Homeಮುಖಪುಟವಕ್ಫ್ ತಿದ್ದುಪಡಿ ಧಾರ್ಮಿಕ ಸ್ವಾತಂತ್ರ್ಯವನ್ನು ಉಲ್ಲಂಘಿಸುವುದಿಲ್ಲ: ಸುಪ್ರಿಂಕೋರ್ಟ್‌ನಲ್ಲಿ ಕಾಯ್ದೆ ಸಮರ್ಥಿಸಿಕೊಂಡ ಕೇಂದ್ರ ಸರ್ಕಾರ

ವಕ್ಫ್ ತಿದ್ದುಪಡಿ ಧಾರ್ಮಿಕ ಸ್ವಾತಂತ್ರ್ಯವನ್ನು ಉಲ್ಲಂಘಿಸುವುದಿಲ್ಲ: ಸುಪ್ರಿಂಕೋರ್ಟ್‌ನಲ್ಲಿ ಕಾಯ್ದೆ ಸಮರ್ಥಿಸಿಕೊಂಡ ಕೇಂದ್ರ ಸರ್ಕಾರ

- Advertisement -
- Advertisement -

ಸುಪ್ರೀಂ ಕೋರ್ಟ್ ಮುಂದೆ ವಕ್ಫ್ ತಿದ್ದುಪಡಿ ಕಾಯ್ದೆಯನ್ನು ಕೇಂದ್ರ ಸರ್ಕಾರ ಶುಕ್ರವಾರ ಸಮರ್ಥಿಸಿಕೊಂಡಿದ್ದು, ತಮ್ಮ ಸರ್ಕಾರ ಜಾರಿಗೆ ತಂದಿರುವ ಈ ಕಾಯ್ದೆಯು ಸಂವಿಧಾನದಡಿಯಲ್ಲಿ ಖಾತರಿಪಡಿಸಲಾದ ಮೂಲಭೂತ ಹಕ್ಕುಗಳ ಕಾನೂನು ಉಲ್ಲಂಘಿಸುವುದಿಲ್ಲ ಎಂದು ಹೇಳಿದೆ ಎಂದು ಲೈವ್ ಲಾ ವರದಿ ಮಾಡಿದೆ.

ಅಲ್ಪಸಂಖ್ಯಾತ ವ್ಯವಹಾರಗಳ ಸಚಿವಾಲಯದ ಜಂಟಿ ಕಾರ್ಯದರ್ಶಿ ಶೇರ್ಷಾ ಸಿ ಶೇಕ್ ಮೊಹಿದ್ದೀನ್ ಸಲ್ಲಿಸಿದ ಪ್ರಾಥಮಿಕ ಅಫಿಡವಿಟ್‌ನಲ್ಲಿ, ಕಾನೂನಿನ ಸಾಂವಿಧಾನಿಕ ಸಿಂಧುತ್ವವನ್ನು ಪ್ರಶ್ನಿಸುವ ಅರ್ಜಿಗಳನ್ನು ಕೇಂದ್ರ ಸರ್ಕಾರವು ವಿರೋಧಿಸಿದೆ.

ತಿದ್ದುಪಡಿಗಳನ್ನು ವಕ್ಫ್ ಆಸ್ತಿ ನಿರ್ವಹಣೆಯ ಜಾತ್ಯತೀತ ಅಂಶಗಳನ್ನು ನಿಯಂತ್ರಿಸಲು ಮಾತ್ರ ತರಲಾಗಿದೆ ಮತ್ತು ಸಂವಿಧಾನದ 25 ಮತ್ತು 26 ನೇ ವಿಧಿಗಳ ಅಡಿಯಲ್ಲಿ ಧಾರ್ಮಿಕ ಸ್ವಾತಂತ್ರ್ಯಗಳಿಗೆ ಇದು ಅಡ್ಡಿಯಾಗುವುದಿಲ್ಲ ಎಂದು ಅದು ವಾದಿಸಿದೆ. ಅಲ್ಲದೆ, ಈ ಕಾಯ್ದೆಯು ಸರ್ಕಾರದ ನಿಯಂತ್ರಕ ಅಧಿಕಾರಗಳ ವ್ಯಾಪ್ತಿಗೆ ಬರುತ್ತದೆ ಎಂದು ಹೇಳಿದೆ.

