Homeಮುಖಪುಟ"ಆತ್ಮಹತ್ಯೆಗೆ ಮುಂದಾದೆ, ಕುಟುಂಬ ನೆನೆದು ಸುಮ್ಮನಾದೆ": ನೋವು ತೋಡಿಕೊಂಡ ಉನ್ನಾವೋ ಅತ್ಯಾಚಾರ ಸಂತ್ರಸ್ತೆ

“ಆತ್ಮಹತ್ಯೆಗೆ ಮುಂದಾದೆ, ಕುಟುಂಬ ನೆನೆದು ಸುಮ್ಮನಾದೆ”: ನೋವು ತೋಡಿಕೊಂಡ ಉನ್ನಾವೋ ಅತ್ಯಾಚಾರ ಸಂತ್ರಸ್ತೆ

ಅಪರಾಧಿ ಕುಲದೀಪ್ ಸಿಂಗ್ ಸೆಂಗಾರ್ ಶಿಕ್ಷೆ ಅಮಾನತು, ಇಂಡಿಯಾ ಗೇಟ್ ಬಳಿ ಸಂತ್ರಸ್ತೆ ಕುಟುಂಬದಿಂದ ಪ್ರತಿಭಟನೆ. ಶಿಕ್ಷೆ ಅಮಾನತಿಗೂ 2027ರ ಯುಪಿ ಚುನಾವಣೆಗೂ ಸಂಬಂಧವಿದೆ ಎಂದ ಸಂತ್ರಸ್ತೆ

- Advertisement -
- Advertisement -

“ನಾನು ಆತ್ಮಹತ್ಯೆ ಮಾಡಿಕೊಳ್ಳಬೇಕೆಂದಿದ್ದೆ. ಆದರೆ, ನನ್ನ ಕುಟುಂಬವನ್ನು ನೆನೆದು ಸುಮ್ಮನಾದೆ” ಇದು ಉನ್ನಾವೋ ಅತ್ಯಾಚಾರ ಪ್ರಕರಣದ ಸಂತ್ರಸ್ತೆ ಮಂಗಳವಾರ (2025 ಡಿಸೆಂಬರ್ 24) ಸಂಜೆ ದೆಹಲಿಯ ಇಂಡಿಯಾ ಗೇಟ್ ಎದುರಿನ ಹುಲ್ಲುಹಾಸಿನ ಮೇಲೆ ಕುಳಿತು ಹೇಳಿದೆ ನೋವಿನ ಮಾತು.

ದೇಶವನ್ನೇ ಬೆಚ್ಚಿ ಬೀಳಿಸಿದ 2017ರ ಉನ್ನಾವೋ ಅತ್ಯಾಚಾರ ಪ್ರಕರಣದ ಅಪರಾಧಿ, ಬಿಜೆಪಿಯ ಮಾಜಿ ಶಾಸಕ ಕುಲದೀಪ್ ಸಿಂಗ್ ಸೆಂಗಾರ್‌ಗೆ ವಿಚಾರಣಾ ನ್ಯಾಯಾಲಯ ವಿಧಿಸಿರುವ ಜೀವಾವಧಿ ಶಿಕ್ಷೆಯನ್ನು ದೆಹಲಿ ಹೈಕೋರ್ಟ್ ಮಂಗಳವಾರ ಅಮಾನತಿನಲ್ಲಿಟ್ಟಿದೆ.

ನ್ಯಾಯಾಲಯದ ಆದೇಶ ಹೊರಬಿದ್ದ ಕೆಲವೇ ಗಂಟೆಗಳಲ್ಲಿ ಇಂಡಿಯಾ ಗೇಟ್ ಬಳಿ ಪ್ರಕರಣದ ಸಂತ್ರಸ್ತೆ, ಆಕೆಯ ತಾಯಿ ಪ್ರತಿಭಟನೆ ನಡೆಸಿದರು. ಇವರಿಗೆ ಮಹಿಳಾ ಹಕ್ಕುಗಳ ಹೋರಾಟಗಾರ್ತಿ ಯೋಗಿತಾ ಭಯನಾ ಸಾಥ್ ನೀಡಿದರು.

