Homeಮುಖಪುಟವಕ್ಫ್ ತಿದ್ದುಪಡಿ ಧಾರ್ಮಿಕ ಸ್ವಾತಂತ್ರ್ಯವನ್ನು ಉಲ್ಲಂಘಿಸುವುದಿಲ್ಲ: ಸುಪ್ರಿಂಕೋರ್ಟ್‌ನಲ್ಲಿ ಕಾಯ್ದೆ ಸಮರ್ಥಿಸಿಕೊಂಡ ಕೇಂದ್ರ ಸರ್ಕಾರ

ವಕ್ಫ್ ತಿದ್ದುಪಡಿ ಧಾರ್ಮಿಕ ಸ್ವಾತಂತ್ರ್ಯವನ್ನು ಉಲ್ಲಂಘಿಸುವುದಿಲ್ಲ: ಸುಪ್ರಿಂಕೋರ್ಟ್‌ನಲ್ಲಿ ಕಾಯ್ದೆ ಸಮರ್ಥಿಸಿಕೊಂಡ ಕೇಂದ್ರ ಸರ್ಕಾರ

- Advertisement -
- Advertisement -

ಸುಪ್ರೀಂ ಕೋರ್ಟ್ ಮುಂದೆ ವಕ್ಫ್ ತಿದ್ದುಪಡಿ ಕಾಯ್ದೆಯನ್ನು ಕೇಂದ್ರ ಸರ್ಕಾರ ಶುಕ್ರವಾರ ಸಮರ್ಥಿಸಿಕೊಂಡಿದ್ದು, ತಮ್ಮ ಸರ್ಕಾರ ಜಾರಿಗೆ ತಂದಿರುವ ಈ ಕಾಯ್ದೆಯು ಸಂವಿಧಾನದಡಿಯಲ್ಲಿ ಖಾತರಿಪಡಿಸಲಾದ ಮೂಲಭೂತ ಹಕ್ಕುಗಳ ಕಾನೂನು ಉಲ್ಲಂಘಿಸುವುದಿಲ್ಲ ಎಂದು ಹೇಳಿದೆ ಎಂದು ಲೈವ್ ಲಾ ವರದಿ ಮಾಡಿದೆ.

ಅಲ್ಪಸಂಖ್ಯಾತ ವ್ಯವಹಾರಗಳ ಸಚಿವಾಲಯದ ಜಂಟಿ ಕಾರ್ಯದರ್ಶಿ ಶೇರ್ಷಾ ಸಿ ಶೇಕ್ ಮೊಹಿದ್ದೀನ್ ಸಲ್ಲಿಸಿದ ಪ್ರಾಥಮಿಕ ಅಫಿಡವಿಟ್‌ನಲ್ಲಿ, ಕಾನೂನಿನ ಸಾಂವಿಧಾನಿಕ ಸಿಂಧುತ್ವವನ್ನು ಪ್ರಶ್ನಿಸುವ ಅರ್ಜಿಗಳನ್ನು ಕೇಂದ್ರ ಸರ್ಕಾರವು ವಿರೋಧಿಸಿದೆ.

ತಿದ್ದುಪಡಿಗಳನ್ನು ವಕ್ಫ್ ಆಸ್ತಿ ನಿರ್ವಹಣೆಯ ಜಾತ್ಯತೀತ ಅಂಶಗಳನ್ನು ನಿಯಂತ್ರಿಸಲು ಮಾತ್ರ ತರಲಾಗಿದೆ ಮತ್ತು ಸಂವಿಧಾನದ 25 ಮತ್ತು 26 ನೇ ವಿಧಿಗಳ ಅಡಿಯಲ್ಲಿ ಧಾರ್ಮಿಕ ಸ್ವಾತಂತ್ರ್ಯಗಳಿಗೆ ಇದು ಅಡ್ಡಿಯಾಗುವುದಿಲ್ಲ ಎಂದು ಅದು ವಾದಿಸಿದೆ. ಅಲ್ಲದೆ, ಈ ಕಾಯ್ದೆಯು ಸರ್ಕಾರದ ನಿಯಂತ್ರಕ ಅಧಿಕಾರಗಳ ವ್ಯಾಪ್ತಿಗೆ ಬರುತ್ತದೆ ಎಂದು ಹೇಳಿದೆ.