ವಕ್ಫ್ ಎನ್ನುವುದು ಧಾರ್ಮಿಕ, ಶೈಕ್ಷಣಿಕ ಅಥವಾ ದತ್ತಿ ಉದ್ದೇಶಕ್ಕಾಗಿ ಮೀಸಲಾಗಿರುವ ಇಸ್ಲಾಮಿಕ್ ಕಾನೂನಿನಡಿಯಲ್ಲಿನ ಒಂದು ದತ್ತಿಯಾಗಿದೆ. ಪ್ರತಿಯೊಂದು ರಾಜ್ಯವು ಆಸ್ತಿಯನ್ನು ಸ್ವಾಧೀನಪಡಿಸಿಕೊಳ್ಳುವ, ಹಿಡಿದಿಟ್ಟುಕೊಳ್ಳುವ ಮತ್ತು ವರ್ಗಾಯಿಸುವ ಅಧಿಕಾರವನ್ನು ಹೊಂದಿರುವ ಕಾನೂನು ಘಟಕದ ನೇತೃತ್ವದಲ್ಲಿ ವಕ್ಫ್ ಮಂಡಳಿಯನ್ನು ಹೊಂದಿದೆ.

2024 ರ ವಕ್ಫ್ ತಿದ್ದುಪಡಿ ಮಸೂದೆಯು 1995 ರ ವಕ್ಫ್ ಕಾಯ್ದೆಯ 44 ಸೆಕ್ಷನ್‌ಗಳಿಗೆ ತಿದ್ದುಪಡಿಗಳನ್ನು ಪ್ರಸ್ತಾಪಿಸಿದೆ. ಇದರಲ್ಲಿ ಮುಸ್ಲಿಮೇತರರಿಗೆ ವಕ್ಫ್ ಮಂಡಳಿಗಳಲ್ಲಿ ಅವಕಾಶ ನೀಡುವುದು, ಆಸ್ತಿ ದೇಣಿಗೆಗಳನ್ನು ನಿರ್ಬಂಧಿಸುವುದು ಮತ್ತು ವಕ್ಫ್ ನ್ಯಾಯಮಂಡಳಿಗಳು ಕಾರ್ಯನಿರ್ವಹಿಸುವ ವಿಧಾನವನ್ನು ಬದಲಾಯಿಸುವುದು ಸೇರಿವೆ.

ಈ ಮಸೂದೆಯನ್ನು ಏಪ್ರಿಲ್ 4 ರಂದು ಸಂಸತ್ತು ಅಂಗೀಕರಿಸಿತು. ಇದು ಏಪ್ರಿಲ್ 5 ರಂದು ರಾಷ್ಟ್ರಪತಿಗಳ ಒಪ್ಪಿಗೆಯನ್ನು ಪಡೆಯಿತು ಮತ್ತು ಏಪ್ರಿಲ್ 8 ರಂದು ಜಾರಿಗೆ ಬಂದಿತು. ಕಾಂಗ್ರೆಸ್ ಮತ್ತು ಆಲ್ ಇಂಡಿಯಾ ಮಜ್ಲಿಸ್-ಎ-ಇತ್ತೇಹಾದುಲ್ ಮುಸ್ಲಿಮೀನ್ ಸೇರಿದಂತೆ ಇತರರು ಮಸೂದೆಯ ಸಾಂವಿಧಾನಿಕತೆಯನ್ನು ಸುಪ್ರೀಂಕೋರ್ಟ್‌ನಲ್ಲಿ ಪ್ರಶ್ನಿಸಿದ್ದಾರೆ.

ಸುಪ್ರೀಂಕೋರ್ಟ್ ಮೇ 5 ರಂದು ಈ ಪ್ರಕರಣದ ವಿಚಾರಣೆ ನಡೆಸಲಿದೆ. ಏಪ್ರಿಲ್ 17 ರಂದು ಕೇಂದ್ರ ಸರ್ಕಾರವು ವಕ್ಫ್ ಆಸ್ತಿಗಳನ್ನು ಡಿನೋಟಿಫೈ ಮಾಡುವುದಿಲ್ಲ ಅಥವಾ ಆ ದಿನಾಂಕದವರೆಗೆ ಕೇಂದ್ರ ವಕ್ಫ್ ಕೌನ್ಸಿಲ್ ಅಥವಾ ರಾಜ್ಯ ವಕ್ಫ್ ಮಂಡಳಿಗಳಿಗೆ ಯಾವುದೇ ಹೊಸ ನೇಮಕಾತಿಗಳನ್ನು ಮಾಡುವುದಿಲ್ಲ ಎಂದು ನ್ಯಾಯಾಲಯಕ್ಕೆ ಭರವಸೆ ನೀಡಿತ್ತು.