“ನ್ಯಾಯಾಲಯದ ಆದೇಶದಿಂದ ನಾವು ಭಯದಲ್ಲಿ ಬದುಕುವಂತಾಗಿದೆ. ವ್ಯವಸ್ಥೆ ನಮಗೆ ದ್ರೋಹ ಬಗೆದಿದೆ” ಎಂದು ಪ್ರತಿಭಟನೆ ವೇಳೆ ಸಂತ್ರಸ್ತೆ ಹೇಳಿದ್ದಾರೆ.

ಸುದ್ದಿ ಸಂಸ್ಥೆ ಎಎನ್‌ಐ ಜೊತೆ ಮಾತನಾಡಿರುವ ಆಕೆ, “ಜಾಮೀನು ನೀಡಿದ ಸಮಯವು ರಾಜಕೀಯ ಪ್ರೇರಿತವಾಗಿದ್ದು. ಇದಕ್ಕೂ 2027ರ ಉತ್ತರ ಪ್ರದೇಶ ವಿಧಾನಸಭಾ ಚುನಾವಣೆಗೂ ಸಂಬಂಧವಿದೆ ಎಂದಿದ್ದಾರೆ.

“ನಮಗೆ ಅನ್ಯಾಯ ಮಾಡಲಾಗಿದೆ. ಚುನಾವಣೆ ಬರುತ್ತಿದೆ. ಕುಲದೀಪ್ ಸಿಂಗ್ ಸೆಂಗಾರ್ ಪತ್ನಿ ಚುನಾವಣೆಯಲ್ಲಿ ಸ್ಪರ್ಧಿಸಲು ಸಾಧ್ಯವಾಗುವಂತೆ ಅವರನ್ನು ಜಾಮೀನಿನ ಮೇಲೆ ಬಿಡುಗಡೆ ಮಾಡಲಾಗಿದೆ” ಎಂದು ಹೇಳಿದ್ದಾರೆ. “ಇಂತಹ ಅತ್ಯಾಚಾರ ಆರೋಪಿ ಹೊರಬಂದರೆ, ನಾವು ಹೇಗೆ ಸುರಕ್ಷಿತವಾಗಿರಲು ಸಾಧ್ಯ ಎಂದು? ಪ್ರಶ್ನಿಸಿದ್ದಾರೆ.

“ದೆಹಲಿ ನ್ಯಾಯಾಲಯದಿಂದ ಶಿಕ್ಷೆ ಅಮಾನತಿನಲ್ಲಿಟ್ಟ ಆದೇಶ ಹೊರಬಿದ್ದ ಬಳಿಕ ನಮಗೆ ಭಯ ಶುರುವಾಗಿದೆ. ನ್ಯಾಯಾಲಯ ದಯವಿಟ್ಟು ಜಾಮೀನು ರದ್ದುಗೊಳಿಸಬೇಕು” ಎಂದು ಸಂತ್ರಸ್ತೆ ಮನವಿ ಮಾಡಿದ್ದಾರೆ.

ನೋವಿನ ನಡುವೆಯೂ ಆಕೆ, “ನನಗೆ ನ್ಯಾಯಾಂಗದ ಮೇಲೆ ಇನ್ನೂ ನಂಬಿಕೆ ಇದೆ” ಎಂದು ಹೇಳಿದ್ದು, ಸುಪ್ರೀಂ ಕೋರ್ಟ್ ಮೊರೆ ಹೋಗುವುದಾಗಿ ತಿಳಿಸಿದ್ದಾರೆ.

