Homeಮುಖಪುಟ"ಆತ್ಮಹತ್ಯೆಗೆ ಮುಂದಾದೆ, ಕುಟುಂಬ ನೆನೆದು ಸುಮ್ಮನಾದೆ": ನೋವು ತೋಡಿಕೊಂಡ ಉನ್ನಾವೋ ಅತ್ಯಾಚಾರ ಸಂತ್ರಸ್ತೆ

“ಆತ್ಮಹತ್ಯೆಗೆ ಮುಂದಾದೆ, ಕುಟುಂಬ ನೆನೆದು ಸುಮ್ಮನಾದೆ”: ನೋವು ತೋಡಿಕೊಂಡ ಉನ್ನಾವೋ ಅತ್ಯಾಚಾರ ಸಂತ್ರಸ್ತೆ

ಅಪರಾಧಿ ಕುಲದೀಪ್ ಸಿಂಗ್ ಸೆಂಗಾರ್ ಶಿಕ್ಷೆ ಅಮಾನತು, ಇಂಡಿಯಾ ಗೇಟ್ ಬಳಿ ಸಂತ್ರಸ್ತೆ ಕುಟುಂಬದಿಂದ ಪ್ರತಿಭಟನೆ. ಶಿಕ್ಷೆ ಅಮಾನತಿಗೂ 2027ರ ಯುಪಿ ಚುನಾವಣೆಗೂ ಸಂಬಂಧವಿದೆ ಎಂದ ಸಂತ್ರಸ್ತೆ

- Advertisement -
- Advertisement -

“ನಾನು ಆತ್ಮಹತ್ಯೆ ಮಾಡಿಕೊಳ್ಳಬೇಕೆಂದಿದ್ದೆ. ಆದರೆ, ನನ್ನ ಕುಟುಂಬವನ್ನು ನೆನೆದು ಸುಮ್ಮನಾದೆ” ಇದು ಉನ್ನಾವೋ ಅತ್ಯಾಚಾರ ಪ್ರಕರಣದ ಸಂತ್ರಸ್ತೆ ಮಂಗಳವಾರ (2025 ಡಿಸೆಂಬರ್ 24) ಸಂಜೆ ದೆಹಲಿಯ ಇಂಡಿಯಾ ಗೇಟ್ ಎದುರಿನ ಹುಲ್ಲುಹಾಸಿನ ಮೇಲೆ ಕುಳಿತು ಹೇಳಿದೆ ನೋವಿನ ಮಾತು.

ದೇಶವನ್ನೇ ಬೆಚ್ಚಿ ಬೀಳಿಸಿದ 2017ರ ಉನ್ನಾವೋ ಅತ್ಯಾಚಾರ ಪ್ರಕರಣದ ಅಪರಾಧಿ, ಬಿಜೆಪಿಯ ಮಾಜಿ ಶಾಸಕ ಕುಲದೀಪ್ ಸಿಂಗ್ ಸೆಂಗಾರ್‌ಗೆ ವಿಚಾರಣಾ ನ್ಯಾಯಾಲಯ ವಿಧಿಸಿರುವ ಜೀವಾವಧಿ ಶಿಕ್ಷೆಯನ್ನು ದೆಹಲಿ ಹೈಕೋರ್ಟ್ ಮಂಗಳವಾರ ಅಮಾನತಿನಲ್ಲಿಟ್ಟಿದೆ.

ನ್ಯಾಯಾಲಯದ ಆದೇಶ ಹೊರಬಿದ್ದ ಕೆಲವೇ ಗಂಟೆಗಳಲ್ಲಿ ಇಂಡಿಯಾ ಗೇಟ್ ಬಳಿ ಪ್ರಕರಣದ ಸಂತ್ರಸ್ತೆ, ಆಕೆಯ ತಾಯಿ ಪ್ರತಿಭಟನೆ ನಡೆಸಿದರು. ಇವರಿಗೆ ಮಹಿಳಾ ಹಕ್ಕುಗಳ ಹೋರಾಟಗಾರ್ತಿ ಯೋಗಿತಾ ಭಯನಾ ಸಾಥ್ ನೀಡಿದರು.