ಇಲ್ಲಿ ಕ್ಲಿಕ್ ಮಾಡಿ

ಇದನ್ನೂಓದಿ:  ಪಹಲ್ಗಾಮ್ ದಾಳಿ: ದೇಶ ರಕ್ಷಣೆಯ ಗುಪ್ತಚರ ಸಂಸ್ಥೆಯನ್ನು ವಿಪಕ್ಷ ನಾಯಕರ ವಿರುದ್ಧ ಕಳುಹಿಸುತ್ತಿದ್ದೀರಿ: ತೇಜಸ್ವಿ ಯಾದವ್

ಪಹಲ್ಗಾಮ್ ದಾಳಿ: ದೇಶ ರಕ್ಷಣೆಯ ಗುಪ್ತಚರ ಸಂಸ್ಥೆಯನ್ನು ವಿಪಕ್ಷ ನಾಯಕರ ವಿರುದ್ಧ ಕಳುಹಿಸುತ್ತಿದ್ದೀರಿ: ತೇಜಸ್ವಿ ಯಾದವ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಹೈದರಾಬಾದ್| ಎಕ್ಸ್‌ಪ್ರೆಸ್‌ವೇನಲ್ಲಿ ನೇಮಕಾತಿ ಪರೀಕ್ಷೆ ಓಎಂಆರ್ ಹಾಳೆಗಳು ಪತ್ತೆ: ತನಿಖೆಗೆ ಆದೇಶ

ನೇಮಕಾತಿ ಪರೀಕ್ಷೆಯ ಮೂಲ ಆಪ್ಟಿಕಲ್ ಮಾರ್ಕ್ ರೆಕಗ್ನಿಷನ್ (ಒಎಂಆರ್) ಹಾಳೆಗಳು ಹೈದರಾಬಾದ್‌ನ ರಸ್ತೆಬದಿಯಲ್ಲಿ ರಾಶಿ ರಾಶಿಯಾಗಿ ಬಿದ್ದಿರುವುದು ಕಂಡುಬಂದ ನಂತರ ತೆಲಂಗಾಣ ಸಾರ್ವಜನಿಕ ಸೇವಾ ಆಯೋಗ (ಟಿಜಿಪಿಎಸ್‌ಸಿ) ತನಿಖೆಗೆ ಆದೇಶಿಸಿದೆ. 2018 ರ ಹಾಸ್ಟೆಲ್...

ಕರೂರ್ ಕಾಲ್ತುಳಿತ ಮೃತರ ಕುಟುಂಬಸ್ಥರಿಗೆ ನೀಡಿದ್ದ ಸರ್ಕಾರಿ ಉದ್ಯೋಗವನ್ನು ರದ್ದುಗೊಳಿಸಿದ ಮದ್ರಾಸ್ ಹೈಕೋರ್ಟ್

ಕರೂರ್ ಕಾಲ್ತುಳಿತ ದುರಂತದಲ್ಲಿ ಮೃತಪಟ್ಟವರ ಕುಟುಂಬಸ್ಥರಿಗೆ ಸರ್ಕಾರಿ ಉದ್ಯೋಗ ನೀಡಿದ್ದ ತಮಿಳುನಾಡು ಸರ್ಕಾರದ ಆದೇಶವನ್ನು ಮದ್ರಾಸ್ ಹೈಕೋರ್ಟ್ ಸೋಮವಾರ ರದ್ದುಗೊಳಿಸಿದೆ. ಈ ನೇಮಕಾತಿಗಳನ್ನು ಪ್ರಶ್ನಿಸಿ ಸಲ್ಲಿಕೆಯಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಗಳ (PIL) ವಿಚಾರಣೆ...

ವಿದ್ಯಾರ್ಥಿಗಳ ಬಂಧನ: ಮತ್ತೆ ಪ್ರತಿಭಟನೆಯ ಎಚ್ಚರಿಕೆ ನೀಡಿದ ‘ಕಾಕ್ರೋಚ್ ಜನತಾ ಪಾರ್ಟಿ’

ಪ್ರತಿಭಟನಾಕಾರರ ವಿರುದ್ಧ ಯಾವುದೇ ಪೋಲೀಸ್ ಕ್ರಮ ಕೈಗೊಳ್ಳುವುದಿಲ್ಲ ಎಂಬ ಒಪ್ಪಂದವನ್ನು ಸಂಪೂರ್ಣವಾಗಿ ಉಲ್ಲಂಘಿಸಲಾಗಿದೆ ಎಂದು 'ಕಾಕ್ರೋಚ್ ಜನತಾ ಪಾರ್ಟಿ' (CJP) ರಾಷ್ಟ್ರೀಯ ವಕ್ತಾರ ಅಶುತೋಷ್ ರಂಕಾ ಎಕ್ಸ್ (X) ಸಾಮಾಜಿಕ ಜಾಲತಾಣದ ಪೋಸ್ಟ್‌ನಲ್ಲಿ...