ಪ್ರತಿಭಟನೆ ವೇಳೆ ದೆಹಲಿ ಪೊಲೀಸರು ಮೂವರನ್ನೂ ಸ್ಥಳದಿಂದ ಕರೆದೊಯ್ದರು. ಪೊಲೀಸರು ಅವರನ್ನು ತಮ್ಮ ವಾಹನಕ್ಕೆ ಹತ್ತಿಸಿದ ಮತ್ತು ಪ್ರತಿಭಟನೆಗೆ ಅವಕಾಶ ನೀಡುವಂತೆ ಅವರು ಮನವಿ ಮಾಡಿದ ವಿಡಿಯೋಗಳನ್ನು ಮಾಧ್ಯಮಗಳು ತೋರಿಸಿವೆ.

ಹೋರಾಟಗಾರ್ತಿ ಯೋಗಿತಾ ಅವರು, ಕುಲದೀಪ್ ಸಿಂಗ್ ಸೆಂಗಾರ್‌ಗೆ ಜಾಮೀನು ನೀಡಿದ ಕಾರಣವನ್ನು ಪ್ರಶ್ನಿಸಿದ್ದಾರೆ. ಕಾನೂನು ಹೋರಾಟದ ವೇಳೆ ಪೂರ್ತಿಯಾಗಿ ಸಂತ್ರಸ್ತೆ ಮತ್ತು ಆಕೆಯ ತಾಯಿ ಪ್ರತ್ಯೇಕವಾಗಿ (ಏಕಾಂಗಿಯಾಗಿ) ಇದ್ದರು ಎಂದಿದ್ದಾರೆ.

ಸಂತ್ರಸ್ತೆ ಮತ್ತು ಆಕೆಯ ತಾಯಿ ತುಂಬಾ ಕಷ್ಟಗಳನ್ನು ಎದುರಿಸಿ ಕಾನೂನು ಹೋರಾಟ ನಡೆಸುವ ಮೂಲಕ ಅಪರಾಧಿಗೆ ಶಿಕ್ಷೆಯಾಗುವಂತೆ ನೋಡಿಕೊಂಡರು. ಆದರೆ, ಈಗ ಏನಾಯಿತು? ಅಪರಾಧಿಗೆ ಜಾಮೀನು ಸಿಕ್ಕಿತು. ದೇಶದಲ್ಲಿ ಅತ್ಯಾಚಾರಿಗಳು ಜಾಮೀನು ಪಡೆಯುತ್ತಿದ್ದಾರೆ, ಅಮಾಯಕರು ಜೈಲಲ್ಲಿದ್ದಾರೆ. ಹೈಕೋರ್ಟ್ ಆದೇಶದ ಬಳಿಕ ಸಂತ್ರಸ್ತೆ ಮತ್ತು ಆಕೆಯ ತಾಯಿ ಭಯದಲ್ಲಿದ್ದಾರೆ ಎಂದು ಹೇಳಿದ್ದಾರೆ.

ಸಂತ್ರಸ್ತೆಯ ಸಹೋದರಿ ಕೂಡ ಜಾಮೀನು ದೊರೆತಿರುವ ಕುರಿತು ಮಾತನಾಡಿದ್ದು, “ಅಪರಿಚಿತ ವ್ಯಕ್ತಿಗಳು ನಮ್ಮ ಮನೆಯ ಸುತ್ತಮುತ್ತ ಓಡಾಡುತ್ತಿದ್ದಾರೆ, ನಮಗೆ ಬೆದರಿಕೆ ಹಾಕುತ್ತಿದ್ದಾರೆ” ಎಂದು ಹೇಳಿದ್ದಾರೆ.