“ನ್ಯಾಯಾಲಯದ ಆದೇಶದಿಂದ ನಾವು ಭಯದಲ್ಲಿ ಬದುಕುವಂತಾಗಿದೆ. ವ್ಯವಸ್ಥೆ ನಮಗೆ ದ್ರೋಹ ಬಗೆದಿದೆ” ಎಂದು ಪ್ರತಿಭಟನೆ ವೇಳೆ ಸಂತ್ರಸ್ತೆ ಹೇಳಿದ್ದಾರೆ.

ಸುದ್ದಿ ಸಂಸ್ಥೆ ಎಎನ್‌ಐ ಜೊತೆ ಮಾತನಾಡಿರುವ ಆಕೆ, “ಜಾಮೀನು ನೀಡಿದ ಸಮಯವು ರಾಜಕೀಯ ಪ್ರೇರಿತವಾಗಿದ್ದು. ಇದಕ್ಕೂ 2027ರ ಉತ್ತರ ಪ್ರದೇಶ ವಿಧಾನಸಭಾ ಚುನಾವಣೆಗೂ ಸಂಬಂಧವಿದೆ ಎಂದಿದ್ದಾರೆ.

“ನಮಗೆ ಅನ್ಯಾಯ ಮಾಡಲಾಗಿದೆ. ಚುನಾವಣೆ ಬರುತ್ತಿದೆ. ಕುಲದೀಪ್ ಸಿಂಗ್ ಸೆಂಗಾರ್ ಪತ್ನಿ ಚುನಾವಣೆಯಲ್ಲಿ ಸ್ಪರ್ಧಿಸಲು ಸಾಧ್ಯವಾಗುವಂತೆ ಅವರನ್ನು ಜಾಮೀನಿನ ಮೇಲೆ ಬಿಡುಗಡೆ ಮಾಡಲಾಗಿದೆ” ಎಂದು ಹೇಳಿದ್ದಾರೆ. “ಇಂತಹ ಅತ್ಯಾಚಾರ ಆರೋಪಿ ಹೊರಬಂದರೆ, ನಾವು ಹೇಗೆ ಸುರಕ್ಷಿತವಾಗಿರಲು ಸಾಧ್ಯ ಎಂದು? ಪ್ರಶ್ನಿಸಿದ್ದಾರೆ.

“ದೆಹಲಿ ನ್ಯಾಯಾಲಯದಿಂದ ಶಿಕ್ಷೆ ಅಮಾನತಿನಲ್ಲಿಟ್ಟ ಆದೇಶ ಹೊರಬಿದ್ದ ಬಳಿಕ ನಮಗೆ ಭಯ ಶುರುವಾಗಿದೆ. ನ್ಯಾಯಾಲಯ ದಯವಿಟ್ಟು ಜಾಮೀನು ರದ್ದುಗೊಳಿಸಬೇಕು” ಎಂದು ಸಂತ್ರಸ್ತೆ ಮನವಿ ಮಾಡಿದ್ದಾರೆ.

ನೋವಿನ ನಡುವೆಯೂ ಆಕೆ, “ನನಗೆ ನ್ಯಾಯಾಂಗದ ಮೇಲೆ ಇನ್ನೂ ನಂಬಿಕೆ ಇದೆ” ಎಂದು ಹೇಳಿದ್ದು, ಸುಪ್ರೀಂ ಕೋರ್ಟ್ ಮೊರೆ ಹೋಗುವುದಾಗಿ ತಿಳಿಸಿದ್ದಾರೆ.