ವಕ್ಫ್ ಎನ್ನುವುದು ಧಾರ್ಮಿಕ, ಶೈಕ್ಷಣಿಕ ಅಥವಾ ದತ್ತಿ ಉದ್ದೇಶಕ್ಕಾಗಿ ಮೀಸಲಾಗಿರುವ ಇಸ್ಲಾಮಿಕ್ ಕಾನೂನಿನಡಿಯಲ್ಲಿನ ಒಂದು ದತ್ತಿಯಾಗಿದೆ. ಪ್ರತಿಯೊಂದು ರಾಜ್ಯವು ಆಸ್ತಿಯನ್ನು ಸ್ವಾಧೀನಪಡಿಸಿಕೊಳ್ಳುವ, ಹಿಡಿದಿಟ್ಟುಕೊಳ್ಳುವ ಮತ್ತು ವರ್ಗಾಯಿಸುವ ಅಧಿಕಾರವನ್ನು ಹೊಂದಿರುವ ಕಾನೂನು ಘಟಕದ ನೇತೃತ್ವದಲ್ಲಿ ವಕ್ಫ್ ಮಂಡಳಿಯನ್ನು ಹೊಂದಿದೆ.

2024 ರ ವಕ್ಫ್ ತಿದ್ದುಪಡಿ ಮಸೂದೆಯು 1995 ರ ವಕ್ಫ್ ಕಾಯ್ದೆಯ 44 ಸೆಕ್ಷನ್‌ಗಳಿಗೆ ತಿದ್ದುಪಡಿಗಳನ್ನು ಪ್ರಸ್ತಾಪಿಸಿದೆ. ಇದರಲ್ಲಿ ಮುಸ್ಲಿಮೇತರರಿಗೆ ವಕ್ಫ್ ಮಂಡಳಿಗಳಲ್ಲಿ ಅವಕಾಶ ನೀಡುವುದು, ಆಸ್ತಿ ದೇಣಿಗೆಗಳನ್ನು ನಿರ್ಬಂಧಿಸುವುದು ಮತ್ತು ವಕ್ಫ್ ನ್ಯಾಯಮಂಡಳಿಗಳು ಕಾರ್ಯನಿರ್ವಹಿಸುವ ವಿಧಾನವನ್ನು ಬದಲಾಯಿಸುವುದು ಸೇರಿವೆ.

ಈ ಮಸೂದೆಯನ್ನು ಏಪ್ರಿಲ್ 4 ರಂದು ಸಂಸತ್ತು ಅಂಗೀಕರಿಸಿತು. ಇದು ಏಪ್ರಿಲ್ 5 ರಂದು ರಾಷ್ಟ್ರಪತಿಗಳ ಒಪ್ಪಿಗೆಯನ್ನು ಪಡೆಯಿತು ಮತ್ತು ಏಪ್ರಿಲ್ 8 ರಂದು ಜಾರಿಗೆ ಬಂದಿತು. ಕಾಂಗ್ರೆಸ್ ಮತ್ತು ಆಲ್ ಇಂಡಿಯಾ ಮಜ್ಲಿಸ್-ಎ-ಇತ್ತೇಹಾದುಲ್ ಮುಸ್ಲಿಮೀನ್ ಸೇರಿದಂತೆ ಇತರರು ಮಸೂದೆಯ ಸಾಂವಿಧಾನಿಕತೆಯನ್ನು ಸುಪ್ರೀಂಕೋರ್ಟ್‌ನಲ್ಲಿ ಪ್ರಶ್ನಿಸಿದ್ದಾರೆ.

ಸುಪ್ರೀಂಕೋರ್ಟ್ ಮೇ 5 ರಂದು ಈ ಪ್ರಕರಣದ ವಿಚಾರಣೆ ನಡೆಸಲಿದೆ. ಏಪ್ರಿಲ್ 17 ರಂದು ಕೇಂದ್ರ ಸರ್ಕಾರವು ವಕ್ಫ್ ಆಸ್ತಿಗಳನ್ನು ಡಿನೋಟಿಫೈ ಮಾಡುವುದಿಲ್ಲ ಅಥವಾ ಆ ದಿನಾಂಕದವರೆಗೆ ಕೇಂದ್ರ ವಕ್ಫ್ ಕೌನ್ಸಿಲ್ ಅಥವಾ ರಾಜ್ಯ ವಕ್ಫ್ ಮಂಡಳಿಗಳಿಗೆ ಯಾವುದೇ ಹೊಸ ನೇಮಕಾತಿಗಳನ್ನು ಮಾಡುವುದಿಲ್ಲ ಎಂದು ನ್ಯಾಯಾಲಯಕ್ಕೆ ಭರವಸೆ ನೀಡಿತ್ತು.