“ಅವನು (ಸೆಂಗಾರ್) ಮೊದಲು ನನ್ನ ಚಿಕ್ಕಪ್ಪನನ್ನು ಕೊಂದ, ಬಳಿಕ ನನ್ನ ಅಪ್ಪನನ್ನು ಕೊಂದ. ನಂತರ ನನ್ನ ಸಹೋದರಿ ಮೇಲೆ ದೌರ್ಜನ್ಯ ನಡೆಯಿತು. ಎಲ್ಲಾ ಪ್ರಕರಣಗಳು ಆತನಿಗೆ ಸಂಬಂಧಿಸಿದೆ. ಆದರೆ, ಆತ ಜಾಮೀನಿನ ಮೇಲೆ ಬಿಡುಗಡೆಯಾಗಿದ್ದಾನೆ. ನಾವು ಇನ್ನೂ ಭಯದಲ್ಲಿದ್ದೇವೆ. ಕೊನೆಪಕ್ಷ ನಾವು ಜೈಲಲ್ಲಿ ಇದ್ದರೆ ಜೀವಂತ ಇರಬಹುದು” ಎಂದು ಆತಂಕ, ನೋವು ತೋಡಿಕೊಂಡಿದ್ದಾರೆ.

ಕುಲದೀಪ್ ಸಿಂಗ್ ಸೆಂಗಾರ್‌ಗೆ ವಿಚಾರಣಾ ನ್ಯಾಯಾಲಯವು 2019ರಲ್ಲಿ ಜೀವಾವಧಿ ಶಿಕ್ಷೆ ವಿಧಿಸಿದೆ. ಇದರ ವಿರುದ್ದ ಸೆಂಗಾರ್‌ ದೆಹಲಿ ಹೈಕೋರ್ಟ್‌ಗೆ ಮೇಲ್ಮನವಿ ಸಲ್ಲಿಸಿದ್ದರು. ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್, ಮೇಲ್ಮನವಿ ವಿಚಾರಣೆ ಮುಗಿಯುವವರೆಗೆ ಶಿಕ್ಷೆಯನ್ನು ಅಮಾನತಿನಲ್ಲಿಟ್ಟಿದೆ.

ನ್ಯಾಯಮೂರ್ತಿ ಸುಬ್ರಹ್ಮಣ್ಯಂ ಪ್ರಸಾದ್ ಮತ್ತು ಹರೀಶ್ ವೈದ್ಯನಾಥನ್ ಶಂಕರ್ ಅವರಿದ್ದ ವಿಭಾಗೀಯ ಪೀಠವು 15 ಲಕ್ಷ ರೂಪಾಯಿಗಳ ಜಾಮೀನು ಬಾಂಡ್ ಸಲ್ಲಿಸಬೇಕೆಂಬ ಷರತ್ತಿನ ಮೇಲೆ ಜಾಮೀನು ಮಂಜೂರು ಮಾಡಿದೆ.

ಆದಾಗ್ಯೂ, ಸಂತ್ರಸ್ತೆಯ ತಂದೆಯ ಕಸ್ಟಡಿ ಸಾವಿಗೆ ಸಂಬಂಧಿಸಿದ ಪ್ರತ್ಯೇಕ ಪ್ರಕರಣದಲ್ಲಿ ಸೆಂಗಾರ್‌ಗೆ ಜಾಮೀನು ಸಿಗದ ಕಾರಣ ಆತ ಸದ್ಯಕ್ಕೆ ಬಂಧನದಲ್ಲೇ ಇರುತ್ತಾರೆ. ಆ ಪ್ರಕರಣದಲ್ಲಿ ಅವರಿಗೆ 10 ವರ್ಷಗಳ ಜೈಲು ಶಿಕ್ಷೆ ವಿಧಿಸಲಾಗಿದ್ದು, ಶಿಕ್ಷೆಯನ್ನು ಅಮಾನತುಗೊಳಿಸುವಂತೆ ಕೋರಿ ಸಲ್ಲಿಸಲಾದ ಅರ್ಜಿಯೊಂದಿಗೆ ಅವರ ಮೇಲ್ಮನವಿ ಇನ್ನೂ ದೆಹಲಿ ಹೈಕೋರ್ಟ್‌ನಲ್ಲಿ ಬಾಕಿ ಇದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಅಸ್ಸಾಂನ ನಾಲ್ವರು ಮುಸ್ಲಿಂ ಮಹಿಳೆಯರ ಗಡೀಪಾರು ಪ್ರಕ್ರಿಯೆಗೆ ಸುಪ್ರೀಂ ತಡೆ: ಕೇಂದ್ರ, ರಾಜ್ಯ ಸರ್ಕಾರಗಳಿಗೆ ನೋಟಿಸ್‌