ಜೆನ್ ಝೀ ಪೀಳಿಗೆಯ ಹೋರಾಟ ಮತ್ತು ಮುಂದಿನ ನಡೆ.!

NEET ಪರೀಕ್ಷೆಯ ಅಕ್ರಮ ಹಾಗೂ ಪೇಪರ್ ಸೋರಿಕೆ ವಿರುದ್ಧ 'ಜೆನ್ ಝೀ' (Gen Z) ಯುವ ಸಮೂಹ ನಡೆಸಿದ ಹೋರಾಟವು ಕೇವಲ ಒಂದು ತಾತ್ಕಾಲಿಕ ವಿದ್ಯಾರ್ಥಿ ಹೋರಾಟವಾಗಿ ಉಳಿದಿಲ್ಲ. ಇದು ಪ್ರಭುತ್ವದ ಅಹಂಕಾರವನ್ನು...

ಬಿಹಾರ| ವಿದ್ಯಾರ್ಥಿಗಳ ಪ್ರತಿಭಟನೆಯ ಸಮಯದಲ್ಲಿ ಎಕೆ-47 ಬಳಸಿದ ಪೊಲೀಸ್‌ ಕಾನ್‌ಸ್ಟೆಬಲ್ ಅಮಾನತು

ಬಿಹಾರದ ಸಿವಾನ್ ಜಿಲ್ಲೆಯಲ್ಲಿ ಜುಲೈ 25 ರಂದು ನಡೆದ ವಿದ್ಯಾರ್ಥಿಗಳ ಪ್ರತಿಭಟನೆಯ ಸಮಯದಲ್ಲಿ ಎಕೆ-47 ರೈಫಲ್ ಬಳಸಿರುವ ವೀಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆದ ನಂತರ ಪೊಲೀಸ್ ಕಾನ್‌ಸ್ಟೆಬಲ್ ಒಬ್ಬರನ್ನು ಅಮಾನತುಗೊಳಿಸಲಾಗಿದೆ ಎಂದು...

ನಾಳೆ ನನ್ನ ಮಗನೂ ಮೋದಿ ವಿರುದ್ಧ ಮಾತನಾಡಬಹುದು: ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವ ಶರ್ಮಾ

ಅಸ್ಸಾಂ ಸಚಿವರೊಬ್ಬರ ಮಗಳು ಗುವಾಹಟಿಯಲ್ಲಿ ನಡೆದ ಪ್ರತಿಭಟನೆಯಲ್ಲಿ ಪಾಲ್ಗೊಂಡು, ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಆಗ್ರಹಿಸಿರುವುದು ರಾಜ್ಯಾದ್ಯಂತ ತೀವ್ರ ಚರ್ಚೆಗೆ ಗ್ರಾಸವಾಗಿದೆ. ಈ ಘಟನೆಗೆ ಪ್ರತಿಕ್ರಿಯಿಸಿರುವ ಮುಖ್ಯಮಂತ್ರಿ...

ವಿದ್ಯಾರ್ಥಿಗಳನ್ನು ಗುಂಡಿಕ್ಕಿ ಕೊಲ್ಲಬೇಕಿತ್ತು: ಆರ್‌ಎಸ್‌ಎಸ್ ಸಿದ್ಧಾಂತವಾದಿ ಟಿ.ಜಿ. ಮೋಹನ್‌ದಾಸ್ ವಿಕೃತ ಹೇಳಿಕೆ

ನವದೆಹಲಿ: ಕೇಂದ್ರ ಸರ್ಕಾರದ ಶಿಕ್ಷಣ ನೀತಿಗಳು ಹಾಗೂ ಪರೀಕ್ಷಾ ಅಕ್ರಮಗಳ ವಿರುದ್ಧ ದೆಹಲಿಯ ಜಂತರ್ ಮಂತರ್‌ನಲ್ಲಿ ಬೃಹತ್ ಪ್ರತಿಭಟನೆ ನಡೆಸಿ, ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಆಗ್ರಹಿಸಿದ್ದ ಯುವಜನರ ವಿರುದ್ಧ...

