕೋರ್ಟ್ ಆದೇಶದ ಬಳಿಕ ಸಂತ್ರಸ್ತೆ ಮತ್ತು ಆಕೆಯ ತಾಯಿ ಭಯದಲ್ಲಿದ್ದಾರೆ ಎಂದು ಹೇಳಿದ್ದಾರೆ.

ಸಂತ್ರಸ್ತೆಯ ಸಹೋದರಿ ಕೂಡ ಜಾಮೀನು ದೊರೆತಿರುವ ಕುರಿತು ಮಾತನಾಡಿದ್ದು, “ಅಪರಿಚಿತ ವ್ಯಕ್ತಿಗಳು ನಮ್ಮ ಮನೆಯ ಸುತ್ತಮುತ್ತ ಓಡಾಡುತ್ತಿದ್ದಾರೆ, ನಮಗೆ ಬೆದರಿಕೆ ಹಾಕುತ್ತಿದ್ದಾರೆ” ಎಂದು ಹೇಳಿದ್ದಾರೆ.

“ಅವನು (ಸೆಂಗಾರ್) ಮೊದಲು ನನ್ನ ಚಿಕ್ಕಪ್ಪನನ್ನು ಕೊಂದ, ಬಳಿಕ ನನ್ನ ಅಪ್ಪನನ್ನು ಕೊಂದ. ನಂತರ ನನ್ನ ಸಹೋದರಿ ಮೇಲೆ ದೌರ್ಜನ್ಯ ನಡೆಯಿತು. ಎಲ್ಲಾ ಪ್ರಕರಣಗಳು ಆತನಿಗೆ ಸಂಬಂಧಿಸಿದೆ. ಆದರೆ, ಆತ ಜಾಮೀನಿನ ಮೇಲೆ ಬಿಡುಗಡೆಯಾಗಿದ್ದಾನೆ. ನಾವು ಇನ್ನೂ ಭಯದಲ್ಲಿದ್ದೇವೆ. ಕೊನೆಪಕ್ಷ ನಾವು ಜೈಲಲ್ಲಿ ಇದ್ದರೆ ಜೀವಂತ ಇರಬಹುದು” ಎಂದು ಆತಂಕ, ನೋವು ತೋಡಿಕೊಂಡಿದ್ದಾರೆ.

ಕುಲದೀಪ್ ಸಿಂಗ್ ಸೆಂಗಾರ್‌ಗೆ ವಿಚಾರಣಾ ನ್ಯಾಯಾಲಯವು 2019ರಲ್ಲಿ ಜೀವಾವಧಿ ಶಿಕ್ಷೆ ವಿಧಿಸಿದೆ. ಇದರ ವಿರುದ್ದ ಸೆಂಗಾರ್‌ ದೆಹಲಿ ಹೈಕೋರ್ಟ್‌ಗೆ ಮೇಲ್ಮನವಿ ಸಲ್ಲಿಸಿದ್ದರು. ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್, ಮೇಲ್ಮನವಿ ವಿಚಾರಣೆ ಮುಗಿಯುವವರೆಗೆ ಶಿಕ್ಷೆಯನ್ನು ಅಮಾನತಿನಲ್ಲಿಟ್ಟಿದೆ.

ನ್ಯಾಯಮೂರ್ತಿ ಸುಬ್ರಹ್ಮಣ್ಯಂ ಪ್ರಸಾದ್ ಮತ್ತು ಹರೀಶ್ ವೈದ್ಯನಾಥನ್ ಶಂಕರ್ ಅವರಿದ್ದ ವಿಭಾಗೀಯ ಪೀಠವು 15 ಲಕ್ಷ ರೂಪಾಯಿಗಳ ಜಾಮೀನು ಬಾಂಡ್ ಸಲ್ಲಿಸಬೇಕೆಂಬ ಷರತ್ತಿನ ಮೇಲೆ ಜಾಮೀನು ಮಂಜೂರು ಮಾಡಿದೆ.