ಪ್ರತಿಭಟನೆ ವೇಳೆ ದೆಹಲಿ ಪೊಲೀಸರು ಮೂವರನ್ನೂ ಸ್ಥಳದಿಂದ ಕರೆದೊಯ್ದರು. ಪೊಲೀಸರು ಅವರನ್ನು ತಮ್ಮ ವಾಹನಕ್ಕೆ ಹತ್ತಿಸಿದ ಮತ್ತು ಪ್ರತಿಭಟನೆಗೆ ಅವಕಾಶ ನೀಡುವಂತೆ ಅವರು ಮನವಿ ಮಾಡಿದ ವಿಡಿಯೋಗಳನ್ನು ಮಾಧ್ಯಮಗಳು ತೋರಿಸಿವೆ.

ಹೋರಾಟಗಾರ್ತಿ ಯೋಗಿತಾ ಅವರು, ಕುಲದೀಪ್ ಸಿಂಗ್ ಸೆಂಗಾರ್‌ಗೆ ಜಾಮೀನು ನೀಡಿದ ಕಾರಣವನ್ನು ಪ್ರಶ್ನಿಸಿದ್ದಾರೆ. ಕಾನೂನು ಹೋರಾಟದ ವೇಳೆ ಪೂರ್ತಿಯಾಗಿ ಸಂತ್ರಸ್ತೆ ಮತ್ತು ಆಕೆಯ ತಾಯಿ ಪ್ರತ್ಯೇಕವಾಗಿ (ಏಕಾಂಗಿಯಾಗಿ) ಇದ್ದರು ಎಂದಿದ್ದಾರೆ.

ಸಂತ್ರಸ್ತೆ ಮತ್ತು ಆಕೆಯ ತಾಯಿ ತುಂಬಾ ಕಷ್ಟಗಳನ್ನು ಎದುರಿಸಿ ಕಾನೂನು ಹೋರಾಟ ನಡೆಸುವ ಮೂಲಕ ಅಪರಾಧಿಗೆ ಶಿಕ್ಷೆಯಾಗುವಂತೆ ನೋಡಿಕೊಂಡರು. ಆದರೆ, ಈಗ ಏನಾಯಿತು? ಅಪರಾಧಿಗೆ ಜಾಮೀನು ಸಿಕ್ಕಿತು. ದೇಶದಲ್ಲಿ ಅತ್ಯಾಚಾರಿಗಳು ಜಾಮೀನು ಪಡೆಯುತ್ತಿದ್ದಾರೆ, ಅಮಾಯಕರು ಜೈಲಲ್ಲಿದ್ದಾರೆ. ಹೈಕೋರ್ಟ್ ಆದೇಶದ ಬಳಿಕ ಸಂತ್ರಸ್ತೆ ಮತ್ತು ಆಕೆಯ ತಾಯಿ ಭಯದಲ್ಲಿದ್ದಾರೆ ಎಂದು ಹೇಳಿದ್ದಾರೆ.

ಸಂತ್ರಸ್ತೆಯ ಸಹೋದರಿ ಕೂಡ ಜಾಮೀನು ದೊರೆತಿರುವ ಕುರಿತು ಮಾತನಾಡಿದ್ದು, “ಅಪರಿಚಿತ ವ್ಯಕ್ತಿಗಳು ನಮ್ಮ ಮನೆಯ ಸುತ್ತಮುತ್ತ ಓಡಾಡುತ್ತಿದ್ದಾರೆ, ನಮಗೆ ಬೆದರಿಕೆ ಹಾಕುತ್ತಿದ್ದಾರೆ” ಎಂದು ಹೇಳಿದ್ದಾರೆ.