ಇಲ್ಲಿ ಕ್ಲಿಕ್ ಮಾಡಿ

ಇದನ್ನೂಓದಿ:  ಪಹಲ್ಗಾಮ್ ದಾಳಿ: ದೇಶ ರಕ್ಷಣೆಯ ಗುಪ್ತಚರ ಸಂಸ್ಥೆಯನ್ನು ವಿಪಕ್ಷ ನಾಯಕರ ವಿರುದ್ಧ ಕಳುಹಿಸುತ್ತಿದ್ದೀರಿ: ತೇಜಸ್ವಿ ಯಾದವ್

ಪಹಲ್ಗಾಮ್ ದಾಳಿ: ದೇಶ ರಕ್ಷಣೆಯ ಗುಪ್ತಚರ ಸಂಸ್ಥೆಯನ್ನು ವಿಪಕ್ಷ ನಾಯಕರ ವಿರುದ್ಧ ಕಳುಹಿಸುತ್ತಿದ್ದೀರಿ: ತೇಜಸ್ವಿ ಯಾದವ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೋಗಿಲು ಬಡಾವಣೆ ಮನೆಗಳ ನೆಲಸಮ: ಹದಿನೈದು ದಿನಗಳೊಳಗೆ ಪುನರ್ವಸತಿ ಕಲ್ಪಿಸದಿದ್ದರೆ ತೀವ್ರ ಹೋರಾಟದ ಎಚ್ಚರಿಕೆ

ಬೆಂಗಳೂರು ಉತ್ತರ ತಾಲ್ಲೂಕಿನ ಯಲಹಂಕ ಪ್ರದೇಶದ ಕೋಗಿಲು ಲೇಔಟ್‌ನ ಫಕೀರ್ ಕಾಲೋನಿ ಮತ್ತು ಮಹಾನಾಯಕ ಅಂಬೇಡ್ಕರ್ ನಗರ (ವಾಸಿಂ ಲೇಔಟ್‌) ಪ್ರದೇಶದ ಬಡ ನಿವಾಸಿಗಳ ಮನೆಗಳನ್ನು 2025 ಡಿಸೆಂಬರ್ 20ರಂದು ಬೆಳಿಗ್ಗೆ ಸುಮಾರು...

ಡಾಲರ್ ಎದುರು ಸಾರ್ವಕಾಲಿಕ ಕನಿಷ್ಠ ಮಟ್ಟ 95.20 ರೂ.ಗೆ ಕುಸಿತ ಕಂಡ ಭಾರತೀಯ ರೂಪಾಯಿ ಮೌಲ್ಯ 

ನವದೆಹಲಿ: ಏಪ್ರಿಲ್ 30ರಂದು ಆರಂಭಿಕ ವಹಿವಾಟಿನಲ್ಲಿ ಭಾರತೀಯ ರೂಪಾಯಿ ಮೌಲ್ಯವು ಅಮೆರಿಕನ್ ಡಾಲರ್ ಎದುರು ಸಾರ್ವಕಾಲಿಕ ಕನಿಷ್ಠ ಮಟ್ಟವಾದ 95.07 ಕ್ಕೆ ಕುಸಿದಿದೆ. ಕರೆನ್ಸಿ 0.4% ಕುಸಿತದೊಂದಿಗೆ 95.2325 ಕ್ಕೆ ಇಳಿದಿದೆ. ಇದು ಮಾರ್ಚ್...

ತಮಿಳುನಾಡು| ದಲಿತ ಯುವಕನ ಶವ ಪತ್ತೆ; ‘ಜಾತಿ ಕಾರಣಕ್ಕೆ ಹತ್ಯೆಯಾಗಿದೆ’ ಎಂದು ಕುಟುಂಬದ ಆರೋಪ

ತಮಿಳುನಾಡಿನ ಪುದುಕ್ಕೊಟ್ಟೈ ಜಿಲ್ಲೆಯ ಕ್ವಾರಿ ಕೆರೆಯ ಬಳಿ 20 ವರ್ಷದ ದಲಿತ ಯುವಕನ ಶವ ಪತ್ತೆಯಾಗಿದ್ದು, ಹಿಂದುಳಿದ ವರ್ಗದ ಯುವತಿಯೊಂದಿಗಿನ ಸಂಬಂಧದಿಂದಾಗಿ ಆತನನ್ನು ಕೊಲ್ಲಲಾಗಿದೆ ಎಂದು ಆತನ ಕುಟುಂಬ ಆರೋಪಿಸಿದೆ. ಆದರೆ, ಈ...