ಸಿಜೆಪಿ ಪ್ರತಿಭಟನೆ: ವಿದ್ಯಾರ್ಥಿಗಳ ಮೇಲೆ ‘ಪೆಲೆಟ್‌ ಗನ್’ ದಾಳಿ ದೃಢ; ನಿಯಮಾವಳಿಗಳನ್ನು ಉಲ್ಲಂಘಿಸಿ ಬಲಪ್ರಯೋಗ ನಡೆಸಿರುವ RAF

ನವದೆಹಲಿ: ತಮ್ಮ ಹಕ್ಕುಗಳಿಗಾಗಿ ಪ್ರಜಾಸತ್ತಾತ್ಮಕವಾಗಿ ಧ್ವನಿ ಎತ್ತುತ್ತಿದ್ದ ವಿದ್ಯಾರ್ಥಿ ಸಮುದಾಯದ ಮೇಲೆ ಕೇಂದ್ರದ ಸಶಸ್ತ್ರ ಪಡೆಗಳು ಎಸಗಿದ ದೌರ್ಜನ್ಯದ ಕರಾಳ ಮುಖ ಕೊನೆಗೂ ಅನಾವರಣಗೊಂಡಿದೆ. ಜುಲೈ 20ರಂದು ದೆಹಲಿಯ ಕನ್ಹಾಟ್ ಪ್ಲೇಸ್ ಪ್ರದೇಶದಲ್ಲಿ...

ಕೇವಲ ಪ್ರತಿಭಟಿಸಿದ್ದಕ್ಕೆ ವಿದ್ಯಾರ್ಥಿಗಳು ಜೈಲುಪಾಲು; ಗಂಗೆಯ ದೋಣಿಯಲ್ಲಿ ಬಿರಿಯಾನಿ ತಿಂದವರಿಗೂ ಸಿಗುತ್ತಿಲ್ಲ ಜಾಮೀನು : ನ್ಯಾಯಮೂರ್ತಿ ಉಜ್ಜಲ್ ಭುಯಾನ್ ಕಳವಳ

ಭಾರತದಲ್ಲಿ ಭಿನ್ನಾಭಿಪ್ರಾಯಗಳನ್ನು ಗೌರವಿಸುವ ಮತ್ತು ಅವುಗಳಿಗೆ ಅವಕಾಶ ನೀಡುವ ಸಾರ್ವಜನಿಕ ಸ್ಥಳಗಳು ಎಷ್ಟು ಕಡಿಮೆಯಾಗುತ್ತಿವೆ ಎಂದರೆ, ತಮ್ಮ ಹಕ್ಕುಗಳಿಗಾಗಿ ಪ್ರತಿಭಟಿಸುವ ವಿದ್ಯಾರ್ಥಿಗಳನ್ನು ಬಂಧಿಸಿ ಅವರಿಗೆ ಜಾಮೀನು ನಿರಾಕರಿಸಲಾಗುತ್ತಿದೆ ಎಂದು ಸುಪ್ರೀಂ ಕೋರ್ಟ್‌ನ ನ್ಯಾಯಮೂರ್ತಿ...

ಪ.ಬಂಗಾಳ: ನೂತನ ‘ಗೂಂಡಾ ಕಾಯ್ದೆ’ ಅಡಿ NEET ಪ್ರತಿಭಟನೆಯಲ್ಲಿ ಭಾಗಿಯಾದ 10 ಮುಸ್ಲಿಂ ಯುವಕರು ಸೇರಿದಂತೆ 11 ಜನರ ಬಂಧನ 

ಕೋಲ್ಕತ್ತಾ: ಕೇಂದ್ರದ ನರೇಂದ್ರ ಮೋದಿ ಸರ್ಕಾರದ ಶಿಕ್ಷಣ ಕ್ಷೇತ್ರದ ವೈಫಲ್ಯಗಳು ಹಾಗೂ ನೀಟ್-ಯುಜಿ (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣವನ್ನು ಖಂಡಿಸಿ ಶುಕ್ರವಾರ ಕೋಲ್ಕತ್ತಾದಲ್ಲಿ ನಡೆದ ಬೃಹತ್ ವಿದ್ಯಾರ್ಥಿ ಪ್ರತಿಭಟನೆಯು ತೀವ್ರ ರಾಜಕೀಯ...