“ಅವನು (ಸೆಂಗಾರ್) ಮೊದಲು ನನ್ನ ಚಿಕ್ಕಪ್ಪನನ್ನು ಕೊಂದ, ಬಳಿಕ ನನ್ನ ಅಪ್ಪನನ್ನು ಕೊಂದ. ನಂತರ ನನ್ನ ಸಹೋದರಿ ಮೇಲೆ ದೌರ್ಜನ್ಯ ನಡೆಯಿತು. ಎಲ್ಲಾ ಪ್ರಕರಣಗಳು ಆತನಿಗೆ ಸಂಬಂಧಿಸಿದೆ. ಆದರೆ, ಆತ ಜಾಮೀನಿನ ಮೇಲೆ ಬಿಡುಗಡೆಯಾಗಿದ್ದಾನೆ. ನಾವು ಇನ್ನೂ ಭಯದಲ್ಲಿದ್ದೇವೆ. ಕೊನೆಪಕ್ಷ ನಾವು ಜೈಲಲ್ಲಿ ಇದ್ದರೆ ಜೀವಂತ ಇರಬಹುದು” ಎಂದು ಆತಂಕ, ನೋವು ತೋಡಿಕೊಂಡಿದ್ದಾರೆ.

ಕುಲದೀಪ್ ಸಿಂಗ್ ಸೆಂಗಾರ್‌ಗೆ ವಿಚಾರಣಾ ನ್ಯಾಯಾಲಯವು 2019ರಲ್ಲಿ ಜೀವಾವಧಿ ಶಿಕ್ಷೆ ವಿಧಿಸಿದೆ. ಇದರ ವಿರುದ್ದ ಸೆಂಗಾರ್‌ ದೆಹಲಿ ಹೈಕೋರ್ಟ್‌ಗೆ ಮೇಲ್ಮನವಿ ಸಲ್ಲಿಸಿದ್ದರು. ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್, ಮೇಲ್ಮನವಿ ವಿಚಾರಣೆ ಮುಗಿಯುವವರೆಗೆ ಶಿಕ್ಷೆಯನ್ನು ಅಮಾನತಿನಲ್ಲಿಟ್ಟಿದೆ.

ನ್ಯಾಯಮೂರ್ತಿ ಸುಬ್ರಹ್ಮಣ್ಯಂ ಪ್ರಸಾದ್ ಮತ್ತು ಹರೀಶ್ ವೈದ್ಯನಾಥನ್ ಶಂಕರ್ ಅವರಿದ್ದ ವಿಭಾಗೀಯ ಪೀಠವು 15 ಲಕ್ಷ ರೂಪಾಯಿಗಳ ಜಾಮೀನು ಬಾಂಡ್ ಸಲ್ಲಿಸಬೇಕೆಂಬ ಷರತ್ತಿನ ಮೇಲೆ ಜಾಮೀನು ಮಂಜೂರು ಮಾಡಿದೆ.

ಆದಾಗ್ಯೂ, ಸಂತ್ರಸ್ತೆಯ ತಂದೆಯ ಕಸ್ಟಡಿ ಸಾವಿಗೆ ಸಂಬಂಧಿಸಿದ ಪ್ರತ್ಯೇಕ ಪ್ರಕರಣದಲ್ಲಿ ಸೆಂಗಾರ್‌ಗೆ ಜಾಮೀನು ಸಿಗದ ಕಾರಣ ಆತ ಸದ್ಯಕ್ಕೆ ಬಂಧನದಲ್ಲೇ ಇರುತ್ತಾರೆ. ಆ ಪ್ರಕರಣದಲ್ಲಿ ಅವರಿಗೆ 10 ವರ್ಷಗಳ ಜೈಲು ಶಿಕ್ಷೆ ವಿಧಿಸಲಾಗಿದ್ದು, ಶಿಕ್ಷೆಯನ್ನು ಅಮಾನತುಗೊಳಿಸುವಂತೆ ಕೋರಿ ಸಲ್ಲಿಸಲಾದ ಅರ್ಜಿಯೊಂದಿಗೆ ಅವರ ಮೇಲ್ಮನವಿ ಇನ್ನೂ ದೆಹಲಿ ಹೈಕೋರ್ಟ್‌ನಲ್ಲಿ ಬಾಕಿ ಇದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಈಗಲೂ ಮಮತಾ ಬ್ಯಾನರ್ಜಿಯೇ ನಮ್ಮ ನಾಯಕಿ’ : ಟಿಎಂಸಿ ಬಂಡಾಯ ಬಣದ ಅಧ್ಯಕ್ಷ ಅರೂಪ್ ರಾಯ್ ಹೇಳಿಕೆ