ಅಸ್ಸಾಂನಲ್ಲಿ 'ವಿದೇಶಿಯರು' ಎಂದು ಘೋಷಿತರಾಗಿ ಗಡೀಪಾರು ಭೀತಿ ಎದುರಿಸುತ್ತಿದ್ದ ನಾಲ್ವರು ಮುಸ್ಲಿಂ ಮಹಿಳೆಯರ ವಿಚಾರದಲ್ಲಿ ಭಾರತದ ಸುಪ್ರೀಂ ಕೋರ್ಟ್ ಮಹತ್ವದ ಮಧ್ಯಪ್ರವೇಶ ಮಾಡಿದೆ. ಈ ಮಹಿಳೆಯರನ್ನು ದೇಶದಿಂದ ಹೊರಹಾಕುವ (ಗಡೀಪಾರು ಮಾಡುವ) ಪ್ರಕ್ರಿಯೆಗೆ...

ದೆಹಲಿಗೆ ಬಂದಿಳಿದ ಕಾಕ್ರೋಚ್ ಪಾರ್ಟಿ ಸಂಸ್ಥಾಪಕ ಅಭಿಜೀತ್ ದೀಪ್ಕೆ : ಜಂತರ್‌ ಮಂತರ್‌ನಲ್ಲಿ ಪ್ರತಿಭಟಿಸಲು ಪೊಲೀಸರಿಂದ ಅನುಮತಿ

ಶನಿವಾರ (ಜೂ.6) ಬೆಳಿಗ್ಗೆ ದೆಹಲಿಗೆ ಆಗಮಿಸಿದ ಕಾಕ್ರೋಚ್ ಜನತಾ ಪಾರ್ಟಿಯ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದೀಪ್ಕೆ, ಪ್ರತಿಭಟನೆಗೆ ದೆಹಲಿ ಪೊಲೀಸರು ಅನುಮತಿ ನೀಡಿದ್ದಾರೆ ಎಂದು ತಿಳಿಸಿದ್ದು, ಯೋಜಿತ ಆಂದೋಲನಕ್ಕಾಗಿ ನೇರವಾಗಿ ಜಂತರ್ ಮಂತರ್‌ನಲ್ಲಿ...

ಜಾಗತಿಕವಾಗಿ ಮೂರು ವರ್ಷಗಳಲ್ಲಿ 600 ಪರಿಸರ ರಕ್ಷಕರ ಹತ್ಯೆ: ವಿಶ್ವಸಂಸ್ಥೆ ತೀವ್ರ ಕಳವಳ: ಜಾಗತಿಕ ತಾಪಮಾನಕ್ಕೆ ಸಾಕ್ಷಿಯಾಗುತ್ತಿರುವ ಭಾರತ

ಜೂನ್ 5 ವಿಶ್ವ ಪರಿಸರ ದಿನ. ಜಗತ್ತಿನಾದ್ಯಂತ ಗಿಡ ನೆಡುವ, ಹಸಿರು ಭಾಷಣ ಬಿಗಿಯುವ ಮತ್ತು ಪರಿಸರ ಕಾಳಜಿಯ ಸಡಗರದ ಆಚರಣೆಗಳು ಎಲ್ಲೆಡೆ ವಿಭಿನ್ನ ರೀತಿಗಳಲ್ಲಿ ವಿಜೃಂಭಿಸುತ್ತಿವೆ. ಆದರೆ, ಇದೇ ಹೊತ್ತಿನಲ್ಲಿ ವಿಶ್ವಸಂಸ್ಥೆಯು...