‘ಬಾಲ ಕಾರ್ಮಿಕ’ ಶಂಕೆಯ ಮೇಲೆ 155 ಮುಸ್ಲಿಂ ವಿದ್ಯಾರ್ಥಿಗಳ ಬಂಧನ: ಧಾರ್ಮಿಕ ಗುರುತಿನ ಕಾರಣಕ್ಕೆ ಬಂಧಿಸಿರುವುದಾಗಿ ಪೋಷಕರ ಆರೋಪ

ಮಧ್ಯಪ್ರದೇಶದ ಕಟ್ನಿಯಲ್ಲಿ ಸರ್ಕಾರಿ ರೈಲ್ವೆ ಪೊಲೀಸರು (GRP) 155 ಮುಸ್ಲಿಂ ವಿದ್ಯಾರ್ಥಿಗಳು ಮತ್ತು ಎಂಟು ಶಿಕ್ಷಕರನ್ನು "ಬಾಲ ಕಾರ್ಮಿಕ" ಶಂಕೆಯ ಮೇಲೆ ಬಂಧಿಸಿದ ನಂತರ, ಪೋಷಕರು ಮುಸ್ಲಿಂ ವಿರೋಧಿ ಪಕ್ಷಪಾತವನ್ನು ಹೊಂದಿದ್ದಾರೆಂದು ಆರೋಪಿಸಿದ್ದಾರೆ....

ಜನಿವಾರದ ಹಿಂದೆ ಬಿದ್ದಿರುವ ವಿರೋಧ ಪಕ್ಷ ಮತ್ತು ಮಾಧ್ಯಮಗಳು

ಏಪ್ರಿಲ್ 23, 2026 ರಂದು ನಡೆದ ಕರ್ನಾಟಕ ಸಾಮಾನ್ಯ ಪ್ರವೇಶ ಪರೀಕ್ಷೆ (KCET) ವೇಳೆ ಬೆಂಗಳೂರಿನ ಕೋರಮಂಗಲದಲ್ಲಿರುವ ಕೃಪಾನಿಧಿ ಪಿಯು ಕಾಲೇಜಿನಲ್ಲಿ ಐವರು ಬ್ರಾಹ್ಮಣ ವಿದ್ಯಾರ್ಥಿಗಳ ಜನಿವಾರವನ್ನು ಬಲವಂತವಾಗಿ ತೆಗೆಸಿದ ಘಟನೆ ರಾಜಕೀಯ...

ಒಡಿಶಾ| ಸಾವಿನ ದಾಖಲೆ ಕೇಳಿದ ಬ್ಯಾಂಕ್‌ ಸಿಬ್ಬಂದಿ; ಸಮಾದಿ ಅಗೆದು ಸಹೋದರಿಯ ಅಸ್ಥಿಪಂಜರ ತಂದ ಬುಡಕಟ್ಟು ವ್ಯಕ್ತಿ

ಒಡಿಶಾದ ಕಿಯೋಂಜಾರ್ ಜಿಲ್ಲೆಯಲ್ಲಿ, ಬುಡಕಟ್ಟು ವ್ಯಕ್ತಿಯೊಬ್ಬ ತನ್ನ ಮೃತ ಸಹೋದರಿಯ ಅಸ್ಥಿಪಂಜರವನ್ನು ಅಗೆದು ಗ್ರಾಮೀಣ ಬ್ಯಾಂಕ್‌ಗೆ ತೆಗೆದುಕೊಂಡು ಹೋಗಿದ್ದಾನೆ. ಆಕೆಯ ಸಾವನ್ನು ಸಾಬೀತುಪಡಿಸುವ ಮೂಲಕ ಆಕೆಯ ಖಾತೆಯಲ್ಲಿ ಜಮಾ ಮಾಡಿದ ಹಣವನ್ನು ಪಡೆಯಲು...