"ಮಮತಾ ಬ್ಯಾನರ್ಜಿ ಅವರೇ ಇಂದಿಗೂ ನಮ್ಮ ನಾಯಕಿ. ಅವರೇ ಈ ಪಕ್ಷವನ್ನು ಸ್ಥಾಪಿಸಿದವರು. ಅವರೇ ನಮ್ಮ ಪಕ್ಷದ ಕಾಂದಾರಿ (ಮಾರ್ಗದರ್ಶಕರು ಅಥವಾ ಪಕ್ಷವನ್ನು ಮುನ್ನಡೆಸುವವರು). ಮಮತಾ ಬ್ಯಾನರ್ಜಿ ಅವರಿಂದಾಗಿಯೇ ನಾವು ಈ ಪಕ್ಷವನ್ನು...

ಪಶ್ಚಿಮ ಬಂಗಾಳದ ಆಹಾರ ಸಂಸ್ಕೃತಿಯನ್ನು ಗೌರವಿಸುತ್ತೇವೆ ಎಂಬ ಬಿಜೆಪಿಯ ಚುನಾವಣಾ ಭರವಸೆಗೆ ಈಗ ‘ಮೊಟ್ಟೆ’ ಮೊದಲ ಬಲಿ

ಚುನಾವಣಾ ಸಮಯದಲ್ಲಿ, ಬಿಜೆಪಿ ಪರಿಸ್ಥಿತಿಯನ್ನು ಮತ್ತು ಮೀನಿನ ಮಾರುಕಟ್ಟೆಯ ನಾಡಿಮಿಡಿತವನ್ನು ಸರಿಯಾಗಿಯೇ ಅರ್ಥಮಾಡಿಕೊಂಡಿತ್ತು. ಅವರ ನಾಯಕರು ಟಿವಿ ಕ್ಯಾಮೆರಾಗಳ ಮುಂದೆ ಮೀನುಗಳನ್ನು ಪ್ರದರ್ಶಿಸಿದರು ಮತ್ತು ಕುರಿ ಮಾಂಸದೂಟವನ್ನು ಸವಿದಿದ್ದರು. ಬಂಗಾಳಿಗಳ ತಟ್ಟೆಗೆ (ಆಹಾರಕ್ಕೆ)...

24 ಗಂಟೆಗೂ ಮೊದಲೇ ಮಹಾರಾಷ್ಟ್ರದಲ್ಲಿ TET ಪ್ರಶ್ನೆ ಪತ್ರಿಕೆ ಸೋರಿಕೆ: ರದ್ದಾದ ಪರೀಕ್ಷೆ

ಮಹಾರಾಷ್ಟ್ರದಲ್ಲಿ ಮತ್ತೊಂದು ಪರೀಕ್ಷಾ ಅಕ್ರಮದ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ. ಜೂನ್ 28ರ ಭಾನುವಾರ ನಡೆಯಬೇಕಿದ್ದ ‘ಶಿಕ್ಷಕರ ಅರ್ಹತಾ ಪರೀಕ್ಷೆ’ (TET) ಆರಂಭಕ್ಕೆ ಕೇವಲ 24 ಗಂಟೆಗಳ ಮುನ್ನವೇ ಪ್ರಶ್ನೆ ಪತ್ರಿಕೆ ಸೋರಿಕೆಯಾದ...