ಮಣಿಪುರ ಎಸ್‌ಐಆರ್ ವಿರೋಧಿಸಿದ ಕುಕಿ-ಝೋ ಗುಂಪುಗಳು

ಮಣಿಪುರ ರಾಜ್ಯದಲ್ಲಿ ಪ್ರಸ್ತುತ ನಡೆಯುತ್ತಿರುವ ಮತದಾರರ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆ ವಿರುದ್ಧ ಪ್ರತಿಭಟನೆ ವ್ಯಕ್ತವಾಗಿದೆ. ಕುಕಿ-ಝೋ ಬುಡಕಟ್ಟು ಜನಾಂಗದ ಸಾಂಪ್ರದಾಯಿಕ ಗುಂಪಾದ ಕುಕಿ ಇನ್ಪಿ ಮಣಿಪುರ (ಕೆಐಎಂ) ಮತದಾರರ ಪಟ್ಟಿ...

ಹೇಗಿತ್ತು ‘ಕಾಕ್ರೋಚ್ ಜನತಾ ಪಕ್ಷ’ದ ಮೊದಲ ಸುದ್ದಿಗೋಷ್ಠಿ…? ಧರ್ಮೇಂದ್ರ ಪ್ರಧಾನ್‌ ರಾಜೀನಾಮೆಗೆ ಕರೆ

ಜೂನ್ 6, 2026 ರಂದು ಜಂತರ್ ಮಂತರ್‌ನಲ್ಲಿ ನಡೆಯಲಿರುವ 'ಶಾಂತಿಯುತ ಪ್ರತಿಭಟನೆ'ಗೆ ಮುನ್ನ ಜಿರಳೆ ಜನತಾ ಪಕ್ಷ (ಸಿಜೆಪಿ) ತನ್ನ ಮೊದಲ ಪತ್ರಿಕಾಗೋಷ್ಠಿಯನ್ನು ನಡೆಸಿದೆ. ಬುಧವಾರ ಸಂಜೆ (ಜೂ.3) ಸಿಜೆಪಿಯ ಮೂವರು ವಕ್ತಾರರು...

‘ಇದು ಆತ್ಮಹತ್ಯೆಯಲ್ಲ, ಮೋದಿ ಸರ್ಕಾರದ ಭ್ರಷ್ಟ ವ್ಯವಸ್ಥೆ ಮಾಡಿದ ಕೊಲೆ’: ನೀಟ್ ಆಕಾಂಕ್ಷಿಯ ಸಾವಿಗೆ ರಾಹುಲ್ ಗಾಂಧಿ ಆಕ್ರೋಶ

ದೇಶದ ವೈದ್ಯಕೀಯ ಪ್ರವೇಶ ಪರೀಕ್ಷೆಯಾದ ‘ನೀಟ್-ಯುಜಿ’ (NEET-UG) ವಿವಾದ ಮತ್ತು ವಿದ್ಯಾರ್ಥಿಗಳ ಸಾವುಗಳು ಭಾರತದ ಒಟ್ಟಾರೆ ಶಿಕ್ಷಣ ವ್ಯವಸ್ಥೆಯ ದಯನೀಯ ಸ್ಥಿತಿಗೆ ಕನ್ನಡಿ ಹಿಡಿದಿವೆ. ಪರೀಕ್ಷಾ ಅಕ್ರಮಗಳು, ಪ್ರಶ್ನೆ ಪತ್ರಿಕೆ ಸೋರಿಕೆ ಮತ್ತು...