ಜಾತಿ ಕಿರುಕುಳಕ್ಕೆ ದಲಿತ ವಿದ್ಯಾರ್ಥಿ ಸಾವು ಪ್ರಕರಣ: ಇಂದು ಸಂಜೆ 6 ರವರೆಗೆ ಕೇರಳ ಬಂದ್

ಜಾತಿ ಆಧಾರಿತ ಕಿರುಕುಳದಿಂದ ಮನನೊಂದಿದ್ದ ಕೇರಳದ ಅಂಚರಕಂಡಿಯ ಕಣ್ಣೂರು ದಂತ ಕಾಲೇಜಿನಲ್ಲಿ ಪ್ರಥಮ ವರ್ಷದ ಬಿಡಿಎಸ್ ವಿದ್ಯಾರ್ಥಿ ಆರ್.ಎಲ್. ನಿತಿನ್ ರಾಜ್ ಆತ್ಮಹತ್ಯೆಗೆ ರಾಜ್ಯದಾದ್ಯಂತ ಆಕ್ರೋಶ ವ್ಯಕ್ತವಾಗಿದೆ. ಕಾಲೇಜು ಕಟ್ಟಡದಿಂದ ಹಾರಿ ಆತ್ಮಹತ್ಯೆ...

‘ಹೊತ್ತಿ ಉರಿಯುತ್ತಿರುವ ಮಣಿಪುರ’: ಶತಮಾನದ ಬೆಂಕಿಗೆ ತುಪ್ಪ ಸುರಿದ ಬಿಜೆಪಿಯ ಕೋಮುರಾಜಕಾರಣ

ಭಾರತದ ಈಶಾನ್ಯ ರಾಜ್ಯ ಮಣಿಪುರ ಅಕ್ಷರಶಃ ಹೊತ್ತಿ ಉರಿಯುತ್ತಿದೆ. ಶತಮಾನಗಳಿಂದ ಹೊಗೆಯಾಡುತ್ತಿದ್ದ ಹಗೆತನಕ್ಕೆ ಕೋಮುರಾಜಕಾರಣದ ಬಣ್ಣ ಬಳಿದ ಬಿಜೆಪಿ ಮತ್ತು ಕೇಂದ್ರ ಸರ್ಕಾರ ಮಣಿಪುರದ ಜನರತ್ತ ತಿರುಗಿಯೂ ನೋಡುತ್ತಿಲ್ಲ. 2023ರಲ್ಲಿ ಭುಗಿಲೆದ್ದ ಉದ್ವಿಗ್ನತೆ...

ಮಧ್ಯಪ್ರದೇಶ| ದಲಿತ ದಂಪತಿಗೆ ಹನುಮಾನ್ ದೇಗುಲ ಪ್ರವೇಶ ನಿರಾಕರಣೆ; ಸಾಮಾಜಿಕ ಬಹಿಷ್ಕಾರ

ಮಧ್ಯಪ್ರದೇಶದ ಖಾರ್ಗೋನ್ ಜಿಲ್ಲೆಯ ಹನುಮಾನ್ ದೇವಸ್ಥಾನಕ್ಕೆ ನವವಿವಾಹಿತ ದಲಿತ ದಂಪತಿಗೆ ಪ್ರವೇಶ ನಿರಾಕರಿಸಲಾಗಿದೆ ಎಂಬ ಆರೋಪ ಕೇಳಿಬಂದಿದ್ದು, ಇದು ಗ್ರಾಮದಲ್ಲಿ ಉದ್ವಿಗ್ನತೆಯನ್ನು ಉಂಟುಮಾಡಿದೆ. ಈ ಘಟನೆಯು ಜಾತಿ ಆಧಾರಿತ ತಾರತಮ್ಯದ ಕುರಿತು ಕಳವಳ...

ಬಂಗಾಳ SIR : ನ್ಯಾಯಮಂಡಳಿಗಳಿಂದ ಪರಿಹಾರ ಪಡೆದವರು ಕೇವಲ 0.01% ಜನ

ಪಶ್ಚಿಮ ಬಂಗಾಳದಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಲ್ಲಿ ಉಂಟಾದ ವಿವಾದಗಳನ್ನು ಬಗೆಹರಿಸಲು ಮೇಲ್ಮನವಿ ನ್ಯಾಯಮಂಡಳಿಗಳನ್ನು ಸ್ಥಾಪಿಸಲಾಗಿದೆ. ಎಸ್‌ಐಆರ್ ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದರ ಅಥವಾ...