ಸೌತೆಕಾಯಿ ಕೃಷಿಗೆ ತನ್ನ ಸಚಿವಾಲಯದಿಂದಲೇ ₹99 ಲಕ್ಷ ಸಬ್ಸಿಡಿ ಪಡೆದ ಕೇಂದ್ರ BJP ಸಚಿವ ಭಾಗೀರಥ್ ಚೌಧರಿ

ಕೇಂದ್ರ ಕೃಷಿ ಖಾತೆ ರಾಜ್ಯ ಸಚಿವ ಭಾಗೀರಥ್ ಚೌಧರಿ ಅವರು ತಮ್ಮದೇ ಸಚಿವಾಲಯದ ವ್ಯಾಪ್ತಿಗೆ ಒರುವ ಯೋಜನೆಯಡಿ, ವಾಣಿಜ್ಯ ಸೌತೆಕಾಯಿ ಕೃಷಿ ಯೋಜನೆಗಾಗಿ 99.03 ಲಕ್ಷ ರೂ. ಸಬ್ಸಿಡಿ (ಸಹಾಯಧನ) ಪಡೆದಿರುವುದು ತನಿಖಾ...

‘ಆರ್‌ಎಸ್‌ಎಸ್‌ ನೋಂದಣಿಯಾದರೆ ಒಳ್ಳೆಯದು’: ರಾಮಮಂದಿರ ಹಗರಣ ವಿಚಾರದಲ್ಲಿ ‘ಸತ್ಯ ಹೊರಬರಬೇಕು’: ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ

‘ರಾಷ್ಟ್ರೀಯ ಸ್ವಯಂಸೇವಕ ಸಂಘವನ್ನು (ಆರ್‌ಎಸ್‌ಎಸ್‌) ನೋಂದಣಿ ಮಾಡಿಸಿದರೆ ಯಾರಿಗೂ ಆರೋಪ ಮಾಡಲು ಅವಕಾಶ ಇರುವುದಿಲ್ಲ’ ಎಂದು ಪೇಜಾವರ ಮಠದ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ ಶುಕ್ರವಾರ ಹೇಳಿದ್ದಾರೆ. ಆರ್‌ಎಸ್‌ಎಸ್ ನೋಂದಣಿ ಕುರಿತು ಕರ್ನಾಟಕದ ಗೃಹ ಸಚಿವ...

ತುಮಕೂರಿನಲ್ಲಿ ಮಲಹೊರುವ ಪದ್ದತಿ ಜೀವಂತ; ದಲಿತ ಕಾರ್ಮಿಕರನ್ನು ಶೌಚಗುಂಡಿ ಸ್ವಚ್ಛತೆಗೆ ನಿಯೋಜಿಸಿದ ಕೆಇಬಿ ಇಂಜಿನಿಯರ್ಸ್ ಸಂಘ

ದಶಕಗಳ ಹಿಂದೆಯೇ ತಲೆ ಮೇಲೆ ಮಲಹೊರುವ ಅನಿಷ್ಠ ಪದ್ಧತಿಯನ್ನು ದೇಶದಲ್ಲಿ ನಿಷೇಧಿಸಲಾಗಿದೆ. ಕಾನೂನಿನ ಪ್ರಕಾರ ಈ ಅಮಾನವೀಯ ಪದ್ಧತಿ ನಿಷೇದಗೊಂಡಿದ್ದರು ರಾಜ್ಯದಲ್ಲಿ ಮಾತ್ರ ಇನ್ನೂ ಜೀವಂತವಾಗಿರುವುದು ತುಮಕೂರಿನಲ್ಲಿ ಮತ್ತೊಮ್ಮೆ ಬಹಿರಂಗವಾಗಿದೆ. ಉಪ ಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್...