ತಕ್ಷಣವೇ ‘SIR ಹೆಲ್ಪ್‌ ಡೆಸ್ಕ್‌’ ಸ್ಥಾಪಿಸುವಂತೆ ಅಧಿಕಾರಿಗಳಿಗೆ ಸಿಎಂ ಸೂಚನೆ

ರಾಜ್ಯದಲ್ಲಿ ಭಾರತೀಯ ಚುನಾವಣಾ ಆಯೋಗದಿಂದ ನಡೆಯುತ್ತಿರುವ ಎಸ್‌ಐಆರ್ (Special Electoral Roll Purification) ಪ್ರಕ್ರಿಯೆ ಸಂದರ್ಭದಲ್ಲಿ ರಾಜ್ಯದ ಯಾವುದೇ ಪ್ರಜೆಯೂ ತನ್ನ ಅತ್ಯಮೂಲ್ಯವಾದ ಮತದಾನದ ಹಕ್ಕನ್ನು ಕಳೆದುಕೊಳ್ಳಬಾರದು ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್...

ವಿಷಾಹಾರಕ್ಕೆ ಜಾಗತಿಕವಾಗಿ ವರ್ಷಕ್ಕೆ 15 ಲಕ್ಷ ಜನರು ಬಲಿ: ಮಕ್ಕಳಿಗೆ ಹೆಚ್ಚಿನ ಅಪಾಯ: ಭಾರತದ ಸ್ಥಿತಿಯೂ ಆತಂಕಕಾರಿ! 

ನಾವು ದಿನನಿತ್ಯ ಸೇವಿಸುವ ಆಹಾರವೇ ನಮ್ಮ ಜೀವಕ್ಕೆ ಕಂಟಕವಾಗುತ್ತಿದೆಯೇ? ಹೌದು ಎನ್ನುತ್ತದೆ ವಿಶ್ವ ಆರೋಗ್ಯ ಸಂಸ್ಥೆಯ (WHO) ಇತ್ತೀಚಿನ ಆಘಾತಕಾರಿ ವರದಿ. ಜಾಗತಿಕವಾಗಿ ಅಸುರಕ್ಷಿತ ಮತ್ತು ಕಲುಷಿತ ಆಹಾರದ ಸೇವನೆಯಿಂದಾಗಿ ಪ್ರತಿ ವರ್ಷ...

ಡಿಕೆಶಿ ಸಂಪುಟದಲ್ಲಿ ಅಲ್ಪಸಂಖ್ಯಾತರಿಗೆ ಸಿಗುತ್ತಾ ಸೂಕ್ತ ಪ್ರಾತಿನಿಧ್ಯ?

ಮಹತ್ವದ ರಾಜಕೀಯ ಬೆಳವಣಿಗೆಯಲ್ಲಿ ರಾಜ್ಯದ ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ಅವರು ರಾಜೀನಾಮೆ ನೀಡಿ, ಡಿ.ಕೆ ಶಿವಕುಮಾರ್ ಹೊಸ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡಾಗಿದೆ. ಈ ಮೂಲಕ ಕಳೆದ ಒಂದು ವರ್ಷದಿಂದ ನಡೆಯುತ್ತಿದ್ದ ಸಿಎಂ ಬದಲಾವಣೆಯ...

‘ಕರ್ನಾಟಕದಲ್ಲಿ SIR’ ಮತ ಉಳಿಸಿಕೊಳ್ಳುವಂತೆ ಕಾರ್ಯಕರ್ತರಿಗೆ CM ಡಿ.ಕೆ ಶಿವಕುಮಾರ್ ಕರೆ!

ಕರ್ನಾಟಕ ರಾಜಕಾರಣದಲ್ಲಿ ಹೊಸ ಯುಗ ಆರಂಭವಾಗಿದೆ. ರಾಜ್ಯದ 25ನೇ ಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ ಅವರು ಪ್ರಮಾಣವಚನ ಸ್ವೀಕರಿಸಿದ್ದಾರೆ. ಅಧಿಕಾರ ವಹಿಸಿಕೊಂಡ ಬೆನ್ನಲ್ಲೇ ಕೆಲಸ ಮಾಡದಿರುವ ಸಚಿವ ಮತ್ತು ಶಾಸಕರನ್ನು ಸುಮ್ಮನೆ ಬಿಡುವುದಿಲ್ಲ ಎಂದು...