ಆದಾಗ್ಯೂ, ಸಂತ್ರಸ್ತೆಯ ತಂದೆಯ ಕಸ್ಟಡಿ ಸಾವಿಗೆ ಸಂಬಂಧಿಸಿದ ಪ್ರತ್ಯೇಕ ಪ್ರಕರಣದಲ್ಲಿ ಸೆಂಗಾರ್‌ಗೆ ಜಾಮೀನು ಸಿಗದ ಕಾರಣ ಆತ ಸದ್ಯಕ್ಕೆ ಬಂಧನದಲ್ಲೇ ಇರುತ್ತಾರೆ. ಆ ಪ್ರಕರಣದಲ್ಲಿ ಅವರಿಗೆ 10 ವರ್ಷಗಳ ಜೈಲು ಶಿಕ್ಷೆ ವಿಧಿಸಲಾಗಿದ್ದು, ಶಿಕ್ಷೆಯನ್ನು ಅಮಾನತುಗೊಳಿಸುವಂತೆ ಕೋರಿ ಸಲ್ಲಿಸಲಾದ ಅರ್ಜಿಯೊಂದಿಗೆ ಅವರ ಮೇಲ್ಮನವಿ ಇನ್ನೂ ದೆಹಲಿ ಹೈಕೋರ್ಟ್‌ನಲ್ಲಿ ಬಾಕಿ ಇದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮುಸ್ಲಿಮರನ್ನು ತುಚ್ಛವಾಗಿ ನಿಂದಿಸುತ್ತಿರುವ ಬಿಜೆಪಿ ನಾಯಕಿ ನಾಝಿಯಾ ಇಲಾಹಿ : ಕ್ರಮ ಕೈಗೊಳ್ಳದ ಪೊಲೀಸರು

ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾದ ನಾಯಕಿ ಎನ್ನಲಾದ ನಾಝಿಯಾ ಇಲಾಹಿ (ನಾಝಿಯಾ ಇಲಾಹಿ ಖಾನ್) ಪದೇ ಪದೇ ಮುಸ್ಲಿಮರನ್ನು ತುಚ್ಛವಾಗಿ ನಿಂದಿಸಿ, ಅದರ ವಿಡಿಯೋಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ರಾಜಾರೋಷವಾಗಿ ಹಂಚಿಕೊಳ್ಳುತ್ತಿದ್ದು, ಪೊಲೀಸರು ಯಾವುದೇ ಕ್ರಮ...

ತೆಲಂಗಾಣ: ಸರಪಂಚ್ ಚುನಾವಣೆಯಲ್ಲಿ ಬೆಂಬಲಿಸದ ದಲಿತ ಕುಟುಂಬದ ಮನೆ ಕೆಡವಿದ ಕಾಂಗ್ರೆಸ್ ಸದಸ್ಯರು

ಕಾಂಗ್ರೆಸ್ ಬೆಂಬಲಿತ ಸರಪಂಚ್ ಆಗಿ ಪ್ರಮಾಣವಚನ ಸ್ವೀಕರಿಸಿದ ಕೆಲವೇ ಗಂಟೆಗಳಲ್ಲಿ, ಪದ್ಮಾವತಿ ಮತ್ತು ಅವರ ಮಗ ಪ್ರಸಾದ್ ರೆಡ್ಡಿ ಎಂಬುವವರು ಸೋಮವಾರ ಕೊಹಿರ್ ಮಂಡಲದ ಸಜ್ಜಾಪುರದಲ್ಲಿ ನಿರ್ಮಾಣ ಹಂತದಲ್ಲಿದ್ದ ದಲಿತ ಕುಟುಂಬದ ಮನೆಯನ್ನು...

ಜಿಬಿಎ ಅಧಿಕಾರಿಗಳಿಂದ ಮನೆಗಳ ನೆಲಸಮ : ತೀವ್ರ ಖಂಡನೆ ವ್ಯಕ್ತಪಡಿಸಿದ ಭೂಮಿ ಮತ್ತು ವಸತಿ ಹಕ್ಕು ವಂಚಿತರ ಹೋರಾಟ ಸಮಿತಿ

ಬೆಂಗಳೂರು ಉತ್ತರ ನಗರ ಪಾಲಿಕೆ ವ್ಯಾಪ್ತಿಯ ಕೋಗಿಲು ಗ್ರಾಮದಲ್ಲಿ ಬಡ ಜನರ ಸುಮಾರು 150 ಮನೆಗಳನ್ನು ಏಕಾಏಕಿ ನೆಲಸಮಗೊಳಿಸಿರುವ ಗ್ರೇಟರ್ ಬೆಂಗಳೂರು ಪ್ರಾಧಿಕಾರದ (ಜಿಬಿಎ) ಕ್ರಮವನ್ನು ಭೂಮಿ ಮತ್ತು ವಸತಿ ಹಕ್ಕು ವಂಚಿತರ...

17ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ : ರಾಯಭಾರಿಯಾಗಿ ನಟ ಪ್ರಕಾಶ್ ರಾಜ್ ಆಯ್ಕೆ

17ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ 2026ರ ಜನವರಿ 29ರಿಂದ ಫೆಬ್ರವರಿ 6ರವರೆಗೆ ನಡೆಯಲಿದ್ದು, ರಾಯಭಾರಿಯಾಗಿ ಹಿರಿಯ ನಟ, ನಿರ್ದೇಶಕ ಹಾಗೂ ನಿರ್ಮಾಪಕರು ಪ್ರಕಾಶ್ ರಾಜ್ ಅವರನ್ನು ಆಯ್ಕೆ ಮಾಡಲಾಗಿದೆ. ಚಲನಚಿತ್ರೋತ್ಸವದ ಪೂರ್ವಭಾವಿಯಾಗಿ ಸಂಘಟನಾ...

ಗುಂಪು ಹತ್ಯೆ ಪ್ರಕರಣ ಹಿಂಪಡೆಯಲು ಮುಂದಾದ ಯುಪಿ ಸರ್ಕಾರ : ಹೈಕೋರ್ಟ್ ಮೆಟ್ಟಿಲೇರಿದ ಅಖ್ಲಾಕ್ ಪತ್ನಿ

ದಾದ್ರಿ ಗುಂಪು ಹತ್ಯೆ ಪ್ರಕರಣದ ಬಲಿಪಶು ಮೊಹಮ್ಮದ್ ಅಖ್ಲಾಕ್ ಅವರ ಪತ್ನಿ, ಆರೋಪಿಗಳ ವಿರುದ್ಧದ ಪ್ರಕರಣವನ್ನು ಹಿಂಪಡೆಯುವ ಉತ್ತರ ಪ್ರದೇಶ ಸರ್ಕಾರದ ನಿರ್ಧಾರ ಮತ್ತು ಗೌತಮ್ ಬುದ್ಧ ನಗರದ ನ್ಯಾಯಾಲಯದಲ್ಲಿ ಪ್ರಾಸಿಕ್ಯೂಟರ್ ಸಲ್ಲಿಸಿರುವ...

ಉನ್ನಾವೋ ಅತ್ಯಾಚಾರ ಪ್ರಕರಣ: ಅಪರಾಧಿ ಕುಲದೀಪ್ ಸಿಂಗ್ ಸೆಂಗಾರ್‌ ಜೀವಾವಧಿ ಶಿಕ್ಷೆ ಅಮಾನತು

ಉನ್ನಾವೋ ಅತ್ಯಾಚಾರ ಪ್ರಕರಣದ (2017ರ ಪ್ರಕರಣ) ಅಪರಾಧಿ, ಬಿಜೆಪಿ ಮಾಜಿ ಶಾಸಕ ಕುಲದೀಪ್ ಸಿಂಗ್ ಸೆಂಗಾರ್‌ಗೆ ದೆಹಲಿ ಹೈಕೋರ್ಟ್ ಮಂಗಳವಾರ (ಡಿ.23) ಜಾಮೀನು ಮಂಜೂರು ಮಾಡಿದೆ. ನ್ಯಾಯಾಧೀಶರಾದ ಸುಬ್ರಹ್ಮಣ್ಯಂ ಪ್ರಸಾದ್ ಮತ್ತು ಹರೀಶ್ ವೈದ್ಯನಾಥನ್...

ಮಕ್ಕಳ ಕ್ರಿಸ್‌ಮಸ್ ಕ್ಯಾರೋಲ್ ಗುಂಪಿನ ಮೇಲೆ ದಾಳಿ : ಬಿಜೆಪಿ-ಆರ್‌ಎಸ್‌ಎಸ್ ಕಾರ್ಯಕರ್ತನ ಬಂಧನ

ಇತ್ತೀಚೆಗೆ ಗುಂಪು ಹತ್ಯೆ ನಡೆದ ವಲಯಾರ್‌ನಿಂದ ಕೇವಲ ಒಂದು ಕಿಲೋಮೀಟರ್ ದೂರದಲ್ಲಿರುವ ಕೇರಳದ ಪಾಲಕ್ಕಾಡ್‌ನ ಪುದುಶ್ಶೇರಿಯಲ್ಲಿ ಮಕ್ಕಳನ್ನೊಳಗೊಂಡ ಕ್ರಿಸ್‌ಮಸ್ ಕ್ಯಾರೋಲ್ ಗುಂಪಿನ ಮೇಲೆ ದಾಳಿ ಮಾಡಿದ ಆರೋಪದಲ್ಲಿ ಬಿಜೆಪಿ-ಆರ್‌ಎಸ್‌ಎಸ್ ಸದಸ್ಯನೊಬ್ಬನನ್ನು ಬಂಧಿಸಲಾಗಿದೆ ಎಂದು...