ವರ್ಷ ಪೂರೈಸಿದ ಎಸ್‌ಐಆರ್‌ ಪ್ರಕ್ರಿಯೆ; ಸುಮಾರು 6 ಕೋಟಿ ಹೆಸರುಗಳು ಡಿಲೀಟ್

ಸುಮಾರು ಆರು ಕೋಟಿ ಮತದಾರರನ್ನು ಅಳಿಸಲು ಕಾರಣವಾದ, ವಿರೋಧ ಪಕ್ಷಗಳು ಮತ್ತು ಚುನಾವಣಾ ಆಯೋಗದ ನಡುವೆ ಘರ್ಷಣೆಗೆ ಕಾರಣವಾದ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆಯು 19 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ...

ರಾಮ ಮಂದಿರ ಹಗರಣ | ಶಿವಸೇನೆ ಕೊಟ್ಟ 1 ಕೋಟಿ ರೂ.ಗೆ ರಸೀದಿ ಸಿಕ್ಕಿಲ್ಲ : ಸಂಜಯ್ ರಾವತ್

ಶ್ರೀ ರಾಮ ಜನ್ಮಭೂಮಿ ತೀರ್ಥ ಕ್ಷೇತ್ರಕ್ಕೆ ನೀಡಿದ 1 ಕೋಟಿ ರೂಪಾಯಿ ದೇಣಿಗೆಗೆ ತಮ್ಮ ಪಕ್ಷ ಶಿವಸೇನೆ (ಯುಬಿಟಿ) ರಸೀದಿಯನ್ನು ಸ್ವೀಕರಿಸಿಲ್ಲ ಎಂದು ಸಂಜಯ್ ರಾವತ್ ಶುಕ್ರವಾರ (ಜೂ.26) ಹೇಳಿದ್ದಾರೆ. ರಾಮ ಮಂದಿರದ ದೇಣಿಗೆ...

ರಾಮ ಮಂದಿರ ಹಗರಣ: ಶ್ರೀರಾಮ ಜನ್ಮಭೂಮಿ ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿ ಚಂಪತ್ ರಾಯ್ ಮತ್ತು ಟ್ರಸ್ಟಿ ಅನಿಲ್ ಮಿಶ್ರಾ ರಾಜೀನಾಮೆ

ಶ್ರೀ ರಾಮ ಜನ್ಮಭೂಮಿ ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿ ಚಂಪತ್ ರಾಯ್, ರಾಮ ಮಂದಿರ ದೇಣಿಗೆ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ನೈತಿಕ ಹೊಣೆ ಹೊತ್ತು, ಸದಸ್ಯ ಟ್ರಸ್ಟಿ ಅನಿಲ್ ಮಿಶ್ರಾ ಅವರೊಂದಿಗೆ ಶುಕ್ರವಾರ ರಾಜೀನಾಮೆ...

‘ಕೂಡಿ ಹಾಕಿ ಥಳಿಸುತ್ತಿದ್ದರು, ತಪ್ಪಿಸಿಕೊಳ್ಳದಂತೆ ನಾಯಿ ಬಿಟ್ಟಿದ್ದರು’: ಭೀಕರ ಶೋಷಣೆಯಿಂದ 12 ಜೀತ ಕಾರ್ಮಿಕರ ರಕ್ಷಣೆ

ಮೂರು ತಿಂಗಳ ಕಾಲ 68 ವರ್ಷದ ಮೆಹರ್ಬಾನ್ ಶಾ ಅನಿಶ್ಚಿತತೆಯಲ್ಲಿ ಜೀವನ ನಡೆಸುತ್ತಿದ್ದರು. ದುಡಿಯಲು ಹೋಗಿದ್ದ ಅವರ ಕಿರಿಯ ಮಗ ದಿಲ್ಶಾದ್ ಮೊಹಮ್ಮದ್ ಜೀವಂತವಾಗಿದ್ದಾನಾ?, ಇಲ್ಲಾ ಮರಣ ಹೊಂದಿದ್ದಾನಾ? ಎಂಬುವುದು ಅವರಿಗೆ ಗೊತ್ತಿರಲಿಲ್ಲ. 24...