ಮಧ್ಯಪ್ರದೇಶ | ಅಂಧ ಮಹಿಳೆ ಮೇಲೆ ಹಲ್ಲೆ ನಡೆಸಿದ ಬಿಜೆಪಿ ನಾಯಕಿ

ಮಧ್ಯಪ್ರದೇಶದ ಜಬಲ್ಪುರದಲ್ಲಿ ಬಿಜೆಪಿ ನಾಯಕಿಯೊಬ್ಬರು ಅಂಧ ಮಹಿಳೆಗೆ ಕಿರುಕುಳ ನೀಡಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ತೀವ್ರ ಜನಾಕ್ರೋಶಕ್ಕೆ ಕಾರಣವಾಗಿದೆ. ಅಂಧ ಮಹಿಳೆಯ ಅಂಗವೈಕಲ್ಯವದ ಕುರಿತು ಬಿಜೆಪಿ ನಾಯಕಿ ಅವಹೇಳನಕಾರಿ ಹೇಳಿಕೆ ನೀಡಿರುವುದು...

‘ಇದು ಹಿಂದೂ ರಾಷ್ಟ್ರ, ಇಲ್ಲಿ ಕ್ರಿಶ್ಚಿಯನ್ ಸಾಮಗ್ರಿಗಳ ಮಾರಾಟಕ್ಕೆ ಅವಕಾಶವಿಲ್ಲ’ : ಸಾಂತಾ ಟೋಪಿ ಮಾರಾಟಗಾರರಿಗೆ ದುಷ್ಕರ್ಮಿಗಳಿಂದ ಕಿರುಕುಳ

ಒಡಿಶಾದ ಭುವನೇಶ್ವರ ನಗರದಲ್ಲಿ ಕ್ರಿಸ್‌ಮಸ್ ಹಬ್ಬದ ಪ್ರಯುಕ್ತ ರಸ್ತೆ ಬದಿ ಸಾಂತಾ ಕ್ಲಾಸ್ ಟೋಪಿಗಳನ್ನು ಮಾರಾಟ ಮಾಡುತ್ತಿದ್ದ ಬಡ ವ್ಯಾಪಾರಿಗಳಿಗೆ ದುಷ್ಕರ್ಮಿಗಳ ಗುಂಪು ಕಿರುಕುಳ ನೀಡಿರುವ ಬಗ್ಗೆ ವರದಿಯಾಗಿದೆ. ಈ ಕುರಿತು ವಿಡಿಯೋವೊಂದು ಸಾಮಾಜಿಕ...

ಬಾಂಗ್ಲಾದಲ್ಲಿ ಹಿಂದೂ ಯುವಕನ ಗುಂಪುಹತ್ಯೆ ನಾಚಿಕೆಗೇಡು ಕೃತ್ಯ; ಇಸ್ಲಾಂ ವಿರುದ್ಧ: ಜಮಿಯತ್ ಮುಖ್ಯಸ್ಥ ಮಹಮೂದ್ ಮದನಿ

ಬಾಂಗ್ಲಾದೇಶದ ಮೈಮೆನ್ಸಿಂಗ್ ಜಿಲ್ಲೆಯಲ್ಲಿ ಹಿಂದೂ ಯುವಕ ದೀಪು ಚಂದ್ರ ದಾಸ್ ಅವರ ಮೇಲೆ ನಡೆದ ಗುಂಪು ಹಲ್ಲೆಯನ್ನು ಜಮಿಯತ್ ಉಲಮಾ-ಇ-ಹಿಂದ್ ಅಧ್ಯಕ್ಷ ಮೌಲಾನಾ ಮಹಮೂದ್ ಮದನಿ ಭಾನುವಾರ ತೀವ್ರವಾಗಿ ಖಂಡಿಸಿದ್ದಾರೆ. ಇಂತಹ ಕೃತ್ಯಗಳು...